Chaitra Fraud Case : ಚೈತ್ರಾ ವಂಚನೆ ಪ್ರಕರಣ; ಸಿಸಿಬಿ ತನಿಖೆ ಪೂರ್ಣ, ಮುಂದಿನ ವಾರ ಚಾರ್ಜ್‌ಶೀಟ್‌? - Vistara News

ಉಡುಪಿ

Chaitra Fraud Case : ಚೈತ್ರಾ ವಂಚನೆ ಪ್ರಕರಣ; ಸಿಸಿಬಿ ತನಿಖೆ ಪೂರ್ಣ, ಮುಂದಿನ ವಾರ ಚಾರ್ಜ್‌ಶೀಟ್‌?

Chaitra Fraud Case : ಬೈಂದೂರು ಕ್ಷೇತ್ರ ಎಂಎಲ್‌ಎ ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನು ಕಲೆ ಹಾಕಿರುವ ಸಿಸಿಬಿ ತಂಡವು ತನಿಖೆಯನ್ನು ಪೂರ್ಣಗೊಳಿಸಿ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದೆ. ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ, 4 ಕೋಟಿ ರೂಪಾಯಿಗೂ ಹೆಚ್ಚು ಹಣ ರಿಕವರಿ ಆಗಿರುವುದರಿಂದ ಚೈತ್ರಾ ಮತ್ತು ತಂಡಕ್ಕೆ ಹೆಚ್ಚಿನ ಸಮಸ್ಯೆಯಾಗುತ್ತದೆ ಎಂದು ತಿಳಿದುಬಂದಿದೆ.

VISTARANEWS.COM


on

Chaitra Kundapura
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉದ್ಯಮಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಐದು ಕೋಟಿ ರೂ. ವಂಚಿಸಿದ ಚೈತ್ರಾ ವಂಚನೆ ಪ್ರಕರಣದ (Chaitra Fraud Case) ತನಿಖೆಯನ್ನು ಸಿಸಿಬಿ ಪೊಲೀಸರು (CCB Police) ಪೂರ್ಣಗೊಳಿಸಿದ್ದಾರೆ.

ಎಂಎಲ್ಎ ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನು ಕಲೆ ಹಾಕಿರುವ ಸಿಸಿಬಿ ತಂಡವು ತನಿಖೆ ಪೂರ್ಣಗೊಳಿಸಿ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದೆ. ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Karnataka Weather : ಕರಾವಳಿ, ದಕ್ಷಿಣ ಒಳನಾಡಲ್ಲಿ ಮಳೆ ಸಾಧ್ಯತೆ; ಉತ್ತರದಲ್ಲಿ ಒಣ ಹವೆ

ಎಂಎಲ್ಎ ಡೀಲ್ ಬಗ್ಗೆ 68 ಸಾಕ್ಷಿಗಳ ಹೇಳಿಕೆಯನ್ನು ಸಿಸಿಬಿ ಪಡೆದುಕೊಂಡಿದೆ. ಎಲ್ಲ ಸಾಕ್ಷಿಗಳ ಹೇಳಿಕೆ ಪಡೆದು ಚಾರ್ಜ್‌ಶೀಟ್‌ಗೆ ಸಿದ್ಧತೆ ನಡೆಸಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ ಈಗಾಗಲೇ 4 ಕೋಟಿ 11 ಲಕ್ಷ ರೂಪಾಯಿಯನ್ನು ಸಿಸಿಬಿ ರಿಕವರಿ ಮಾಡಿದೆ. ವಂಚನೆ ಪ್ರಕರಣದಲ್ಲಿ ದೊಡ್ಡ ಮಟ್ಟದ ರಿಕವರಿ ಆಗಿದ್ದರಿಂದ ಚೈತ್ರಾ ಮತ್ತು ತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ 7 ಮಂದಿ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಅನ್ನು ಸಿದ್ಧಪಡಿಸಿದ್ದಾರೆ.

ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌ಗೆ ತಯಾರಿ ಮಾಡಿಕೊಳ್ಳಲಾಗಿದೆ. ಇನ್ನು ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲ ಆಡಿಯೊ, ವಿಡಿಯೊವನ್ನು ಸಿಸಿಬಿ ಪಡೆದುಕೊಂಡಿದೆ. ಈ ಆಡಿಯೊ ಮತ್ತು ವಿಡಿಯೊಗಳ ಬಗ್ಗೆಯೂ ಚಾರ್ಜ್‌ಶೀಟ್‌ನಲ್ಲಿ‌ ಉಲ್ಲೇಖ ಮಾಡಲಾಗಿದೆ.

ಗೋವಿಂದ ಪೂಜಾರಿ ಬಳಿ ಡೀಲ್ ಸಂಬಂಧ 10 ವಿಡಿಯೊವನ್ನು ಸಿಸಿಬಿ ಪೊಲೀಸರು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳ ಮೊಬೈಲ್‌ಗಳ ಡೇಟಾ ರಿಟ್ರೀವ್ ವರದಿ ಕೂಡ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗುತ್ತದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಆಗಿದೆ. ಹೀಗಾಗಿ ಈ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳನ್ನು ಸಿಸಿಬಿ ಪೊಲೀಸರು ಸಂಗ್ರಹಿಸಿದಂತೆ ಆಗಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲ ಆರೋಪಿಗಳು ಇದ್ದಾರೆ. ಇನ್ನೂ ಕೂಡ ಯಾವ ಆರೋಪಿಗಳಿಗೂ ಜಾಮೀನು ಸಿಗುತ್ತಿಲ್ಲ.

ವಜ್ರದೇಹಿ ಸ್ವಾಮೀಜಿ ಹೆಸರೂ ಪ್ರಕರಣದಲ್ಲಿ ಕೇಳಿಬಂದಿದೆ!

ವಜ್ರದೇಹಿ ಸ್ವಾಮೀಜಿ ಅವರು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಜತೆಗೆ ಮಾತನಾಡಿದ್ದಾಗಿ ತಿಳಿದುಬಂದಿದ್ದು ಚೈತ್ರಾ ಬರೆದಿದ್ದ ಒಂದು ಪತ್ರದ ಮೂಲಕ. ಚೈತ್ರಾ ಕುಂದಾಪುರ ಬಂಧನಕ್ಕೆ ಒಳಗಾಗುವ ಕೆಲವು ದಿನಗಳ ಮೊದಲು ಆದಾಯ ತೆರಿಗೆ ಇಲಾಖೆಗೆ ಒಂದು ಪತ್ರವನ್ನು ಬರೆದಿದ್ದಳು. ಇದರಲ್ಲಿ ಗೋವಿಂದ ಪೂಜಾರಿ ಅವರನ್ನು ಟಿಕೆಟ್‌ಗಾಗಿ ಹಣ ನೀಡಿದ ಒಬ್ಬ ಆರೋಪಿಯಾಗಿ ಗುರುತಿಸಲಾಗಿತ್ತು. ಚೈತ್ರಾ ತಾನೊಬ್ಬ ಪತ್ರಕರ್ತೆ ಎಂದೂ ಗೋವಿಂದ ಪೂಜಾರಿ ಈ ರೀತಿ ಹಣ ನೀಡಿ ಟಿಕೆಟ್‌ ಪಡೆಯಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಬರೆದಿದ್ದಳು. ಈ ಪತ್ರವನ್ನು ಆಕೆ ಆದಾಯ ತೆರಿಗೆ ಇಲಾಖೆಗೆ ಪೋಸ್ಟ್‌ ಮಾಡಿದ್ದಳೋ ಇಲ್ಲವೋ ಎಂಬುದು ತಿಳಿದುಬಂದಿಲ್ಲ. ಆದರೆ, ಆ ಪತ್ರವು ಸಿಸಿಬಿ ಕೈಗೆ ಸಿಕ್ಕಿತ್ತು. ಆ ಪತ್ರದಲ್ಲಿ ರಾಜಶೇಖರಾನಂದ ಸ್ವಾಮೀಜಿ ಬಗ್ಗೆ ಪ್ರಸ್ತಾಪವಿತ್ತು.

Chaitra and gang

ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ವಜ್ರದೇಹಿ ಸ್ವಾಮೀಜಿ ಬಗ್ಗೆ ಏನಿತ್ತು?

1.ಕೃಷ್ಣ ಪೂಜಾರಿ ಎಂದು ಪರಿಚಯಿಸಿ ಕೊಂಡ ವ್ಯಕ್ತಿಯಿಂದ ಜುಲೈ 21,2023ರಂದು 918217220747 ಎಂಬ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದ್ದು, ಅವರು ನನ್ನ ಗೋವಿಂದ ಬಾಬು ಪೂಜಾರಿ ಅವರು ಚುನಾವಣೆ ಟಿಕೆಟ್ ಗಾಗಿ 5 ಕೋಟಿ ರೂಪಾಯಿ ಕೊಟ್ಟಿರುವ ಕುರಿತು ನನ್ನನ್ನು ಪ್ರಶ್ನಿಸಿರುತ್ತಾರೆ ಈ ಕುರಿತು ನಾನು ಅವರ ಬಳಿ ನನ್ನ ಅಭಿಪ್ರಾಯವನ್ನು ಹಂಚಿಕೊಂಡು ಪೊಲೀಸ್ ಕೇಸ್ ದಾಖಲಿಸುವಂತೆ ಸಲಹೆ ನೀಡಿರುತ್ತೇನೆ.

2.ತದ ನಂತರ ಪುನಃ ಜುಲೈ 29ರಂದು ಮಧ್ಯಾಹ್ನ 12:43ಕ್ಕೆ ನನಗೆ ಪರಿಚಿತರಾಗಿರುವ ರಾಜಶೇಖರಾನಂದ ಸ್ವಾಮೀಜಿಯವರ ಫೋನ್ ನಂಬರ್+919986126131ರಿಂದ ಕರೆ ಬಂದಿದ್ದು, ಅದರಲ್ಲಿ ಅವರು ಗೋವಿಂದ ಬಾಬು ಪೂಜಾರಿಯವರು ಬಿಜೆಪಿ ಟಿಕೆಟ್ ಗಾಗಿ 5 ಕೋಟಿ ರೂಪಾಯಿಯನ್ನು ನೀಡಿರುವ ಕುರಿತು ಅವರ ಆಪ್ತರೊಬ್ಬರು ಅವರಿಗೆ ಮಾಹಿತಿ ನೀಡಿರುವ ಬಗ್ಗೆ ನನ್ನ ಬಳಿ ಚರ್ಚಿಸುತ್ತಾರೆ.

ಇದರ ಬಗ್ಗೆ ವಜ್ರದೇಹಿ ಮಠದ ಸ್ವಾಮೀಜಿ ಹೇಳಿದ್ದೇನು?

ಆವತ್ತು ಈ ಆರೋಪ ಕೇಳಿಬಂದಾಗಲೇ ರಾಜಶೇಖರಾನಂದ ಸ್ವಾಮೀಜಿ ಪ್ರತಿಕ್ರಿಯಿಸಿದ್ದರು.

ನಾನು ಜುಲೈ 29ರಂದು ನಾನು ಚೈತ್ರಾ ಕುಂದಾಪುರಗೆ ಕಾಲ್‌ ಮಾಡಿದ್ದು ಹೌದು. ಆದರೆ, ಈ ಪ್ರಕರಣದಲ್ಲಿ ನಾನು ಯಾವುದೇ ರೀತಿಯಲ್ಲೂ ಶಾಮೀಲಾಗಿಲ್ಲ. ನನ್ನ ಹೆಸರು ಥಳುಕುಹಾಕಿಕೊಂಡಿದೆ ಎಂದು ಕೆಲವರು ಈ ಹಿಂದೆ ಹೇಳಿದ್ದರು. ಅವರಿಗೆಲ್ಲ ನಾನು ಬೈದು ಫೋನ್‌ ಇಟ್ಟಿದ್ದೇನೆ. ನಾನು ಇಂಥ ಬೇನಾಮಿ ವ್ಯವಹಾರ ಮಾಡುವವನಲ್ಲ. ನನ್ನನ್ನು ನೇರಾನೇರ ಎಂದು ಸ್ವಾಮೀಜಿ ಹೇಳಿದ್ದಾರೆ. ಈ ಸಂಗತಿಯ ಕೆಲವೊಂದು ಒಳಸುಳಿಗಳು ಹಿಂದಿನಿಂದಲೇ ತನಗೆ ಗೊತ್ತೆಂದೂ, ಅದರ ಬಗ್ಗೆ ತಾನು ಹಾಲಶ್ರೀ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಜತೆ ಚರ್ಚೆ ಮಾಡಿದ್ದಾಗಿಯೂ ಹೇಳಿದ್ದಾರೆ.

ಇದನ್ನೂ ಓದಿ: Fraud Case : ಎನ್ವಿ ಗ್ರೀನ್ ಕಂಪೆನಿ ಮಾಲೀಕನ ವಿರುದ್ಧ ಎಫ್ಐಆರ್; ಕೋಟಿ ವಂಚಿಸಿದ್ರಾ ಅಶ್ವತ್ಥ್‌ ಹೆಗ್ಡೆ?

ನಮ್ಮ ಹೆಸರು ಕೂಡಾ ಉಲ್ಲೇಖವಾಗಿದೆ, ಐಟಿಗೆ ಬರೆದ ಪತ್ರದಲ್ಲಿದೆ

ಚೈತ್ರಾ ಕುಂದಾಪುರ ಅವರು ಆದಾಯ ಇಲಾಖೆಗೆ ಬರೆದ ಪತ್ರದಲ್ಲಿ ನಮ್ಮ ಹೆಸರು ಉಲ್ಲೇಖ ಮಾಡಿರುವುದು ನನಗೆ ಮಾಧ್ಯಮಗಳ ಮೂಲಕ ತಿಳಿದುಬಂತು. ಹೀಗಾಗಿ ಸ್ಪಷ್ಟೀಕರಣ ನೀಡುತ್ತಿದ್ದೇನೆ. ಜೂನ್‌ ತಿಂಗಳ ಮಧ್ಯಭಾಗದಲ್ಲಿ ಅಭಿನವ ಹಾಲಸ್ವಾಮಿಗಳು ನನಗೆ ಫೋನ್‌ ಮಾಡಿದ್ದರು. ʻನಂದೊಂದು ಒಂದು ಕೋಟಿ ರೂ. ಸಮಸ್ಯೆಯಾಗಿದೆ ಸ್ವಾಮೀಜಿ, ನೀವು ಸ್ವಲ್ಪ ಜಾಗೃತೆಯಾಗಿರಿ. ನಿಮ್ಮ ಹೆಸರು ಕೂಡಾ ಹಾಳಾಗಬಹುದು ಎಂದಿದ್ದರು. ಆಗ ನಾನು ಇಲ್ಲ ಅದು ಬೇನಾಮಿ ವ್ಯವಹಾರ ಮಾಡುವವರಿಗೆ ಮಾತ್ರ ಹೆದರಿಕೆ. ನಾವು ಅಂಥದ್ರಲ್ಲಿ ಇದ್ದರೆ ಮಾತ್ರ ಭಯ ಇರಬೇಕು, ಇಲ್ಲದಿದ್ದರೆ ಯಾಕೆ ಎಂದಿದ್ದೆ.

ಜುಲೈ 29ಕ್ಕೆ ಸತ್ಯಜಿತ್‌ ಸುರತ್ಕಲ್‌ ಕಾಲ್‌ ಮಾಡಿ ಆರೋಪ ಮಾಡಿದರು

ಜುಲೈ 29ನೇ ತಾರೀಕು ಸತ್ಯಜಿತ್‌ ಸುರತ್ಕಲ್‌ (ಹಿಂದು ಮುಖಂಡ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿದ ಖ್ಯಾತಿ) ಅವರು ನನಗೆ ಫೋನ್‌ ಮಾಡಿದರು. ಅವರು ನನ್ನ ಮೇಲೆ ನೇರ ಆರೋಪ ಮಾಡಿದರು. ಸ್ವಾಮೀಜಿ ನೀವು ಒಂದುವರೆ ಕೋಟಿ ರೂ. ತೆಗೆದುಕೊಂಡಿದ್ದೀರಿ. ಅದನ್ನು ನೀವು ಗೋವಿಂದ ಬಾಬು ಪೂಜಾರಿ ಅವರಿಗೆ ವಾಪಸ್‌ ಕೊಡಿ. ಅದನ್ನು ಕೊಡದೆ ಹೋದರೆ ನಿಮ್ಮ ಹೆಸರು ಮೀಡಿಯಾದಲ್ಲಿ ಬರ್ತದೆ, ಪೊಲೀಸ್‌ ತನಿಖೆಯಲ್ಲಿ ಬರುತ್ತದೆ, ನಿಮ್ಮ ಹೆಸರಿಗೆ ಕಳಂಕ ಬರುತ್ತದೆ. ಹೀಗಾಗಿ ನೀವು ಈಗಲೇ ಅದನ್ನು ಮುಗಿಸಿಕೊಳ್ಳಿ ಎಂದು ಹೇಳಿದರು. ಆಗ ನನಗೆ ಸಿಟ್ಟುಬರ್ತದೆ. ಯಾಕೆ ನಮ್ಮ ಹೆಸರು ಬರ್ತದೆ? ನಾನು ಇದರಲ್ಲಿ ಇಲ್ವೇ ಇಲ್ವಲ್ಲ.. ನಾನು ಹಿಂದೆ ಒಮ್ಮೆ ಕೊಲ್ಲೂರಿನಲ್ಲಿ ಅವರನ್ನು ನೋಡಿದ್ದೇನೆ. ಅದು ಕೂಡಾ ಜಗದೀಶ್‌ ಕೊಲ್ಲೂರು ಎಂಬವರು ಆಯೋಜಿಸಿದ ಬಜರಂಗ ದಳ ಕಾರ್ಯಕ್ರಮದಲ್ಲಿ ಪರಿಚಯ ಮಾಡಿದ್ದರು ಅಷ್ಟೆ. ಅದು ಬಿಟ್ಟರೆ ಪರಿಚಯವೇ ನನಗಿಲ್ಲ.

ನಾನು ಶರಣ್‌ ಪಂಪ್‌ವೆಲ್‌ ಜತೆಗೆ ವಿಷಯದ ಚರ್ಚೆ ಮಾಡಿದೆ

ಈ ವಿಚಾರವನ್ನು ನಾನು ಶರಣ್‌ ಪಂಪ್‌ವೆಲ್‌, ಪುನೀತ್‌ ಕೊಟ್ಟಾರಿ, ಭುಜಂಗ ಕುಲಾಲ್‌ ಅವರಲ್ಲಿ ಚರ್ಚೆ ಮಾಡಿದೆ. ಹೀಗೀಗೆ ನನ್ನ ಹೆಸರು ಥಳುಕು ಬಿದ್ದಿದೆಯಂತೆ ಎಂದು. ಆಗ ಅವರು ನೀವು ಇಲ್ವಲ್ಲ ಇದರಲ್ಲಿ ಯಾಕೆ ಹೆದರಿ ಕೊಳ್ತೀರಿ ಎಂದು ಹೇಳಿ ಸಮಾಧಾನ ಮಾಡಿದರು. ಆಮೇಲೆ ಅರ್ಧ ಗಂಟೆಯಲ್ಲಿ ಸತ್ಯಜಿತ್‌ ಸುರತ್ಕಲ್‌ ಮತ್ತೆ ಫೋನ್‌ ಮಾಡ್ತಾರೆ. ಇದರಲ್ಲಿ ನೀವಿಲ್ಲ ಯಾರೋ ಒಬ್ಬರು ಅಭಿನವ ಹಾಲಶ್ರೀ ಸ್ವಾಮೀಜಿಯಂತೆ, ಅವರ ಹೆಸರು ಇದ್ಯಂತೆ ಎಂದು ಹೇಳಿದರು. ಅಲ್ಲಿಗೆ ಅದು ಮುಗಿಯಿತು.

ನಾನು ನಂತರ ಕಾಲ್‌ ಮಾಡಿದ್ದು ಚಕ್ರವರ್ತಿ ಸೂಲಿಬೆಲೆಗೆ

CT Ravi Chakravarty soolibele Chaitra

ಸತ್ಯಜಿತ್‌ ಸುರತ್ಕಲ್‌ ಅಭಿನವ ಹಾಲಶ್ರೀ ಹೆಸರು ಹೇಳಿದಾಗ ನನಗೆ ಈ ಹಿಂದೆ ಅಭಿನವ ಹಾಲಶ್ರೀಗಳು ಹೇಳಿದ ಮಾತು ನೆನಪಾಯಿತು. ನಾನು ಕೂಡಲೇ ಚಕ್ರವರ್ತಿ ಸೂಲಿಬೆಲೆಯವರಿಗೆ ಫೋನ್‌ ಮಾಡಿದೆ. ಅವರ ಆಪ್ತ ಸಹಾಯಕರು ಎತ್ತಿದರು. ಅವರಿಲ್ಲ, ಪ್ರೋಗ್ರಾಂನಲ್ಲಿದ್ದಾರೆ ಎಂದು ಹೇಳಿದರು. ನನಗೆ ಸಿಟ್ಟು ಬಂದು ಬೈದೆ. ಆಗ ಅವರು ಚಕ್ರವರ್ತಿ ಸೂಲಿಬೆಲೆಯವರಿಗೆ ಫೋನ್‌ ಕೊಟ್ರು.

ಚಕ್ರವರ್ತಿಯವರೇ ವಂಚನೆ ಪ್ರಕರಣವೊಂದರಲ್ಲಿ ಅಭಿನವ ಹಾಲಸ್ವಾಮಿಗಳ ಹೆಸರು ಥಳುಕು ಹಾಕಿಕೊಂಡಿದೆ. ಇದು ಮುಂದೆ ನಿಮಗೂ ತೊಂದರೆಯಾಗಬಹುದು, ಹೀಗಾಗಿ ನೀವು ಇದು ಏನು ಎಂದು ವಿಚಾರಿಸಿ ಸರಿ ಮಾಡುವುದು ಒಳ್ಳೆಯದು ಎಂದು ಹೇಳಿದೆ. ಆಗ ಅವರು, ನಾನು ಈ ಬಗ್ಗೆ ಒಂದು ಸುತ್ತಿನ ಮಾತುಕತೆಯನ್ನು ಆಗಲೇ ಮಾಡಿದ್ದೇನೆ, ಸಿ.ಟಿ. ರವಿಯವರ ಗಮನಕ್ಕೂ ತಂದಿದ್ದೇನೆ. ಈ ವಿಷಯ ಮುಂದೆ ಏನಾಗುತ್ತದೆ ಎಂದು ಗೊತ್ತಿಲ್ಲ. ನೀವು ಒಂದು ಕೆಲಸ ಮಾಡಿ, ನಿಮಗೆ ಚೈತ್ರಾ ಕುಂದಾಪುರ ಪರಿಚಯ ಇದ್ದರೆ, ನೀವು ಅವಳಲ್ಲಿ ಮಾತನಾಡಿ, ವಿಷಯ ಏನೂ ಅಂತ ವಿಚಾರಿಸಿ ಎಂದು ನನಗೆ ಸಲಹೆ ನೀಡಿದರು.

ಹಾಗೆ ನಾನು ಚೈತ್ರಾ ಕುಂದಾಪುರಕ್ಕೆ ಕರೆ ಮಾಡಿದ್ದು ಜುಲೈ 29ರಂದು

ನಾನು ಫೋನ್‌ ಮಾಡಿದ ಒಂದೇ ರಿಂಗ್‌ನಲ್ಲಿ ಚೈತ್ರಾ ಕುಂದಾಪುರ ಫೋನ್‌ ಎತ್ತಿಕೊಳ್ತಾರೆ. ನೋಡಮ್ಮಾ ಗೋವಿಂದ ಬಾಬು ಪೂಜಾರಿಯವರ ಹಣದ ವಿಷಯದಲ್ಲಿ ನಿನ್ನ ಹೆಸರು ಥಳುಕು ಹಾಕಿಕೊಂಡಿದೆ. ಇದೇನೋ ಒಂದು ದೊಡ್ಡ ಗೋಲ್‌ ಮಾಲ್‌ ಅಂತ ನನಗೆ ಅನಿಸ್ತಾ ಇದೆ. ಏನು ಸತ್ಯ ಇದ್ರೂ ನೀನು ನಮ್ಮಲ್ಲಿ ಹೇಳು, ಇದನ್ನು ಏನು ಅಂತ ವಿಚಾರಿಸೋಣ. ಯಾಕೆಂದರೆ ನನ್ನ ಹೆಸರು ಕೂಡಾ ಇದರಲ್ಲಿ ಥಳುಕು ಹಾಕಿಕೊಂಡಿದೆ ಎಂದು ಹೇಳಿದೆ.

ಆಗ ಚೈತ್ರಾ ಕುಂದಾಪುರ, ಇಲ್ಲ ಸ್ವಾಮೀಜಿ, ಇದು ಏನೂ ನನಗೆ ಗೊತ್ತಿಲ್ಲ. ಅವರು ಯಾರಿಗೆ ಹಣ ಕೊಟ್ಟಿದ್ದಾರೆ, ಯಾರ ಜತೆ ವ್ಯವಹಾರ ಮಾಡಿದ್ದಾರೆ ಎನ್ನುವುದು ಒಂದೂ ಗೊತ್ತಿಲ್ಲ ಎಂದರು. ಆಗ ನಾನು ʻನಿನ್ನ ಹೆಸರು ಇದರಲ್ಲಿ ಹೇಗೆ ಬಂತುʼ ಎಂದು ಕೇಳಿದೆ. ಅದಕ್ಕೆ ಆಕೆ ʻʻಒಮ್ಮೆ ಗೋವಿಂದ ಪೂಜಾರಿ ಅವರು ಮನೆ ಗೃಹ ಪ್ರವೇಶಕ್ಕೆ ಒಬ್ಬ ಸ್ವಾಮೀಜಿ ಬೇಕು ಎಂದು ಕೇಳಿದ್ದರು. ನಂಗೆ ಹಾಲಶ್ರೀ ಸ್ವಾಮೀಜಿಗಳ ಪರಿಚಯ ಇದ್ದಿದ್ದರಿಂದ ಅವರನ್ನು ಶಿಫಾರಸು ಮಾಡಿದ್ದೆ. ಅವರ ಫೋನ್‌ ನಂಬರ್‌ ಕೊಟ್ಟು ಅವರ ಕಾಂಟಾಕ್ಟ್‌ ಮಾಡಿಸಿದೆ. ಹಾಗೆ ಗೋವಿಂದ ಬಾಬು ಪೂಜಾರಿ ಅವರಿಗೂ ಸ್ವಾಮೀಜಿಗೂ ನಂಟಿದೆ. ಅವರೊಳಗೆ ಏನು ನಡೆದಿದೆ ಎನ್ನುವುದು ನನಗೆ ಗೊತ್ತಿಲ್ಲʼʼ ಎಂದು ಹೇಳಿದಳು. ನನಗೆ ಒಂದೂ ವಿಷಯ ಗೊತ್ತಿಲ್ಲ ಎಂದು ಹೇಳಿದಳು. ನಾನು ಮತ್ತೆ ಮತ್ತೆ ಒತ್ತಾಯ ಮಾಡಿ ಕೇಳಿದೆ. ಏನಾದರೂ ವಿಷಯ ಇದ್ರೆ ಹೇಳು ಎಂದಾಗ, ಅದು ಏನೋ ಇಂದಿರಾ ಕ್ಯಾಂಟೀನ್‌ ಬಿಲ್‌ ಗೊಂದಲಗಳಿಗಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ 150 ಇಂದಿರಾ ಕ್ಯಾಂಟೀನ್‌ ಇದೆ ಎಂದೆಲ್ಲ ಹೇಳಿದರು.

ಇದನ್ನೂ ಓದಿ: Chaitra Kundapura : ಅಬ್ಬಬ್ಬಾ… ಗೋವಿಂದ ಪೂಜಾರಿಯೇ ವಂಚಕ ಎಂದು ಬಿಂಬಿಸಲು ಕ್ರಿಮಿನಲ್‌ ಐಡಿಯಾ; ITಗೆ ದೂರು

ನಂತರ ಆಕೆಯ ಬಂಧನವಾದಾಗಲೇ ನನಗೆ ಇದು ಇಷ್ಟು ತೀವ್ರತೆ ಪಡೆದದ್ದು ಗೊತ್ತಾಗಿದ್ದು. ಹಣದ ವಿಚಾರದಲ್ಲಿ ನನಗೇನೂ ಗೊತ್ತಿಲ್ಲ, ಚೈತ್ರಾಳ ಪರಿಚಯ ಇದ್ದುದು ಹೌದು. ಹಾಗಂತ, ಆಕೆಯ ಜೊತೆಗೆ ಬೇರೇನೂ ಸಂಪರ್ಕ, ಮಾತುಕತೆ, ವಹಿವಾಟು ಇಲ್ಲ ಎಂದು ರಾಜಶೇಖರಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದರು.

ಇದೀಗ ಸಿಸಿಬಿ ರಾಜಶೇಖರಾನಂದ ಸ್ವಾಮೀಜಿ ಅವರಿಗೆ ಸಿಸಿಬಿ ನೋಟಿಸ್‌ ಜಾರಿ ಮಾಡಿದೆ. ಅವರು ತಮಗೆ ತಿಳಿದಿರುವ ಎಲ್ಲ ಅಂಶಗಳನ್ನು ತಿಳಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಿಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather Forecast: ರಾಜ್ಯದ ವಿವಿಧೆಡೆ ಮಳೆ ಅಬ್ಬರ (Heavy Rain)ಮುಂದುವರಿದಿದೆ. ಮೇ 14ರಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಹವಾಮಾನ ಇಲಾಖೆಯು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Rain News : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಗಾಳಿಯೊಟ್ಟಿಗೆ ಧಾರಾಕಾರ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರದಂದು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ (Rain News) ವರದಿ ಆಗಿದೆ. ಅತಿ ಹೆಚ್ಚು ಮಳೆಯು ಪುತ್ತೂರು ಹಾಗೂ ರಾಯಚೂರಿನಲ್ಲಿ ತಲಾ 10 ಸೆಂ.ಮೀ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉಪ್ಪಿನಂಗಡಿ 9, ಸಿರಾ ಮತ್ತು ಕೊಟ್ಟಿಗೆಹಾರದಲ್ಲಿ ತಲಾ 8 ಸೆಂ.ಮೀ, ಗಬ್ಬೂರು, ಬೆಳಗಾವಿಯಲ್ಲಿ 7 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಗರಿಷ್ಠ ಉಷ್ಣಾಂಶ ರಾಯಚೂರಿನಲ್ಲಿ 39.4 ಡಿ. ಸೆ ದಾಖಲಾಗಿದೆ.

ಕಾಸರಗೋಡಿನಲ್ಲಿ ಗಾಳಿ ಮಳೆಗೆ ನೆಲಕ್ಕುರುಳಿದ ಬೃಹತ್ ಹೋರ್ಡಿಂಗ್‌

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೇರಳದ ಕಾಸರಗೋಡಿನ ಬಸ್ ನಿಲ್ದಾಣ ಬಳಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್‌ ನೆಲಕ್ಕುರುಳಿದ ಘಟನೆ ನಡೆದಿದೆ. ಹೋರ್ಡಿಂಗ್‌ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಹೋರ್ಡಿಂಗ್‌ ಬಿದ್ದು ಕೆಳಗಡೆ ಪಾರ್ಕ್ ಮಾಡಿದ್ದ ವಾಹನಗಳಿಗೆ ಹಾನಿಯಾಗಿದೆ. ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪಾರ್ಕಿಂಗ್‌ ಜಾಗದಲ್ಲಿ ಜನರು ಇರಲಿಲ್ಲ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಹಾಸನದಲ್ಲಿ ಉರುಳಿ ಬಿದ್ದ ಮರ

ಹಾಸನ ಜಿಲ್ಲೆಯ ವಿವಿಧೆಡೆ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮರವೊಂದು ಉರುಳಿ ಬಿದ್ದಿತ್ತು. ಪರಿಣಾಮ ಎರಡು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್‌ ರಸ್ತೆಯಲ್ಲಿ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಗೆ ಮರ ಬಿದ್ದಿತ್ತು. ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಸ್ಥಳಕ್ಕಾಗಮಿಸಿ ಟ್ರಾಫಿಕ್‌ ಪೊಲೀಸರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿದರು.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮಳೆ ಜತೆಗೆ 60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಬಿರುಗಾಳಿ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ವಿಜಯಪುರ, ಬಾಗಲಕೋಟೆ, ಬೀದರ್‌, ಧಾರವಾಡ,ಗದಗದಲ್ಲಿ ಗುಡುಗು, ಸಿಡಿಲಿನೊಂದಿಗೆ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ಕೇರಳ ಕರಾವಳಿಯಲ್ಲಿ ಚಂಡಮಾರುತ ಎದ್ದಿದೆ. ಇದರ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಗಾಳಿಯೊಂದಿಗೆ ಗುಡುಗು ಸಹಿತ ವಿಪರೀತ ಮಳೆಯಾಗುವ (Rain News) ಮುನ್ಸೂಚನೆ ಇದೆ.

VISTARANEWS.COM


on

By

karnataka weather forecast karnataka rains
Koo

ಬೆಂಗಳೂರು: ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರದಲ್ಲೂ ಇದೇ ಪರಿಸ್ಥಿತಿ ಇರಲಿದೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಚಿಕ್ಕಮಗಳೂರಲ್ಲಿ ಮಳೆಗೆ ಮರ ಬಿದ್ದು ಮಹಿಳೆ ಸಾವು

ನಿನ್ನೆ ಭಾನುವಾರ ಚಿಕ್ಕಮಗಳೂರಲ್ಲಿ ಸುರಿದ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದರು. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

Karnataka Weather Forecast

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿತ್ತು. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗಿತ್ತು. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Heavy Rain News : ರಾಜ್ಯದ ಹಲವು ಭಾಗಗಳಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಗುಡುಗು ಸಹಿತ ಭಾರಿ ಗಾಳಿ ಮಳೆ ಅನಾಹುತಗಳು ಸಂಭವಿಸಿದೆ. ಭಾನುವಾರ ಚಿಕ್ಕಮಗಳೂರಲ್ಲಿ ವಿಪರೀತ ಮಳೆಯಾಗುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಯು ನೆಲಕಚ್ಚಿದೆ.

VISTARANEWS.COM


on

By

Karnataka Weather Forecast Heavy rain in chikkmagalur
Koo

ಚಿಕ್ಕಮಗಳೂರು/ಬೆಂಗಳೂರು: ಭಾನುವಾರ ರಾಜ್ಯದ ವಿವಿಧೆಡೆ ವರುರ್ಣಾಭಟ (Karnataka Weather Forecast) ಜೋರಾಗಿದೆ. ಚಿಕ್ಕಮಗಳೂರಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Karnataka Weather Forecast

ಇನ್ನೂ ಮಳೆಯ (Rain News) ಅವಾಂತರಕ್ಕೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರು ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಸುತ್ತಮುತ್ತ ಗುಡುಗು, ಸಿಡಿಲು ಬಿರುಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ. ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ಅನುಭವಿಸುತ್ತಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಕಾಫಿನಾಡ ಬಯಲುಸೀಮೆ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲು ಸೀಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಬೆಂಗಳೂರಲ್ಲೂ ಮಳೆ ಮೋಡಿ

ವೀಕೆಂಡ್‌ ಮೂಡ್‌ನಲ್ಲಿದ್ದ ಸಿಟಿ ಮಂದಿಗೆ ಮಳೆಯು ಮೋಡಿ ಮಾಡಿದೆ. ಬೆಂಗಳೂರಿನ ಉಲ್ಲಾಳ, ನಾಗರಬಾವಿ, ವಿಜಯನಗರ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇತ್ತ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಪಾದಾಚಾರಿಗಳು ರಸ್ತೆ ದಾಟಲು ಆಗದೆ ಪರದಾಡುವಂತಾಗಿದೆ.

ಇದನ್ನೂ ಓದಿ: Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ನಿನ್ನೆ ಶನಿವಾರ ಸುರಿದ ಮಳೆಯಿಂದ ಅವಾಂತರ‌ವೇ ಸೃಷ್ಟಿಯಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ಮುಕ್ಕಾಲು ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮಳೆಯು ಅಬ್ಬರಿಸಲಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Vertigo Problem
ಆರೋಗ್ಯ16 mins ago

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

king dasharatha dhavala dharini
ಅಂಕಣ19 mins ago

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

karnataka weather Forecast
ಮಳೆ46 mins ago

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಿಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Food Tips Kannada
ಆಹಾರ/ಅಡುಗೆ1 hour ago

Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

Narendra Modi
ದೇಶ2 hours ago

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Dina Bhavishya
ಭವಿಷ್ಯ2 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

IPL 2024
ಪ್ರಮುಖ ಸುದ್ದಿ7 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ7 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ8 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ12 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ13 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ13 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ13 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ14 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ20 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌