Chaitra Kundapura : ಚೈತ್ರಾ ಕುಂದಾಪುರ ವಂಚನೆ ಕೇಸಿನಲ್ಲಿ ವಜ್ರದೇಹಿ ಸ್ವಾಮೀಜಿ ಹೆಸರು; ಹಾಗಿದ್ದರೆ ಅವರ ಪಾತ್ರವೇನು? - Vistara News

ಉಡುಪಿ

Chaitra Kundapura : ಚೈತ್ರಾ ಕುಂದಾಪುರ ವಂಚನೆ ಕೇಸಿನಲ್ಲಿ ವಜ್ರದೇಹಿ ಸ್ವಾಮೀಜಿ ಹೆಸರು; ಹಾಗಿದ್ದರೆ ಅವರ ಪಾತ್ರವೇನು?

Chaitra Kundapura : ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಮಂಗಳೂರಿನ ವಜ್ರದೇಹಿ ಮಠದ ಶ್ರೀ ರಾಜಶೇಖರ ಸ್ವಾಮೀಜಿ ಹೆಸರು ಕೇಳಿಬಂದಿದೆ. ಹಾಗಿದ್ದರೆ ಅವರ ಪಾತ್ರವೇನು? ಈ ಪ್ರಕರಣದ ಬಗ್ಗೆ ಅವರಿಗೆ ಗೊತ್ತಿರುವುದೇನು?

VISTARANEWS.COM


on

Vajradehi matt swameeji and Chaitra Kundapura
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಹೆಸರಿನಲ್ಲಿ ನಡೆದ ಐದು ಕೋಟಿ ರೂ. ವಂಚನೆ ಪ್ರಕರಣ ಹಲವಾರು ಟ್ವಿಸ್ಟ್‌ಗಳನ್ನು ಪಡೆದುಕೊಳ್ಳುತ್ತಾ ಸಾಗುತ್ತಿದೆ. ಹೊಸ ಹೊಸ ಹೆಸರುಗಳು ಕೇಳಿಬಂದಿವೆ. ಇದೀಗ ಹೊಸದಾಗಿ ಹೆಸರು ಕೇಳಿಬಂದಿರುವುದು ಮಂಗಳೂರಿನ ಮಂಗಳೂರಿನ ವಜ್ರದೇಹಿ ಮಠದ (Mangalore Vajradehi matt) ಶ್ರೀ ರಾಜಶೇಖರಾನಂದ ಸ್ವಾಮೀಜಿ (Shri Rajashekharananda Swamiji) ಹೆಸರು. ಗೋವಿಂದ ಪೂಜಾರಿ (Govinda Poojari) ಟಿಕೆಟ್‌ ಪ್ರಕರಣಕ್ಕೆ ಸಂಬಂಧಿಸಿ ರಾಜಶೇಖರಾನಂದ ಸ್ವಾಮೀಜಿ ಅವರು ತನಗೆ ಫೋನ್‌ ಮಾಡಿದ್ದರು ಎಂದು ಚೈತ್ರಾ ಕುಂದಾಪುರ (Chaitra Kundapura) ಅವರು ಆದಾಯ ತೆರಿಗೆ ಇಲಾಖೆಗೆ ಬರೆದಿದ್ದಾರೆನ್ನಲಾದ ಪತ್ರದಲ್ಲಿ (Letter to IT Department) ಉಲ್ಲೇಖವಾಗಿದೆ.

ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಹಿಂದುತ್ವದ ಪ್ರಬಲ ಪ್ರತಿಪಾದಕರಾಗಿದ್ದು ಕರಾವಳಿಯಲ್ಲಿ ನಡೆಯುವ ಹಿಂದು ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಾರೆ, ಪ್ರಧಾನ ಭಾಷಣಕಾರರೂ ಆಗಿರುತ್ತಾರೆ. ವಿಶ್ವ ಹಿಂದು ಪರಿಷತ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈ ವಿದ್ಯಮಾನದ ಬಗ್ಗೆ ತ್ವರಿತವಾಗಿ ಪ್ರತಿಕ್ರಿಯೆ ನೀಡಿರುವ ಅವರು ತಮ್ಮ ಪಾತ್ರದ ಬಗ್ಗೆ, ಗೋವಿಂದ ಪೂಜಾರಿ ವಂಚನೆ ಪ್ರಕರಣದ ಬಗ್ಗೆ, ತಾನು ಯಾಕಾಗಿ ಚೈತ್ರಾ ಕುಂದಾಪುರಗೆ ಫೋನ್‌ ಮಾಡಿದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಹಾಗಿದ್ದರೆ, ಚೈತ್ರಾ ಕುಂದಾಪುರ ಐಟಿ ಇಲಾಖೆಗೆ ಬರೆದಿರುವ ಪತ್ರದಲ್ಲಿ ವಜ್ರದೇಹಿ ಸ್ವಾಮೀಜಿಗಳ ಬಗ್ಗೆ ಏನಿದೆ ಎಂದು ಮೊದಲು ತಿಳಿಯೋಣ.. ಬಳಿಕ ಸ್ವಾಮೀಜಿ ಪ್ರತಿಕ್ರಿಯೆ.

ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ವಜ್ರದೇಹಿ ಸ್ವಾಮೀಜಿ ಬಗ್ಗೆ ಇರುವುದು ಇಷ್ಟು:

1.ಕೃಷ್ಣ ಪೂಜಾರಿ ಎಂದು ಪರಿಚಯಿಸಿ ಕೊಂಡ ವ್ಯಕ್ತಿಯಿಂದ ಜುಲೈ 21,2023ರಂದು 918217220747 ಎಂಬ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದ್ದು, ಅವರು ನನ್ನ ಗೋವಿಂದ ಬಾಬು ಪೂಜಾರಿ ಅವರು ಚುನಾವಣೆ ಟಿಕೆಟ್ ಗಾಗಿ 5 ಕೋಟಿ ರೂಪಾಯಿ ಕೊಟ್ಟಿರುವ ಕುರಿತು ನನ್ನನ್ನು ಪ್ರಶ್ನಿಸಿರುತ್ತಾರೆ ಈ ಕುರಿತು ನಾನು ಅವರ ಬಳಿ ನನ್ನ ಅಭಿಪ್ರಾಯವನ್ನು ಹಂಚಿಕೊಂಡು ಪೊಲೀಸ್ ಕೇಸ್ ದಾಖಲಿಸುವಂತೆ ಸಲಹೆ ನೀಡಿರುತ್ತೇನೆ.

2.ತದ ನಂತರ ಪುನಃ ಜುಲೈ 29ರಂದು ಮಧ್ಯಾಹ್ನ 12:43ಕ್ಕೆ ನನಗೆ ಪರಿಚಿತರಾಗಿರುವ ರಾಜಶೇಖರಾನಂದ ಸ್ವಾಮೀಜಿಯವರ ಫೋನ್ ನಂಬರ್+919986126131ರಿಂದ ಕರೆ ಬಂದಿದ್ದು, ಅದರಲ್ಲಿ ಅವರು ಗೋವಿಂದ ಬಾಬು ಪೂಜಾರಿಯವರು ಬಿಜೆಪಿ ಟಿಕೆಟ್ ಗಾಗಿ 5 ಕೋಟಿ ರೂಪಾಯಿಯನ್ನು ನೀಡಿರುವ ಕುರಿತು ಅವರ ಆಪ್ತರೊಬ್ಬರು ಅವರಿಗೆ ಮಾಹಿತಿ ನೀಡಿರುವ ಬಗ್ಗೆ ನನ್ನ ಬಳಿ ಚರ್ಚಿಸುತ್ತಾರೆ.

3.ಅದಾದ ಬಳಿಕ ಮತ್ತೆ ಜುಲೈ 30ರಂದು ನನಗೆ ಪರಿಚಿತರರಾದ ಸಂತೋಷ್ ಕೆಲ್ಲೋಜಿ ಎನ್ನುವವರು ಮಧ್ಯಾಹ್ನ 2:05 ಕ್ಕೆ ಕರೆಯಲ್ಲಿ ನನ್ನೊಂದಿಗೆ ಮಾತನಾಡಿ ಗೋವಿಂದ ಬಾಬು ಪೂಜಾರಿಯವರಿಗೆ ಸಂಬಂಧಿಸಿದಂತೆ ಚುನಾವಣೆಯಲ್ಲಿ ಹಣ ನೀಡಿರುವ ಸುದ್ದಿಯೊಂದು ವಾಟ್ಸಾಪ್ ಗಳಲ್ಲಿ ಶೇರ್ ಆಗಿರುವ ಕುರಿತು ನನ್ನ ಬಳಿ ವಿಚಾರಿಸಿರುತ್ತಾರೆ, ಈ ಎಲ್ಲಾ ಕರೆಗಳಿಗೆ ಸಂಬಂಧಿಸಿದಂತೆ ಕರೆಗಳನ್ನು ನಾನು ರೆಕಾರ್ಡ್ ಮಾಡಿ ಕೊಂಡಿದ್ದು, ಅದನ್ನು ಇದರೊಂದಿಗೆ ಲಗತ್ತಿಸಿರುತ್ತೇನೆ. (File no 005, 006, 007).

ಇದರ ಬಗ್ಗೆ ವಜ್ರದೇಹಿ ಮಠದ ಸ್ವಾಮೀಜಿ ಹೇಳುವುದೇನು?

ನಾನು ಜುಲೈ 29ರಂದು ನಾನು ಚೈತ್ರಾ ಕುಂದಾಪುರಗೆ ಕಾಲ್‌ ಮಾಡಿದ್ದು ಹೌದು. ಆದರೆ, ಈ ಪ್ರಕರಣದಲ್ಲಿ ನಾನು ಯಾವುದೇ ರೀತಿಯಲ್ಲೂ ಶಾಮೀಲಾಗಿಲ್ಲ. ನನ್ನ ಹೆಸರು ಥಳುಕುಹಾಕಿಕೊಂಡಿದೆ ಎಂದು ಕೆಲವರು ಈ ಹಿಂದೆ ಹೇಳಿದ್ದರು. ಅವರಿಗೆಲ್ಲ ನಾನು ಬೈದು ಫೋನ್‌ ಇಟ್ಟಿದ್ದೇನೆ. ನಾನು ಇಂಥ ಬೇನಾಮಿ ವ್ಯವಹಾರ ಮಾಡುವವನಲ್ಲ. ನನ್ನನ್ನು ನೇರಾನೇರ ಎಂದು ಸ್ವಾಮೀಜಿ ಹೇಳಿದ್ದಾರೆ. ಈ ಸಂಗತಿಯ ಕೆಲವೊಂದು ಒಳಸುಳಿಗಳು ಹಿಂದಿನಿಂದಲೇ ತನಗೆ ಗೊತ್ತೆಂದೂ, ಅದರ ಬಗ್ಗೆ ತಾನು ಹಾಲಶ್ರೀ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಜತೆ ಚರ್ಚೆ ಮಾಡಿದ್ದಾಗಿಯೂ ಹೇಳಿದ್ದಾರೆ.

Vajradehi swameeji

ಇಲ್ಲಿವೆ ವಜ್ರದೇಹಿ ಸ್ವಾಮೀಜಿ ಅವರ ಮಾತಿನ ಪ್ರಮುಖ ಅಂಶಗಳು

ನಮ್ಮ ಹೆಸರು ಕೂಡಾ ಉಲ್ಲೇಖವಾಗಿದೆ, ಐಟಿಗೆ ಬರೆದ ಪತ್ರದಲ್ಲಿದೆ

ಚೈತ್ರಾ ಕುಂದಾಪುರ ಅವರು ಆದಾಯ ಇಲಾಖೆಗೆ ಬರೆದ ಪತ್ರದಲ್ಲಿ ನಮ್ಮ ಹೆಸರು ಉಲ್ಲೇಖ ಮಾಡಿರುವುದು ನನಗೆ ಮಾಧ್ಯಮಗಳ ಮೂಲಕ ತಿಳಿದುಬಂತು. ಹೀಗಾಗಿ ಸ್ಪಷ್ಟೀಕರಣ ನೀಡುತ್ತಿದ್ದೇನೆ. ಜೂನ್‌ ತಿಂಗಳ ಮಧ್ಯಭಾಗದಲ್ಲಿ ಅಭಿನವ ಹಾಲಸ್ವಾಮಿಗಳು ನನಗೆ ಫೋನ್‌ ಮಾಡಿದ್ದರು. ʻನಂದೊಂದು ಒಂದು ಕೋಟಿ ರೂ. ಸಮಸ್ಯೆಯಾಗಿದೆ ಸ್ವಾಮೀಜಿ, ನೀವು ಸ್ವಲ್ಪ ಜಾಗೃತೆಯಾಗಿರಿ. ನಿಮ್ಮ ಹೆಸರು ಕೂಡಾ ಹಾಳಾಗಬಹುದು ಎಂದಿದ್ದರು. ಆಗ ನಾನು ಇಲ್ಲ ಅದು ಬೇನಾಮಿ ವ್ಯವಹಾರ ಮಾಡುವವರಿಗೆ ಮಾತ್ರ ಹೆದರಿಕೆ. ನಾವು ಅಂಥದ್ರಲ್ಲಿ ಇದ್ದರೆ ಮಾತ್ರ ಭಯ ಇರಬೇಕು, ಇಲ್ಲದಿದ್ದರೆ ಯಾಕೆ ಎಂದಿದ್ದೆ.

ಜುಲೈ 29ಕ್ಕೆ ಸತ್ಯಜಿತ್‌ ಸುರತ್ಕಲ್‌ ಕಾಲ್‌ ಮಾಡಿ ಆರೋಪ ಮಾಡಿದರು

ಜುಲೈ 29ನೇ ತಾರೀಕು ಸತ್ಯಜಿತ್‌ ಸುರತ್ಕಲ್‌ (ಹಿಂದು ಮುಖಂಡ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿದ ಖ್ಯಾತಿ) ಅವರು ನನಗೆ ಫೋನ್‌ ಮಾಡಿದರು. ಅವರು ನನ್ನ ಮೇಲೆ ನೇರ ಆರೋಪ ಮಾಡಿದರು. ಸ್ವಾಮೀಜಿ ನೀವು ಒಂದುವರೆ ಕೋಟಿ ರೂ. ತೆಗೆದುಕೊಂಡಿದ್ದೀರಿ. ಅದನ್ನು ನೀವು ಗೋವಿಂದ ಬಾಬು ಪೂಜಾರಿ ಅವರಿಗೆ ವಾಪಸ್‌ ಕೊಡಿ. ಅದನ್ನು ಕೊಡದೆ ಹೋದರೆ ನಿಮ್ಮ ಹೆಸರು ಮೀಡಿಯಾದಲ್ಲಿ ಬರ್ತದೆ, ಪೊಲೀಸ್‌ ತನಿಖೆಯಲ್ಲಿ ಬರುತ್ತದೆ, ನಿಮ್ಮ ಹೆಸರಿಗೆ ಕಳಂಕ ಬರುತ್ತದೆ. ಹೀಗಾಗಿ ನೀವು ಈಗಲೇ ಅದನ್ನು ಮುಗಿಸಿಕೊಳ್ಳಿ ಎಂದು ಹೇಳಿದರು. ಆಗ ನನಗೆ ಸಿಟ್ಟುಬರ್ತದೆ. ಯಾಕೆ ನಮ್ಮ ಹೆಸರು ಬರ್ತದೆ? ನಾನು ಇದರಲ್ಲಿ ಇಲ್ವೇ ಇಲ್ವಲ್ಲ.. ನಾನು ಹಿಂದೆ ಒಮ್ಮೆ ಕೊಲ್ಲೂರಿನಲ್ಲಿ ಅವರನ್ನು ನೋಡಿದ್ದೇನೆ. ಅದು ಕೂಡಾ ಜಗದೀಶ್‌ ಕೊಲ್ಲೂರು ಎಂಬವರು ಆಯೋಜಿಸಿದ ಬಜರಂಗ ದಳ ಕಾರ್ಯಕ್ರಮದಲ್ಲಿ ಪರಿಚಯ ಮಾಡಿದ್ದರು ಅಷ್ಟೆ. ಅದು ಬಿಟ್ಟರೆ ಪರಿಚಯವೇ ನನಗಿಲ್ಲ.

ನಾನು ಶರಣ್‌ ಪಂಪ್‌ವೆಲ್‌ ಜತೆಗೆ ವಿಷಯದ ಚರ್ಚೆ ಮಾಡಿದೆ

ಈ ವಿಚಾರವನ್ನು ನಾನು ಶರಣ್‌ ಪಂಪ್‌ವೆಲ್‌, ಪುನೀತ್‌ ಕೊಟ್ಟಾರಿ, ಭುಜಂಗ ಕುಲಾಲ್‌ ಅವರಲ್ಲಿ ಚರ್ಚೆ ಮಾಡಿದೆ. ಹೀಗೀಗೆ ನನ್ನ ಹೆಸರು ಥಳುಕು ಬಿದ್ದಿದೆಯಂತೆ ಎಂದು. ಆಗ ಅವರು ನೀವು ಇಲ್ವಲ್ಲ ಇದರಲ್ಲಿ ಯಾಕೆ ಹೆದರಿ ಕೊಳ್ತೀರಿ ಎಂದು ಹೇಳಿ ಸಮಾಧಾನ ಮಾಡಿದರು. ಆಮೇಲೆ ಅರ್ಧ ಗಂಟೆಯಲ್ಲಿ ಸತ್ಯಜಿತ್‌ ಸುರತ್ಕಲ್‌ ಮತ್ತೆ ಫೋನ್‌ ಮಾಡ್ತಾರೆ. ಇದರಲ್ಲಿ ನೀವಿಲ್ಲ ಯಾರೋ ಒಬ್ಬರು ಅಭಿನವ ಹಾಲಶ್ರೀ ಸ್ವಾಮೀಜಿಯಂತೆ, ಅವರ ಹೆಸರು ಇದ್ಯಂತೆ ಎಂದು ಹೇಳಿದರು. ಅಲ್ಲಿಗೆ ಅದು ಮುಗಿಯಿತು.

halasree swameeji
ಅಭಿನವ ಹಾಲಶ್ರೀ ಸ್ವಾಮೀಜಿ

ನಾನು ನಂತರ ಕಾಲ್‌ ಮಾಡಿದ್ದು ಚಕ್ರವರ್ತಿ ಸೂಲಿಬೆಲೆಗೆ

ಸತ್ಯಜಿತ್‌ ಸುರತ್ಕಲ್‌ ಅಭಿನವ ಹಾಲಶ್ರೀ ಹೆಸರು ಹೇಳಿದಾಗ ನನಗೆ ಈ ಹಿಂದೆ ಅಭಿನವ ಹಾಲಶ್ರೀಗಳು ಹೇಳಿದ ಮಾತು ನೆನಪಾಯಿತು. ನಾನು ಕೂಡಲೇ ಚಕ್ರವರ್ತಿ ಸೂಲಿಬೆಲೆಯವರಿಗೆ ಫೋನ್‌ ಮಾಡಿದೆ. ಅವರ ಆಪ್ತ ಸಹಾಯಕರು ಎತ್ತಿದರು. ಅವರಿಲ್ಲ, ಪ್ರೋಗ್ರಾಂನಲ್ಲಿದ್ದಾರೆ ಎಂದು ಹೇಳಿದರು. ನನಗೆ ಸಿಟ್ಟು ಬಂದು ಬೈದೆ. ಆಗ ಅವರು ಚಕ್ರವರ್ತಿ ಸೂಲಿಬೆಲೆಯವರಿಗೆ ಫೋನ್‌ ಕೊಟ್ರು.

Halasri swameeji with Chakravarti sulibele

ಚಕ್ರವರ್ತಿಯವರೇ ವಂಚನೆ ಪ್ರಕರಣವೊಂದರಲ್ಲಿ ಅಭಿನವ ಹಾಲಸ್ವಾಮಿಗಳ ಹೆಸರು ಥಳುಕು ಹಾಕಿಕೊಂಡಿದೆ. ಇದು ಮುಂದೆ ನಿಮಗೂ ತೊಂದರೆಯಾಗಬಹುದು, ಹೀಗಾಗಿ ನೀವು ಇದು ಏನು ಎಂದು ವಿಚಾರಿಸಿ ಸರಿ ಮಾಡುವುದು ಒಳ್ಳೆಯದು ಎಂದು ಹೇಳಿದೆ. ಆಗ ಅವರು, ನಾನು ಈ ಬಗ್ಗೆ ಒಂದು ಸುತ್ತಿನ ಮಾತುಕತೆಯನ್ನು ಆಗಲೇ ಮಾಡಿದ್ದೇನೆ, ಸಿ.ಟಿ. ರವಿಯವರ ಗಮನಕ್ಕೂ ತಂದಿದ್ದೇನೆ. ಈ ವಿಷಯ ಮುಂದೆ ಏನಾಗುತ್ತದೆ ಎಂದು ಗೊತ್ತಿಲ್ಲ. ನೀವು ಒಂದು ಕೆಲಸ ಮಾಡಿ, ನಿಮಗೆ ಚೈತ್ರಾ ಕುಂದಾಪುರ ಪರಿಚಯ ಇದ್ದರೆ, ನೀವು ಅವಳಲ್ಲಿ ಮಾತನಾಡಿ, ವಿಷಯ ಏನೂ ಅಂತ ವಿಚಾರಿಸಿ ಎಂದು ನನಗೆ ಸಲಹೆ ನೀಡಿದರು.

ಇದನ್ನೂ ಓದಿ: Chaitra Kundapura : ಅಬ್ಬಬ್ಬಾ… ಗೋವಿಂದ ಪೂಜಾರಿಯೇ ವಂಚಕ ಎಂದು ಬಿಂಬಿಸಲು ಕ್ರಿಮಿನಲ್‌ ಐಡಿಯಾ; ITಗೆ ದೂರು

ಹಾಗೆ ನಾನು ಚೈತ್ರಾ ಕುಂದಾಪುರಕ್ಕೆ ಕರೆ ಮಾಡಿದ್ದು ಜುಲೈ 29ರಂದು

ನಾನು ಫೋನ್‌ ಮಾಡಿದ ಒಂದೇ ರಿಂಗ್‌ನಲ್ಲಿ ಚೈತ್ರಾ ಕುಂದಾಪುರ ಫೋನ್‌ ಎತ್ತಿಕೊಳ್ತಾರೆ. ನೋಡಮ್ಮಾ ಗೋವಿಂದ ಬಾಬು ಪೂಜಾರಿಯವರ ಹಣದ ವಿಷಯದಲ್ಲಿ ನಿನ್ನ ಹೆಸರು ಥಳುಕು ಹಾಕಿಕೊಂಡಿದೆ. ಇದೇನೋ ಒಂದು ದೊಡ್ಡ ಗೋಲ್‌ ಮಾಲ್‌ ಅಂತ ನನಗೆ ಅನಿಸ್ತಾ ಇದೆ. ಏನು ಸತ್ಯ ಇದ್ರೂ ನೀನು ನಮ್ಮಲ್ಲಿ ಹೇಳು, ಇದನ್ನು ಏನು ಅಂತ ವಿಚಾರಿಸೋಣ. ಯಾಕೆಂದರೆ ನನ್ನ ಹೆಸರು ಕೂಡಾ ಇದರಲ್ಲಿ ಥಳುಕು ಹಾಕಿಕೊಂಡಿದೆ ಎಂದು ಹೇಳಿದೆ.

house warming function govinda poojari
ಚೈತ್ರಾ ಹೇಳಿದ ಮನೆ ಗೃಹಪ್ರವೇಶ ಕಾರ್ಯಕ್ರಮ. ಇದರಲ್ಲಿ ವಿನಯ ಗುರೂಜಿ, ಹಾಲಶ್ರೀ ಸ್ವಾಮೀಜಿ ಇದ್ದರು.

ಆಗ ಚೈತ್ರಾ ಕುಂದಾಪುರ, ಇಲ್ಲ ಸ್ವಾಮೀಜಿ, ಇದು ಏನೂ ನನಗೆ ಗೊತ್ತಿಲ್ಲ. ಅವರು ಯಾರಿಗೆ ಹಣ ಕೊಟ್ಟಿದ್ದಾರೆ, ಯಾರ ಜತೆ ವ್ಯವಹಾರ ಮಾಡಿದ್ದಾರೆ ಎನ್ನುವುದು ಒಂದೂ ಗೊತ್ತಿಲ್ಲ ಎಂದರು. ಆಗ ನಾನು ʻನಿನ್ನ ಹೆಸರು ಇದರಲ್ಲಿ ಹೇಗೆ ಬಂತುʼ ಎಂದು ಕೇಳಿದೆ. ಅದಕ್ಕೆ ಆಕೆ ʻʻಒಮ್ಮೆ ಗೋವಿಂದ ಪೂಜಾರಿ ಅವರು ಮನೆ ಗೃಹ ಪ್ರವೇಶಕ್ಕೆ ಒಬ್ಬ ಸ್ವಾಮೀಜಿ ಬೇಕು ಎಂದು ಕೇಳಿದ್ದರು. ನಂಗೆ ಹಾಲಶ್ರೀ ಸ್ವಾಮೀಜಿಗಳ ಪರಿಚಯ ಇದ್ದಿದ್ದರಿಂದ ಅವರನ್ನು ಶಿಫಾರಸು ಮಾಡಿದ್ದೆ. ಅವರ ಫೋನ್‌ ನಂಬರ್‌ ಕೊಟ್ಟು ಅವರ ಕಾಂಟಾಕ್ಟ್‌ ಮಾಡಿಸಿದೆ. ಹಾಗೆ ಗೋವಿಂದ ಬಾಬು ಪೂಜಾರಿ ಅವರಿಗೂ ಸ್ವಾಮೀಜಿಗೂ ನಂಟಿದೆ. ಅವರೊಳಗೆ ಏನು ನಡೆದಿದೆ ಎನ್ನುವುದು ನನಗೆ ಗೊತ್ತಿಲ್ಲʼʼ ಎಂದು ಹೇಳಿದಳು. ನನಗೆ ಒಂದೂ ವಿಷಯ ಗೊತ್ತಿಲ್ಲ ಎಂದು ಹೇಳಿದಳು. ನಾನು ಮತ್ತೆ ಮತ್ತೆ ಒತ್ತಾಯ ಮಾಡಿ ಕೇಳಿದೆ. ಏನಾದರೂ ವಿಷಯ ಇದ್ರೆ ಹೇಳು ಎಂದಾಗ, ಅದು ಏನೋ ಇಂದಿರಾ ಕ್ಯಾಂಟೀನ್‌ ಬಿಲ್‌ ಗೊಂದಲಗಳಿಗಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ 150 ಇಂದಿರಾ ಕ್ಯಾಂಟೀನ್‌ ಇದೆ ಎಂದೆಲ್ಲ ಹೇಳಿದರು.

ನಂತರ ಆಕೆಯ ಬಂಧನವಾದಾಗಲೇ ನನಗೆ ಇದು ಇಷ್ಟು ತೀವ್ರತೆ ಪಡೆದದ್ದು ಗೊತ್ತಾಗಿದ್ದು. ಹಣದ ವಿಚಾರದಲ್ಲಿ ನನಗೇನೂ ಗೊತ್ತಿಲ್ಲ, ಚೈತ್ರಾಳ ಪರಿಚಯ ಇದ್ದುದು ಹೌದು. ಹಾಗಂತ, ಆಕೆಯ ಜೊತೆಗೆ ಬೇರೇನೂ ಸಂಪರ್ಕ, ಮಾತುಕತೆ, ವಹಿವಾಟು ಇಲ್ಲ ಎಂದು ರಾಜಶೇಖರಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Heavy Rain News : ರಾಜ್ಯದ ಹಲವು ಭಾಗಗಳಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಗುಡುಗು ಸಹಿತ ಭಾರಿ ಗಾಳಿ ಮಳೆ ಅನಾಹುತಗಳು ಸಂಭವಿಸಿದೆ. ಭಾನುವಾರ ಚಿಕ್ಕಮಗಳೂರಲ್ಲಿ ವಿಪರೀತ ಮಳೆಯಾಗುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಯು ನೆಲಕಚ್ಚಿದೆ.

VISTARANEWS.COM


on

By

Karnataka Weather Forecast Heavy rain in chikkmagalur
Koo

ಚಿಕ್ಕಮಗಳೂರು/ಬೆಂಗಳೂರು: ಭಾನುವಾರ ರಾಜ್ಯದ ವಿವಿಧೆಡೆ ವರುರ್ಣಾಭಟ (Karnataka Weather Forecast) ಜೋರಾಗಿದೆ. ಚಿಕ್ಕಮಗಳೂರಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Karnataka Weather Forecast

ಇನ್ನೂ ಮಳೆಯ (Rain News) ಅವಾಂತರಕ್ಕೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರು ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಸುತ್ತಮುತ್ತ ಗುಡುಗು, ಸಿಡಿಲು ಬಿರುಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ. ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ಅನುಭವಿಸುತ್ತಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಕಾಫಿನಾಡ ಬಯಲುಸೀಮೆ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲು ಸೀಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಬೆಂಗಳೂರಲ್ಲೂ ಮಳೆ ಮೋಡಿ

ವೀಕೆಂಡ್‌ ಮೂಡ್‌ನಲ್ಲಿದ್ದ ಸಿಟಿ ಮಂದಿಗೆ ಮಳೆಯು ಮೋಡಿ ಮಾಡಿದೆ. ಬೆಂಗಳೂರಿನ ಉಲ್ಲಾಳ, ನಾಗರಬಾವಿ, ವಿಜಯನಗರ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇತ್ತ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಪಾದಾಚಾರಿಗಳು ರಸ್ತೆ ದಾಟಲು ಆಗದೆ ಪರದಾಡುವಂತಾಗಿದೆ.

ಇದನ್ನೂ ಓದಿ: Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ನಿನ್ನೆ ಶನಿವಾರ ಸುರಿದ ಮಳೆಯಿಂದ ಅವಾಂತರ‌ವೇ ಸೃಷ್ಟಿಯಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ಮುಕ್ಕಾಲು ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮಳೆಯು ಅಬ್ಬರಿಸಲಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ಸಂಜೆ ಗಾಳಿಯೊಂದಿಗೆ ಸುರಿದ ಭಾರಿ ಮಳೆಗೆ ಜನರು ತೊಯ್ದು ತೊಪ್ಪೆಯಾದರು. ವಿಜಯಪುರ, ಹುಬ್ಬಳ್ಳಿ, ರಾಯಚೂರು ಸೇರಿ ಚಿಕ್ಕಮಗಳೂರಲ್ಲೂ ಮಳೆಯು (Heavy Rain alert) ಅಬ್ಬರಿಸಿತ್ತು. ರಸ್ತೆ ಮೇಲೆ ನೀರು ಹರಿದುಮ ಕೆಲವೆಡೆ ಕೆರೆಯಂತಾಗಿತ್ತು. ಇನ್ನೂ ನಾಲ್ಕೈದು ದಿನಗಳು ಗುಡುಗು ಸಹಿತ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka rain
Koo

ವಿಜಯಪುರ/ಹುಬ್ಬಳ್ಳಿ: ಶನಿವಾರ ಹಲವೆಡೆ ದಿಢೀರ್‌ ಸುರಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದರು. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಲೆನಾಡಿನ ಚಿಕ್ಕಮಗಳೂರಿನಲ್ಲೂ ವರುಣಾರ್ಭಟ (Karnataka Rain) ಜೋರಾಗಿತ್ತು. ಮೇ 15ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ತಂದಿತ್ತು. ಬಿರು ಬಿಸಿಲಿಗೆ ಕಂಗೆಟ್ಟು ಹೋಗಿದ್ದ ಜನರು, ಶನಿವಾರ ಸುರಿದ ಅರ್ಧ ಗಂಟೆಗೂ ಆಧಿಕ ಕಾಲ ಮಳೆಗೆ ಸಂತಸಗೊಂಡರು. ಇನ್ನೂ ರೈತರು ಮುಂಗಾರು ಹಂಗಾಮಿಗೆ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಈವರೆಗೂ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

Karnataka Rain

ಹುಬ್ಬಳ್ಳಿ, ಬೆಳಗಾವಿಯಲ್ಲಿ ಗುಡುಗು -ಸಿಡಿಲಿನ ಮಳೆ ಅಬ್ಬರ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಎಡೆಬಿಡದೆ ಆರ್ಭಟಿಸುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ಹರಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತ ಬೆಳಗಾವಿಯಲ್ಲಿ ಗುಡುಗು ಸಿಡಿಲು ಮಿಶ್ರಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಬೇಸೆತ್ತು ಹೋಗಿದ್ದ ಕುಂದಾನಗರಿ ಜನರಿಗೆ ವರುಣ ತಂಪೆರೆದಿದ್ದಾನೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

ಜೋರು‌ ಮಳೆಯಲ್ಲೇ ಶನಿವಾರದ ಸಂತೆ ಸಂಭ್ರಮ

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದಲ್ಲಿ ವರುಣಾರ್ಭಟದ ನಡುವೆಯೇ ಶನಿವಾರದ ಸಂತೆ ಜೋರಾಗಿತ್ತು. ಧಾರಾಕಾರ ಮಳೆ‌‌ಯಲ್ಲೇ ವ್ಯಾಪಾರಸ್ಥರು ಸಂತೆ ಮಾಡಿದರು. ಮಳೆಗೆ ಡೋಂಟ್ ಕೇರ್ ಎಂದ ಸಾವಿರಾರು ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಧಾರವಾಡದಲ್ಲಿ ಮಳೆ ಗಾಳಿಗೆ ಜಖಂ ಆದ ಬಸ್‌ಗಳು

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಗೆ ನಗರದ ಬಹುತೇಕ ಕಡೆ ಮರಗಳು ನೆಲಕ್ಕುರುಳಿದ್ದವು. ಮಳೆ ಗಾಳಿಗೆ ಬಸ್‌ಗಳು ಜಖಂ ಆಗಿದ್ದವು. ನಿರ್ಮಾಣ ಹಂತದಲ್ಲಿದ್ದ ಈಜುಕೊಳದ ಕಟ್ಟಿಗೆ ಸೆಂಟ್ರಿಂಗ್ ಬಿದ್ದು ಖಾಸಗಿ ಬಸ್ ಜಖಂಗೊಂಡಿತ್ತು. ನಗರದ ಡಿಸಿ ಕಂಪೌಂಡ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿತ್ತು.

Karnataka Rain

ಚಿಕ್ಕಮಗಳೂರಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಎಡಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಮಳೆ ಜತೆ ಭಾರಿ ಗಾಳಿ ಬೀಸುತ್ತಿದೆ. ಇನ್ನೂ ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಭಾರೀ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಕುಗ್ರಾಮಗಳು ಕತ್ತಲಲ್ಲಿವೆ. ಮಳೆ ಕಂಡು ರೈತರು, ಅಡಿಕೆ-ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಂಗಳೂರಿನ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಗಾಳಿ,ಗುಡುಗು ಸಹಿತ ಮಳೆಯಾಗುತ್ತಿದೆ. ಸುಮಾರು ಅರ್ಧಗಂಟೆಗಳ ಕಾಲ ಮಳೆಯು ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಸುಬ್ರಹ್ಮಣ್ಯದಲ್ಲಿ ಹಠಾತ್‌ ಮಳೆಯು ಕ್ಷೇತ್ರಕ್ಕೆ ಆಗಮಿಸಿದ ಭಕ್ತರಲ್ಲಿ ಸಂತಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Pooja Hegde: ಕಾರ್ಕಳದ ಕಣಜಾರು ದೇಗುಲಕ್ಕೆ ಭೇಟಿ ನೀಡಿದ ನಟಿ ಪೂಜಾ ಹೆಗ್ಡೆ

Pooja Hegde: ಬಹುಭಾಷಾ ನಟಿ, ಕರಾವಳಿ ಮೂಲದ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪೂಜಾ ಹೆಗ್ಡೆ ಅವರನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದರು. ಸನ್ಮಾನದ ವೇಳೆ ಅಭಿಮಾನಿಯೊರ್ವ ರಚಿಸಿದ ತಮ್ಮ ಭಾವಚಿತ್ರವನ್ನು ನಟಿ ಸ್ವೀಕರಿಸಿದರು.

VISTARANEWS.COM


on

Pooja Hegde
Koo

ಉಡುಪಿ: ಬಹುಭಾಷಾ ನಟಿ, ಕರಾವಳಿ ಮೂಲದ ಪೂಜಾ ಹೆಗ್ಡೆ (Pooja Hegde) ಇತ್ತೀಚೆಗೆ ಕಾರ್ಕಳಕ್ಕೆ ಭೇಟಿ ನೀಡಿದರು. ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪೂಜಾ ಹೆಗ್ಡೆ ಅವರನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದರು. ಸನ್ಮಾನದ ವೇಳೆ ಅಭಿಮಾನಿಯೊರ್ವ ರಚಿಸಿದ ತಮ್ಮ ಭಾವಚಿತ್ರವನ್ನು ನಟಿ ಸ್ವೀಕರಿಸಿದರು. ಪ್ರತಿವರ್ಷ ದೈವಕೋಲ, ದೇವಸ್ಥಾನದ ಜಾತ್ರೆ, ಉತ್ಸವದಲ್ಲಿ ಪೂಜಾ ಹೆಗ್ಡೆ ಭಾಗಿಯಾಗುತ್ತಾರೆ.

ಈ ವೇಳೆ ಅವರು ಕಣಜೂರಿನ ತನ್ನ ಬಾಲ್ಯದ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಭೂತಾರಾಧನೆ, ದೈವರಾಧನೆ ಕುರಿತೂ ಮಾತನಾಡಿದ್ದಾರೆ. ಮುಂಬೈಯಲ್ಲಿ ಹುಟ್ಟಿ ಬೆಳೆದ ಪೂಜಾ ಹೆಗ್ಡೆ ಪ್ರತಿವರ್ಷದ ರಜೆಯಲ್ಲಿ ತಮ್ಮ ಅಜ್ಜನ ಮನೆಯಾದ ಕಣಜೂರಿಗೆ ಭೇಟಿ ನೀಡುತ್ತಿದ್ದರಂತೆ. ʼʼಬೇಸಿಗೆ ರಜೆಯನ್ನು ಇಲ್ಲಿ ಬಹಳ ಖುಷಿಯಿಂದ ಕಳೆಯುತ್ತಿದ್ದೆವು. ನಮಗೆ ಊರು ಬಿಟ್ಟು ಹೋಗಲು ಮನಸ್ಸಾಗುತ್ತಲೇ ಇರಲಿಲ್ಲ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದೇವರ ಅನುಗ್ರಹ ಇಲ್ಲದೆ ಏನೂ ಸಾಧನೆ ಮಾಡಲಾಗದು. ಸಿನಿಮಾ ಕುಟುಂಬವಲ್ಲದ ಕಡೆಯಿಂದ ನಾನು ಈ ಕ್ಷೇತ್ರಕ್ಕೆ ಬಂದಿದ್ದೇನೆ. ನಾನು ಸಾಧನೆ ಮಾಡಲು ದೇವರ ಅನುಗ್ರಹವೇ ಕಾರಣʼʼ ಎಂದು ಹೇಳಿದ್ದಾರೆ.

2012ರಲ್ಲಿ ತಮಿಳಿನ ʼಮುಗಮೂಡಿʼ ಸಿನಿಮಾದ ಮೂಲ ಪೂಜಾ ಹೆಗ್ಡೆ ಸಿನಿ ರಂಗಕ್ಕೆ ಕಾಲಿಟ್ಟರು. ಜೀವ ನಾಯಕನಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಹಿಟ್‌ ಆಗದಿದ್ದರೂ ಪೂಜಾ ಗಮನ ಸೆಳೆದಿದ್ದರು. 2014ರಲ್ಲಿ ʼಒಕ ಲೈಲ ಕೋಸಮ್‌ʼ ಮತ್ತು ʼಮುಕುಂದʼ ಚಿತ್ರಗಳ ಮೂಲಕ ಟಾಲಿವುಡ್‌ ಪ್ರವೇಶಿಸಿದರು. ಬಳಿಕ ನೇರ ಬಾಲಿವುಡ್‌ ತೆರಳಿದರು. 2016ರಲ್ಲಿ ರಿಲೀಸ್‌ ಆದ ʼಮೊಹೆಂಜದಾರೊ’ ಸಿನಿಮಾದಲ್ಲಿ ಹೃತಿಕ್‌ ರೋಷನ್‌ಗೆ ನಾಯಕಿಯಾಗಿ ಗಮನ ಸೆಳೆದರು.

ಹೀಗೆ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡ ಪೂಜಾ ಹೆಗ್ಡೆ ಟಾಪ್‌ ನಾಯಕಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಟಾಲಿವುಡ್‌, ಬಾಲಿವುಡ್‌ನ ಟಾಪ್‌ ನಾಯಕರ ಜತೆಗೆ ತೆರೆ ಹಂಚಿಕೊಂಡಿದ್ದಾರೆ. ಸದ್ಯ ಶಾಹಿದ್ ಕಪೂರ್ ಜತೆಗೆ ‘ದೇವ’ ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರೋಶನ್‌ ಆಂಡ್ರ್ಯೂಸ್ ನಿರ್ದೇಶನದ ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿದೆ ಎನ್ನಲಾಗಿದೆ. ಜತೆಗೆ ಅಹನ್‌ ಶೆಟ್ಟಿ ಅಭಿನಯದ ಮುಂದಿನ ಸಿನಿಮಾದಲ್ಲಿಯೂ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Pooja Hegde: 45 ಕೋಟಿ ರೂ. ಬೆಲೆಯ ಹೊಸ ಮನೆ ಖರೀದಿಸಿದ ಪೂಜಾ ಹೆಗ್ಡೆ

ಕೆಲವು ದಿನಗಳ ಹಿಂದೆಯಷ್ಟೇ ಪೂಜಾ ಹೆಗ್ಡೆ ಖ್ಯಾತ ಕ್ರಿಕೆಟಿಗನ ಜತೆ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ ಎಂದು ವರದಿಯಾಗಿತ್ತು. ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ಸುದ್ದಿಯಾಗಿತ್ತು. ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿರಲಿಲ್ಲ. ಈ ಬಗ್ಗೆ ನಟಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ತೆಲುಗು ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿದ್ದವು. ಸದ್ಯ ಈ ವಿಚಾರ ತಣ್ಣಗಾಗಿದೆ.

Continue Reading
Advertisement
IPL 2024
ಐಪಿಎಲ್ 202431 mins ago

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

French Yoga Teacher
ಮಹಿಳೆ58 mins ago

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

Vande Bharat Express
ದೇಶ1 hour ago

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

ಕರ್ನಾಟಕ1 hour ago

Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 hour ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Adhir Ranjan
ದೇಶ1 hour ago

Adhir Ranjan: ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್‌ ನಾಯಕ; ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ2 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

felicitation programme for SSLC student Harshita D M who got 2nd place in the state
ತುಮಕೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

130 crore crop compensation amount paid to Vijayanagara district says DC m S Diwakar
ವಿಜಯನಗರ2 hours ago

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Prajwal Revanna Case Naveen Gowda post against MLA A Manju
ರಾಜಕೀಯ2 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 hour ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ2 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ2 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ15 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌