Chaitra Kundapura : ಅಬ್ಬಬ್ಬಾ... ಗೋವಿಂದ ಪೂಜಾರಿಯೇ ವಂಚಕ ಎಂದು ಬಿಂಬಿಸಲು ಕ್ರಿಮಿನಲ್‌ ಐಡಿಯಾ; ITಗೆ ದೂರು - Vistara News

ಉಡುಪಿ

Chaitra Kundapura : ಅಬ್ಬಬ್ಬಾ… ಗೋವಿಂದ ಪೂಜಾರಿಯೇ ವಂಚಕ ಎಂದು ಬಿಂಬಿಸಲು ಕ್ರಿಮಿನಲ್‌ ಐಡಿಯಾ; ITಗೆ ದೂರು

Chaitra Kundapura :ಚೈತ್ರಾ ಕುಂದಾಪುರ ಸಾಮಾನ್ಯ ಅಲ್ಲ ಅನ್ನುವುದಕ್ಕೆ ಇಲ್ಲೊಂದು ಪತ್ರವನ್ನು ಹಾಕಿದ್ದೇವೆ ಓದಿ. ತಾನೇ ವಂಚನೆ ಮಾಡಿದ್ದರೂ ಗೋವಿಂದ ಪೂಜಾರಿ ವಂಚಕ ಎಂದು ಬಿಂಬಿಸಿ ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆಯಬೇಕು ಎಂದರೆ ಎಷ್ಟೊಂದು ಕ್ರಿಮಿನಲ್‌ ಐಡಿಯಾ ಬೇಕು ನೋಡಿ!

VISTARANEWS.COM


on

Chaitra Govinda poojari IT letter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP Ticket) ಕೊಡಿಸುವುದಾಗಿ ಐದು ಕೋಟಿ ರೂಪಾಯಿ ವಸೂಲಿ (Five crore rupees fraud) ಮಾಡಿ ವಂಚಿಸಿ ಬಂಧನಕ್ಕೆ ಒಳಗಾಗಿರುವ ಫೈರ್‌ ಬ್ರಾಂಡ್‌ ಚೈತ್ರಾ ಕುಂದಾಪುರ (Chaitra Kundapura) ಅದೆಂಥ ಕಿಲಾಡಿ ಎಂದರೆ, ಈ ಪ್ರಕರಣದಲ್ಲಿ ತನ್ನ ಬಂಧನವಾಗುವುದು ಖಚಿತ ಎಂದು ತಿಳಿಯುತ್ತಿದ್ದಂತೆಯೇ ಗೋವಿಂದ ಪೂಜಾರಿಯೇ (Govinda poojari) ಫ್ರಾಡ್‌ ತಾನೊಬ್ಬ ಸಾಚಾ ಎಂದು ಬಿಂಬಿಸಿ ಆದಾಯ ತೆರಿಗೆ ಇಲಾಖೆಗೆ ಆಕೆ ದೊಡ್ಡ ಪತ್ರವೊಂದನ್ನು ಬರೆದಿರುವುದು ಬೆಳಕಿಗೆ ಬಂದಿದೆ. ಈ ಪತ್ರವನ್ನು ಆಕೆ ಆದಾಯ ತೆರಿಗೆ ಇಲಾಖೆಗೆ (Income tax Department) ಪೋಸ್ಟ್‌ ಮಾಡಿದ್ದಾಳೋ ಇಲ್ಲವೋ ಗೊತ್ತಿಲ್ಲ. ಆದರೆ, ಇದರಲ್ಲಿ ತಾನು ಒಬ್ಬ ಪತ್ರಕರ್ತೆಯಾಗಿ (Chaitra in the guise of Journalist) ಈ ಪ್ರಕರಣದ ಇಂಚಿಂಚು ಮಾಹಿತಿಯನ್ನು ಸಂಗ್ರಹ ಮಾಡಿದ್ದಾಗಿ ಹೇಳಿಕೊಂಡಿದ್ದಾಳೆ.

ಗೋವಿಂದ ಪೂಜಾರಿ ಎಂಬ ಉದ್ಯಮಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಅಕ್ರಮ ದಾರಿಗಳಲ್ಲಿ ಪ್ರಯತ್ನ ಮಾಡಿರುವ ಮಾಹಿತಿ ತಿಳಿದ ತಾನು ಅದರ ತನಿಖೆಯನ್ನು ನಡೆಸಿ ಇದಿಷ್ಟು ವಿವರಗಳನ್ನು ಸಂಗ್ರಹಿಸಿ ಕೊಟ್ಟಿರುವುದಾಗಿ ಪತ್ರದಲ್ಲಿ ಬರೆಯಲಾಗಿದೆ. ಹಲವಾರು ಫೇಸ್‌ ಬುಕ್‌ ಲಿಂಕ್‌ಗಳು, ಆಡಿಯೋಗಳು ಮತ್ತು ವಿಡಿಯೊಗಳನ್ನು ಅದರಲ್ಲಿ ಲಗತ್ತಿಸಲಾಗಿದೆ. ಅಂದರೆ ಒಂದು ವೇಳೆ ಈ ಪ್ರಕರಣದಲ್ಲಿ ತಾನು ಸಿಕ್ಕಿಹಾಕಿಕೊಂಡರೂ ತಾನು ವಂಚಕಿಯಲ್ಲ. ಇದನ್ನು ಒಬ್ಬ ಪತ್ರಕರ್ತೆಯಾಗಿ ಭೇದಿಸಲು ಬಂದಿದ್ದು ಎಂದು ತೋರಿಸಿಕೊಳ್ಳುವ ಪ್ರಯತ್ನವನ್ನು ಆಕೆ ಮಾಡಿದಂತೆ ಕಾಣುತ್ತಿದೆ.

ಇದು ಸೆಪ್ಟೆಂಬರ್‌ 8ರಂದು ಗೋವಿಂದ ಪೂಜಾರಿ ಬೆಂಗಳೂರಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮತ್ತು ಸೆಪ್ಟೆಂಬರ್‌ 12ರಂದು ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಸಮೀಪದ ಬಂಧನಕ್ಕೆ ಒಳಗಾಗುವ ನಡುವಿನ ನಾಲ್ಕು ದಿನದಲ್ಲಿ ನಡೆದ ಕೆಲಸ. ಅಂದರೆ ಚೈತ್ರಾ ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಈ ಕೆಲಸ ನಡೆದಿದೆ. ತಾನು ಆದಾಯ ತೆರಿಗೆ ಇಲಾಖೆಗೆ ಈ ಬಗ್ಗೆ ಪತ್ರ ಬರೆದಿದ್ದೇನೆ, ನನ್ನನ್ನು ಈ ಪ್ರಕರಣದಲ್ಲಿ ಎಳೆದುತಂದರೆ ನೀವು ಕೂಡಾ ಸಿಕ್ಕಿಬೀಳುತ್ತೀರಿ. ಹೀಗಾಗಿ ಎಚ್ಚರಿಕೆಯಿಂದ ಇರಿ ಎಂದು ಗೋವಿಂದ ಪೂಜಾರಿ ಅವರನ್ನು ಹೆದರಿಸುವ ತಂತ್ರ ಇದೆಂದು ಹೇಳಲಾಗುತ್ತಿದೆ.

Govinda poojari and Chaitra at hala matt

ಪತ್ರದಲ್ಲಿರುವ ಪ್ರಮುಖ ಅಂಶಗಳೇನು?

  1. ನಾನೊಬ್ಬಳು ಪತ್ರಕರ್ತೆ, ಗೋವಿಂದ ಪೂಜಾರಿ ಅವರು ವಾಮಮಾರ್ಗದಿಂದ ಟಿಕೆಟ್‌ ಪಡೆಯಲು ಪ್ರಯತ್ನಿಸಿದ್ದರ ವಿಚಾರ ತಿಳಿದು ತನಿಖೆ ನಡೆಸಿ ಈ ಮಾಹಿತಿ ನೀಡುತ್ತಿರುವುದಾಗಿ ಹೇಳಿಕೆ.
  2. ಗೋವಿಂದ ಪೂಜಾರಿಯವರು ಬಿಜೆಪಿ ಟಿಕೆಟ್‌ ಪಡೆಯಲು ಏನೇನು ವಾಮ ಮಾರ್ಗಗಳನ್ನು ಬಳಸಿದ್ದಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
  3. ಹಾಲಶ್ರೀಗಳಿಗೆ 1.5 ಕೋಟಿ ರೂ., ವಿಶ್ವನಾಥ್‌ಜಿಗೆ 3 ಕೋಟಿ ರೂ. ಕೊಟ್ಟಿರುವ ಉಲ್ಲೇಖ ಮಾಡಲಾಗಿದೆ.
  4. ಗೋವಿಂದ ಪೂಜಾರಿ ಆಪ್ತರ ಪ್ರಸಾದ್‌ ಪೂಜಾರಿ ಬೈಂದೂರು, ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಗನ್‌ ಕಡೂರ್‌ ಅವರೆಲ್ಲ ಈ ಪ್ರಕರಣದಲ್ಲಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
  5. ಪತ್ರದಲ್ಲಿ ಮಂಗಳೂರಿನ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪ ಮಾಡಲಾಗಿದೆ. ಜುಲೈ 29 ರಂದು ಮಧ್ಯಾಹ್ನ 12:43ಕ್ಕೆ ಚೈತ್ರಾಗೆ ಕರೆ ಮಾಡಿದ್ರಂತೆ ರಾಜಶೇಖರಾನಂದ ಸ್ವಾಮೀಜಿ. ಗೋವಿಂದ ಬಾಬು ಪೂಜಾರಿಯವರು ಬಿಜೆಪಿ ಟಿಕೆಟ್ ಗಾಗಿ 5 ಕೋಟಿ ರೂಪಾಯಿ ನೀಡಿರುವ ಕುರಿತು ಚರ್ಚೆ ನಡೆದಿದೆಯಂತೆ.
  6. ಪತ್ರದಲ್ಲಿ ಸಂತೋಷ್ ಕೆಲ್ಲೋಜಿ ಎಂಬುವರ ಹೆಸರು ಕೂಡಾ ಪ್ರಸ್ತಾಪವಾಗುತ್ತದೆ.

ಹಾಗಿದ್ದರೆ ಚೈತ್ರಾ ಐಟಿ ಇಲಾಖೆಗೆ ಬರೆದಿರುವ ಪತ್ರದಲ್ಲಿ ಏನಿದೆ ನೀವೇ ನೋಡಿ..

Chaitra letter to IT

ರಿಗೆ, ಪ್ರಧಾನ ಮುಖ್ಯ ಆಯುಕ್ತರು, ಆದಾಯ ತೆರಿಗೆ ಇಲಾಖೆ, ದಕ್ಷಿಣ ವಲಯ, ಬೆಂಗಳೂರು,

ಮಾನ್ಯರೇ

ವಿಷಯ : ಅನಧೀಕೃತ ಹಣದ ವಹಿವಾಟು ನಡೆದಿರುವ ಕುರಿತು.

ಚೈತ್ರಾ ಎನ್ನುವ ನಾನು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದು ಗೋವಿಂದ ಬಾಬು ಪೂಜಾರಿ ಎನ್ನುವ ಬೆಂಗಳೂರು ಮೂಲದ ಉದ್ಯಮಿಯೊಬ್ಬರು ಅಕ್ರಮವಾಗಿ ಹಣದ ವ್ಯವಹಾರ ನಡೆಸಿರುವ ಕುರಿತು ನನಗೆ ಖಚಿತ ಮಾಹಿತಿ ದೊರೆತಿರುತ್ತದೆ, ಗೋವಿಂದ ಬಾಬು ಪೂಜಾರಿ ಎನ್ನುವ ವ್ಯಕ್ತಿ ಮೂಲತಃ ಬೈಂದೂರಿನವರಾಗಿದ್ದು ಹಲವು ವರ್ಷಗಳ ಕಾಲ ಮುಂಬೈನಲ್ಲಿ ನೆಲೆಸಿ ವ್ಯವಹಾರಗಳನ್ನು ನಡೆಸಿದ್ದು, ಕೆಲವು ವರ್ಷಗಳಿಂದ ಈಚೆಗೆ ಬೆಂಗಳೂರಿನಲ್ಲಿ ಸ್ವಂತ ಕೇಟರಿಂಗ್ ಉದ್ಯಮ ನಡೆಸಿಕೊಂಡು ಬಂದಿರುತ್ತಾರೆ, ಜೊತೆಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಒಂದಷ್ಟು ಸಮಾಜ ಸೇವೆ ನಡೆಸಿಕೊಂಡು ಇಲ್ಲಿನ ಜನರ ನಡುವೆ ಸಮಾಜ ಸೇವಕ ಎಂದು ಗುರುತಿಸಿಕೊಂಡಿರುವುದರಿಂದ ಕಳೆದ ಒಂದು ವರ್ಷದಿಂದ ನನಗೆ ಅವರ ಆಪ್ತ ಸಹಾಯಕ ಪ್ರಸಾದ್ ಪೂಜಾರಿ ಎನ್ನುವ ವ್ಯಕ್ತಿಯ ಮೂಲಕ ಪರಿಚಿತರಾಗಿರುತ್ತಾರೆ. ಹೀಗಿರುವಾಗ ಕಳೆದ 2-3 ವರ್ಷಗಳಿಂದ ಈಚೆಗೆ ಇವರು ಬೈಂದೂರು ಭಾಗದಲ್ಲಿ ಭಾರತೀಯ ಜನತಾ ಪಾರ್ಟಿಯ ಮೂಲಕ ಶಾಸಕ ಸ್ಥಾನಕ್ಕೆ ಅಭ್ಯರ್ಥಿಯ ಆಕಾಂಕ್ಷಿಯಾಗಿರುತ್ತಾರೆ ಈ ಕುರಿತು ಅವರು ಮಾಧ್ಯಮಗಳಲ್ಲಿ ಮಾತನಾಡಿರುವ ಲಿಂಕ್ ಅನ್ನು ಇಲ್ಲಿ ನೀಡಲಾಗಿದೆ. (ಲಿಂಕ್ – https://fb.watch/m7cDA672di/?mibextid=NnVzG8 ಫೈಲ್ ಸಂಖ್ಯೆ-001)

ನಾನು ಪತ್ರಕರ್ತೆ, ರಹಸ್ಯ ವರದಿ ಮಾಡುವ ಆಸಕ್ತಿ ನಂಗೆ

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಟಿಕೆಟ್ ಪಡೆಯಲು ಪ್ರಯತ್ನ ಪಟ್ಟರೂ ಸಾಧ್ಯವಾಗದೆ ಇರುವ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಯಾವುದೇ ಜವಾಬ್ದಾರಿಯುತ ಹುದೆಯಲ್ಲಿರದೆ ಇದ್ದರೂ ತಾನು ಬಿಜೆಪಿ ಆಕಾಂಕ್ಷಿ ಎಂದು ಹೇಳಿಕೊಂಡು ಓಡಾಡುತ್ತಿದ್ದ ಇವರ ಕುರಿತು ನನಗೆ ಸಹಜವಾಗಿಯೇ ಅನುಮಾನ ಮತ್ತು ಕುತೂಹಲ ಹುಟ್ಟಿಕೊಳ್ಳುತ್ತದೆ, ವೃತ್ತಿಯಲ್ಲಿ ಪತ್ರಕರ್ತೆಯಾಗಿರುವ ನನಗೆ ಚುನಾವಣೆ ಸಂದರ್ಭದಲ್ಲಿ ನಡೆಯುವ ಹಣದ ವಹಿವಾಟುಗಳ ಕುರಿತು ರಹಸ್ಯ ವರದಿ ಮಾಡುವ ಆಸಕ್ತಿ ಹಿಂದಿನಿಂದಲೂ ಇತ್ತು. (ನಾನು ಈ ಹಿಂದೆ ರಾಜ್ಯ ಮಟ್ಟದ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಉಪಸಂಪಾದಕಿಯಾಗಿ ಹಾಗೂ ಹಲವು ಚಾನೆಲ್ ಗಳಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿರುವ ದಾಖಲೆಗಳನ್ನು ಲಗತ್ತಿಸಿದ್ದೇನೆ).

ಪ್ರಸಾದ್‌ ಬೈಂದೂರ್‌ಗೆ ಕರೆ ಮಾಡಿ ಆಗಾಗ ಮಾಹಿತಿ ಸಂಗ್ರಹಿಸುತ್ತಿದ್ದೆ

ಹಾಗಾಗಿ ಗೋವಿಂದ ಬಾಬು ಪೂಜಾರಿಯವರು ಟಿಕೆಟ್‌ಗಾಗಿ ಹೇಗೆ ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಸಂಗ್ರಹಿಸಲು ಅವರೊಂದಿಗೆ ಮತ್ತು ಅವರ ಆಪ್ತನಾಗಿದ್ದ ಪ್ರಸಾದ್ ಪೂಜಾರಿಯೊಂದಿಗೆ ಆಗಾಗ ಕರೆ ಮಾಡುತ್ತಾ ಮಾಹಿತಿ ಸಂಗ್ರಹಿಸುತ್ತಿದ್ದೆ. ಒಂದೊಮ್ಮೆ ಗೋವಿಂದ ಪೂಜಾರಿಯವರು ಹಣ ನೀಡಿ ಅಕ್ರಮ ಮಾರ್ಗದಿಂದ ಟಿಕೆಟ್ ಪಡೆಯುವ ಪ್ರಯತ್ನ ಮಾಡಿದಲ್ಲಿ ಅದನ್ನು ಕಾನೂನು ಮೂಲಕ ದೂರು ನೀಡಿ ತಡೆಯುವ ಮತ್ತು ಅದರ ಕುರಿತು ವರದಿ ಮಾಡುವ ಉದ್ದೇಶದಿಂದ ನಾನು ಅವರು ಟಿಕೆಟ್ ಗಾಗಿ ಯಾರೊಂದಿಗೆಲ್ಲ ಸಂಪರ್ಕದಲ್ಲಿದ್ದರೋ ಅವರೆಲ್ಲರೊಂದಿಗೂ ಹಾಗೂ ಅವರ ಆಪ್ತ ಬಳಗದ ಬಹುತೇಕರೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಮಾಹಿತಿ ಕಲೆ ಹಾಕುವ ಪ್ರಯತ್ನ ಮಾಡಿದ್ದೆ. ಆದರೆ ಇವರು ಹಣ ನೀಡುವ ಅಥವಾ ಹಣದ ರೆಕಾರ್ಡ್ ನಲ್ಲಿ ಮೂರು ಕೋಟಿ ಮತ್ತು 50 ಲಕ್ಷ ಕೊಟ್ಟಿರುವ ಕುರಿತು ಅವರ ಮಾತುಗಳಲ್ಲೇ ಉಲ್ಲೇಖಿಸಿದ್ದಾರೆ ಮತ್ತು ಸ್ವಾಮೀಜಿಯವರಿಗೆ ಹಣ ಕೊಟ್ಟಿರುವ ಬಗ್ಗೆಯೂ ಒಪ್ಪಿಕೊಂಡಿದ್ದಾರೆ. (File no-003)

ಪೊಲೀಸ್‌ ಕೇಸ್‌ ದಾಖಲಿಸಲು ಗೋವಿಂದ ಪೂಜಾರಿಗೆ ಸಲಹೆ ಕೊಟ್ಟಿದ್ದೇ ನಾನು

ಇನ್ನು ಇವರು ಈ ವಿಷಯದ ಕುರಿತು ಅವರು ನನ್ನ ಬಳಿ ಮಾತನಾಡಿದಾಗ ನಾನು ಅವರಿಗೆ ಪೊಲೀಸ್ ಕೇಸ್ ದಾಖಲಿಸಲು ಸಲಹೆ ನೀಡಿರುತ್ತೇನೆ, ಆದರೆ ಅವರು ಈ ವರೆಗೂ ಪೊಲೀಸ್ ಕೇಸ್ ದಾಖಲಿಸಿರುವುದು ನನ್ನ ಗಮನಕ್ಕೆ ಬಂದಿಲ್ಲ. ಇವರ ಈ ನಡೆ ನನಗೆ ಅನುಮಾನಾಸ್ಪದವಾಗಿ ಕಂಡು ಬಂದಿರುತ್ತದೆ,

ಇದರೊಂದಿಗೆ ಅವರ ಆಪ್ತ ಸಹಾಯಕ ಪ್ರಸಾದ್ ಪೂಜಾರಿಯವರು ಕೂಡ 2023, ಮೇ 11 ನೇ ತಾರೀಕು ನನಗೆ ಕರೆ ಮಾಡಿ ಗೋವಿಂದ ಬಾಬು ಪೂಜಾರಿಯವರು ಟಿಕೆಟ್ ಗಾಗಿ ಕೋಟಿಗಟ್ಟಲೆ ಹಣ ನೀಡಿ ಕಳೆದುಕೊಂಡಿರುವ ಕುರಿತು ಮಾತನಾಡಿರುತ್ತಾನೆ. (ಇದಕ್ಕೆ ಸಂಬಂಧಿಸಿದ ಕಾಲ್ ರೆಕಾರ್ಡ್ ಅನ್ನು ಲಗತ್ತಿಸಿದ್ದೇನೆ File no-004)

ಇದು ನಡೆದು ಸುಮಾರು 2 ತಿಂಗಳ ಬಳಿಕ ನನಗೆ ಕೃಷ್ಣ ಪೂಜಾರಿ ಎಂದು ಪರಿಚಯಿಸಿ ಕೊಂಡ ವ್ಯಕ್ತಿಯಿಂದ ಜುಲೈ 21, 2023ರಿಂದ 23ರ ನಡುವೆ ಹಲವರ ಬಳಿ ಚರ್ಚೆ ನಡೆಸಿದ್ದು +918217220747 ಎಂಬ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದ್ದು, ಅವರು ನನ್ನ ಗೋವಿಂದ ಬಾಬು ಪೂಜಾರಿ ಅವರು ಚುನಾವಣೆ ಟಿಕೆಟ್ ಗಾಗಿ 5 ಕೋಟಿ ರೂಪಾಯಿ ಕೊಟ್ಟಿರುವ ಕುರಿತು ನನ್ನನ್ನು ಪ್ರಶ್ನಿಸಿರುತ್ತಾರೆ, ಈ ಕುರಿತು ನಾನು ಅವರ ಬಳಿ ನನ್ನ ಅಭಿಪ್ರಾಯವನ್ನು ಹಂಚಿಕೊಂಡು ಪೊಲೀಸ್ ಕೇಸ್ ದಾಖಲಿಸುವಂತೆ ಸಲಹೆ ನೀಡಿರುತ್ತೇನೆ.

ರಾಜಶೇಖರಾನಂದ ಸ್ವಾಮೀಜಿ ಕೂಡಾ ಫೋನ್‌ ಮಾಡಿ ಮಾಹಿತಿ ಕೇಳಿದ್ದರು

ತದ ನಂತರ ಪುನಃ ಜುಲೈ 29 ರಂದು ಮಧ್ಯಾಹ್ನ 12:43 ಕ್ಕೆ ನನಗೆ ಪರಿಚಿತರಾಗಿರುವ ರಾಜಶೇಖರಾನಂದ ಸ್ವಾಮೀಜಿಯವರ ಫೋನ್ ನಂಬರ್+919986126131ರಿಂದ ಕರೆ ಬಂದಿದ್ದು, ಅದರಲ್ಲಿ ಅವರು ಗೋವಿಂದ ಬಾಬು ಪೂಜಾರಿಯವರು ಬಿಜೆಪಿ ಟಿಕೆಟ್ ಗಾಗಿ 5 ಕೋಟಿ ರೂಪಾಯಿಯನ್ನು ನೀಡಿರುವ ಕುರಿತು ಅವರ ಆಪ್ತರೊಬ್ಬರು ಅವರಿಗೆ ಮಾಹಿತಿ ನೀಡಿರುವ ಬಗ್ಗೆ ನನ್ನ ಬಳಿ ಚರ್ಚಿಸುತ್ತಾರೆ.

ಅದಾದ ಬಳಿಕ ಮತ್ತೆ ಜುಲೈ 30 ರಂದು ನನಗೆ ಪರಿಚಿತರರಾದ ಸಂತೋಷ್ ಕೆಲ್ಲೋಜಿ ಎನ್ನುವವರು ಮಧ್ಯಾಹ್ನ 2:05 ಕ್ಕೆ ಕರೆಯಲ್ಲಿ ನನ್ನೊಂದಿಗೆ ಮಾತನಾಡಿ ಗೋವಿಂದ ಬಾಬು ಪೂಜಾರಿಯವರಿಗೆ ಸಂಬಂಧಿಸಿದಂತೆ ಚುನಾವಣೆಯಲ್ಲಿ ಹಣ ನೀಡಿರುವ ಸುದ್ದಿಯೊಂದು ವಾಟ್ಸಾಪ್ ಗಳಲ್ಲಿ ಶೇರ್ ಆಗಿರುವ ಕುರಿತು ನನ್ನ ಬಳಿ ವಿಚಾರಿಸಿರುತ್ತಾರೆ, ಈ ಎಲ್ಲಾ ಕರೆಗಳಿಗೆ ಸಂಬಂಧಿಸಿದಂತೆ ಕರೆಗಳನ್ನು ನಾನು ರೆಕಾರ್ಡ್ ಮಾಡಿ ಕೊಂಡಿದ್ದು, ಅದನ್ನು ಇದರೊಂದಿಗೆ ಲಗತ್ತಿಸಿರುತ್ತೇನೆ. (File no 005, 006, 007)

ಹಣ ಕಳೆದುಕೊಂಡಿದ್ದೇನೆ ಎಂದು ಪೂಜಾರಿಯವರೇ ಬರೆದುಕೊಂಡಂತೆ ಪತ್ರ

ಈ ಎಲ್ಲಾ ವಿಚಾರಗಳೂ ನಡೆಯುವಾಗಲೇ ವಾಟ್ಸಾಪ್ ನಲ್ಲಿ ಗೋವಿಂದ ಬಾಬು ಪೂಜಾರಿಯವರಿಗೆ ಸಂಬಂಧಿಸಿದಂತೆ ಪತ್ರವೊಂದು ಹರಿದಾಡಲು ಪ್ರಾರಂಭವಾಗಿದ್ದು (ವಾಟ್ಸಾಪ್ ನಲ್ಲಿ ಬಂದಿರುವ ಸಂದೇಶದ screen shot ಲಗತ್ತಿಸಲಾಗಿದೆ, ಹಾಗೂ WhatsApp ನಲ್ಲಿ ಈ ಪತ್ರದ ಪ್ರತಿಯನ್ನು ಕಳುಹಿಸಿರುವ ವ್ಯಕ್ತಿಯ ಫೋನ್ ಸಂಖ್ಯೆ ವಿಳಾಸ screen recorder ಮೂಲಕ ರೆಕಾರ್ಡ್ ಮಾಡಿ ಲಗತ್ತಿಸಿದ್ದೇನೆ. (Fill no- 009)

ಆ ಪತ್ರದಲ್ಲಿ ಸ್ವತಹಃ ಗೋವಿಂದ ಬಾಬು ಪೂಜಾರಿಯವರೇ ಹೇಳಿಕೊಂಡಿರುವಂತೆ ಬರೆಯಲಾಗಿದ್ದು ಅವರ ವ್ಯವಹಾರಗಳ ಪರಿಚಯವಿದ್ದು ಸ್ವತಃ ಅವರು ಚುನಾವಣೆ ಟಿಕೆಟ್ ಗಾಗಿ 5 ಕೋಟಿ ರೂಗಳನ್ನು ಕಳೆದುಕೊಂಡಿರುವ ಬಗ್ಗೆ ವಿಕೃತವಾಗಿ ವಿವರಿಸಲಾಗಿದೆ. (ಪತ್ರದ ಪ್ರತಿಯನ್ನು ಇದರೊಂದಿಗೆ ಲಗತ್ತಿಸಲಾಗಿದೆ pdf file name LETTER-PARTY pdf )

ಮೇಲ್ನೋಟಕ್ಕೆ ನೋಡುವಾಗ ಆ ಪತ್ರವನ್ನು ಸ್ವತಹ ಗೋವಿಂದ ಬಾಬು ಪೂಜಾರಿಯವರೇ ಅಥವಾ ಅವರ ಅತ್ಯಂತ ಆಪ್ತ ಬಳಗವೇ ಬರೆದಿರುವಂತೆ ಕಂಡು ಬರುತ್ತದೆ. ಕಾರಣ 4 ಪುಟಗಳ ಈ ಪತ್ರದಲ್ಲಿ ಗೋವಿಂದ ಬಾಬು ಪೂಜಾರಿಯವರ ವೈಯಕ್ತಿಕ ಬದುಕು ಮತ್ತು ವ್ಯವಹಾರಗಳ ಬಗ್ಗೆ ನಿಖರವಾಗಿ ಉಲ್ಲೇಖಿಸಲಾಗಿದೆ ಮತ್ತು ನನಗೆ ಬಂದಿರುವ ಕರೆಗಳ ರೆಕಾರ್ಡ್ ಗಳನ್ನು ಪರಿಶೀಲಿಸಿದರೆ ಅದರಲ್ಲಿ ಮೇಲ್ಕಂಡ ಎಲ್ಲಾ ವ್ಯಕ್ತಿಗಳೂ ಮಾತನಾಡಿರುವ ವಿಷಯ ಮತ್ತು ಈ ಪತ್ರದಲ್ಲಿ ಉಲ್ಲೇಖವಾಗಿರುವ ವಿಷಯಗಳಲ್ಲಿ ಸಾಮ್ಯತೆ ಇರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ.

ಹೀಗಿರುವಾಗ ಈ ಪತ್ರ ನಿಜವಾಗಿಯೂ ಗೋವಿಂದ ಬಾಬು ಪೂಜಾರಿಯವರಿಂದಲೇ ಬಂದಿರುವುದು ನಿಜವಾಗಿದ್ದಲ್ಲಿ ಅವರೇ ಹೇಳಿಕೊಂಡಿರುವಂತೆ ಅವರಿಗೆ 5 ಕೋಟಿ ರೂ ವಂಚನೆಯಾಗಿದ್ದಲ್ಲಿ ಇದುವರೆಗೂ ಅವರು ಪೊಲೀಸ್ ಕೇಸು ದಾಖಲಿಸದೆ ಇರಲು ಕಾರಣವೇನು?? ಅವರು ನಡೆಸಿದ್ದೇನೆ ಎಂದು ಹೇಳಿಕೊಂಡಿರುವಂತೆ ಅದೃಷ್ಟವಶಾತ್ ಇವರಿಗೆ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿಯಿಂದ ಇವರು ನಿರೀಕ್ಷೆ ಮಾಡಿದಂತೆ ಶಾಸಕ ಸ್ಥಾನಕ್ಕೆ ಟಿಕೆಟ್ ಸಿಗುವುದಿಲ್ಲ, ಸಾಮಾನ್ಯವಾಗಿ ಚುನಾವಣೆ ಘೋಷಣೆಯಾದ ಬಳಿಕ ಯಾವುದೇ ಪಕ್ಷಗಳು ಯಾರಿಗೂ ಹುದ್ದೆ ಜವಾಬ್ದಾರಿ ನೀಡುವುದು ಬಹಳ ಕಡಿಮೆ, ಆದರೆ ಆಶ್ಚರ್ಯ ಎನ್ನುವಂತೆ ದಿಢೀರ್ ಆಗಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿಯವರಿಗೆ ಜವಾಬ್ದಾರಿ ದೊರೆಯುತ್ತದೆ. (ಇದಕ್ಕೆ ಸಂಬಂಧಿಸಿದಂತೆ ಅವರ ಅಧಿಕೃತ ಪೇಜ್ ನಲ್ಲಿ ಅವರ ಜವಾಬ್ದಾರಿಯನ್ನು ಘೋಷಣೆ ಮಾಡಿರುವ ಪ್ರತಿಯ ಲಿಂಕ್ https://m.facebook.com/story.php?story_fbid=pfbid02Vp YbVvV3YokkV9hsuBQ3PqRcPc3ZA1LK YetCXyMtDkpPjYAKNFTh9jwdDL2UMdaWI&id=1000630621006306210064×2006)

ಮತ್ತು ಈ ಜವಾಬ್ದಾರಿ ದೊರೆತ ಬಳಿಕ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಸ್ಥಳೀಯ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆಯವರ ಪರವಾಗಿ ಇವರು ಪ್ರಚಾರವನ್ನೂ ನಡೆಸಿರುತ್ತಾರೆ.

ಹಾಗೂ ಚುನಾವಣಾ ಪ್ರಚಾರಕ್ಕೆ ಬೈಂದೂರಿಗೆ ಆಗಮಿಸಿದ್ದ ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ನಡುವೆ ಇವರು ಗುರುತಿಸಿಕೊಳ್ಳಲು ಪ್ರಾರಂಭಿಸುತ್ತಾರೆ. (ಈ ಕುರಿತ ಫೋಟೋ ಸಾಕ್ಷಿ ಲಾಗತ್ತಿಸಲಾಗಿದೆ, ಹಾಗೂ ಈ ಫೋಟೋ ಗಳನ್ನು ಗೋವಿಂದ ಬಾಬು ಪೂಜಾರಿಯವರ ಅಧಿಕೃತ ಫೇಸ್ ಬುಕ್ ಖಾತೆಗಳಿಂದ ತೆಗೆದುಕೊಳ್ಳಲಾಗಿದೆ, ಅದಕ್ಕೆ ಸಂಬಂಧಿಸಿದ ಲಿಂಕ್ ಗಳನ್ನು ಕೂಡ ನೀಡಿದ್ದೇವೆ.

ಲಿಂಕ್‌ಗಳು ಇವು -https://m.facebook.com/story.php?story_fbid=pfbid02rz4rDuhrRTMznaqRUIR67hkjPDdNCIQDwX LUWva1YLSryjTLJ7s1dqcVbWyWDhp71&id=10006384220463861

https://m.facebook.com/story.php?story_fbid=pfbid0G7pks6Y9PwsgWLQbxTNXis2QPQ2qvX2w eUcAfkXUasyDTBumuYfunxDotZVUsduel&id=100063842mibe4x3862

https://m.facebook.com/story.php?story_fbid=pfbid0G7pks6 Y9PwsgWLQbxTNXis2QPQ2qvX2w

eUcAfkXUasyDTBumuYfunxDotZVUsduel&id=100063861244042&mibextid=ZbWKWL)

ಇದನ್ನೆಲ್ಲಾ ಗಮನಿಸಿದಾಗ ಈ ಪ್ರಕರಣದಲ್ಲಿ ಬಹುದೊಡ್ಡ ಪ್ರಭಾವಿಗಳು ಶಾಮೀಲಾಗಿರಬಹುದು ಎನ್ನುವ ಅನುಮಾನ ನನಗೆ ಬಲವಾಗ ತೊಡಗಿತು. ಆದರೆ ಇದನ್ನೆಲ್ಲಾ ಸಾಬೀತು ಮಾಡಲು ನನ್ನ ಬಳಿ ಯಾವುದೇ ಸೂಕ್ತ ದಾಖಲೆಗಳು ಇರಲಿಲ್ಲ.

ಆರು ಕೋಟಿ ಕೊಟ್ಟಿದ್ದೇನೆಂದು ನನ್ನ ಬಳಿಯೇ ಹೇಳಿದ್ದಾರೆ ಎಂದಿರುವ ಚೈತ್ರಾ

ಚುನಾವಣೆ ಮುಗಿದ ಬಳಿಕ ಗೋವಿಂದ ಬಾಬು ಪೂಜಾರಿಯವರು ತಾನು ಬಿಜೆಪಿ ಟಿಕೆಟ್ ಗಾಗಿ 6 ಕೋಟಿ ರೂಪಾಯಿ ಹಣವನ್ನು ಅನಧಿಕೃತವಾಗಿ ನೀಡಿರುವ ಕುರಿತು ನನ್ನ ಬಳಿ ಹೇಳಿಕ್ಕೊಂಡಿರುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ದಿನಾಂಕ 11/05/2023 ರಂದು ಅವರ ಅಧಿಕೃತ ಫೋನ್ ಸಂಖ್ಯೆಯಾದ 9833311169 ನಂಬರ್ ನಿಂದ ಕರೆ ಮಾಡಿ ತಾನು ಮಂಜುನಾಥ್ ಎನ್ನುವವರಿಗೆ 1 ಕೋಟಿ ರೂಪಾಯಿಯನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ಒಂದೂವರೆ ಕೋಟಿ ರೂಪಾಯಿಯನ್ನು ಹಾಗೂ ವಿಶ್ವನಾಥ್ ಜೀ ಎನ್ನುವವರಿಗೆ 3 ಕೋಟಿ ರೂಪಾಯಿಯನ್ನೂ ನೀಡಿರುವುದಾಗಿ ನನ್ನೊಂದಿಗೆ ಚರ್ಚೆ ನಡೆಸಿರುತ್ತಾರೆ, ಈ ಕುರಿತು ತಾವು ಹಣ ನೀಡಿರುವುದನ್ನು ಸ್ವತಃ ಗೋವಿಂದ ಬಾಬು ಪೂಜಾರಿಯವರೇ ನನ್ನ ಬಳಿ ಹೇಳಿಕೊಂಡು ಒಪ್ಪಿಕೊಂಡಿರುತ್ತಾರೆ. ಈ ಕುರಿತು ಅವರು ಮಾತನಾಡಿರುವ ಕರೆಯ ರೆಕಾರ್ಡ್ ಗಳನ್ನು ಲಗತ್ತಿಸಿರುತ್ತೇನೆ.

ಹಾಗಿದ್ದರೆ ಗೋವಿಂದ ಪೂಜಾರಿ ಹಣಕಾಸಿನ ಮೂಲ ಯಾವುದು? ತನಿಖೆಯಾಗಲಿ

ಹಣಕಾಸಿನ ಮೂಲ ಯಾವುದು? ಅವರು ಹಣ ವರ್ಗಾವಣೆ ಮಾಡಿರುವ ಬ್ಯಾಂಕ್ ಖಾತೆಗಳ ವಿವರಗಳ ಕುರಿತು ವಿಚಾರಣೆ ನಡೆಯಬೇಕಿದೆ, Prevention Of Money Laundering Act 2002ರ ಪ್ರಕಾರ ಇವರು ನಡೆಸಿರುವ ಹಣಕಾಸಿನ ವ್ಯವಹಾರ ಕಾನೂನು ಬದ್ಧವಾಗಿದೆಯೇ? ಮತ್ತು ಈ ವ್ಯವಹಾರದಲ್ಲಿ ತೊಡಗಿಕೊಂಡಿರುವಂತೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿರುವ ಗೋವಿಂದ ಬಾಬು ಪೂಜಾರಿಯವರ ದಾಖಲಿತ ಬ್ಯಾಂಕ್ ವ್ಯವಹಾರಗಳು ಮತ್ತು ಇವರು ಪತ್ರದಲ್ಲಿ ಉಲ್ಲೇಖಿಸಿರುವಂತೆ ಗಗನ್ ಕಡೂರ್ ಹಾಗೂ ಅಭಿನವ ಹಾಲಶ್ರೀ ಸ್ವಾಮೀಜಿಗೆ ಹಣ ನೀಡಿರುವುದು ನಿಜವೇ ಆಗಿದ್ದಲ್ಲಿ ಅವರ ದಾಖಲಿತ ಬ್ಯಾಂಕ್ ವ್ಯವಹಾರ ಗಳು, ಆದಾಯದ ಮೂಲ ಮತ್ತು ಸ್ಥಿರ ಹಾಗೂ ಚರ ಆಸ್ತಿ -ಪಾಸ್ತಿಗಳ ಕುರಿತು ತನಿಖೆ ನಡೆಸಬೇಕು.

ಗೋವಿಂದ ಬಾಬು ಪೂಜಾರಿಯವರು ಕಾನೂನು ಬದ್ಧವಾಗಿ ಹಣಕಾಸು ವ್ಯವಹಾರ ನಡೆಸಿದ್ದಲ್ಲಿ 2022-23 ರ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಗಡುವು ಜುಲೈ 31 ಕ್ಕೆ ಮುಗಿದಿರುವುದರಿಂದ ಇವರು ಹೇಳಿಕೊಂಡಿರುವ 5 ಕೋಟಿ ರೂ. ಸಾಲವನ್ನು ಈ ITR returnsನಲ್ಲಿ ನಮೂದು ಮಾಡಿದ್ದಾರಾ?? ಒಂದೊಮ್ಮೆ ಇವರು ಕಾನೂನು ಬದ್ಧವಾಗಿ ವ್ಯವಹಾರ ನಡೆಸಿದ್ದು ಈ ವಿಷಯದಲ್ಲಿ ಅವರಿಗೆ ವಂಚನೆ ನಡೆದಿರುವುದು ಸಾಕ್ಷಿ ಸಮೇತ ಸಾಬೀತಾದಲ್ಲಿ ಅವರಿಗೆ ಅವರ ಹಣವನ್ನು ನ್ಯಾಯಬದ್ಧವಾಗಿ ಮರಳಿಸುವಲ್ಲಿ ತಮ್ಮ ಇಲಾಖೆ ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತೇನೆ.

ತನಿಖೆಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸಲು ಸಿದ್ಧ ಎಂದಿದ್ದ ಚೈತ್ರಾ

ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ವೈಯಕ್ತಿಕವಾಗಿ ಯಾವುದೇ ತೆರನಾದ ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧಳಿದ್ದೇನೆ ಹಾಗೂ ಇದಕ್ಕೆ ನಾನು ನೀಡಿರುವ ಕಾಲ್ ರೆಕಾರ್ಡ್ ದಾಖಲೆಗಳಿಗೆ ಪೂರಕವಾಗಿ ನನ್ನ ಮೊಬೈಲ್ ಸೇರಿದಂತೆ ಯಾವುದೇ ಯಂತ್ರೋಪಕರಣಗಳನ್ನು ಇಲಾಖೆಗೆ ನೀಡಲು ನಾನು ಸದಾ ಸಿದ್ಧಳಾಗಿದ್ದೇನೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಈ ಪ್ರಕರಣ ಕಾನೂನು ಮೂಲಕ ಬಗೆಹರಿದು ಯಾರೇ ಕಾನೂನನ್ನು ಮೀರಿ ವ್ಯವಹಾರ ನಡೆಸಿದ್ದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಕೋರಿಕೊಳ್ಳುತ್ತೇನೆ.- ಇತೀ ತಮ್ಮ ವಿಶ್ವಾಸಿ

(ಈ ಪತ್ರದೊಂದಿಗೆ ನೀಡಿರುವ ಪೆನ್ ಡ್ರೈವ್ ನಲ್ಲಿ ಮೇಲೆ ತಿಳಿಸಿದ ಎಲ್ಲಾ ವಿಷಯಗಳಿಗೆ ಸಂಬಂಧಿಸಿದ ಸಾಕ್ಷಿ ಆಧಾರಗಳು ಲಭ್ಯವಿರುತ್ತದೆ, ಅದಕ್ಕೆ ಸಂಬಂಧಿಸಿದ ಫೈಲ್ ನಂಬರ್ ಗಳನ್ನು ಕೂಡ ತಿಳಿಸಿರುತ್ತೇನೆ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Drown in Lake: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ನೀರುಪಾಲಾಗಿದ್ದಾರೆ

VISTARANEWS.COM


on

Drowned in Lake
Koo

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading

ಕರ್ನಾಟಕ

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ಮನ ಕಲಕುವ ಘಟನೆ ನಡೆದಿದೆ. ತಾಯಿ ಶವದ ಜತೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾಳೆ.

VISTARANEWS.COM


on

Kundapur News
Koo

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading

ಮಳೆ

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka Rain : ಒಂದೇ ಮಳೆಗೆ ಬೆಂಗಳೂರಿನ ಹಲವು ಏರಿಯಾಗಳು ಸಣ್ಣ ದ್ವೀಪದಂತಾಗಿದೆ. ಚಿಕ್ಕಮಗಳೂರಿನ ಕಳಸದಲ್ಲೂ ಮಳೆಯು ಅಬ್ಬರಿಸುತ್ತಿದೆ. ಹಲವೆಡೆ ಮಳೆಯಿಂದ ಅವಘಡ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗಂಟೆ ಕಾಲ ಸುರಿದ ಮಳೆಗೆ (Karnataka Rain) ರಸ್ತೆಗಳೆಲ್ಲವೂ ಹೊಳೆಯಂತಾಗಿದೆ. ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.

karnataka rain

ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್‌ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆಗೆ ಕಳಸ ದೇವಸ್ಥಾನದ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನದ ಮೆಟ್ಟಿಲು ಮೇಲಿಂದ ನೀರು ಹರಿಯುತ್ತಿದೆ. ಇತ್ತ ಮೆಟ್ಟಿಲ ಮೇಲೆ ನಿಂತು ಮಳೆ ನೀರಲ್ಲಿ ಮಕ್ಕಳು ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ.

karnataka rain

ಕೊಪ್ಪಳದಲ್ಲೂ ಮುಂಗಾರು ಪೂರ್ವ ಮಳೆ

ಕೊಪ್ಪಳದಲ್ಲಿ ಭಾನುವಾರ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೂರು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ. ನಿನ್ನೆ ಶನಿವಾರ ಸಂಜೆ ಸುರಿದಿದ್ದ ಮಳೆಯು ಭಾನುವಾರ ಬೆಳಗಿನವರೆಗೆ ಬಿಡುವು ಕೊಟ್ಟಿತ್ತು. ಮಧ್ಯಾಹ್ನದ ನಂತರ ಧೋ ಎಂದು ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain : ಭಾನುವಾರದ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಮನೆಯಲ್ಲೇ ಕೂರುವಂತೆ ಮಾಡಿದೆ. ಬೆಂಗಳೂರು, ಆನೇಕಲ್‌ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ವಿಜಯನಗರದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಮೃತಪಟ್ಟಿವೆ. ದಾವಣಗೆರೆಯಲ್ಲಿ ಮಳೆಗೆ ಬೆಳೆಯು ಕೊಚ್ಚಿ ಹೋಗಿದೆ.

VISTARANEWS.COM


on

By

Karnataka rain
Koo

ವಿಜಯನಗರ/ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಹಲವೆಡೆ ಗುಡುಗು ಸಹಿತ ಮಳೆ (Karnataka Rain) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಮೃತಪಟ್ಟಿವೆ. ಕೋರಿ ಮಲಿಯಪ್ಪ ಎಂಬ ರೈತರಿಗೆ ಸೇರಿದ ಎತ್ತುಗಳನ್ನು ಹೊಲದಲ್ಲಿ ಮರದಡಿ ಕಟ್ಟಿ ಹಾಕಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಂದಾಜು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಎತ್ತುಗಳು ಸಾವನ್ನಪ್ಪಿದ್ದರಿಂದ ರೈತ ಕೋರಿ ಮಲಿಯಪ್ಪ ಕಂಗಲಾಗಿದ್ದಾರೆ.

ಬೆಂಗಳೂರು, ಆನೇಕಲ್‌ನಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದೆ. ಸಂಜೆಗೆ ಆವರಿಸುತ್ತಿದ್ದ ಮಳೆ ಭಾನುವಾರ ಬೆಳಗಿನಿಂದಲೇ ಅಬ್ಬರಿಸುತ್ತಿದೆ. ಎಂಎಸ್ ಬಿಲ್ಡಿಂಗ್ , ವಿಧಾನಸೌಧ , ಶಿವಾನಂದ ಸರ್ಕಲ್, ಶಿವಾಜಿನಗರ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಧ್ಯಾಹ್ನ ಶುರುವಾದ ಮಳೆಯು ಸುಮಾರು 1 ಗಂಟೆಗೂ ಹೆಚ್ಚು ಸಮಯ ಆವರಿಸಿತ್ತು. ಆಗಾಗ ಬರುತ್ತಿದ್ದ ಗುಡುಗು ಜನರನ್ನು ಬೆಚ್ಚಿ ಬೀಳಿಸುತ್ತಿತ್ತು. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆ, ಲಾಲ್ ಬಾಗ್ ರಸ್ತೆ, ರಾಜಾಜಿನಗರ, ರಾಜಕುಮಾರ್ ರಸ್ತೆಯಲ್ಲಿಯೂ ಮಳೆಯಾಗಿದೆ. ಯಲಹಂಕ, ನ್ಯೂ ಟೌನ್, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಪುಟ್ಟೇನಹಳ್ಳಿ, ಏರ್‌ಪೋರ್ಟ್‌ ರೋಡ್‌ನಲ್ಲಿ ಮಳೆಯಾಗಿದೆ.

ಇತ್ತ ಆನೇಕಲ್ ಭಾಗದಲ್ಲೂ ಧಾರಾಕಾರ ಮಳೆಯಾಗಿತ್ತು. ಭಾನುವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಮಳೆಯು ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಅಬ್ಬರಿಸಿತ್ತು. ಕಳೆದೊಂದು ವಾರದಿಂದ ನಿರಂತರ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಧಾರವಾಡದಲ್ಲೂ ಮಳೆ

ಪೇಡಾನಗರಿ ಧಾರವಾಡದಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಶುರುವಾದ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವಿಜಯನಗರದಲ್ಲಿ ಮರಕ್ಕೆ ಬಡಿದ ಸಿಡಿಲು

ವಿಜಯನಗರದಲ್ಲಿ ಗುಡುಗು ಸಿಡಿಲು ಸಮೇತ ಮಳೆಯಾಗುತ್ತಿದ್ದು, ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಹೊಸಪೇಟೆ ತಾಲೂಕಿನ ಕೆರೆ ತಾಂಡಾ ಗ್ರಾಮದಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ, ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇತ್ತ ಹೊಸಪೇಟೆ ಹೃದಯ ಭಾಗದಲ್ಲಿ ರಸ್ತೆ ಮೇಲೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ನೂರು ಹಾಸಿಗೆ ಆಸ್ಪತ್ರೆ, VNC ಕಾಲೇಜಿಗೆ ಹೋಗುವ ರಸ್ತೆ ಮೇಲೆ ನೀರು ನಿಂತಿತ್ತು. ಕೆಲ ಸಮಯ ವಾಹನಗಳ ಸಂಚಾರ ಅಡಚಣೆ ಉಂಟಾಯಿತು

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ದಾವಣಗೆರೆಯಲ್ಲಿ ನೆಲ ಕಚ್ಚಿದ ಬೆಳೆ

ಶನಿವಾರ ಸುರಿದ ಮಳೆಯಿಂದ ಭತ್ತದ ಬೆಳೆ‌ಯು ನೆಲ ಕಚ್ಚಿದೆ. ದಾವಣಗೆರೆಯ ದೊಡ್ಡಬಾತಿ ಗ್ರಾಮದ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ಉಮೇಶ್ ಎಂಬ ಯುವ ರೈತ ಬೆಳೆದಿದ್ದ ಎರಡು ಎಕರೆ ಭತ್ತ ಸಂಪೂರ್ಣ ನಾಶವಾಗಿತ್ತು. ಬರಗಾಲದ ಸಂದರ್ಭದಲ್ಲಿ ಬೋರ್ ವೆಲ್ ನೀರಿನಲ್ಲಿ ಭತ್ತ ಬೆಳೆ ಬೆಳೆದಿದ್ದರು. ಎಕರೆಗೆ 25 ರಿಂದ 30 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬೆಳೆಯು ರಾತ್ರಿ ಸುರಿದ ಮಳೆಗೆ ಸಂಪೂರ್ಣ ನಾಶವಾಗಿದೆ. ಮಳೆ ಬಾರದೇ ಕಷ್ಟ ಅನುಭವಿಸಿದ ರೈತರಿಗೆ ಈಗ ಮಳೆ ಬಂದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pralhad Joshi
ಕರ್ನಾಟಕ4 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ4 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ4 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ5 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ5 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ5 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ5 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ6 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ6 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ7 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ13 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ14 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌