Site icon Vistara News

Chaluvadi Narayanaswamy : ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ

Chaluvadi Narayanaswamy

ಬೆಂಗಳೂರು: ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ (Chaluvadi Narayanaswamy) ಅವನ್ನು ಪ್ರತಿಪಕ್ಷಗಳ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ರಾಘವೇಂದ್ರ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.

ಬಿವೈ ವಿಜಯೇಂದ್ರ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಠರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹ 187 ಕೋಟಿ ಗುಳುಂ , ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣೀ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

ಇದನ್ನೂ ಓದಿ: NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಮಾನ್ಯ ಛಲವಾದಿ ನಾರಾಯಣ ಸ್ವಾಮಿಯವರನ್ನು ಆತ್ಮೀಯವಾಗಿ ಅಭಿನಂದಿಸಿ ಅವರನ್ನು ಆಯ್ಕೆಮಾಡಿದ ಪಕ್ಷದ ವರಿಷ್ಠ ಮಂಡಳಿಗೆ ಕೃತಜ್ಞತೆ ಸಲ್ಲಿಸುವೆ ಎಂದು ವಿಜಯೇಂದ್ರ ಅವರು ಬರೆದುಕೊಂಡಿದ್ದಾರೆ.

Exit mobile version