Site icon Vistara News

G Basavaraj Mandimutt : ಬಿಜೆಪಿ ತೊರೆದು ಜೆಡಿಎಸ್‌ ಸೇರಿದ ಚಳ್ಳಕೆರೆಯ ಮಾಜಿ ಶಾಸಕ ಬಸವರಾಜ ಮಂಡಿಮಠ

G Basavaraj Mandimutt

#image_title

ಚಿತ್ರದುರ್ಗ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಚಳ್ಳಕೆರೆಯ ಮಾಜಿ ಶಾಸಕ ಬಸವರಾಜ ಮಂಡಿಮಠ ಅವರು ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಜಿಲ್ಲೆಯ ಚಳ್ಳಕೆರೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ್, ಜೆಡಿಎಸ್ ಅಭ್ಯರ್ಥಿ ರವೀಶ್ ಸಮ್ಮುಖದಲ್ಲಿ ಮಾಜಿ ಶಾಸಕ ಬಸವರಾಜ ಮಂಡಿಮಠ (G Basavaraj Mandimutt) ಅವರು ಜೆಡಿಎಸ್‌ ಸೇರ್ಪಡೆಯಾದರು.

1999ರ ಚಳ್ಳಕೆರೆ ಕ್ಷೇತ್ರದಿಂದ ಬಸವರಾಜ ಮಂಡಿಮಠ ಅವರು ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 2004ರಲ್ಲಿ ಕಾಂಗ್ರೆಸ್​ನ ಡಿ. ಸುಧಾಕರ್ ಅವರ ವಿರುದ್ಧ ಸೋಲು ಕಂಡಿದ್ದರು. ಬಳಿಕ 2008ರಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಅವರು ನಟ ಶಶಿಕುಮಾರ್‌ ಅವರ ವಿರುದ್ಧ ಗೆಲುವು ಪಡೆದಿದ್ದರು. ನಂತರ ಕ್ಷೇತ್ರದಲ್ಲಿ 2013 ಮತ್ತು 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ. ರಘುಮೂರ್ತಿ ಅವರು ಗೆಲುವು ಸಾಧಿಸಿದ್ದರು.

ಇದನ್ನೂ ಓದಿ | ಭವಾನಿ ರೇವಣ್ಣ ಬಿಜೆಪಿಗೆ ಬಂದ್ರೆ ಸ್ವಾಗತ ಎಂದ ಕಾರಜೋಳ, ಅವರಿಗೆ ಸೂಕ್ತ ಸ್ಥಾನಮಾನ ಕೊಡ್ತೀವಿ ಎಂದ ಕುಮಾರಸ್ವಾಮಿ

Exit mobile version