Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು! - Vistara News

ಚಾಮರಾಜನಗರ

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

Barachukki Falls : ಕದ್ದುಮುಚ್ಚಿ ಕಳ್ಳ ಮಾರ್ಗದಿಂದ ಬಂದು ಭರಚುಕ್ಕಿ ಜಲಪಾತದಲ್ಲಿ ಹುಚ್ಚಾಟ ಮೆರೆಯುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ಬಸ್ಕಿ ಶಿಕ್ಷೆ ವಿಧಿಸಿದ್ದಾರೆ.

VISTARANEWS.COM


on

Bharachukki falls
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಾಮರಾಜನಗರ: ಭಾರಿ ಮಳೆಗೆ (Karnataka Rain) ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ (Bharachukki Falls) ಭೋರ್ಗರೆಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಭರಚುಕ್ಕಿ ಜಲಪಾತ ಭೋರ್ಗರೆಯುತ್ತಿದೆ.

ಯುವಕರ ಗುಂಪೊಂದು ನಿರ್ಬಂಧ ಇದ್ದರೂ ಪೊಲೀಸರ ಕಣ್ಣು ತಪ್ಪಿಸಿ ಜಲಪಾತ ತುದಿಗೆ ಹೋಗಿದೆ. ತುದಿಯಲ್ಲಿ ನಿಂತು ಫೋಟೊ, ಸೆಲ್ಫಿ ತೆಗೆದುಕೊಳ್ಳುವ ದುಸ್ಸಾಹಸದಲ್ಲಿ ಈ ಗುಂಪು ತೊಡಗಿತ್ತು. ಇವರ ಹುಚ್ಚಾಟ ಮಿತಿ ಮೀರಿದಾಗ ಅದು ಪೊಲೀಸರ ಗಮನಕ್ಕೆ ಬಂತು.

Bharachukki falls

ಅದು ಕಳ್ಳ ಮಾರ್ಗದ ಮೂಲಕ ಜಲಪಾತದ ಮೇಲೆ ತೆರಳಿ ಹುಚ್ಚಾಟ ಮೆರೆಯುತ್ತಿದ್ದ ಯುವಕರು ಪೊಲೀಸರ ಕೈಗೆ ಲಾಕ್‌ ಆಗಿದ್ದಾರೆ. ಹೀಗೆ ಸಿಕ್ಕಿ ಬಿದ್ದ ಯುವಕರಿಗೆ ಪೊಲೀಸರು ಬಸ್ಕಿ ಹೊಡೆಸಿ ಶಿಕ್ಷೆ ಕೊಟ್ಟಿದ್ದಾರೆ. ಬಸ್ಕಿ ಹೊಡಿಸಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ. ಮತ್ತೊಮ್ಮೆ ಕದ್ದು ಮುಚ್ಚಿ ಇಲ್ಲಿಗೆ ಬರದಂತೆ ಬುದ್ಧಿವಾದ ಹೇಳಿ ಕಳಿಸಿದರು. ಯುವಕರು ಬಸ್ಕಿ ಹೊಡೆಯುವ ವಿಡಿಯೊ ವೈರಲ್ ಆಗಿದೆ.

ಹೊಗೇನಲ್‌ ಜಲಪಾತವೇ ಕಣ್ಮರೆ

ಕಾವೇರಿ ನದಿಯ ಆರ್ಭಟಕ್ಕೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಹೊಗೇನಲ್‌ ಜಲಪಾತವೇ ಕಣ್ಮರೆಯಾಗಿದೆ. 72 ಅಡಿ ಎತ್ತರದಿಂದ ಆರ್ಭಟಿಸುತ್ತಾ ಧುಮ್ಮಿಕ್ಕುತ್ತಿದ್ದ ಜಲಪಾತದಲ್ಲಿ ಕಾವೇರಿ ತುಂಬಿ ಹರಿಯುತ್ತಿದ್ದಾಳೆ. ಕೆ‌ಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಹೊರ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಹೊಗೇನಕಲ್ ಜಲಪಾತಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕಲ್ಲು ಬಂಡೆಗಳ ನಡುವೆ ಧುಮ್ಮಿಕ್ಕುತ್ತಾ, ನಯನ ಮನೋಹರ ದೃಶ್ಯಕ್ಕೆ ಸಾಕ್ಷಿಯಾಗಿದ್ದ ಹೊಗೇನಕಲ್ ಜಲಪಾತ ಇದೀಗ ಕಾಣದಂತಾಗಿದೆ. ಸದ್ಯ ನೀರು ಹೆಚ್ಚಿರುವ ಕಾರಣ ದೋಣಿ ವಿಹಾರಕ್ಕೂ ಬ್ರೇಕ್ ಹಾಕಲಾಗಿದೆ.

ಇದನ್ನೂ ಓದಿ: Karnataka Weather : 8 ಜಿಲ್ಲೆಗಳಿಗೆ ವ್ಯಾಪಕ ಮಳೆ ಎಚ್ಚರಿಕೆ, ಬಿರುಗಾಳಿ ಸಾಥ್‌

ಗುಡ್ಡ ಕುಸಿದು ಕತ್ತರಿಸಿ ಹೋದ ರಸ್ತೆ

ಹಾಸನ: ಹಾಸನ (Hassan news) ಜಿಲ್ಲೆಯಲ್ಲಿ ಮಳೆ ಹಾವಳಿ (karanataka Rain News) ಮುಂದುವರಿದಿದೆ. ಸಕಲೇಶಪುರ (Sakaleshpur) ಬಳಿ ಗುಡ್ಡ ಕುಸಿತದಿಂದ (Landslide) ಸುಮಾರು 200 ಅಡಿಗಳಷ್ಟು ದೂರದ ರಸ್ತೆಯೇ ಕತ್ತರಿಸಿಹೋಗಿ, ಮಂಗಮಾಯವಾಗಿದೆ. ಭಾರಿ ಭೂಕುಸಿತ ಉಂಟಾಗಿರುವ ಕಾರಣ ರಸ್ತೆ ಸರ್ವನಾಶವಾಗಿದ್ದು, ಇದರಿಂದ ಸಂಪರ್ಕಿತರಾಗಿದ್ದ ಸುಮಾರು 10 ಗ್ರಾಮಗಳ ಜನತೆ ಸಂಪರ್ಕ (communication cut) ಕಳೆದುಕೊಂಡಿದ್ದಾರೆ. ಈ ರಸ್ತೆಯ ಸಮೀಪದಲ್ಲಿ ಎತ್ತಿನಹೊಳೆ (Ettinahole project) ಪೈಪ್‌ಲೈನ್‌ ಹಾದುಹೋಗಿದ್ದು, ಅವೈಜ್ಞಾನಿಕವಾಗಿರುವ ಇದರ ಕಾಮಗಾರಿಯೇ ಈ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

hassan landslide

ಹಾಸನದಲ್ಲಿ ಮುಂದುವರೆದ ಮಳೆಯ ಅಬ್ಬರದ ಪರಿಣಾಮ ಉಂಟಾಗುತ್ತಿರುವ ಭೂಕುಸಿತಗಳ ಸಾಲಿಗೆ ಸಕಲೇಶಪುರದ ಬಳಿಯ ಈ ಬೃಹತ್ ಪ್ರಮಾಣದ ಭೂ ಕುಸಿತ ಸೇರಿದೆ. ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ಘಟನೆ ನಡೆದಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತವಾಗಿದೆ. 200 ಮೀಟರ್‌ಗೂ ಹೆಚ್ಚು ದೂರ ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕ ಕಟ್ ಆಗಿದೆ. ಈ ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಆರೋಪಿಸಲಾಗಿದೆ.

hassan landslide

ಮುಂದುವರಿದ ಹಳಿ ತೆರವು

ಶಿರಾಡಿ ಘಾಡಿಯಲ್ಲಿ ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡವನ್ನು ತೆರವು ಮಾಡುವ ಕಾರ್ಯಾಚರಣೆ ನಾಲ್ಕನೇ ದಿನವೂ ಮುಂದುವರಿದಿದೆ. ಭಾರಿ ಮಳೆಯ ನಡುವೆಯೂ ಕಾರ್ಯಾಚರಣೆ ನಡೆಯುತ್ತಿದ್ದು, 420ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಹದಿನೈದು ದಿನಗಳ ಕಾಲ ಸಕಲೇಶಪುರ-ಸುಬ್ರಹ್ಮಣ್ಯ ನಡುವೆ ರೈಲು ಮಾರ್ಗ ಬಂದ್ ಆಗಿದೆ. ಕಾರ್ಯಾಚರಣೆಗೆ ಸತತ ಮಳೆ ಅಡ್ಡಿಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿತ್ತು. ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಕಾರ್ಯಾಚರಣೆ ಮೇಲ್ವಿಚಾರಣೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್ ಅನ್ನು ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ ಆರೋಪ

VISTARANEWS.COM


on

ಚಾಮರಾಜನಗರ: ಕೇಂದ್ರದ ಬಿಜೆಪಿ ಸರ್ಕಾರವು ಕೇವಲ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೂರಿದ್ದಾರೆ. ಚಾಮರಾಜನಗರದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಮನೆ ಮೇಲೆ ಇಡಿ (ED) ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, “ಬಿಜೆಪಿಯವರ ಮೇಲೆ ಇಂತಹ ದಾಳಿಗಳು ಏಕಾಗುತ್ತಿಲ್ಲ?” ಎಂದು ಪ್ರಶ್ನಿಸಿದರು.

ಕ್ಷೇತ್ರ ಮರು ವಿಂಗಡಣೆಗೆ ವಿರೋಧ, ಮೀಸಲಾತಿಗಲ್ಲ:
ಮಹಿಳಾ ಮೀಸಲಾತಿ ವಿಚಾರವಾಗಿ ಮಾತನಾಡಿದ ಸಿಎಂ, “ಬಿಜೆಪಿಯೇ ಮಹಿಳಾ ಮೀಸಲಾತಿಯ ನಿಜವಾದ ವಿರೋಧಿ. ರಾಜೀವ್ ಗಾಂಧಿಯವರ ಕಾಲದಲ್ಲೇ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ತರಲಾಗಿತ್ತು, ಆಗ ಅದನ್ನು ರಾಜ್ಯಸಭೆಯಲ್ಲಿ ತಡೆದಿದ್ದೇ ಎನ್.ಡಿ.ಎ. ಈಗ ರಾಜಕೀಯ ಲಾಭಕ್ಕಾಗಿ ಕ್ಷೇತ್ರ ಮರು ವಿಂಗಡಣೆಯ ಷರತ್ತನ್ನು ಸೇರಿಸಿ ಮಸೂದೆ ತರುತ್ತಿದ್ದಾರೆ. ನಮ್ಮ ವಿರೋಧವಿರುವುದು ಕ್ಷೇತ್ರ ಮರು ವಿಂಗಡಣೆಗೆ ಹೊರತು ಮಹಿಳಾ ಮೀಸಲಾತಿಗಲ್ಲ,” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ತೃತೀಯ ಭಾಷೆ ಹಿಂದಿಗೆ ಅಂಕ ನೀಡುವ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಲಿದೆ ಎಂದೂ ಅವರು ತಿಳಿಸಿದರು.

ಅಲ್ಪಸಂಖ್ಯಾತರ ಕಡೆಗಣನೆ ಇಲ್ಲ:
ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುವಾಗ ಅಲ್ಪಸಂಖ್ಯಾತ ನಾಯಕರು ಉಪಸ್ಥಿತರಿದ್ದರು ಮತ್ತು ಅವರ ಸಮ್ಮುಖದಲ್ಲೇ ನಿರ್ಧಾರಗಳಾಗಿವೆ ಎಂದು ತಿಳಿಸಿದರು. ಇನ್ನು ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆಯನ್ನು ತಳ್ಳಿಹಾಕಿದ ಅವರು, “ಇಲ್ಲಿಗೆ ಬರುವುದರಿಂದ ನನ್ನ ಕುರ್ಚಿ ಗಟ್ಟಿಯಾಗುತ್ತದೆ,” ಎಂದು ಮಾರ್ಮಿಕವಾಗಿ ನುಡಿದರು. ಕೊನೆಯಲ್ಲಿ, ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Latest11 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest13 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest17 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌