Election Ambassabor : ಮತದಾನ ರಾಯಭಾರಿಗಳಾಗಿ ಬಿಗ್‌ ಬಾಸ್‌ ಕಾರ್ತಿಕ್‌, ನಟ ನಾಗಭೂಷಣ್‌ ಆಯ್ಕೆ - Vistara News

ಚಾಮರಾಜನಗರ

Election Ambassabor : ಮತದಾನ ರಾಯಭಾರಿಗಳಾಗಿ ಬಿಗ್‌ ಬಾಸ್‌ ಕಾರ್ತಿಕ್‌, ನಟ ನಾಗಭೂಷಣ್‌ ಆಯ್ಕೆ

Election Ambassabor : ಚಾಮರಾಜನ ನಗರ ಜಿಲ್ಲಾಡಳಿತವು ಮೂವರು ಯುವ ಕಣ್ಮಣಿಗಳನ್ನು ಚುನಾವಣಾ ರಾಯಭಾರಿಗಳಾಗಿ ಆಯ್ಕೆ ಮಾಡಿದೆ. ಯಾರು ಆ ಮೂವರು?

VISTARANEWS.COM


on

LOK SABHA ELECTION 2024 Karthik Mahesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಒಂದು ಕಡೆ ಲೋಕಸಭಾ ಚುನಾವಣೆಯ (Lok Sabha Election 2024) ಸ್ಪರ್ಧೆಗೆ ರಾಜಕೀಯ ಪಕ್ಷಗಳು ಅಣಿಯಾಗುತ್ತಿದ್ದರೆ, ಇನ್ನೊಂದು ಕಡೆ ಚುನಾವಣಾ ಪ್ರಕ್ರಿಯೆಯನ್ನು (Election Process) ಅತ್ಯಂತ ಸಮರ್ಪಕವಾಗಿ ಮತ್ತು ಜನ ಮೆಚ್ಚುವಂತೆ, ಜನರ ಗಮನ ಸೆಳೆಯುವಂತೆ ನಡೆಸಲು ಜಿಲ್ಲಾಡಳಿತಗಳು ಕೂಡಾ ಹಲವು ಪ್ರಯತ್ನಗಳು ನಡೆಸುತ್ತಿವೆ. ಇದರ ಭಾಗವಾಗಿ ಚಾಮರಾಜ ನಗರ ಜಿಲ್ಲಾಡಳಿತ ಮೂವರು ಪ್ರಮುಖ ಯುವ ಕಣ್ಮಣಿಗಳನ್ನು ಮತದಾನದ ರಾಯಭಾರಿಗಳನ್ನಾಗಿ (Election Ambassabor) ನೇಮಕ ಮಾಡಿದೆ.

“ದೇಶದ ಗರ್ವ” ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ಜಿಲ್ಲಾ ಸ್ವೀಪ್ ಸಮಿತಿಯನ್ನು ರಚಿಸಲಾಗಿದ್ದು, ಮತದಾನದ ಜಾಗೃತಿ ಮೂಡಿಸಲು ಈ ಬಾರಿ ಮೂವರು ರಾಯಭಾರಿಗಳನ್ನು ನೇ‌ಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾನ ಜಾಗೃತಿ ರಾಯಭಾರಿಯಾಗಿ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್‌ (Bigg Boss Winner Karthik Mahesh), ಟಗರುಪಲ್ಯ ಖ್ಯಾತಿಯ ನಟ ನಾಗಭೂಷಣ್ (Actor Nagabhushan) ಹಾಗೂ ಲಿಂಗತ್ವ ಅಲ್ಪಸಂಖ್ಯಾತೆ ಹೋರಾಟಗಾರ್ತಿ ದೀಪಾ ಬುದ್ದೆ ಅವರನ್ನು ಆಯ್ಕೆ ಮಾಡಲಾಗಿದೆ.

ಚಾಮರಾಜನಗರ ಮೂಲದವರೇ ಆದ ನಟ ಕಾರ್ತಿಕ್ ಹಾಗೂ ನಾಗಭೂಷಣ್ ಅವರು ಜನಪ್ರಿಯರಾಗಿದ್ದಾರೆ. ಯುವ ಜನರ ಕಣ್ಮಣಿಗಳಾಗಿದ್ದಾರೆ. ಇನ್ನು ಇನ್ನು ಲಿಂಗತ್ವ ಅಲ್ಪಸಂಖ್ಯಾತೆಯರು ಮತದಾನದಿಂದ ದೂರ ಉಳಿಯದಂತೆ ಟ್ರಾನ್ಸ್ ಜೆಂಡರ್ಸ್ ಓಟರ್ಸ್ ರಾಯಭಾರಿಯಾಗಿ ದೀಪಾ ಬುದ್ಧೆ ಆಯ್ಕೆ ಮಾಡಲಾಗಿದೆ ಎಂದು ಶಿಲ್ಪಾ ನಾಗ್‌ ತಿಳಿಸಿದ್ದಾರೆ. ದೀಪಾ ಬುದ್ಧೆ ಲಿಂಗತ್ವ ಅಲ್ಪಸಂಖ್ಯಾತೆ ಹೋರಾಟಗಾರ್ತಿ ಮತ್ತು ಈ ವಿಷಯಲ್ಲಿ ಪಿಎಚ್‌ಡಿ ಅಧ್ಯಯನ ನಡೆಸಿದ್ದಾರೆ.

8 ವಿಧಾನಸಭಾ ಕ್ಷೇತ್ರ, 17 ಲಕ್ಷ ಮತದಾರರು

ಚಾಮರಾಜನಗರ ಲೋಕಸಭಾ ಕ್ಷೇತ್ರ (ಪ.ಜಾ) ವ್ಯಾಪ್ತಿಗೆ ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ಹೆಚ್.ಡಿ.ಕೋಟೆ, ನಂಜನಗೂಡು, ವರುಣ, ಟಿ.ನರಸೀಪುರ ವಿಧಾನಸಭಾ ಕ್ಷೇತ್ರಗಳು ಬರುತ್ತವೆ.

ಕ್ಷೇತ್ರದ ಒಟ್ಟು ಮತದಾರರು: 17,57,616
ಪುರುಷ ಮತದಾರರು: 8,69,389
ಮಹಿಳಾ ಮತದಾರರು: 8,88,113
ಲಿಂಗತ್ವ ಅಲ್ಪಸಂಖ್ಯಾತರು: 114

ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಸಾವಿರ ಮತಗಟ್ಟೆ ಸ್ಥಾಪನೆಯಾಗಲಿದೆ. 1,177 ಬ್ಯಾಲೆಟ್ ಯೂನಿಟ್, 1,177 ಕಂಟ್ರೋಲ್ ಯೂನಿಟ್ ಹಾಗೂ 1276 ವಿ.ವಿ. ಪ್ಯಾಟ್‌ಗಳನ್ನು ಬಳಸಲಾಗುತ್ತಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಫ್ಲೈಯಿಂಗ್ ಸ್ಕ್ವಾಡ್ (ಎಫ್.ಎಸ್.ಟಿ) 12 ತಂಡಗಳು ಮೂರು ಪಾಳಿಗಳಲ್ಲಿ, ಸ್ಟ್ಯಾಟಿಕ್ ಸರ್ವೈಲೆನ್ಸ್ (ಎಸ್.ಎಸ್.ಟಿ) 13 ತಂಡಗಳು ಮೂರು ಪಾಳಿಗಳಲ್ಲಿ, 97 ಸೆಕ್ಟರ್ ಅಧಿಕಾರಿಗಳು ನಿಯೋಜನೆಯಾಗಿದ್ದಾರೆ. ವೀಡಿಯೋ ಸರ್ವೈಲೆನ್ಸ್ 10 ತಂಡಗಳು, ವಿಡಿಯೋ ವೀವಿಂಗ್ 4 ತಂಡಗಳ ರಚನೆ ಆಗಲಿದೆ. 8 ಅಂತರರಾಜ್ಯ ಚೆಕ್‍ಪೋಸ್ಟ್ ಮತ್ತು 5 ಅಂತರ್ ಜಿಲ್ಲಾ ಚೆಕ್‍ಪೋಸ್ಟ್‌ಗಳನ್ನು ತೆರೆಯಲಾಗಿದೆ.

ಮತದಾನ ಪ್ರಕ್ರಿಯೆ ಯಾವಾಗ ಆರಂಭ?

ಚಾಮರಾಜ ನಗರ ಕ್ಷೇತ್ರದ ಮತದಾನ ಏಪ್ರಿಲ್‌ 26ರಂದು ನಡೆಯಲಿದೆ. ಏಪ್ರಿಲ್‌ ನಾಲ್ಕರವರೆಗೆ ನಾಮಪತ್ರ ಸಲ್ಲಿಸಬಹುದು. ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ಏಪ್ರಿಲ್ 26ರಂದು ಮತದಾನ, ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಒಳನಾಡಿನಲ್ಲಿ ವಿಪರೀತ ಬಿಸಿಲು; ಕರಾವಳಿಯಲ್ಲಿ ಬಿಸಿಗಾಳಿ, ಮಲೆನಾಡಿನಲ್ಲಿ ಗುಡುಗು ಮಳೆ

Karnataka Weather Forecast : ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆಯಿಂದ ಜನರು ತತ್ತರಿಸಿ ಹೋಗಲಿದ್ದಾರೆ. ಕರಾವಳಿಯಲ್ಲಿ ಬಿಸಿಗಾಳಿಯು (Hot weather) ಬೀಸಲಿದ್ದು, ದಕ್ಷಿಣ ಒಳನಾಡಲ್ಲಿ ಶುಷ್ಕ ವಾತಾವರಣ (Dry Weather) ಇರಲಿದೆ. ಮಲೆನಾಡಿನ ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ರಾಜ್ಯಾದ್ಯಂತ ಹಗುರದಿಂದ ಕೂಡಿದ ಮಳೆಯಾಗುವ (Rain news) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದರೆ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಭಾಗಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ತಿಂಗಳಾಂತ್ಯದವರೆಗೂ ತಾಪಮಾನ ಹೆಚ್ಚಳ

ಗರಿಷ್ಠ ತಾಪಮಾನವು ಏಪ್ರಿಲ್‌ 30ರವರೆಗೆ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನ 12ರಿಂದ 3ಗಂಟೆವರೆಗೆ ಹೊರಾಂಗಣ ಚಟುವಟಿಕೆಗಳಿಂದ ದೂರ ಇರುವಂತೆ ತಜ್ಞರು ಸೂಚಿಸಿದ್ದಾರೆ. ಇನ್ನೂ ಕರಾವಳಿ ಕರ್ನಾಟಕದಲ್ಲಿ ವಾತಾವರಣವು ಬಿಸಿಯಾಗಿರಲಿದೆ. ಕೆಲವೊಮ್ಮೆ ಬಿಸಿ ಗಾಳಿಯೂ ಬೀಸಲಿದೆ.

ಯೆಲ್ಲೋ ಅಲರ್ಟ್‌

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಏರಿಕೆ ಆಗಲಿದೆ. ಹೀಗಾಗಿ ಈ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

ಈ ಬಾರಿಯ ಸಮ್ಮರ್‌ ಸೀಸನ್‌ನಲ್ಲಿ ಸೆಕೆಯಾಗದ 3 ಬಗೆಯ ಸಮ್ಮರ್‌ ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್‌ಗಳು (Summer Hairstyles) ಟ್ರೆಂಡಿಯಾಗಿವೆ. ತಕ್ಷಣಕ್ಕೆ ನೋಡಲು ಹಳೆಯ ಹೇರ್‌ಸ್ಟೈಲ್‌ ಎಂದೆನಿಸಿದರೂ ಅವುಗಳ ಜೊತೆಗೆ ನಾನಾ ಬಗೆಯ ವಿನ್ಯಾಸಗಳು ಸೇರಿಕೊಂಡಿವೆ.

Summer Hairstyles

ಸೈಡಿಗೆ ಸರಿದ ಫ್ರೀ ಹೇರ್‌ಸ್ಟೈಲ್‌ಗಳು

“ಈ ಸಮ್ಮರ್‌ನಲ್ಲಿ ಫ್ರೀ ಹೇರ್‌ಸ್ಟೈಲ್‌ಗಳು ಸೈಡಿಗೆ ಸರಿದಿವೆ. ಕೇವಲ ಹೇರ್‌ ಕಂಡೀಷನ್‌ ಕೋಣೆಗಳಲ್ಲಿ ಹಾಗೂ ಇನ್‌ಡೋರ್‌ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಈ ಹೇರ್‌ ಸ್ಟೈಲ್‌ಗಳಲ್ಲಿ ಹೆಣ್ಣುಮಕ್ಕಳು ಕಾಣಸಿಗುತ್ತಿದ್ದಾರೆ. ಇನ್ನು ಹೊರಾಂಗಣದಲ್ಲಿ ಸೆಕೆಯಾಗದ ಹಾಗೂ ಆರಾಮ ಎಂದೆನಿಸುವ ಕಂಫರ್ಟಬಲ್‌ ಕೂದಲ ವಿನ್ಯಾಸಗಳು ಚಾಲ್ತಿಯಲ್ಲಿವೆ. ಇದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ! ಟೀನೇಜ್‌ ಹಾಗೂ ಯುವತಿಯರಲ್ಲೂ ಕಾಮನ್‌ ಆಗಿವೆ” ಎನ್ನುತ್ತಾರೆ ಹೇರ್‌ಸ್ಟೈಲಿಸ್ಟ್‌ ನಮಿತಾ. ಅವರ ಪ್ರಕಾರ, ಶಾರ್ಟ್‌ ಹೇರ್‌ಸ್ಟೈಲ್‌ಗಳು ಈ ಸೀಸನ್‌ನಲ್ಲಿ ತೀರಾ ಕಾಮನ್‌ ಆಗಿವೆ ಎನ್ನುತ್ತಾರೆ.

ಹೈ ಬನ್‌ ಹೇರ್‌ಸ್ಟೈಲ್‌

ನೆತ್ತಿಯ ಮೇಲೆ ಹಾಕುವಂತಹ ಹೈ ಬನ್‌ ಹೇರ್‌ಸ್ಟೈಲ್‌ಗಳು ಇದೀಗ ಬಿಸಿಲಿನ ಝಳದಲ್ಲಿ ಹೈಲೈಟ್‌ ಆಗುತ್ತಿವೆ. ಕೆಳಗಿನಿಂದ ಮೇಲಿನವರೆಗೂ ಕೂದಲನ್ನು ಕಟ್ಟಿ ಹಾಕುವಂತಹ ವಿನ್ಯಾಸದಲ್ಲಿ ಹಾಗೂ ನೆತ್ತಿಯ ಮೇಲೆ ಸುತ್ತಿ ಅಥವಾ ಹರಡಿದಂತೆ ಕಾಣುವ ರೀತಿಯಲ್ಲಿ ಹಾಕುವ ಹೇರ್‌ಬನ್‌ಗಳು ಈ ಸೀಸನ್‌ನಲ್ಲಿ ಟ್ರೆಂಡಿಯಾಗಿವೆ. ಇವು ನೋಡಲು ಕೂಡ ಆಕರ್ಷಕವಾಗಿ ಕಾಣಿಸುತ್ತವೆ. ಜೊತೆಗೆ ಸೆಕೆಯಾಗುವುದಿಲ್ಲ!

Summer Hairstyles

ಪೋನಿಟೈಲ್‌ ವಿತ್‌ ಫ್ರಿಂಝ್‌ ಹೇರ್‌ಸ್ಟೈಲ್‌

ಮುಂಭಾಗದಲ್ಲಿ ಹುಡುಗಿಯರ ಹಣೆಯನ್ನು ಕವರ್‌ ಮಾಡುವ ಫ್ರಿಂಝ್‌ ಹೇರ್‌ಸ್ಟೈಲ್‌ ಹಿಂದೆ ಸಿಂಪಲ್‌ ಪೋನಿಟೈಲ್‌ ಕೂಡ ಈ ಸೀಸನ್‌ನಲ್ಲಿ ಮರಳಿದೆ. ನೋಡಲು ಸಿಂಪಲ್ಲಾಗಿ ಕಾಣಿಸುವ ಈ ಹೇರ್‌ಸ್ಟೈಲ್‌ ನೋಡಿದಾಗ ಖಾಲಿ ಎಂದೆನಿಸುವುದಿಲ್ಲ. ಬದಲಿಗೆ ಎರಡು ಹೇರ್‌ಸ್ಟೈಲ್‌ ಕಾಂಬಿನೇಷನ್‌ ಇದಾಗಿರುತ್ತದೆ.

ಹನ್‌ ಹೇರ್‌ಸ್ಟೈಲ್‌

ಅರ್ಧ ಫ್ರೀ ಹೇರ್‌ಸ್ಟೈಲ್‌ ಹಾಗೂ ಅರ್ಧ ಕಟ್ಟಿದ ಬನ್‌ ಹೇರ್‌ಸ್ಟೈಲ್‌ ಕಾಂಬೀನೇಷನ್‌ ಈ ಸೀಸನ್‌ನ ಹನ್‌ ಹೇರ್‌ಸ್ಟೈಲ್‌ನಲ್ಲಿ ಸೇರಿದೆ. ಇವೆರಡರೊಳಗೆ ಹಣೆ ಮುಂಭಾಗದ ಫಿಂಝ್‌ ಹೇರ್‌ಸ್ಟೈಲ್‌ ಮಿಕ್ಸ್‌ ಆಗಿದೆ. ಇವೆಲ್ಲದರ ಸಮಾಗಮ ಫ್ರಿಂಝ್‌ ಹನ್‌ ಹೇರ್‌ಸ್ಟೈಲ್‌. ಇದು ಈ ಸೀಸನ್‌ನಲ್ಲಿ ಇದು ಹುಡುಗಿಯರ ಫೇವರೇಟ್‌ ಲಿಸ್ಟ್‌ನಲ್ಲಿದೆ.

Summer Hairstyles

ಬೇಸಿಗೆ ಹೇರ್‌ಸ್ಟೈಲ್‌ ಫಾಲೋ ಮಾಡಲು ಹೀಗೆ ಮಾಡಿ

  • ಹೊರಗಡೆ ಹೋಗುವಾಗ ಮೇಲಿನ ಹೇರ್‌ಸ್ಟೈಲ್‌ಗಳನ್ನು ಮಾಡಿ.
  • ಮುಖದ ಆಕಾರಕ್ಕೆ ತಕ್ಕಂತೆ ಇವನ್ನು ಆಯ್ಕೆ ಮಾಡಿ.
  • ಫ್ರಿಂಝ್‌ ಮಾಡದಿದ್ದವರೂ ಸೈಡ್‌ಲಾಕ್ಸ್‌ ಕೂದಲ ವಿನ್ಯಾಸ ಮಾಡಬಹುದು.
  • ತೀರಾ ಟೈಟಾಗಿ ಕಟ್ಟಬೇಡಿ. ತಲೆ ನೋವಾಗಬಹುದು.
  • ಮೇಲಿನ ಹೇರ್‌ಸ್ಟೈಲ್ಸ್‌ ನಿಮಗೆ ಸ್ಲಿಮ್‌ ಲುಕ್‌ ನೀಡಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Lok Sabha Election 2024: ರಾಜ್ಯದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತಗಳಲ್ಲೂ ಒಟ್ಟು ಶೇ. 68.96 ಮತದಾನ ನಡೆದಿತ್ತು. ಈ ಬಾರಿ ಮೊದಲ ಹಂತದಲ್ಲಿ ಶೇ.69.23 ವೋಟಿಂಗ್‌ ನಡೆದಿದೆ, ಇನ್ನು ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಬಹುತೇಕ ಶಾಂತಿಯುತವಾಗಿ ಶುಕ್ರವಾರ ಮತದಾನವಾಗಿದೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ ಮುಕ್ತಾಯವಾಗಿದೆ. ಒಂದೆರಡು ಕಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ಹೊರತುಪಡಿಸಿದರೆ ಎಲ್ಲೆಡೆ ಬಹುತೇಕ ಶಾಂತಿಯುತವಾಗಿ ಮತದಾನ ಜರುಗಿದ್ದು, 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ.69.23 ಮತದಾನ ದಾಖಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.81.48 ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 52.81 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನು ಮೊದಲ ಹಂತದಲ್ಲಿ ಒಟ್ಟು 2,88,08,182 ಮತದಾರರು ಮತ ಚಲಾಯಿಸಿದ್ದು, 14 ಕ್ಷೇತ್ರಗಳಲ್ಲಿ 118 ಪಕ್ಷೇತರ ಅಭ್ಯರ್ಥಿಗಳು ಸೇರಿ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದರಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಜೂನ್‌ 4ರಂದು ಫಲಿತಾಂಶ ಹೊರಬೀಳಲಿದೆ.

14 ಕ್ಷೇತ್ರಗಳ ಶೇಕಡಾವಾರು ಮತದಾನ ಪಟ್ಟಿ

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರಲೋಕಸಭಾ ಚುನಾವಣೆ-2024ಲೋಕಸಭಾ ಚುನಾವಣೆ-2019
ಉಡುಪಿ-ಚಿಕ್ಕಮಗಳೂರುಶೇ. 76.06ಶೇ. 76.07
ಹಾಸನಶೇ. 77.51ಶೇ. 77.35
ದಕ್ಷಿಣ ಕನ್ನಡ
ಶೇ. 77.43ಶೇ. 77.99
ಚಿತ್ರದುರ್ಗ
ಶೇ. 73.11ಶೇ. 70.80
ತುಮಕೂರು
ಶೇ. 77.70ಶೇ. 77.43
ಮಂಡ್ಯಶೇ. 81.48ಶೇ. 80.59
ಮೈಸೂರುಕೊಡಗು
ಶೇ. 70.45ಶೇ. 69.51
ಚಾಮರಾಜನಗರ
ಶೇ. 76.59ಶೇ. 75.35
ಬೆಂಗಳೂರು ಗ್ರಾಮಾಂತರ
ಶೇ.67.29ಶೇ. 64.98
ಬೆಂಗಳೂರು ಉತ್ತರ
ಶೇ.54.42ಶೇ. 54.76
ಬೆಂಗಳೂರು ಸೆಂಟ್ರಲ್‌
ಶೇ. 52.81ಶೇ. 54.32
ಬೆಂಗಳೂರು ದಕ್ಷಿಣ
ಶೇ. 53.15ಶೇ. 53.70
ಚಿಕ್ಕಬಳ್ಳಾಪುರ
ಶೇ. 76.82ಶೇ. 76.74
ಕೋಲಾರಶೇ. 78.07
ಶೇ. 77.25
ಒಟ್ಟು ಶೇಕಡಾವಾರು ಮತದಾನ 69.23

2019ರ ಲೋಕಸಭಾ ಚುನಾವಣೆಯ ಒಟ್ಟು ಮತದಾನ ಎಷ್ಟು?
2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತ ಸೇರಿ ಒಟ್ಟು ಶೇ. 68.96 ಮತದಾನ ನಡೆದಿತ್ತು. ಮಂಡ್ಯದಲ್ಲಿ ಅತಿಹೆಚ್ಚು ಶೇ. 80.59, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 53.70 ಮತದಾನ ದಾಖಲಾಗಿತ್ತು.

ಇದನ್ನೂ ಓದಿ | Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

ಇಂಡಿಗನತ್ತ ಮತಗಟ್ಟೆಯಲ್ಲಿ ಮರು ಮತದಾನ ಸಾಧ್ಯತೆ

ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಮರು ಮತದಾನ ನಡೆಯುವ ಸಾಧ್ಯತೆ ಇದೆ. ಶುಕ್ರವಾರ ಕೇವಲ 10 ಮತದಾರರು ಮಾತ್ರ ಹಕ್ಕು ಚಲಾವಣೆ ಮಾಡಿದ್ದಾರೆ. ಮತಗಟ್ಟೆಯಲ್ಲಿ ಮೂಲಸೌಕರ್ಯ ಇಲ್ಲ ಎಂದು ಮತದಾರರು ಅಸಮಾಧಾನ ಹೊರಹಾಕಿ ಮತದಾನ ಬಹಿಷ್ಕರಿಸಿದ್ದರು. ಹೀಗಾಗಿ 2 ದಿನಗಳೊಳಗೆ ಅಧಿಕಾರಿಗಳು ಮಾತುಕತೆ ನಡೆಸಿ ಮರು ಮತದಾನ ಮಾಡಿಸುವ ಸಾಧ್ಯತೆ ಇದೆ.

ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿತು. ನಿಗದಿತ ಸಮಯವಾಗುತ್ತಿದ್ದಂತೆ ಅಧಿಕಾರಿಗಳು ಮತಗಟ್ಟೆಯ ಪ್ರಮುಖ ದ್ವಾರಗಳನ್ನು ಮುಚ್ಚಿದರು. ಸಂಜೆ ಐದು ಗಂಟೆಯ ವೇಳೆಗೆ ಶೇ 63.90 ಮತದಾನ ದಾಖಲಾಗಿತ್ತು. ಮತದಾನ ಅವಧಿ ಮುಕ್ತಾಯಗೊಂಡ ಬಳಿಕ 6 ಗಂಟೆ ವೇಳೆಗೆ ಸಾಲಿನಲ್ಲಿದ್ದವರಿಗೆ ಮಾತ್ರ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇವಿಎಂಗಳಿಗೆ ಸೀಲ್​

ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಗೇಟ್​ ಮುಚ್ಚಿದರು. ಈ ವೇಳೆ ಮೊದಲೇ ಬಂದು ಸರತಿಯಲ್ಲಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಲಾಯಿತು. ಕೆಲವರು ಅ ಬಳಿಕ ಬಂದರೂ ಅವರಿಗೆ ಅವಕಾಶ ನೀಡಲು ಹಿರಿಯ ಅಧಿಕಾರಿಗಳು ಒಪ್ಪಲಿಲ್ಲ. ಎಲ್ಲರೂ ಮತ ಚಲಾವಣೆ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದರು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಮತ ಯಂತ್ರಗಳನ್ನು ಪ್ಯಾಕ್ ಮಾಡಿದರು. ಈ ಮತಪೆಟ್ಟಿಗಳು ಇನ್ನು ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಲಿವೆ.

ಇದನ್ನೂ ಓದಿ | Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಮುಂಜಾನೆಯಿಂದಲೇ ಜನರು ಅತ್ಯಂತ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಬೇಸಿಗೆ ಬಿಸಿಲು ಹೆಚ್ಚಿರಬಹುದು ಎಂಬ ಕಾರಣಕ್ಕೆ ಮುಂಜಾನೆ ಅವಧಿಯಲ್ಲಿ ಮತಗಟ್ಟೆಗಳ ಬಳಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಕಂಡು ಬಂದರು. ಕೆಲವೊಂದು ಜನನಿಬಿಡ ಮತಗಟ್ಟೆಗಳಲ್ಲಿ 2 ಗಂಟೆಗಳಷ್ಟು ಕಾಲ ಜನ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದರು.

Continue Reading

ಕರ್ನಾಟಕ

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Lok Sabha Election 2024: ಯರೆಹಳ್ಳಿ, ಸಿದ್ದಾಪುರ ಗ್ರಾಮದ ಜನತೆಯು ತಮಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಎಷ್ಟೇ ಮನವಿ ಮಾಡಿದರೂ ಜನಪ್ರತಿನಿಧಿಗಳು ಕ್ಯಾರೇ ಎನ್ನುತ್ತಿಲ್ಲ. ಚುನಾವಣೆ ಬಂದಾಗ ಮಾತ್ರ ನಮ್ಮ ನೆನಪು ಬರುತ್ತದೆ. ಹೀಗಾಗಿ ನಾವು ಈ ಬಾರಿ ಮತವನ್ನೇ ಚಲಾವಣೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದು, ಮತದಾನವನ್ನು ಬಹಿಷ್ಕರಿಸಿ ಕುಳಿತಿದ್ದರು. ಆದರೆ, ಚುನಾವಣಾ ಅಧಿಕಾರಿಗಳು ಈ ಗ್ರಾಮಸ್ಥರ ಮನವೊಲಿಕೆಗೆ ಬೆಳಗ್ಗೆಯಿಂದಲೇ ಕಸರತ್ತು ನಡೆಸಿದ್ದರು. ಕೊನೆಗೂ ಅವರ ಮನವೊಲಿಸುವಲ್ಲಿ ಸಫಲರಾದರು.

VISTARANEWS.COM


on

Lok Sabha Election 2024 2 villagers who boycotted voting cast their votes in evening
Koo

ಚಿತ್ರದುರ್ಗ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ಎಲ್ಲ ಕಡೆ ಮುಕ್ತಾಯಗೊಂಡಿದೆ. ಆದರೆ, ಜಿಲ್ಲೆಯ ಯರೆಹಳ್ಳಿ, ಸಿದ್ದಾಪುರ ಗ್ರಾಮದಲ್ಲಿ ಮಾತ್ರ ಸಂಜೆ 7 ಗಂಟೆಯಾದರೂ ಮತದಾನ ನಿಂತಿಲ್ಲ!

ಹೌದು. ಯರೆಹಳ್ಳಿ, ಸಿದ್ದಾಪುರ ಗ್ರಾಮದ ಜನತೆಯು ತಮಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಎಷ್ಟೇ ಮನವಿ ಮಾಡಿದರೂ ಜನಪ್ರತಿನಿಧಿಗಳು ಕ್ಯಾರೇ ಎನ್ನುತ್ತಿಲ್ಲ. ಚುನಾವಣೆ ಬಂದಾಗ ಮಾತ್ರ ನಮ್ಮ ನೆನಪು ಬರುತ್ತದೆ. ಹೀಗಾಗಿ ನಾವು ಈ ಬಾರಿ ಮತವನ್ನೇ ಚಲಾವಣೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದು, ಮತದಾನವನ್ನು ಬಹಿಷ್ಕರಿಸಿ ಕುಳಿತಿದ್ದರು.

ಆದರೆ, ಚುನಾವಣಾ ಅಧಿಕಾರಿಗಳು ಈ ಗ್ರಾಮಸ್ಥರ ಮನವೊಲಿಕೆಗೆ ಬೆಳಗ್ಗೆಯಿಂದಲೇ ಕಸರತ್ತು ನಡೆಸಿದ್ದರು. ಕೊನೆಗೂ ಅವರ ಮನವೊಲಿಸುವಲ್ಲಿ ಸಫಲರಾದರು. ಹೀಗಾಗಿ ಸಂಜೆ ವೇಳೆಗೆ ಮತದಾನ ಪ್ರಕ್ರಿಯೆ ಶುರುವಾಯಿತು. ಇದರಿಂದಾಗಿ ಸಂಜೆ 7 ಗಂಟೆಯಾದರೂ ಮತದಾನ ಮುಕ್ತಾಯವಾಗಿರಲಿಲ್ಲ.

Lok Sabha Election 2024 2 villagers who boycotted voting cast their votes in evening
ಇವಿಎಂ, ವಿವಿಪ್ಯಾಟ್‌ನೊಂದಿಗೆ ಸ್ಟ್ರಾಂಗ್‌ ರೂಂನತ್ತ ಚುನಾವಣಾಧಿಕಾರಿಗಳು

ಉಳಿದೆಡೆ ಸ್ಟ್ರಾಂಗ್‌ ರೂಂನತ್ತ ಇವಿಎಂ, ವಿವಿಪ್ಯಾಟ್‌

ಮತದಾನ ಮುಕ್ತಾಯವಾದ ಕಡೆ ಚುನಾವಣಾಧಿಕಾರಿಗಳು ಇವಿಎಂ (EVM), ವಿವಿ ಪ್ಯಾಟ್‌ ಬಾಕ್ಸ್‌ಗಳನ್ನು ಪ್ಯಾಕಿಂಗ್ ಮಾಡುವ ಕಾರ್ಯದಲ್ಲಿ ನಿರತರಾಗಿದ್ದರು. ಪ್ಯಾಕಿಂಗ್ ಮಾಡಿದವರು ಚಾಮರಾಜನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿರುವ ಸ್ಟ್ರಾಂಗ್ ರೂಂಗೆ ತೆಗೆದುಕೊಂಡು ಹೋಗಿ ಇಡುತ್ತಿದ್ದಾರೆ. ದೂರದ ಕಡೆಗಳಿಂದ ಬರುವವರು ಸ್ಟ್ರಾಂಗ್‌ ರೂಂನತ್ತ ಬರುತ್ತಿದ್ದಾರೆ.

ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ. ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Continue Reading

ಮಳೆ

Karnataka Weather : ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

Karnataka Weather Forecast : ಬೆಂಗಳೂರು ನಗರವು ಬಿಸಿಲ ನಗರೀಯಾಗಿ ಮಾರ್ಪಾಟ ಆಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ. ಎಲ್ಲ ಕಾಲದಲ್ಲೂ ಕೂಲ್‌ ಆಗಿದ್ದ ಬೆಂಗಳೂರು ಇದೀಗ ಹಾಟ್‌ ಸಿಟಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಹಗುರ ಮಳೆ ನಡುವೆಯೂ (rain News) ಮತ್ತೆ ತಾಪಮಾನ ಏರಿಕೆ ಹಾಗೂ ಶಾಖದ ಅಲೆಗಳ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡುತ್ತಿದೆ. ಏ.26ರಿಂದ 30ರವರೆಗೆ ಹಲವು ಜಿಲ್ಲೆಗಳಿಗೆ ಹೀಟ್‌ ವೇವ್‌ (Heat Wave) ಅಲರ್ಟ್‌ ನೀಡಲಾಗಿದೆ. ಮುಂದಿನ 5 ದಿನಗಳು ತಾಪಮಾನದಲ್ಲಿ ಏರಿಳಿತ ಉಂಟಾಗಲಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ತಾಪಮಾನ ಏರಿಕೆ ಆಗಲಿದೆ.

ಉತ್ತರ ಕರ್ನಾಟಕಕ್ಕೂ ಸೆಡ್ಡು ಹೊಡೆಯುತ್ತಿರುವ ಬೆಂಗಳೂರು

ರಾಜಧಾನಿ ಬೆಂಗಳೂರಲ್ಲಿ ಬಿಸಿಲಿನ ವಾತಾವರಣವೇ ಮುಂದುವರಿಯಲಿದೆ. ಬೆಳಗಿನ ಸಮಯ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೆ ಮಧ್ಯಾಹ್ನದ ನಂತರ ಆಕಾಶವು ನಿರ್ಮಲವಾಗಿರದೆ. ಗರಿಷ್ಠ ಹಾಗೂ ಕನಿಷ್ಟ ಉಷ್ಣಾಂಶವು ಕ್ರಮವಾಗಿ 38 ಹಾಗೂ 23 ಡಿ.ಸೆ ಇರಲಿದೆ. ಕೂಲ್‌ ಆಗಿದ್ದ ಬೆಂಗಳೂರು ನಗರವು ಇದೀಗ ಹಾಟ್‌ ಸಿಟಿಯಾಗಿ ಮಾರ್ಪಾಟ್ಟಿದ್ದು, ಹಳೇಯ ದಾಖಲೆಯನ್ನು ಉಡೀಸ್‌ ಆಗಿದೆ. ಕಳೆದ 12 ವರ್ಷಗಳಲ್ಲೇ ಅತ್ಯಾಧಿಕ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಗುರುವಾರ ಹಾಗೂ ಶುಕ್ರವಾರ ಗರಿಷ್ಠ ಉಷ್ಣಾಂಶವು 38ಕ್ಕೆ ಹೋಗಿತ್ತು, ಶನಿವಾರ ಇದೇ ಪರಿಸ್ಥಿತಿ ಮುಂದುವರಿಯಲಿದೆ.

ಏ. 27, 28ರಂದು ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ತುಮಕೂರು, ಮಂಡ್ಯ, ಗದಗ, ದಾವಣಗೆರೆ ಮತ್ತು ಚಿತ್ರದುರ್ಗಕ್ಕೆ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

ರಾಯಚೂರಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಬುಧವಾರದಂದು ಕೋಲಾರದಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 20.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 43.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಉಳಿದಂತೆ ಹಾಸನ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರದಲ್ಲಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ನಿಂದ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಯಚೂರು, ಕಲಬುರಗಿ, ಬೀದರ್, ಕೊಪ್ಪಳ, ಬಾಗಲಕೋಟೆ, ಯಾದಗಿರಿ ಮತ್ತು ಬಳ್ಳಾರಿ, ವಿಜಯಪುರದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ನಿಂದ 44 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ.

ಇದನ್ನೂ ಓದಿ: Lok Sabha Election 2024 : ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು; ಲಂಡನ್‌ನಿಂದ ಮಂಡ್ಯಕ್ಕೆ ಬಂದ ಮಹಿಳೆ

ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ಬಿಸಿಲಿನ ಝಳ (ORS) ನೆತ್ತಿ ಸುಡುವಂತಿದೆ. ತಾಪಮಾನ 40 ಡಿಗ್ರಿ ಸೆ. ಆಚೀಚೆ ಬರುತ್ತಿದ್ದಂತೆ ನಿರ್ಜಲೀಕರಣಕ್ಕೆ ತುತ್ತಾಗದಂತೆ ಕಾಪಾಡಿಕೊಳ್ಳಲು ಹಲವು ಪ್ರಯತ್ನಗಳಲ್ಲಿ ಜನ ನಿರತರಾಗಿರುವುದು ಕಂಡುಬರುತ್ತದೆ. ಅವುಗಳಲ್ಲಿ ಪ್ರಮುಖ ಪೇಯವೆಂದರೆ ಒಆರ್‌ಎಸ್‌ ಅಥವಾ ಓರಲ್‌ ರಿಹೈಡ್ರೇಶನ್‌ ಸೊಲ್ಯೂಶನ್‌.

ದೇಹಕ್ಕೆ ಅಗತ್ಯವಾದ ನೀರು, ಸಕ್ಕರೆ ಮತ್ತು ಲವಣಗಳನ್ನು ಹೊಂದಿರುವ ಈ ದ್ರಾವಣದ ಸೇವನೆಯಿಂದ ನಿರ್ಜಲೀಕರಣಕ್ಕೆ ತುತ್ತಾಗಿ ಪ್ರಾಣಾಪಾಯ ಆಗುವುದರಿಂದ ಪಾರಾಗಬಹುದು. ಆದರೆ ಇದನ್ನು ಯಾರು, ಎಷ್ಟು ಕುಡಿಯಬಹುದು? ಸೆಕೆಗೆ ತತ್ತರಿಸುತ್ತಿರುವ ಈ ದಿನಗಳಲ್ಲಿ ಒಆರ್‌ಎಸ್‌ನಂಥವು ಎಷ್ಟು ಬೇಕಿದ್ದರೂ ಹೊಟ್ಟೆ ಸೇರುತ್ತವೆ. ಆದರೆ ಇದನ್ನು ಎಷ್ಟು ಕುಡಿದರೆ ಸಾಕು ಮತ್ತು ಬೇಕು? ನಿರ್ಜಲೀಕರಣದಿಂದ ಕಳೆದುಕೊಂಡ ಖನಿಜಾಂಶಗಳನ್ನು ಮತ್ತು ನೀರನ್ನು ದೇಹಕ್ಕೆ ಮರಳಿ ಒದಗಿಸಿಕೊಡುವ ವ್ಯವಸ್ಥಿತವಾದ ಮಾರ್ಗವಿದು.

ಬೇಸಿಗೆಯ ತೀವ್ರತೆ ವಿಪರೀತವಾದ ಮೇಲೆ ರಾಜಧಾನಿಯೊಂದರಲ್ಲೇ ಒಆರೆಸ್‌ ಮಾರಾಟ ಶೇ. ೬೦ರಷ್ಟು ಹೆಚ್ಚಿದೆ. ಅದರಲ್ಲೂ ವಾಂತಿ, ಡಯರಿಯಾ, ಸುಸ್ತು ಮತ್ತು ನಿರ್ಜಲೀಕರಣದ ಲಕ್ಷಣಗಳು ಕಾಣುತ್ತಿದ್ದಂತೆ ಒಂದು ಸ್ಯಾಶೆ ಒಆರೆಸ್‌ ನೀರಿಗೆ ಬೆರೆಸಿ ಕುಡಿದರೆ, ಜೀವಕ್ಕೆ ತಂಪಾಗುತ್ತದೆ ಎಂಬುದು ಬಹುತೇಕ ಮಂದಿಗೆ ಅನುಭವಕ್ಕೆ ಬಂದಿದೆ. ಆದರೆ ನಮಗೆ ನಿಜಕ್ಕೂ ಓಆರೆಸ್‌ ಅಗತ್ಯ ಬೀಳುವುದು ಯಾವಾಗ? ಮಧುಮೇಹ ಇದ್ದವರೂ ಇದನ್ನು ಕುಡಿಯಬಹುದೇ? ಮಕ್ಕಳಿಗೂ ಸೂಕ್ತವೇ? ಒಆರೆಸ್‌ ಪುಡಿ ಒಳ್ಳೆಯದೋ ಅಥವಾ ಜ್ಯೂಸ್‌ ರೀತಿಯಲ್ಲಿರುವ ಒಆರೆಸ್ಸೆಲ್‌ ಒಳ್ಳೆಯದೋ?

ors drink

ಏನಿದು ಒಆರ್‌ಎಸ್‌

ರಾಬರ್ಟ್‌ ಕ್ರೇನ್‌ ಎಂಬಾತ ಇದರ ಮಹತ್ವವನ್ನು ತಿಳಿಸಿಕೊಟ್ಟವ. 1960ರ ಸುಮಾರಿಗೆ ವಾಂತಿ, ಅತಿಸಾರದಿಂದ ಆಗುತ್ತಿದ್ದ ಪ್ರಾಣಾಪಾಯಗಳನ್ನು ತಡೆಯುವುದಕ್ಕೆ ಈ ದ್ರಾವಣದ ಸೇವನೆಯನ್ನು ಜಾರಿಗೆ ತರಲಾಗಿತ್ತು. ವಾಂತಿ-ಭೇದಿಯಿಂದ ಆಗುತ್ತಿದ್ದ ನಿರ್ಜಲೀಕರಣ ತಪ್ಪಿಸಲು ರಕ್ತನಾಳಕ್ಕೆ ಗ್ಲೂಕೋಸ್‌ ಕೊಡುವ ಪದ್ಧತಿ ಆಗ ಚಾಲ್ತಿಯಲ್ಲಿತ್ತು. ಆದರೆ ಎಲ್ಲ ಕಡೆಯೂ ಚಿಕಿತ್ಸೆಯನ್ನು ನೀಡಲಾಗುತ್ತಿರಲಿಲ್ಲ. ಆಗ ಒಆರೆಸ್‌ ಎಂಬ ಜೀವಜಲದ ಸೇವನೆ ವರದಾನವಾಗಿ ಪರಿಣಮಿಸಿತ್ತು. ಇದು ಗ್ಲೂಕೋಸ್‌, ಸೋಡಿಯಂ ಕ್ಲೋರೈಡ್‌, ಪೊಟಾಶಿಯಂ ಕ್ಲೋರೈಡ್‌ ಮತ್ತು ಸೋಡಿಯಂ ಸಿಟ್ರೇಟ್‌ಗಳ ಮಿಶ್ರಣವಾಗಿದೆ. ಜೊತೆಗೆ ಜಿಂಕ್‌ ಸಹ ಸೇರಿರುವುದರಿಂದ ವಾಂತಿ- ಅತಿಸಾರದ ಲಕ್ಷಣಗಳ ಉಪಶಮನಕ್ಕೆ ನೆರವಾಗುತ್ತದೆ.

ಯಾವಾಗ ಕುಡಿಯಬೇಕು?

ನಿರ್ಜಲೀಕರಣದ ಪ್ರಾರಂಭಿಕ ಲಕ್ಷಣಗಳು ಗೋಚರವಾಗುತ್ತಿದ್ದಂತೆ ಒಆರೆಸ್‌ ಸೇವನೆಯನ್ನು ಪ್ರಾರಂಭಿಸುವುದು ಸೂಕ್ತ. ಅಂದರೆ ತೀವ್ರ ಬಾಯಾರಿಕೆ. ತುಟಿಗಳೆಲ್ಲ ಒಣಗಿದಂತಾಗುವುದು, ಮೂತ್ರ ಕಡಿಮೆಯಾಗುವುದು, ಮೂತ್ರದ ಬಣ್ಣ ಗಾಢವಾಗುವುದು, ಸುಸ್ತು, ಆಯಾಸ, ತಲೆ ಸುತ್ತುವುದು, ತಲೆಯೊಳಗೆ ನೋವು… ಇಂಥ ಯಾವುದೇ ಅನುಭವಕ್ಕೆ ಬಂದರೂ ಒಆರೆಸ್‌ ಸೇವನೆಯನ್ನು ಆರಂಭಿಸಬಹುದು. ಬಿಸಿಲಿನ ತೀವ್ರತೆ ಸಿಕ್ಕಾಪಟ್ಟೆ ಇರುವ ದಿನಗಳಲ್ಲಿ, ಮನೆಯೊಳಗಿದ್ದರೂ ಸುಸ್ತು, ಆಯಾಸ, ಸಂಕಟ ಕಾಡುತ್ತಿರುವ ಹೊತ್ತಿನಲ್ಲಿ ಒಂದು ಲೋಟ ಒಆರೆಸ್‌ ನೀರು ಕುಡಿಯುವುದು ಜೀವವನ್ನು ತಂಪಾಗಿಸುತ್ತದೆ.

ಎಷ್ಟು ಕುಡಿಯಬೇಕು?

ಇದು ಆ ವ್ಯಕ್ತಿಯ ದೇಹಸ್ಥಿತಿಯನ್ನು ಅವಲಂಬಿಸಿದೆ. ನಿರ್ಜಲೀಕರಣದ ಲಕ್ಷಣಗಳು ಸ್ವಲ್ಪ ಅಥವಾ ಮಧ್ಯಮ ಪ್ರಮಾಣದಲ್ಲಿದ್ದರೆ, ಸುಮಾರು 20-25 ಎಂ.ಎಲ್‌ನಷ್ಟು ಒಆರೆಸ್‌ ದ್ರಾವಣವನ್ನು ಒಮ್ಮೆ ಗುಟುಕರಿಸುವುದು. ಪ್ರತಿ 10-15 ನಿಮಿಷಗಳಿಗೆ ಇದನ್ನೇ ನಿಯಮಿತವಾಗಿ ಮುಂದುವರಿಸುವುದು. ದಾಹ ಕಡಿಮೆಯಾಗಿ, ಬಾಯಿ ಒಣಗುವುದು ನಿಂತು, ಮೂತ್ರ ಹೆಚ್ಚಾಗಿ, ಮೂತ್ರದ ಬಣ್ನ ತಿಳಿಯಾಗಿ, ಸುಸ್ತು ಕಡಿಮೆಯಾಗುವವರೆಗೂ ಇದನ್ನೇ ಮುಂದುವರಿಸಬೇಕು. ಅಗತ್ಯವಿದ್ದರೆ ಇದನ್ನು ದಿನವಿಡೀ ಮಾಡಬಹುದು. ಆದರೆ ನಿರ್ಜಲೀಕರಣ ತೀವ್ರವಾಗಿದ್ದರೆ ಒಆರೆಸ್‌ ಪ್ರಮಾಣ ಹೆಚ್ಚು ಬೇಕಾಗುತ್ತದೆ. ಇದಕ್ಕೆ ವೈದ್ಯರಲ್ಲಿ ಸಲಹೆ ಕೇಳುವುದು ಒಳಿತು.

ಯಾರೆಲ್ಲ ಕುಡಿಯಬಹುದು?

ಬೇಸಿಗೆಯ ಹೊಡೆತ ತೀವ್ರವಾಗಿರುವ ಈ ದಿನಗಳಲ್ಲಿ ಬಹುತೇಕ ಎಲ್ಲರೂ ಇದನ್ನು ಸೇವಿಸಬಹುದು. ಆದರೆ ಹೃದ್ರೋಗಿಗಳು, ಕಿಡ್ನಿ ಸಮಸ್ಯೆ ಇರುವವರು ವೈದ್ಯರ ಸಲಹೆಯನ್ನು ತೆಗೆದುಕೊಳ್ಳಬೇಕು. ಅಗತ್ಯವಿದ್ದಾಗ ಮಧುಮೇಹಿಗಳು ಸಹ ಇದನ್ನು ಸೇವಿಸಬಹುದು. ಆದರೆ ನಿಯಮಿತವಾಗಿ ಸೇವಿಸುವ ಅಗತ್ಯವಿದ್ದರೆ ಸಕ್ಕರೆಯಂಶದ ಮೇಲೆ ಕಣ್ಣಿಡಬೇಕಾಗುತ್ತದೆ. ಹಾಗಾಗಿ ಅವರೂ ವೈದ್ಯರಲ್ಲಿ ಸಮಾಲೋಚನೆ ಮಾಡುವುದು ಕ್ಷೇಮ. ಇದರಿಂದ ಯಾವಾಗ, ಎಷ್ಟು ಕುಡಿಯಬಹುದು ಎಂಬುದು ಸ್ಪಷ್ಟವಾಗುತ್ತದೆ.

Boy Drinking Water from Glass

ಮಕ್ಕಳಿಗೆ ನೀಡಬಹುದೇ?

ಖಂಡಿತ. ಆರು ತಿಂಗಳ ನಂತರದ ಶಿಶುಗಳಿಗೂ ಒಆರೆಸ್‌ನಿಂದ ಅನುಕೂಲವಾಗುತ್ತದೆ. ಬಿಸಿಲ ದಿನಗಳಲ್ಲಿ, 6-24 ತಿಂಗಳ ಮಕ್ಕಳಿಗೆ, ದಿನಕ್ಕೆ 20 ಚಮಚ ಒಆರೆಸ್‌ ನೀಡಬಹುದು. 2-5 ವರ್ಷದ ಮಕ್ಕಳಿಗೆ 40 ಚಮಚ ಒಆರೆಸ್‌ ನೀಡಬಹುದು. 5 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಅವು ಕುಡಿದು ತಡೆಯುವಷ್ಟು ನೀಡಬಹುದು. ವಯಸ್ಕರಿಗಿಂತ ಮಕ್ಕಳೇ ಹೆಚ್ಚು ನಿರ್ಜಲೀಕರಣಕ್ಕೆ ತುತ್ತಾಗುವುದರಿಂದ ಒಆರೆಸ್‌ ದ್ರಾವಣ ಎಳೆಯರ ಪಾಲಿನ ಜೀವಜಲ.

ಯಾವುದು ಒಳ್ಳೆಯದು?

ವಾಂತಿ, ಅತಿಸಾರದಂಥ ತೊಂದರೆ ಇರುವಾಗ ಒಆರ್‌ಎಸ್‌ ಪುಡಿಯೇ ಸೂಕ್ತವಾದದ್ದು. ಅದರ ಮೇಲೆ ನಮೂದಿಸಿರುವ ಪ್ರಮಾಣವನ್ನು ತಪ್ಪದೆ ಪಾಲಿಸಬೇಕು. ಒಆರೆಸೆಲ್‌ನಲ್ಲಿ ಬಣ್ಣ ಮತ್ತು ಸುವಾಸನೆಯನ್ನು ಸೇರಿಸಿರುವ ಸಾಧ್ಯತೆ ಹೆಚ್ಚಿರುವುದರಿಂದ, ಚಿಕಿತ್ಸೆಗೆ ಪುಡಿಯೇ ಸೂಕ್ತ. ಹಾಗಲ್ಲದೆ ಬೇಸಿಗೆಯ ಹೊಡೆತ ತಡೆಯುವಾಗ, ಸಾಮಾನ್ಯ ಸುಸ್ತು, ಆಯಾಸಗಳ ಪರಿಹಾರಕ್ಕಾದರೆ ಯಾವುದನ್ನಾದರೂ ಬಳಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Anupama Parameswaran Paradha next
ಟಾಲಿವುಡ್21 mins ago

Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

PU Board exam girl writing exam
ಪ್ರಮುಖ ಸುದ್ದಿ42 mins ago

Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

ಕ್ರೈಂ1 hour ago

Child Welfare commission: ಅಕ್ರಮವಾಗಿ ಸಾಗಿಸುತ್ತಿದ್ದ 95 ಮುಸ್ಲಿಂ ಮಕ್ಕಳ ರಕ್ಷಣೆ

jai sriram slogan viral news
ವೈರಲ್ ನ್ಯೂಸ್1 hour ago

Jai SriRam Slogan: ಉತ್ತರಪತ್ರಿಕೆಯಲ್ಲಿ `ಜೈ ಶ್ರೀರಾಮ್’ ಬರೆದ ವಿದ್ಯಾರ್ಥಿಗಳು ಪಾಸ್;‌ ಪ್ರಾಧ್ಯಾಪಕರು ವಜಾ!

Ayushman Bharat Yojana
ಆರೋಗ್ಯ2 hours ago

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Sushant Singh Rajput
ಬಾಲಿವುಡ್2 hours ago

Sushant Singh Rajput: ಸುಶಾಂತ್‌ ಸಿಂಗ್‌ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನ ಶುರು ಮಾಡಿದ ಸಹೋದರಿ!

donkey milk
ವಾಣಿಜ್ಯ2 hours ago

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

ವಿದೇಶ2 hours ago

US Sanction: ಭಾರತೀಯ ಮೂಲದ 3 ಕಂಪನಿಗಳಿಗೆ ಅಮೆರಿಕ ನಿರ್ಬಂಧ

Kalki 2898 AD to release on this date
ಟಾಲಿವುಡ್2 hours ago

Kalki 2898 AD: ಪ್ರಭಾಸ್, ದೀಪಿಕಾ, ಅಮಿತಾಭ್‌ ಮುಖ್ಯಭೂಮಿಕೆಯ ʻಕಲ್ಕಿ 2898 ADʼ ರಿಲೀಸ್‌ ಡೇಟ್‌ ಅನೌನ್ಸ್‌!

nota vote
ಪ್ರಮುಖ ಸುದ್ದಿ3 hours ago

NOTA: ಅತಿ ಹೆಚ್ಚು `ನೋಟಾ’ ಬಿದ್ದರೆ ಹೊಸ ಚುನಾವಣೆ ಮಾಡಬಹುದೇ? ಸುಪ್ರೀಂ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ23 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202423 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202424 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌