CM Siddaramaiah : ಅಕ್ಕಿ ಬೇಕೋ, ಹಣ ಬೇಕೋ?; ಸಿದ್ದರಾಮಯ್ಯ ಕೈಲಿ ತಗಲಾಕ್ಕೊಂಡು ಡಿಸಿ ಕಕ್ಕಾಬಿಕ್ಕಿ! - Vistara News

ಕರ್ನಾಟಕ

CM Siddaramaiah : ಅಕ್ಕಿ ಬೇಕೋ, ಹಣ ಬೇಕೋ?; ಸಿದ್ದರಾಮಯ್ಯ ಕೈಲಿ ತಗಲಾಕ್ಕೊಂಡು ಡಿಸಿ ಕಕ್ಕಾಬಿಕ್ಕಿ!

CM Siddaramaiah : ಜನರಿಗೆ ಹಣ ಬೇಕೋ ಅಕ್ಕಿ ಬೇಕೋ ಎಂಬ ಪ್ರಶ್ನೆ ಕೇಳಿ ಅಧಿಕಾರಿಗಳನ್ನು ಕಕ್ಕಾಬಿಕ್ಕಿ ಮಾಡಿದರು ಸಿದ್ದರಾಮಯ್ಯ. ಜತೆಗೆ ಅಧಿಕಾರಿಗಳನ್ನು ಚೆನ್ನಾಗಿ ಬೆಂಡೆತ್ತಿದರು.

VISTARANEWS.COM


on

Siddaramaiah Rice
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಜನರಿಗೆ ಅಕ್ಕಿ ಬೇಕಂತಾ? ಹಣ ಬೇಕಂತಾ? ಎಂಬ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪ್ರಶ್ನೆಗೆ ಉತ್ತರ ನೀಡುವಾಗ ಚಾಮರಾಜನಗರ ಜಿಲ್ಲಾಧಿಕಾರಿ (Chamarajanagara DC) ಶಿಲ್ಪಾ ನಾಗ್‌ (Shilpa Nag) ಅವರು ಸಿಕ್ಕಾಕಿಕೊಂಡರು. ಈ ಪ್ರಶ್ನೆಗೆ ಜಿಲ್ಲಾಧಿಕಾರಿಗಳು ನೀಡಿದ ಉತ್ತರವೇ ಬೇರೆ, ಆಹಾರ ಇಲಾಖೆ ಉಪ ನಿರ್ದೇಶಕರ (Deputy director of Food department) ಉತ್ತರವೇ ಬೇರೆ! ಆದರೆ, ಇದನ್ನು ಸಿದ್ದರಾಮಯ್ಯ ಅಷ್ಟು ಸೀರಿಯಸ್‌ ಆಗಿ ತೆಗೆದುಕೊಳ್ಳದೆ ಮುಂದೆ ಹೋದರು.

ಬುಧವಾರ ಚಾಮರಾಜ ನಗರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿ ಹಂತದಲ್ಲಿ ಅಧಿಕಾರಿಗಳನ್ನು ಪ್ರಶ್ನೆ ಮಾಡುತ್ತಾ ಚುರುಕು ಮುಟ್ಟಿಸಿದರು ಸಿದ್ದರಾಮಯ್ಯ. ಯಾವ ಕಾರಣಕ್ಕೂ ಸಿದ್ದರಾಮಯ್ಯ ಅವರಿಗೆ ತಪ್ಪು ಮಾಹಿತಿ, ಅರೆಬರೆ ಮಾಹಿತಿ ನೀಡಿ ತಪ್ಪಿಸಿಕೊಳ್ಳಲು ಅಧಿಕಾರಿಗಳಿಗೆ ಸಾಧ್ಯವಾಗಲಿಲ್ಲ.

ಜನ ಅಕ್ಕಿ ಬೇಕು ಅಂತಿದ್ದಾರೋ ಹಣ ಬೇಕು ಅಂತಿದ್ದಾರೋ?

ಅನ್ನ ಭಾಗ್ಯ ಯೋಜನೆಯಡಿ ಜನ ಅಕ್ಕಿ ಬೇಕು ಅಂತಿದ್ದಾರೋ ಹಣ ಬೇಕು ಅಂತಿದ್ದಾರೋ? (Anna Bhagya Scheme) ಎಂಬ ಪ್ರಶ್ನೆ ಕೇಳಿ ನಿಮ್ಮ ಅಭಿಪ್ರಾಯ ಹೇಳಿ ಎಂದು ಸಿದ್ದರಾಮಯ್ಯ ಅಧಿಕಾರಿಗಳನ್ನು ಪ್ರಶ್ನಿಸಿದರು. ಆಗ ಡಿಸಿ ಶಿಲ್ಪಾ ನಾಗ್‌ ಅವರು ಹಣ ನೀಡುವುದೇ ಒಳ್ಳೆಯದ್ದು ಅಂತ ಕೇಳುತ್ತಿದ್ದಾರೆ ಎಂದರು. ನಾವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕೇಳುವಾಗ ಈ ಅಭಿಪ್ರಾಯ ಬಂದಿದೆ ಎಂದರು.

ಆದರೆ, ಆಹಾರ ಇಲಾಖೆ ಉಪ ನಿರ್ದೇಶಕರ ಉತ್ತರವೇ ಬೇರೆ. ʻʻತಾಲೂಕುವಾರು ಅನೇಕ ಕಡೆಗಳಲ್ಲಿ ಫಲಾನುಭವಿಗಳನ್ನು ಭೇಟಿ ಮಾಡಿದ್ದೇನೆ. 590 ಜನ ಭೇಟಿ ಮಾಡಿದ್ದೇನೆ. ಅದರಲ್ಲಿ 19 ಜನ ಮಾತ್ರ ಹಣ ಬೇಕು ಅಂತ ಕೇಳಿದ್ದಾರೆ. ಉಳಿದವರೆಲ್ಲ ಅಕ್ಕಿ ಬೇಕು ಅಂದಿದ್ದಾರೆʼʼ ಎಂದು ಸಮೀಕ್ಷೆಯ ಮಾಹಿತಿಯನ್ನು ನೀಡಿದರು.
ಅಂಕಿ ಅಂಶ ಕೇಳಿ ಕಕ್ಕಾಬಿಕ್ಕಿಯಾದ ಡಿಸಿ ಅವರು, ತಮ್ಮದೇ ಹೇಳಿಕೆಯಿಂದ ಉಲ್ಟಾ ಹೊಡೆದರು. ಸಮೀಕ್ಷೆ ಸರಿ ಇರಬಹುದು. ನಾವು ಜನರಲ್‌ ಆಗಿ ಪ್ರಶ್ನೆ ಕೇಳಿದ್ದೇವೆ ಎಂದರು.

ಆಹಾರ ಇಲಾಖೆ ಉಪನಿರ್ದೇಶಕರಿಗೆ ಸಿಎಂ ತರಾಟೆ

ಅನ್ನಭಾಗ್ಯದ ಅಕ್ಕಿಗೆ ಹಣ ನೀಡುವ ಯೋಜನೆಯ ಲಾಭವನ್ನು ಫಲಾನುಭವಿಗಳಿಗೆ ತಲುಪಿಸದೆ ಇರುವುದಕ್ಕೆ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ʻʻಅಧಿಕಾರಿಗಳಲ್ಲಿ ಸಮನ್ವಯತೆ ಇರಬೇಕು. ಸಮನ್ವಯತೆ ಇರದಿದ್ದರೆ ತೊಂದರೆಯಾಗುತ್ತದೆ. ನಾಲ್ಕು ಗ್ಯಾರಂಟಿ ಜಾರಿ ಮಾಡಲಾಗಿದೆ. ಮತ್ತೊಂದು ಗ್ಯಾರಂಟಿ ಜನವರಿ ತಿಂಗಳಲ್ಲಿ ಜಾರಿಯಾಗಲಿದೆ. ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕುʼʼ ಎಂದು ಹೇಳಿದ ಅವರು, ʻʻಪಡಿತರ ಚೀಟಿ ಇರುವ ಎಲ್ಲಾ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆ ತಲುಪಿದೆಯಾʼʼ ಎಂದು ಕೇಳಿದರು.

ʻʻಇನ್ನು ಒಂದು ಲಕ್ಷ ಫಲಾನುಭವಿಗಳಿಗೆ ತಲುಪಬೇಕು. ಬ್ಯಾಂಕ್ ಖಾತೆ ಸಮಸ್ಯೆಯಿಂದ ತಲುಪಿಲ್ಲʼʼ ಎಂದು ಉತ್ತರ ಕೊಟ್ಟರು ಅಧಿಕಾರಿ.

ಆಗ ಸಿದ್ದರಾಮಯ್ಯ ಅವರು, ʻʻಮೂರು ತಿಂಗಳು ಬೇಕಾ ನಿಮಗೆʼʼ ಎಂದು ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು.
ʻʻಇದು ಆಗಸ್ಟ್ ತಿಂಗಳ ವರೆಗಿನ ಮಾಹಿತಿʼʼ ಎಂದು ಅಧಿಕಾರಿಯಿಂದ ಉತ್ತರ. ನನಗೆ ಅಗಸ್ಟ್ ಮಾಹಿತಿ ಯಾಕೆ ಕೊಟ್ಟೆ ಎಂದು ಗದರಿದರು ಸಿಎಂ ಸಿದ್ದರಾಮಯ್ಯ.

ಅಟ್ರಾಸಿಟಿ ಕೇಸ್:ಚಾಮರಾಜನಗರದಲ್ಲಿ ಶಿಕ್ಷೆ ಶೂನ್ಯ!

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿ ಚಾಮರಾಜನಗರದಲ್ಲಿ ಶಿಕ್ಷೆ ಪ್ರಮಾಣ ಶೂನ್ಯ ಎಂಬ ಮಾಹಿತಿ ಕೇಳಿದ ಸಿಎಂ ಸಿದ್ದರಾಮಯ್ಯ ಅಚ್ಚರಿಪಟ್ಟರು. ಮಾತ್ರವಲ್ಲ, ಎಸ್ಪಿ ಪದ್ಮಿನಿ ಸಾಹುಗೆ ಫುಲ್ ಕ್ಲಾಸ್ ತೆಗೆದುಕೊಂಡರು.

ʻʻಪ್ರತಿ ವರ್ಷ 20- 25 ಕೇಸ್ ದಾಖಲಾಗುತ್ತಿದೆ. ಮೂರು ವರ್ಷಗಳಿಂದ ಒಂದೇ ಒಂದು ಕೇಸ್‌ಗೆ ಶಿಕ್ಷೆ ಆಗಿಲ್ಲ. 5 ಕೇಸ್ ವಜಾ ಆಗಿವೆʼʼ ಎಂದು ಎಸ್‌ಪಿ ವಿವರಿಸಿದರು.

ಇದನ್ನೂ ಓದಿ : CM Siddaramaiah : ಆಕ್ಸಿಜನ್‌ ದುರಂತದಲ್ಲಿ ಮೃತರ ಕುಟುಂಬಕ್ಕೆ ಕಾಯಂ ಉದ್ಯೋಗ; ಸಿಎಂ ಭರವಸೆ

ಇದರಿಂದ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ʻʻʻಅಲ್ಲಮ್ಮ, ಶಿಕ್ಷೆ ಆಗಲ್ಲ ಅಂದ್ರೆ ಭಯ ಹೇಗೆ ಬರುತ್ತೆ ? ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕುʼʼ ಎಂದರು. ಆಗ ಪದ್ಮಿನಿ ಸಾಹೋ ಅವರು ಏನೋ ಹೇಳಲು ಹೋದಾಗ, ʻʻನೀನು ಹೊಸಬಳು ಇರಬಹುದು. ಆದರೆ, ಸುಮ್ಮನೆ ವಾದ ಮಾಡಬೇಡʼʼ ಎಂದು ಸೂಚನೆ ನೀಡಿದರು. ಪರಿಶೀಲನೆ ನಡೆಸುವಂತೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯಗೆ ಸೂಚನೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bangalore Rain News: ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

Bangalore Rain News: ನಗರದಲ್ಲಿ ನೂರಾರು ಕಡೆ ಬೃಹತ್ ಗಾತ್ರದ ಮರಗಳು, ಸಣ್ಣ ಮರಗಳು ಹಾಗೂ ಕೊಂಬೆಗಳು ಧರಾಶಾಯಿಯಾದವು. ಹಲವು ತಗ್ಗು ಪ್ರದೇಶಗಳಲ್ಲಿ ಮನೆಗಳು ಜಲಾವೃತಗೊಂಡವು. ಬೆಳ್ಳಂದೂರಿನಲ್ಲಿ ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗೆ ರಾಜಕಾಲುವೆ ನೀರು ನುಗ್ಗಿದೆ.

VISTARANEWS.COM


on

bangalore rain news
Koo

ಬೆಂಗಳೂರು: ಮುಂಗಾರು (monsoon) ಸಾಕಷ್ಟು ಅಬ್ಬರದಿಂದಲೇ ರಾಜಧಾನಿಯನ್ನು (Bangalore rain news) ಪ್ರವೇಶಿಸಿದೆ. ನಿನ್ನೆ ಸಂಜೆಯಿಂದ ಸುರಿದ ಭಾರಿ ಮಳೆಗೆ ನಗರದ (Bengaluru rain news) ಹಲವು ಕಡೆ ಮರಗಳು (trees fall) ಮುರಿದುಬಿದ್ದಿವೆ. ತಗ್ಗು ಪ್ರದೇಶಗಳಿಗೆ ನೀರು (water clogging) ನುಗ್ಗಿದೆ. ಬೆಳ್ಳಂದೂರಿನ ಒಂದು ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗೆ ನೀರು ನುಗ್ಗಿದ್ದು, ನಿವಾಸಿಗಳು ಮನೆಗಳಲ್ಲೇ ಲಾಕ್‌ ಆಗಿದ್ದಾರೆ.

“ನಿನ್ನೆ ಸುರಿದ ಭಾರಿ ಮಳೆಗೆ ನಗರದಲ್ಲಿ ಸುಮಾರು 260ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಬಹುತೇಕ ಜಯನಗರ. ಬಸವನಗುಡಿ ಸುತ್ತಮುತ್ತಲಿನಲ್ಲಿ 100ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಸದ್ಯ ಮರಗಳನ್ನು ತೆರವು ಮಾಡೋದಕ್ಕೆ ಬಿಬಿಎಂಪಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಚರಣೆ ಮಾಡುತ್ತಿದ್ದಾರೆ. ಮೊದಲು ಸಂಚಾರಕ್ಕೆ ಅನುಕೂಲ ಕಲ್ಪಿಸಲು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳ ತೆರವು ಮಾಡುತ್ತಿದ್ದೇವೆ. ಸಂಜೆ ವೇಳೆಗೆ ನಗರದ ಬಹುತೇಕ ಕಡೆ ಮರಗಳನ್ನು ತೆರವು ಮಾಡುತ್ತೇವೆ” ಎಂದು ಬಿಬಿಎಂಪಿ ಅರಣ್ಯ ವಿಭಾಗದ ಮುಖ್ಯಸ್ಥರು ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

Bangalore rain news

ಬೃಹತ್ ಗಾತ್ರದ ಮರಗಳು, ಸಣ್ಣ ಮರಗಳು ಹಾಗೂ ಕೊಂಬೆಗಳು ಧರಾಶಾಯಿಯಾದವು. ಬಸವೇಶ್ವರನಗರದಲ್ಲೂ ಮರಗಳು ಧರೆಗುರುಳಿವೆ. 3ನೇ ಮುಖ್ಯರಸ್ತೆಯಲ್ಲಿ ಕಾರ್ ಮೇಲೆ ಮರ ಬಿದ್ದು ಕಾರ್ ಜಖಂ ಆಗಿದೆ. ಜಯನಗರದ ಕೃಷ್ಣರಾವ್ ಪಾರ್ಕ್ ಬಳಿ ಬೃಹತ್ ಗಾತ್ರದ ಮರ ಟ್ರಾನ್ಸ್‌ಫಾರ್ಮರ್‌ ಮೇಲೆ ಬಿದ್ದು ರಾತ್ರಿ ಇಡೀ ವಿದ್ಯುತ್ ಕಟ್‌ ಆಗಿದೆ. ಜಯನಗರ ಸುತ್ತಮುತ್ತ ಸುಮಾರು ‌50ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಗಿರಿನಗರದಲ್ಲಿ ಮರ ಬಿದ್ದು ಕಾರು ಹಾಗೂ ದ್ವಿಚಕ್ರ ವಾಹನ ಸಂಪೂರ್ಣ ನಜ್ಜು ಗುಜ್ಜು ಆಗಿದೆ.

ಹಲವು ತಗ್ಗು ಪ್ರದೇಶಗಳಲ್ಲಿ ಮನೆಗಳು ಜಲಾವೃತಗೊಂಡವು. ಕೊತ್ತನೂರು ಭಾಗದಲ್ಲಿ ರಸ್ತೆ ಹಾಗೂ ಮನೆಗಳು ಪೂರ್ತಿ ಸಂಪೂರ್ಣ ಜಲಾವೃತವಾಗಿದೆ. ಮನೆಯೊಳಗೆ ನೀರು ತುಂಬಿ ಮನೆ ಮಾಲೀಕರು ಇಡೀ ರಾತ್ರಿ ಜಾಗರಣೆ ಮಾಡಿದರು. ಸುಮಾರು 60ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ತುಂಬಿದೆ. ನಗರದ 8 ವಲಯಗಳಲ್ಲಿ ಮನೆಗಳಿಗೆ ನೀರು ತುಂಬಿ ಅಕ್ಕಿ, ಬೇಳೆ ಸೇರಿದಂತೆ ಇತರೆ ವಸ್ತುಗಳು ಹಾಳಾಗಿವೆ. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಂತೆ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ.

Bangalore rain news

ರಸ್ತೆಯಲ್ಲಿ ನೀರು ನಿಂತಿದ್ದು ಒಂದು ತರಹದ ಸಮಸ್ಯೆಯಾದರೆ, ವಿದ್ಯುತ್ ಕಂಬಗಳದ್ದು ಮತ್ತೊಂದು ಸಮಸ್ಯೆ. ಕಂಬಗಳು ಮುರಿದು ಬಿದ್ದಿವೆ. ಉಮಾ ಥಿಯೇಟರ್ ಬಳಿ 4 ವಿದ್ಯುತ್ ಕಂಬಗಳು ಗಾಳಿಯಿಂದ ಅರ್ಧಂಬರ್ಧ ಬಿದ್ದಿವೆ. 4 ವಿದ್ಯುತ್ ಕಂಬಗಳ ವಯರ್ ರಸ್ತೆಯಲ್ಲಿ ಬಿದ್ದರೆ ವಾಹನ ಸವಾರರ ಜೀವಕ್ಕೆ ಹಾನಿ ಸಾಧ್ಯತೆ ಇದೆ. ಲಾಲ್‌ಬಾಗ್‌ನಲ್ಲಿ ಮರ ಬಿದ್ದು ಕಾಂಪೌಂಡ್ ಕುಸಿತವಾಗಿದೆ.

ನಿನ್ನೆ ಸುರಿದ ಮಳೆಗೆ ಬೆಳ್ಳಂದೂರಿನ ಗ್ರೀನ್ ಎಲಿಗೆನ್ಸ್ ಅಪಾರ್ಟ್ಮೆಂಟ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದ್ದು, ನಾಲ್ಕು ಕಾರು, ಬೈಕ್‌ಗಳು ಮುಳುಗಿವೆ. ರಾಜಕಾಲುವೆ ನೀರು ಅಪಾರ್ಟ್ಮೆಂಟ್‌ನೊಳಗೆ ನುಗ್ಗಿದೆ. ಕಳೆದ ಮೂರು ದಿನದಿಂದ ಅಪಾರ್ಟ್ಮೆಂಟ್‌ಗೆ ವಿದ್ಯುತ್‌ ಸಂಪರ್ಕ ಕಟ್‌ ಆಗಿದೆ. ನಿವಾಸಿಗಳು ಅಪಾರ್ಟ್ಮೆಂಟ್‌ನಲ್ಲೇ ಲಾಕ್ ಆಗಿದ್ದಾರೆ. ಅಪಾರ್ಟ್ಮೆಂಟ್ ಬೇಸ್‌ಮೆಂಟ್‌ನಿಂದಲೇ ಓಡಾಡಲು ದಾರಿ ಆಗಿರುವ ಕಾರಣ, ಕತ್ತಿನವರೆಗೆ ನಿಂತಿರುವ ನೀರಿನಲ್ಲಿ ಓಡಾಡಲಾಗದೆ 40 ಫ್ಲಾಟ್ ಮಾಲೀಕರು ಅಲ್ಲೇ ಬಾಕಿ ಆಗಿದ್ದಾರೆ. ಪಕ್ಕದ ಕಾಂಪೌಂಡ್‌ಗೆ ಏಣಿ ಹಾಕಿ ಓಡಾಟ ಮಾಡುತ್ತಿದ್ದಾರೆ.

ಇದನ್ನೂ ಓದಿ: Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Continue Reading

ಚಿಕ್ಕೋಡಿ

Chikkodi Lok Sabha Constituency: ಜೊಲ್ಲೆ vs ಜಾರಕಿಹೊಳಿ; ಯಾರಿಗೆ ಗೆಲುವಿನ ಹೋಳಿ?

Chikkodi Lok Sabha Constituency: ಎಂಬಿಎ ಪದವೀಧರೆ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದರೂ ಅಪ್ಪ ಸತೀಶ್‌ ಜಾರಕಿಹೊಳಿ ಅವರ ರಾಜಕೀಯ ಅನುಭವವು ಜತೆಗಿರಲಿದೆ. ಮತ್ತೊಂದೆಡೆ, ಅಣ್ಣಾಸಾಹೇಬ್‌ ಜೊಲ್ಲೆ ಅವರು ಭಿನ್ನಮತವನ್ನು ತಡೆದಿದ್ದು, ಮೋದಿ ಅವರ ಅಲೆ, ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇ ಅವರಿಗೆ ಸಕಾರಾತ್ಮಕವಾಗಲಿವೆ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದಾರೆ.

VISTARANEWS.COM


on

Chikkodi Lok Sabha Constituency
Koo

ಚಿಕ್ಕೋಡಿ: ಕಳೆದ ಎರಡು ದಶಕಗಳಿಂದ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ (Chikkodi Lok Sabha Constituency) ಬಿಜೆಪಿಯೇ ಪ್ರಾಬಲ್ಯ ಸಾಧಿಸಿದೆ. ಆದರೆ, ಈ ಬಾರಿ ಬಿಜೆಪಿಯ ಅಣ್ಣಾ ಸಾಹೇಬ್‌ ಜೊಲ್ಲೆ ಅವರಿಗೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಅವರನ್ನು ಎದುರಿಸುವ ಸವಾಲು ಎದುರಾಗಿದೆ. ಚುನಾವಣೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರಬಲ ಸ್ಪರ್ಧೆಯೊಡ್ಡಿರುವ ಕಾರಣ ಲೋಕಸಭೆ ಚುನಾವಣೆ ಫಲಿತಾಂಶವು ಕುತೂಹಲ ಕೆರಳಿಸಿದೆ.

ಹಾಲಿ ಸಂಸದರೂ ಆಗಿರುವ ಅಣ್ಣಾ ಸಾಹೇಬ್‌ ಜೊಲ್ಲೆ ಅವರಿಗೆ ಟಿಕೆಟ್‌ ತಪ್ಪಿಸಿ, ತಾವು ಟಿಕೆಟ್‌ ಗಿಟ್ಟಿಸಿಕೊಳ್ಳಲು ರಮೇಶ್‌ ಕತ್ತಿ ಅವರು ತಂತ್ರ ಹೆಣೆದರೂ ಅದು ಸಫಲವಾಗಿಲ್ಲ. ಬಳಿಕ ರಮೇಶ್‌ ಕತ್ತಿ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದರೂ, ಅದು ಸಫಲವಾಗಲಿಲ್ಲ. ಅಷ್ಟರಮಟ್ಟಿಗೆ, ಅಣ್ಣಾಸಾಹೇಬ್‌ ಜೊಲ್ಲೆ ಅವರು ಭಿನ್ನಮತವನ್ನು ತಡೆದಿದ್ದು, ಮೋದಿ ಅವರ ಅಲೆ, ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇ ಅವರಿಗೆ ಸಕಾರಾತ್ಮಕವಾಗಲಿವೆ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದಾರೆ. ಅಣ್ಣಾ ಸಾಹೇಬ್‌ ಜೊಲ್ಲೆ ಅವರ ಪತ್ನಿ ಶಶಿಕಲಾ ಜೊಲ್ಲೆ ಅವರು ಶಾಸಕಿ ಆಗಿರುವ ಕಾರಣ ಅವರ ಪ್ರಾಬಲ್ಯ ಜಾಸ್ತಿ ಇದೆ.

ಎಂಬಿಎ ಪದವೀಧರೆ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದರೂ ಅಪ್ಪ ಸತೀಶ್‌ ಜಾರಕಿಹೊಳಿ ಅವರ ರಾಜಕೀಯ ಅನುಭವವು ಜತೆಗಿರಲಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಅಪ್ಪನ ಗೆಲುವಾಗಿ ಓಡಾಟ ನಡೆಸಿದ್ದಾರೆ. ಇನ್ನು, ಚಿಕ್ಕೋಡಿಯಲ್ಲಿ ಲಿಂಗಾಯತ ಸಮುದಾದಯವರ ಮತಗಳೇ ನಿರ್ಣಾಯಕವಾಗವೆ. ಸುಮಾರು 4.10 ಲಕ್ಷ ಲಿಂಗಾಯತ ಮತಗಳಿದ್ದು, ಪರಿಶಿಷ್ಟ ಜಾತಿ 1.65 ಲಕ್ಷ, ಪರಿಶಿಷ್ಟ ಪಂಗಡ 9೦, ಮುಸ್ಲಿಮರ 1.80 ಲಕ್ಷ ಮತಗಳು ಕೂಡ ನಿರ್ಣಾಯಕವಾಗಿವೆ.

ಮತದಾರರ ಸಂಖ್ಯೆ

ಪುರುಷರು8.71 ಲಕ್ಷ
ಮಹಿಳೆಯರು8.58 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು75
ಒಟ್ಟು17.30 ಲಕ್ಷ

2019, 2014ರ ಫಲಿತಾಂಶ ಏನಾಗಿತ್ತು?

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಅಣ್ಣಾ ಸಾಹೇಬ್‌ ಜೊಲ್ಲೆ ಅವರು ಪ್ರಕಾಶ್‌ ಹುಕ್ಕೇರಿ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಆದರೆ, 2014ರಲ್ಲಿ ನರೇಂದ್ರ ಮೋದಿ ಅವರ ಅಲೆಯ ಮಧ್ಯೆಯೂ ಕಾಂಗ್ರೆಸ್‌ನ ಪ್ರಕಾಶ್‌ ಹುಕ್ಕೇರಿ ಅವರು ಬಿಜೆಪಿಯ ರಮೇಶ್‌ ಕತ್ತಿ ವಿರುದ್ಧ ಗೆಲುವು ಸಾಧಿಸಿದ್ದರು. ಇನ್ನು 2009ರಲ್ಲಿ ರಮೇಶ್‌ ಕತ್ತಿ, 2004ರಲ್ಲಿ ರಮೇಶ್‌ ಜಿಗಜಿಣಗಿ ಅವರು ಚಿಕ್ಕೋಡಿ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: Lok Sabha Election: ಕಲಬುರಗಿ ಲೋಕಸಭೆ ಕ್ಷೇತ್ರ: ಖರ್ಗೆ ಅಳಿಯ Vs ಜಾಧವ್;‌ ಯಾರಿಗೆ ಗೆಲುವಿನ ಸಿಹಿ?

Continue Reading

ಬೆಳಗಾವಿ

Belagavi Lok Sabha Constituency: ಶೆಟ್ಟರ್‌ ವರ್ಸಸ್‌ ಹೆಬ್ಬಾಳ್ಕರ್‌; ಯಾರಿಗೆ ಬೆಳಗಾವಿ ಕುಂದಾ?

Belagavi Lok Sabha Constituency: ಯುವ ನಾಯಕತ್ವ, ಸುರೇಶ್‌ ಅಂಗಡಿ ಕುಟುಂಬದ ಪ್ರಾಬಲ್ಯ ಇಲ್ಲದಿರುವುದು, ಗ್ಯಾರಂಟಿ ಯೋಜನೆಗಳು ಸೇರಿ ಹಲವು ಅಂಶಗಳು ಮೃಣಾಲ್‌ ಹೆಬ್ಬಾಳ್ಕರ್‌ ಅವರಿಗೆ ಸಕಾರಾತ್ಮಕವಾಗಿವೆ ಎಂಬುದಾಗಿ ತಿಳಿದುಬಂದಿದೆ. ಆದರೆ, ಸುರೇಶ್‌ ಅಂಗಡಿಯವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದು, ನಂತರ ಮಂಗಲಾ ಅಂಗಡಿಯವರು ಕೂಡ ಗೆದ್ದಿದ್ದು, ಆ ಮೂಲಕ ಬಿಜೆಪಿ ಬೇರುಗಳನ್ನು ಗಟ್ಟಿಗೊಳಿಸಿದ್ದು ಮೃಣಾಲ್‌ಗೆ ಕುತ್ತಾಗುವ ಸಾಧ್ಯತೆ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

Belagavi Lok Sabha Constituency
Koo

ಬೆಳಗಾವಿ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬೆಳಗಾವಿ ಲೋಕಸಭೆ ಚುನಾವಣೆ ಕ್ಷೇತ್ರದ (Belagavi Lok Sabha Constituency) ಚುನಾವಣೆಯು ಈ ಬಾರಿ ಭಾರಿ ಕುತೂಹಲ ಕೆರಳಿಸಿದೆ. ಬಿಜೆಪಿ ಭದ್ರಕೋಟೆಯೇ ಆಗಿರುವ ಬೆಳಗಾವಿಯಲ್ಲಿ ಈ ಬಾರಿ ಬಿಜೆಪಿಯಿಂದ ಜಗದೀಶ್‌ ಶೆಟ್ಟರ್‌ (Jagadish Shettar) ಕಣಕ್ಕಿಳಿದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ (Mrinal Hebbalkar) ಸ್ಪರ್ಧಿಸಿದ್ದಾರೆ. ಹಾಗಾಗಿ, ಬೆಳಗಾವಿ ಲೋಕಸಭೆ ಕ್ಷೇತ್ರವು ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿದೆ.

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ಗೆ ತೆರಳಿ, ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ವಾಪಸಾದ ಜಗದೀಶ್‌ ಶೆಟ್ಟರ್‌ ಅವರು ಸ್ಥಳೀಯ ನಾಯಕರ ವಿಶ್ವಾಸ ಗಳಿಸುವುದು, ಕಾರ್ಯಕರ್ತರಿಗೆ ಬಲ ತುಂಬುದು, ಮೋದಿ ಅವರ ಅಲೆಯನ್ನು ಸದುಪಯೋಗ ಮಾಡಿಕೊಳ್ಳುವುದು ಸೇರಿ ಹಲವು ತಂತ್ರಗಳನ್ನು ಹೂಡಿದ್ದರು. ಇನ್ನು ಮಂಗಲಾ ಸುರೇಶ್‌ ಅಂಗಡಿಯವರು ಜಗದೀಶ್‌ ಶೆಟ್ಟರ್‌ ಅವರಿಗೆ ಸಂಬಂಧಿಯಾದ ಕಾರಣ ಅಷ್ಟೇನೂ ಹೊರಗಿನವರು ಎಂಬ ಭಾವನೆ ಇಲ್ಲ. ಇನ್ನು, ಜಗದೀಶ್‌ ಶೆಟ್ಟರ್‌ ಅವರು ಎರಡು ಬಾರಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಹಾಗಾಗಿ, ಬೆಳಗಾವಿಯಲ್ಲಿ ಜಗದೀಶ್‌ ಶೆಟ್ಟರ್‌ ಪರ ಒಲವಿದೆ ಎಂದೇ ಹೇಳಲಾಗುತ್ತಿದೆ.

Jagadish Shettar

ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮಗನನ್ನು ಕಣಕ್ಕಿಳಿಸಿ, ಮಗನಿಗಿಂತ ಹೆಚ್ಚಾಗಿ ಅವರೇ ಪ್ರಚಾರ ಕೈಗೊಂಡಿದ್ದಾರೆ. ಯುವ ನಾಯಕತ್ವ, ಸುರೇಶ್‌ ಅಂಗಡಿ ಕುಟುಂಬದ ಪ್ರಾಬಲ್ಯ ಇಲ್ಲದಿರುವುದು, ಗ್ಯಾರಂಟಿ ಯೋಜನೆಗಳು ಸೇರಿ ಹಲವು ಅಂಶಗಳು ಮೃಣಾಲ್‌ ಹೆಬ್ಬಾಳ್ಕರ್‌ ಅವರಿಗೆ ಸಕಾರಾತ್ಮಕವಾಗಿವೆ ಎಂಬುದಾಗಿ ತಿಳಿದುಬಂದಿದೆ. ಆದರೆ, ಸುರೇಶ್‌ ಅಂಗಡಿಯವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದು, ನಂತರ ಮಂಗಲಾ ಅಂಗಡಿಯವರು ಕೂಡ ಗೆದ್ದಿದ್ದು, ಆ ಮೂಲಕ ಬಿಜೆಪಿ ಬೇರುಗಳನ್ನು ಗಟ್ಟಿಗೊಳಿಸಿದ್ದು ಮೃಣಾಲ್‌ಗೆ ಕುತ್ತಾಗುವ ಸಾಧ್ಯತೆ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಹಿಂದಿನ ಚುನಾವಣೆ ಫಲಿತಾಂಶ ಏನಾಗಿತ್ತು?

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸುರೇಶ್‌ ಅಂಗಡಿ ಅವರು ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಸಾರ್ವತ್ರಿಕ ಚುನಾವಣೆಯಲ್ಲಿಯೂ ಸುರೇಶ್ ಅಂಗಡಿ ಅವರು ಕಾಂಗ್ರೆಸ್‌ನ ವಿರೂಪಾಕ್ಷಿ ಸಾಧುಣ್ಣವರ್‌ ವಿರುದ್ಧ ಗೆಲುವು ಸಾಧಿಸುವ ಜತೆಗೆ ಕೇಂದ್ರದಲ್ಲಿ ಸಚಿವರೂ ಆಗಿದ್ದರು. ಆದರೆ, ಸುರೇಶ್‌ ಅಂಗಡಿಯವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ 2021ರಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಿತು. ಆಗ, ಸುರೇಶ್‌ ಅಂಗಡಿ ಅವರ ಪತ್ನಿ ಮಂಗಲಾ ಸುರೇಶ್‌ ಅಂಗಡಿ ಅವರು ಸತೀಶ್‌ ಜಾರಕಿಹೊಳಿ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Continue Reading

ಮಳೆ

Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು (Bengaluru rains) ಸೇರಿದಂತೆ ದಕ್ಷಿಣ ಕರ್ನಾಟಕಕ್ಕೆ ಅಧಿಕೃತವಾಗಿ ಮುಂಗಾರು (monsoon rain) ಆವರಿಸಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯಾದ್ಯಂತ ಸೋಮವಾರದಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ (Bengaluru rains) ಶನಿವಾರ- ಭಾನುವಾರ ಅಬ್ಬರಿಸಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದು ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಗಾಳಿಯೊಂದಿಗೆ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

karnataka Weather Forecast

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಇದರ ಪ್ರಭಾವದಿಂದಾಗಿ ಜೂನ್‌ 7ರ ವರೆಗೆ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಉಳಿದಂತೆ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲೂ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಗುಡುಗು, ಮಿಂಚು ಸಂಭವವಿದೆ. ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

ಈ ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಗಾಳಿ ವೇಗವು ಗಂಟೆಗೆ 30-40ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
bangalore rain news
ಪ್ರಮುಖ ಸುದ್ದಿ15 mins ago

Bangalore Rain News: ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

Chikkodi Lok Sabha Constituency
ಚಿಕ್ಕೋಡಿ24 mins ago

Chikkodi Lok Sabha Constituency: ಜೊಲ್ಲೆ vs ಜಾರಕಿಹೊಳಿ; ಯಾರಿಗೆ ಗೆಲುವಿನ ಹೋಳಿ?

Toll Fee Hike
ದೇಶ30 mins ago

Toll Fee Hike: ವಾಹನ ಸವಾರರಿಗೆ ಮತ್ತೆ ಸುಂಕದ ಬರೆ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ

road accident tractor
ಪ್ರಮುಖ ಸುದ್ದಿ57 mins ago

Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್‌ ಪಲ್ಟಿಯಾಗಿ 13 ಸಾವು, ರಾಷ್ಟ್ರಪತಿ ಸಂತಾಪ

Belagavi Lok Sabha Constituency
ಬೆಳಗಾವಿ1 hour ago

Belagavi Lok Sabha Constituency: ಶೆಟ್ಟರ್‌ ವರ್ಸಸ್‌ ಹೆಬ್ಬಾಳ್ಕರ್‌; ಯಾರಿಗೆ ಬೆಳಗಾವಿ ಕುಂದಾ?

Sweating And Body Odor
ಆರೋಗ್ಯ1 hour ago

Sweating And Body Odor: ಅತಿಯಾಗಿ ಬೆವರುತ್ತಿದ್ದೀರಾ? ಈ ಆಹಾರಗಳು ನಿಮ್ಮ ಬೆವರ ದುರ್ಗಂಧಕ್ಕೆ ಮುಖ್ಯ ಕಾರಣ!

karnataka Weather Forecast
ಮಳೆ2 hours ago

Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Hassan Lok Sabha Constituency
ಪ್ರಮುಖ ಸುದ್ದಿ2 hours ago

Hassan Lok Sabha Constituency : ಅತ್ಯಾಚಾರ ಆರೋಪಿ ಪ್ರಜ್ವಲ್​ ರೇವಣ್ಣ ಹಾಸನದಲ್ಲಿ ಮತ್ತೆ ಗೆಲ್ಲುವರೇ?

Ways To Stay Young
ಲೈಫ್‌ಸ್ಟೈಲ್2 hours ago

Ways To Stay Young: ಸಮುದ್ರದಾಳದಲ್ಲಿ ದಿನ ಕಳೆದರೆ ಇಳಿ ವಯಸ್ಸಲ್ಲೂ ಯೌವನ ಮರಳಿ ಬರುತ್ತದೆ!

Tattoo Care
ಆರೋಗ್ಯ3 hours ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌