ಕುರಿದೊಡ್ಡಿಗೆ ದುಷ್ಕರ್ಮಿಗಳಿಂದ ಬೆಂಕಿ: ಹೊತ್ತಿ ಉರಿದ ಶೆಡ್! - Vistara News

ಚಾಮರಾಜನಗರ

ಕುರಿದೊಡ್ಡಿಗೆ ದುಷ್ಕರ್ಮಿಗಳಿಂದ ಬೆಂಕಿ: ಹೊತ್ತಿ ಉರಿದ ಶೆಡ್!

ವೃದ್ಧೆಯೊಬ್ಬರಿಗೆ ಸೇರಿದ ಕುರಿದೊಡ್ಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಕುರಿಮರಿಗಳು ಸುಟ್ಟು ಕರಕಲಾಗಿವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಇಲ್ಲಿನ ಕೋಡಿಉಗನೆ ಗ್ರಾಮದಲ್ಲಿ ರಾತ್ರಿ 1.30ರ ಸುಮಾರಿಗೆ ದುಷ್ಕರ್ಮಿಗಳು ಕುರಿದೊಡ್ಡಿಗೆ ಬೆಂಕಿ ಹಚ್ಚಿದ ಪರಿಣಾಮ ಸುಮಾರು 35ಕ್ಕೂ ಹೆಚ್ಚು ಕುರಿ ಮರಿಗಳು ಸುಟ್ಟು ಕರಕಲಾಗಿವೆ.

ರಂಗಮ್ಮ ಎಂಬ ವೃದ್ಧೆಯೊಬ್ಬರಿಗೆ ಸೇರಿದ ಕುರಿಗಳಾಗಿದ್ದು, ಅಜ್ಜಿ ರಂಗಮ್ಮ ಇದರಿಂದಲೇ ಜೀವನ ಸಾಗಿಸುತ್ತಿದ್ದರು. ಬೆಂದು ಕರಕಲಾಗಿರುವ ಕುರಿಗಳನ್ನು ನೋಡಿ ಅಜ್ಜಿ ಕಣ್ಣೀರು ಹಾಕುತ್ತಿದ್ದಾರೆ. ಮಹದೇವಸ್ವಾಮಿ ಎಂಬುವರಿಗೆ ಸೇರಿರುವ 30ಕ್ಕೂ ಹೆಚ್ಚು ಕುರಿಗಳು ಭಸ್ಮ ಆಗಿವೆ.

ಬೆಂಕಿ ಕಂಡ ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಅವರು ಬಂದು ಬೆಂಕಿ ಆರಿಸುವಷ್ಟರಲ್ಲಿ ಕುರಿಗಳು ಸುಟ್ಟು ಕರಕಲಾಗಿದ್ದಲ್ಲದೆ, ಅಪಾರ ಪ್ರಮಾಣದಲ್ಲಿ ನಷ್ಟಗಳಾಗಿವೆ. ಸ್ಥಳಕ್ಕೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆನಂದ್ ಭೇಟೆ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ| ಯಾದಗಿರಿಯಲ್ಲಿ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ಪ್ರಕರಣ, ಮತ್ತಿಬ್ಬರ ಮರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Rain News: ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಶುಕ್ರವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಜತೆಗೆ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

ತಾಪಮಾನದ ಮುನ್ಸೂಚನೆ

ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಹೆಚ್ಚಿನ ಬಡಲಾವಣೆ ಇರುವುದಿಲ್ಲ. ನಂತರದ 3 ದಿನಗಳವರೆಗೆ ಕ್ರಮೇಣ 2-3 ಡಿ.ಸೆ ಏರಿಕೆಯಾಗುತ್ತದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಸಂಜೆ/ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Karnataka Weather : ಹಲವೆಡೆ ಗುಡುಗು ಸಿಡಿಲು ಸಹಿತ (Rain News) ಭಾರಿ ಮಳೆಯಾಗಿದ್ದು, ಸಾವು-ನೋವಿಗೆ ಕಾರಣವಾಗಿದೆ. ಸಿಡಿಲು ಬಡಿದು ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟರೆ, ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

VISTARANEWS.COM


on

By

Karnataka Weather
Koo

ಕೊಪ್ಪಳ: ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು (Rain News) ಬಲಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ಘಟನೆ (Karnataka Weather Forecast) ನಡೆದಿದೆ. ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ.

ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು. ಗುರುವಾರ ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗನಲ್ಲೂ ಬಿರುಗಾಳಿ ಸಹಿತ ಮಳೆ

ಮುಂಗಾರಿಗೂ ಮುನ್ನ ಗದಗ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ ಜೋರಾಗಿದೆ. ಬಿರುಗಾಳಿ ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿ‌‌ನ ಪರಸಾಪೂರ ಬಳಿ ಘಟನೆ ನಡೆದಿದೆ. ರಸ್ತೆ ಮೇಲೆ ಮರ ಹಾಗೂ ವಿದ್ಯುತ್‌ ಕಂಬ ಧರೆಗುರುಳಿದ ಕಾರಣದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಸ್ಥಳೀಯರ ಸಹಾಯದಿಂದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರಕ್ಕೆ‌ ಅನುಕೂಲ ಮಾಡಿಕೊಡಲಾಯಿತು.

ಇದನ್ನೂ ಓದಿ: Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಧಾರವಾಡದ ಕಲಘಟಗಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಕಲಘಟಗಿಯ ದೇವರಕೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರಗೌಡ ಶಿವನಗೌಡರ ಎಂಬುವರ ಮನೆಯ ಮುಂದಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಸಮಯದಲ್ಲಿ ಮನೆ ಮುಂದೆ ಅಕ್ಕ-ಪಕ್ಕ ಯಾರು ಇರಲಿಲ್ಲ. ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.

ಮತ್ತೊಂದೆಡೆ ಧಾರವಾಡದ ಅಣ್ಣಿಗೇರಿಯ ರಾಜರಾಜೇಶ್ವರಿ ನಗರದಲ್ಲೂ ಮನೆಯ ಪಕ್ಕದಲ್ಲಿಯೇ ಇದ್ದ ಮರಕ್ಕೆ ಸಿಡಿಲು ಬಡಿದ ಪರಿಣಾಮ ಹೊತ್ತಿ ಉರಿದಿತ್ತು. ಮರಕ್ಕೆ ಬೆಂಕಿ ಆವರಿಸುತ್ತಿದಂತೆಯೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದರು.

ಧಾರವಾಡದಲ್ಲಿ ಆಲಿಕಲ್ಲು ಮಳೆ

ಧಾರವಾಡ ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆಯಾಗಿದೆ. ನಗರದಲ್ಲಿ ಮಧ್ಯಾಹ್ನದವರೆಗೆ ಉರಿ ಬಿಸಿಲು ಇತ್ತು, ನಂತರ ಸಂಪೂರ್ಣ ಮೋಡ ಕವಿದ ವಾತಾವರಣದೊಂದಿಗೆ ಮಳೆಯು ಅಬ್ಬರಿಸಿತ್ತು. ವಿಜಯನಗರದ ನಾನಾ ಕಡೆ ಮಳೆರಾಯ ಕೃಪೆ ತೋರಿದ್ದಾನೆ. ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಹೊಸಪೇಟೆಯ ಮರಿಯಮ್ಮನಹಳ್ಳಿ, ದೇವಲಾಪುರ ಸೇರಿದಂತೆ ನಾನಾ ಕಡೆ ಉತ್ತಮ ಮಳೆಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಸಿಡಿಲು ಗುಡುಗು ಗಾಳಿ ಸಹಿತ ಭಾರೀ ಮಳೆಗೆ ಮರಗಳು ಉರುಳಿದವು. ಬಿರುಗಾಳಿಗೆ ಹಾಲಸ್ವಾಮಿ ಮಠದ ಬಳಿ, ಯಲ್ಲಾಪುರ ರಸ್ತೆ ಮೇಲೆ ಮರ ನೆಲಕ್ಕೆ ಉರುಳಿ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ತಾಲೂಕು ಪಂ. ಆವರಣದಲ್ಲಿ ಎರಡು ಮರಗಳು ಕಳಚಿ ಬಿದ್ದಿತ್ತು. ಮಂಡ್ಯದ ಮಳವಳ್ಳಿಯ ಕೆಆರ್ ಪೇಟೆಯಲ್ಲಿ ಮೊದಲ ಮಳೆಯಾಗಿದೆ. ಸಿಡಿಲು ಬಡಿದ ಪರಿಣಾಮ ಬೃಹತ್ ಕಲ್ಲೊಂದು ಕಾರಿನ ಮೇಲೆ ಬಿದ್ದು, ಜಖಂಗೊಂಡಿರುವ ಘಟನೆ ವಿಜಯಪುರ ನಗರದ ಜೆಎಂ ರಸ್ತೆಯಲ್ಲಿ ನಡೆದಿದೆ.‌ ಮಹತ್ತರ ಮಹಲ್‌ನ ಗೋಡೆಯ ಬೃಹತ್ ಕಲ್ಲು ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಭಾರಿ ಮಳೆ, ಗಾಳಿಯ ವೇಳೆ ಸಿಡಿಲು ಬಡಿದು ಈ ಅವಘಡ ಆಗಿದೆ. ಗೋಳಗುಮ್ಮಟ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಭಾರಿ ಮಳೆ ಮುನ್ಸೂಚನೆ

ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಗುಲ್ಬರ್ಗ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಭಸವಾದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ; ಇನ್ನೊಂದು ವಾರ ಈ ಜಿಲ್ಲೆಗಳಿಗೆ ಅಲರ್ಟ್‌

Rain News : ಈ ವಾರ ಪೂರ್ತಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಆದರೆ ಕರಾವಳಿಯಲ್ಲಿ ಬಿಸಿ ಹಾಗೂ ಆರ್ದ್ರತೆ ವಾತಾವರಣ ಮೇಲುಗೈ ಸಾಧಿಸಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ. ಇತ್ತ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಮಳೆಯಾಗಬಹುದು.

ಬೆಂಗಳೂರು ಸೇರಿ ಹಲವೆಡೆ ಒಣ ಹವೆ

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಆಕಾಶವು ನಿರ್ಮಲವಾಗಿರಲಿದೆ. ಯಾವುದೇ ಮಳೆಯಾಗುವ ಮುನ್ಸೂಚನೆ ಇಲ್ಲ.

ಹೀಟ್‌ ವೇವ್‌ ಅಲರ್ಟ್‌

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹವಾಮಾನದ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಖ್ಯವಾಗಿ ಏಪ್ರಿಲ್ 18 ರಿಂದ 20 ರವರೆಗೆ ಇದೇ ಹವಾಮಾನ ಇರಲಿದೆ.

ಬಿರುಗಾಳಿ ಎಚ್ಚರಿಕೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಬಂತು ತಂಪೆರೆಯುವ ವಾಟರ್‌ಫಾಲ್‌ ಇಯರಿಂಗ್ಸ್‌


ಈ ಸೀಸನ್‌ನ ಸಮ್ಮರ್‌ ಫ್ಯಾಷನ್‌ನಲ್ಲಿ (Summer Fashion) ಇದೀಗ ತಂಪೆರೆಯುವ ವಾಟರ್‌ ಫಾಲ್‌ ಇಯರಿಂಗ್‌ಗಳು ಟ್ರೆಂಡಿಯಾಗಿವೆ. ಮೇಲಿನಿಂದ ಕೆಳಗೆ ಇಳಿಯುವ ಜಲಧಾರೆಯಂತೆ ಕಾಣಿಸುವ ಕ್ರಿಸ್ಟಲ್‌ ಅಥವಾ ಅಮೆರಿಕನ್‌ ಡೈಮಂಡ್‌ ಹೊಂದಿರುವ ಈ ಇಯರಿಂಗ್ಸ್‌ ಸದ್ಯ ಹುಡುಗಿಯರ ಫೇವರೇಟ್‌ ಆಕ್ಸೆಸರೀಸ್‌ ಲಿಸ್ಟ್‌ಗೆ ಸೇರಿವೆ.

Summer Fashion

ಏನಿದು ವಾಟರ್ಫಾಲ್‌ ಇಯರಿಂಗ್ಸ್‌ ?

ನೋಡಲು ಥೇಟ್‌ ಜಲಪಾತದಂತೆ ಕಾಣಿಸುವ ಈ ಹ್ಯಾಂಗಿಂಗ್ಸ್‌ನಂತಹ ಕಿವಿಯೊಲೆಗಳು ನೋಡಲು ವಾಟರ್‌ಫಾಲ್‌ನಂತೆ ಕಾಣುತ್ತವೆ. ಹಾಗಾಗಿ ಇವನ್ನು ವಾಟರ್‌ಫಾಲ್‌ ಇಯರಿಂಗ್ಸ್‌ ಎನ್ನಲಾಗುತ್ತದೆ. ಕಿವಿಗೆ ಧರಿಸಿದಾಗ ಇಳೆ ಬೀಳುವ ಲೇಯರ್‌ನಂತಹ ಕ್ರಿಸ್ಟಲ್‌ ಸರಪಳಿಗಳು ವಾಟರ್‌ಫಾಲ್‌ನಂತೆ ಕಾಣಿಸುತ್ತವೆ. ಈ ವಿನ್ಯಾಸದಲ್ಲೆ ಇದೀಗ ಸಾಕಷ್ಟು ಡಿಸೈನ್‌ನವು ಆಕ್ಸೆಸರೀಸ್‌ ಲೋಕಕ್ಕೆ ಬಂದಿವೆ. ಮೈಕ್ರೋ ಕ್ರಿಸ್ಟಲ್ಸ್‌ ಅಂದರೇ, ಅಮೆರಿಕನ್‌ ಡೈಮಂಡ್‌ ಅಥವಾ ಆರ್ಟಿಫಿಷಿಯಲ್‌ ಅಮೆರಿಕನ್‌ ಡೈಮಂಡ್‌ ಹೊಂದಿರುವ ನಾಲ್ಕೈದು ಲೇಯರ್‌ ಹೊಂದಿರುವಂತಹ ಇಳೆ ಬೀಳುವಂತಹ ಇಯರಿಂಗ್‌ಗಳು ವೈಟ್‌ ಶೇಡ್‌ನಲ್ಲಿ ಲಭ್ಯ. ಇದೀಗ ಪಾಸ್ಟೆಲ್‌ ಶೇಡ್‌ಗಳಲ್ಲೂ ದೊರಕುತ್ತಿವೆ. ಲೈಟ್‌ ಪಿಂಕ್‌, ಪೀಚ್‌, ಬೀಚ್‌ ಬ್ಲ್ಯೂ, ಸ್ಕೈ ಬ್ಲ್ಯೂ, ಪಿಸ್ತಾ ಗ್ರೀನ್‌ ಶೇಡ್‌ನವು ಹೆಚ್ಚು ಪಾಪುಲರ್‌ ಆಗಿವೆ. ಹುಡುಗಿಯರನ್ನು ಸೆಳೆದಿವೆ.

Summer Fashion

ಪಾರ್ಟಿವೇರ್‌ ಆಕ್ಸೆಸರೀಸ್‌

ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಗೆ ಸೇರುವ ಈ ವಾಟರ್‌ ಫಾಲ್‌ ಇಯರಿಂಗ್‌ಗಳು ಕೆಲವು ಮೇಲ್ಭಾಗದಲ್ಲಿ ಬಿಗ್‌ ಸ್ಟೋನ್‌ ಅಥವಾ ಕಲರ್‌ಫುಲ್‌ ಇಮಿಟೇಡ್‌ ಸ್ಟೋನ್ಸ್‌ ಹೊಂದಿರುತ್ತವೆ. ಇಲ್ಲವೇ ಬೀಡ್ಸ್‌ ಅಥವಾ ಪರ್ಲ್‌ ಹೊಂದಿರುತ್ತವೆ. ಅದರ ಕೆಳಗೆ ಸುಮಾರು ನಾಲ್ಕೈದು ಇಂಚಿನಷ್ಟು ಉದ್ದದ ಹ್ಯಾಂಗಿಂಗ್‌ ಡಿಸೈನ್‌ ಹೊಂದಿರುತ್ತವೆ. ಕೆಲವು ಒಂದೇ ಸಮನಾಗಿ ಇದ್ದರೇ, ಇನ್ನು ಕೆಲವು ಆಸೆಮ್ಮಿಟ್ರಿಕಲ್‌ ಲೆಂಥ್‌ ಹೊಂದಿರುತ್ತವೆ. ಇವು ಇದೀಗ ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಯಲ್ಲಿ ಟಾಪ್‌ ಲಿಸ್ಟ್‌ನಲ್ಲಿವೆ. ಇವುಗಳ ವಿಶೇಷತೆಯೇಂದರೇ, ಯಾವುದೇ ಬಗೆಯ ಶಿಮ್ಮರ್‌ ಅಥವಾ ಶೈನಿಂಗ್‌ ಫ್ಯಾಬ್ರಿಕ್‌ನ ಪಾರ್ಟಿವೇರ್‌ ಔಟ್‌ಫಿಟ್‌ನೊಂದಿಗೆ ಇವನ್ನು ಧರಿಸಬಹುದು. ಎಲ್ಲವಕ್ಕೂ ಇವು ಮ್ಯಾಚ್‌ ಆಗುತ್ತವೆ. ಎಲ್ಲದಕ್ಕಿಂತ ಹೆಚ್ಚಾಗಿ ಇಡೀ ಮುಖವನ್ನು ಹೈ ಲೈಟ್‌ ಮಾಡುತ್ತವೆ. ಮಿರುಗುತ್ತವೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

Summer Fashion

ವಾಟರ್‌ ಫಾಲ್‌ ಕ್ಲಾಸಿ ಲುಕ್‌

“ಶಿಮ್ಮರ್‌ ಔಟ್‌ಫಿಟ್‌ಗಳಿಗೆ ಈ ವಾಟರ್‌ಫಾಲ್‌ ಇಯರಿಂಗ್‌ಗಳು ಹೇಳಿ ಮಾಡಿಸಿದಂತಿರುತ್ತವೆ. ಕಿವಿ ಮಾತ್ರವಲ್ಲ, ಇಡೀ ಲುಕ್‌ಗೆ ಇವು ಸಾಥ್‌ ನೀಡುತ್ತವೆ. ಆಕರ್ಷಕವಾಗಿ ಕಾಣಿಸುತ್ತವೆ. ಕ್ಲಾಸಿ ಲುಕ್‌ ನೀಡುವುದರೊಂದಿಗೆ ಸೆಲೆಬ್ರೆಟಿ ಇಮೇಜ್‌ ನೀಡುತ್ತವೆ” ಎನ್ನುತ್ತಾರೆ ಜ್ಯುವೆಲ್‌ ಡಿಸೈನರ್‌ ರೀಟಾ. ಅವರ ಪ್ರಕಾರ, ಯುವತಿಯರು ಮಾತ್ರವಲ್ಲ, ಎಲ್ಲಾ ವಯಸ್ಸಿನ ಮಹಿಳೆಯರು ಧರಿಸುವುದು ಹೆಚ್ಚಾಗಿದೆ.

Summer Fashion

ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಹೀಗಿರಲಿ

  • ಶಿಮ್ಮರ್‌ ಡಿಸೈನರ್‌ವೇರ್‌ ಶೇಡ್ಸ್‌ಗೆ ತಕ್ಕಂತೆ ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಮಾಡಿ.
  • ಪಾಸ್ಟೆಲ್‌ ಶೇಡ್‌ ಡಿಸೈನ್‌ನವು ಟ್ರೆಂಡ್‌ನಲ್ಲಿವೆ.
  • ಆದಷ್ಟೂ ಮಿನುಗುವಂತವನ್ನು ಸೆಲೆಕ್ಟ್‌ ಮಾಡಿ.
  • ಶೋಲ್ಡರ್‌ ತನಕ ನೇತಾಡುವಂತವು ಇದೀಗ ಜೆನ್‌ ಜಿ ಹುಡುಗಿಯರನ್ನು ಸೆಳೆದಿವೆ.
  • ನಾಲ್ಕೈದು ಎಳೆ ಎಳೆಯಾಗಿರುವಂತವನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

Karnataka Weather : ಬರಗಾಲದಿಂದ ತತ್ತರಿಸಿರುವ ಜನತೆಗೆ ಮುಂಗಾರು ಮಳೆಯು ವರವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇದರ ಮಧ್ಯೆ ಈ ವಾರ ಪೂರ್ತಿ ಗುಡುಗು ಸಹಿತ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಮಳೆ ಸೂಚನೆ ಇದೆ ಇಲ್ಲಿದೆ ಮಾಹಿತಿ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಳೆ ಕಾಣದೆ ಕಂಗೆಟ್ಟಿದ್ದ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆಯು (Karnataka Weather Forecast) ದೀರ್ಘಕಾಲಿನ ಮುಂಗಾರು ಮಳೆ ಕುರಿತು ಗುಡ್ ನ್ಯೂಸ್ ನೀಡಿದೆ. ಈ ಬಾರಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯಲ್ಲಿ ಕರ್ನಾಟಕ ಸೇರಿದಂತೆ ನೈರುತ್ಯ ಭಾರತದಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯಕ್ಕೆ ಮುಂಗಾರು ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ಸರಾಸರಿ ವಾಡಿಕೆ ಮಳೆ ಪ್ರಮಾಣ 85.2 ಸೆ.ಮೀ ರಷ್ಟಿದೆ. ದೀರ್ಘಾಕಾಲಿನ ಮುಂಗಾರು ಮಳೆ ಮುನ್ಸೂಚನೆ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದೀರ್ಘಾವಧಿ ಸರಾಸರಿ ವಾಡಿಕೆ ಮಳೆ ಜೂನ್‌ನಲ್ಲಿ 19.9 ಸೆಂ.ಮೀ, ಜುಲೈನಲ್ಲಿ 27.1 ಸೆಂ.ಮೀ. ಆಗಸ್ಟ್‌ನಲ್ಲಿ 22 ಸೆಂ.ಮೀ ಹಾಗೂ ಸೆಪ್ಟೆಂಬರ್‌ನಲ್ಲಿ 16.1 ಸೆಂ.ಮೀ ನಷ್ಟಿದ್ದು ಒಟ್ಟಾರೆ ರಾಜ್ಯಕ್ಕೆ ಮುಂಗಾರು ಹಂಗಾಮಿನಲ್ಲಿ 85.2 ಸೆಂ.ಮೀ ನಷ್ಟಿದೆ.

2024ರ ಜೂನ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಾದ್ಯಂತ ದೀರ್ಘಾವಧಿ ಸರಾಸರಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಶೇಕಡಾ 5ರಷ್ಟು ವ್ಯತ್ಯಯದೊಂದಿಗೆ ಶೇಕಡಾ 106 ರಷ್ಟು ವಾಡಿಕೆಗಿಂತಾ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ಕಳೆದ 1971-2020ರ ಸರಾಸರಿ ವಾಡಿಕೆ ಮಳೆ ಪ್ರಮಾಣ 87 ಸೆಂ.ಮೀ ನಷ್ಟಿದೆ . ಮುಂಗಾರು ಮಳೆ ಮುನ್ಸೂಚನೆ ಅನ್ವಯ ದೇಶದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿ ಸರಾಸರಿ ಶೇ. 104-110ರಷ್ಟು ಇರಲಿದೆ.

ಇದನ್ನೂ ಓದಿ: Physical Abuse : ಇವನೆಂಥ ಗಂಡ! ಕಾಲ್‌ ಗರ್ಲ್‌ ಕರೆಸಿ ಪತ್ನಿ ಮುಂದೆಯೇ ಅಸಭ್ಯ ವರ್ತನೆ

ಇನ್ನೊಂದು ವಾರ ಮಳೆ ಅಬ್ಬರ

ನಾಳೆಯಿಂದ ಅಂದರೆ ಏಪ್ರಿಲ್‌ 17 ರಿಂದ 22ರವರೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಇದೆ. ರಾಜ್ಯಾದ್ಯಂತ ಬುಧವಾರದಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರುಗಿ ಹಾಗೂ ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಯಾದಗಿರಿ, ಬಳ್ಳಾರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಉಳಿದಂತೆ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರಿನ ಒಂದೆರಡು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ. ಉಳಿದಂತೆ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ

ಏಪ್ರಿಲ್‌ 19, 20 ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
pesticide everest fish curry masala
ವೈರಲ್ ನ್ಯೂಸ್8 mins ago

Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

Take strict action in Neha Murder Case CM instructs to DG
ಕ್ರೈಂ46 mins ago

Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

IPL 2024
ಕ್ರಿಕೆಟ್56 mins ago

IPL 2024: ಸಿಕ್ಸರ್​ ಮೂಲಕ ದಾಖಲೆ ಬರೆದ ಹಿಟ್​ಮ್ಯಾನ್​ ರೋಹಿತ್​

Murder case In Raichur
ರಾಯಚೂರು1 hour ago

Murder Case : ಕಲ್ಲಿನಿಂದ ಜಜ್ಜಿ ಪತ್ನಿಯ ಕೊಂದು ನೇಣಿಗೆ ಶರಣಾದ ಅನುಮಾನ ಪಿಶಾಚಿ

Lok sabha election-2024
Latest1 hour ago

Lok Sabha Election 2024: ಲೋಕಸಭೆ ಚುನಾವಣೆ ಮೊದಲ ಹಂತದಲ್ಲಿ ಪ್ರಬಲ ಪೈಪೋಟಿಯ ಟಾಪ್ 10 ಕ್ಷೇತ್ರಗಳಿವು

tamanna bhatia gold
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಂಗಳೂರಿನಲ್ಲಿ ಇಂದು ಹೀಗಿದೆ ದರ

CET 2024 exam Complaint against syllabus question of Mathematics and Biology KEA to set up committee on April 24
ಶಿಕ್ಷಣ1 hour ago

CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ

Uttarakaanda Movie Yogaraj bhat entry
ಸ್ಯಾಂಡಲ್ ವುಡ್1 hour ago

Uttarakaanda Movie: ಪಾಟೀಲನಾಗಿ ‘ಉತ್ತರಕಾಂಡ’ ಸಿನಿಮಾಗೆ ಎಂಟ್ರಿ ಕೊಟ್ಟ ಯೋಗರಾಜ್ ಭಟ್

Suicide bomb Attack karachi
ವಿದೇಶ2 hours ago

Suicide bomb Attack: ಪಾಕ್‌ನಲ್ಲಿ ಜಪಾನೀಯರಿದ್ದ ವಾಹನಕ್ಕೆ ಆತ್ಮಹತ್ಯಾ ಬಾಂಬ್‌ ದಾಳಿ: 2 ಬಲಿ

Dubai Rain
ಕ್ರೀಡೆ2 hours ago

Dubai Rain: ಭಾರತೀಯ ಕುಸ್ತಿಪಟುಗಳ ಪ್ಯಾರಿಸ್​ ಒಲಿಂಪಿಕ್ಸ್​ ಕನಸಿಗೆ ತಣ್ಣೀರೆರಚಿದ ದುಬೈ ಮಳೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ9 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌