ಚಾಮರಾಜಪೇಟೆ ಮೈದಾನ: ಹೈಕೋರ್ಟ್‌ ಮಧ್ಯಂತರ ತೀರ್ಪು ಪ್ರಶ್ನಿಸಿ ಸರಕಾರ ಮೇಲ್ಮನವಿ, ಇಂದೇ ವಿಚಾರಣೆ - Vistara News

Latest

ಚಾಮರಾಜಪೇಟೆ ಮೈದಾನ: ಹೈಕೋರ್ಟ್‌ ಮಧ್ಯಂತರ ತೀರ್ಪು ಪ್ರಶ್ನಿಸಿ ಸರಕಾರ ಮೇಲ್ಮನವಿ, ಇಂದೇ ವಿಚಾರಣೆ

ಚಾಮರಾಜಪೇಟೆ ಮೈದಾನದ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂಬ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶದ ವಿರುದ್ಧ ಸರಕಾರ ಮೇಲ್ಮನವಿ ಸಲ್ಲಿಸಿದೆ.

VISTARANEWS.COM


on

chamarajpet_security
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಾಮರಾಜ ಪೇಟೆಯ ವಿವಾದಿತ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂಬ ಹೈಕೋರ್ಟ್‌ನ ಏಕ ಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರಕಾರ ಮೇಲ್ಮನವಿಯನ್ನು ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಶುಕ್ರವಾರ ವಿಚಾರಣೆಗೆ ಬರಲಿದೆ.

ಚಾಮರಾಜಪೇಟೆಯ ವಿವಾದಿತ ಮೈದಾನವನ್ನು ಕಂದಾಯ ಆಸ್ತಿ ಎಂದು ಬಿಬಿಎಂಪಿ ಜಂಟಿ ಆಯುಕ್ತರು ಘೋಷಣೆ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ವಕ್ಫ್‌ ಮಂಡಳಿ ಹೈಕೋರ್ಟ್‌ ಮೊರೆ ಹೊಕ್ಕಿತ್ತು. ಗುರುವಾರ ನ್ಯಾ.ಹೇಮಂತ್ ಚಂದನ್‌ಗೌಡರ್ ಅವರ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತ್ತು. ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು, ವರ್ಷದಲ್ಲಿ ಎರಡು ಬಾರಿ ಮಾತ್ರ ಪ್ರಾರ್ಥನೆಗೆ ಅವಕಾಶ ನೀಡಬಹುದು. ಉಳಿದಂತೆ ಆಟದ ಮೈದಾನವಾಗಿ ಬಳಸಬಹುದು ಎಂದು ಸ್ಪಷ್ಟಪಡಿಸಿತ್ತು. ಈ ಮಧ್ಯಂತರ ಆದೇಶದ ಪ್ರಕಾರ ಗಣೇಶೋತ್ಸವಕ್ಕೆ ಅವಕಾಶ ಇಲ್ಲ ಎನ್ನುವುದು ಸ್ಪಷ್ಟವಾಗಿದೆ.

ಏಕ ಸದಸ್ಯ ಪೀಠದ ಆದೇಶಕ್ಕೆ ಪ್ರತಿಕ್ರಿಯಿಸಿದ್ದ ಚಾಮರಾಜ ನಗರ ನಾಗರಿಕ ವೇದಿಕೆಗಳ ಒಕ್ಕೂಟ ಅಧ್ಯಕ್ಷ ರಾಮೇ ಗೌಡ ಅವರು ಇದರ ವಿರುದ್ಧ ದ್ವಿಸದಸ್ಯತ್ವ ಪೀಠದಲ್ಲಿ ಸರಕಾರ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದ್ದರು. ಅದರಂತೆ ಸರಕಾರ ಈಗ ಮೇಲ್ಮನವಿಯನ್ನು ಸಲ್ಲಿಸಿದೆ.

ಮಧ್ಯಾಹ್ನ ೨.೩೦ಕ್ಕೆ ಹಂಗಾಮಿ ಸಿಜೆ ಅಲೋಕ್‌ ಅರಾಧೆ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಮಧ್ಯಂತರ ಆದೇಶವನ್ನು ರದ್ದುಪಡಿಸಬೇಕು ಮತ್ತು ಇದನ್ನು ಸಾರ್ವಜನಿಕ ಮೈದಾನವೆಂದು ಪರಿಗಣಿಸಿ ಎಲ್ಲ ರೀತಿಯ ಕಾಯಕ್ರಮಗಳಿಗೆ ಅವಕಾಶ ನೀಡಬೇಕು ಎಂದು ರಾಜ್ಯ ಸರಕಾರ ಸಲ್ಲಿಸಿರುವ ಮೇಲ್ಮನವಿಯಲ್ಲಿ ಕೇಳಿಕೊಳ್ಳಲಾಗಿದೆ. ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಎಜಿ ಪ್ರಭುಲಿಂಗ ನಾವದಗಿ ಅವರು ಮಾಡಿರುವ ಮನವಿಯನ್ನು ಕೋರ್ಟ್‌ ಪುರಸ್ಕರಿಸಿದೆ.

ಇದನ್ನೂ ಓದಿ | ಚಾಮರಾಜಪೇಟೆ ಮೈದಾನ ವಿವಾದ| ಸುಪ್ರೀಂ ಆದೇಶದ ಆಧಾರದಲ್ಲಿ ಇಲ್ಲೂ ಗೆಲುವು ಸಿಕ್ಕಿತು ಎಂದ ವಕ್ಫ್‌ ಬೋರ್ಡ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ಕೃತಕ ಬುದ್ಧಿಮತ್ತೆಯಿಂದ ವೆಬ್ ಸೈಟ್ ಲಿಂಕ್ ಗಳಿಗಾಗಿ ರಚಿಸಲಾದ ಹುಡುಕಾಟ ಎಂಜಿನ್ ಅನ್ನು ಗೂಗಲ್ (Google Update) ಅನಾವರಣಗೊಳಿಸಿದೆ. ಈ ದಿಟ್ಟ ಮತ್ತು ಜವಾಬ್ದಾರಿಯುತ ವಿಧಾನವು ನಮ್ಮ ಧ್ಯೇಯವನ್ನು ಬಳಕೆದಾರರಿಗೆ ತಲುಪಿಸಲು ಮತ್ತು ಎಲ್ಲರಿಗೂ ಎಐ ಅನ್ನು ಹೆಚ್ಚು ಆಪ್ತ ಗೊಳಿಸಲು ಸಹಾಯಕವಾಗಿಸುವುದು ಎಂದು ಗೂಗಲ್ ಕಂಪೆನಿಯ ಸಿಇಒ ಸುಂದರ್ ಪಿಚೈ ತಿಳಿಸಿದ್ದಾರೆ.

VISTARANEWS.COM


on

By

Google Update
Koo

ವೆಬ್ ಸೈಟ್ ಲಿಂಕ್‌ಗಳ (website link) ಮೂಲಕ ಕೃತಕ ಬುದ್ಧಿಮತ್ತೆಯಿಂದ (artificial intelligence) ರಚಿಸಲಾದ, ಆಗಾಗ ಒಲವು ತೋರುವ ಪ್ರತಿಕ್ರಿಯೆಗಳಿಗೆ ಹುಡುಕಾಟ ಎಂಜಿನ್ ಅನ್ನು ಗೂಗಲ್ (Google Update) ಅನಾವರಣಗೊಳಿಸಿರುವುದಾಗಿ ವಾರ್ಷಿಕ ಡೆವಲಪರ್‌ಗಳ ಸಮ್ಮೇಳನದಲ್ಲಿ ಕಂಪೆನಿಯ ಸಿಇಒ (CEO) ಸುಂದರ್ ಪಿಚೈ (Sundar Pichai) ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸುಂದರ್ ಪಿಚೈ, ಈ ದಿಟ್ಟ ಮತ್ತು ಜವಾಬ್ದಾರಿಯುತ ವಿಧಾನವು ನಮ್ಮ ಧ್ಯೇಯವನ್ನು ಬಳಕೆದಾರರಿಗೆ ತಲುಪಿಸಲು ಮತ್ತು ಎಲ್ಲರಿಗೂ ಎಐ ಅನ್ನು ಹೆಚ್ಚು ಸಹಾಯಕವಾಗಿಸಲು ಪ್ರಯತ್ನಿಸಲಾಗುವುದು ಎಂದರು.

ಪ್ರಮುಖ ಪ್ರಕಟಣೆಗಳು ಏನೇನು?:

ಫೈರ್‌ಬೇಸ್ ಜೆನ್‌ಕಿಟ್

ಫೈರ್‌ಬೇಸ್ ಪ್ಲಾಟ್‌ಫಾರ್ಮ್‌ಗೆ ಫೈರ್‌ಬೇಸ್ ಜೆನ್‌ಕಿಟ್ ಎಂಬ ಹೊಸ ಸೇರ್ಪಡೆ ಇದ್ದು, ಇದು ಗೋ ಬೆಂಬಲದೊಂದಿಗೆ ಜಾವಾ ಸ್ಕ್ರಿಪ್ಟ್/ಟೈಪ್‌ಸ್ಕ್ರಿಪ್ಟ್‌ನಲ್ಲಿ ಎಐ-ಚಾಲಿತ ಅಪ್ಲಿಕೇಶನ್‌ಗಳನ್ನು ನಿರ್ಮಿಸಲು ಡೆವಲಪರ್‌ಗಳಿಗೆ ಸುಲಭವಾಗುತ್ತದೆ. ಫ್ರೇಮ್‌ವರ್ಕ್ ಮುಕ್ತ ಮೂಲವಾಗಿರುತ್ತದೆ ಮತ್ತು ವಿಷಯ ಉತ್ಪಾದನೆ, ಸಾರಾಂಶ, ಪಠ್ಯ ಅನುವಾದ ಮತ್ತು ಚಿತ್ರಗಳನ್ನು ಉತ್ಪಾದಿಸಲು ಬಳಸಬಹುದು ಎಂದು ಕಂಪನಿ ಹೇಳಿದೆ.

ಲರ್ನ್‌ ಎಲ್‌ಎಂ

ಕಂಪನಿಯು ಲರ್ನ್‌ಎಲ್‌ಎಂ ಅನ್ನು ಅನಾವರಣಗೊಳಿಸಿದ್ದು, ಇದು ಕಲಿಕೆಗಾಗಿ “ಫೈನ್-ಟ್ಯೂನ್ಡ್” ಉತ್ಪಾದಕ ಎಐ ಮಾದರಿಗಳ ಹೊಸ ಕುಟುಂಬವಾಗಿದೆ. ಗೂಗಲ್‌ನ ಡೀಪ್‌ಮೈಂಡ್ ಎಐ ಸಂಶೋಧನಾ ವಿಭಾಗ ಮತ್ತು ಗೂಗಲ್ ರಿಸರ್ಚ್ ನಡುವಿನ ಸಹಯೋಗ- ಮಾದರಿಗಳು ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ “ಸಂಭಾಷಣೆಯ” ಬೋಧನೆಯನ್ನು ನೀಡುತ್ತದೆ ಎಂದು ಗೂಗಲ್ ಹೇಳಿದೆ.

ಯೂಟ್ಯೂಬ್ ರಸಪ್ರಶ್ನೆಗಳು

ಯೂಟ್ಯೂಬ್ ಎಐ ರಚಿತವಾದ ರಸಪ್ರಶ್ನೆಗಳನ್ನು ಸಹ ಹೊಂದಿದೆ. ಇದು ಶೈಕ್ಷಣಿಕ ವಿಡಿಯೋಗಳನ್ನು ವೀಕ್ಷಿಸುತ್ತಿರುವಾಗ ಬಳಕೆದಾರರಿಗೆ ಸಾಂಕೇತಿಕವಾಗಿ “ತಮ್ಮ ಕೈಯನ್ನು ಮೇಲಕ್ಕೆತ್ತಲು” ಅನುಮತಿಸುತ್ತದೆ. ಉಪಕರಣವನ್ನು ಬಳಸಿಕೊಂಡು, ನೀವು ಪ್ರಶ್ನೆಗಳನ್ನು ಕೇಳಬಹುದು, ವಿವರಣೆಗಳನ್ನು ಪಡೆಯಬಹುದು ಅಥವಾ ವಿಷಯದ ಬಗ್ಗೆ ರಸಪ್ರಶ್ನೆ ತೆಗೆದುಕೊಳ್ಳಬಹುದು.

ಜೆಮ್ಮಾ 2 ನವೀಕರಣಗಳು

ಗೂಗಲ್ ಜೆಮ್ಮಾ 2ಗೆ ಹೊಸ 27 ಬಿಲಿಯನ್ ಪ್ಯಾರಾಮೀಟರ್ ಮಾದರಿಯನ್ನು ಸೇರಿಸಲಿದೆ ಮತ್ತು ಈ ಮಾದರಿಗಳ ಮುಂದಿನ ಪೀಳಿಗೆಯು ಈ ವರ್ಷದ ಜೂನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಕಂಪನಿ ತಿಳಿಸಿದೆ.

ಗೂಗಲ್ ಪ್ಲೇಗೆ ಬದಲಾವಣೆಗಳು

ಗೂಗಲ್ ಪ್ಲೇ ಅಪ್ಲಿಕೇಶನ್‌ಗಳಿಗಾಗಿ ಹೊಸ ಅನ್ವೇಷಣೆ ವೈಶಿಷ್ಟ್ಯವನ್ನು ಹೊಂದಿರುತ್ತದೆ. ಬಳಕೆದಾರರನ್ನು ಪಡೆದುಕೊಳ್ಳಲು ಹೊಸ ಮಾರ್ಗಗಳು, ಪ್ಲೇ ಪಾಯಿಂಟ್‌ಗಳಿಗೆ ನವೀಕರಣಗಳು ಮತ್ತು ಗೂಗಲ್ ಪ್ಲೇ ಎಸ್ ಡಿಕೆ ಕನ್ಸೋಲ್ ಮತ್ತು ಪ್ಲೇ ಇಂಟೆರ್ ಗ್ರಿಟಿ ಎಪಿಐ ನಂತಹ ವರ್ಧನೆಗಳನ್ನು ಒಳಗೊಂಡಿರುತ್ತದೆ.


ಇದನ್ನೂ ಓದಿ: Warning For Android Users: ಆಂಡ್ರಾಯ್ಡ್ ಬಳಕೆದಾರರಿಗೆ ಕಾದಿದೆ ಅಪಾಯ; ಸರ್ಕಾರದಿಂದ ಗಂಭೀರ ಎಚ್ಚರಿಕೆ

ಕರೆಗಳ ಸಮಯದಲ್ಲಿ ವಂಚನೆಯ ಅಲರ್ಟ್‌

ಕರೆಗಳ ಸಮಯದಲ್ಲಿ ಸಂಭಾವ್ಯ ವಂಚನೆಗಳ ಬಗ್ಗೆ ಬಳಕೆದಾರರನ್ನು ಎಚ್ಚರಿಸುವ ವೈಶಿಷ್ಟ್ಯವನ್ನು ಗೂಗಲ್ ಪೂರ್ವವೀಕ್ಷಣೆ ಮಾಡಿದೆ. ಇದನ್ನು ಆಂಡ್ರಾಯ್ಡ್‌ನ ಭವಿಷ್ಯದ ಆವೃತ್ತಿಯಲ್ಲಿ ನಿರ್ಮಿಸಲಾಗುವುದು ಮತ್ತು ನೈಜ ಸಮಯದಲ್ಲಿ ಸಾಮಾನ್ಯವಾಗಿ ಸ್ಕ್ಯಾಮ್‌ಗಳೊಂದಿಗೆ ಸಂಯೋಜಿತವಾಗಿರುವ ಸಂಭಾಷಣೆ ಮಾದರಿಗಳನ್ನು ಪರಿಣಾಮಕಾರಿಯಾಗಿ ಕೇಳಲು ಜೆಮಿನಿ ನ್ಯಾನೋವನ್ನು ಬಳಸುತ್ತದೆ ಎಂದು ಕಂಪೆನಿ ಹೇಳಿದೆ.

ಒಟ್ಟಿನಲ್ಲಿ ಪ್ರಾಜೆಕ್ಟ್ ಅಸ್ಟ್ರಾ, ಸುಧಾರಿತ ನೋಡುವ ಮತ್ತು ಮಾತನಾಡುವ ಎಐ ಏಜೆಂಟ್, ವೆಯೋ ಜನರೇಟಿವ್ ಎಐ ವಿಡಿಯೋ ಮಾದರಿ ಮತ್ತು 6 ನೇ ತಲೆಮಾರಿನ ಟ್ರಿಲಿಯಮ್ ಟೆನ್ಸರ್ ಪ್ರೊಸೆಸಿಂಗ್ ಯುನಿಟ್ ಅನ್ನು ಗೂಗಲ್ ನ ವಾರ್ಷಿಕ ಡೆವಲಪರ್ ಕಾನ್ಫರೆನ್ಸ್ I/O ನಲ್ಲಿ ಘೋಷಿಸಲಾಯಿತು. ಹುಡುಕಾಟದಲ್ಲಿ ಎಐ ಅವಲೋಕನ, ಜೆಮಿನಿ 1.5 ಪ್ರೊ ಸುಧಾರಣೆಗಳು ಮತ್ತು ಹೊಸ 1.5 ಫ್ಲ್ಯಾಶ್ ಮಾದರಿಯನ್ನು ಹೊರತರುವುದಾಗಿ ಗೂಗಲ್ ಘೋಷಿಸಿತು. ಜೆಮಿನಿಯೊಂದಿಗೆ ಫೋಟೋಗಳನ್ನು ಹುಡುಕಲು ಹೊಸ ಮಾರ್ಗವಾದ ‘ಫೋಟೋಗಳನ್ನು ಕೇಳಿ’ ಅನ್ನು ಕೂಡ ಘೋಷಿಸಲಾಗಿದೆ.

Continue Reading

ಆರೋಗ್ಯ

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ಊಟದ ಮೊದಲು, ಅನಂತರ ಚಹಾ, ಕಾಫಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಟೀ ಮತ್ತು ಕಾಫಿಯಲ್ಲಿ ಇರುವ ಕೆಫೀನ್ ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಕಾಫಿ, ಟೀ ಮೇಲಿನ ಅವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಐಸಿಎಂಆರ್ ಸಂಶೋಧಕರು (ICMR Dietary Guidelines) ತಿಳಿಸಿದ್ದಾರೆ.

VISTARANEWS.COM


on

By

ICMR Dietary Guidelines
Koo

ಊಟದ ಮೊದಲು ಮತ್ತು ಅನಂತರ (Before And After Meals) ಚಹಾ (tea) ಅಥವಾ ಕಾಫಿಯನ್ನು (coffee) ಸೇವಿಸಲೇಬಾರದು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ತನ್ನ ಆರೋಗ್ಯಕರ ಜೀವನಕ್ಕಾಗಿ ಆಹಾರ ಕ್ರಮದ ಕುರಿತಾಗಿ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ (ICMR Dietary Guidelines) ಹೇಳಿದೆ. ಟೀ ಮತ್ತು ಕಾಫಿಯಲ್ಲಿ ಇರುವ ಕೆಫೀನ್ (caffeine) ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಕಾಫಿ, ಟೀ ಮೇಲಿನ ಅವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಐಸಿಎಂಆರ್ ಸಂಶೋಧಕರು ತಿಳಿಸಿದ್ದಾರೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಂಶೋಧಕರು ಚಹಾ ಮತ್ತು ಕಾಫಿ ಸೇವನೆಯಲ್ಲಿ ಮಿತವಾಗಿರುವಂತೆ ಸಲಹೆ ನೀಡಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿರುವ ಈ ಎರಡು ಪಾನೀಯಗಳು ಆರೋಗ್ಯಕರ ಅಭ್ಯಾಸವಲ್ಲ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಸಂಸ್ಥೆಯು ಇತ್ತೀಚೆಗೆ 17 ಹೊಸ ಆಹಾರ ಮಾರ್ಗಸೂಚಿಗಳನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (NIN) ಸಹಭಾಗಿತ್ವದಲ್ಲಿ ಪರಿಚಯಿಸಿದೆ. ಇದು ಭಾರತದಾದ್ಯಂತ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಮಾರ್ಗಸೂಚಿಗಳು ವೈವಿಧ್ಯಮಯ ಆಹಾರ ಮತ್ತು ಸಕ್ರಿಯ ಜೀವನಶೈಲಿಯ ಮಹತ್ವವನ್ನು ಒತ್ತಿಹೇಳುತ್ತವೆ.

ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಗುರುತಿಸುವಾಗ, ವೈದ್ಯಕೀಯ ತಜ್ಞರು ಸಂಭಾವ್ಯ ಆರೋಗ್ಯದ ಕಾಳಜಿಯಿಂದಾಗಿ ಚಹಾ ಮತ್ತು ಕಾಫಿಯ ಅತಿಯಾದ ಸೇವನೆಯ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

ಯಾಕೆ ಒಳ್ಳೆಯದಲ್ಲ?

ಐಸಿಎಂಆರ್ ಸಂಶೋಧಕರು ಟೀ ಮತ್ತು ಕಾಫಿಯು ಕೆಫೀನ್ ಅನ್ನು ಒಳಗೊಂಡಿರುತ್ತದೆ, ಇದು ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಶಾರೀರಿಕ ಅವಲಂಬನೆಯನ್ನು ಪ್ರೇರೇಪಿಸುತ್ತದೆ ಎಂದು ವಿವರಿಸಿದ್ದಾರೆ.

ಮಾರ್ಗಸೂಚಿಗಳು ಜನಪ್ರಿಯ ಪಾನೀಯಗಳ ಕೆಫೀನ್ ಅಂಶದ ಮೇಲೆ ಬೆಳಕು ಚೆಲ್ಲಿದೆ. 150 ಮಿಲಿ ಕಪ್ ಕುದಿಸಿದ ಕಾಫಿಯು 80 – 120 ಮಿಲಿ ಗ್ರಾಂ ಕೆಫೀನ್ ಅನ್ನು ಹೊಂದಿರುತ್ತದೆ. ಇನ್ ಸ್ಟೆಂಟ್ ಕಾಫಿ 50 – 65 ಮಿಲಿ ಗ್ರಾಂ ಮತ್ತು ಚಹಾವು 30 – 65 ಮಿಲಿ ಗ್ರಾಂ ಕೆಫೀನ್ ಹೊಂದಿರುತ್ತದೆ ಎಂದು ಐಸಿಎಂಆರ್ ತಿಳಿಸಿದೆ.


ಎಷ್ಟು ಸೇವಿಸಬಹುದು?

ಐಸಿಎಂಆರ್ ಪ್ರತಿದಿನ ಕೇವಲ 300 ಮಿಲಿ ಗ್ರಾಂ ಕೆಫೀನ್ ಸೇವನೆ ಮಾಡಬಹುದು ಎಂದು ಹೇಳಿದೆ. ಟೀ, ಕಾಫಿಯಲ್ಲಿರುವ ಕೆಫೀನ್ ಅಂಶ ದೇಹದಲ್ಲಿ ಕಬ್ಬಿಣವನ್ನು ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುವ ಕಾರಣ ಊಟಕ್ಕೆ ಮೊದಲು ಮತ್ತು ಅನಂತರ ಕನಿಷ್ಠ ಒಂದು ಗಂಟೆ ಚಹಾ ಅಥವಾ ಕಾಫಿಯನ್ನು ತ್ಯಜಿಸಲು ವೈದ್ಯಕೀಯ ಸಂಸ್ಥೆ ಸಲಹೆ ನೀಡಿದೆ.

ಕೆಫೀನ್‌ಗಳು ಹೊಟ್ಟೆಯಲ್ಲಿ ಕಬ್ಬಿಣವನ್ನು ಹಿಡಿದಿಟ್ಟುಕೊಳ್ಳುತ್ತದೆ. ಇದರಿಂದ ದೇಹಕ್ಕೆ ಕಬ್ಬಿಣವನ್ನು ಸರಿಯಾಗಿ ಹೀರಿಕೊಳ್ಳಲು ಕಷ್ಟವಾಗುತ್ತದೆ. ಇದು ಕಬ್ಬಿಣದ ಕೊರತೆ ಮತ್ತು ರಕ್ತಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅತಿಯಾದ ಕಾಫಿ ಸೇವನೆಯು ಅಧಿಕ ರಕ್ತದೊತ್ತಡ ಮತ್ತು ಹೃದಯದ ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಹೇಳಿದೆ.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಬ್ಲ್ಯಾಕ್‌ ಚಹಾದಿಂದ ಪ್ರಯೋಜನ

ಹಾಲು ಇಲ್ಲದೆ ಚಹಾವನ್ನು ಕುಡಿಯುವುದರಿಂದ ರಕ್ತ ಪರಿಚಲನೆಯಲ್ಲಿ ಸುಧಾರಣೆ, ರಕ್ತನಾಳಗಳ ಸಮಸ್ಯೆ ಮತ್ತು ಹೊಟ್ಟೆಯ ಕ್ಯಾನ್ಸರ್‌ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಐಸಿಎಂಆರ್ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಆಹಾರದಲ್ಲಿ ಏನಿರಬೇಕು?

ಆಹಾರಗಳಲ್ಲಿ ಹಣ್ಣು, ತರಕಾರಿ, ಧಾನ್ಯ, ನೇರ ಮಾಂಸ ಮತ್ತು ಸಮುದ್ರಾಹಾರವನ್ನು ಶಿಫಾರಸು ಮಾಡಿರುವ ಐಸಿಎಂಆರ್ ಸಂಶೋಧಕರು ತೈಲ, ಸಕ್ಕರೆ ಮತ್ತು ಉಪ್ಪಿನ ಸೇವನೆಯನ್ನು ಸೀಮಿತಗೊಳಿಸುವಂತೆ ಸೂಚಿಸಿದ್ದಾರೆ.

Continue Reading

ರಾಜಕೀಯ

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ ಕೃಷ್ಣ ಜನ್ಮಭೂಮಿ ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ.

VISTARANEWS.COM


on

By

Himanta Biswa Sarma
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok sabha election) ಈ ಬಾರಿ ಹಲವು ನಿರ್ಣಾಯಕ ಕಾರಣಗಳಿಗಾಗಿ ಭಾರತೀಯ ಜನತಾ ಪಕ್ಷಕ್ಕೆ (BJP) ಸಂಸತ್ತಿನಲ್ಲಿ (Parliament) 400 ಸ್ಥಾನಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ (ayodhya) ರಾಮಮಂದಿರವನ್ನು (ram mandir) ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ (Mathura) ಕೃಷ್ಣ ಜನ್ಮಭೂಮಿ (Krishna Janmabhoomi) ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ (Gyanvapi Mosque) ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರವನ್ನು (ಪಿಒಜೆಕೆ) ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತದಲ್ಲಿ ಸೇರಿಸಲಾಗುವುದು ಎಂದು ಹೇಳಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ ಎಂದು ದೂರಿದ್ದಾರೆ.

ಪಿಒಕೆ ನಮ್ಮದು ಎಂಬ ಚರ್ಚೆಯೇ ಆಗಿಲ್ಲ

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ, ಒಂದು ಕಾಶ್ಮೀರ ಭಾರತದಲ್ಲಿ ಮತ್ತು ಇನ್ನೊಂದು ಪಾಕಿಸ್ತಾನದಲ್ಲಿದೆ ಎಂದು ನಮಗೆ ಹೇಳಲಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹೊಂದಿದೆ ಎಂದು ನಮ್ಮ ಸಂಸತ್ತಿನಲ್ಲಿ ಎಂದಿಗೂ ಚರ್ಚಿಸಲಾಗಿಲ್ಲ, ಅದು ನಿಜವಾಗಿ ನಮ್ಮದು. ಇದೀಗ ಪಿಒಕೆಯಲ್ಲಿ ಪ್ರತಿದಿನ ಆಂದೋಲನ ನಡೆಯುತ್ತಿದ್ದು, ಜನರು ತಮ್ಮ ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಪಾಕಿಸ್ತಾನದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಮೋದಿಜೀ 400 ಸೀಟುಗಳನ್ನು ಪಡೆದರೆ ಪಿಒಕೆ ಕೂಡ ಭಾರತಕ್ಕೆ ಸೇರುತ್ತದೆ. ಇದು ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರವು ಮೀಸಲಾತಿಗೆ ಹೆಚ್ಚಿನ ಬಲವನ್ನು ನೀಡಲು ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ ಅವರು, ಪ್ರಧಾನಿ ಮೋದಿ ಸ್ವತಃ ಒಬಿಸಿ ವರ್ಗದಿಂದ ಬಂದವರು. ಬಿಜೆಪಿ 10 ವರ್ಷ ಅಧಿಕಾರದಲ್ಲಿದೆ. ನಮ್ಮ ಸರ್ಕಾರ ಮೀಸಲಾತಿಗೆ ಹೆಚ್ಚಿನ ಬಲ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ಆರಂಭಿಸಿರುವ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಮತ್ತು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (ಪಿಒಜೆಕೆ) ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಇದು ಭಾರತವಾಗಿದೆ ಮತ್ತು ಯಾವಾಗಲೂ ಇರುತ್ತದೆ ಎಂದು ಪುನರುಚ್ಚರಿಸಿದ್ದಾರೆ.

ಪಿಒಕೆ ಜನರು ತಮ್ಮ ಪರಿಸ್ಥಿತಿಯನ್ನು ಹೋಲಿಸಿ ನೋಡಬೇಕು. ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುತ್ತಿರುವ ಜನರು ಸ್ಪಷ್ಟ ಪ್ರಗತಿಯನ್ನು ಸೂಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

ಪಾಕಿಸ್ತಾನದ ಅರೆಸೈನಿಕ ರೇಂಜರ್‌ಗಳು ಸೋಮವಾರ, ಪಿಒಜೆಕೆ ನಲ್ಲಿ ಕಾನೂನುಬಾಹಿರವಾಗಿ ನಿಯೋಜಿಸಲ್ಪಟ್ಟರು. ಹಲವಾರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದರು ಮತ್ತು ಇದರಿಂದ ಅನೇಕ ಮಂದಿ ತೀವ್ರವಾಗಿ ಗಾಯಗೊಂಡರು. ಈ ಘಟನೆಯು ಪ್ರದೇಶದ ಹಲವಾರು ಸ್ಥಳೀಯರನ್ನು ಗಾಯಗೊಳಿಸಿತು. ಸಾವಿರಾರು ಸ್ಥಳೀಯರು ವಿದ್ಯುತ್ ಬಿಲ್‌ಗಳ ಮೇಲಿನ ತೆರಿಗೆಗಳು, ಸಬ್ಸಿಡಿಗಳಲ್ಲಿ ಕಡಿತ ಮತ್ತು ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳ ಸವಲತ್ತುಗಳು ಮತ್ತು ಸವಲತ್ತುಗಳನ್ನು ಕೊನೆಗೊಳಿಸುವುದರ ವಿರುದ್ಧ ತಮ್ಮ ಬೇಡಿಕೆಗಳನ್ನು ಎತ್ತಲು ಬೀದಿಗಿಳಿದಿದ್ದರು.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

SSLC Result: ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

VISTARANEWS.COM


on

SSLC Result
Koo

ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ಬಳಿಕ, ಊಹಿಸಿದಂತೆಯೇ ಆಗಿದೆ. ಕರ್ನಾಟಕದಲ್ಲಿ ಶಾಲಾ ಶಿಕ್ಷಣದ ಗುಣಮಟ್ಟದ ಬಗ್ಗೆ ಚರ್ಚೆ ಎದ್ದಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಸ್ತುತ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಕಲಿಕೆಯ ಗುಣಮಟ್ಟ ಕುಸಿದಿದೆ (SSLC Result) ಎಂದು ಖಾಸಗಿ ಶಾಲಾ ಒಕ್ಕೂಟ (ಕ್ಯಾಮ್ಸ್) ಅಸಮಾಧಾನ ಹೊರಹಾಕಿದೆ. ಸರ್ಕಾರಿ ಶಾಲಾ ಶಿಕ್ಷಣದ ಬಗ್ಗೆ ಹೆತ್ತವರು ಯಾವ ಅಭಿಪ್ರಾಯ ಹೊಂದಿದ್ದಾರೆ ಎಂಬುದನ್ನು ಸಂಕಲಿಸಿದರೆ ದಾರುಣ ಚಿತ್ರ ಸಿಗಬಹುದು; ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಹೆತ್ತವರು ಕೆಳಮಧ್ಯಮ ವರ್ಗದ, ಕೆಳವರ್ಗದವರಾದುದರಿಂದ ಅವರಿಗೆ ಬೇರೆ ದಾರಿಯಿಲ್ಲ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸುತ್ತಿರುವವರು, ಅಲ್ಲಿಗೆ ಕಳಿಸುತ್ತಿರುವುದೇಕೆ ಎಂದು ಕೇಳಿದರೆ ಸರ್ಕಾರಿ ಶಿಕ್ಷಣದ ಕಳಪೆ ಗುಣಮಟ್ಟದತ್ತ ಬೆಟ್ಟು ಮಾಡುತ್ತಾರೆ. ಆದರೆ ಇದೂ ಪೂರ್ತಿ ಸತ್ಯವಲ್ಲ. ಯಾಕೆಂದರೆ ಹಲವಾರು ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇದು ಒಟ್ಟಾರೆಯಾಗಿ ರಾಜ್ಯ ಶೈಕ್ಷಣಿಕ ಪಠ್ಯದ ಸಮಸ್ಯೆಗಳತ್ತ ಬೆಟ್ಟು ಮಾಡುತ್ತದೆ. ಒಟ್ಟಾರೆಯಾಗಿ ಪಠ್ಯದ ಸಮಸ್ಯೆ ಹಾಗೂ ಕಲಿಕೆಯ ಸಮಸ್ಯೆಗಳು ಒಗ್ಗೂಡಿ ಇಂದಿನ ಈ ಸ್ಥಿತಿಗೆ ತಂದಿವೆ.

ಸರ್ಕಾರ ಶಾಲಾ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಸರ್ಕಾರ ಯಾವುದೇ ಪರಿಣಾಮಕಾರಿ ರೂಪುರೇಷೆಗಳನ್ನು ರೂಪಿಸುತ್ತಿಲ್ಲ. ಬದಲಿಗೆ ಶಿಕ್ಷಣ ಇಲಾಖೆ ದಿನಕ್ಕೊಂದು ನಿಯಮಗಳನ್ನು ಮಾಡುತ್ತಿದೆ. ಆದರೆ ತಾವೇ ನಡೆಸುವ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನ ಮಾಡದೇ, ಕೇವಲ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ನಿಯಮ ಎಂಬಂತೆ ವರ್ತಿಸುತ್ತಿದೆ ಎಂದು ಶಾಲಾ ಒಕ್ಕೂಟ ಆಕ್ರೋಶ ಹೊರಹಾಕಿದೆ. ಇದೂ ನಿಜ. ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲೆ ಶಿಕ್ಷಣದ ಗುಣಮಟ್ಟ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಕುಸಿತ ಉಂಟಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಿರಾಶದಾಯವಾಗಿದೆ. ಸಿಸಿಟಿವಿ ಹಾಕಿದ್ದಕ್ಕೆ ಫಲಿತಾಂಶ ಕಡಿಮೆ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಅಧಿಕಾರಿಗಳ ಬಳಿ ಚರ್ಚೆ ಮಾಡಿದಾಗ, ಮಕ್ಕಳು ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರನ್ನು ಪಾಸ್ ಮಾಡಬೇಕು ಎನ್ನುತ್ತಾರೆ. ಹೀಗಾಗಿ ಗ್ರೇಸ್‌ ಅಂಕ ಕೊಡಲಾಗಿದೆ. ಹತ್ತು ವರ್ಷಗಳಿಂದ ಶಾಲೆಯಲ್ಲಿ ಕಲಿತರೂ 10ನೇ ತರಗತಿಗೆ ಬಂದಾಗ ಕನಿಷ್ಠ 25 ಅಂಕ ಗಳಿಸಲೂ ಆಗದ ಮಕ್ಕಳ ಸಂಖ್ಯೆ ಹೆಚ್ಚು ಇದೆ ಎಂದರೆ ಏನರ್ಥ? ಇದು ಶಿಕ್ಷಣವೇ? ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬದಲು ಮಕ್ಕಳ ಹಿತದೃಷ್ಟಿಯ ಹೆಸರಲ್ಲಿ ಗ್ರೇಸ್‌ ಅಂಕದ ಪ್ರಮಾಣ ಹೆಚ್ಚಿಸುತ್ತಿರುವುದು ಸರಿಯಲ್ಲ. ಇದು ಕ್ರಿಕೆಟ್‌ನಲ್ಲಿ ಬೌಂಡರಿಗೆ ಬಾಲ್‌ ಹೋಗುತ್ತಿಲ್ಲ ಎಂದು ಬೌಂಡರಿ ವ್ಯಾಪ್ತಿಯನ್ನೇ ಕುಗ್ಗಿಸಿದಂತೆ! ಇದರಿಂದ ಆಟಗಾರರ ಪ್ರತಿಭೆಯೇನೂ ಹೆಚ್ಚುವುದಿಲ್ಲ!

ಇದನ್ನೂ ಓದಿ:ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಪ್ರತಿ ಸಲ ಸರ್ಕಾರ ಬಂದಾಗಲೂ ರಾಜಕೀಯ ಸಿದ್ಧಾಂತದ ಹಿನ್ನೆಲೆಯಲ್ಲಿ ಪಠ್ಯಕ್ರಮ ಪರಿಷ್ಕರಣೆ ಆಗುತ್ತಿದೆ. ಕಳೆದ ಹತ್ತಾರು ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಶಿಕ್ಷಣ ಇಲಾಖೆಯಿಂದ ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದಲ್ಲಿ ಇದರ ಅಡ್ಡಪರಿಣಾಮವನ್ನು ಮುಂದೆ ಅನುಭವಿಸಬೇಕಾಗುತ್ತದೆ. ಮಕ್ಕಳಿಗೆ ಬೇಕಾದಂತಹ ಸಂಯೋಜಿತ ಪಠ್ಯ ರಚನೆಯಾಗದೆ ಇದ್ದರೆ, ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗಬೇಕಾಗುತ್ತದೆ. ರಾಜ್ಯದ ವಿದ್ಯಾರ್ಥಿಗಳು ನೆರೆಹೊರೆ ರಾಜ್ಯಗಳ ಪಠ್ಯಕ್ಕೆ ಹಾಗೂ ರಾಷ್ಟ್ರಮಟ್ಟದ ಶಿಕ್ಷಣಕ್ಕೆ ಸ್ಪರ್ಧಾತ್ಮಕವಾಗಿ ಸಿದ್ಧ ಮಾಡುವುದು ಸರ್ಕಾರದ ಆದ್ಯ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸದಾ ರಾಜಕೀಯ. ವಿದ್ಯಾರ್ಥಿಗಳ ಹಿತದೃಷ್ಟಿಗಿಂತ ತಮ್ಮ ಸಿದ್ಧಾಂತಗಳನ್ನು ಹೇರುವುದೇ ಪಕ್ಷಗಳ ಆದ್ಯತೆಯಾಗಿದೆ. ಶಿಕ್ಷಣ ತಜ್ಞರನ್ನು ಮುಂದಿಟ್ಟುಕೊಂಡು ಪಠ್ಯಕ್ರಮ ರಚಿಸುವುದಕ್ಕಿಂತಲೂ ರಾಜಕೀಯ ಚಿಂತನೆಯ ತಜ್ಞರನ್ನು ಸಮಿತಿಯಲ್ಲಿ ನೇಮಿಸಿಕೊಂಡು ಪಠ್ಯ ರಚಿಸಲಾಗುತ್ತಿದೆ. ಇದು ಮಕ್ಕಳ ಬಾಳಿನಲ್ಲಿ ಆಡುವ ಚೆಲ್ಲಾಟ. ಇದು ನಿಲ್ಲಬೇಕು. ಇಲ್ಲವಾದರೆ ಈ ಫಲಿತಾಂಶ ಕುಸಿತ ಹಾಗೂ ಅವಮಾನ ಮುಂದುವರಿಯಲಿದೆ.

Continue Reading
Advertisement
Kannada New Movie swapna mantapa shooting compleated
ಸ್ಯಾಂಡಲ್ ವುಡ್4 mins ago

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

ಫ್ಯಾಷನ್4 mins ago

Star saree fashion: ಯುವತಿಯರನ್ನು ಸೆಳೆಯುತ್ತಿದೆ ನಟಿ ಭಾವನಾ ರಾವ್‌ ಸ್ಯಾಟೀನ್‌ ಸಿಲ್ಕ್‌ ಸೀರೆ

Google
ವಿದೇಶ18 mins ago

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Crazy MS Dhoni fan
ಕ್ರಿಕೆಟ್18 mins ago

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Money Guide
ಮನಿ-ಗೈಡ್20 mins ago

Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಬ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Prajwal Revanna Case Prajwal never boarded a flight from Germany
ಕ್ರೈಂ23 mins ago

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

B C Mylarappa
ಕರ್ನಾಟಕ25 mins ago

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Job Alert
ಉದ್ಯೋಗ27 mins ago

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

House of the Dragon season 2 new trailer hints at a bloody
ಸಿನಿಮಾ39 mins ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ40 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202424 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌