Site icon Vistara News

Kannada Sahitya Sammelana | ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯ ಆಹ್ವಾನ

ತುಮಕೂರು ಜನಸಂಕಲ್ಪ ಯಾತ್ರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಡಿಯೊ ತಿರುಚುವಿಕೆ ಪ್ರಕರಣ

ಬೆಂಗಳೂರು: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜ.6, 7 ಮತ್ತು 8ರಂದು ಹಾವೇರಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್‌ ಜೋಷಿ ಅವರ ಊರು ಹಾವೇರಿ ಆಗಿರುವುದು ವಿಶೇಷ!

ಈ ಹಿನ್ನೆಲೆಯಲ್ಲಿ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ವಿಶೇಷವಾಗಿ ಮತ್ತು ಅದ್ಧೂರಿಯಾಗಿ ಆಯೋಜಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕನ್ನಡ ಡಿಂಡಿಮ ಬಾರಿಸುವ ಅಖಿಲ ಭಾರತ ಮಟ್ಟದ ಈ ಸಮ್ಮೇಳನಕ್ಕೆ ನಾಡಿನ ಜನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಕನ್ನಡದ ಕೀರ್ತಿಯನ್ನು ಎತ್ತಿ ಹಿಡಿಯೋಣ

ಈ ಸಮ್ಮೇಳನದ ಮೂಲಕ ವಿಶ್ವ ಭೂಪಟದಲ್ಲಿ ಕನ್ನಡ ಬಾವುಟವನ್ನು ಎತ್ತಿ ಹಿಡಿಯುವಂತಾಗಬೇಕು ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷರಾದ ಡಾ. ದೊಡ್ಡರಂಗೇಗೌಡ ಅವರು ಆಶಿಸಿದ್ದಾರೆ. ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಸ್ತಾರ ನ್ಯೂಸ್‌ನ ಮಾಧ್ಯಮ ಸಹಯೋಗವಿದೆ.

ಇದನ್ನೂ ಓದಿ | Kannada Book | ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ಅವಧಿ ವಿಸ್ತರಣೆ; ಕೊಳ್ಳೋಕೆ ಇನ್ನೆಷ್ಟು ದಿನ ಅವಕಾಶ?

Exit mobile version