Site icon Vistara News

Accident | ಬೈಕ್‌-ಮಿನಿ ಬಸ್‌ ಮುಖಾಮುಖಿ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

bike accident

ಚಿಕ್ಕಬಳ್ಳಾಪುರ: ಇಲ್ಲಿನ ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆ ಬಳಿ ಬೈಕ್ ಹಾಗೂ ಮಿನಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ(Bike Accident ) ಮೃತಪಟ್ಟಿದ್ದಾರೆ. ಕುಡುಮಲಕುಂಟೆ ಗ್ರಾಮದ ನಿವಾಸಿ ನವೀನ್ (21) ಮೃತ ದುರ್ದೈವಿ.

ನವೀನ್‌ ಶುಕ್ರವಾರ ಮುಂಜಾನೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿಗೆ ಮಿನಿ ಬಸ್‌ ಬಂದಿದ್ದು, ಈ ವೇಳೆ ನಿಯಂತ್ರಣಕ್ಕೆ ಸಿಗದೇ ಬಸ್‌ನ ಮುಂಭಾಗಕ್ಕೆ ಗುದ್ದಿದೆ. ಗುದ್ದಿದ ರಭಸಕ್ಕೆ ರಸ್ತೆಗೆ ಬಿದ್ದ ನವೀನ್‌ ತಲೆಗೆ ತೀವ್ರ ಪೆಟ್ಟಾಗಿದೆ. ತೀವ್ರ ರಕ್ತಸ್ರಾವವಾಗಿ ನವೀನ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ | Accident | ಕೊಲ್ಹಾರ ತಾಲೂಕಿನಲ್ಲಿ ಕಾರು-ಸಾರಿಗೆ ಬಸ್ ನಡುವೆ ಅಪಘಾತ; ಇಬ್ಬರ ಸಾವು

Exit mobile version