Congress Protest: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಚಿಕ್ಕಬಳ್ಳಾಪುರ, ದೇವನಹಳ್ಳಿಯಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ - Vistara News

ಚಿಕ್ಕಬಳ್ಳಾಪುರ

Congress Protest: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಚಿಕ್ಕಬಳ್ಳಾಪುರ, ದೇವನಹಳ್ಳಿಯಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ (Congress Protest) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಸುಧಾಕರ್, ಮಾಜಿ ಸಚಿವ, ಎಂಎಲ್‌ಸಿ ಡಾ. ಎಂ.ಆರ್. ಸೀತಾರಾಂ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹಾಗೂ ಮತ್ತಿತರೆ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

VISTARANEWS.COM


on

Congress Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ/ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಬೃಹತ್ ಪ್ರತಿಭಟನೆ (Congress Protest) ನಡೆಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ. ಸುಧಾಕರ್, ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಡಾ. ಎಂ.ಆರ್. ಸೀತಾರಾಂ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹಾಗೂ ಮತ್ತಿತರೆ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯಪಾಲರ ಭಾವಚಿತ್ರ ಹಿಡಿದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರ ಮುಖವಾಡ ಧರಿಸಿದ ಕಾಂಗ್ರೆಸ್ ಕಾರ್ಯಕರ್ತರು ಅರೆ ಬೆತ್ತಲೆ ಮೆರವಣಿಗೆ ನಡೆಸಿದರು.

ಇದನ್ನೂ ಓದಿ: Fake Garlic: ಎಚ್ಚರ..ಎಚ್ಚರ.. ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ ಸಿಮೆಂಟ್‌ ಬೆಳ್ಳುಳ್ಳಿ! ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ‌ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ರಾಜ್ಯಪಾಲರ ವಿರುದ್ಧದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ‌ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ರಾಜ್ಯಪಾಲರ ಕ್ರಮ ಅಸಂವಿಧಾನಿಕ ಹಾಗೂ ರಾಜಕೀಯ ಪ್ರೇರಿತ, ದುರುದ್ದೇಶಪೂರಿತ ಕ್ರಮ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದಲ್ಲಿ ಬಹುಮತದೊಂದಿಗೆ ಆಯ್ಕೆಯಾದ ಸರ್ಕಾರವೊಂದನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಷಡ್ಯಂತ್ರದ ಮೂಲಕ ಅಸ್ಥಿರಗೊಳಿಸಲು ಮುಂದಾಗಿದ್ದು, ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಶುದ್ಧ, ಕಳಂಕರಹಿತ ರಾಜಕಾರಣ ಮಾಡಿಕೊಂಡು ಶೋಷಿತರು, ಹಿಂದುಳಿದವರ ಪರ ಪ್ರಾಮಾಣಿಕ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯಲು ಎರಡೂ ಪಕ್ಷಗಳು ಹೊರಟಿವೆ. ಇದಕ್ಕೆ ಬೆನ್ನೆಲುಬಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಹೊರಟಿರುವುದು ‌ಖಂಡನೀಯ ಎಂದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ‌ ಸಚಿವ ಕೆ.ಎಂ. ಮುನಿಯಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ: BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

ದೇವನಹಳ್ಳಿಯಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Actor Chetan Ahimsa: ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಆದಿವಾಸಿ ವಿರೋಧಿ, ದಲಿತ ವಿರೋಧಿ ಧೋರಣೆ ಗಟ್ಟಿಗೊಳಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಟ ಚೇತನ್ ಒತ್ತಾಯಿಸಿದ್ದಾರೆ.

VISTARANEWS.COM


on

Actor Chetan Ahimsa
Koo

ಚಿಕ್ಕಬಳ್ಳಾಪುರ: ದಲಿತರು, ಶೋಷಿತರಿಗೆ ನ್ಯಾಯ ಒದಗಿಸುತ್ತೇವೆ ಎಂದು ಬಣ್ಣದ ಬಣ್ಣದ ಮಾತುಗಳನ್ನಾಡುತ್ತಾರೆ. ನಾನು ಬಸವ ಅನುಯಾಯಿ, ಅಂಬೇಡ್ಕರ್ ವಾದಿ ಎನ್ನುತ್ತಾರೆ. ಸಿದ್ದರಾಮಯ್ಯ ಟೋಕನಿಸಂ ರೀತಿ ಸಾಂಕೇತಿಕವಾಗಿ ಮಾತನಾಡುತ್ತಾರೆ. ಆದರೆ ಅಂಬೇಡ್ಕರ್, ಬಸವಣ್ಣನವರ ತತ್ವದ ವಿರುದ್ಧವಾಗಿದ್ದಾರೆ. ಮಾಡಬೇಕಾದುದನ್ನೆಲ್ಲ ಮಾಡುತ್ತಿಲ್ಲ, ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ನಟ ಚೇತನ್ ಅಹಿಂಸಾ (Actor Chetan Ahimsa) ಆಗ್ರಹಿಸಿದ್ದಾರೆ.

ಕರ್ನಾಟಕ ಅಹಿಂದ ಸಂಘಟನೆಯ ಒಕ್ಕೂಟದಿಂದ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಹಾಗೂ ಆದಿವಾಸಿಗಳ 25 ಸಾವಿರ ಕೋಟಿ ಹಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇನ್ನು ಆದಿವಾಸಿ ವಿರೋಧಿ, ದಲಿತ ವಿರೋಧಿ ಧೋರಣೆ ಗಟ್ಟಿಗೊಳಿಸುತ್ತಿದ್ದಾರೆ. ಹೀಗಾಗಿ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಇದೇ ವಿಚಾರದಲ್ಲಿ ಖಂಡಿಸಿದ್ದೇನೆ, ಜೈಲಿಗೂ ಹೋಗಿಬಂದಿದ್ದೇನೆ. ಬಿಜೆಪಿಯ ಕೋಮುವಾದವನ್ನ ನಾವು ಒಪ್ಪಲ್ಲ. ಅಸಮಾನತೆ ತೋರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳನ್ನು ವಿರೋಧಿಸುತ್ತೇನೆ. ಯಾರು ಉತ್ತಮ ಆಡಳಿತ ಕೊಡುತ್ತಾರೋ ಅವರಿಗೆ ಬೆಂಬಲ ಕೊಡುತ್ತೇನೆ. ನಟ ಚೇತನ್ ಹೇಳಿಕೆ..

ಇದನ್ನೂ ಓದಿ | CLP Meeting: ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೇರೆಯವರಿಗೆ ಅವಕಾಶ ನೀಡಲಿ

ಸಿಎಂ ಸಿದ್ದರಾಮಯ್ಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಚೇತನ್‌ ಅಹಿಂಸಾ ಅವರು, ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಜನರನ್ನು ವಿಫಲಗೊಳಿಸಿದ್ದಾರೆ.
ಬಡವರು, ದಲಿತರು, ಆದಿವಾಸಿಗಳು, ರೈತರು, ಕನ್ನಡ ಹಕ್ಕುಗಳು, ಭ್ರಷ್ಟಾಚಾರ ವಿರೋಧಿ ಮತ್ತು ಇನ್ನೂ ಹೆಚ್ಚಿನವರಿಗೆ ನೋವುಂಟು ಮಾಡುವ ನೀತಿಗಳನ್ನು ಸಕ್ರಿಯವಾಗಿ ತರುವ ಮೂಲಕ ಅವರು ಈಗಾಗಲೇ ಅನ್ಯಾಯದ ವ್ಯವಸ್ಥೆಯನ್ನು ಹೆಚ್ಚು ಅನ್ಯಾಯದಂತೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 6 + ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ಮಾಡಿದ್ದಾರೆ. ಅವರು ರಾಜೀನಾಮೆ ನೀಡಲಿ ಮತ್ತು ಬೇರೆಯವರಿಗೆ ಅವಕಾಶ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಆ.28ರಂದು ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆ.28ರಂದು ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಹಠಾವ್ ದಲಿತ್ ಬಚಾವೋ ಬೃಹತ್ ಪ್ರತಿಭಟನೆಯನ್ನು ಕಾರ್ಯಕ್ರಮ ನಡೆಯಲಿದೆ. ಕಾಂಗ್ರೆಸ್ ಅಳಿಸಿ, ದಲಿತರನ್ನು ಉಳಿಸಿ ಎಂಬ ಘೋಷವಾಕ್ಯದಡಿ ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ದಲಿತ ವಿರೋಧಿಗಳಾದರೆ, ಕಾಂಗ್ರೆಸ್ ಆಗಲಿ ಬಿಜೆಪಿ ಆಗಲಿ, ಜೆಡಿಎಸ್ ಆಗಲಿ ಅವರನ್ನೂ ವಿರೋಧಿಸುತ್ತೇವೆ. ಎಲ್ಲಾ ಸಮಾನತಾವಾದಿಗಳು ನಮ್ಮೊಂದಿಗೆ ಸೇರಬೇಕು ಎಂದು ನಟ ಚೇತನ್‌ ಹೇಳಿದರು.

Continue Reading

ಮಳೆ

Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

Karnataka Weather Forecast : ಬೆಂಗಳೂರು, ದೊಡ್ಡಬಳ್ಳಾಪುರದಲ್ಲಿ ಸುರಿದ ಮಳೆಗೆ (Rain News) ರಸ್ತೆಗಳು ಜಲಾವೃತಗೊಂಡು ಅವಾಂತರವೇ ಸೃಷ್ಟಿಯಾಗಿದೆ. ಆಗಸ್ಟ್‌ 23ರವರೆಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಸೋಮವಾರ ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ (Bengaluru rain) ಸುರಿದಿದೆ. ಕೇವಲ10-15 ನಿಮಿಷ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದ್ದವು. ಹೆಬ್ಬಾಳದ ರಸ್ತೆಗಳು ಕೆರೆಯಂತಾಗಿ ಸವಾರರು, ಸಾರ್ವಜನಿಕರು ಹೈರಣಾದರು. ಇತ್ತ ಮಳೆ ಕಡಿಮೆಯಾಗುತ್ತಿದ್ದಂತೆ ಸವಾರರು ಟ್ರಾಫಿಕ್‌ನಲ್ಲಿ (Karnataka Weather Forecast) ಸಿಲುಕಿದ್ದರು.

ಯಶವಂತಪುರ, ಹೆಬ್ಬಾಳ ಅಂಡರ್ ಪಾಸ್‌ನಲ್ಲಿ ವಾಹನಗಳು ನಿಂತಲ್ಲೇ ನಿಲ್ಲುವಂತಾಯಿತು. ಟ್ರಾಫಿಕ್ ಕ್ಲಿಯರ್ ಮಾಡಲು ಸಂಚಾರಿ ಪೊಲೀಸರು ಹರಸಾಹಸ ಪಟ್ಟರು. ಹೆಬ್ಬಾಳ ಸಂಪರ್ಕ ಕಲ್ಪಿಸುವ ಅಕ್ಕಪಕ್ಕದ ರಸ್ತೆಗಳು, ವಸಂತನಗರ, ರೈಲ್ವೆ ಪ್ಯಾರಲಲ್ ರಸ್ತೆ, ಪ್ಯಾಲೇಸ್ ಗುಟ್ಟಳ್ಳಿ ಸೇರಿದಂತೆ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಮರವೊಂದ ಧರೆಗುರುಳಿದೆ. ಸಂಜಯ್ ನಗರದಲ್ಲಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಮರ ಉರುಳಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇತ್ತ ದೊಡ್ಡಬಳ್ಳಾಪುರದಲ್ಲೂ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ರಸ್ತೆಯ ಮೇಲೆ ನೀರು ತುಂಬಿ ಹರಿದಿತ್ತು. ದೊಡ್ಡಬಳ್ಳಾಪುರದ ತಾಲೂಕು ಕಚೇರಿ, ತೇರಿನ ಬೀದಿ ಸರ್ಕಲ್ ಬಳಿ ವಾಹನ ಸವಾರರು ಪರದಾಡಿದರು. ಒಂದು ಅಡಿಗೂ‌ ಹೆಚ್ಚು ನೀರು ನಿಂತು, ಜತೆಗೆ ಚರಂಡಿ ನೀರೆಲ್ಲಾ ತುಂಬಿ ರಸ್ತೆಯ ಮೇಲೆ ಹರಿದಿತ್ತು. ತಾಲೂಕು ಕಚೇರಿಯ ಮುಂದೆಯೇ ರಸ್ತೆ ಅವ್ಯವಸ್ಥೆಗೊಂಡಿತ್ತು. ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ರಸ್ತೆಗಳು ನದಿಯಂತಾಗಿತ್ತು. ಬಾಳೆಹೊನ್ನೂರು-ಕಳಸ- ಕೊಟ್ಟಿಗೆಹಾರ ಸಂಪರ್ಕ ಕಡಿತಗೊಂಡಿತ್ತು. ಎನ್ ಆರ್ ಪುರ ತಾಲೂಕಿನ ಬನ್ನೂರು ಬಳಿ ರಸ್ತೆ ಮುಳುಗಡೆಯಾಗಿದೆ. ರಸ್ತೆಯ ಮೇಲೆ ರಭಸವಾಗಿ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿವೆ.ವಿಜಯಪುರದ ನಾಲತವಾಡನಲ್ಲಿ ಭಾರಿ ಮಳೆಗೆ ಸಾರ್ವಜನಿಕರು, ಗ್ರಾಹಕರು ಪರದಾಡಿದರು. ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮಾರ್ಕೆಟ್‌ಗೆ ಚರಂಡಿ ನೀರು ನುಗ್ಗಿತ್ತು.

ಇದನ್ನೂ ಓದಿ: Namma Metro : ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

ಬಾಗಲಕೋಟೆಯಲ್ಲಿ ಅಬ್ಬರಿಸಿದ ಮಳೆ

ತಡರಾತ್ರಿ ಬಾಗಲಕೋಟೆಯ ರಬಕವಿ ಬನಹಟ್ಟಿ ನಗರದಲ್ಲಿ ಮಳೆಯು ಅಬ್ಬರಿಸಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು, ಇಡೀ ಬನಹಟ್ಟಿ ನಗರ ನದಿಯಂತೆ ಕಂಡು ಬಂತು. ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ನಿದ್ದೆಗೆಟ್ಟು ಬಕೆಟ್ ಮೂಲಕ ನೀರು ಹೊರ ಹಾಕಿದರು. ಬ್ಯಾರೆಲ್, ಮನೆ ಮುಂಭಾಗದ ಬೈಕ್‌ಗಳು ಜಲಾವೃತಗೊಂಡಿದ್ದವು. 1 ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಬನಹಟ್ಟಿ ಜನರು ತತ್ತರಿಸಿ ಹೋಗಿದ್ದರು.

ಚಿಕ್ಕಮಗಳೂರಿನಲ್ಲಿ ನಿಲ್ಲದ ಮಳೆ ಅವಾಂತರ

ರಾತ್ರಿ ಸುರಿದ ಮಳೆಗೆ ಕೆರೆಯ ಏರಿ ಒಡೆದು ಜಮೀನಿಗೆ ನೀರು ನುಗ್ಗಿದ್ದರಿಂದ ಸುಮಾರು 30 ಎಕರೆ ಬೆಳೆ ನಾಶವಾಗಿದೆ. ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಳ, ರಾಗಿ ಸೇರಿದಂತೆ ಹಲವು ಬೆಳೆಗಳು ಕೊಚ್ಚಿ ಹೋಗಿವೆ. ಕೂಡಲೇ ಏರಿ ದುರಸ್ತಿ ಮಾಡಿ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇತ್ತ ಚಿಕ್ಕಮಗಳೂರು ನಗರದ ಕಲ್ಲು ದೊಡ್ಡಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿ ಪರದಾಟ ಅನುಭವಿಸಿದರು. ರಸ್ತೆ ನೀರು ಹಳ್ಳದಂತೆ ಮನೆಗೆ ನುಗ್ಗಿತ್ತು. ನೀರು ಹೊರ ಹಾಕಲಾಗದೆ ಜನರು ಪರದಾಡಿದರು. ಮನೆಯಲ್ಲಿದ್ದ ಆಹಾರ ಪದಾರ್ಥ ಹಾಗೂ ವಸ್ತುಗಳು ಹಾನಿಯಾಗಿದ್ದವು. ನಗರ ಸಭೆ ವಿರುದ್ಧ ಸ್ಥಳೀಯ ನಾಗರಿಕರು ಇಡಿ ಶಾಪ ಹಾಕಿದ್ದರು.

ಆಗಸ್ಟ್‌ 23ರವರಗೆ ಭಾರಿ ಮಳೆ ಎಚ್ಚರ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ (ಆ.19) ಆಗಸ್ಟ್ 23ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಹೀಗಾಗಿ ಆಗಸ್ಟ್ 19 ರಿಂದ 23 ರ ವರೆಗೆ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಆಗಸ್ಟ್ 19 ಮತ್ತು 20 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23 ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಕೋಲಾರ್, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಬಳ್ಳಾಪುರ

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

Murder Case : ಆಸ್ತಿಗಾಗಿ ಶುರುವಾದ ಗಲಾಟೆಯು ಎರಡು ಕುಟುಂಬಗಳು ಕಲ್ಲು-ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ತಾರಕಕ್ಕೇರಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

VISTARANEWS.COM


on

By

murder case
Koo

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವಿನ ಗಲಾಟೆಯೂ ತಾರಕಕ್ಕೇರಿದ್ದು ವ್ಯಕ್ತಿಯ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಆಸ್ತಿಗಾಗಿ ತಮ್ಮನ ಮಕ್ಕಳಿಂದಲೇ ಅಣ್ಣನ ಕೊಲೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಂಜುಂಡಯ್ಯ (55) ಗಲಾಟೆಯಲ್ಲಿ ಕೊಲೆಯಾದವರು. ಕಲ್ಲು ದೊಣ್ಣೆಗಳಿಂದ ಬಡಿದಾಟದಲ್ಲಿ ತೀವ್ರ ಗಾಯಗೊಂಡಿದ್ದ ನಂಜುಂಡಯ್ಯರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಂಜುಂಡಯ್ಯ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಡುವನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮಂಡ್ಯದ ಮೊಗರಹಳ್ಳಿ ಬಳಿ ಘಟನೆ ನಡೆದಿದೆ. ಮಂಟಿ ಗ್ರಾಮದ ಅನಿಲ್ (28) ಮೃತ ದುರ್ದೈವಿ. ಮೊಗರಹಳ್ಳಿ ಗ್ರಾಮದ ಸ್ಮಶಾನದ ಬಳಿ ಶವ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ ನೇತಾಡುತ್ತಿದ್ದ ಶವ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್‌ ಶಾಕ್‌ಗೆ ಯುವಕ ಬಲಿ

ಕೃಷಿ ಚಟುವಟಿಕೆಯ ವೇಳೆ ಆಕಸ್ಮಿಕ ವಿದ್ಯುತ್‌ ಸ್ಪರ್ಶಿಸಿ ಯುವಕನೊರ್ವ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ‌ ತಾಂವಶಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ದ್ರಾಕ್ಷಿ ತೋಟದಲ್ಲಿ ಪಂಪ್ ಸೆಟ್ ಶುರು ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ಸಂಗಪ್ಪ ನಾನಪ್ಪ ತಳವಾರ (28) ಮೃತ ದುರ್ದೈವಿ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಬಳ್ಳಾಪುರ

Land Dispute : ಜಮೀನು ವಿವಾದಕ್ಕೆ ದೊಣ್ಣೆಗಳಿಂದ ಬಡಿದಾಡಿಕೊಂಡ ಗುಂಪುಗಳು

Land Dispute : ಚಿಕ್ಕಬಳ್ಳಾಪುರದಲ್ಲಿ ಜಮೀನು ವಿವಾದ ಹಿನ್ನೆಲೆ ಎರಡು ಗುಂಪುಗಳು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ. ಕೊಡಗಿನಲ್ಲಿ ಡಿಪೋ ಮ್ಯಾನೇಜರ್‌ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

By

Land Dispute
Koo

ಚಿಕ್ಕಬಳ್ಳಾಪುರ: ಜಮೀನು ವಿವಾದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ (Land Dispute) ನಡೆದಿದೆ. ಎರಡು ಗುಂಪುಗಳು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಲ್ಲಿಮರದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗಲಾಟೆಯಲ್ಲಿ ಅಂಗವಿಕಲ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗ್ರಾಮದ ಕೆಂಪರಾಜು ಎಂಬಾತ ಶಕುಂತಲಮ್ಮ, ನಾರಾಯಣಪ್ಪ ಎಂಬುವವರ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡಿದ್ದಾರೆ. ಗ್ರಾಮದ ಸರ್ವೇ ನಂ 87/p3 ಪೈಕಿ ಎರಡು ಎಕರೆ ಜಮೀನಿಗಾಗಿ ಗಲಾಟೆ ನಡೆದಿದೆ.

ಶಕುಂತಲಮ್ಮ ಹಾಗೂ ನಾರಾಯಣಪ್ಪ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಡೆದಾಟ ಬಡಿದಾಟದ ವಿಡಿಯೊವನ್ನು ಅಲ್ಲಿದ್ದವರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಇದನ್ನೂ ಓದಿ: Inspector Abscond: ಕಳ್ಳರಿಂದ ಸೀಜ್‌ ಮಾಡಿದ ₹72 ಲಕ್ಷ ಗುಳುಂ ಮಾಡಿ ಇನ್‌ಸ್ಪೆಕ್ಟರ್‌ ನಾಪತ್ತೆ!

ಕೆಎಸ್‌ಆರ್‌ಟಿಸಿ ಚಾಲಕರನ್ನೇ ಗುಜರಿ ಎಂದರಾ ಡಿಪೋ ಮ್ಯಾನೇಜರ್?

ಮಡಿಕೇರಿ ಡಿಪೋ ಮ್ಯಾನೇಜರ್‌ದು ಎನ್ನಲಾದ ಆಡಿಯೊವೊಂದು ವೈರಲ್‌ ಆಗಿದೆ. ಕೆಎಸ್‌ಆರ್‌ಟಿಸಿ ಚಾಲಕರನ್ನೇ ಗುಜರಿ ಎಂದಿರುವ ಆಡಿಯೊವೊಂದು ವೈರಲ್‌ ಆಗಿದೆ. ಕೊಡಗಿನ ಗ್ರಾಮೀಣ ಭಾಗಕ್ಕೆ ತೆರಳಿದ್ದ ಬಸ್‌ವೊಂದು ಮಾರ್ಗ ಮಧ್ಯೆ ದುರಸ್ತಿ‌ ಆಗಿತ್ತು.

ಮುಂದೆ ಚಲಿಸದೇ ರಸ್ತೆಯಲ್ಲೇ ನಿಂತಿದ್ದ ಬಸ್‌ನಿಂದ ಪ್ರಯಾಣಿಕರು ಹೈರಾಣಾಗಿದ್ದರು. ಈ ವೇಳೆ ಡಿಪೋ ಮ್ಯಾನೇಜರ್‌ಗೆ ಕರೆ ಮಾಡಿದ ಪ್ರಯಾಣಿಕರು, ಗ್ರಾಮೀಣ ರಸ್ತೆಗೆ ಗುಜರಿ ಬಸ್ ಕಳಿಸಿದೀರಾ ಎಂದು ಆಕ್ರೋಶ ಹೊರಹಾಕಿದ್ದರು. ಈ ವೇಳೆ ಡಿಪೋ ಮ್ಯಾನೇಜರ್‌, ಬಸ್ ಅಲ್ಲ ಗುಜರಿ, ಚಾಲಕನೇ ಗುಜರಿ ಎಂದಿದ್ದಾರೆ. ಡಿಪೋ ಮ್ಯಾನೇಜರ್‌ನ ಉಡಾಫೆ ಉತ್ತರಕ್ಕೆ ಪ್ರಯಾಣಿಕರು ಕಿಡಿಕಾರಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತ ಆಡಿಯೋ ವೈರಲ್‌ ಆಗಿದ್ದು, ಚಾಲಕರನ್ನು ಕೀಳಾಗಿ ಜರಿದ ಡಿಪೋ ಮ್ಯಾನೇಜರ್ ವಿರುದ್ಧ ಆಕ್ರೋಶಗಳು ಕೇಳಿ ಬಂದಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Raksha Bandhan
ಪ್ರಮುಖ ಸುದ್ದಿ4 mins ago

Raksha Bandhan : ಪುಟಾಣಿ ಗೆಳೆಯರೊಂದಿಗೆ ರಕ್ಷಾ ಬಂಧನ ಆಚರಿಸಿಕೊಂಡ ನರೇಂದ್ರ ಮೋದಿ; ಇಲ್ಲಿವೆ ಚಿತ್ರಗಳು

Rayara Aradhane 2024
ಧಾರ್ಮಿಕ9 mins ago

Rayara Aradhane 2024: ನಾಳೆಯಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

Actor Chetan Ahimsa
ಕರ್ನಾಟಕ18 mins ago

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Uttara Kannada News
ಕರ್ನಾಟಕ29 mins ago

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಆರೋಗ್ಯ29 mins ago

Sodium reduction: ಉಪ್ಪು ಸೇವನೆ ಕಡಿಮೆಯಾದರೆ ಈ ಎಲ್ಲ ಸಮಸ್ಯೆಗಳು ಕಾಡುತ್ತವೆ

Pralhad Joshi
ಬೆಂಗಳೂರು31 mins ago

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

Virat kohli
ಕ್ರೀಡೆ36 mins ago

Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Contrast dupatta fashion
ಫ್ಯಾಷನ್44 mins ago

Contrast Dupatta Fashion: ಶ್ರಾವಣ ಮಾಸದಲ್ಲಿ ಟ್ರೆಂಡಿಯಾದ ಕಾಂಟ್ರಾಸ್ಟ್ ದುಪಟ್ಟಾ ಫ್ಯಾಷನ್‌

Actor Darshan
ಕರ್ನಾಟಕ1 hour ago

Pavithra gowda: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ; ಆ.22ಕ್ಕೆ ವಿಚಾರಣೆ

Death Penalty
ವಿದೇಶ1 hour ago

Death Penalty: ಈ 7 ದೇಶಗಳಲ್ಲಿ ಅತ್ಯಾಚಾರ ನಡೆಸಿದರೆ ಮರಣ ದಂಡನೆಯೇ ಶಿಕ್ಷೆ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌