Lok Sabha Election 2024: ನೆಲಮಂಗಲದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ - Vistara News

ಚಿಕ್ಕಬಳ್ಳಾಪುರ

Lok Sabha Election 2024: ನೆಲಮಂಗಲದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಬುಧವಾರ ನೆಲಮಂಗಲ ಶಾಸಕ ಶ್ರೀನಿವಾಸ್, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಎಂಎಲ್‌ಸಿ ಎಸ್. ರವಿ ಮತ್ತು ಹಿರಿಯ ಮುಖಂಡ ಕಾಂತರಾಜ್ ಅವರೊಂದಿಗೆ ನೆಲಮಂಗಲದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ, ಮತಯಾಚನೆ ನಡೆಸಿದರು.

VISTARANEWS.COM


on

Chikkaballapur Lok Sabha Constituency Congress candidate Raksha Ramaiah election campaign in Nelamangala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಬುಧವಾರ ನೆಲಮಂಗಲದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ, ಮತಯಾಚನೆ (Lok Sabha Election 2024) ನಡೆಸಿದರು.

ನೆಲಮಂಗಲ ಶಾಸಕ ಶ್ರೀನಿವಾಸ್, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ವಿಧಾನಪರಿಷತ್ ಸದಸ್ಯ ಎಸ್. ರವಿ ಮತ್ತು ಹಿರಿಯ ಮುಖಂಡ ಕಾಂತರಾಜ್ ಅವರೊಂದಿಗೆ ಬೃಹತ್ ರೋಡ್ ಶೋ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಮತಯಾಚಿಸಿದರು.

ಇದನ್ನೂ ಓದಿ: Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

ಈ ವೇಳೆ ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ರಕ್ಷಾ ರಾಮಯ್ಯ ಅವರು ಎಂ.ಎಸ್. ರಾಮಯ್ಯ ಅವರ ಕುಡಿ. ಕೋವಿಡ್ ಸಂದರ್ಭದಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಸಹಸ್ರಾರು ಜನರ ಜೀವ ಉಳಿಸಿ, ಪುಣ್ಯದ ಕೆಲಸ ಮಾಡಿದ್ದಾರೆ ಎಂದ ಅವರು, ಬಿಜೆಪಿ ಆಡಳಿತದಿಂದ ರಾಜ್ಯಕ್ಕೆ ನ್ಯಾಯ ದೊರೆಯುವುದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವರನ್ನು ಆರಿಸಿ ಕಳುಹಿಸಿದರೆ ಅವರು ರಾಜ್ಯಕ್ಕೆ ನ್ಯಾಯ ಒದಗಿಸಲಿದ್ದಾರೆ. ಜನರ ಪರವಾಗಿ ಅವರು ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಆಶೀರ್ವದಿಸುವಂತೆ ಮತದಾರರಲ್ಲಿ ಅವರು ಮನವಿ ಮಾಡಿದರು.

ಇದನ್ನೂ ಓದಿ: Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​

ಈ ಸಂದರ್ಭದಲ್ಲಿ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಇತರರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

ರಾಜ್ಯಾದ್ಯಂತ ಹಲವೆಡೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಟ್ಟಿಗೆ ಮೇ. 8ರವರೆಗೆ ಹೀಟ್‌ ವೇವ್‌ (Heat Wave) ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ ಇದ್ದರೂ ಕೆಲವೆಡೆ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಸೋಮವಾರದಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ (Karnataka Weather Forecast) ನೀಡಲಿದೆ.

ಈ ಜಿಲ್ಲೆಗಳಲ್ಲಿ ಬಿಸಿ ಬಿಸಿ ವಾತಾವರಣ

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 3 ದಿನಗಳವರೆಗೆ ಕರಾವಳಿಯಲ್ಲಿ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ.

ಇದನ್ನೂ ಓದಿ: Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ದೇಹದ ಪ್ರತಿರೋಧಕ ಶಕ್ತಿಯನ್ನು ಕುಂದಿಸುವಂಥ ಹವಾಮಾನ ಯಾವುದೇ ದಿನಗಳಲ್ಲೂ ಎದುರಾಗಬಹುದು. ಅದಕ್ಕೇನು ಮಳೆಯೇ ಬೇಕು. ಚಳಿಯೇ ಇರಬೇಕು ಎಂದಿಲ್ಲ. ಈ ಬಿರು ಬೇಸಿಗೆಯಲ್ಲೂ ಕಾಟ ಕೊಡುವ ವೈರಸ್‌ಗಳು ತಪ್ಪುವುದಿಲ್ಲ. ಇದಕ್ಕಾಗಿ ಭದ್ರವಾದ ಪ್ರತಿರೋಧಕ ವ್ಯವಸ್ಥೆಯನ್ನ ನಮ್ಮ ದೇಹ ಹೊಂದಬೇಕಾಗುತ್ತದೆ. ಅದಿಲ್ಲದಿದ್ದರೆ ಬಿಸಿಲಾಘಾತ, ನಿರ್ಜಲೀಕರಣದಿಂದಲೂ ತಪ್ಪಿಸಿಕೊಳ್ಳುವುದಕ್ಕೆ ದೇಹ ಸೋಲುತ್ತದೆ. ಇಂಥ ದಿನಗಳಲ್ಲಿ ನಮ್ಮ ನೆರವಿಗೆ ಬರುವುದು ಹುಳಿ-ಸಿಹಿಯ ಬೆಟ್ಟದ ನೆಲ್ಲಿಕಾಯಿ. ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಈ ಪುಟ್ಟ ಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ (summer Health Tips) ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ?

pudina gooseberry juice

ಪುದೀನಾ-ನೆಲ್ಲಿ ಪಾನಕ

ವಿಟಮಿನ್‌ ಸಿ, ಇ ಮತ್ತು ಎ, ನಾರು ಹಾಗೂ ವಿಟಮಿನ್‌ ಬಿ1 ಸತ್ವಗಳನ್ನು ಈ ಪಾನಕ ಭರಪೂರ ತುಂಬಿಕೊಂಡಿರುತ್ತದೆ. ಬೇಸಿಗೆಯಲ್ಲಿ ಕಾಡುವ ಜೀರ್ಣಾಂಗಗಳ ಸಮಸ್ಯೆಯಿಂದ ಮುಕ್ತಿ ನೀಡುವಂಥ ಪೇಯವಿದು. ಬೆಟ್ಟದ ನೆಲ್ಲಿಕಾಯಿಗೆ ಚಿಟಿಕೆ ಉಪ್ಪು ಮತ್ತು ಪುದೀನಾ ಎಲೆಗಳನ್ನು ಸೇರಿಸಿ ರುಬ್ಬಿ, ರಸ ತೆಗೆಯಿರಿ. ಇದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಅಥವಾ ಹಾಗೆಯೇ ಕುಡಿಯುವವರು ಅಂತೆಯೇ ಕುಡಿಯಬಹುದು.

ನೆಲ್ಲಿ ಸ್ಮೂದಿ

ಇದಕ್ಕಾಗಿ ಮೊಸರು, ಬಾಳೆಹಣ್ಣು, ಕೊಂಚ ಪಾಲಕ್‌ ಎಲೆಗಳು ಮತ್ತು ನೆಲ್ಲಿಕಾಯಿಯನ್ನು ಬ್ಲೆಂಡರ್‌ಗೆ ಹಾಕಿ ತಿರುಗಿಸಿ. ಇದರನ್ನು ಸೋಸಬಾರದು. ಎಲ್ಲ ನಾರಿನಂಶ ಇರುವಂತೆಯೇ ಸೇವಿಸಬೇಕು. ಇದರಿಂದ ಬಾಳೆಹಣ್ಣಿನಲ್ಲಿರುವ ಶರ್ಕರಪಿಷ್ಟಗಳು, ಮೊಸರಿನಲ್ಲಿರುವ ಕೊಬ್ಬು ಮತ್ತು ಪ್ರೊಬಯಾಟಿಕ್‌ ಅಂಶಗಳು, ಪಾಲಕ್‌ನಲ್ಲಿರುವ ಖನಿಜಗಳು ಎಲ್ಲವೂ ನೆಲ್ಲಿ ಕಾಯಿಯ ಜೊತೆಗೆ ಹೊಟ್ಟೆ ಸೇರುತ್ತವೆ. ತೂಕ ಇಳಿಸುವವರು ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

ನೆಲ್ಲಿ ಸಲಾಡ್‌

ಬೇಸಿಗೆಯಲ್ಲಿ ತಂಪಾದ ಸಲಾಡ್‌ಗಳು ಎಲ್ಲರಿಗೂ ಇಷ್ಟವಾಗುವಂಥವು. ಅದರಲ್ಲೂ ಹುಳಿ-ಸಿಹಿ ರುಚಿಯ ಸಲಾಡ್‌ಗಳು ಮತ್ತೂ ಇಷ್ಟವಾಗುತ್ತವೆ. ಇದಕ್ಕಾಗಿ ನೆಲ್ಲಿಕಾಯಿಯ ಜೊತೆ ಸೌತೇಕಾಯಿ, ದಾಳಿಂಬೆ, ಸೇಬು ಮತ್ತು ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ತೆಗೆದುಕೊಳ್ಳಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಕೊಂಚ ಕಾಳುಮೆಣಸಿನ ಪುಡಿ ಸೇರಿಸಿ. ನಿಮ್ಮ ರುಚಿಕರ ಸಲಾಡ್‌ ಸಿದ್ಧ.

Image Of Gooseberry Benefits

ನೆಲ್ಲಿ ಪಾಪ್ಸಿಕಲ್‌

ತಂಪಾದ ಏನನ್ನು ಕೊಟ್ಟರೂ ಕೈಯೊಡ್ಡುವಂಥ ಸ್ಥಿತಿ ಈ ಬೇಸಿಗೆಯಲ್ಲಿ. ಅದರಲ್ಲೂ ಫ್ರೋಜನ್‌ ತಿಂಡಿಗಳು ಮತ್ತೂ ಇಷ್ಟವಾಗುತ್ತವೆ. ಪಾಪ್ಸಿಕಲ್‌ ರೂಪದಲ್ಲಿ ನಮಗೆ ಪ್ರಿಯವಾದ್ದನ್ನು ಸವಿಯುವುದು ಬೇರೆಯದೇ ಸೊಗಸನ್ನು ನೀಡುತ್ತದೆ. ನೆಲ್ಲಿಕಾಯನ್ನು ರುಬ್ಬಿ ರಸ ತೆಗೆಯಿರಿ. ಇದಕ್ಕೆ ಕೊಂಚ ಜೇನುತುಪ್ಪ ಮತ್ತು ಸಿಹಿ ಮೊಸರು ಬೆರೆಸಿ. ಈ ಮಿಶ್ರಣವನ್ನು ಪಾಪ್ಸಿಕಲ್‌ ಅಚ್ಚಿಗೆ ಸುರಿಯಿರಿ. ಫ್ರೀಜ್‌ ಮಾಡಿ ತೆಗೆದು ಬಾಯಿ ಚಪ್ಪರಿಸಿದರಾಯಿತು.

ಡಿಟಾಕ್ಸ್‌ ನೀರು

ಬರೀ ನೀರು ಕುಡಿಯುವುದಕ್ಕೆ ಸಾಧ್ಯವಿಲ್ಲ ಎನಿಸಿದರೆ, ಐದು ಲೀ ಪಾತ್ರೆಯಲ್ಲಿ ಹತ್ತಿಪ್ಪತ್ತು ಪುದೀನಾ ಎಲೆಗಳು, ಸೌತೆಕಾಯಿ ಗಾಲಿಗಳು ಮತ್ತು ನೆಲ್ಲಿಯ ತುಂಡುಗಳನ್ನು ಧಾರಾಳವಾಗಿ ಸೇರಿಸಿ. ಒಂದೆರಡು ತಾಸು ಹಾಗೆಯೇ ಬಿಡಿ. ನಂತರ ದಿನವಿಡೀ ಈ ನೀರು ಕುಡಿದು ಸಂತೃಪ್ತಿಯಿಂದಿರಿ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ.

indian gooseberry

ನೆಲ್ಲಿ ಐಸ್‌ ಟೀ

ಆರೆಂಟು ಪುದೀನಾ ಚಿಗುರುಗಳ ಜೊತೆಗೆ ನೆಲ್ಲಿ ಕಾಯಿಯ ತುಣುಕುಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಇದು ಆರಿದ ಮೇಲೆ ಕೊಂಚ ಜೇನುತುಪ್ಪ ಸೇರಿಸಿ, ಫ್ರಿಜ್‌ನಲ್ಲಿಡಿ. ಬೇಕಾದಾಗ ಈ ಈ ಪೇಯವನ್ನು ತೆಗೆದು, ಕುಡಿದು ಸಂಭ್ರಮಿಸಿ. ನೆಲ್ಲಿಕಾಯಿಯನ್ನು ಅತಿಯಾಗಿ ಸೇವಿಸುವುದೂ ಸಮಸ್ಯೆಗಳನ್ನು ತರಬಹುದು. ಈಗಾಗಲೇ ತೂಕ ಕಡಿಮೆ ಇರುವವರು ಇನ್ನೂ ತೂಕ ಇಳಿದ ನಿದಾರ್ಶನಗಳಿವೆ. ಹಾಗಾಗಿ ತೂಕ ಇಳಿಸುವವರು ಇದನ್ನು ಸೇವಿಸಿದಷ್ಟು, ಕಡಿಮೆ ತೂಕದವರಿಗೆ ಬೇಕಾಗುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather :ಮಳೆಯ ಕಣ್ಣಾ ಮುಚ್ಚಾಲೆ ಆಟ; ವರುಣ ದೇವನ ತಲೆ ಮೇಲೆ ಹೊತ್ತು ತಿರುಗಿದ ಗ್ರಾ.ಪಂ ಪಿಡಿಒ

Karnataka Weather Forecast : ರಾಜ್ಯದಲ್ಲಿ ಆಗಾಗ ಮಳೆಯು (Rain News) ದರ್ಶನ ಕೊಡುತ್ತಿದ್ದರೂ, ಸೂರ್ಯನ ಶಾಖಕ್ಕೆ ಭೂಮಿ ಕಾದ ಕೆಂಡವಾಗುತ್ತಿದೆ. ಬಿಸಿಲ ಧಗೆಯು ಹೆಚ್ಚಾಗುತ್ತಲೇ ಇದ್ದು, ಮಳೆಗಾಗಿ ತಾವರೆಕೆರೆ ಗ್ರಾ.ಪಂ ಪಿಡಿಓ ವರುಣ ದೇವನನ್ನು ಪ್ರತಿಷ್ಠಾಪಿಸಿ ತಲೆ ಮೇಲೆ ಹೊತ್ತು ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

By

Karnataka Weather Forecast
ದೇವರ ಮೊರೆ ಹೋದ ತಾವರೆಕೆರೆ ಗ್ರಾ.ಪಂ ಪಿಡಿಒ
Koo

ತುಮಕೂರು/ಬೆಂಗಳೂರು: ಬಿಸಿಲ ಬೇಗೆಗೆ ಬೇಸತ್ತ ಜನರು ಮಳೆಗಾಗಿ (Rain News) ದೇವರ ಮೊರೆ ಹೋಗುತ್ತಿದ್ದಾರೆ. ಮಳೆರಾಯನ (Karnataka Weather Forecast) ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಮಳೆಗಾಗಿ ಪೂಜೆ ನಡೆದಿದೆ.

ತಾವರೆಕೆರೆ ಗ್ರಾ.ಪಂ ಪಿಡಿಒ ನಾಗರಾಜ್ ಅವರು ಸ್ವತಃ ಮಳೆರಾಯನ ಹೊತ್ತು ಜಲಾಭಿಷೇಕ ಮಾಡಿ ಪ್ರಾರ್ಥನೆ ಸಲ್ಲಿಸಿದರು. ವರುಣ ದೇವನನ್ನು ಪ್ರತಿಷ್ಠಾಪಿಸಿ ನಂತರ ತಲೆ ಮೇಲೆ ಹೊತ್ತು ಮನೆ ಮನೆಗೆ ಹೋಗಿ ಪ್ರಾರ್ಥನೆ ಸಲ್ಲಿಸಿದರು. ಭೀಕರ ಬರಗಾಲ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿದರು.

ಇನ್ನೂ‌ ಶನಿವಾರದಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಚಾಮರಾಜನಗರದ ಎಂ.ಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 44.7 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

ಮತ್ತಷ್ಟು ದಿನ ಬಿಸಿಲ ತಾಪ

ರಣಬಿಸಿಲು, ಉಷ್ಣಗಾಳಿ ಹೊಡೆತಕ್ಕೆ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಮತ್ತಷ್ಟು ದಿನ ಬಿಸಿಲ ತಾಪ ಹೆಚ್ಚಾಗಲಿದ್ದು, ಆರೋಗ್ಯದ ಕಾಳಜಿ ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಉಷ್ಣತೆಯು ಇದ್ದಕ್ಕಿದ್ದಂತೆ ತೀಕ್ಷ್ಣವಾಗಿ ಮೇಲೇರಿ, ತನ್ನ ಸಾಮಾನ್ಯ ಮಟ್ಟವನ್ನು ಮೀರುವುದನ್ನು ಶಾಖದ ಅಲೆಗಳು ಅಥವಾ ಹೀಟ್‌ವೇವ್‌ ಎನ್ನಲಾಗುತ್ತದೆ. ಸದ್ಯ ಸಾಮಾನ್ಯ ಮಟ್ಟವನ್ನು ಮೀರಿ, ಉಷ್ಣತೆ ಮೇಲೇರುವುದರಿಂದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು. ಸುಸ್ತು, ಆಯಾಸ, ಎಚ್ಚರ ತಪ್ಪುವುದು ಆಗಲಿದೆ. ಹೀಗಾಗಿ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ.

ಮೇ.8ರವೆರೆಗೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಲಿದೆ.

ಮಳೆ ಸೂಚನೆ ಇದ್ಯಾ?

ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇದರ ಹೊರತಾಗಿಯೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಲ್ಲಿ ಮತ್ತೆ ತಾಪಮಾನ ಏರಿಕೆ

ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ನಿರ್ಮಲ ಆಕಾಶ ಇರಲಿದ್ದು, ಗರಿಷ್ಠ ಉಷ್ಣಾಂಶವು 39ರ ಗಡಿ ದಾಟಲಿದೆ.‌ ಜತೆಗೆ ಆಗಾಗ ಗಾಳಿ ವೇಗವು ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Karnataka Weather Forecast : ಗಂಟೆಗಳ ಕಾಲ ಮಳೆ ಸುರಿದರೂ ವಾತಾವರಣ ಮಾತ್ರ ಕಾದ ಕೆಂಡವಾಗಿಯೇ ಇದೆ. ರಾಜ್ಯಾದ್ಯಂತ ಕೆಲವೆಡೆ ಮಳೆ ಸೂಚನೆ (Rain News) ಇದ್ದರೂ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದ್ದು, ಹವಾಮಾನ ಇಲಾಖೆ (Karnataka Weather Forecast) ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

ಇದನ್ನೂ ಓದಿ: Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Karnataka Weather Forecast : ಬೆಂಗಳೂರಲ್ಲಿ ಎರಡು ದಿನಗಳಿಂದ ಮಳೆಯು ಅಬ್ಬರಿಸಿತ್ತು. ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಮಳೆ (Rain News) ಜತೆಗೆ ಹೀಟ್‌ ವೇವ್‌ (Heat Wave) ಅಲರ್ಟ್‌ ಅನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ನಿನ್ನೆ ಶುಕ್ರವಾರ ಬಂದ ಬಿರುಗಾಳಿ ಮಳೆಗೆ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

karnataka weather Forecast
ಬಿರುಗಾಳಿಗೆ ಸಿಲುಕಿ ಮೃತಪಟ್ಟ ವೃದ್ಧೆ ಮಾದಮ್ಮ
Koo

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಬಿಸಿಲು ಸಿಕ್ಸರ್‌ ಬಾರಿಸುತ್ತಿದ್ದರೆ, ಅತ್ತ ಮಳೆಯು ಫೋರ್ ಬಾರಿಸುತ್ತಿದೆ. ಗುರುವಾದ ಅಬ್ಬರಿಸಿದ ಬಿರುಗಾಳಿ ಮಳೆಗೆ (Rain News) ವೃದ್ಧೆಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಘಟನೆ (Karnataka Weather Forecast) ನಡೆದಿದೆ.

ಮಾದಮ್ಮ (66) ಮೃತ ದುರ್ದೈವಿ. ನಿನ್ನೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಮಾದಮ್ಮ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂದಿನಂತೆ ತಮ್ಮ ಜಮೀನಿಗೆ ಮೇವು ತರಲು ಹೋದ ಸಂದರ್ಭದಲ್ಲಿ ಬಿರುಗಾಳಿ ಮಳೆಗೆ ಸಿಲುಕಿದ್ದಾರೆ. ಮೇವನ್ನು ತೆಗೆದುಕೊಂಡು ಬರುವಾಗ ರಸ್ತೆ ಮಧ್ಯದಲ್ಲಿ ಬಿರುಗಾಳಿ ಮಳೆಗೆ ಸಿಲುಕಿ ಕುಸಿದು ಬಿದ್ದಿದ್ದಾರೆ. ಕೆಳಗಡೆ ಬಿದ್ದ ಪರಿಣಾಮ ಮಾದಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ನಾಗರಹೊಳೆ ಅಭಯಾರಣ್ಯಕ್ಕೆ ತಂಪೆರೆದ ಮಳೆರಾಯ

ನಾಗರಹೊಳೆ ಅಭಯಾರಣ್ಯದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಇದರಿಂದಾಗಿ ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಕಾಡ್ಗಿಚ್ಚು ಆತಂಕದಲ್ಲಿದ್ದ ಸಿಬ್ಬಂದಿಗೆ ವರಣನ ಸಿಂಚನದಿಂದ ಆತಂಕ ದೂರವಾಗಿದೆ. ಮೈಸೂರು ಜಿಲ್ಲೆ ಎಚ್.ಡಿ ಕೋಟೆ ಮಾರ್ಗ ಮಧ್ಯೆ ಬಿರುಗಾಳಿ ಸಹಿತ ಸುರಿದ ಮಳೆಗೆ ನೂರಾರು ಮರಗಳು ಧರೆಗುರುಳಿದ್ದವು.

ಎಚ್.ಡಿ ಕೋಟೆಯ ದಮ್ಮನಕಟ್ಟೆ ವಲಯದಲ್ಲಿ ಧಾರಾಕಾರ ಮಳೆಯಾಗಿದೆ. ಒಣಗಿ ನಿಂತ ಕಾನನಕ್ಕೆ ಜೀವ ಕಳೆ ಬಂದಿದೆ. ರಸ್ತೆಯ ಹಿಕ್ಕೆಲೆಗಳ ಹಸಿರು ಹುಲ್ಲು ಬರಲು ಮೊದಲ ಮಳೆ ಸಹಕಾರಿಯಾಗಿದೆ. ಸದ್ಯಕ್ಕೆ ಕಾಡಿಗೆ ಬೆಂಕಿ ಬೀಳುವ ಆತಂಕವು ಅರಣ್ಯ ಇಲಾಖೆ‌ ಸಿಬ್ಬಂದಿಗೆ ದೂರಾವಾಗಿದೆ.

ಶನಿವಾರವೂ ಮಳೆ ಅಬ್ಬರ

ಶನಿವಾರ ಮಧ್ಯಾಹ್ನದಂದು ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಐಎಂಡಿ ಮಾಹಿತಿ ನೀಡಿದೆ.

ಮೇ.5ರ ಭಾನುವಾರದಂದು ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಏ. 6ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

ಶಾಖದ ಅಲೆಯ ಎಚ್ಚರಿಕೆ

ಮಳೆ ನಡುವೆಯೂ ಕೆಲವೆಡೆ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಮುಂದಿನ 4 ದಿನಗಳವರೆಗೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿ ಸಮಯ ಬೆಚ್ಚಗಿನ ವಾತಾವರಣ ಇರಲಿದೆ. ಕರಾವಳಿಯಲ್ಲಿ ಬಿಸಿ ಗಾಳಿ ಬೀಸಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mahanati Show Gagana Comedy About Rishi actor
ಕಿರುತೆರೆ29 seconds ago

Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

amethi unrest
ದೇಶ15 mins ago

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Paris Olympics
ಕ್ರೀಡೆ55 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ56 mins ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್1 hour ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

Megha Dhade bigg boss marathi winner crptic post about rahul gandhi
ಸಿನಿಮಾ2 hours ago

Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

Prajwal Revanna Case
ಕರ್ನಾಟಕ2 hours ago

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Sunil Narine
ಕ್ರೀಡೆ2 hours ago

Sunil Narine: ಅತ್ಯಧಿಕ ಸಿಕ್ಸರ್​ ಸಾಧಕರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನೀಲ್​ ನರೈನ್

Ranjani Raghavan Starrer Sathyam Kannada Movie Gets UA Certificate
ಸ್ಯಾಂಡಲ್ ವುಡ್2 hours ago

Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ15 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ17 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ17 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌