Murder Case : ನೀರಿನ ತೊಟ್ಟಿಯಲ್ಲಿ ತೇಲುತ್ತಿತ್ತು ಮಗುವಿನ ಶವ; ಮೊಮ್ಮಗಳನ್ನೇ ಕೊಂದು ಬಿಟ್ಟನಾ! Vistara News

ಕರ್ನಾಟಕ

Murder Case : ನೀರಿನ ತೊಟ್ಟಿಯಲ್ಲಿ ತೇಲುತ್ತಿತ್ತು ಮಗುವಿನ ಶವ; ಮೊಮ್ಮಗಳನ್ನೇ ಕೊಂದು ಬಿಟ್ಟನಾ!

Family Dispute : ಕೌಟುಂಬಿಕ ಕಲಹಕ್ಕೆ ತಾತನೇ ಮೊಮ್ಮಗಳನ್ನು ಹತ್ಯೆ ಮಾಡಿದ್ದಾಗಿ ಮೃತಳ ತಾಯಿ ಪೊಲೀಸ್‌ ಠಾಣೆ (Murder Case) ಮೆಟ್ಟಿಲೇರಿದ್ದಾಳೆ.

VISTARANEWS.COM


on

Srilalitha reddy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಇಲ್ಲಿನ ಬಾಗೇಪಲ್ಲಿ ತಾಲೂಕಿನ ರೇಚನಾಯಕನಪಲ್ಲಿ ಗ್ರಾಮದಲ್ಲಿ ನೀರಿನ ತೊಟ್ಟಿಯಲ್ಲಿ 2 ವರ್ಷದ ಹೆಣ್ಣು ಮಗುವೊಂದು ಶವವಾಗಿ (murder case) ಪತ್ತೆಯಾಗಿದೆ. ಶ್ರೀಲಲಿತಾರೆಡ್ಡಿ (2) ಮೃತ ದುರ್ದೈವಿ.

ಮಗುವಿನ ಸಾವಿನ ಹಿಂದೆ ತಾತ ಸೋಮಶೇಖರರೆಡ್ಡಿಯ ಕೈವಾಡವಿದೆ ಎಂದು ಶಂಕಿಸಲಾಗಿದೆ. ಕನ್ಯಾಕುಮಾರಿ ಹಾಗೂ ರಾಜಶೇಖರರೆಡ್ಡಿ ದಂಪತಿಯ ಮಗುವನ್ನು ಮಾವ ಸೋಮಶೇಖರರೆಡ್ಡಿ ಹತ್ಯೆ ಮಾಡಿರಬಹುದೆಂದು ಆರೋಪಿಸಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ಮಾಡಿರಬಹುದೆಂದು ಆರೋಪಿಸಿ ಮಾವನ ಮೇಲೆ ಸೊಸೆ ಕನ್ಯಾಕುಮಾರಿ ದೂರು ನೀಡಿದ್ದಾರೆ. ಪಾತಪಾಳ್ಯ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ನೇಣಿಗೆ ಶರಣಾದ ಯುವಕ, ಕೊಲೆ ಶಂಕೆ!

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೇ ಮತ್ತೊಂದು ಅನುಮಾನಾಸ್ಪದ ಸಾವು ಪ್ರಕರಣ ವರದಿ ಆಗಿದೆ. ಇಲ್ಲಿನ ಶಿಡ್ಲಘಟ್ಟ ತಾಲೂಕಿನ ಅಲಗುರ್ಕಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಅಲಗುರ್ಕಿ ಗ್ರಾಮದ ರವಿ (24) ಮೃತ ದುರ್ದೈವಿ.

ಹತ್ಯೆ ಮಾಡಿ ಮನೆಯಲ್ಲೇ ನೇಣು ಹಾಕಿರುವ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ದಿಬ್ಬೂರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Murder Case : ಮಲಗಿದ್ದವಳ ಮೇಲೆ ಕಲ್ಲು ಎತ್ತಿಹಾಕಿ ಕೊಂದ; ಬಳಿಕ ಮರಕ್ಕೆ ನೇಣು ಬಿಗಿದುಕೊಂಡ ಕುಡುಕ ಪತಿ!

ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!

ಚಿತ್ರದುರ್ಗ: ಇಲ್ಲಿನ ಆಂಜನೇಯ ಕ್ಲಾತ್ ಬಳಿ ಮನೆಯಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ (Suspicious death) ಪತ್ತೆಯಾಗಿದ್ದಾಳೆ. ಚಳ್ಳಕೆರೆ ನಗರದ ಸತ್ಯ ತೆಲಗಿ (21) ಮೃತಳು.

3 ವರ್ಷದ ಹಿಂದೆ ಪ್ರಜ್ವಲ್ ತೆಲಗಿ ಎಂಬಾತನೊಂದಿಗೆ ಸತ್ಯಳಾ ಮದುವೆ ಆಗಿತ್ತು. ಆತನೇ ಹತ್ಯೆ ಮಾಡಿ ನೇಣು ಹಾಕಿದ್ದಾನೆ ಎಂದು ಮೃತ ಪೋಷಕರು ಆರೋಪಿಸಿದ್ದಾರೆ. ಪ್ರಜ್ವಲ್‌ ದಿನನಿತ್ಯ ಕುಡಿದು ಬಂದು ಪತ್ನಿ ಸತ್ಯಾಳಿಗೆ ಹೊಡೆಯುತ್ತಿದ್ದ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿ ಸತ್ಯಳಿಗೆ ಇಲ್ಲ. ಅವಳ ಗಂಡನೇ ಅವಳನ್ನು ಹೊಡೆದು ಬಡಿದು ಕೊಲೆ ಮಾಡಿದ್ದಾನೆ ಎಂದು ಆಕ್ರೋಶ ಹೊರಹಾಕಿದ್ದಾರೆ.

sathya family Crying
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಇದನ್ನೂ ಓದಿ: Road Accident : ಹಿಟ್‌ ಆ್ಯಂಡ್‌ ರನ್‌; ಬೈಕ್‌ ಸವಾರ ಸತ್ತರೂ ನೋಡದೆ ಹೋದ ಕಾರು ಚಾಲಕ!

ಆತನ ಸ್ಟೇಟಸ್‌ನಲ್ಲಿ ಏನಿದೆ?

ಇನ್ನು ಸತ್ಯಾಳ ಪತಿ ಪ್ರಜ್ವಲ್‌ ತನ್ನ ವಾಟ್ಸ್‌ಪ್‌ ಸ್ಟೇಟಸ್‌ನಲ್ಲಿ‌ ಮಾರ್ಮಿಕವಾಗಿ ಬರಹವೊಂದನ್ನು ಹಾಕಿಕೊಂಡಿದ್ದಾನೆ. ಉಸಿರಿನ ತೊಂದರೆಯಿಂದ ಅಸುನೀಗಿದ ಹೆಣವೊಂದು ಚಿತೆಯಲ್ಲಿ ಉರಿಯುತ್ತಿತ್ತು. ಉರಿಯುತ್ತಿದ್ದ ಹೆಣವು ಒಣ ಕಟ್ಟಿಗೆಯೊಂದಿಗೆ ವಾಗ್ವಾದಕ್ಕಿಳಿದಿತ್ತು. ನನ್ನನ್ನೇಕೆ ಸುಡುತ್ತಿರುವೆ? ಇದಕ್ಕೆ ಒಣ ಕಟ್ಟಿಗೆಯ ಉತ್ತರ ಹೀಗಿತ್ತು. ನನ್ನ ಹಸಿರಾಗಿರಲು ಬಿಟ್ಟಿದ್ದರೆ ಇಂದು ನಿನ್ನ ಉಸಿರು ಉಳಿಯುತ್ತಿತ್ತು. ನಾನು ಬೆಂದು ಕೆಂಡವಾಗುತ್ತಿರಲಿಲ್ಲ, ನೀನು ಸುಟ್ಟು ಬೂದಿಯೂ ಆಗುತ್ತಿರಲಿಲ್ಲ ಎಂದು ಚಿತೆಯ ಫೋಟೊದೊಂದಿಗೆ ಮೇಲಿನ ಬರಹವನ್ನು ಪ್ರಜ್ವಲ್‌ ಹಾಕಿದ್ದಾನೆ.

Prajwal And his status
ಪ್ರಜ್ವಲ್‌ನ ಹಾಕಿರುವ ಸ್ಟೇಟಸ್‌

ವಾಟ್ಸಪ್ ಸ್ಟೇಟಸ್‌ನಲ್ಲಿ ಈ ರೀತಿಯ ಮಾರ್ಮಿಕವಾಗಿ ಸ್ಟೇಟಸ್ ಹಾಕಿದ್ದಕ್ಕೆ ಸತ್ಯಳ ಸಹೋದರ ಕಿಶೋರ್‌ ಗಂಭೀರ ಆರೋಪವನ್ನು ಮಾಡಿದ್ದಾರೆ. ಆತ ವಾಟ್ಸಪ್‌ನಲ್ಲಿ ಆ ಸ್ಟೇಟಸ್ ಹಾಕಿದ್ದು ಯಾಕೆ ? ನನ್ನ ತಂಗಿಯನ್ನು ಅವನೇ ಏನೋ ಮಾಡಿದ್ದಾನೆ. ಪೊಲೀಸರು ಈ ಸಂಬಂಧ ಸೂಕ್ತವಾದ ತನಿಖೆಯನ್ನು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇತ್ತ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕೆಳಗಿಸಿ, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Child trade : IVFಗೆ ಗಾರ್ಮೆಂಟ್ಸ್‌ ಯುವತಿಯರ ಅಂಡಾಣು!; ಮಕ್ಕಳ ಮಾರಾಟ ಗ್ಯಾಂಗ್‌ ಕರಾಮತ್ತು

Child trade : ಬೆಂಗಳೂರಿನ ಸಿಸಿಬಿ ಪೊಲೀಸರು ದೊಡ್ಡದೊಂದು ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದಾರೆ. ಈ ಜಾಲವು ಮಕ್ಕಳನ್ನು ಕೃತಕ ಗರ್ಭಧಾರಣೆ ಮೂಲಕ ಸೃಷ್ಟಿಸಿ ಮಾರಾಟ ಮಾಡುತ್ತಿತ್ತು!

VISTARANEWS.COM


on

Child trade in Bangalore
ಬಂಧಿತರ ಮಕ್ಕಳ ಮಾರಾಟ ಜಾಲದ ಆರೋಪಿಗಳು
Koo

ಬೆಂಗಳೂರು: ಬೆಂಗಳೂರಿನಲ್ಲಿ ಬಯಲಾಗಿರುವ ಮಕ್ಕಳ ಮಾರಾಟ ಜಾಲದ (Child trade) ಭಯಾನಕ ಕೃತ್ಯಗಳು ಒಂದರ ಹಿಂದೊಂದರಂತೆ ಬಯಲಾಗುತ್ತಿವೆ. ಕಳೆದ ಹಲವು ವರ್ಷಗಳಿಂದ ಕರ್ನಾಟಕ, ತಮಿಳುನಾಡು ಮತ್ತು ಆಂಧ್ರದಲ್ಲಿ ಮಕ್ಕಳನ್ನು ಮಾರಾಟ ಮಾಡುವ ಜಾಲ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗಿದ್ದು, ಇವರ ಪೈಕಿ ಎಂಟು ಮಂದಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಇವರ ಪೈಕಿ ಒಬ್ಬಾಕೆ ಮಗುವನ್ನು ಮಾರಾಟ ಮಾಡಿದವಳಾಗಿದ್ದರೆ, ಉಳಿದವರು ಮಾರಾಟ ಜಾಲದವರು.

ಈ ಗ್ಯಾಂಗ್‌ ಮಕ್ಕಳ ಬೇಡಿಕೆ ಇಡುವ ಗ್ರಾಹಕರು ಮತ್ತು ಮಕ್ಕಳನ್ನು ಹೆತ್ತು ಮಾರಾಟ ಮಾಡುವ ಬಡವರ ನಡುವೆ ಆಪರೇಷನ್‌ ನಡೆಸುತ್ತಿತ್ತು. ಅದರ ನಡುವೆ, ತಾನೇ ಕೃತಕ ಗರ್ಭಧಾರಣೆ (ಐವಿಎಫ್‌) ಮೂಲಕವೂ ಮಕ್ಕಳನ್ನು ಪಡೆಯುವ ತಂತ್ರಗಳನ್ನು ಮಾಡುತ್ತಿತ್ತು. ಇದಕ್ಕೆ ಗಾರ್ಮೆಂಟ್ಸ್‌ ಯುವತಿಯರನ್ನೂ ಬಳಸಿಕೊಳ್ಳಲಾಗುತ್ತಿದೆ ಎಂದೂ ಹೇಳಲಾಗಿದೆ.

ಸಾಮಾನ್ಯವಾಗಿ ಆಗಲೇ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದು, ಬಳಿಕ ಗರ್ಭಧಾರಣೆಯಾದ ಹಂತದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಗರ್ಭಪಾತ ಮಾಡಿಸಲು ಮುಂದಾಗುವ ಬಡವರನ್ನೇ ಟಾರ್ಗೆಟ್‌ ಮಾಡುತ್ತಿತ್ತು ಈ ತಂಡ. ಅವರ ಮನವೊಲಿಸಿ ಅವರಿಗೆ ಹಣ ಕೊಡುವ ಆಮಿಷ ಒಡ್ಡಿ, ಮಕ್ಕಳನ್ನು ಹೆತ್ತು ತಮಗೆ ನೀಡುವಂತೆ ಮಾಡುತ್ತಿದ್ದರು.

ಈ ನಡುವೆ, ಐವಿಎಫ್‌ ತಂತ್ರಜ್ಞಾನದ ಮೂಲಕ ಬಾಡಿಗೆ ತಾಯಂದಿರ ಮೂಲಕ ಮಕ್ಕಳನ್ನು ಪಡೆಯುವ ತಂತ್ರವೂ ಇವರಲ್ಲಿತ್ತು. ಇದಕ್ಕಾಗಿ ಹದಿಹರೆಯದ ಯುವತಿಯರ ಅಂಡಾಣುಗಳನ್ನು ಬಳಸಲಾಗುತ್ತಿತ್ತು ಎಂಬ ಮಾಹಿತಿ ಇದೆ. ಅದರಲ್ಲೂ ಮುಖ್ಯವಾಗಿ ಬಡತನದ ಕಾರಣಕ್ಕಾಗಿ ಅಂಡಾಣು ಮಾರಾಟಕ್ಕೆ ಮುಂದಾಗುವ ಗಾರ್ಮೆಂಟ್ಸ್‌ ಕಾರ್ಮಿಕ ಯುವತಿಯರನ್ನು ಈ ಟೀಮ್‌ ಟಾರ್ಗೆಟ್‌ ಮಾಡಿತ್ತು ಎನ್ನಲಾಗಿದೆ. ಸಣ್ಣ ವಯಸ್ಸಿನ ಹೆಣ್ಮಕ್ಕಳಲ್ಲಿ ಹೆಚ್ಚು ಫಲವಂತಿಕೆ ಇರುವ ಅಂಡಾಣುಗಳು ಇರುತ್ತವೆ. ಅವರ ಅಂಡಾಣುಗಳನ್ನು ಬಳಸಿಕೊಂಡು ಪುರುಷನೊಬ್ಬನ ವೀರ್ಯಾಣು ಬಳಸಿ ಭ್ರೂಣಗಳನ್ನು ಕೃತಕವಾಗಿ ಸೃಷ್ಟಿಸಿ ಅದನ್ನು ಬೇರೊಬ್ಬ ಹೆಣ್ಣಿನ ಹೊಟ್ಟೆಯಲ್ಲಿ ಬೆಳೆಸಲಾಗುತ್ತಿತ್ತು. ಇದೆಲ್ಲವೂ ಒಬ್ಬ ನುರಿತ ವೈದ್ಯರು ಮತ್ತು ತಂತ್ರಜ್ಞರ ಸಹಕಾರದಿಂದಲೇ ನಡೆಯುತ್ತಿತ್ತು ಎನ್ನಲಾಗಿದೆ. ಈ ರೀತಿ ಅಂಡಾಣು ಮಾರಾಟ ಮಾಡುವ ಯುವತಿಯರಿಗೆ ಒಳ್ಳೆಯ ಹಣ ಕೂಡಾ ನೀಡಲಾಗುತ್ತಿತ್ತು ಎನ್ನುವುದು ಸಿಸಿಬಿ ತನಿಖೆಯಿಂದ ಬಯಲಾಗಿದೆ.

ತಮಿಳುನಾಡಿನಿಂದ ಆಪರೇಟ್‌ ಮಾಡುತ್ತಿದ್ದ ತಂಡ

ಈಗ ಸಿಕ್ಕಿಬಿದ್ದಿರುವ ಎಂಟು ಮಂದಿಯ ತಂಡ, ತಮಿಳುನಾಡಿನಿಂದ ಪ್ರಮುಖವಾಗಿ ಕಾರ್ಯಾಚರಣೆ ಮಾಡುತ್ತಿತ್ತು. ಈ ತಂಡದಲ್ಲಿರುವ ರಾಧಾ ಎಂಬಾಕೆ ಈ ಹಿಂದೆ ತಮಿಳುನಾಡಿನ ಆಸ್ಪತ್ರೆಯಲ್ಲಿ ಬಾಡಿಗೆ ತಾಯ್ತನದ ಏಜೆಂಟ್‌ ಆಗಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಯಾರು ಮಗು ಬೇಕು ಅನ್ನುತ್ತಾರೆ, ಯಾರಿಗೆ ಬಾಡಿಗೆ ತಾಯ್ತನದ ಮೂಲಕ ಮಗು ಬೇಕು ಎನ್ನುವುದರ ಅರಿವು ಆಕೆಗೆ ಚೆನ್ನಾಗಿತ್ತು ಎನ್ನಲಾಗಿದೆ. ಮಹಾಲಕ್ಷ್ಮಿ ಎಂಬಾಕೆ ಕರ್ನಾಟಕದಲ್ಲಿ ಏಜೆಂಟ್‌ ಆಗಿದ್ದು, ತಮಿಳುನಾಡಿನ ಕೊಂಡಿಯಾಗಿದ್ದಾಳೆ.

ಈ ಟೀಮ್‌ ಮಕ್ಕಳ ಮಾರಾಟದಲ್ಲಿ ಬಣ್ಣ, ಲಿಂಗದ ಆಧಾರದಲ್ಲಿ ದರ ನಿರ್ಣಯ ಮಾಡುತ್ತಿದೆ. ತುಂಬ ಬೆಳ್ಳಗಿರುವ ಮಕ್ಕಳಾದರೆ, ಗಂಡು ಮಕ್ಕಳಾದರೆ ಹೆಚ್ಚು ಹಣ ಕೇಳಿದರೆ, ಹೆಣ್ಣು ಮಕ್ಕಳಿಗೆ ಸ್ವಲ್ಪ ಕಡಿಮೆ ದರ ಇರುತ್ತದೆ ಎನ್ನಲಾಗಿದೆ. ಗಂಡು ಮಕ್ಕಳನ್ನು ಐದರಿಂದ ಹತ್ತು ಲಕ್ಷಕ್ಕೆ ಮಾರಾಟ ಮಾಡಿದರೆ ಹೆಣ್ಣು ಮಕ್ಕಳಿಗೆ ನಾಲ್ಕುರಿಂದ ಐದು ಲಕ್ಷ ರೂ. ಇರುತ್ತದೆಯಂತೆ. ಮಗುವನ್ನು ಹೆತ್ತು ಕೊಡುವ ಮಹಿಳೆಯರಿಗೆ ಒಂದುವರೆಯಿಂದ ಎರಡು ಲಕ್ಷ ರೂ ನೀಡುತ್ತಾರೆ ಎನ್ನುವುದು ಸಿಸಿಬಿ ತನಿಖೆಯ ವೇಳೆ ಬಯಲಾಗಿದೆ.

Continue Reading

ಕೊಪ್ಪಳ

Koppala News: ಗಂಗಾವತಿಯ ವಸತಿ ನಿಲಯಕ್ಕೆ ನಾಲ್ವರು ನ್ಯಾಯಾಧೀಶರ ದಿಢೀರ್ ಭೇಟಿ, ಪರಿಶೀಲನೆ

Koppala News: ಗಂಗಾವತಿಯ ಆನೆಗೊಂದಿ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಡಾ. ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಗಂಗಾವತಿಯ ವಿವಿಧ ಶ್ರೇಣಿಯ ನಾಲ್ವರು ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

surprise visit by four judges to the Gangavathi boys hostel inspection
ಗಂಗಾವತಿಯ ಮೆಟ್ರಿಕ್ ನಂತರದ ಬಾಲಕರ ಡಾ.ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಗಂಗಾವತಿಯ ವಿವಿಧ ಶ್ರೇಣಿಯ ನಾಲ್ವರು ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Koo

ಗಂಗಾವತಿ: ಇಲ್ಲಿನ ಆನೆಗೊಂದಿ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಗಂಗಾವತಿಯ ವಿವಿಧ ಶ್ರೇಣಿಯ ನಾಲ್ವರು ನ್ಯಾಯಾಧೀಶರು, ದಿಢೀರ್ ಭೇಟಿ ನೀಡಿ, ಪರಿಶೀಲನೆ (Inspection) ನಡೆಸಿದರು.

ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸದಾನಂದ ನಾಯಕ್, ಹಿರಿಯ ಶ್ರೇಣಿ ನ್ಯಾಯಾಧೀಶ ರಮೇಶ ಗಾಣಿಗೇರ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಶ್ರೀದೇವಿ ದರ್ಬಾರೆ ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಗೌರಮ್ಮ ಪಾಟೀಲ್ ಅವರು ವಸತಿ ನಿಲಯಕ್ಕೆ ಭೇಟಿ ನೀಡಿದರು.

ವಸತಿ ನಿಲಯದಲ್ಲಿ ಕಲ್ಪಿಸಲಾದ ಸೌಲಭ್ಯ, ಕುಡಿಯುವ ನೀರು, ಊಟ, ಶೌಚಾಲಯ ಸೇರಿದಂತೆ ನಾನಾ ಸವಲತ್ತುಗಳನ್ನು ಪರಿಶೀಲಿಸಿದರು. ವಸತಿ ನಿಲಯದಲ್ಲಿನ ಮಕ್ಕಳ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಮಕ್ಕಳು ಹಲವು ಸಮಸ್ಯೆ, ಕೊರತೆಗಳನ್ನು ನ್ಯಾಯಾಧೀಶರ ಗಮನಕ್ಕೆ ತಂದರು.

ಇದನ್ನೂ ಓದಿ: Radish Benefits: ಮೂಲಂಗಿಯೆಂದು ಮೂಲೆಗೆಸೆಯದಿರಿ! ಮೂಲಂಗಿ ಮಹಿಮೆಯ ತಿಳಿದುಕೊಳ್ಳಿ

ಕುಡಿಯುವ ನೀರು ಸಂಗ್ರಹಿಸುವ ಸ್ಥಳಕ್ಕೆ ತೆರಳಿದ ನ್ಯಾಯಾಧೀಶರು, ಅಲ್ಲಿನ ಕೊಳಕು ಪರಿಸರ ಕಂಡು ವಸತಿ ನಿಲಯದ ಮೇಲ್ವಿಚಾರಕ ಸಂಗಪ್ಪ ಅವರನ್ನು ತರಾಟೆಗೆ ತೆಗೆದುಕೊಂಡರು. ನಿಮ್ಮ ಮನೆಯಲ್ಲಿ ಇದೇ ವ್ಯವಸ್ಥೆಯಲ್ಲಿಟ್ಟು ನೀರು ಕುಡಿಯುತ್ತೀರಾ ಎಂದು ಪ್ರಶ್ನಿಸಿದರು.

ಅಲ್ಲದೇ ಶೌಚಾಲಯ, ವಸತಿ ನಿಲಯದ ಹೊರ ಮತ್ತು ಒಳ ಆವರಣ ಪರಿಶೀಲಿಸಿದ ನ್ಯಾಯಾಧೀಶರು, ಸೂಕ್ತ ಬೆಳಕಿನ ವ್ಯವಸ್ಥೆ, ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು. ಅಲ್ಲದೇ ಮಕ್ಕಳಿಗೆ ಓದಲು ಸಾಕಷ್ಟು ಪುಸ್ತಕ, ದಿನಪತ್ರಿಕೆಗಳ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ವಸತಿ ನಿಲಯದ ಮಕ್ಕಳಿಗೆ ನೀಡುವ ಊಟವನ್ನು ಸ್ವತಃ ನಾಲ್ಕು ಜನ ನ್ಯಾಯಾಧೀಶರು ಊಟ ಮಾಡುವ ಮೂಲಕ ರುಚಿ, ಗುಣಮಟ್ಟ ಪರೀಕ್ಷಿಸಿದರು. ಊಟದ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರ ಮತ್ತೊಮ್ಮೆ ಭೇಟಿ ನೀಡಲಿದ್ದು, ಸೂಚನೆ ನೀಡಿದ ಎಲ್ಲವೂ ಸರಿ ಮಾಡುವಂತೆ ವಸತಿ ನಿಲಯದ ಮೇಲ್ವಿಚಾರಕ ಸಂಗಪ್ಪಗೆ ಸೂಚನೆ ನೀಡಿದರು.

ಇದನ್ನೂ ಓದಿ: COP28: ಹವಾಮಾನ ಬದಲಾವಣೆಯಿಂದ ಜಾಗತಿಕ ಜಿಡಿಪಿ ನಷ್ಟ, ಏನು ಕಾರಣ?

ಈ ವೇಳೆ ಸ್ಥಳದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶರಣಪ್ಪ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಸೌಲಭ್ಯ ನೀಡಲು ಇಲಾಖೆ ಶಕ್ತಿ ಮೀರಿ ಯತ್ನಿಸುತ್ತಿದೆ. ನಿಮ್ಮ ಸಲಹೆ-ಸೂಚನೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ನ್ಯಾಯಾಧೀಶರಿಗೆ ಭರವಸೆ ನೀಡಿದರು.

Continue Reading

ಶಿವಮೊಗ್ಗ

Shivamogga News: ಹಾಲುಗುಡ್ಡೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ

Shivamogga News: ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾ.ಪಂ. ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ, 45 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.

VISTARANEWS.COM


on

MLA Gopalakrishna Belur Bhumi Pooja for drinking water work in Halugudde village
ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.
Koo

ರಿಪ್ಪನ್‌ಪೇಟೆ: ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ, 45 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರಿನ (Drinking Water) ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.

ಬಳಿಕ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ 45 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿಯಿತ್ತು. ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ತಿಳಿಸಿದರು.

ಇದನ್ನೂ ಓದಿ: Radish Benefits: ಮೂಲಂಗಿಯೆಂದು ಮೂಲೆಗೆಸೆಯದಿರಿ! ಮೂಲಂಗಿ ಮಹಿಮೆಯ ತಿಳಿದುಕೊಳ್ಳಿ

ಸ್ಥಳೀಯಾಡಳಿತವು ಕಾಮಗಾರಿ ಕುರಿತು ಚರ್ಚಿಸಿ ಸಮರ್ಪಕವಾಗಿ ಕಾಮಗಾರಿ ನಿರ್ವಹಿಸುವುದರ ಬಗ್ಗೆ ಅಗಾಗ ಮಾಹಿತಿ ಪಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ: COP28: ಹವಾಮಾನ ಬದಲಾವಣೆಯಿಂದ ಜಾಗತಿಕ ಜಿಡಿಪಿ ನಷ್ಟ, ಏನು ಕಾರಣ?

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಆಧ್ಯಕ್ಷ ಕಲಗೋಡು ರತ್ನಾಕರ್, ಬಾಳೂರು ಗ್ರಾಮ ಪಂಚಾಯಿತಿ ಆಧ್ಯಕ್ಷ ಶ್ರೀನಿವಾಸ್ ಆಚಾರ್, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಗಣಪತಿ, ಮಧುಸೂದನ್‌, ಆಶೀಫ್‌ಭಾಷಾ, ಪ್ರಕಾಶ ಪಾಲೇಕರ್, ಲೀಲಾವತಿ ದೊಡ್ಡಯ್ಯ, ರವೀಂದ್ರ ಕೆರೆಹಳ್ಳಿ,ಸಣ್ಣಕ್ಕಿ ಮಂಜ ಹೊಸನಗರ, ಶಶಿಕಲಾ, ರೇಖಾ, ರಾಜಪ್ಪ, ಪಿಡಿಒ ಭರತ್ ಸೇರಿದಂತೆ ಗ್ರಾಮಸ್ಥರು, ಪಕ್ಷದ ಮುಖಂಡರು, ಇತರರು ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Uttara Kannada News: ಬಸ್‌ಗಾಗಿ ಕೋಳಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ

Uttara Kannada News: ಯಲ್ಲಾಪುರ ತಾಲೂಕಿನ ಕೋಳಿಕೇರಿ ಗ್ರಾಮದಲ್ಲಿ ಮಂಗಳವಾರ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

VISTARANEWS.COM


on

Protest by villagers in Kolikeri demanding bus stop
ಯಲ್ಲಾಪುರ ತಾಲೂಕಿನ ಕೋಳಿಕೇರಿ ಗ್ರಾಮದಲ್ಲಿ ಮಂಗಳವಾರ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದರು.
Koo

ಯಲ್ಲಾಪುರ: ತಾಲೂಕಿನ ಕೋಳಿಕೇರಿ ಗ್ರಾಮದಲ್ಲಿ ಮಂಗಳವಾರ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ಪ್ರತಿಭಟನೆ (Protest) ನಡೆಸಿದರು.

ಕೋಳಿಕೇರಿ ಸುತ್ತಮುತ್ತ 7-8 ಗ್ರಾಮಗಳಿದ್ದು, ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, 250ಕ್ಕೂ ಹೆಚ್ಚು ಜನ ಕೆಲಸ ಕಾರ್ಯಗಳಿಗಾಗಿ ಯಲ್ಲಾಪುರ ಹಾಗೂ ಹುಬ್ಬಳ್ಳಿ ಮಾರ್ಗದಲ್ಲಿ ಪ್ರಯಾಣಿಸುತ್ತಾರೆ. ಕೋಳಿಕೇರಿ ಗ್ರಾಮದಲ್ಲಿ ಬಸ್ ನಿಲ್ಲಿಸುವ ಅವಕಾಶ ಇದ್ದಾಗಲೂ ಕೂಡ ಬಸ್ಸುಗಳು ನಿಲ್ಲುತ್ತಿರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳಷ್ಟು ಸಮಸ್ಯೆಯಾಗುತ್ತಿತ್ತು. ಬಸ್ಸುಗಳನ್ನು ನಿಲ್ಲಿಸುವಂತೆ ಗ್ರಾಮಸ್ಥರು ಹಲವಾರು ಬಾರಿ ಮನವಿಗಳನ್ನು ನೀಡಿದ ನಂತರವೂ ಕೂಡ ಯಾವುದೇ ಬಸ್ಸುಗಳು ನಿಲ್ಲಿಸದೆ ಇರುವ ಹಿನ್ನಲೆಯಲ್ಲಿ ಮಂಗಳವಾರ ಹೆದ್ದಾರಿಯಲ್ಲಿ ಸಂಚರಿಸುವ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಕೋಳಿಕೇರಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಘೋಷಣೆ ಕೂಗುತ್ತ ಸುಮಾರು ಎಂಟಕ್ಕೂ ಹೆಚ್ಚು ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿದ ಹಿನ್ನಲೆಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ವ್ಯತ್ಯಯವಾಯಿತು.

ಇದನ್ನೂ ಓದಿ: Operation Tiger : ಮಹಿಳೆ ಸಹಿತ ಇಬ್ಬರ ಬಲಿ ಪಡೆದ ನರಹಂತಕ ಹುಲಿ ಕೊನೆಗೂ ಸೆರೆ; ಹೇಗಿತ್ತು ಆಪರೇಷನ್?

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಿಪಿಐ ರಂಗನಾಥ ನೀಲಮ್ಮನವ‌ರ್, ಪ್ರತಿಭಟನಾಕಾರರು ಹಾಗೂ ಕೆಎಸ್‌ಆರ್ಟಿಸಿ ಅಧಿಕಾರಿಗಳ ಮಧ್ಯೆ ಮಾತುಕತೆ ನಡೆಸಿ, ಕೋಳಿಕೇರಿಯಲ್ಲಿ ನಿಲ್ಲಲು ಅವಕಾಶ ಇರುವ ಬಸ್ಸುಗಳನ್ನು ನಿಲ್ಲಿಸಬೇಕು. ಇಂದಿನಿಂದ ಕೆಲವು ದಿನದ ಮಟ್ಟಿಗೆ ಕೆಎಸ್‌ಆರ್ಟಿಸಿಗೆ ಸಂಬಂಧಪಟ್ಟ ಸಿಬ್ಬಂದಿ ಅಥವಾ ಅಧಿಕಾರಿಯನ್ನು ಕೋಳಿಕೇರಿಯಲ್ಲಿ ನಿಯೋಜಿಸಿ ಯಾವ ಬಸ್ಸುಗಳನ್ನು ನಿಲ್ಲಿಸುವುದಿಲ್ಲ ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೆ ಪ್ರತಿಭಟನಾಕಾರರ ಮನವೊಲಿಸಿ, ಬೇರೆ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್‌ಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಪೊಲೀಸ್ ನಿರೀಕ್ಷಕರ ವಿನಂತಿಯ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾಪಂ ಉಪಾಧ್ಯಕ್ಷ ನಾಗೇಶ ಗಾವಡೆ ಮಾತನಾಡಿ, ಸ್ಥಳೀಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ಸುಗಳನ್ನು ಕೋಳಿಕೇರಿಯಲ್ಲಿ ನಿಲ್ಲಿಸಬೇಕು. ಮುಂದೆ ಮತ್ತೆ ಯಥಾ ಸ್ಥಿತಿ ಮುಂದುವರೆದರೆ ಬೃಹತ್‌ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದರು.

ಇದನ್ನೂ ಓದಿ:Congress Karnataka : ನಿಗಮ-ಮಂಡಳಿ ಲಿಸ್ಟ್‌ ಡೆಲ್ಲಿಗೆ ರವಾನೆ;‌ ಶಾಸಕರಿಗೆ ಮಾತ್ರ ಅವಕಾಶವೆಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಕಣ್ಣಿಗೇರಿ ಗ್ರಾ.ಪಂ ಸದಸ್ಯೆ ಲಕ್ಷ್ಮೀ ವಸಂತ ಪಾಟೀಲ, ಕರ್ನಾಟಕ ರಾಜ್ಯ ಸಿದ್ದಿ ಬುಡಕಟ್ಟು ಜನಪರ ಸಂಘದ ಗೌರವಾಧ್ಯಕ್ಷ ಜಾನ್‌ ಬಿಳಕೀಕರ, ಕೋಳಿಕೇರಿ ಸ.ಹಿ.ಪ್ರಾ.ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ರಾಘು ಅಣ್ಣಪ್ಪ ಮರಾಠಿ, ಬಿ.ಜೆ.ಪಿ. ಕೋಳಿಕೇರಿ ಬೂತ್‌ ಅಧ್ಯಕ್ಷ ನಾಗರಾಜ ಮಾರುತಿ ಪಾಟೀಲ್, ಉನ್ನತಿ ಗೌಳಿ ಕ್ರೆಡಿಟ್ ಕೋ.ಆಪ್ ಅಧ್ಯಕ್ಷ ಮಾಕೂ ಕೋಕರೆ, ತಾಪಂ ಮಾಜಿ ಅಧ್ಯಕ್ಷ ರವಿ ಕೈಟ್ಕರ್, ಗ್ರಾಪಂ ಸದಸ್ಯ ವಾಸುದೇವ್ ಮಪ್ಸೇಕರ್, ಕಾಂಗ್ರೆಸ್ ಮುಖಂಡ ಲಾರೆನ್ಸ್ ಸಿದ್ದಿ, ಸೇರಿದಂತೆ 100 ಕ್ಕೂ ಹೆಚ್ಚು ಗ್ರಾಮಸ್ಥರು ಇದ್ದರು.

Continue Reading
Advertisement
Uttarakhand Tunnel Collapse
EXPLAINER7 mins ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ36 mins ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್44 mins ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Child trade in Bangalore
ಕರ್ನಾಟಕ46 mins ago

Child trade : IVFಗೆ ಗಾರ್ಮೆಂಟ್ಸ್‌ ಯುವತಿಯರ ಅಂಡಾಣು!; ಮಕ್ಕಳ ಮಾರಾಟ ಗ್ಯಾಂಗ್‌ ಕರಾಮತ್ತು

surprise visit by four judges to the Gangavathi boys hostel inspection
ಕೊಪ್ಪಳ52 mins ago

Koppala News: ಗಂಗಾವತಿಯ ವಸತಿ ನಿಲಯಕ್ಕೆ ನಾಲ್ವರು ನ್ಯಾಯಾಧೀಶರ ದಿಢೀರ್ ಭೇಟಿ, ಪರಿಶೀಲನೆ

MLA Gopalakrishna Belur Bhumi Pooja for drinking water work in Halugudde village
ಶಿವಮೊಗ್ಗ53 mins ago

Shivamogga News: ಹಾಲುಗುಡ್ಡೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ

Uttarkashi Tunnel Rescue, All trapped labor rescued and sent them to makeshift hospital
ದೇಶ54 mins ago

ಹೊರ ಬಂದರು ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರು! ಫಲಿಸಿತು ಭಾರತೀಯರ ಪ್ರಾರ್ಥನೆ

Protest by villagers in Kolikeri demanding bus stop
ಉತ್ತರ ಕನ್ನಡ54 mins ago

Uttara Kannada News: ಬಸ್‌ಗಾಗಿ ಕೋಳಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ

Dr Vishnuvardhan
ಕರ್ನಾಟಕ1 hour ago

Dr Vishnuvardhan: ಡಿ. 17 ರಂದು ಡಾ. ವಿಷ್ಣುವರ್ಧನ್‌ ಪುಣ್ಯಭೂಮಿಗಾಗಿ ಪ್ರತಿಭಟನೆ

Within 2 hours all labors will rescue from Uttarkashi Tunnel Collapse
ದೇಶ1 hour ago

ಕೊನೆಗೂ ಸುರಂಗದ ತುದಿಯಲ್ಲಿ ಕಂಡಿತು ಬೆಳಕು! ಯಶಸ್ವಿಯಾಯಿತು ಕಾರ್ಯಾಚರಣೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌