Murder Case : ಪತ್ನಿಗೆ ಚಾಕುವಿನಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ನೀಚ - Vistara News

ಚಿಕ್ಕಬಳ್ಳಾಪುರ

Murder Case : ಪತ್ನಿಗೆ ಚಾಕುವಿನಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ನೀಚ

Murder Case : ದುಷ್ಟ ಪತಿಯೊಬ್ಬ ಶಿವರಾತ್ರಿ ಜಾಗರಣೆಯಂದೇ ಪತ್ನಿಯನ್ನು ಬರ್ಬರ ಕೊಲೆ ಮಾಡಿದ್ದಾನೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

VISTARANEWS.COM


on

Husband stabs wife to death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಶಿವರಾತ್ರಿ ಜಾಗರಣೆ ವೇಳೆ ಹುಲ್ಲು ತರಲು ಪತ್ನಿಯನ್ನು ಕರೆದೊಯ್ದ ಪತಿಗೆ ಅದ್ಯಾವ ಭೂತ ಒಳಹೊಕ್ಕಿತ್ತೋ ಏನೋ ಪತ್ನಿಯನ್ನು ಬರ್ಬರವಾಗಿ ಹತ್ಯೆ (Murder Case) ಮಾಡಿದ್ದಾನೆ.

ನರಸಮ್ಮ (45) ಎಂಬಾಕೆ ಪತಿಯಿಂದಲೇ ಕೊಲೆಯಾದ ದುರ್ದೈವಿ. ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರಸಮ್ಮ ಪತಿ ಗಂಗುಲಪ್ಪ ಎಂಬಾತ ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದು ಹಾಕಿದ್ದಾನೆ.

ಕೊಲೆಯಾದ ಸ್ಥಿತಿಯಲ್ಲಿ ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಾತಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದಿಲ್ಲ. ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Chikkamagaluru News : ತುಡಕೂರು ಮಂಜುಗೆ ಗಡಿಪಾರು ನೋಟಿಸ್! ವೈಯಕ್ತಿಕವಾಗಿ ಟಾರ್ಗೆಟ್ ಎಂದು ಕಿಡಿ

ಮೈಸೂರಿನಲ್ಲಿ ಫ್ಲೆಕ್ಸ್‌ಗಾಗಿ ಕೊಲೆ; ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷನ ಮೇಲೆ FIR

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮಾಜಿ ಕಾಂಗ್ರೆಸ್ ಸದಸ್ಯ (Former Mysore Corporator) ನಯಾಜ್ ಪಾಷಾ ಅಲಿಯಾಸ್‌ ಪಂಡು ಅವರ ಸಹೋದರ ಮೌಲಾನಾ ಅಕ್ಮಲ್‌ ಎಂಬಾತನನ್ನು ಶುಕ್ರವಾರ ರಾತ್ರಿ ನಗರದ ಉದಯಗಿರಿಯ ಮಾದೇಗೌಡ ವೃತ್ತ ಸಮೀಪ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ (Murder Case) ಘಟನೆಯ ಹಿನ್ನೆಲೆ ಬಯಲಾಗಿದೆ. ಇದು ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಫ್ಲೆಕ್ಸ್‌ ವಿವಾದದಿಂದ (Flex Controversy) ಸಂಭವಿಸಿದ ಕೊಲೆ ಎನ್ನಲಾಗಿದೆ.

ಕೊಲೆ ಸಂಬಂಧ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ (KMDC President) ಮೊಹಮ್ಮದ್‌ ಅಲ್ತಾಫ್ ಹಾಗೂ ಮೈಸೂರು ಪಾಲಿಸ ಸದಸ್ಯ ಬಷೀರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಅಲ್ತಾಫ್‌ ಅಭಿನಂದನಾ ಫ್ಲೆಕ್ಸ್‌ ಈ ಕೊಲೆಯ ಕೇಂದ್ರ ಬಿಂದು ಎನ್ನಲಾಗಿದೆ.

ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಮೊಹಮ್ಮದ್‌ ಅಲ್ತಾಫ್‌ ಬಳಿಕ ಮೊದಲ ಬಾರಿ ಮೈಸೂರಿಗೆ ಆಗಮಿಸುವ ಹೊತ್ತಲ್ಲಿ ಸ್ವಾಗತ ಕೋರಿ ಫ್ಲೆಕ್ಸ್ ಅಳವಡಿಸಲಾಗಿತ್ತು. ಮಹಾನಗರ ಪಾಲಿಕೆ ಸದಸ್ಯ ಮೊಹಮ್ಮದ್‌ ಬಶೀರ್‌ ಈ ಫ್ಲೆಕ್ಸ್‌ ಹಾಕಿಸಿದ್ದರು. ಇದಕ್ಕೆ ಸಂಬಂಧಿಸಿ ಕಳೆದ ನಾಲ್ಕು ದಿನಗಳಿಂದ ಗಲಾಟೆ ನಡೆಯುತ್ತಿತ್ತು.

ಅಲ್ತಾಫ್‌ಗೆ ಸ್ವಾಗತ ಕೋರಿ ಮೊಹಮ್ಮದ್‌ ಬಶೀರ್‌ ಫ್ಲೆಕ್ಸ್ ಅಳವಡಿಸಿದ್ದನ್ನು ಮೌಲಾನಾ ಅಕ್ಮಲ್‌ ಆಕ್ಷೇಪಿಸಿದ್ದ. ಮಾತ್ರವಲ್ಲ ಇದನ್ನು ಪ್ರಶ್ನೆ ಮಾಡಿ ಪಾಲಿಕೆಗೆ ದೂರು ಕೂಡಾ ನೀಡಿದ್ದ. ಇದರಿಂದ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ನಡುವೆ ಅಕ್ಮಲ್‌ ಅಲ್ತಾಫ್ ಖಾನ್ ವಿರುದ್ಧ ವಿಡಿಯೊ ಮಾಡಿ ಹರಿಹಾಯ್ದಿದ್ದ. ಇದೆಲ್ಲದರ ಒಟ್ಟು ಪರಿಣಾಮವಾಗಿ ಬಶೀರ್‌ ಮತ್ತು ಅಕ್ಮಲ್‌ ಟೀಮ್‌ಗಳ ನಡುವೆ ಜಿದ್ದಾಜಿದ್ದಿ ನಡೆದಿತ್ತು.

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಈ ನಡುವೆ, ಶುಕ್ರವಾರ ರಾತ್ರಿ ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತದ ಸಮೀಪ ನಿಂತಿದ್ದ ಮೌಲಾನಾ ಅಕ್ಮಲ್‌ನ ಕೊಲೆಯಾಗಿದೆ. ಮೂರು ಬೈಕ್‌ನಲ್ಲಿ ಬಂದ 6 ಜನರು ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಹಂತಕರು ಬೆಂಗಳೂರಿನಿಂದ ಬಂದಿರಬಹುದು ಎಂದು ಹೇಳಲಾಗುತ್ತಿದೆ. ಈಗ ಎಫ್‌ಐಆರ್‌ ಆಗಿರುವವರ ಬಂಧನ ನಡೆದು ವಿಚಾರಣೆ ವೇಳೆ ಎಲ್ಲ ವಿವರ ಬಹಿರಂಗವಾಗಲಿದೆ. ಈ ನಡುವೆ ಅಕ್ಮಲ್‌ ಎಸ್‌ಡಿಪಿಐನಲ್ಲಿ ಗುರುತಿಸಿಕೊಂಡಿದ್ದು, ಆ ಕಾರಣಕ್ಕಾಗಿ ಕೊಲೆ ನಡೆದಿರಬಹುದು ಎಂಬ ಶಂಕೆಯೂ ಇತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

karnataka Weather Forecast : ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿ ಇರಲಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ (Fisher Waring) ನೀಡಲಾಗಿದೆ. ಬಿರುಗಾಳಿಯು 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಈ ವೇಳೆ ಸಮುದ್ರಕ್ಕೆ ಇಳಿಯಬಾರೆಂದು ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Karnataka Weather Forecast

ಇದನ್ನೂ ಓದಿ: SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಅಲರ್ಟ್‌

ಮೇ 24ರಂದು ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Karnataka Rain : ರಾಜ್ಯದಲ್ಲಿ ಮಳೆ ಅವಾಂತರವು (Rain news) ಮುಂದುವರಿದಿದೆ. ಭಾರಿ ಮಳೆಗೆ ಹಲವೆಡೆ ಮರಗಳು ಉರುಳಿದ್ದರೆ, ಬೆಳೆಗೆಳು ನೆಲಸಮವಾಗಿತ್ತು. ಇತ್ತ ವಿದ್ಯುತ್‌ ಸಂಪರ್ಕ ಇಲ್ಲದೆ ರೋಗಿಗಳಿಗೆ ವೈದ್ಯರು ಕತ್ತಲಲ್ಲೇ ಚಿಕಿತ್ಸೆ ಕೊಡುವಂತೆ ಆಯಿತು. ಮನೆಗಳಿಗೆ ಮಳೆ ನೀರಿನ ಜತಗೆ ಚರಂಡಿ ನೀರು ನುಗ್ಗಿತ್ತು.ರಸ್ತೆ ಎಲ್ಲವೂ ಕೆರೆಯಂತಾಗಿತ್ತು.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ವಿಜಯನಗರದಲ್ಲಿ ಕೊಚ್ಚಿ ಹೋದ ರೋಡ್‌

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿತ್ತು. ಇದರಿಂದಾಗಿ ಕೂಡ್ಲಿಗಿ ತಾಲೂಕಿನ ಯಂಬ್ಳಿ- ಆಲೂರು ಗ್ರಾಮಗಳ ಮಾರ್ಗ ರಸ್ತೆ ಸಂಪರ್ಕ ಕಟ್ ಆಗಿತ್ತು. ರಸ್ತೆ ಸಂಪರ್ಕ ಇಲ್ಲದೆ ವಾಹನ ಸವಾರರು ಪರದಾಡಬೇಕಾಯಿತು.

ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಲಾರಿ ಹಾಗೂ ಬಸ್

ಮಳೆಯಿಂದ ಜಲಾವೃತವಾದ ರಸ್ತೆಯಲ್ಲಿ ಸಂಚಾರಿಸಿದ ಪರಿಣಾಮ ಲಾರಿ- ಬಸ್ಸು ಕೆಸರಿನಲ್ಲಿ ಸಿಲುಕಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ನಡೆದಿದೆ. ಶಿರಾ- ಅಮರಾಪುರ ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದರಿಂದ ಬಿಡ್ಜ್ ಕಾಮಗಾರಿ ಬಳಿ‌ ರಸ್ತೆಯು ಜಲಾವೃತಗೊಂಡು ಸವಾರರು ಪರದಾಡುವಂತಾಗಿದೆ.

ಇನ್ನೂ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅರಸಿಕೆರೆ ಗ್ರಾಮದಲ್ಲಿ ಗಾಳಿ- ಮಳೆ ರಭಸಕ್ಕೆ ಅಡಿಕೆ ಮರಗಳು ನೆಲಕ್ಕುರುಳಿದ್ದವು. ರೈತ ಪ್ರಕಾಶ್ ಎಂಬುವರಿಗೆ ಸೇರಿದ 12 ವರ್ಷದ ಹಳೇ ಅಡಿಕೆ ಮರಗಳು ಫಸಲಿಗೆ ಬಂದಿತ್ತು. ಇದೀಗ ಮಳೆಯಿಂದಾಗಿ ಅಂದಾಜು 2 ಲಕ್ಷ ರೂಪಾಯಿ ನಷ್ಟವಾಗಿದೆ.

ಮೈಸೂರಿನಲ್ಲಿ ಕೆರೆಯಂತಾದ ಜಮೀನುಗಳು

ಮೈಸೂರು ಜಿಲ್ಲೆಯಲ್ಲಿ ಮಳೆಯು ಮುಂದುವರಿದ್ದು, ಹುಣಸೂರು ತಾಲೂಕಿನ ಜಮೀನುಗಳಲ್ಲಿ ಜಲಾವೃತಗೊಂಡಿತ್ತು. ನೂರಾರು ಎಕರೆ ಬೆಳೆದ ಶುಂಠಿ, ತಂಬಾಕು ಬೆಳೆ ನಾಶವಾಗಿತ್ತು. ಗ್ರಾಮದ ಜಮೀನುಗಳು ಕೆರೆಗಳಂತಾಗಿತ್ತು. ಇತ್ತ ಬಿರುಗಾಳಿ ಮಳೆಗೆ ಮನೆ ಚಾವಣಿ, ಬ್ಯಾರನ್‌ ಹಾರಿಹೋಗಿತ್ತು. ಮೈಸೂರಿನ ಅತ್ತಿಕುಪ್ಪೆಯಲ್ಲಿ ಕೆರೆ ಕೋಡಿ ಒಡೆದು ಬೆಳೆ ನಾಶವಾಗಿತ್ತು. ಇದರಿಂದಾಗಿ ತೆಂಗಿನ ಸಸಿಗಳು ಕೊಚ್ಚಿಹೋಗಿದ್ದವು. ಹನಗೋಡು ಹೋಬಳಿ ಕಚುವಿನಹಳ್ಳಿ ಗ್ರಾಮದ ಜಯಮ್ಮ ಮತ್ತು ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಗೋಡೆ ಕುಸಿದಿತ್ತು. ಚಿಲ್ಕುಂದ ಗ್ರಾಮದಲ್ಲಿ ಬಿರುಗಾಳಿಗೆ ರಾಮಶೆಟ್ಟರ ಮನೆ ಚಾವಣಿ ಹಾಗೂ ಚಂದ್ರುರವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿದೆ. ಇತ್ತ ಸುಜ್ಜಲೂರು ಗ್ರಾಮದಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿತ್ತು.

ಕೆರೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರು

ಮೈಸೂರು ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಕೆರೆ‌ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರುವೊಂದನ್ನು ಯುವಕರು ರಕ್ಷಿಸಿದ ಘಟನೆ ಪಿರಿಯಾಪಟ್ಟಣ ತಾಲೂಕು ತರಿಕಲ್ ಗ್ರಾಮದಲ್ಲಿ ನಡೆದಿದೆ. ಹಾರನಹಳ್ಳಿ ಗ್ರಾಮದ ಶಿವಣ್ಣ ಅವರ ಹಸುವಿನ ಕರುವನ್ನು ರಕ್ಷಣೆ ಮಾಡಲಾಗಿತ್ತು. ಬಾಲಗೆರೆ ತುಂಬಿ ಕೋಡಿ ಒಡೆದ ಪರಿಣಾಮ ಬೆಟ್ಟದಪುರ- ಕುಶಾಲನಗರ ರಸ್ತೆ ಮೇಲೆ ಮಂಡಿಯುದ್ದ‌ ನೀರು ನಿಂತಿತ್ತು. ಮಳೆ‌ ನೀರಿನಲ್ಲಿ ತಂಬಾಕು ಸಸಿಗಳು, ಗಿಡಕ್ಕೆ ಸಿಂಪಡಿಸಲು ತಂದಿದ್ದ ರಸಾಯನಿಕ ವಸ್ತುಗಳು ಹಾಳಾಗಿದ್ದವು.

ವಿಜಯನಗರದಲ್ಲಿ ನೆಲಸಮವಾದ ವೀಳ್ಯದೆಲೆ ಬಳ್ಳಿ

ಭಾರಿ ಮಳೆಗೆ ವೀಳ್ಯದೆಲೆ ಬಳ್ಳಿ ತೋಟ ನೆಲಸಮವಾಗಿತ್ತು. ವಿಜಯನಗರದ ಕೂಡ್ಲಿಗಿ ತಾಲೂಕಿನ ಎಚ್. ಮ್ಯಾಸರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಡಿಯುವ ಮಗನಂತೆ ಬೆಳೆದು ನಿಂತಿದ್ದ ಎಲೆಬಳ್ಳಿ ತೋಟ ನೆಲಕಚ್ಚಿತ್ತು. ಮಲ್ಲಮ್ಮ ಗಂಡ ಪೂಜಾರಿ ಮಾರಣ್ಣಗೆ ಸೇರಿದ ಒಂದು ಎಕರೆ ಎಲೆಬಳ್ಳಿ ತೋಟ ನೆಲಕ್ಕುರುಳಿದ್ದನ್ನು ಕಂಡು ಕಣ್ಣೀರುಇಟ್ಟರು.

ಮನೆಗಳಿಗೆ ನುಗ್ಗಿದ ಚರಂಡಿ ನೀರು

ಕೊಡಗು ಜಿಲ್ಲೆಯ ಗುಮ್ಮನ ಕೊಲ್ಲಿ ಚೌಡೇಶ್ವರಿ ಬಡಾವಣೆಯ ತಗ್ಗು ಪ್ರದೇಶಕ್ಕೆ ಚರಂಡಿ ನೀರು ನುಗ್ಗಿತ್ತು. ಚರಂಡಿ ನೀರು ಉಕ್ಕಿ ರಸ್ತೆ ಮೇಲೆ ಹರಿದ ಪರಿಣಾಮ ಮನೆಯಂಗಳಕ್ಕೆ ನೀರು ನುಗ್ಗಿತ್ತು. ಪ್ರವಾಹದಂತೆ ರಸ್ತೆ ತುಂಬೆಲ್ಲ ನೀರು ನಿಂತಿತ್ತು. ಇತ್ತ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಅಜ್ಜನಕಟ್ಟೆಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳು ಜಲದಿಗ್ಬಂಧನದಿಂದ ಓಡಾಡಲು ಪರದಾಡಬೇಕಾಯಿತು. ಇತ್ತ ಶಾಲಾ ಮಕ್ಕಳು ಕೆಸರಲ್ಲಿ ಬೀಳುವ ಆತಂಕದಲ್ಲಿಯೇ ಮನೆಯಿಂದ ಹೊರ ಬರುತ್ತಿದ್ದರು.ಕಾಲೋನಿಯಲ್ಲಿ ಎಮರ್ಜೆನ್ಸಿ ಅಂದರೆ ಆಂಬುಲೆನ್ಸ್ ಕೂಡ ಬರಲು ಆಗುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Maarige Daari
ಪ್ರಮುಖ ಸುದ್ದಿ11 mins ago

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Mansoon
ಪ್ರಮುಖ ಸುದ್ದಿ24 mins ago

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

bbmp waste disposal
ಬೆಂಗಳೂರು39 mins ago

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Aishwarya Rai
Latest44 mins ago

Aishwarya Rai : ಮುದ್ದಿನ ಮಗಳು ಆರಾಧ್ಯಳ ಜತೆ ಅಮ್ಮನ ಬರ್ತ್​​ಡೇ ಆಚರಿಸಿದ ಐಶ್ವರ್ಯಾ ರೈ; ಇಲ್ಲಿವೆ ಚಿತ್ರಗಳು

Drowned in water
ಕಲಬುರಗಿ46 mins ago

Drowned in water : ಕುಡಿದ ಮತ್ತಿನಲ್ಲಿ ಈಜಲು ಹೋದ ಯುವಕ ನೀರುಪಾಲು; ಸಾವಿನ ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Viral Video
ಪ್ರಮುಖ ಸುದ್ದಿ1 hour ago

Viral Video: ಚಲಿಸುವ ಬೈಕ್​ನಲ್ಲಿ ಆಲಿಂಗನ, ಬಿಸಿ ಚುಂಬನ; ಲಜ್ಜೆಯಿಲ್ಲದ ಜೋಡಿಯ ಸ್ಟಂಟ್​ ವಿಡಿಯೊ ವೈರಲ್​

suspicious death Self Harming By Hight court lawyer
ಕ್ರೈಂ2 hours ago

Suspicious Death: ವಕೀಲೆಯ ಅನುಮಾನಾಸ್ಪದ ಸಾವಿನ ಪ್ರಕರಣ; ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೇಳಿದ್ದೇನು?

bulldozer justice
ಪ್ರಮುಖ ಸುದ್ದಿ2 hours ago

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

assault case koratagere
ಕ್ರೈಂ3 hours ago

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Rameshwaram Cafe
ಪ್ರಮುಖ ಸುದ್ದಿ3 hours ago

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌