Murder Case : ಅನೈತಿಕ ಸಂಬಂಧ ಶಂಕೆ; ಚಿಕ್ಕಪ್ಪನನ್ನು ರಸ್ತೆಯಲ್ಲೇ ಕಡಿದು ಕೊಲೆ - Vistara News

ಕ್ರೈಂ

Murder Case : ಅನೈತಿಕ ಸಂಬಂಧ ಶಂಕೆ; ಚಿಕ್ಕಪ್ಪನನ್ನು ರಸ್ತೆಯಲ್ಲೇ ಕಡಿದು ಕೊಲೆ

Murder Case : ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಚಿಕ್ಕಪ್ಪನನ್ನೇ ಕೊಂದು ಹಾಕಿದ್ದಾನೆ. ಇದಕ್ಕೆ ಕಾರಣ ಅನೈತಿಕ ಸಂಬಂಧ.

VISTARANEWS.COM


on

Murder Case in kalaburagi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ (Chikkamagaluru News) ಗೌರಿಬಿದನೂರು ತಾಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಚಿಕ್ಕಪ್ಪನನ್ನೇ ರಸ್ತೆಯಲ್ಲಿ ತಡೆದು ನಿಲ್ಲಿಸಿ ಕೊಲೆ (Murder Case) ಮಾಡಿದ್ದಾನೆ. ಚೋಳಶೆಟ್ಟಿ ಹಳ್ಳಿಯ ಡೇರಿ ಮುಂಭಾಗದಲ್ಲೇ ಮುಂಜಾನೆ ಈ ಕೊಲೆ ನಡೆದಿದೆ.

ಚೋಳಶೆಟ್ಟಿಹಳ್ಳಿ ಗ್ರಾಮದ ರಾಮಕೃಷ್ಣ (50) ಎಂಬವರನ್ನು ಅವರ ಚಿಕ್ಕಪ್ಪನ ಮಗ ಚೋಳಹಳ್ಳಿ ನಾರಾಯಣಸ್ವಾಮಿಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ರಾಮಕೃಷ್ಣ ಅವರು ಬೆಳಗ್ಗೆ ಹಾಲು ಹಿಡಿದುಕೊಂಡು ಡೇರಿಗೆ ಬಂದಿದ್ದಾಗ ಅವರನ್ನು ಹಿಂಬಾಲಿಸಿ ಬಂದ ಚಿಕ್ಕಪ್ಪನ ಮಗ ಕೊಲೆ ಮಾಡಿದ್ದಾನೆ.

ಇದು ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಹೇಳಲಾಗಿದೆ. ಸಂಬಂಧದ ಒಳಗೆ ಮಹಿಳೆಯೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿದ್ದನ್ನು ಚಿಕ್ಕಪ್ಪನ ಮಗ ಆಕ್ಷೇಪಿಸಿದ್ದ. ಆದರೆ, ರಾಮಕೃಷ್ಣ ಇದಕ್ಕೆ ಸೊಪ್ಪು ಹಾಕಿರಲಿಲ್ಲ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎತ್ತಿನ ಮೈ ತೊಳೆಯಲು ಹೋದ ಯುವಕ ನೀರುಪಾಲು

ಹಾವೇರಿ : ಕೆರೆಯಲ್ಲಿ ಎತ್ತಿನ ಮೈ‌ತೊಳೆಯಲು ಹೋಗಿ ಯುವಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದಿದೆ. ಮಲಗುಂದ ಗ್ರಾಮದ ಸುದೀಪ್ ಮಾಲತೇಶ ದೊಡ್ಡಕೋವಿ(17) ಮೃತಪಟ್ಟವರು. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಒಂದೇ ದೇವಸ್ಥಾನದಲ್ಲಿ ತಿಂಗಳಲ್ಲಿ ಎರಡನೇ ಬಾರಿ ಕಳ್ಳತನ

ಮಂಡ್ಯ: ಮಂಡ್ಯ ಜಿಲ್ಲೆಯ ಒಂದೇ ದೇವಸ್ಥಾನದಲ್ಲಿ ಒಂದೇ ತಿಂಗಳಲ್ಲಿ ಎರಡು ಬಾರಿ ಕಳ್ಳತನ ನಡೆದಿದೆ. ಕಳ್ಳರು ಹುಂಡಿಯಲ್ಲಿದ್ದ ಹಣ ದೋಚಿ ಹುಂಡಿ ಬಿಸಾಕಿ ಪರಾರಿ.ಯಾಗಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ. ದೇವಸ್ಥಾನದಲ್ಲಿ ತಡರಾತ್ರಿ ಘಟನೆ ನಡೆದಿದೆ.

Mandya Temple

ಮಳವಳ್ಳಿಯ- ಬೆಂಗಳೂರು ರಸ್ತೆಯಲ್ಲಿರುವ ದೇವಸ್ಥಾನಕ್ಕೆ ತಡರಾತ್ರಿ ದೇವಸ್ಥಾನದ ಬೀಗ ಹೊಡೆದು ಒಳನುಗ್ಗಿದ ಖದೀಮರು ಹುಂಡಿ ಹೊತ್ತೊಯ್ದು ಪರಾರಿಯಾಗಿದ್ದಾರೆ.

ಇದನ್ನೂ ಓದಿ : Murder Case: ಕುಡಿಯಲು ಹಣ ಕೊಡದ್ದಕ್ಕೆ ಪತಿಯಿಂದ ಪತ್ನಿಯ ಹತ್ಯೆ

ಕಳ್ಳತನಕ್ಕೆ ಮುನ್ನ ದೇವಸ್ಥಾನದ ಫ್ಯೂಸ್ ಕಿತ್ತು, ದೊಣ್ಣೆಯಲ್ಲಿ ಬಲ್ಪ್ ಗಳನ್ನು ಒಡೆದಿದ್ದಾರೆ. ದೇವಸ್ಥಾನದ ಹುಂಡಿಯಲ್ಲಿದ್ದ ನಗದು ಕಳವು ಮಾಡಲಾಗಿದೆ. ಎರಡೂ ಬಾರಿ ದೇವಸ್ಥಾನದಲ್ಲಿ ಕಳ್ಳತನ ವಾದರು ದೂರು ದಾಖಲಿಸಿದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಳವಳ್ಳಿ-ಬೆಂಗಳೂರು ಹೆದ್ದಾರಿ ಪಕ್ಕದಲ್ಲೇ ದೇವಸ್ಥಾನ ಇರುವ ಹಿನ್ನೆಲೆಯಲ್ಲಿ ಪದೇಪದೆ ಕಳ್ಳತನ ನಡೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು ಗ್ರಾಮಾಂತರ

Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Love Failure : ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಹುಡುಗಿ ಪ್ರೀತಿಸಿ ದೂರಾಗಿದ್ದಕ್ಕೆ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

VISTARANEWS.COM


on

By

Love Failure
Koo

ದೊಡ್ಡಬಳ್ಳಾಪುರ: ಪ್ರೀತಿಸಿದ ಹುಡುಗಿ (Love Failure) ಕೈ ಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಕಾಳುಮಾತ್ರೆ ಸೇವಿಸಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ನಿವಾಸಿ ಬಾಲಾಜಿ (23) ಮೃತಪಟ್ಟಿದ್ದಾನೆ.

ಬಾಲಾಜಿಗೆ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಯುವತಿಯೊಬ್ಬಳು ಪರಿಚಯವಾಗಿದ್ದಳು. ಕನಕಪುರ ಮೂಲದ ಯುವತಿ ಜತೆಗೆ ಪರಿಚಯವು ಪ್ರೀತಿಗೆ ತಿರುಗಿತ್ತು. ಪ್ರೀತಿ- ಪ್ರೇ‌ಮದ ಗುಂಗಿನಲ್ಲಿ ಇಬ್ಬರು ಒಟ್ಟೊಟ್ಟಿಗೆ ಸುತ್ತಾಡಿದ್ದಾರೆ. ಎಲ್ಲ ಕಡೆ ಜತೆಯಾಗಿ ಸುತ್ತಾಡಿ ಕೊನೆಗೆ ಬೇರೊಬ್ಬನ ಜತೆ ಲವ್‌ನಲ್ಲಿರುವುದಾಗಿ ಹೇಳಿ ಕೈಕೊಟ್ಟಿದ್ದಾಳೆ ಎಂಬ ಆರೋಪವಿದೆ.

ಯುವತಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮದುವೆ ಮಾಡಿಕೊಳ್ಳೋಣ ಅಂದಿದ್ದಕ್ಕೆ ಮನೆಯಲ್ಲಿ ಒಪ್ಪಲ್ಲ ಎಂದಿದ್ದಾಳಂತೆ. ಜತೆಗೆ ಬೇರೆ ಯುವಕನ ಜತೆ ಲವ್‌ನಲ್ಲಿರುವುದಾಗಿ ಹೇಳಿದ್ದಳಂತೆ. ಈ ಕಾರಣಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಮೆಜಾನ್‌ನಲ್ಲಿ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಬಾಲಾಜಿ ಬಡ ಕುಟುಂಬಕ್ಕೆ ಆಧಾರವಾಗಿದ್ದ. ಆದರೆ ಇದೀಗ ಮಗನ ದುರಂತ ಅಂತ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯುವತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಮೃತ ಕುಟುಂಬಸ್ಥರು ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಜೈಪುರ: ರಾಜಸ್ಥಾನದಲ್ಲಿ (Rajasthan) ಮುಸ್ಲಿಂ ಯುವಕನೊಬ್ಬ ಹಿಂದು ಯುವತಿಗೆ ತಾನು ಕೂಡ ಹಿಂದು ಎಂಬುದಾಗಿ ನಂಬಿಸಿ, ಮದುವೆಯಾಗುವುದಾಗಿ ಭರವಸೆ ನೀಡಿ, ಈಗ ಕೊನೆಗೆ ಆಕೆಯ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಹಾಗಾಗಿ, ಪ್ರಕರಣದಲ್ಲಿ ಲವ್‌ ಜಿಹಾದ್‌ (Love Jihad) ಶಂಕೆ ವ್ಯಕ್ತವಾಗಿದೆ. ಹಿಂದು ಯುವತಿ ದಾಖಲಿಸಿದ ದೂರಿನ ಅನ್ವಯ ಪೊಲೀಸರು ಮುಸ್ಲಿಂ ಯುವಕನ ವಿರುದ್ಧ ಕೇಸ್‌ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಾಜಸ್ಥಾನದ ದೌಸಾ ಪ್ರದೇಶದಲ್ಲಿ ಉತ್ತರ ಪ್ರದೇಶ ಮೂಲದ ರಶೀದ್‌ ಖಾನ್‌ ಎಂಬುವನು ಹಿಂದು ಯುವತಿ ಜತೆ ಸ್ನೇಹ ಸಂಪಾದಿಸಿದ್ದಾನೆ. ತಾನು ಕೂಡ ಹಿಂದು ಎಂದು ಆಕೆಯನ್ನು ನಂಬಿಸಿದ್ದಾನೆ. ಕೊನೆಗೆ ಒಂದು ದಿನ ಯುವತಿಯ ಎದುರು ಪ್ರೇಮ ನಿವೇದನೆ ಮಾಡಿದ್ದು, ಮದುವೆಯಾಗುವುದಾಗಿ ನಂಬಿಸಿದ್ದಾನೆ. ಆದರೆ, ಕಳೆದ 7 ತಿಂಗಳಿಂದ ಯುವತಿ ಮೇಲೆ ರಶೀದ್‌ ಖಾನ್‌ ಅತ್ಯಾಚಾರ ಎಸಗಿದ್ದು, ಆತನ ಬಂಧನದಿಂದ ಬಿಡಿಸಿಕೊಂಡು ಬಂದ ಯುವತಿಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ರಶೀದ್‌ ಖಾನ್‌, ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ. ನಾನೀಗ ಗರ್ಭಿಣಿಯಾಗಿದ್ದು, ಗರ್ಭಪಾತ ಮಾಡಿಸಿಕೊ ಎಂದು ಒತ್ತಾಯಿಸುತ್ತಿದ್ದಾನೆ. ಹಾಗಾಗಿ, ರಶೀದ್‌ ಖಾನ್‌ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂಬುದಾಗಿ ಸೀತಾ ಯಾದವ್‌ ಎಂಬ ಯುವತಿಯು ದೂರು ದಾಖಲಿಸಿದ್ದಾರೆ. ರಶೀದ್‌ ಖಾನ್‌ ವಿರುದ್ಧ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

physical abuse women

ಹೋಟೆಲ್‌ನಲ್ಲಿ ಹಿಂದು ಯುವತಿ ಶವ ಪತ್ತೆ

ಒಂದು ದಿನದ ಹಿಂದಷ್ಟೇ, ಮಧ್ಯಪ್ರದೇಶದಲ್ಲಿ ಹೋಟೆಲ್‌ ರೂಮ್‌ನಲ್ಲಿ ಹಿಂದು ಯುವತಿ ಶವ ಪತ್ತೆಯಾಗಿದ್ದ, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ. ಹೊಟೇಲ್‌ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹಿಂದೂ ಯುವತಿಯ ಮೃತದೇಹ ಪತ್ತೆಯಾಗಿದ್ದು, ಆಕೆ ಪ್ರಿಯಕರ ಜುನೈದ್‌ ಎಂಬಾತನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಈ ಘಟನೆ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಬಹಳ ಸುದ್ದಿ ಮಾಡುತ್ತಿದೆ. ಪೊಲೀಸ್‌ ಮಾಹಿತಿ ಪ್ರಕಾರ, ಜುನೈದ್‌ ಎಂಬಾತನ ಹೆಸರಿನಲ್ಲಿ ಬುಕ್‌ ಆಗಿದ್ದ ಹೊಟೇಲ್‌ ರೂಂನಲ್ಲಿ ಹಿಂದೂ ಯುವತಿಯ(24) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಇದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಟಿಕಾ ಎಂಬ ಹೊಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ಯುವತಿ ಎರಡು ದಿನಗಳಿಂದ ಆರೋಪಿ ಜುನೈದ್‌ ಜೊತೆ ಹೊಟೇಲ್‌ನಲ್ಲಿ ತಂಗಿದ್ದಳು. ಅನುಮಾನಗೊಂಡ ಹೊಟೇಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬಾಗಿಲು ಒಡೆದು ನೋಡಿದಾಗ ಆಕೆಯ ದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇತಾಡುತ್ತಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

HD Revanna Bail: ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು.

VISTARANEWS.COM


on

HD Revanna Bail I am not happy that Revanna has been released says HD Kumaraswamy
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿದ್ದ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಜಾಮೀನು ಸಿಕ್ಕಿದೆ ನಿಜ. ಆದರೆ, ಇದಕ್ಕೆ ನಾನು ಸಂತೋಷ ಪಡಲಾರೆ. ಪಟಾಕಿ ಸಿಡಿಸಿ ಸಂಭ್ರಮಿಸುವ ಸಮಯವೂ ಇದಲ್ಲ ಎಂದು ಕಾರ್ಯಕರ್ತರಿಗೆ ಹೇಳಬಯಸುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮ ಪಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೊ ಲೀಕ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಸರಿಯಾದ ತನಿಖೆಯನ್ನು ನಡೆಸುತ್ತಿಲ್ಲ. ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರು ಕೂಡ ಎಸ್‌ಐಟಿಯಿಂದ ಆರೋಪ ಎದುರಿಸಬೇಕಾಯಿತು. ಅವರಿಗೆ ನಿನ್ನೆ (ಸೋಮವಾರ – ಮೇ 13) ಜಾಮೀನು ಸಿಕ್ಕಿದೆ. ಅದಕ್ಕೆ ನಾನು ಸಂತೋಷವನ್ನು ಪಡುವುದಿಲ್ಲ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮವನ್ನು ಪಡೋಣ. ಈಗ ನಡೆದಿರುವುದು ರಾಜ್ಯವೇ ತಲೆ ತಗ್ಗಿಸುವ ವಿಚಾರವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ? ಎಸ್‌ಐಟಿ ಅಧಿಕಾರಿಗಳೇ ನಿಮಗೂ ಅಕ್ಕ – ತಂಗಿ, ತಂದೆ – ತಾಯಿ ಇರುತ್ತಾರೆ. ಚುನಾವಣೆ ಹಿನ್ನೆಲೆಯಲ್ಲಿ ಯಾರು ಪೆನ್ ಡ್ರೈವ್ ಹಂಚಿದರೋ ಅವರನ್ನು ಇದುವರೆಗೂ ಮುಟ್ಟಿಲ್ಲ. ಹಾಸನ ಜಿಲ್ಲಾದ್ಯಂತ ಪೆನ್‌ ಡ್ರೈವ್‌ ಅನ್ನು ರಿಲೀಸ್‌ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ನ ನವೀನ್‌ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುತ್ತಾನೆ. ಆದರೆ, ಇಲ್ಲಿಯವರೆಗೆ ಆತನನ್ನು ಮುಟ್ಟಿಲ್ಲ. ಈ ಘಟನೆಗೆ ಕಾರಣವಾದ ವ್ಯಕ್ತಿಯನ್ನೂ ಹಿಡಿಯಲಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಸರ್ಕಾರದ ಜವಾಬ್ದಾರಿ ಅದು

ಬಿಜೆಪಿಯ ಮಾಜಿ ಶಾಸಕರೊಬ್ಬರ ಎಡಬಲಗಳನ್ನು ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯ ವಾದವರನ್ನು ಹಿಡಿಯಲಾಗುತ್ತೆ ಅಂದಿದ್ದಾರೆ. ಹಾಗಾದರೆ ಎಸ್ಐಟಿ ತನಿಖೆ ಹೇಗೆ ಸೋರಿಕೆ ಆಗ್ತಾ ಇದೆ? ಎಫ್‌ಐಆರ್ ಆಗಿರುವ ಒಬ್ಬ ವ್ಯಕ್ತಿಯನ್ನೂ ಹಿಡಿಯಲಿಲ್ಲ. ಖಾಸಗಿ ಚಾನಲ್‌ನಲ್ಲಿ ಒಂದೂವರೆ ಗಂಟೆಗಳ ಕಾಲ ಸಂದರ್ಶನ ಕೊಡುತ್ತಾರೆ. ನವೀನ್ ಗೌಡ ನಮ್ಮ ಪಕ್ಷದ ಶಾಸಕರಿಗೆ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳುತ್ತಾನೆ. ಕೆಲವೇ ಕ್ಷಣಗಳಲ್ಲಿ ಪೆನ್ ಡ್ರೈವ್ ಬರುತ್ತದೆ ಅಂತಾ ಪೋಸ್ಟ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದ ಆತನನ್ನು ಹಿಡಿದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ವಿಡಿಯೊದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರ್ಕಾರಕ್ಕೆ ಅನುಕಂಪ‌ ಇದೆಯಾ? ಇದರಲ್ಲಿ ಯಾವುದನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಿನ ಮಾಹಿತಿ ತಂತ್ರಜ್ಞಾನದಲ್ಲಿ ಅಪರಾಧಿ, ನಿರಪರಾಧಿ ಆಗುತ್ತಾನೆ, ನಿರಪರಾಧಿ ಅಪರಾಧಿ ಆಗುತ್ತಾನೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ನನ್ನ ಮೇಲೂ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಎಚ್.ಡಿ. ರೇವಣ್ಣ ಅವರ ಕುಟುಂಬವನ್ನು ಮುಗಿಸಲು ನಾನು ಪ್ರಯತ್ನ ಪಡುತ್ತಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ.

ನಾನು ನ್ಯಾಯದ ಪರ, ಮಹಿಳೆಯರ ಪರ ಇದ್ದೇನೆ. ಈ ವಿಡಿಯೊದಲ್ಲಿ ಆ ವ್ಯಕ್ತಿಯ ಯಾವುದೇ ಚಿತ್ರಣ ಇಲ್ಲ ಅಂತ ಪತ್ರಿಕೆಯೊಂದು ಬರೆದಿದೆ. ಅಲ್ಲಿಗೆ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ? ಎಂದು ಎಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಹೆದರಿಸಿ ದೂರು ಪಡೆಯಲು ಯತ್ನ

ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆಕ್ರೋಶವನ್ನು ಹೊರಹಾಕಿದರು. ಅಲ್ಲದೆ, ದೊಡ್ಡ ತಿಮಿಂಗಿಲವು ಸರ್ಕಾರದಲ್ಲಿದೆ. ಆ ದೊಡ್ಡ ತಿಮಿಂಗಲವನ್ನು ಹಿಡಿಯಲಾಗದೇ ಇದ್ದರೆ ಸಣ್ಣ ತಿಮಿಂಗಲಗಳನ್ನು ಹಿಡಿಯಲಾಗುತ್ತದೆಯೇ? ಈ ಸರ್ಕಾರದಲ್ಲಿ ಹಲವಾರು ತಪ್ಪುಗಳು ನಡೆದಿವೆ. ಎಚ್.ಡಿ. ರೇವಣ್ಣ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಕಿಡಿಕಾರಿದರು.

ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಒಂದು ಮಹಿಳೆ ದೂರು ಕೊಟ್ಟಿದ್ದು, ಆ ಹೆಣ್ಣುಮಕ್ಕಳಿಗೆ ಹೆದರಿಸಿ‌ ದೂರು ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದೆಲ್ಲ ಕೆಲವೇ ದಿನಗಳಲ್ಲಿ ಹೊರಗೆ ಬರಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಗೃಹ ಸಚಿವರಿಗೆ ನೇರ ಪ್ರಶ್ನೆ

ಈ ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ಕೊಟ್ಟರೆ ಅಂಥವರನ್ನು ವಿಚಾರಣೆಗೆ ಕರೆಸಬೇಕಾಗುತ್ತದೆ ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಗೆ ತಿರುಗೇಟು ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದ ಬಗ್ಗೆ, ವಿಡಿಯೊ ಬಗ್ಗೆ ಹೇಳಿಕೆ ನೀಡಿದ್ದ ನವೀನ್‌ ಗೌಡ ಸೇರಿ ಉಳಿದವರ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ವಿದೇಶಕ್ಕೆ ಹೋಗಿರುವ ಪ್ರಜ್ವಲ್ ಅವರನ್ನು ಏಕೆ ಕರೆಸಿಲ್ಲ? ಎಂದು ಪ್ರಶ್ನೆ ಮಾಡಿದರು.

ಪ್ರಜ್ವಲ್‌ ರೇವಣ್ಣ ನನಗೆ ಅಣ್ಣನ ಮಗನೇ ಇರಬಹುದು. ಆದರೆ, ಅವನು ಹೋಗುವಾಗ ನನ್ನನ್ನು ಕೇಳಿ ಹೋಗುತ್ತಿದ್ದನಾ? ಬೆಳೆದ ಮಕ್ಕಳು ನಮ್ಮನ್ನು ಕೇಳಿ ಹೋಗ್ತಾರಾ.? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ: HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

ಇನ್ನೆರಡು ದಿನದಲ್ಲಿ ಪರಿಷತ್‌ ಅಭ್ಯರ್ಥಿ ಆಯ್ಕೆ

ಪರಿಷತ್ ಚುನಾವಣೆಗೆ ಸಂಬಂಧಪಟ್ಟಂತೆ ಮೈತ್ರಿ ಒಪ್ಪಂದದ ಪ್ರಕಾರ ಜೆಡಿಎಸ್‌ಗೆ ಇನ್ನೊಂದು ಸೀಟ್‌ ಅನ್ನು ಬಿಟ್ಟುಕೊಡಲಾಗಿದೆ. ಅದಕ್ಕೆ ಸೂಕ್ತ ಅಭ್ಯರ್ಥಿಯ ಆಯ್ಕೆ ಆಗಬೇಕಿದೆ. ಇನ್ನೆರಡು ದಿನಗಳಲ್ಲಿ ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading

ದೇಶ

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಇ-ಮೇಲ್‌ ಮೂಲಕ ಮಂಗಳವಾರ ಬಾಂಬ್‌ ಕರೆ ಬಂದಿವೆ. ದೀಪ್‌ ಚಂದ್‌ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್‌ ಆಸ್ಪತ್ರೆ ಮತ್ತು ಹೆಡ್ಗೇವಾರ್‌ ಆಸ್ಪತ್ರೆಗಳಿಗೆ ಅನಾಮಧೇಯ ಇ-ಮೇಲ್‌ವೊಂದು ಬಂದಿದ್ದು, ಬಾಂಬ್‌ ಸ್ಫೋಟಿಸುವುದಾಗಿ ಸಂದೇಶ ಬಂದಿದೆ. ದಿಲ್ಲಿ ಅಗ್ನಿಶಾಮಕ ದಳ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

VISTARANEWS.COM


on

Bomb threat
Koo

ನವದೆಹಲಿ: ದಿಲ್ಲಿಯ ನಾಲ್ಕು ಆಸ್ಪತ್ರೆ(Hospitals)ಗಳಿಗೆ ಇ-ಮೇಲ್‌ ಮೂಲಕ ಮಂಗಳವಾರ ಬಾಂಬ್‌ ಕರೆ(Bomb Threat) ಬಂದಿವೆ. ದೀಪ್‌ ಚಂದ್‌ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್‌ ಆಸ್ಪತ್ರೆ ಮತ್ತು ಹೆಡ್ಗೇವಾರ್‌ ಆಸ್ಪತ್ರೆಗಳಿಗೆ ಅನಾಮಧೇಯ ಇ-ಮೇಲ್‌(E-mail)ವೊಂದು ಬಂದಿದ್ದು, ಬಾಂಬ್‌ ಸ್ಫೋಟಿಸುವುದಾಗಿ ಸಂದೇಶ ಬಂದಿದೆ. ದಿಲ್ಲಿ ಅಗ್ನಿಶಾಮಕ ದಳ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಇನ್ನು ದಿಲ್ಲಿ ಪೊಲೀಸರು ಈ ಬೆದರಿಕೆ ಇ-ಮೇಲ್‌ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದು, ನಾಲ್ಕು ಆಸ್ಪತ್ರೆಗಳಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಇನ್ನು ಆಸ್ಪತ್ರೆಗಳಲ್ಲಿ ತೀವ್ರ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ. ದಿಲ್ಲಿಯ ಎನ್‌ಸಿಆರ್‌ನ 150ಕ್ಕೂ ಅಧಿಕ ಶಾಲೆಗಳಿಗೂ ಕೆಲವು ದಿನಗಳ ಹಿಂದೆ ಹುಸಿಬಾಂಬ್‌ ಕರರೆಬಂದಿತ್ತು. ರಷ್ಯಾದ ಇ-ಮೇಲ್‌ ಸೇವೆಯನ್ನು ಬಳಸಿಕೊಂಡು ಶಾಲೆಗಳಿಗೆ ಬೆದರಿಕೆ ಮೇಲ್‌ ಕಳುಹಿಸಲಾಗಿತ್ತು ಎನ್ನಲಾಗಿದೆ.

ದೆಹಲಿ, ಅಹಮದಾಬಾದ್‌ ಸೇರಿ ಹಲವೆಡೆ ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಿದ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವಾಲಯವು, ಕಳೆದ ವಾರ ಈ ಕುರಿತು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿತ್ತು. ಅದರಲ್ಲೂ, ಈ ಕುರಿತು ದೆಹಲಿ ಪೊಲೀಸರು ತಪ್ಪು ಮಾಹಿತಿ ತಡೆದು, ಅನಗತ್ಯ ಆತಂಕವನ್ನು ನಿವಾರಿಸಲು ದೆಹಲಿ ಪೊಲೀಸರು ಹಾಗೂ ಶಾಲೆಗಳ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿತ್ತು.

ಶಾಲೆಗಳಲ್ಲಿ ಸಿಸಿಟಿವಿಗಳ ಅಳವಡಿಕೆ, ಅವುಗಳ ಮೇಲೆ ನಿಗಾ ಇರಿಸುವುದು, ಶಾಲೆಗಳ ಇ-ಮೇಲ್‌ ವಿಳಾಸಗಳನ್ನು ಪದೇಪದೆ ಪರಿಶೀಲಿಸುವುದು ಸೇರಿ ಹಲವು ಸೂಚನೆಗಳನ್ನು ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ದೆಹಲಿ ಪೊಲೀಸ್‌ ಆಯುಕ್ತರು ಸಭೆ ನಡೆಸಿ, ಹುಸಿ ಬಾಂಬ್‌ ಬೆದರಿಕೆ ಕರೆ, ಇ-ಮೇಲ್‌ಗಳನ್ನು ನಿಯಂತ್ರಿಸುವ ಕ್ರಮಗಳ ಕುರಿತು ಚರ್ಚಿಸಿದ ಬಳಿಕ ಸೂಚನೆ ನೀಡಲಾಗಿದೆ.

ಮೇ 1ರಂದು ದೆಹಲಿ- ಎನ್‌ಸಿಆರ್ ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿತ್ತು. ಬಾಂಬ್ ಬೆದರಿಕೆ ಇ ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದು.

ಇದನ್ನೂ ಓದಿ: Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಾಂಬ್‌ ದಾಳಿ ಕುರಿತ ಬೆದರಿಕೆ ಇ ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದ್ದರು.

Continue Reading

ವೈರಲ್ ನ್ಯೂಸ್

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Viral Video:ಗೋಲ್ಡನ್‌ ರಿಟ್ರೀವರ್‌ ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುವ ವ್ಯಕ್ತಿಯೊಬ್ಬ ಲಿಫ್ಟ್‌ನಲ್ಲಿ ನಾಯಿಯ ಮುಖಕ್ಕೆ ಪದೇ ಪದೇ ಕೈಯಲ್ಲಿದ್ದ ಕೋಲಿನಂತಹ ಸಾಧನದಿಂದ ಹೊಡೆದಿದ್ದಾರೆ. ಬಳಿಕ ಕೈಯಿಂದಲೂ ನಾಯಿ ಬೆನ್ನಿಗೂ ಏಟು ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ನಾಯಿಯ ಮಾಲೀಕರು ಯಾವುದೇ ದೂರು ನೀಡಿಲ್ಲ. ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಆತ ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿಲ್ಲ.

VISTARANEWS.COM


on

Viral Video
Koo

ಗುರುಗ್ರಾಮ: ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುವ ಕೆಲಸದವನು ಅದರ ಮೇಲೆ ಮಾರಣಾಂತಿಕ ಹಲ್ಲೆ(Thrashing pet) ನಡೆಸಿರುವ ಘಟನೆ ಗುರುಗ್ರಾಮ(Gurugram)ದಲ್ಲಿ ನಡೆದಿದೆ. ಅಪಾರ್ಟ್‌ಮೆಂಟ್‌ನ ಲಿಫ್ಟ್‌ವೊಂದರಲ್ಲಿ ಈ ಭೀಕರ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಕಿಡಿಗೇಡಿಯ ಕೃತ್ಯಕ್ಕೆ ಖಂಡನೆ ವ್ಯಕ್ತವಾಗಿದೆ.

ಆರ್ಚಿಡ್‌ ಗಾರ್ಡನ್ಸ್‌ ಸೊಸೈಟಿಯ ಸೆಕ್ಟರ್‌ 54ರಲ್ಲಿ ಈ ಘಟನೆ ನಡೆದಿದ್ದು, ಗೋಲ್ಡನ್‌ ರಿಟ್ರೀವರ್‌ ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುವ ವ್ಯಕ್ತಿಯೊಬ್ಬ ಲಿಫ್ಟ್‌ನಲ್ಲಿ ನಾಯಿಯ ಮುಖಕ್ಕೆ ಪದೇ ಪದೇ ಕೈಯಲ್ಲಿದ್ದ ಕೋಲಿನಂತಹ ಸಾಧನದಿಂದ ಹೊಡೆದಿದ್ದಾರೆ. ಬಳಿಕ ಕೈಯಿಂದಲೂ ನಾಯಿ ಬೆನ್ನಿಗೂ ಏಟು ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ನಾಯಿಯ ಮಾಲೀಕರು ಯಾವುದೇ ದೂರು ನೀಡಿಲ್ಲ. ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಆತ ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿಲ್ಲ.

ಇದನ್ನೂ ಓದಿ:Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

ಇಂತಹದ್ದೇ ಒಂದು ಘಟನೆ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ನಡೆದಿತ್ತು. ನಾಯಿ ಬೊಗಳಿದ್ದಕ್ಕೆ ನೆರೆಮನೆಯ ವ್ಯಕ್ತಿಯೊಬ್ಬ ನಾಯಿ ಹಾಗೂ ಅದರ ಮಾಲೀಕನಿಗೆ ಕಬ್ಬಿಣದ ರಾಡ್​ನಿಂದ ಹೊಡೆದ ಆಘಾತಕಾರಿ ಘಟನೆ ದೆಹಲಿಯ ಪಶ್ಚಿಮ ವಿಹಾರ್​ ಪ್ರದೇಶದಲ್ಲಿ ನಡೆದಿತ್ತು. ಪಶ್ಚಿಮ ವಿಹಾರ್ ಏರಿಯಾದಲ್ಲಿರುವ ನಿವಾಸಿಯೊಬ್ಬರು ನಾಯಿಯನ್ನು ಸಾಕಿದ್ದರು. ಅದೇ ಏರಿಯಾದಲ್ಲಿದ್ದ ಪಕ್ಕದ ಮನೆಯ ವ್ಯಕ್ತಿಯೊಬ್ಬ ನಾಯಿ ಬೊಗಳುತ್ತೆ ಎಂಬ ಕಾರಣಕ್ಕೆ ನೇರವಾಗಿ ಬಂದು ನಾಯಿಯ ತಲೆಗೆ ಕಬ್ಬಿಣದ ರಾಡ್​ನಿಂದ ಹೊಡೆದಿದ್ದಾನೆ. ಈ ವೇಳೆ ತಡೆಯಲು ಬಂದ ನಾಯಿಯ ಮಾಲೀಕನಿಗೂ ರಾಡ್​ನಿಂದ ಹೊಡೆದಿದ್ದಾನೆ. ಇನ್ನು ರಾಡ್​ನಿಂದ ಗಂಭೀರ ಗಾಯಗೊಂಡ ನಾಯಿ ಹಾಗೂ ಆತನ ಮಾಲೀಕ ನೆಲದ ಮೇಲೆ ಕುಸಿದು ಬಿದ್ದಿದ್ದರು.. ತಕ್ಷಣವೇ ಮತ್ತೊಬ್ಬ ಇದನ್ನು ತಡೆಯಲು ಬಂದಿದ್ದಾನೆ. ತುಂಬಾ ಸಮಯದವರೆಗೂ ಗಲಾಟೆ ನಡೆದಿದೆ. ಈ ವೇಳೆ ತಡೆಯಲು ಬಂದ ಮತ್ತೊಬ್ಬ ವ್ಯಕ್ತಿಯ ತಲೆಗೂ ಗಂಭೀರವಾಗಿ ಹಲ್ಲೆ ಮಾಡಿದ್ದ.

ಘಟನೆ ನಡೆದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಇನ್ನು ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ನಾಯಿ ಹಾಗೂ ಅದರ ಮಾಲೀಕರನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಈ ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ಸಂಬಂಧ ನಾಯಿಯ ಮಾಲೀಕ ರಕ್ಷಿತ್ ಎಂಬುವವರು ಪಶ್ಚಿಮ ವಿಹಾರ್​ ಪೊಲೀಸ್​ ಠಾಣೆಯಲ್ಲಿ ಹಲ್ಲೆ ಮಾಡಿದ ವ್ಯಕ್ತಿಯ ಮೇಲೆ ದೂರು ನೀಡಿದ್ದರು. ದೂರಿನನ್ವಯ ಹಲ್ಲೆ ಮಾಡಿದ ವ್ಯಕ್ತಿ ಮೇಲೆ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Continue Reading
Advertisement
pm narendra modi nomination
ಪ್ರಮುಖ ಸುದ್ದಿ3 mins ago

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Viral Video
Latest10 mins ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Love Failure
ಬೆಂಗಳೂರು ಗ್ರಾಮಾಂತರ12 mins ago

Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

HD Revanna Bail I am not happy that Revanna has been released says HD Kumaraswamy
ರಾಜಕೀಯ32 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

Bomb threat
ದೇಶ33 mins ago

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

T20 World Cup 2024
ಕ್ರಿಕೆಟ್37 mins ago

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

Davanagere News Marriage at an early age
ದಾವಣಗೆರೆ38 mins ago

Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Ramayana Movie
ಸಿನಿಮಾ39 mins ago

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

gold rate today
ಚಿನ್ನದ ದರ48 mins ago

Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

pm narendra modi nomination varanasi
ಪ್ರಮುಖ ಸುದ್ದಿ1 hour ago

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail I am not happy that Revanna has been released says HD Kumaraswamy
ರಾಜಕೀಯ32 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ8 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ18 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ19 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ19 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ20 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌