Site icon Vistara News

Car Catches Fire | ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಪ್ರಾಣಾಪಾಯದಿಂದ ನಾಲ್ವರು ಪಾರು

Car Catches Fire

ರಾಯಚೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ (Car Catches Fire)ಕ್ಷಣಾರ್ಧದಲ್ಲೇ ಸುಟ್ಟು ಕರಕಲಾದ ಘಟನೆ ನಗರದ ಚಂದ್ರಬಂಡಾ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆಂಧ್ರ ಪ್ರದೇಶದ ನೋಂದಣಿಯ, ಶ್ರೀನಿವಾಸ ಎಂಬುವವರ ಟಾಟಾ ಇಂಡಿಕಾ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಚಂದ್ರಬಂಡಾದಿಂದ ರಾಯಚೂರಿಗೆ ಬರುವಾಗ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದರು. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂದಕಕ್ಕೆ ಜೀಪ್‌ ಉರುಳಿ ಮಹಿಳೆ ಸಾವು
ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಜೀಪ್ ಕಂದಕಕ್ಕೆ ಬಿದ್ದಿದ್ದರಿಂದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವುದು ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಅಕ್ಷತಾ (35) ಮೃತ ಮಹಿಳೆ. ಹೊಸಗದ್ದೆಯಿಂದ ಹೊರನಾಡಿಗೆ ಹೋಗುತ್ತಿದ್ದಾಗ ಜೀಪ್ ಅಪಘಾತಕ್ಕೀಡಾಗಿದೆ.

ಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಬಳ್ಳಾರಿ: ರಾಜ್ಯಮಟ್ಟದ ಬಿಜೆಪಿ ನವಶಕ್ತಿ ಎಸ್‌ಟಿ ಸಮಾವೇಶಕ್ಕಾಗಿ ಬಳ್ಳಾರಿಗೆ ಆಗಮಿಸಿದ್ದಾಗ, ಎಚ್‌ಎಲ್‌ಸಿ ಕಾಲುವೆಗೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಚಳ್ಳಕೇರಿ ತಾಲೂಕಿನ ಗೌರಿಪುರ ನಿವಾಸಿ ಉಮಾಪತಿ(26) ಮೃತ ಯುವಕನಾಗಿದ್ದಾನೆ.

ಮೃತದೇಹವನ್ನು ಶವ ಪರೀಕ್ಷೆಗಾಗಿ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ವಿಮ್ಸ್‌ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಆಗಮಿಸಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ 2 ಲಕ್ಷ ರೂ. ನಗದು ಪರಿಹಾರ ವಿತರಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಇದನ್ನೂ ಓದಿ | Poisonous Mushroom | ವಿಷಕಾರಿ ಅಣಬೆ ಸಾಂಬಾರ್‌ ತಿಂದು ತಂದೆ, ಮಗ ದಾರುಣ ಮೃತ್ಯು

Exit mobile version