Couple suicide | ಒಂದೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು - Vistara News

ಕ್ರೈಂ

Couple suicide | ಒಂದೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

ಪ್ರೇಮಿಗಳಿಬ್ಬರು ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ ಆಲ್ದೂರಿನಲ್ಲಿ ನಡೆದಿದೆ.

VISTARANEWS.COM


on

couple suicide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಪ್ರೇಮಿಗಳಿಬ್ಬರು ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ ಆಲ್ದೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡವರು. ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ಇಬ್ಬರೂ ಒಂದೇ ವ್ಹೇಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | ವಿಚಿತ್ರ ರೀತಿಯಲ್ಲಿ ಟೆಕ್ಕಿ ಆತ್ಮಹತ್ಯೆ, ಕಾರಿನೊಳಗೆ ನೈಟ್ರೋಜನ್‌ ಸಿಲಿಂಡರ್‌ ಲೀಕ್‌ ಮಾಡಿಕೊಂಡು ಸಾವು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Boiler Blast: ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ

Boiler Blast: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಅವಘಡ ನಡೆದಿದೆ.

VISTARANEWS.COM


on

Boiler Blast
Koo

ಚಿಕ್ಕೋಡಿ: ಬಾಯ್ಲರ್ ಸ್ಫೋಟವಾಗಿ ಮಹಿಳೆ ಮೃತಪಟ್ಟು, ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Boiler Blast) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಿಯಾ ಎಕ್ಸ್‌ಪೋರ್ಟ್ಸ್‌ ಕೈಗಾರಿಕಾ ಘಟಕದ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.

ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿವಾಸಿ ಸುನಂದಾ ಸಿದಪ್ಪ ತೇಲಿ (36) ಮೃತರು. ಗಾಯಗೊಂಡವರನ್ನು ಅಥಣಿ ಪಟ್ಟಣದ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗೊಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ: ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೇತುಮಕೂರು ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣಕ್ಕೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಅರ್ಧ ಗಂಟೆಯಾದರೂ ಆಸ್ಪತ್ರೆಯಲ್ಲಿ ವೈದ್ಯರು ಕಂಡುಬಂದಿಲ್ಲ. ಹೀಗಾಗಿ ವ್ಯಕ್ತಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗುತ್ತಿದ್ದು, ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದಾರೆ.

ಇದನ್ನೂ ಓದಿ | Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಸಾಲದ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ.

ಮಂಡ್ಯ: ಸಾಲ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರೂಪೇಶ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಒಂದೂವರೆ ಎಕರೆ ಜಮೀನಿನಲ್ಲಿ ರೈತ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ವಿವಿಧ ಬ್ಯಾಂಕುಗಳು ಹಾಗೂ ಚಿನ್ನಾಭರಣದ ಮೇಲೆ ಒಟ್ಟು 5ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಬೆಳೆಗೆ ನೀರಿಲ್ಲದೆ ನಷ್ಟಕ್ಕೀಡಾಗಿ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Continue Reading

ರಾಜಕೀಯ

Prajwal Revanna Case: ಡಿಕೆಶಿ ಒಪ್ಪಿಕೊಂಡಿದ್ದಕ್ಕಿಂತ ಸಾಕ್ಷಿ ಬೇಕಾ ಸಿದ್ದರಾಮಯ್ಯ? ಸಿಎಂಗೆ ಎಚ್‌ಡಿಕೆ ಪ್ರಶ್ನೆ

Prajwal Revanna Case: ಈಗಿನ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಅವರ ಸಾಕ್ಷಿ ಕೇಳುತ್ತಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ಸಂಭಾಷಣೆಯಲ್ಲಿ ಏನಿದೆ? ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ, ಶಿವರಾಮೇಗೌಡ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ನಡೆದ ಸಂಭಾಷಣೆಯಲ್ಲಿ ಏನಿದೆ? ಇದ್ಯಾವುದನ್ನೂ ಇವರು ಸಾಕ್ಷಿಯಾಗಿ ಪರಿಗಣಿಸುವುದಿಲ್ಲವೇ? ಇದಕ್ಕಿಂತ ಮತ್ತೇನು ಸಾಕ್ಷಿಗಳು ಬೇಕು ನಿಮಗೆ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Kumaraswamy slams DK Shivakumar
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದ್ದಾರೆ ಎಂಬುದಕ್ಕೆ ಇನ್ನೆಷ್ಟು ಸಾಕ್ಷಿ ಬೇಕು? ತಾವು ಅರ್ಧ ನಿಮಿಷಗಳ ಕಾಲ ಮಾತನಾಡಿದ್ದಾಗಿ ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಸಾಕ್ಷಿ ಏನಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಇದು ಸರಿಯೇ? ಇದ್ದಕ್ಕಿಂತ ಸಾಕ್ಷಿ ಬೇಕಾ ಸಿದ್ದರಾಮಯ್ಯ ನಿಮಗೇ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈಗಿನ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಅವರ ಸಾಕ್ಷಿ ಕೇಳುತ್ತಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ಸಂಭಾಷಣೆಯಲ್ಲಿ ಏನಿದೆ? ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ, ಶಿವರಾಮೇಗೌಡ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ನಡೆದ ಸಂಭಾಷಣೆಯಲ್ಲಿ ಏನಿದೆ? ಇದ್ಯಾವುದನ್ನೂ ಇವರು ಸಾಕ್ಷಿಯಾಗಿ ಪರಿಗಣಿಸುವುದಿಲ್ಲವೇ? ಇದಕ್ಕಿಂತ ಮತ್ತೇನು ಸಾಕ್ಷಿಗಳು ಬೇಕು ನಿಮಗೆ? ಎಂದು ಕೇಳಿದರು.

ಯಾರು ಯಾರೋ ಬರುತ್ತಿರುತ್ತಾರೆ. ಕೆಟ್ಟವರು ಬರ್ತಾರೆ, ಒಳ್ಳೆಯವರು ಬರ್ತಾರೆ ಅಂತ ಡಿ.ಕೆ. ಶಿವಕುಮಾರ್‌ ಅವರು ಹೇಳಿದ್ದಾರೆ. ವಕೀಲ ದೇವರಾಜೇಗೌಡರ ಜತೆಗೆ ಡಿಕೆಶಿ ಅರ್ಧ ನಿಮಿಷ ಮಾತನಾಡಿರುವುದು ಪ್ರಮುಖವಾದ ಅಂಶ ಅಲ್ವಾ ಇವರಿಗೆ? ಸಾಕ್ಷಿ ಕೊಡಿ ಸಾಕ್ಷಿ ಕೊಡಿ ಅಂತ ಹೇಳ್ತಾರೆ. ಎಸ್‌ಐಟಿ ತಂಡದಿಂದ 7 ಜನರನ್ನು ಬಂಧನ ಮಾಡಿ ಕರೆ ತಂದಿದ್ದಾರೆ. ಹಾಗಾದರೆ ಯಾವ ಸಾಕ್ಷಿ ಮೇಲೆ ಬಂಧನ ಮಾಡಿ ಕರೆ ತಂದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು. ಹಲವಾರು ಜನರನ್ನು ಪ್ರತಿ ನಿತ್ಯ ಕರೆಯುವ ಎಸ್‌ಐಟಿ ಅಧಿಕಾರಿಗಳು ಈಗ ಮಾಡುತ್ತಿರುವುದು ಏನು? ಕಿರುಕುಳ ಅಲ್ಲವೇ? ಅವರಿಗೂ ಇದಕ್ಕೂ ಏನು ಸಂಬಂಧ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಈ ಪ್ರಕರಣದಲ್ಲಿ ಈಗ ಎಲ್ಲವೂ ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದ ಹಾಗೆ ಇದೆ. ಮಾಹಿತಿ ಏನು ಇದೆಯೋ ಎಲ್ಲವನ್ನು ಸಹ ಕೊಡಿ ಅಂತ ಕೇಳುತ್ತಾರೆ. ದೂರನ್ನು ಬಹಳ ಕಷ್ಟಪಟ್ಟು ಕೊಡಿಸಿದ್ದೇವೆ ಅಂತ ಹೇಳುತ್ತಾರೆ. ಅ ವ್ಯಕ್ತಿ ಜೊತೆ ಮಾತನಾಡಬೇಕಾದರೆ ಕಷ್ಟ ಪಟ್ಟು ಕೊಡಿಸಿದ್ದೇವೆ ಅಂತ ಹೇಳ್ತಾರೆ. ಇದಕ್ಕಿಂತಲೂ ಸಿಎಂ ಅವರಿಗೆ ಸಾಕ್ಷಿ ಬೇಕಾ..? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಏನೋ 6 ಪ್ರಶ್ನೆ ಇಟ್ಟಿದ್ದಾರಂತೆ..?

ಬಿಜೆಪಿಯವರಿಗೆ ಏನೋ ಪತ್ರ ಬರೆದಿದ್ದಾರಂತೆ, ಗೊತ್ತಿದ್ದು ಯಾಕೆ ಪ್ರಜ್ವಲ್‌ಗೆ ಟಿಕೆಟ್ ಕೊಟ್ಟಿರಿ? ಜೆಡಿಎಸ್ ಅವರು ಪ್ರಜ್ವಲ್ ಅವರನ್ನು ಸಸ್ಪೆಂಡ್ ಯಾಕೆ ಮಾಡಿದರು? ಈಗ 5- ಪ್ರಶ್ನೆ ಕೇಳಿದ್ದೇವೆ ಅಂತ ಹೇಳುತ್ತಾರೆ. ನಾನು ಪಾರ್ಟಿಯಿಂದ ವಜಾ ಮಾಡುವ ನಿರ್ಧಾರ ಕೈಗೊಂಡೆ. ಆದರೆ, ಸಿಎಂ ಹೇಳಿಕೆಯನ್ನು ನೋಡಿದರೆ ಆರೋಪಿಯನ್ನು ಅಪರಾಧಿಯನ್ನಾಗಿ ಮಾಡಿದ್ದಾರೆ. ಆದರೆ, ಪ್ರಜ್ವಲ್‌ ಇನ್ನೂ ಆರೋಪಿ ಸ್ಥಾನದಲ್ಲಿ ಇದ್ದಾನೆ. ಅಪರಾಧಿ ಅನ್ನುವುದನ್ನು ಕೋರ್ಟ್‌ ನಿರ್ಧಾರ ಮಾಡಲಿದೆ? ಅದೀಗ ಎಲ್ಲಿ ಸಾಬೀತಾಗಿದೆ? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ: CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ನಿಮ್ಮ ಎಸ್‌ಐಟಿಯವರು ಹೇಳುವ ಪ್ರಕಾರ, ವಿಡಿಯೊಗಳಲ್ಲಿ ಪ್ರಜ್ವಲ್‌ ಮುಖ ಕಾಣುತ್ತಿಲ್ಲ. ಹಾಗಾದರೆ, ಅಪರಾಧಿ ಸ್ಥಾನದಲ್ಲಿ ಯಾಕೆ ನಿಲ್ಲಿಸಿದ್ದೀರಿ? ಈ ಆರೋಪ ಪ್ರಜ್ವಲ್‌ ಮೇಲೆ ಬಂದ ತಕ್ಷಣ ನಾವು ನೈತಿಕತೆ ಉಳಿಸಿಕೊಳ್ಳಲು ಮೇಲೆ ಸಸ್ಪೆಂಡ್ ಮಾಡಿದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading

ಕರ್ನಾಟಕ

Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

Drowns in Farm Pond: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ದುರ್ಘಟನೆ ನಡೆದಿದೆ. ಕೃಷಿ ಹೊಂಡದಲ್ಲಿ ಈಜಲು ಹೋದಾಗ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿದ್ದಾರೆ.

VISTARANEWS.COM


on

Drown in pond
Koo

ವಿಜಯಪುರ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ (Drowns in Farm Pond) ಜಿಲ್ಲೆಯ ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ನಡೆದಿದೆ. ಕೃಷಿ ಹೊಂಡದಲ್ಲಿ ಈಜಲು ಹೋದಾಗ ಬಾಲಕರು ನೀರಿನಲ್ಲಿ ಮುಳುಗಿ ದುರ್ಘಟನೆ ಸಂಭವಿಸಿದೆ. ಅಮಿತ್ ರಾಠೋಡ (12), ಸುದೀಪ್ ಜಾಧವ್ (13) ಮೃತರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

missing case davanagere

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (family missing Case) ಘಟನೆ ದಾವಣೆಗೆರೆಯಲ್ಲಿ (Davanagere crime news) ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

ಬೆಳಗಾವಿ: ರೈತರೊಬ್ಬರು ಮಾಡಿದ ಸಾಲ ಕಟ್ಟಲಿಲ್ಲ (farmer loan) ಎಂದು ಸಾಲ ನೀಡಿದ ಮಹಿಳೆ ಆ ರೈತನ ಪತ್ನಿ ಹಾಗೂ ಪುತ್ರನಿಗೆ ಅನ್ನ ನೀರು ಕೊಡದೆ ಗೃಹಬಂಧನದಲ್ಲಿಟ್ಟ, ಇದರಿಂದ ನೊಂದ ರೈತ ಆತ್ಮಹತ್ಯೆ (farmer suicide, farmer self harming) ಮಾಡಿಕೊಂಡ ಮನ ಕಲಕುವ ಘಟನೆ ಬೆಳಗಾವಿ (belagavi news) ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ಭೀಕರ ಬರಕ್ಕೆ ಕೈಕೊಟ್ಟ ಬೆಳೆಗಳಿಂದಾಗಿ ಉಪಜೀವನಕ್ಕೆ ರೈತ ಸಾಲದ ಮೊರೆ ಹೋಗಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನದ ಶಿಕ್ಷೆಯನ್ನು ಸಾಲ ನೀಡಿದ ಮಹಿಳೆ ವಿಧಿಸಿದ್ದಳು. ಇದರಿಂದ ಮನನೊಂದ ರೈತ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಹೆಸರಿನ ವಿಕೃತ ಮಹಿಳೆಯಿಂದ ಈ ಕೃತ್ಯ ನಡೆದಿದೆ. ರಾಜು ಖೋತಗಿ ತಮ್ಮ ಜೀವನ ‌ನಿರ್ವಹಣೆಗೆ ಸಿದ್ದವ್ವ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ರೂ. ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ತುಂಬುತ್ತಿದ್ದರು. ಎರಡು ದಿನಗಳ ಹಿಂದೆ ಏಕಾಏಕಿ ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದಾಳೆ. ರಾಜು ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದ್ದರು.

ಇದಕ್ಕೆ ಒಪ್ಪದೇ, ಸಾಲ ಮರಳಿಸುವವರೆಗೂ ಪುತ್ರ ಬಸವರಾಜ ಖೋತಗಿಯನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗುವಂತೆ ಸಿದ್ದವ್ವ ತಾಕೀತು ಮಾಡಿದ್ದಳು. ಎರಡು ದಿನವಾದರೂ ಪುತ್ರನನ್ನು ಬಿಡದಾಗ ಸಿದ್ದವ್ವಳ ಮನೆಗೆ ಕೇಳಲು ರಾಜು-ದುರ್ಗವ್ವ ಹೋಗಿದ್ದರು. ಈ ವೇಳೆ ಬಸವರಾಜ್‌ನನ್ನು ಬಿಟ್ಟು ರಾಜು ಖೋತಗಿ, ಪತ್ನಿ ದುರ್ಗವ್ವರನ್ನು ಮನೆಯಲ್ಲಿ ಕೂರಿಸಿ ಶಿಕ್ಷೆ ವಿಧಿಸಿದ್ದಾಳೆ. ಮೂವರನ್ನೂ ಹನಿ ನೀರು, ತುತ್ತು ಅನ್ನ ನೀಡದೇ 2 ದಿನ ಗೃಹಬಂಧನದಲ್ಲಿಟ್ಟಿದ್ದಾಳೆ.

ಇದನ್ನೂ ಓದಿ | Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ಇದರಿಂದ ಮನನೊಂದು ಮನೆಗೆ ಬಂದ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೂರು ನೀಡಲು ಹೋದರೆ, ಸಿದ್ದವ್ವಳ ಅನ್ಯಾಯದ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳದೇ ಸತಾಯಿಸಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದುರ್ಬಲ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ ವಿರುದ್ಧ ಪತಿ ಕಳೆದುಕೊಂಡ ದುರ್ಗವ್ವ, ಪೋಷಕರು ಆರೋಪಿಸಿದ್ದಾರೆ.

Continue Reading

ಕ್ರೈಂ

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

Road Accident : ಹಾಸನ ಹಾಗೂ ಯಾದಗಿರಿ, ಮಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ತಾಯಿ-ಮಗ ಮೃತಪಟ್ಟರೆ, ಯಾದಗಿರಿಯಲ್ಲಿ ಬೈಕ್‌ ಸವಾರರಿಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇತ್ತ ಮಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

VISTARANEWS.COM


on

By

Road Accident
Koo

ಹಾಸನ/ಯಾದಗಿರಿ: ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ (Road Accident) ತಾಯಿ-ಮಗ ಸೇರಿ ಬೈಕ್‌ ಸವಾರರಿಬ್ಬರು, ಆಟೋ ಪ್ರಯಾಣಿಕ ದಾರುಣವಾಗಿ ಮೃತಪಟ್ಟಿದ್ದಾರೆ. ಐವರಿಗೆ ಗಂಭೀರ ಗಾಯಗೊಂಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ಇನೋವಾ ಕಾರು ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಶಫೀಕ್ (20), ಸಫಿಯಾ (50) ಮೃತ ದುರ್ದೈವಿಗಳು.

ಕಂಟೇನರ್ ಲಾರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಇನೋವಾ ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಕೆಂಪುಹೊಳೆ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳು ದಕ್ಷಿಣ ಕನ್ನಡದ ಬಂಟ್ವಾಳ ಮೂಲದವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಛಿದ್ರವಾಗಿ ಬಿದ್ದಿದ್ದ ಕಾರನ್ನು ತೆರವುಗೊಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಯಾದಗಿರಿಯಲ್ಲಿ ಬೈಕ್‌ಗಳ ಡಿಕ್ಕಿ, ಇಬ್ಬರು ಸವಾರರು ಸಾವು

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಿನ್ನೆ ಸೋಮವಾರ ಸಂಜೆ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಸವಾರನಿಗೆ ಗಂಭೀಯ ಗಾಯವಾಗಿದೆ. ಗಾಯಾಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೈದಾಪುರದ ಸ್ವಾಮಿ ವಿವೇಕಾನಂದ ಶಾಲೆಯ ಮುಂಭಾಗ ಅಪಘಾತ ಸಂಭವಿಸಿದೆ. ಸೈದಾಪುರ ನಿವಾಸಿ ಮೌನೇಶ್ (24) ಹಾಗೂ ಕೊಂಡಾಪುರ ನಿವಾಸಿ ಅಶೋಕ್ (21) ಮೃತ ಬೈಕ್ ಸವಾರರು. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆಟೋ-ಬೈಕ್‌ ಡಿಕ್ಕಿ, ಹಾರಿ ಬಿದ್ದ ಪ್ರಯಾಣಿಕ ಸಾವು

ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ‌ ರಭಸಕ್ಕೆ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಹಾರಿ ಬಿದ್ದಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಘಟನೆ ನಡೆದಿದೆ. ಮಹಮ್ಮದ್ ಅಲ್ತಾಫ್ (19) ಮೃತ ದುರ್ದೈವಿ.

ಮಹಮ್ಮದ್‌ ಆಟೋದಲ್ಲಿ ಸಜಿಪ ಕಡೆಯಿಂದ ಬಿಸಿರೋಡ್ ಕಡೆ ತೆರಳುತ್ತಿದ್ದರು. ಬಿಸಿರೋಡ್ ನಿಂದ ಪಾಣೆಮಂಗಳೂರು ಕಡೆಯಿಂದ ಬೈಕ್‌ ಬರುವಾಗ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತ ಸಂದರ್ಭದಲ್ಲಿ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯವಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
HD Kumaraswamy attack on DK Shivakumar and he gives reason for Devaraje Gowda fears for his life in jail
ರಾಜಕೀಯ8 mins ago

HD Kumaraswamy: ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

Wedding Fashion
ಫ್ಯಾಷನ್31 mins ago

Wedding Fashion: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾಗಿವೆ ಈ ಮಿರಮಿರ ಮಿನುಗುವ ಲೆಹೆಂಗಾಗಳು!

Sambit Patra
ದೇಶ31 mins ago

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

2024 Bajaj Pulsar F250
ಪ್ರಮುಖ ಸುದ್ದಿ35 mins ago

2024 Bajaj Pulsar F250 : ಬೆಲೆ ಏರಿಕೆ ಮಾಡದೇ ಹೊಸ ಪಲ್ಸರ್​ 250 ರಸ್ತೆಗಿಳಿಸಲಿದೆ ಬಜಾಜ್​​

Karnataka Rain
ಮಳೆ38 mins ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Cauvery Dispute
ಕರ್ನಾಟಕ55 mins ago

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Brand Bangalore and BJP Slams DK Shivakumar and Congress Government
ರಾಜಕೀಯ57 mins ago

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Eye Care Tips
ಆರೋಗ್ಯ1 hour ago

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

Turbulence
ಪ್ರಮುಖ ಸುದ್ದಿ1 hour ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Used Car Sale
ಪ್ರಮುಖ ಸುದ್ದಿ1 hour ago

Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ38 mins ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌