Site icon Vistara News

ಚಿಕ್ಕಮಗಳೂರಿನಲ್ಲಿ ಶ್ರೀರಾಮಸೇನೆಯಿಂದ ದತ್ತಮಾಲೆ ಅಭಿಯಾನ, ಶೋಭಾಯಾತ್ರೆ

chikkamagaluru

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಶ್ರೀರಾಮ ಸೇನೆ ವತಿಯಿಂದ ಇಂದು ದತ್ತ ಮಾಲೆ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 9 ಗಂಟೆಗೆ ನಗರದ ಶಂಕರ ಮಠದಲ್ಲಿ ಬಹಿರಂಗ ಸಮಾವೇಶವನ್ನು ಆಯೋಜಿಸಲಾಗಿದೆ. ಹನುಮಂತಪ್ಪ ವೃತ್ತದಿಂದ 5000 ಮಾಲಾಧಾರಿಗಳಿಂದ ಶೋಭಾ ಯಾತ್ರೆ ನಡೆಯಲಿದೆ. ಹನುಮಂತಪ್ಪ ವೃತ್ತದಿಂದ ಆಜಾದ್ ವೃತ್ತದವರೆಗೆ ಶೋಭಾ ಯಾತ್ರೆ ಮುಂದುವರಿಯಲಿದೆ.

ಸಾವಿರಾರು ದತ್ತ ಮಾಲಾಧಾರಿಗಳಿಂದ ದತ್ತ ಪಾದುಕೆ ದರ್ಶನ ನಿರೀಕ್ಷಿಸಲಾಗಿದೆ. ಸಾವಿರಾರು ಭಕ್ತರು ದತ್ತಪೀಠಕ್ಕೆ ತೆರಳಿ ದರ್ಶನ ಪಡೆಯುವ ನಿರೀಕ್ಷೆ ಇದೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವಾರು ಮಂದಿ ಭಾಗವಹಿಸಲಿದ್ದಾರೆ. ಶೋಭಾ ಯಾತ್ರೆ ಹಿನ್ನೆಲೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Exit mobile version