Site icon Vistara News

Elephant Attack : ತೋಟಕ್ಕೆ ಹೋದ ಕಾರ್ಮಿಕನನ್ನು ಅಟ್ಟಾಡಿಸಿ ಕೊಂದ ಒಂಟಿ ಸಲಗ

elephant attack Tamil Nadu worker killed

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ (Elephant Attack) ಮುಂದುವರಿದಿದೆ. ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಎರಗಿದ ಒಂಟಿ ಸಲಗವು ಕೊಂದು ಹಾಕಿದೆ. ಚಿಕ್ಕಮಗಳೂರು ತಾಲೂಕಿನ ಕಂಚೇನಹಳ್ಳಿಯಲ್ಲಿ ಘಟನೆ ನಡೆದಿದೆ.

ತಮಿಳುನಾಡು ಮೂಲದ ಕೂಲಿ ಕಾರ್ಮಿಕ ಶ್ರೀಧರ್ ಎಂಬುವವರ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಗಂಭೀರ ಗಾಯಗೊಂಡಿದ್ದ ಶ್ರೀಧರ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೂಲಿ ಕಾರ್ಮಿಕ ಶ್ರೀಧರ್ ಉಸಿರು ಚೆಲ್ಲಿದ್ದಾರೆ.

ಶ್ರೀಧರ್‌ನ ಇಡೀ ಕುಟುಂಬವು ಕಾಫಿ ತೋಟದ ಕೆಲಸಕ್ಕೆ ಬಂದಿದ್ದರು. ತೋಟಕ್ಕೆ ತೆರಳುತ್ತಿದ್ದಾಗ ಎದುರಿಗೆ ಒಂಟಿ ಸಲಗ ಬಂದಿದೆ. ಈ ವೇಳೆ ಆನೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಕಾಡಾನೆ ದಾಳಿಯಿಂದ (Elephant Attack) ಮೃತಪಟ್ಟಿದ್ದಾರೆ. ಆಸ್ಪತ್ರೆ ಬಳಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಳೆದೊಂದು ವರ್ಷದಿಂದ ಆನೆ ದಾಳಿಗೆ ಆರು ಮಂದಿ ಬಲಿಯಾಗಿದ್ದಾರೆ. ಕೆಆರ್ ಪೇಟೆ, ಕಂಚಿನ ಹಳ್ಳಿ ಸುತ್ತಮುತ್ತ ಒಂಟಿ ಸಲಗ ಓಡಾಡುತ್ತಿದೆ. ಆದರೆ ಅರಣ್ಯ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ. ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ.

ಮೂಡಿಗೆರೆಯಲ್ಲಿ ಆನೆಗಳ ಹಾವಳಿಗೆ ಬೆಳೆ ನಾಶ

ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ (Elephant Attack) ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ತೋಟಗಳಿಗೆ ಆನೆಗಳು ನುಗ್ಗಿ ದಾಂಧಲೆ ಮಾಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶ ಮಾಡಿವೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ತರುವೆ ಗ್ರಾಮದ ರೈತ ನವೀನ್ ಎಂಬುವವರ ತೋಟಕ್ಕೆ ನುಗ್ಗಿದ ಕಾಡಾನೆಯು ಅಡಿಕೆ, ಬಾಳೆ, ಕಾಫಿ ಬೆಳೆಯನ್ನು ಹಾಳು ಮಾಡಿವೆ.

ಬೆಳೆ ಹಾನಿ ಮಾಡಿರುವ ಕಾಡಾನೆ

ಕೊಟ್ಟಿಗೆ ಹಾರ ಸುತ್ತಮುತ್ತ ಗ್ರಾಮಗಳಲ್ಲಿ ಆನೆಗಳ ದಾಳಿಯು ಆತಂಕವನ್ನು ಸೃಷ್ಟಿಸಿದೆ. ಕಾಫಿ ತೋಟಕ್ಕೆ ಕೂಲಿ ಕಾರ್ಮಿಕರು ಬರಲು ಹಿಂದೇಟು ಹಾಕುತ್ತಿದ್ದಾರೆ. ಬೆಳೆ ನಷ್ಟ

ಚಾಮರಾಜನಗರದಲ್ಲಿ ಆನೆ ದಾಳಿಗೆ ಯುವಕ ಬಲಿ

ಆನೆ ದಾಳಿಗೆ (Elephant Attack) ಯುವಕನೊಬ್ಬ ಮೃತಪಟ್ಟಿದ್ದ. ಚಾಮರಾಜನಗರದ ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದಲ್ಲಿ ಘಟನೆ ನಡೆದಿತ್ತು. ಕತ್ತೆಕಾಲು ಪೋಡು ಗ್ರಾಮದ ಮಾದ (23) ಮೃತ ದುರ್ದೈವಿ.

ಮಾದ ಹಿರಿಯಂಬಲ ಗ್ರಾಮಕ್ಕೆ ಹೋಗಿ ವಾಪಾಸ್ ಬರುತ್ತಿರುವಾಗ ಆನೆಯು ದಾಳಿ ನಡೆಸಿತ್ತು. ಆನೆ ದಾಳಿಯಿಂದ ಗಂಭೀರ ಗಾಯಗೊಂಡ ಮಾದ ಸ್ಥಳದಲ್ಲೇ ಮೃತಪಟ್ಟಿದ್ದರು. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿ ಬೈಲೂರು ವಲಯದಲ್ಲಿ ಘಟನೆ ನಡೆದಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಗ್ರಾಮಸ್ಥರು ಆನೆಗಳನ್ನು ಕಾಡಿಗೆ ಓಡಿಸುವಂತೆ ಮನವಿ ಮಾಡಿದ್ದರು. ಜಮೀನು ಕೆಲಸಗಳಿಗೆ ಭಯದಲ್ಲೇ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ಹೊರಹಾಕಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version