ಸಿಇಟಿ ಪರೀಕ್ಷೆಯಲ್ಲೂ ಅಕ್ರಮದ ವಾಸನೆ: ಮೈಸೂರು ಮೂಲದ ವಿದ್ಯಾರ್ಥಿ ಪೊಲೀಸ್‌ ವಶಕ್ಕೆ - Vistara News

ಕ್ರೈಂ

ಸಿಇಟಿ ಪರೀಕ್ಷೆಯಲ್ಲೂ ಅಕ್ರಮದ ವಾಸನೆ: ಮೈಸೂರು ಮೂಲದ ವಿದ್ಯಾರ್ಥಿ ಪೊಲೀಸ್‌ ವಶಕ್ಕೆ

ರಾಜ್ಯಾದ್ಯಂತ ಸಿಇಟಿ ಪರೀಕ್ಷೆಯು ಜೂನ್ 16ರಿಂದ ಶುರುವಾಗಿದ್ದು, ಪರೀಕ್ಷೆ ಮುಗಿಯುವ ಮೊದಲೇ ಅಕ್ರಮದ ಮಾತುಗಳು ಕೇಳಿ ಬರುತ್ತಿದೆ.

VISTARANEWS.COM


on

puc
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ರಾಜ್ಯದಲ್ಲಿ ಪಿಎಸ್‌ಐ ಅಕ್ರಮ ನೇಮಕಾತಿ ಬಳಿಕ ಇದೀಗ ವೃತ್ತಿಪರ ಶಿಕ್ಷಣಕ್ಕಾಗಿ ನಡೆಯುತ್ತಿರುವ ಸಿಇಟಿ ಪರೀಕ್ಷೆಯಲ್ಲಿಯೂ ಅಕ್ರಮದ ಶಂಕೆ ವ್ಯಕ್ತವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್‌ 16, 17ರಂದು ಮುಖ್ಯ ವಿಷಯಕ್ಕೆ ಪರೀಕ್ಷೆ ನಡೆಸಿದ್ದು, ಇಂದು ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಸಿದೆ. ಈ ನಡುವೆ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್‌ ತಂದಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | ಎಕ್ಸಾಂ ಟೆನ್ಷನ್‌, ಹಿಜಾಬ್‌ ಕನ್ಫ್ಯೂಷನ್‌ ನಡುವೆ ನಡೆದ ಸಿಇಟಿ ಪರೀಕ್ಷೆ

ಪಿ.ಎಸ್.ಐ. ನೇಮಕಾತಿ ಅಕ್ರಮದ ಬೆನ್ನಲ್ಲೇ ಸಿಇಟಿಯಲ್ಲೂ ಅಕ್ರಮ ನಡೆದಿರುವ ಗುಮಾನಿ ಎದ್ದಿದೆ. ಇದಕ್ಕೆ ಕಾರಣವಾಗಿರುವುದು ಮೈಸೂರು ಮೂಲದ ವಿದ್ಯಾರ್ಥಿ ಪರೀಕ್ಷೆಯಲ್ಲಿ ಮೊಬೈಲ್ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ನಡೆದ ರಸಾಯನಶಾಸ್ತ್ರ ಪರೀಕ್ಷೆಯಲ್ಲಿ ಮೊಬೈಲ್ ಬಳಕೆ ಮಾಡಿರುವುದಾಗಿ ತಿಳಿದು ಬಂದಿದೆ.

ವಿದ್ಯಾರ್ಥಿನಿ ಮೊಬೈಲ್‌ನಲ್ಲಿ ಪ್ರಶ್ನೆಪತ್ರಿಕೆಯ ಫೋಟೋ ತೆಗೆದು ಗೂಗಲ್‌ನಲ್ಲಿ  ಉತ್ತರ ಹುಡುಕುವ ಪ್ರಯತ್ನ ನಡೆಸಿದ್ದು ಕಂಡು ಬಂದಿದೆ. ಕೊಠಡಿ ಮೇಲ್ವಿಚಾರಕರು ಪರಿಶೀಲಿಸಿದಾಗ ವಿದ್ಯಾರ್ಥಿಯ ಪ್ಯಾಂಟ್ ನಲ್ಲಿ ಮೊಬೈಲ್ ಪತ್ತೆಯಾಗಿದೆ.

ಇದನ್ನೂ ಓದಿ | 2nd puc Toppers| ಹಪ್ಪಳ ಮಾರುವವರ ಮಗಳು ಈಗ ಪಿಯುಸಿ ಟಾಪರ್‌! ಸಾಧನೆಗೆ ಯಾವುದೂ ಅಡ್ಡಿ ಅಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

SSLC Student Death : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ನಾಲ್ಕು ಸಬ್ಜೆಕ್ಟ್‌ನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ (SSLC result) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

SSLC Student Death Exam fail
ಸಾಂದರ್ಭಿಕ ಚಿತ್ರ
Koo

ಚಿತ್ರದುರ್ಗ: ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ (SSLC Result 2024) ಬಂದ ಬಳಿಕ ಫೇಲ್ (SSLC exam fail) ಆದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ (Student self harming) ಮಾಡಿಕೊಳ್ಳುತ್ತಿರುವ ಮುಂದುವರಿದೆ. ಫೇಲ್‌ ಆಗಿದ್ದಕ್ಕೆ ಮನನೊಂದುಕೊಂಡು ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ (SSLC Student Death) ಮಾಡಿಕೊಂಡಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೊಬ್ಬರಿಪೇಟೆ ಗ್ರಾಮದಲ್ಲಿ ಘಟನೆ ನಡೆದಿದೆ.

16 ವರ್ಷದ ಧನುಶ್ರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಫೇಲ್ ಆಗಿದ್ದಳು. ಇತ್ತ ಮಗಳು ಫೇಲ್ ಆಗಿದ್ದರು ಪೋಷಕರು ಆತ್ಮಸ್ಥೈರ್ಯ ತುಂಬಿದ್ದರು.

sslc student death
ಮೃತ ಧನುಶ್ರೀ

ಆದರೂ ಮನನೊಂದ ವಿದ್ಯಾರ್ಥಿನಿ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಘಟನೆ-1 ಚಿಕ್ಕಬಳ್ಳಾಪುರದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರದ (chikkaballapur news) ಗಂಗರೇಕಾಲುವೆ ಗ್ರಾಮದ ಜಿ.ಎನ್ ವೈಷ್ಣವಿ (15) ಎಂಬಾಕೆಯು ಎಸ್‌ಎಸ್‌ಎಲ್‌ಸಿಯಲ್ಲಿ ಫೇಲ್‌ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ವೈಷ್ಣವಿ ಮಂಚನಬೆಲೆ ಗ್ರಾಮದ ಬಿಜಿಎಸ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದಳು. ಎಸ್ಎಸ್ಎಲ್‌ಸಿ ಫಲಿತಾಂಶ ನೋಡಿ ತಾನು ಫೇಲ್ ಆಗಿದ್ದಕ್ಕೆ ನೊಂದುಕೊಂಡಿದ್ದಳು. ನಂತರ ಮನೆಯಲ್ಲೇ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು.

ಘಟನೆ -2 ಹೊಲಕ್ಕೆ ತೆರಳಿ ಮರಕ್ಕೆ ನೇಣಿಗೆ ಶರಣಾದ

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ- 3 ಪಾಸಾದರೂ ನೇಣು ಹಾಕಿಕೊಂಡು ವಿದ್ಯಾರ್ಥಿನಿ

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ. ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ.

ಘಟನೆ-4 ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಜರುಗಿದೆ. ಸೃಷ್ಟಿ ಕಲ್ಲಪ್ಪ ಚೌವ್ಹಾಣ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ- 5 ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Student) ಬರೆದಿದ್ದ ಬಾಲಕನೊರ್ವ ನಾಪತ್ತೆಯಾಗಿದ್ದಾನೆ. ಎಸ್ಎಸ್ಎಲ್‌ಸಿ ಪರೀಕ್ಷೆಯ (SSLC Student Missing) ಫಲಿತಾಂಶ ಬರುವ ಮುನ್ನವೇ (Missing Case) ಕಾಣೆಯಾಗಿದ್ದಾನೆ. ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಬಾಲಕ ಜಗದೀಶ್‌ ಎಂಬಾತ ಮೇ 7 ರಂದು ಮನೆಯಿಂದ ಹೊರ ಹೋದವನು ವಾಪಸ್‌ ಬಂದಿಲ್ಲ. ರಾತ್ರಿಯಾದರೂ ಬಾರದೆ ಇದ್ದಾಗ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಇನ್ನೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಬಾಲಕ ಫಲಿತಾಂಶಕ್ಕೂ ಮುನ್ನವೇ ನಾಪತ್ತೆಯಾಗಿದ್ದಾನೆ. ಇತ್ತ ಬಾಲಕನನ್ನು ಯಾರಾದರೂ ಅಪಹರಿಸಿರಬಹುದು ಎಂದು ಪಾಲಕರು ಶಂಕಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Engineering Student : ಮನೆಯಿಂದ ಹೊರ ಹೋದ ವಿದ್ಯಾರ್ಥಿ ನಾಪತ್ತೆಯಾಗಿದ್ದ. ಇತ್ತ ಮಗನಿಗಾಗಿ ಹುಡುಕಾಟ ನಡೆಸಿ ಪೋಷಕರು ಸುಸ್ತಾಗಿದ್ದರು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಹೆದರಿದ ಇಂಜಿನಿಯರಿಂಗ್‌ ವಿದ್ಯಾರ್ಥಿ ಜಿಗಣಿ ಕೆರೆಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದ. ಇದೀಗ ಮೂರು ದಿನದ ನಂತರ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

Engineering Student
ಅಮೃತೇಶ್‌ ಮೃತದೇಹವನ್ನು ಕೆರೆಯಿಂದ ಹೊರತೆಗೆಯುತ್ತಿರುವುದು
Koo

ಆನೇಕಲ್: ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ (Engineering Student) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಫೇಲ್ ಆದ (Exam Fail) ವಿಚಾರ ಪೋಷಕರಿಗೆ ತಿಳಿಯುತ್ತೆಂದು ಹೆದರಿದ ವಿದ್ಯಾರ್ಥಿ ಜಿಗಣಿ ಕೆರೆಗೆ (Jigani lake) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಘಟನೆ (Bengaluru rural) ನಡೆದಿದೆ. ಅಮೃತೇಶ್ ಪಾಂಡೆ (21) ಆತ್ಮಹತ್ಯೆ ಮಾಡಿಕೊಂಡವನು.

ಹೇಮಲತಾ ಪಾಂಡೆ, ವಿಜಯ್ ಶಂಕರ್ ಪಾಂಡೆ ದಂಪತಿ ಪುತ್ರ ಅಮೃತೇಶ್‌ ಪಾಂಡೆ ಮೂಲತಃ ಬಿಹಾರ ಮೂಲದ ಕುಟುಂಬದವರು. ಕಳೆದ ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಜಿಗಣಿಗೆ ಬಂದು ನೆಲೆಸಿದ್ದರು. ಮಗನಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕೆಂದು ಕನಸು ಕಂಡಿದ್ದ ಪೋಷಕರು, ಅದರಂತೆಯೇ ಮೈಸೂರು ರಸ್ತೆಯ ಆರ್.ವಿ ಕಾಲೇಜಿಗೆ ಮಗನನ್ನು ಸೇರಿಸಿದ್ದರು.

ಆರ್.ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗಿ ಬರುತ್ತಿದ್ದ. ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಎರಡು ವಿಷಯದಲ್ಲಿ ಫೇಲ್ ಆಗಿದ್ದ. ಸರಿಯಾಗಿ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: SSLC Student Missing : ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

ಲೋಕಸಭೆ ಚುನಾವಣಾಗೆ ಮತ ಹಾಕಲು ಜಿಗಣಿಗೆ ಬಂದಿದ್ದ ಅಮೃತೇಶ್, ಫೇಲ್ ಆಗಿರುವ ವಿಚಾರ ತಂದೆಗೆ ತಿಳಿಯುತ್ತೆ ಎಂದು ಹೆದರಿಬಿಟ್ಟಿದ್ದ. ಕಾಲೇಜಿನವರು ಫೋನ್ ಮಾಡುತ್ತಾರೆ ಎಂದು ತಂದೆ ಫೋನ್‌ನಲ್ಲಿ ನಂಬರ್‌ಗಳನ್ನು ಬ್ಲಾಕ್ ಮಾಡಿದ್ದ. ಆದರೆ ಇತ್ತ ಅಮೃತೇಶ್‌ ತಂದೆ ವಿಜಯ್‌ ಶಂಕರ್‌ ಆರನೇ ಸೆಮಿಸ್ಟರ್‌ಗೆ ಆಡ್ಮಿಷನ್ ಮಾಡಿ ಕಾಲೇಜಿಗೆ ಬಿಟ್ಟು ಬರುತ್ತೇನೆ ಎಂದು ಹೇಳಿದ್ದಾರೆ. ತಂದೆಯ ಜತೆ ಕಾಲೇಜಿಗೆ ಹೋದರೆ ಫೇಲ್ ಆದ ವಿಚಾರ ತಿಳಿಯುತ್ತೆ. ಸರಿಯಾಗಿ ಕಾಲೇಜಿಗೂ ಹೋಗದೇ ಇರುವುದು ತಿಳಿದು ಬಿಡುತ್ತೆ ಎಂದು ಅಮೃತೇಶ್ ಭಯಗೊಂಡಿದ್ದ.

ಹೀಗಾಗಿ ಮೇ 10ರಂದು ಮನೆಯಿಂದ ಹೊರಟ ಅಮೃತೇಶ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇತ್ತ ಆತನಿಗಾಗಿ ಅಮೃತೇಶ್‌ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಆದರೆ ನಿನ್ನೆ ಜಿಗಣಿ ಕೆರೆಯಲ್ಲಿ ಅಮೃತೇಶ್‌ ಮೃತದೇಹವು ತೇಲಿಕೊಂಡು ಬಂದಿದೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಮೃತದೇಹವು ಅಮೃತೇಶ್‌ದ್ದು ಎಂದು ತಿಳಿದು ಬಂದಿದೆ. ಸದ್ಯ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

Viral News: ಚಿಕ್ಕ ಹೆಣ್ಣು ಮಗುವಿಗೆ ತಾಯಿಯೊಬ್ಬಳು ಮನೆಯಲ್ಲಿ ಕ್ರೂರವಾಗಿ ಹೊಡೆಯುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮಗುವಿನ ತಾಯಿ ಸೌಟಿನಿಂದ ಕ್ರೂರವಾಗಿ ಹಲ್ಲೆ ನಡೆಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದ್ದು, ನೆಟ್ಟಿಗರಿ ಗಾಬರಿ ಬಿದ್ದಿದ್ದಾರೆ. ಇಂತಹ ತಾಯಂದಿರೂ ಇರುತ್ತಾರ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ. ಮಹಿಳೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

VISTARANEWS.COM


on

Viral News
Koo

ಗಾಂಧಿನಗರ: ʼಅಮ್ಮʼ ಎಂಬ ಎರಡಕ್ಷರ ಕೇಳಿದರೆ ಸಾಕು ನೊಂದ ಮನಸ್ಸಿಗೆ ತಂಗಾಳಿ ಬೀಸಿದ ಅನುಭವವಾಗುತ್ತದೆ. ಈ ಜಗತ್ತಿನಲ್ಲಿ ನಿಸ್ವಾರ್ಥ ಇಲ್ಲದೆ ಇತರರಿಗಾಗಿ ಮಿಡಿಯುವ ಜೀವವಿದ್ದರೆ ಅದು ತಾಯಿಯದ್ದು ಮಾತ್ರ. ಇದೇ ಕಾರಣಕ್ಕೆ ನಾವು ತಾಯಿಯನ್ನು ದೇವರೆಂದು ಪೂಜಿಸುತ್ತೇವೆ. ಇಂದು ವಿಶ್ವ ಅಮ್ಮಂದಿರ ದಿನ (Mother’s Day). ತಾಯಂದಿರಿಗೆ ಮನ ತುಂಬಿ ಧನ್ಯವಾದ ಹೇಳುವ ದಿನ. ಆದರೆ ಈಗ ವೈರಲ್‌ ಆಗುತ್ತಿರುವ ಈ ತಾಯಿಯ ವಿಡಿಯೊ ನೋಡಿದರೆ ಮಾತ್ರ ನಮ್ಮ ರಕ್ತ ಕುದಿಯುತ್ತದೆ (Shockong Video). ಇಂತಹ ಅಮ್ಮಂದಿರೂ ಇರುತ್ತಾರ ಎನ್ನುವ ಪ್ರಶ್ನೆ ತನ್ನಿಂದ ತಾನೇ ಹೊರ ಬರುತ್ತದೆ. ಹಾಗಾದರೆ ಈ ವೈರಲ್‌ ವಿಡಿಯೊದಲ್ಲಿ (Viral News) ಏನಿದೆ? ಇಲ್ಲಿದೆ ವಿವರ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಲಾದ ವಿಡಿಯೊ ಇದಾಗಿದ್ದು, ಚಿಕ್ಕ ಹೆಣ್ಣು ಮಗುವಿಗೆ ತಾಯಿಯೊಬ್ಬಳು ಮನೆಯಲ್ಲಿ ಕ್ರೂರವಾಗಿ ಹೊಡೆಯುತ್ತಿರುವುದು ಕಂಡು ಬಂದಿದೆ. ಗುಜರಾತ್‌ನಲ್ಲಿ ನಡೆದಿದೆ ಎನ್ನಲಾದ ಈ ವಿಡಿಯೊ ಇದೀಗ ತೀವ್ರ ಚರ್ಚೆಯನ್ನೇ ಹುಟ್ಟು ಹಾಕಿದೆ.

ಶಾಕಿಂಗ್‌ ವಿಡಿಯೊ

ಸುಮಾರು 7-8 ವರ್ಷದ ಹೆಣ್ಣು ಮಗು ಅದು. ನೆಲದಲ್ಲಿ ಮಲಗಿ ಯಾವುದೋ ಕಾರಣಕ್ಕೆ ಅಳುತ್ತಿದೆ. ಅಲ್ಲಿಗೆ ಧಾವಿಸಿ ಬರುವ ಮಹಿಳೆ (ಬಹುಶಃ ಮಗುವಿನ ತಾಯಿ) ಸೌಟಿನಿಂದ ಮುಖ, ಮೂತಿ ನೋಡದೆ ಸರಿಯಾಗಿ ಹೊಡೆಯುತ್ತಾಳೆ. ಒಂದಲ್ಲ ಹಲವು ಬಾರಿ ಈ ರೀತಿ ಹಲ್ಲೆ ನಡೆಸುತ್ತಾಳೆ. ಕ್ರೂರವಾಗಿ ದಾಳಿಗೊಳಗಾದ ಬಾಲಕಿ ಅಸಹಾಯಕತೆಯಿಂದ ಅಳುತ್ತಾಳೆ. ಆಕೆಯ ನೋವಿನ ಕೂಗು ಎಂತಹವರ ಕರಳು ಚುರುಕ್‌ ಎನಿಸುವಂತಿದೆ. ಆದರೆ ತಾಯಿಯ ಕಲ್ಲು ಹೃದಯ ಕರಗುವುದೇ ಇಲ್ಲ. ಮತ್ತಷ್ಟು ಹೊಡೆಯುತ್ತಾಳೆ. ಅಂಗಿಯ ಮೂಲಕ ಮಗುವನ್ನು ಅನಾಮತ್ತಾಗಿ ಎತ್ತಿ ಬೆದಿಕೆ ಹಾಕುತ್ತಾಳೆ. ಒಂದು ಹಂತದಲ್ಲಿ ಬಾಲಕಿಯ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಲೂ ನೋಡುತ್ತಾಳೆ. ಬಳಿಕ ಆಕೆಯನ್ನು ಎಳೆದುಕೊಂಡು ಮತ್ತೊಂದು ರೂಮಿನೊಳಗೆ ತೆರಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ನೆಟ್ಟಿಗರು ಏನಂದ್ರು?

ವಿಡಿಯೊ ನೋಡಿ ನೆಟ್ಟಿಗರು ಒಂದು ಕ್ಷಣ ದಂಗಾಗಿದ್ದಾರೆ. ಇಂತಹ ತಾಯಂದಿರೂ ಇರುತ್ತಾರ ಎಂದು ಪ್ರಶ್ನಿಸುತ್ತಿದ್ದಾರೆ. ಹಿಂದೆಲ್ಲ ಬಾಲ್ಯದಲ್ಲಿ ನಮಗೆ ಪೋಷಕರು ಹೊಡೆಯುತ್ತಿದ್ದರು, ಶಿಕ್ಷೆ ನೀಡುತ್ತಿದ್ದರು. ಆದರೆ ಎಂದಿಗೂ ಇಷ್ಟು ಕ್ರೂರವಾಗಿ ನಡೆದುಕೊಳ್ಳುತ್ತಿರಲಿಲ್ಲ. ತಪ್ಪು ಮಾಡಿದಾಗ ಅದನ್ನು ತಿದ್ದಲು ಒಂದೇಟು ಬಿಗಿಯುತ್ತಿದ್ದರು. ಆದರೆ ಇದು ತುಂಬ ಅತಿಯಾಯ್ತು. ಮಕ್ಕಳ ಜೀವಕ್ಕೇ ಅಪಾಯಕಾರಿಯಾಗುವ ಇಂತಹ ಶಿಕ್ಷೆ ನೀಡುವುದು ಎಷ್ಟು ಸರಿ? ಎಂದು ಹಲವರು ಪ್ರಶ್ನಿಸಿದ್ದಾರೆ.

ಜತೆಗೆ ಈ ಘಟನೆ ನಡೆಯುವಾಗ ಅದನ್ನು ತಡೆಯಲು ಮುಂದಾಗದೆ ಚಿತ್ರೀಕರಿಸಿದವರ ಬಗ್ಗೆಯೂ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವಿನ ಮೇಲೆ ಇಷ್ಟು ನಿರ್ದಯವಾಗಿ ನಡೆದುಕೊಳ್ಳುತ್ತಿದ್ದರೂ ತಂದೆ ಮೌನವಾಗಿ ವಿಡಿಯೊ ಶೂಟಿಂಗ್‌ ಮಾಡುತ್ತಿದ್ದಾನೆ. ಮಹಿಳೆ ಜತೆಗೆ ಈತನ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಮಗುವಿನ ತಾಯಿ ತನ್ನ ಪತಿಯ ಜತೆಗೂ ಹೀಗೆ ವರ್ತಿಸುತ್ತಿರಬಹುದು ಎಂದು ಇನ್ನೊಬ್ಬರು ಊಹಿಸಿದ್ದಾರೆ. ಇಂತಹ ಘಟನೆ ಪುನರಾವರ್ತನೆಯಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಗದೊಬ್ಬರು ಆಗ್ರಹಿಸಿದ್ದಾರೆ. ವಿಷಾದದ ಸಂಗತಿ ಎಂದರೆ ಅಮ್ಮಂದಿರ ದಿನವೇ ಈ ವಿಡಿಯೊ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

Continue Reading

ವಿದೇಶ

Nijjar Killing Case: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ; ನಾಲ್ಕನೇ ಆರೋಪಿ ಅರೆಸ್ಟ್‌

Nijjar Killing Case: ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕನೇ ಆರೋಪಿ, ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು 22 ವರ್ಷದ ಅಮನ್‌ದೀಪ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿ ನಡೆಸಿರುವ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ನಿಜ್ಜಾರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಕರನ್‌ ಬ್ರಾರ್‌ (22), ಕಮಲ್‌ಪ್ರೀತ್‌ ಸಿಂಗ್‌ (22) ಮತ್ತು ಕರಣ್‌ಪ್ರೀತ್‌ ಸಿಂಗ್‌ (28) ಎಂಬ ಮೂವರನ್ನು ಬಂಧಿಸಲಾಗಿತ್ತು.

VISTARANEWS.COM


on

Nijjar Killing Case
Koo

ಒಟ್ಟಾವ: ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜಾರ್‌ (Nijjar Killing Case)ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕನೇ ಆರೋಪಿ, ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೆನಡಾದ ತನಿಖಾ ತಂಡ ತಿಳಿಸಿದೆ.

ಬಂಧಿತ ಆರೋಪಿಯನ್ನು 22 ವರ್ಷದ ಅಮನ್‌ದೀಪ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿ ನಡೆಸಿರುವ ಪ್ರಕರಣ ದಾಖಲಿಸಲಾಗಿದೆ. ಬ್ರಾಂಪ್ಟನ್, ಸರ್ರೆ ಮತ್ತು ಅಬಾಟ್ಸ್ಫೋರ್ಡ್‌ನಲ್ಲಿ ವಾಸಿಸುತ್ತಿದ್ದ ಅಮನ್‌ದೀಪ್‌ ಸಿಂಗ್‌ನನ್ನು ಈ ಮೊದಲೇ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ಒಂಟಾರಿಯೊದಲ್ಲಿ ವಶಕ್ಕೆ ಪಡೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಪರಾಧಿಗಳ ಪತ್ತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ ನಿಜ್ಜಾರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಕರನ್‌ ಬ್ರಾರ್‌ (22), ಕಮಲ್‌ಪ್ರೀತ್‌ ಸಿಂಗ್‌ (22) ಮತ್ತು ಕರಣ್‌ಪ್ರೀತ್‌ ಸಿಂಗ್‌ (28) ಎಂಬ ಮೂವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧವೂ ನಿಜ್ಜಾರ್‌ ಹತ್ಯೆಯ ಸಂಚು ನಡೆಸಿದ ಆರೋಪ ಕೇಳಿ ಬಂದಿದೆ.

ಪ್ರಕರಣದ ಹಿನ್ನೆಲೆ

ಕಳೆದ ವರ್ಷ ಜನವರಿಯಲ್ಲಿ ನಿಜ್ಜಾರ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು.

ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಅಲ್ಲದೆ ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಕೂಡ ಎನ್‌ಐಎ ಘೋಷಿಸಿತ್ತು.

ಇದನ್ನೂ ಓದಿ: Avtar Khanda Dies: ಬ್ರಿಟನ್‌ನಲ್ಲಿ ಭಾರತದ ತಿರಂಗಾ ಕೆಳಗಿಳಿಸಿದ್ದ ಖಲಿಸ್ತಾನ್ ಉಗ್ರ ಅವತಾರ್‌ ಖಂಡಾ ಸಾವು

ಖಲಿಸ್ತಾನ್‌ ಟೈಗರ್‌ ಫೋರ್ಸ್‌ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್‌ ಸಮುದಾಯದವರನ್ನು ಎತ್ತಿ ಕಟ್ಟುತ್ತಿದ್ದ. ಹಾಗಾಗಿ ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಿತ್ತು. ಇದಕ್ಕೂ ಮೊದಲು ಖಲಿಸ್ತಾನಿ ಉಗ್ರ, ಖಲಿಸ್ತಾನ್‌ ನಾಯಕ, ಬಂಧಿತ ಅಮೃತ್‌ಪಾಲ್‌ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್‌ ಸಿಂಗ್‌ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಅಮೃತ್‌ಪಾಲ್‌ ಸಿಂಗ್‌ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದರು.

Continue Reading
Advertisement
Mamitha Baiju
ಚಿನ್ನದ ದರ17 mins ago

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Pakistan Occupied Kashmir
ವಿದೇಶ18 mins ago

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

SSLC Student Death Exam fail
ಚಿತ್ರದುರ್ಗ19 mins ago

SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

Richa Chadha drank alcohol to perform Sanjay Leela Bhansali’s Heeramandi
ಸಿನಿಮಾ20 mins ago

Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

Elon Musk
ತಂತ್ರಜ್ಞಾನ28 mins ago

Elon Musk: ದೇಶದಲ್ಲಿ 1.8 ಲಕ್ಷ ಎಕ್ಸ್‌ ಖಾತೆಗಳು ಬಂದ್‌; ಕಾರಣವೇನು?

Tumkur Accident
ಕರ್ನಾಟಕ55 mins ago

Tumkur: ತುಮಕೂರಿನಲ್ಲಿ ಕಾರು ಪಲ್ಟಿ; ಮದುವೆಗೆ ಹೋಗಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

Engineering Student
ಬೆಂಗಳೂರು ಗ್ರಾಮಾಂತರ57 mins ago

Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Abdu Rozik Bigg Boss 16 gets engaged
ಸಿನಿಮಾ1 hour ago

Abdu Rozik: ಎಂಗೇಜ್‌ ಆದ ಬಿಗ್‌ ಬಾಸ್‌ ಖ್ಯಾತಿಯ ಅಬ್ದು ರೋಜಿಕ್!

Viral News
ವೈರಲ್ ನ್ಯೂಸ್2 hours ago

Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

Yogi Adityanath
ದೇಶ2 hours ago

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು20 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌