KSRTC Bus : ಚಾರ್ಮಾಡಿ ಘಾಟಿಯಲ್ಲಿ ಬ್ರೇಕ್‌ಫೇಲ್‌: ಮೋರಿಗೆ ಡಿಕ್ಕಿ ಹೊಡೆಸಿ ಪ್ರಯಾಣಿಕರ ಜೀವ ಉಳಿಸಿದ ‌ಚಾಲಕ - Vistara News

ಚಿಕ್ಕಮಗಳೂರು

KSRTC Bus : ಚಾರ್ಮಾಡಿ ಘಾಟಿಯಲ್ಲಿ ಬ್ರೇಕ್‌ಫೇಲ್‌: ಮೋರಿಗೆ ಡಿಕ್ಕಿ ಹೊಡೆಸಿ ಪ್ರಯಾಣಿಕರ ಜೀವ ಉಳಿಸಿದ ‌ಚಾಲಕ

KSRTC Bus : ಚಾರ್ಮಾಡಿ ಘಾಟಿಯಲ್ಲಿ ಇಳಿಯುತ್ತಿದ್ದ ಕೆಎಸ್‌ಆರ್ಟಿಸಿ ಬಸ್‌ ಒಮ್ಮಿಂದೊಮ್ಮೆಗೇ ಬ್ರೇಕ್‌ ಫೇಲ್‌ ಆಗಿದೆ. ಪ್ರಯಾಣಿಕರು ಭಯಭೀತರಾಗಿದ್ದಾರೆ. ಆಗ ಚಾಲಕ ಅವರಿಗೆ ಧೈರ್ಯ ತುಂಬಿ ಜೀವ ಉಳಿಸಿದರು. ಹೇಗೆ ಎಂಬ ವಿವರ ಇಲ್ಲಿದೆ.

VISTARANEWS.COM


on

KSRTC Bus Charmadi New
ಮೋರಿಗೆ ಡಿಕ್ಕಿ ಹೊಡೆದು ನಿಂತ ಬಸ್‌ ಮತ್ತು ಜೀವ ಉಳಿಸಿದ ಚಾಲಕ ಸಂತೋಷ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ (Charmadi Ghat) ಎಂದರೆ ಸುಮಾರು 11 ಭಯಾನಕ ತಿರುವುಗಳಿವೆ. ಹೇರ್‌ ಪಿನ್‌ನಂತೆ ಕಡಿದಾದ ತಿರುವಿನಲ್ಲಿ ಸಾಗಬೇಕು ಎಂದರೆ ವಾಹನಗಳು ಅಷ್ಟು ಸದೃಢವಾಗಿರಬೇಕು, ಚಾಲಕನಿಗೆ ಎಂಟೆದೆ ಬೇಕು. ಅದರಲ್ಲಿಯೂ ಚಿಕ್ಕಮಗಳೂರು ಕಡೆಯಿಂದ ಮಂಗಳೂರು (Chikkamagaluru to Mangalore) ಕಡೆಗೆ ಹೋಗುವಾಗ ಇಳಿಜಾರಿನಲ್ಲಿ ತುಂಬಾ ಎಚ್ಚರಿಕೆ ಬೇಕು. ಹೀಗೆ ಸಾಗುವಾಗ ಬ್ರೇಕ್‌ ತುಂಬಾ ಮುಖ್ಯ. ಬ್ರೇಕ್‌ ಒಂದು ಕ್ಷಣ ಕೈಕೊಟ್ಟಿತು ಎಂದರೆ ಪ್ರಪಾತಕ್ಕೆ ಬೀಳುವುದೇ ಎಂಬ ಪರಿಸ್ಥಿತಿ ಇರುತ್ತದೆ. ಇಂಥ ಅಪಾಯಕಾರಿ ದಾರಿಯಲ್ಲೇ ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಒಂದು ಬ್ರೇಕ್‌ ಫೇಲ್‌ (KSRTC Bus Brake fail) ಆಗಿದೆ. ಆದರೂ ಈ ಬಸ್ಸಿನ ಚಾಲಕ ಭಾರಿ ಸಮಯಪ್ರಜ್ಞೆ‌ (Drivers Time Sense), ತನ್ನ ನೈಪುಣ್ಯತೆಯನ್ನು ಮೆರೆದು ಪ್ರಯಾಣಿಕರ ಜೀವ (Driver Saves passengers life) ಉಳಿಸಿದ್ದಾನೆ.

ಇದು ಚಾರ್ಮಾಡಿ ಘಾಟಿಯ ಆರನೇ ತಿರುವಿನಲ್ಲಿ ನಡೆದ ಘಟನೆ. ಕೆಎಸ್ಆರ್‌ಟಿಸಿ ಬಸ್ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಅಂದರೆ ಇಳಿಜಾರು ಮಾರ್ಗದಲ್ಲಿ ಸಾಗುತ್ತಿತ್ತು. ಚಾಲಕ ಸಂತೋಷ್‌ ಅವರು ಬಸ್ಸನ್ನು ಓಡಿಸುತ್ತಿದ್ದರು. ಬಸ್ಸಿನಲ್ಲಿ ನಿರ್ವಾಹಕ ಮತ್ತು ಸುಮಾರು 30ರಷ್ಟು ಪ್ರಯಾಣಿಕರು ಇದ್ದರು.

KSRTC Bus Brake fail Charmadi

ಬಸ್ಸು ಇಳಿಜಾರಿನಲ್ಲಿ ಇಳಿದು ಅರ್ಧ ದಾರಿ ಕ್ರಮಿಸುತ್ತಿದ್ದಂತೆಯೇ ಒಮ್ಮಿಂದೊಮ್ಮೆಗೇ ಬ್ರೇಕ್‌ ಫೇಲ್‌ ಆಯಿತು. ಚಾಲಕ ಸಂತೋಷ್‌ ಒಂದು ಕ್ಷಣ ಅವಾಕ್ಕಾದರು. ಯಾಕೆಂದರೆ ಬಸ್ಸು ತಿರುವಿನಲ್ಲಿ ಸಾಗುತ್ತಿದೆ. ಎದುರಿನಿಂದ ವಾಹನಗಳು ಬರುತ್ತಿವೆ. ತಿರುವಿನಲ್ಲಿ ಸ್ಲೋ ಮಾಡಿಯೇ ತಿರುಗಿಸಬೇಕು. ಬ್ರೇಕ್‌ ಇಲ್ಲದಿದ್ದರೆ ಏನು ಮಾಡುವುದು ಎಂದು ದಿಗಿಲುಗೊಂಡರು. ಆದರೂ ಸಾವರಿಸಿಕೊಂಡು ಈ ಹೊತ್ತಿನಲ್ಲಿ ಏನು ಮಾಡಬಹುದು ಎಂದು ಯೋಚಿಸಿದರು.

ಬಸ್ಸು ಆಗ ಆರನೇ ತಿರುವಿಗೆ ಬಂದಿತ್ತು. ಬಸ್ಸಿನ ಒಳಗಿದ್ದ ಪ್ರಯಾಣಿಕರಿಗೂ ಬಸ್ಸಿಗೆ ಏನೋ ಸಮಸ್ಯೆ ಆಗಿದೆ ಎನ್ನುವುದು ಅರಿವಾಗಿತ್ತು. ಬಸ್ಸು ಓಲಾಡುತ್ತಿರುವುದನ್ನು ಕಂಡು ಭಯಗೊಂಡು ಬೊಬ್ಬೆ ಹೊಡೆಯಲು ಶುರು ಮಾಡಿದರು.

ಇದನ್ನೂ ಓದಿ : Road Accident : ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ; ಶಿಕ್ಷಕ ಸಾವು, ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು

ಆಗ ಚಾಲಕ ಸಂತೋಷ್‌ ಬಸ್‌ ಬ್ರೇಕ್‌ ಫೇಲ್‌ ಆಗಿದೆ ಎಂಬ ವಿಷಯವನ್ನು ತಿಳಿಸಿದರು. ಇದರಿಂದ ಪ್ರಯಾಣಿಕರಲ್ಲಿ ಭಯ ಇನ್ನಷ್ಟು ಹೆಚ್ಚಾಯಿತು. ಆಗ ಸಂತೋಷ್‌, ಯಾರು ಕೂಡಾ ಭಯಪಡಬೇಡಿ, ನಾನು ಹೇಗಾದರೂ ಮಾಡಿ ಎಲ್ಲಾದರೂ ಬಸ್ಸನ್ನು ನಿಲ್ಲಿಸುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ. ಧೈರ್ಯದಿಂದ ಇರಿ ಎಂದು ಸೂಚಿಸಿದರು.

ನಾನು ಬಸ್ಸನ್ನು ಎಲ್ಲಾದರೂ ರಸ್ತೆ ಪಕ್ಕದ ಧರೆ, ಕಾಲುವೆ ಇಲ್ಲವೇ ಕಿರುಸೇತುವೆಗೆ ಡಿಕ್ಕಿ ಹೊಡೆಸಿ ನಿಲ್ಲಿಸುತ್ತೇನೆ. ನೀವು ಎಲ್ಲರೂ ಗಟ್ಟಿಯಾಗಿ ಹಿಡಿದುಕೊಳ್ಳಿ. ಯಾರಿಗೂ ಏನೂ ಆಗುವುದಿಲ್ಲ ಎಂದು ಧೈರ್ಯ ಹೇಳಿದರು. ಪ್ರಯಾಣಿಕರು ಅಪಧೈರ್ಯದ ನಡುವೆಯೂ ಸಂತೋಷ್‌ ಅವರನ್ನು ನಂಬಿದರು.

KSRTC Bus Brake fail Charmadi

ಸಂತೋಷ್‌ ಅವರು ವೇಗವಾಗಿಯೇ ಇಳಿಯುತ್ತಿದ್ದ ಬಸ್ಸನ್ನು ತುಂಬ ಕಷ್ಟಪಟ್ಟು ನಿಯಂತ್ರಿಸಿಕೊಳ್ಳುತ್ತಾ ಸೇತುವೆಯಂದರ ಕಟ್ಟೆಗೆ ಡಿಕ್ಕಿ ಹೊಡೆಸಿ ನಿಲ್ಲಿಸಿದರು. ಬಸ್ಸು ದಢಾರನೆ ಡಿಕ್ಕಿ ಹೊಡೆದು ಎಲ್ಲರೂ ಒಮ್ಮೆಗೇ ಮುಗ್ಗರಿಸಿ ಬಿದ್ದಂತೆ ಆದರೂ ಅಲ್ಲಿಗೆ ನಿಂತುಬಿಟ್ಟಿತು.

ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದರು. ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರಿಂದ ಮೆಚ್ಚುಗೆ ಸೂಚಿಸಿದರಲ್ಲದೆ, ನಮ್ಮೆಲ್ಲರ ಜೀವವನ್ನು ಉಳಿಸಿದರು ಎಂದು ಆಶೀರ್ವಾದ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Rain News : ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮುಂದಿನ ಐದು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವೀಕೆಂಡ್‌ ಮೂಡ್‌ನಲ್ಲಿದ್ದ ಜನರಿಗೆ ಮಳೆರಾಯನ (Rain News) ಎಂಟ್ರಿ ಕೊಂಚ ಕಿರಿಕಿರಿಯನ್ನುಂಟು ಮಾಡಿದೆ. ಬೆಳಗ್ಗೆ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಮಧ್ಯಾಹ್ನ ಆಗುತ್ತಿದ್ದಂತೆ ಮೋಡ ಕವಿದ ವಾತಾವರಣ ಇತ್ತು. ನೋಡನೋಡುತ್ತಿದ್ದಂತೆ ಗುಡುಗು ಸಹಿತ ಧಾರಾಕಾರ ಮಳೆ (Karnataka Weather Forecast) ಸುರಿದಿತ್ತು. ರಾಜಧಾನಿ ಬೆಂಗಳೂರಲ್ಲಿ ಬಿಡುವು ನೀಡಿದ್ದ ವರುಣ ವಾರದ ನಂತರ ಅಬ್ಬರಿಸಿದ್ದ. ಜಸ್ಟ್‌ ಒಂದೂವರೆ ಗಂಟೆಯ ಮಳೆಗೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಬೇಕಾಯಿತು.

ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ ಸೇರಿದಂತೆ ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿನಗರ, ಕೋರಮಂಗಲ ಹಾಗೂ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿತ್ತು.

ಮುಳುಗಡೆಯಾದ ಸಹಕಾರ

ಮಹಾದೇವಪುರ ಸುತ್ತಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆ ಸುರಿದಿದೆ. ಮಳೆಗೆ ಸಹಕಾರ ನಗರದ ಜಿ ಬ್ಲಾಕ್‌ನ ರಸ್ತೆಗಳಲ್ಲಿ ನೀರು ತುಂಬಿ ಹರಿದಿತ್ತು. ಇದರಿಂದಾಗಿ ಅಂಗಡಿ ಮುಂಗಟ್ಟುಗಳಲ್ಲಿ ನೀರು ನಿಂತಿದ್ದರಿಂದ ಜನರು ಪರದಾಡಬೇಕಾಯಿತು. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಬೇಕಾಯಿತು. ಇನ್ನೂ ದಿಢೀರ್‌ ಮಳೆಗೆ ವಾಹನ ಸವಾರರು ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದರು.

Karnataka weather Forecast

ಆನೇಕಲ್‌ನಲ್ಲೂ ಮಳೆ ಅಬ್ಬರ

ಆನೇಕಲ್ ತಾಲೂಕಿನಾದ್ಯಂತ ಮಳೆಯು ಅಬ್ಬರಿಸಿತ್ತು. ಆನೇಕಲ್, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ, ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಳೆಯಾಗಿದೆ. ಚಂದಾಪುರದ ಬಳಿ ಸರ್ವೀಸ್ ರಸ್ತೆ ಜಲಾವೃತಗೊಂಡಿತ್ತು. ಇದರಿಂದಾಗಿ ಬೈಕ್ ಸವಾರರು, ಪಾದಚಾರಿಗಳು ಹಾಗೂ ವಾಹನ ಸವಾರ ಪರದಾಡಬೇಕಾಯಿತು. ಮಳೆ ನೀರು ಹೊರ ಹೋಗಲು ಜಾಗವಿಲ್ಲದೆ ರಸ್ತೆಯು ಕೆರೆಯಂತಾಗಿತ್ತು.

ಇದನ್ನೂ ಓದಿ: Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಚಿಕ್ಕಮಗಳೂರಿನಲ್ಲೂ ಮಳೆಯ ಸಿಂಚನ

ಶನಿವಾರದಂದು ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ನಗರ, ಬೆಳವಾಡಿ, ಕಳಸಾಪುರ, ಮಾಗಡಿ, ಅಂಬಳೆ, ತೇಗೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಡೂರು ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಭಾರಿ ಬಿರುಗಾಳಿ ಮಳೆಗೆ ಚಿಕ್ಕಮಗಳೂರು ಗ್ರಾಮಾಂತರ ತತ್ತರಿಸಿತ್ತು. ಮಳೆಯಿಂದಾಗಿ ಚಿಕ್ಕಮಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು. ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿದಿದೆ.

ಮೇಲ್ಮೈ ಸುಳಿಗಾಳಿ ಹಿನ್ನೆಲೆ ಇನ್ನೈದು ದಿನ ಭಾರಿ ಮಳೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ‌ ಮುಂದಿನ ಐದು ದಿನಗಳ‌ ಕಾಲ ಭಾರಿ‌ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಮುಂಗಾರು ಕೇರಳ ರಾಜ್ಯವನ್ನು ಪ್ರವೇಶಿಸಿದ್ದು, ನಂತರ ಕರ್ನಾಟಕವನ್ನು ಆವರಿಸಲಿದೆ.

ಈ ಭಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಕಳೆದ ವರ್ಷ ಕರ್ನಾಟಕದಲ್ಲಿ ಜೂನ್ 15ಕ್ಕೆ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಈ ಬಾರಿ ಉತ್ತಮ ಮಳೆಯಾಗುವ ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಮಗಳೂರು

Chikkamagaluru Tragedy : ಬಾಯ್ಲರ್‌ ಶಾಖಕ್ಕೆ ಸುಟ್ಟು ಕರಕಲಾದ ಯುವಕ; ಸಿಲ್ವರ್ ಮರವೇರಿದಾಗ ಕರೆಂಟ್‌ ಶಾಕ್‌ಗೆ ಕಾರ್ಮಿಕ ಸಾವು

Chikkamagaluru Tragedy : ಚಿಕ್ಕಮಗಳೂರಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ದುರಂತಕ್ಕೆ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ. ಬ್ಲಾಯರ್‌ ರಿಪೇರಿ ಮಾಡುವಾಗ ಶಾಖ ಹೊರ ಬಂದಿದ್ದು ಕಾರ್ಮಿಕ ಸುಟ್ಟು ಕರಕಲಾದರೆ, ಸಿಲ್ವರ್ ಮರಕ್ಕೆ ಮರಗಸಿ ಮಾಡುವಾಗ ಕರೆಂಟ್‌ ಶಾಕ್‌ನಿಂದ ಮತ್ತೊಬ್ಬ ಕಾರ್ಮಿಕ ಪ್ರಾಣಬಿಟ್ಟಿದ್ದಾನೆ.

VISTARANEWS.COM


on

By

Chikkamagaluru Tragedy
ಮೃತ ಉದಯ್‌ ಹಾಗೂ ಮರದಲ್ಲೇ ಹೆಣವಾದ ಚಂದ್ರಪ್ಪ
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ದುರಂತ ಸಂಭವಿಸಿದ್ದು ಕಾರ್ಮಿಕರಿಬ್ಬರು ದಾರುಣವಾಗಿ (Chikkamagaluru Tragedy) ಮೃತಪಟ್ಟಿದ್ದಾರೆ. ಕಾರ್ಮಿಕನೊಬ್ಬ ಬಾಯ್ಲರ್ ರಿಪೇರಿ ಮಾಡುವಾಗ ಏಕಾಏಕಿ ಶಾಖವು ಹೊರಹೊಮ್ಮಿದೆ. ಪರಿಣಾಮ ರಿಪೇರಿ ಮಾಡುತ್ತಿದ್ದ ಕಾರ್ಮಿಕನ ದೇಹ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ನಗರದ ಹೊರವಲಯದ ಕುರುಬರಹಳ್ಳಿ ಬಳಿ ಇರುವ ವಿದ್ಯಾ ಕಾಫಿ ಕ್ಯುರಿಂಗ್‌ನಲ್ಲಿ ಘಟನೆ ನಡೆದಿದೆ.

ಉದಯ್ (27) ಮೃತ ದುರ್ದೈವಿ. ಮಡಿಕೇರಿಯ ಕುಶಾಲನಗರ ಮೂಲದ ಉದಯ್ ಬಾಯ್ಲರ್ ಸರಿಪಡಿಸುವಾಗ ಏಕಾಏಕಿ 340 ಡಿ.ಸೆ ಶಾಖ ಹೊರ ಬಂದಿದೆ. ಶಾಖದ ತೀವ್ರತೆಗೆ ಉದಯ್‌ ದೇಹ ಸುಟ್ಟು ಕರಕಲಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸದ್ಯ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಲಾಗಿದೆ.

ಶವಗಾರದ ಬಳಿ ಮಗನನ್ನು ಕಳೆದುಕೊಂಡ ತಾಯಿಯ ಕಣ್ಣೀರು ಹಾಕುತ್ತಿದ್ದ ದೃಶ್ಯ ಕಂಡು ಬಂತು. ವಿಷಯ ತಿಳಿಯುತ್ತಿದ್ದಂತೆ ಶವಗಾರದ ಬಳಿ ಕಾಫಿ ಕ್ಯುರಿಂಗ್ ಕಾರ್ಮಿಕರು ಜಮಾಯಿಸಿದ್ದರು. ಸದ್ಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ವಿದ್ಯುತ್ ಶಾಕ್‌ನಿಂದ ಮರದಲ್ಲೇ ಕಾರ್ಮಿಕ ಸಾವು

ಸಿಲ್ವರ್ ಮರಕ್ಕೆ ಮರಗಸಿ ಮಾಡುವಾಗ ಕಾರ್ಮಿಕರೊಬ್ಬರು ವಿದ್ಯುತ್‌ ಶಾಕ್‌ನಿಂದ ಮೃತಪಟ್ಟಿದ್ದಾರೆ. ಚಂದ್ರಪ್ಪ (45) ಮೃತ ದುರ್ದೈವಿ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಿಲ್ವರ್ ಮರದ ಅಡ್ಡ ಕೊಂಬೆಗಳನ್ನು ಕಡಿಯುವಾಗ ಘಟನೆ ನಡೆದಿದೆ.

ಮರ ನೇರವಾಗಿ ಬೆಳೆಯಲೆಂದು ಸಿಲ್ವರ್ ಮರಕ್ಕೆ ಮರಗಸಿ ಮಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಚಂದ್ರಪ್ಪ ಮರವೇರಿ ಮರಗಸಿ ಮಾಡುತ್ತಿದ್ದರು. ಈ ವೇಳೆ ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಸ್ಪರ್ಶವಾಗಿದೆ. ಈ ವೇಳೆ ಮರದಲ್ಲೆ ವಿದ್ಯುತ್‌ ಪ್ರವಹಿಸಿ ಚಂದ್ರಪ್ಪ ಮೃತಪಟ್ಟಿದ್ದಾರೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Rain News : ವಾರಾಂತ್ಯದಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 1ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ‌ಂತೆ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಇನ್ನೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ಬೆಂಗಳೂರು ವ್ಯಾಪ್ತಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಯ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಹುದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಮಗಳೂರು

Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Prajwal Revanna Case: ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿ ಭವಾನಿ ರೇವಣ್ಣ ಅವರ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಭವಾನಿ ರೇವಣ್ಣ ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Prajwal revanna Case
Koo

ಚಿಕ್ಕಮಗಳೂರು: ಭವಾನಿ ರೇವಣ್ಣ ಅವರ ಕಾರು ಚಾಲಕನನ್ನು ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿ ವಶಕ್ಕೆ ಪಡೆದಿದ್ದು, ಆತನಿಂದ ಅಗತ್ಯ ಮಾಹಿತಿಯನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು 6 ದಿನಗಳ ಕಾಲ ಎಸ್‌ಐಡಿ ಕಸ್ಟಡಿಗೆ ನೀಡಿದ ಬೆನ್ನಲ್ಲೇ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಚಾಲಕನನ್ನು ವಶಕ್ಕೆ ಪಡೆದು ಭವಾನಿ ರೇವಣ್ಣ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಅಜಿತ್ ವಶಕ್ಕೆ ಪಡೆದಿರುವ ಚಾಲಕ. ನಾಲ್ಕೈದು ದಿನದ ಹಿಂದೆ ಅತ್ತೆ ಮನೆಗೆ ಬಂದಿದ್ದ ಅಜಿತ್‌ನನ್ನು ಇಲ್ಲಿನ ಕಲ್ಯಾಣ ನಗರದಲ್ಲಿ ವಶಕ್ಕೆ ಪಡೆಯಲಾಗಿದೆ. ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಅವರ ಬಂಧನಕ್ಕಾಗಿ ಎಸ್‌ಐಟಿ ಮುಂದಾಗಿದೆ. ಹೀಗಾಗಿ ಭವಾನಿ ರೇವಣ್ಣ ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಹೋದವರು ಇದುವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅಜ್ಞಾತದಲ್ಲಿರುವ ಅವರಿಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಯಾವುದೇ ಕ್ಷಣದಲ್ಲಿ ಬಂಧನ!

Bhavani Revanna

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ಆರು ದಿನ ಎಸ್​​ಐಟಿ ವಶಕ್ಕೆ ನೀಡಿದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ಭವಾನಿ ಅವರಿಗೆ ತನಿಖೆಗೆ ಹಾಜರಾಗುವಂತೆ 15 ದಿನಗಳ ಹಿಂದೆ ನೋಟಿಸ್​ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸದ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಏತನ್ಮಧ್ಯೆ ಶುಕ್ರವಾರ ಬೆಳಗ್ಗೆ ಎಸ್​ಐಟಿ ಅಧಿಕಾರಿಗಳೂ ಭವಾನಿ ಅವರಿಗೆ ಎರಡನೇ ನೋಟಿಸ್​ ನೀಡಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಕೋರ್ಟ್​​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಮೇ 29ರಂದು ಈ ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರವರೆಗೆ ತೀರ್ಪು ಕಾಯ್ದಿರಿಸಿತ್ತು. ಹಾಗಾಗಿ, ಮೇ 31 ತಾಯಿ-ಮಗನಿಗೆ ಪ್ರಮುಖ ದಿನವಾಗಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ. ಹಿಂದಿನ ವಿಚಾರಣೆ ವೇಳೆ ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಸಂದೇಶ ಚೌಟ, “ಎಫ್ಐಆರ್ ದಾಖಲಿಸಿ 27 ದಿನಗಳಾದರೂ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ನಂತರ ಬೆಟ್ಟದಷ್ಟು ದಾಖಲೆ ಇವೆ ಎನ್ನುತ್ತಿದ್ದಾರೆ. ಹಾಗಿದ್ದರೆ ಇದುವರೆಗೂ ಏಕೆ ವಿಚಾರಣೆಗೆ ಕರೆಯಲಿಲ್ಲ? ತನಿಖೆಗೆ ಸಹಕರಿಸುವುದಾಗಿ ಈ ಹಿಂದೆಯೇ ಎಸ್ಐಟಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಬೇಕು” ಎಂದರು.

ಎಸ್‌ಪಿಪಿ ವಾದವೇನಿತ್ತು?

ಮಗನ ರಕ್ಷಣೆಗಾಗಿ ಭವಾನಿ ರೇವಣ್ಣ ಒಳಸಂಚು ರೂಪಿಸಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣದ ಹಿಂದೆ ಇವರ ಕೈವಾಡವಿದೆ. ಸಂತ್ರಸ್ತ ಮಹಿಳೆಗೆ ಊಟ ನೀರು, ಸರಿಯಾಗಿ ಕೊಟ್ಟಿಲ್ಲ‌. ಆಕೆಗೆ ಬಟ್ಟೆ ಸೀರೆಯನ್ನು ಕೊಟ್ಟಿಲ್ಲ. ಆರೋಪಿ ಸತೀಶ್ ಬಾಬಣ್ಣ ಜತೆ ಭವಾನಿ ಮಾತನಾಡಿದ್ದಾರೆ. ಆರೋಪಿ ಸತೀಶ್ ಬಾಬಣ್ಣ ಕೇಳಿದಾಗ ಭವಾನಿಯವರು ಆಯ್ತು 150 ರೂಪಾಯಿ ಅಥವಾ 200 ರೂಪಾಯಿ ಸೀರೆ ಕೊಡ್ಸು ಎಂಬುದಾಗಿ ಸೂಚಿಸಿದ್ದಾರೆ” ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಕೊನೆಗೆ ನ್ಯಾಯಾಲಯವು ತೀರ್ಪನ್ನು ಮೇ 31ರವರೆಗೆ ಕಾಯ್ದಿರಿಸಿತ್ತು.

ಇದನ್ನೂ ಓದಿ: Prajwal Revanna : ನನ್ನ ತೇಜೋವಧೆಯಾಗಿದೆ; ಪ್ರತಿ ದೂರು ನೀಡಲು ಪ್ರಜ್ವಲ್ ರೇವಣ್ಣ ಸಿದ್ಧತೆ

ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್‌‘

ಪ್ರಜ್ವಲ್‌ ರೇವಣ್ಣ ಅವರು ಮೇ 31ರಂದು ಭಾರತಕ್ಕೆ ಆಗಮಿಸಲಿದ್ದು, ನಾಳೆ ಅಂದರೆ ಮೇ 30ರಂದೇ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕು ಎಂದು ವಕೀಲ ಅರುಣ್‌ ಮನವಿ ಮಾಡಿದ್ದರು. ಆದರೆ, 39ರಂದೇ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಎಸ್‌ಐಟಿಗೆ ನೋಟಿಸ್‌ ಜಾರಿಗೊಳಿಸಿದೆ. ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಮೂರೂ ಪ್ರಕರಣಗಳಲ್ಲಿ ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ಬೇಕು. ಹಾಗಾಗಿ, ಮೇ 31ರಂದು ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್‌ ತಿಳಿಸಿತು.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್‌ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್‌ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ಮುಂದೂಡಲಾಗಿದೆ.

Continue Reading
Advertisement
Stray dogs attack in Shira 4 children one woman injured
ಪ್ರಮುಖ ಸುದ್ದಿ4 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ5 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ5 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ5 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ6 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ7 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ7 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ7 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ7 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ8 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು12 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌