Site icon Vistara News

Self Harming : ಸೇನೆ ಸೇರಲಾಗದಿದ್ದ ಮೇಲೆ ಬದುಕಿ ಏನು ಪ್ರಯೋಜನ?; ಬೇಸರದಲ್ಲಿ ಯುವಕ ಆತ್ಮಹತ್ಯೆ

Self Harming Indian Army Exam

ಚಿಕ್ಕಮಗಳೂರು : ಭಾರತೀಯ ಸೇನೆ (Indian Army) ಸೇರುವ ಮಹತ್ವಾಕಾಂಕ್ಷೆ ಹೊತ್ತು ಪರೀಕ್ಷೆ ಎದುರಿಸಿದ್ದ ಯುವಕನೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ (Failed in Army Exam) ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ (Chikkamagaluru News) ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದ ಕಾರ್ತಿಕ್ (23) ಆತ್ಮಹತ್ಯೆ (Self Harming) ಮಾಡಿಕೊಂಡ ಯುವಕ.

ಕಾರ್ತಿಕ್‌ ಕಳೆದ ಎರಡು ವರ್ಷದಿಂದ ಸೇನಾ ಪರೀಕ್ಷೆಗೆ ಸಂಬಂಧಿಸಿ ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದ. ಬರೆಯುವ ಪರೀಕ್ಷೆ, ದೈಹಿಕ ಪರೀಕ್ಷೆ, ಕ್ರೀಡೆ ಮತ್ತು ಇತರ ಹಲವು ವಿಚಾರಗಳಲ್ಲಿ ತೊಡಗಿಸಿಕೊಂಡಿದ್ದ. ಇತ್ತೀಚೆಗೆ ಪರೀಕ್ಷೆಯೂ ನಡೆದಿತ್ತು. ಒಂದೆರಡು ದಿನದ ಹಿಂದೆ ಅದರ ಫಲಿತಾಂಶ ಬಂದಿತ್ತು. ಕಾರ್ತಿಕ್‌ ಸೇನೆಗೆ ಸೆಲೆಕ್ಟ್‌ ಆಗಿರಲಿಲ್ಲ. ಈ ಬಾರಿ ಸೆಲೆಕ್ಟ್‌ ಆಗಗಿದ್ದರೂ ಮುಂದೆ ಅವಕಾಶ ಸಿಗಬಹುದು ಎಂಬ ಆಲೋಚನೆಗೂ ಹೋಗದೆ, ಸೇನೆಗೆ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕಾಗಿಯೇ ಖಿನ್ನನಾದ.

Self Harming: ಡೆತ್‌ ನೋಟ್‌ನಲ್ಲಿ ಏನಿತ್ತು?

ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ʻʻಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ. ಹೀಗಾಗಿ ನಿರ್ಗಮಿಸುತ್ತಿದ್ದೇನೆʼʼ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೇನೆ ಸೇರುವ ಕನಸು ಹೊತ್ತು ಸಾಕಾರವಾಗದೆ ಪ್ರಾಣವನ್ನೇ ಕಳೆದುಕೊಂಡ ಯುವಕನ ಹೆತ್ತವರು ಈಗ ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ : ‌Self Harming : ಅಯ್ಯೋ ವಿಧಿಯೇ!; ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಂದು ತಾಯಿಯೂ ಆತ್ಮಹತ್ಯೆ

ವಿದ್ಯುತ್‌ ತಂತಿ ತಗುಲಿ ನಾಲ್ಕು ಎಮ್ಮೆ, ಒಂದು ಕೋಣ ಸಾವು

ವಿದ್ಯುತ್‌ ತಂತಿ ತಗುಲಿ ನಾಲ್ಕು ಎಲ್ಲೆ ಮತ್ತು ಒಂದು ಕೋಣ ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಘಟನೆ ನಡೆದಿದೆ.

ಸಾಬಣ್ಣ ಅವರಿಗೆ ಸೇರಿದ ಜಮೀನಿನಲ್ಲಿ ಎಮ್ಮೆಗಳ ಸಾವು ಸಾವನ್ನಪ್ಪಿವೆ. ಆಂಜನೇಯ, ಹಣಮಂತ, ಸಣ್ಣ ಭೀಮಪ್ಪ ಹಾಗೂ ದೊಡ್ಡಪ್ಪ ಅವರಿಗೆ ಸೇರಿರುವ ಎಮ್ಮೆಗಳು ಮೃತಪಟ್ಟಿವೆ. ಜಮೀನಿನಲ್ಲಿ ಅಪಾಯಕಾರಿ ವಿದ್ಯುತ್ ತಂತಿ ಜೋತು ಬಿದ್ದಿರುವ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ, ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದರು ಎಂದು ಆಪಾದಿಸಲಾಗಿದೆ.

ಮೃತಪಟ್ಟ ಪ್ರತಿಯೊಂದು ಎಮ್ಮೆಯೂ 2 ಲಕ್ಷ ರೂಪಾಯಿ ಬೆಲೆ ಬಾಳುತ್ತಿದೆ ಎಂದು ಹೇಳಲಾಗಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕು. ಸೂಕ್ತ ಪರಿಹಾರ ಕಲ್ಪಿಸಲು ಒತ್ತಾಯ ಮಾಡಲಾಗಿದೆ.

ಹೈನುಗಾರಿಕೆ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ರೈತ ಕುಟುಂಬ ಈಗ ಸಂಕಷ್ಟದಲ್ಲಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version