Site icon Vistara News

ಪಕ್ಕದ ಮನೆಗೆ ಮಲಗಲು ಬಂದವರು ಮರ ಬಿದ್ದು ಮೃತ

tree

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮುಂದುವರೆದ ವರುಣನ ಅಟ್ಟಹಾಸಕ್ಕೆ ಇನ್ನೂ ಇಬ್ಬರು ಬಲಿಯಾಗಿದ್ದಾರೆ. ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಬೃಹದಾಕಾರದ ಮರ ಬಿದ್ದು ಇಬ್ಬರು ಮಲಗಿದಲ್ಲೇ ಮೃತಪಟ್ಟಿದ್ದಾರೆ.

ಮರ ಬಿದ್ದು ಮನೆಯಲ್ಲಿದ್ದ ಚಂದ್ರಮ್ಮ ಹಾಗೂ ಸರಿತಾ ದುರಂತ ಸಾವು ಕಂಡಿದ್ದಾರೆ. ಮಕ್ಕಳಾದ ಸುನಿಲ್ ಹಾಗೂ ದೀಕ್ಷಿತ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಸರಿತಾ ಹಾಗೂ ಚಂದ್ರಮ್ಮ ತಮ್ಮ ಪಕ್ಕದ ಮನೆಯ ಸಂಬಂಧಿಕರ ಮನೆಗೆ ಮಲಗಲೆಂದು ಬಂದಿದ್ದರು. ತಡರಾತ್ರಿ ನಡೆದಿರುವ ಘಟನೆ ಮುಂಜಾನೆ ಬೆಳಕಿಗೆ ಬಂದಿದೆ. ಮಳೆಗೆ ಕಾಫಿನಾಡಲ್ಲಿ ಈವರೆಗೂ ಐದು ಮಂದಿ ಬಲಿಯಾದಂತಾಗಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version