JP Nadda : ಪಾಕ್‌ ಬೆಂಬಲಿಗರನ್ನು ಭಾರತ ಮಾತೆ ಕ್ಷಮಿಸಲ್ಲ; ಕಾಂಗ್ರೆಸ್‌ಗೆ ನಡ್ಡಾ ಎಚ್ಚರಿಕೆ - Vistara News

ಚಿಕ್ಕೋಡಿ

JP Nadda : ಪಾಕ್‌ ಬೆಂಬಲಿಗರನ್ನು ಭಾರತ ಮಾತೆ ಕ್ಷಮಿಸಲ್ಲ; ಕಾಂಗ್ರೆಸ್‌ಗೆ ನಡ್ಡಾ ಎಚ್ಚರಿಕೆ

JP Nadda : ಭಾರತವನ್ನು ಬಿಟ್ಟು ಪಾಕಿಸ್ತಾನವನ್ನು ಬೆಂಬಿಸುವವರನ್ನು ಭಾರತ ಮಾತೆ ಎಂದಿಗೂ ಕ್ಷಮಿಸಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ರಾಜ್ಯದ ಜನತೆ ಕೂಡಾ ಅವರನ್ನು ಬೆಂಬಲಿಸಲ್ಲ ಎಂದರು.

VISTARANEWS.COM


on

JP Nadda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ (Rama Mandir) ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರು ತಿಳಿಸಿದರು.

ಚಿಕ್ಕೋಡಿಯಲ್ಲಿ ಮಂಗಳವಾರ ಬಿಜೆಪಿ ಬೂತ್ ಸಮಾವೇಶದಲ್ಲಿ (BJP Booth Samavesha) ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ ಪರ ಇರುವವರನ್ನು ಭಾರತ ಮಾತೆ ಎಂದೂ ಕ್ಷಮಿಸುವುದಿಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ (Pakistan Zindabad) ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಅವರು ಗಮನ ಸೆಳೆದರು.

JP Nadda : ಮುಸ್ಲಿಂ ಮಹಿಳೆಯರಿಗೆ ಅನ್ಯಾಯ ಆಗಲು ಬಿಡಲ್ಲ

ಬಡವರು, ಮಹಿಳೆಯರು (ನಾರಿಶಕ್ತಿ), ರೈತರು, ಯುವಜನತೆಯ ಆಶಯಗಳನ್ನು ಈಡೇರಿಸಿದ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಬಿಜೆಪಿ ಸಿದ್ಧಾಂತ ಆಧರಿಸಿದ ಪಕ್ಷ. ಮುಸ್ಲಿಮ್ ಮಹಿಳೆಯರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ನಾವು ಹೇಳಿದ್ದೆವು. ತ್ರಿವಳಿ ತಲಾಖ್ ಪದ್ಧತಿಯನ್ನು ನಾವು ರದ್ದು ಮಾಡಿದ್ದೇವೆ. ಆದರೆ, ಕಾಂಗ್ರೆಸ್ ಪಕ್ಷ ತುಷ್ಟೀಕರಣದ ಕಾರಣಕ್ಕಾಗಿ ಈ ಕಡೆ ಗಮನ ಹರಿಸಿರಲಿಲ್ಲ ಎಂದು ವಿವರಿಸಿದರು.

ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷ ನಮ್ಮದು. ಅಣ್ಣಾಸಾಹೇಬ್ ಜೊಲ್ಲೆಯವರು ಸೇರಿ 303 ಸಂಸದರು ನಮ್ಮ ಪಕ್ಷದವರು ಲೋಕಸಭೆಯಲ್ಲಿದ್ದಾರೆ. ನಮ್ಮ ಯುವಜನರಿಗೆ ತರಬೇತಿ ನೀಡಿ ಪ್ರಧಾನಿ ಮೋದಿಯವರು ಆತ್ಮನಿರ್ಭರರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.

ವಿಕಸಿತ ಭಾರತ ಸಂಕಲ್ಪದಲ್ಲಿ ತಮ್ಮನ್ನು ತೊಡಗಿಕೊಳ್ಳುವಂತೆ ಮೋದಿಜೀ ಅವರು ಯುವಜನರಿಗೆ ಪ್ರೋತ್ಸಾಹ ಕೊಟ್ಟಿದ್ದಾರೆ ಎಂದ ಅವರು, ಕಾಂಗ್ರೆಸ್ ಭ್ರಷ್ಟಾಚಾರ, ಕಮಿಷನ್, ಕೌಟುಂಬಿಕವಾದದ ಪಕ್ಷ. 10 ವರ್ಷಗಳ ಹಿಂದೆ ಭಾರತವನ್ನು ಅಸಮರ್ಪಕ ನೀತಿಯುಳ್ಳ ದೇಶವಾಗಿ ನೋಡಲಾಗುತ್ತಿತ್ತು. ಸಮರ್ಥ ನಿರ್ಧಾರ ತೆಗೆದುಕೊಳ್ಳಲಾಗದ ದೇಶ ಎಂದೇ ಭಾರತವನ್ನು ಬಿಂಬಿಸುವ ಸ್ಥಿತಿ ಹಿಂದೆ ಇತ್ತು. 2014ರ ಬಳಿಕ ಮೋದಿಯವರ ನೇತೃತ್ವದಲ್ಲಿ ಭಾರತವು ಆತ್ಮವಿಶ್ವಾಸ ಹೊಂದಿದ ವಿಶ್ವಕ್ಕೇ ದೂರದೃಷ್ಟಿ ಕೊಡುವ ದೇಶವಾಗಿ ಬೆಳೆದುನಿಂತಿದೆ ಎಂದು ನುಡಿದರು.

ಸ್ವಾವಲಂಬಿ, ವಿಶ್ವಾಸಯುಕ್ತ ಜನರಿರುವ ದೇಶವನ್ನಾಗಿ ಭಾರತವನ್ನು ಮೋದಿಯವರು ಪರಿವರ್ತಿಸಿದ್ದಾರೆ. ಆತ್ಮನಿರ್ಭರ ದೇಶವಾಗಿ ಅದು ಬದಲಾಗುತ್ತಿದೆ. ಪ್ರಧಾನಿಯವರು ದೇಶವನ್ನು ಆತ್ಮವಿಶ್ವಾಸವುಳ್ಳ ರಾಷ್ಟ್ರವಾಗಿ ಪರಿವರ್ತಿಸಿದ್ದನ್ನು ನಾವು ಜನತೆಯ ಮುಂದಿಡಬೇಕು ಎಂದು ಮನವಿ ಮಾಡಿದರು.

ಎಲ್ಲ 28 ಕ್ಷೇತ್ರಗಳನ್ನು ಗೆಲ್ಲುವ ಶಪಥದೊಂದಿಗೆ ಹೊರಟಿದ್ದೇನೆ ಎಂದ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಲೋಕಸಭಾ ಚುನಾವಣೆಗೆ ಕೇವಲ 50-60 ದಿನಗಳು ಮಾತ್ರ ಬಾಕಿ ಇದೆ. ಬಿಜೆಪಿ- ಜೆಡಿಎಸ್ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲು ಶಪಥ ಮಾಡಿ ಹೊರಟಿದ್ದೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಿಸಲು ಮನವಿ ಮಾಡಿದರು. 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಭರವಸೆಯನ್ನು ನಡ್ಡಾಜೀ ಅವರಿಗೆ ನೀಡುವುದಾಗಿ ವಿಶ್ವಾಸದಿಂದ ನುಡಿದರು.

ರೈತರ ಸಂಕಷ್ಟಕ್ಕೆ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ. ಆದರೆ, ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿಗಳು 10 ಸಾವಿರ ಕೋಟಿ ಅನುದಾನವನ್ನು ಪ್ರಕಟಿಸಿದ್ದಾರೆ. ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರಕಾರದ ಬಳಿ ಹಣ ಇಲ್ಲ. ಆದರೆ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಅದು ಮುಂದಾಗಿದೆ ಎಂದು ಟೀಕಿಸಿದರು.

JP Nadda Vijayendra
ಚಿಕ್ಕೋಡಿಗೆ ಬಂದ ಜೆ.ಪಿ. ನಡ್ಡಾ ಅವರಿಗೆ ಬಿವೈ ವಿಜಯೇಂದ್ರ ಅವರಿಂದ ಸ್ವಾಗತ

ಹಿಂದೂಗಳ ದಾನದ ಜಾಗ ಮುಸ್ಲಿಮರಿಗೆ ದಾನ ನೀಡಿದ ಜಮೀರ್‌

ಹಿಂದೂಗಳು ದಾನವಾಗಿ ಕೊಟ್ಟ 2 ಎಕರೆ ಜಾಗದಲ್ಲಿ ಆರಂಭಿಸಿದ್ದ ಪಶು ಆಸ್ಪತ್ರೆಯನ್ನು ಜಮೀರ್ ಅಹ್ಮದ್ ಅವರು ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ಕೊಡುತ್ತಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ತಕ್ಕ ಉತ್ತರವನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಕೊಡಬೇಕಿದೆ ಎಂದು ಮನವಿ ವಿಜಯೇಂದ್ರ ಮಾಡಿದರು.

ರಾಜ್ಯಸಭಾ ಚುನಾವಣೆಯ ಬಳಿಕ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಬಿಜೆಪಿ ಹೋರಾಟದ ಬಳಿಕ ನಿನ್ನೆ ಮೂವರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಿಂಚಿತ್ತಾದರೂ ದೇಶಪ್ರೇಮ ಇದ್ದರೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಶಕ್ತಿ ನೀಡಿದ ರಾಜ್ಯಸಭಾ ಎಂ.ಪಿ. ನಾಸೀರ್ ಹುಸೇನ್ ವಿರುದ್ಧ ಕೂಡ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : BY Vijayendra :‌ ನಾಸಿರ್‌ ಹುಸೇನ್‌ ಕೂಡಾ ಅಪರಾಧಿ, FIRನಲ್ಲಿ ಸೇರಿಸಿ; ವಿಜಯೇಂದ್ರ ಆಗ್ರಹ

ಬೂತ್ ಸಮಾವೇಶದಲ್ಲಿ ನಾಯಕರ ದಂಡು

ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ, ಶಾಸಕ ರಮೇಶ್ ಕತ್ತಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ್ ಅಪ್ಪಾಜಿಗೋಲ್, ಲೋಕಸಭಾ ಚುನಾವಣೆ ರಾಜ್ಯ ಉಸ್ತುವಾರಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ. ರಾಜೀವ್, ಶಾಸಕ ಮಹೇಶ್ ಟೆಂಗಿನಕಾಯಿ, ಮಾಜಿ ಶಾಸಕ ಅನಿಲ್ ಬೆನಕೆ, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ, ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಂಚಿ, ಎಸ್‍ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ, ವಿಧಾನಪರಿಷತ್ ಮಾಜಿ ಸದಸ್ಯ ಮಹಂತೇಶ್ ಕವಟಗಿಮಠ, ಮಾಜಿ ಶಾಸಕ ಅಭಯ್ ಪಾಟೀಲ್, ಶಾಸಕರಾದ ದುರ್ಯೋಧನ ಐಹೊಳೆ, ನಿಖಿಲ್ ಕತ್ತಿ, ಮಾಜಿ ಶಾಸಕ ಶ್ರೀಮಂತ ಪಾಟೀಲ್, ಮಾಜಿ ಶಾಸಕ ಮಹೇಶ್ ಕುಮಟ್ಟಳ್ಳಿ , ವಿಭಾಗ ಪ್ರಭಾರಿ ಚಂದ್ರಶೇಖರ್ ಕವಟಗಿ, ಶಾಸಕ ಅಭಯ್ ಪಾಟೀಲ್, ಮಾಜಿ ಸಚಿವ ಮತ್ತು ರಾಜ್ಯ ಉಪಾಧ್ಯಕ್ಷ ಹನುಮಂತ ನಿರಾಣಿ ಮತ್ತಿತರ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

Karnataka Weather Forecast : ಮತ್ತೆ ವಿಪರೀತ ತಾಪಮಾನವು ಜನರ ತಲೆಕೆಡಿಸಿದೆ. ಕೆಲವಡೆ ಮಳೆಯು ಅಬ್ಬರಿಸಿದ್ದರೂ, ಅದರ ದುಪ್ಪಟ್ಟು ಎಂಬಂತೆ ಬಿಸಿಲ ಧಗೆಯು ಹೆಚ್ಚಾಗಿದೆ. ಕರ್ನಾಟಕದಲ್ಲಿ ಹೀಟ್‌ ವೇವ್‌ ಹೆಚ್ಚುತ್ತಿದ್ದು ಹವಾಮಾನ ತಜ್ಞರು ಯೆಲ್ಲೋ ಅಲರ್ಟ್‌ ಘೋಷಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರವು (rain News) ಕಡಿಮೆ ಆಗಿದ್ದು, ಶುಷ್ಕ ವಾತಾವರಣವು (Dry Weather) ಮುಂದುವರಿದಿದೆ. ಏ.26ರಂದು ಶುಕ್ರವಾರ ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಇರಲಿದೆ. ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲ ಧಗೆಯು ಹೆಚ್ಚಾಗಿ ಇರಲಿದೆ.

ತಾಪಮಾನ ಎಚ್ಚರಿಕೆ

ಕರ್ನಾಟಕದ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಿರಲಿದೆ. ಏ. 26 ರಂದು ಕರಾವಳಿ ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಹೀಟ್‌ ವೇವ್‌ ಇರಲಿದೆ. ಏ. 28 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

ಹೀಟ್‌ವೇವ್‌ ವಾರ್ನಿಂಗ್‌

ಹೀಟ್‌ ವೇವ್ಸ್‌ ಅಥವಾ ಶಾಖದ ಅಲೆಯ ಸಮಯದಲ್ಲಿ ಮಾಡಬೇಕಾದದ್ದು ಮತ್ತು ಮಾಡಬಾರದ ಕೆಲಸಗಳ ಕುರಿತು ಹವಾಮಾನ ತಜ್ಞರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಹೀಟ್‌ ವೇವ್ಸ್‌ನಿಂದಾಗಿ ಅತಿಯಾದ ಒತ್ತಡ ಉಂಟಾಗಿ ಇದು ಸಾವಿಗೆ ಕಾರಣವಾಗಬಹುದು.

1.ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

2.ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

3.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

4.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.

5.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

6.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗಿನ ಕೆಲಸ ಮಾಡುವುದನ್ನು ತಪ್ಪಿಸಿ.

7.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ.

8.ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.

9.ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

10.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ

11.ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

12.ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹವನ್ನು ತಂಪಾಗಿ ಇರಲು ಸಹಾಯ ಮಾಡುತ್ತದೆ.

13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.

ಸನ್‌ಸ್ಟ್ರೋಕ್‌ ಚಿಕಿತ್ಸೆಗಾಗಿ ಸಲಹೆಗಳು

-ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ.
-ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
-ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ರೈತರು/ಕೃಷಿ ಕಾರ್ಮಿಕರು

ಹೊಲದಲ್ಲಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿ ಬಳಸಿ. ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಇನ್ನೂ ಪ್ರಯಾಣಿಸುವಾಗ ನಿಮ್ಮೊಂದಿಗೆ ನೀರನ್ನು ಒಯ್ಯಿರಿ. ಕ್ರೀಡಾಪಟು ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Karnataka Weather Forecast : ಸುಳಿಗಾಳಿ ಪ್ರಭಾವದಿಂದಾಗಿ ಹಲವೆಡೆ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವೆಡೆ ರಭಸವಾಗಿ ಗಾಳಿ ಬೀಸಲಿದೆ. ಗುಡುಗು, ಮಿಂಚಿನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ (Rain News) ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಗುಡುಗುನೊಂದಿಗೆ ಮಳೆ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯ ಶುಷ್ಕ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

ಆರೆಂಜ್ ಮತ್ತು ಯೆಲ್ಲೋ ಅಲರ್ಟ್

ಕೆಲವೆಡೆ ಮಳೆ ನಡುವೆಯು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಬುಧವಾರ ಬೆಳಗ್ಗೆವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಲ್ಕು ದಿನಗಳಿಗೆ ಹೀಟ್‌ ವೇವ್‌ ಅಲರ್ಟ್‌

ಮೊದಲ ದಿನ 24ರಂದು ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

25ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

26ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

27ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಏಪ್ರಿಲ್ 24 ರಿಂದ 27 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Karnataka Weather Forecast : ಬಿರುಗಾಳಿ ಸಹಿತ ಸುರಿದ ಮಳೆಗೆ (Rain News) ಬೀದರ್‌, ವಿಜಯನಗರ, ದಾವಣಗೆರೆ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಸೋಲ ಮಾಡಿ ಖರೀದಿಸಿದ್ದ ಎತ್ತುಗಳು ಸಿಡಿಲಿಗೆ ಬಲಿಯಾದರೆ, ನೀರಿಲ್ಲದಿದ್ದರೂ ಟ್ಯಾಂಕರ್‌ ಮೂಲಕ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯು ನೆಲಕಚ್ಚಿದೆ. ಸದ್ಯ ಬುಧವಾರದಂದು ಎಲ್ಲೆಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರಕ್ಕೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಇನ್ನೂ 30-40 ಕಿಮೀ ವೇಗದಲ್ಲಿ ಬಿರುಸಿನ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಸಿಡಿಲಿಗೆ ಎತ್ತುಗಳು ಬಲಿ

ಬೀದರ್‌ನ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿಯಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ಸಾಗರ ಬಸವರಾಜ ಪಾಟೀಲ ಎಂಬುವವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ.

ವಿಜಯನಗರದಲ್ಲಿ ಗಾಳಿ-ಮಳೆಗೆ ಹಾರಿದ ಶಾಮಿಯಾನ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಗ್ರಾಮದ ಬಳಿಯ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿ ನಿಮಿತ್ತ ಶಾಮಿಯಾನ, ಲೈಟಿಂಗ್ ಹಾಕಲಾಗಿತ್ತು. ಆದರೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಶಾಮಿಯಾನ, ಲೈಟಿಂಗ್ಸ್‌ ಹಾರಿ ಹೋಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿತ್ತು.

ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕೆ ಉರುಳಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ 5 ಎಕರೆ ಪಪ್ಪಾಯಿ ಬೆಳೆ ಹಾಳಾಗಿದೆ. ಇದರಿಂದ ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಇದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಕುಸುಮ ಅವರ 4 ಎಕರೆ ಪಪ್ಪಾಯಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಬಾಳೆ ಬೆಳೆ ನಾಶ

ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿವೆ. ದಾವಣಗೆರೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ಜಮ್ಮಪುರ, ಹರಿಶಿನಗುಂಡಿ ಸೇರಿದಂತೆ ಹಲವು ಕಡೆ ಬೆಳೆ ನಾಶವಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ಸಿದ್ದಮ್ಮ, ಬಸವರಾಜಪ್ಪ ಎಂಬುವರಿಗೆ ಸೇರಿದ 20 ಎಕರೆ ಬಾಳೆ ತೋಟ ನೆಲಕಚ್ಚಿದೆ. ಬರಗಾಲದಲ್ಲಿ ಟ್ಯಾಂಕರ್ ನೀರು ಖರೀದಿ ಮಾಡಿ ಬಾಳೆ ಬೆಳೆಸಿದ್ದರು. ಆದರೆ ಗಾಳಿ ಮಳೆಗೆ ಬಾಳೆಯು ನೆಲಸಮವಾಗಿದೆ. ಕೂಡಲೇ ಹಾನಿಗೊಂಡ ಬೆಳೆಗೆ ಸರ್ಕಾರ ಪರಿಹಾರ ‌ನೀಡುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Beer Shortage
ಕರ್ನಾಟಕ3 mins ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್15 mins ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 202417 mins ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest20 mins ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ54 mins ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Kavitha Gowda chandan expected First Child
ಕಿರುತೆರೆ56 mins ago

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Met Gala 2024 Alia Bhatt attend
ಬಾಲಿವುಡ್58 mins ago

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

IPL2024
ಕ್ರೀಡೆ58 mins ago

IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

Job Alert
ಉದ್ಯೋಗ1 hour ago

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Ithichanda Ramesh Uthappaʼs Four books to be released in Mysore on May 9
ಮೈಸೂರು1 hour ago

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌