Karnataka Rajyotsava: ನಾಡದ್ರೋಹಿ ಎಂಇಎಸ್‌ನಿಂದ ಕರಾಳ ದಿನಾಚರಣೆಗೆ ಕರೆ, ಶಿವಸೇನೆ ಬೆಂಬಲ - Vistara News

ಚಿಕ್ಕೋಡಿ

Karnataka Rajyotsava: ನಾಡದ್ರೋಹಿ ಎಂಇಎಸ್‌ನಿಂದ ಕರಾಳ ದಿನಾಚರಣೆಗೆ ಕರೆ, ಶಿವಸೇನೆ ಬೆಂಬಲ

ಬೆಳಗಾವಿ ಜಿಲ್ಲಾಡಳಿತದ ನಿಷೇಧದ ಮಧ್ಯೆಯೂ ಕರಾಳ ದಿನಾಚರಣೆಗೆ ಎಂಇಎಸ್ ತಯಾರಿ ನಡೆಸಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದಿಂದ ಇಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದೆ.

VISTARANEWS.COM


on

black day by shiv sena
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಕನ್ನಡ ನಾಡು ಇಂದು ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಆಚರಿಸಿಕೊಳ್ಳುತ್ತಿದ್ದರೆ, ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್‌ ಹಾಗೂ ಶಿವಸೇನೆ ಕರಾಳ ದಿನ ಆಚರಣೆ ನಡೆಸಲು ಮುಂದಾಗಿವೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಡೆಸುತ್ತಿರುವ ಕರಾಳ ದಿನಾಚರಣೆಗೆ ಶಿವಸೇನೆ ಬೆಂಬಲ ನೀಡಿದೆ.

ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ್‌ನಿಂದ ಕರಾಳ ದಿನಾಚರಣೆ ಸಂಘಟಿಸಲಾಗಿದೆ. ಬೆಳಗಾವಿ ಜಿಲ್ಲಾಡಳಿತದ ನಿಷೇಧದ ಮಧ್ಯೆಯೂ ಕರಾಳ ದಿನಾಚರಣೆಗೆ ಎಂಇಎಸ್ ತಯಾರಿ ನಡೆಸಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದಿಂದ ಇಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದೆ.

ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಳಗಾವಿ ಚಲೋಗೆ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಕರೆ ನೀಡಿದ್ದಾನೆ. ಇಂದು ಬೆಳಗ್ಗೆ 8ಕ್ಕೆ ಕೊಲ್ಹಾಪುರ ಜಿಲ್ಲೆ ಕಾಗಲ್ ಬಳಿ ಜಮಾವಣೆಯಾಗಲು ಕರೆ ನೀಡಿದ್ದು, ಭಗವಾಧ್ವಜದೊಂದಿಗೆ ಕಾಗಲ್‌‌ನ ಲಕ್ಷ್ಮೀ ಟೇಕ್ ಬಳಿ ಆಗಮಿಸುವಂತೆ ಕರೆ ನೀಡಲಾಗಿದೆ. ಕಾಗಲ್‌ನಿಂದ ಕೊಗನೊಳ್ಳಿ ಟೋಲ್‌ಗೇಟ್ ಮಾರ್ಗವಾಗಿ ಬೆಳಗಾವಿಗೆ ಆಗಮಿಸಲು ನಿರ್ಧರಿಸಲಾಗಿದೆ.

ಶಿವಸೇನೆ ಕಾರ್ಯಕರ್ತರನ್ನು ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆ ನಿಪ್ಪಾಣಿ ಹೊರವಲಯದ ಕೊಗನೊಳ್ಳಿ ಟೋಲ್‌ಗೇಟ್ ಬಳಿಯೇ ತಡೆಯಲು ಪೊಲೀಸರು ನಿರ್ಧರಿಸಿದ್ದಾರೆ.

ಎಂಇಎಸ್‌ ಪ್ರತಿ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲೂ ಕರಾಳ ದಿನ ಆಚರಿಸುತ್ತದೆ. ಅಂದು ಕಪ್ಪು ಬಾವುಟ ಹಾರಿಸುವುದು ಎಂಇಎಸ್‌ಗೆ ರೂಢಿಯಾಗಿದ್ದು, ಈ ಬಾರಿ ಶಿವಸೇನೆ ಕೂಡ ಈ ದ್ರೋಹಿಗಳಿಗೆ ಬೆಂಬಲ ನೀಡಿದೆ.

ಇದನ್ನೂ ಓದಿ: Karnataka Rajyotsava: ಬ್ಯಾಂಕ್​ ಜನಾರ್ದನ್​, ಡಿಂಗ್ರಿ ನಾಗರಾಜ್​ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

Monsoon 2024: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯು ಅಬ್ಬರಿಸುತ್ತಿದ್ದು, ಮುಂಗಾರು ಮಳೆಯ ದರ್ಬಾರ್‌ಗೆ ದಿನಗಣನೆ‌ ಶುರುವಾಗಿದೆ. ಈ ಬಾರಿ ಮುಂಗಾರು ಮಳೆಯು ಉತ್ತಮವಾಗಿರಲಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ.

VISTARANEWS.COM


on

By

Monsoon 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್‌ ಘೋಷಣೆ

ಮೇ 26ರಂದು ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾವೇರಿ

Road Accident: ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

Road Accident: ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

VISTARANEWS.COM


on

ranebennuru road accident
Koo

ಹಾವೇರಿ: ಹಾವೇರಿ ಜಿಲ್ಲೆಯ (Haveri news) ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವೊಂದು (Road Accident) ಸಂಭವಿಸಿದ್ದು, ತಿರುಪತಿಗೆ (Tirupati) ಯಾತ್ರಾರ್ಥಿಗಳಾಗಿ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ (28) ಎಂದು ಗುರುತಿಸಲಾಗಿದೆ. ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರ ಬಲಿ, ಇಬ್ಬರು ಗಂಭೀರ

ಚಿಕ್ಕೋಡಿ: ಮುಂಗಾರು ಆಗಮನಕ್ಕೆ ಮುನ್ನವೇ ಸಿಡಿಲಿನ ಮೂಲಕ ಇಬ್ಬರ ಬಲಿ ಪಡೆದುಕೊಂಡಿದೆ. ಚಿಕ್ಕೋಡಿ ಗ್ರಾಮಾಂತರ ಭಾಗದಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ಹೊರವಲಯದಲ್ಲಿ ಘಟನೆ ಸಿಡಿಲು ಬಡಿದು ರೈತ ಮಹಿಳೆ ಸಾವಿಗೀಡಾಗಿದ್ದಾರೆ. ಶೋಭಾ ಕೃಷ್ಣ ಕುಲಗೋಡೆ (45) ಮೃತ ರೈತ ಮಹಿಳೆ. ಸಂಜೆ ಕೃಷಿ ಚಟುವಟಿಕೆ ಮಾಡುವ ಸಂದರ್ಭದಲ್ಲಿ ಸಿಡಿಲು ಹೊಡೆದು ಮೃತಪಟ್ಟಿದ್ದಾರೆ. ನಾಲ್ಕು ಜನರಿಗೆ ಗಾಯಗಳಾಗಿವೆ. ಮಲ್ಲಪ್ಪ ಶಂಕರ್ ಮೇತ್ರಿ, ಭಾರತಿ ಕೆಂಪಣ್ಣ ಕಮತೆ, ಬಾಬುರಾವ್ ಅಶೋಕ ಚೌವ್ಹಾಣ್, ಪ್ರವೀಣ್ ಕಲ್ಲಪ್ಪ ಧರ್ಮಟ್ಟಿ ಗಾಯಗೊಂಡವರು. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಗುರು ಪುಂಡಲಿಕ (35) ಎಂಬವರು ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮರದ ಕೆಳಗೆ ನಿಂತಾಗ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ಗುರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಇಬ್ಬರಿಗೆ ಸಂಕೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸಿಡಿಲು ಬಡಿದು 12 ಕುರಿಗಳು ಸಾವಿಗೀಡಾಗಿವೆ.

ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕನೊರ್ವ (Road Accident) ದಾರುಣವಾಗಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ಘಟನೆ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಸತೀಶ್ (28) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಣಕಲ್‌ನಿಂದ ಸಾರಗೋಡು ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ 50ಕ್ಕೂ ಹೆಚ್ಚು ಗೊಬ್ಬರದ ಚೀಲಗಳನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಇಳಿಜಾರಿನಲ್ಲಿ ಭಾರ ತಡೆಯಲು ಆಗದೆ ಟ್ರ್ಯಾಕ್ಟರ್‌ ಪಲ್ಟಿ ಹೊಡೆದಿದೆ. ಪಲ್ಟಿಯಾದ ರಭಸಕ್ಕೆ ಟ್ರ್ಯಾಕ್ಟರ್‌ ಸಂಪೂರ್ಣ ಉಲ್ಟಾ ಹೊಡೆದಿದೆ. ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸತೀಶ್‌ ಟ್ರ್ಯಾಕ್ಟರ್‌ನಡಿ ಸಿಲುಕಿ ಮೃತಪಟ್ಟಿದ್ದಾನೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

Continue Reading

ಚಿಕ್ಕೋಡಿ

Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ

Thunderbolt: ಬೆಳಗಾವಿ ಜಿಲ್ಲೆಯ (Belagavi news) ರಾಯಭಾಗ ಹೊರವಲಯದಲ್ಲಿ ಘಟನೆ ಸಿಡಿಲು ಬಡಿದು ರೈತ ಮಹಿಳೆ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಗುರು ಪುಂಡಲೀಕ (35) ಎಂಬವರು ಮೃತಪಟ್ಟಿದ್ದಾರೆ.

VISTARANEWS.COM


on

thunderbolt
Koo

ಚಿಕ್ಕೋಡಿ: ಮುಂಗಾರು (monsoon) ಆಗಮನಕ್ಕೆ ಮುನ್ನವೇ ಸಿಡಿಲಿನ (Thunderbolt) ಮೂಲಕ ಇಬ್ಬರ ಬಲಿ ಪಡೆದುಕೊಂಡಿದೆ. ಚಿಕ್ಕೋಡಿ (chikkodi news) ಗ್ರಾಮಾಂತರ ಭಾಗದಲ್ಲಿ ಸಿಡಿಲು ಹೊಡೆತಕ್ಕೆ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಜಿಲ್ಲೆಯ (Belagavi news) ರಾಯಭಾಗ ಹೊರವಲಯದಲ್ಲಿ ಘಟನೆ ಸಿಡಿಲು ಬಡಿದು ರೈತ ಮಹಿಳೆ ಸಾವಿಗೀಡಾಗಿದ್ದಾರೆ. ಶೋಭಾ ಕೃಷ್ಣ ಕುಲಗೋಡೆ (45) ಮೃತ ರೈತ ಮಹಿಳೆ. ಸಂಜೆ ಕೃಷಿ ಚಟುವಟಿಕೆ ಮಾಡುವ ಸಂದರ್ಭದಲ್ಲಿ ಸಿಡಿಲು ಹೊಡೆದು ಮೃತಪಟ್ಟಿದ್ದಾರೆ. ನಾಲ್ಕು ಜನರಿಗೆ ಗಾಯಗಳಾಗಿವೆ. ಮಲ್ಲಪ್ಪ ಶಂಕರ್ ಮೇತ್ರಿ, ಭಾರತಿ ಕೆಂಪಣ್ಣ ಕಮತೆ, ಬಾಬುರಾವ್ ಅಶೋಕ ಚೌವ್ಹಾಣ್, ಪ್ರವೀಣ್ ಕಲ್ಲಪ್ಪ ಧರ್ಮಟ್ಟಿ ಗಾಯಗೊಂಡವರು. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಗುರು ಪುಂಡಲಿಕ (35) ಎಂಬವರು ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮರದ ಕೆಳಗೆ ನಿಂತಾಗ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ಗುರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಇಬ್ಬರಿಗೆ ಸಂಕೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸಿಡಿಲು ಬಡಿದು 12 ಕುರಿಗಳು ಸಾವಿಗೀಡಾಗಿವೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

ಮಧ್ಯಪ್ರದೇಶ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಒಂದೆಡೆ ಒಲಿತನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಹಿಂದೆ ಸಿನಿಮಾಗಳನ್ನು ಮನೋರಂಜನೆಗಾಗಿ, ಸಾಮಾಜಿಕ ಮೌಲ್ಯಗಳ ಅರಿವಿಗಾಗಿ ನೋಡುತ್ತಿದ್ದ ಕಾಲಘಟ್ಟವೊಂದಿತ್ತು. ಆದರೆ ಈಗ ಅದೇ ಸಿನಿಮಾದಿಂದ ಪ್ರೇರಿತರಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಘಟನೆಗಳು ಆಗಾಗ ಕಣ್ಣೆದುರು ಬರುತ್ತಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು ಕೊಲೆಗೈದು(Physical Abuse & Murder) ಬಳಿಕ ದೃಶ್ಯಂ(Drishyam) ಸಿನಿಮಾ ಶೈಲಿನಲ್ಲಿ ಪೊಲೀಸರಿಂದ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ.

ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ದೃಶ್ಯಂ ಶೈಲಿಯಲ್ಲಿ ಎಸ್ಕೇಪ್‌ ಆಗಲು ಪ್ಲ್ಯಾನ್‌

ಬಾಲಕಿಯನ್ನು ಕೊಲೆ ಮಾಡಿದ ಬಳಿಕ ಗೌರವ್‌ ಬಾಲಿವುಡ್‌ ಖ್ಯಾತ ಸಿನಿಮಾ ದೃಶ್ಯಂ ಶೈಲಿಯಲ್ಲೇ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಕೃತ್ಯ ಎಸಗಿದ ನಂತರ ಆತ ನೇರವಾಗಿ ಜಿಮ್‌ಗೆ ಹೋಗಿದ್ದಾನೆ. ಅಲ್ಲಿಂದ ನೇರವಾಗಿ ಒಂದು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದಾನೆ. ಅಲ್ಲಿ ಸುಮಾರು ಹೊತ್ತು ಕಳೆದಿದ್ದಾನೆ. ಹೀಗೆ ಘಟನೆ ವೇಳೆ ತಾನು ಆ ಸ್ಥಳದಲ್ಲೇ ಇರಲಿಲ್ಲ ಎಂಬುದನ್ನು ಪೊಲೀಸರಿಗೆ ನಂಬಿಸುವ ಪ್ರಯತ್ನ ಮಾಡಿದ್ದ. ಮಗುವಿನ ಮೃತ ಸಿಗುತ್ತಿದ್ದಂತೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು ಎಂಬುದು ಸ್ಪಷ್ಟವಾಗಿತ್ತು. ಅನುಮಾನದ ಮೇರೆ ಯುವಕನನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಅದ್ಯ ಗೌರವ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕಾಯಿದೆಯಲ್ಲಿ ಕೇಸ್‌ ದಾಖಲಿಸಲಾಗಿದೆ.

ಮಹಾರಾಷ್ಟ್ರದಲ್ಲೂ ಎರಡು ದಿನಗಳ ಹಿಂದೆ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿದ್ದು, 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

Continue Reading

ಚಿಕ್ಕೋಡಿ

Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Self Harming : ಮದುವೆಗೆ ಹುಡುಗಿ ಸಿಗುತ್ತಿಲ್ಲ ಎಂದು ಮನನೊಂದ ಯುವಕನೊಬ್ಬ, ಇದೇ ಬೇಸರದಲ್ಲಿ ತನ್ನ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

By

Self Harming
Koo

ಚಿಕ್ಕೋಡಿ: ಮದುವೆಗೆ ವಿಳಂಬ ಆಗಿದ್ದ ಮನನೊಂದ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಘಟನೆ ನಡೆದಿದೆ. ಶಾಂತಿನಾಥ ಸುರೇಶ ಕೇಸ್ತಿ (27) ಆತ್ಮಹತ್ಯೆ ಮಾಡಿಕೊಂಡವನು.

ಹುಕ್ಕೇರಿ ಪಟ್ಟಣದಲ್ಲಿ ಸ್ವಂತ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಶಾಂತಿನಾಥ ಸುರೇಶ್‌ ಕೇಸ್ತಿ, ಸಾಲದ ಸುಳಿಗೆ ಸಿಲುಕಿದ್ದ. ಜತೆಗೆ ಮದುವೆಗೆ ಹೆಣ್ಣು ಸಿಗದ ಕಾರಣಕ್ಕೆ ಸುರೇಶ್‌ ಮನನೊಂದಿದ್ದ. ಇದೇ ಬೇಸರದಲ್ಲಿ ಗುರುವಾರ ಬೆಳಗ್ಗೆ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ಯಾರೇಜ್‌ ತೆರಯದೆ ಇದ್ದಾಗ ಅನುಮಾನಗೊಂಡು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

ಮಧ್ಯಪ್ರದೇಶ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಒಂದೆಡೆ ಒಲಿತನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಹಿಂದೆ ಸಿನಿಮಾಗಳನ್ನು ಮನೋರಂಜನೆಗಾಗಿ, ಸಾಮಾಜಿಕ ಮೌಲ್ಯಗಳ ಅರಿವಿಗಾಗಿ ನೋಡುತ್ತಿದ್ದ ಕಾಲಘಟ್ಟವೊಂದಿತ್ತು. ಆದರೆ ಈಗ ಅದೇ ಸಿನಿಮಾದಿಂದ ಪ್ರೇರಿತರಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಘಟನೆಗಳು ಆಗಾಗ ಕಣ್ಣೆದುರು ಬರುತ್ತಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು ಕೊಲೆಗೈದು(Physical Abuse & Murder) ಬಳಿಕ ದೃಶ್ಯಂ(Drishyam) ಸಿನಿಮಾ ಶೈಲಿನಲ್ಲಿ ಪೊಲೀಸರಿಂದ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ.

ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ದೃಶ್ಯಂ ಶೈಲಿಯಲ್ಲಿ ಎಸ್ಕೇಪ್‌ ಆಗಲು ಪ್ಲ್ಯಾನ್‌

ಬಾಲಕಿಯನ್ನು ಕೊಲೆ ಮಾಡಿದ ಬಳಿಕ ಗೌರವ್‌ ಬಾಲಿವುಡ್‌ ಖ್ಯಾತ ಸಿನಿಮಾ ದೃಶ್ಯಂ ಶೈಲಿಯಲ್ಲೇ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಕೃತ್ಯ ಎಸಗಿದ ನಂತರ ಆತ ನೇರವಾಗಿ ಜಿಮ್‌ಗೆ ಹೋಗಿದ್ದಾನೆ. ಅಲ್ಲಿಂದ ನೇರವಾಗಿ ಒಂದು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದಾನೆ. ಅಲ್ಲಿ ಸುಮಾರು ಹೊತ್ತು ಕಳೆದಿದ್ದಾನೆ. ಹೀಗೆ ಘಟನೆ ವೇಳೆ ತಾನು ಆ ಸ್ಥಳದಲ್ಲೇ ಇರಲಿಲ್ಲ ಎಂಬುದನ್ನು ಪೊಲೀಸರಿಗೆ ನಂಬಿಸುವ ಪ್ರಯತ್ನ ಮಾಡಿದ್ದ. ಮಗುವಿನ ಮೃತ ಸಿಗುತ್ತಿದ್ದಂತೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು ಎಂಬುದು ಸ್ಪಷ್ಟವಾಗಿತ್ತು. ಅನುಮಾನದ ಮೇರೆ ಯುವಕನನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಅದ್ಯ ಗೌರವ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕಾಯಿದೆಯಲ್ಲಿ ಕೇಸ್‌ ದಾಖಲಿಸಲಾಗಿದೆ.

ಮಹಾರಾಷ್ಟ್ರದಲ್ಲೂ ಎರಡು ದಿನಗಳ ಹಿಂದೆ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿದ್ದು, 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Teenage boy arrested
ಕ್ರೈಂ13 mins ago

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

Janhvi Kapoor on paparazzi culture
ಬಾಲಿವುಡ್20 mins ago

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Gold Rate Today
ಕರ್ನಾಟಕ25 mins ago

Gold Rate Today: ಇಂದೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Tiger attack
ಮೈಸೂರು45 mins ago

Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

IPL 2024 Final
ಕ್ರೀಡೆ49 mins ago

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

Cyclone Remal
ದೇಶ50 mins ago

Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

Dhruva Sarja KD Movie Release date announce
South Cinema1 hour ago

Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

Road Accident
ಉತ್ತರ ಕನ್ನಡ1 hour ago

Road Accident : ಬಸ್‌ಗೆ ಸ್ಕೂಟರ್‌ ಡಿಕ್ಕಿ; ಸವಾರನ ಪ್ರಾಣವನ್ನೇ ಕಸಿದ ಅತಿ ವೇಗ ಚಾಲನೆ

Monsoon 2024
ಮಳೆ2 hours ago

Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

Sambavami Yuge Yuge song release By sruthi hariharan
ಟಾಲಿವುಡ್2 hours ago

Kannada New Movie: ʻಸಂಭವಾಮಿ ಯುಗೇ ಯುಗೇʼ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ನಟಿ ಶ್ರುತಿ ಹರಿಹರನ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌