Site icon Vistara News

Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

Physical abuse attempted rape of school girl The public who beat up the man

ಚಿಕ್ಕೋಡಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಯಬಾಗ ಪಟ್ಟಣದ ಕೈರಕೋಡಿ ನಿವಾಸಿ ಸುನೀಲ್ ದೀಪಾಳೆ ಎಂಬಾತನಿಂದ ಕೃತ್ಯ ನಡೆದಿದೆ.

ಸುನೀಲ್ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಪಟ್ಟಣದ ಕಂಚರವಾಡಿ ರೋಡ್ ಕಡೆಯಿಂದ ತೆರಳುತ್ತಿದ್ದಳು. ಈ ವೇಳೆ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಮೇಲೆ ಕೂರಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶದ ಕಡೆಗೆ ಕರೆದ್ಯೊಯಲು ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕಿ ಗಾಡಿ ನಿಲ್ಲಿಸಲು ಹೇಳಿದ್ದಾಳೆ. ಆದರೆ ನಿಲ್ಲಸದೇ ಇದ್ದಾಗ ಬಾಲಕಿ ಕಿರುಚಾಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿದ್ದಾರೆ.

ಕೂಡಲೇ ಸುನೀಲ್‌ನನ್ನು ಹಿಡಿದುಕೊಂಡ ಸ್ಥಳೀಯರು ಅತ್ಯಾಚಾರಕ್ಕೆ ಯತ್ನಿಸಿದ್ದು ತಿಳಿಯುತ್ತಿದ್ದಂತೆ ಧರ್ಮದೇಟು ನೀಡಿ ರಾಯಬಾಗ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಆರೋಪಿಗೆ ರಾಯಬಾಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

ಹೊಸಕೋಟೆಯಲ್ಲಿ ಬಾಲ್ಯ ವಿವಾಹಕ್ಕೆ ಯತ್ನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕನಕ‌ ಭವನದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಪ್ಪಿಸಿದ್ದಾರೆ. 15 ವರ್ಷದ ಬಾಲಕಿಗೆ ಮದುವೆ ಮಾಡಲು ಪೋಷಕರು ಮುಂದಾಗಿದ್ದರು. ಆರತಕ್ಷತೆ ಮುಗಿಸಿ ಮದುವೆಗೆ ಅರಿಶಿನ ಶಾಸ್ತ್ರ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಮದುವೆ ನಿಲ್ಲಿಸಿದ್ದಾರೆ.

ಹೊಸಕೋಟೆ ನಗರದ ಕನಕ ಭವನದಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ್ದಾರೆ. ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ‌ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಮದುವೆ ನಿಲ್ಲಿಸಿ, ಬಾಲಕಿಯನ್ನು ವಶಕ್ಕೆ ಪಡೆದು ಮಹಿಳಾ ಕೇಂದ್ರಕ್ಕೆ ಕರೆತಂದಿದ್ದಾರೆ. ಪೋಷಕರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version