Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ - Vistara News

ಚಿಕ್ಕೋಡಿ

Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ

Thunderbolt: ಬೆಳಗಾವಿ ಜಿಲ್ಲೆಯ (Belagavi news) ರಾಯಭಾಗ ಹೊರವಲಯದಲ್ಲಿ ಘಟನೆ ಸಿಡಿಲು ಬಡಿದು ರೈತ ಮಹಿಳೆ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಗುರು ಪುಂಡಲೀಕ (35) ಎಂಬವರು ಮೃತಪಟ್ಟಿದ್ದಾರೆ.

VISTARANEWS.COM


on

thunderbolt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಮುಂಗಾರು (monsoon) ಆಗಮನಕ್ಕೆ ಮುನ್ನವೇ ಸಿಡಿಲಿನ (Thunderbolt) ಮೂಲಕ ಇಬ್ಬರ ಬಲಿ ಪಡೆದುಕೊಂಡಿದೆ. ಚಿಕ್ಕೋಡಿ (chikkodi news) ಗ್ರಾಮಾಂತರ ಭಾಗದಲ್ಲಿ ಸಿಡಿಲು ಹೊಡೆತಕ್ಕೆ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಜಿಲ್ಲೆಯ (Belagavi news) ರಾಯಭಾಗ ಹೊರವಲಯದಲ್ಲಿ ಘಟನೆ ಸಿಡಿಲು ಬಡಿದು ರೈತ ಮಹಿಳೆ ಸಾವಿಗೀಡಾಗಿದ್ದಾರೆ. ಶೋಭಾ ಕೃಷ್ಣ ಕುಲಗೋಡೆ (45) ಮೃತ ರೈತ ಮಹಿಳೆ. ಸಂಜೆ ಕೃಷಿ ಚಟುವಟಿಕೆ ಮಾಡುವ ಸಂದರ್ಭದಲ್ಲಿ ಸಿಡಿಲು ಹೊಡೆದು ಮೃತಪಟ್ಟಿದ್ದಾರೆ. ನಾಲ್ಕು ಜನರಿಗೆ ಗಾಯಗಳಾಗಿವೆ. ಮಲ್ಲಪ್ಪ ಶಂಕರ್ ಮೇತ್ರಿ, ಭಾರತಿ ಕೆಂಪಣ್ಣ ಕಮತೆ, ಬಾಬುರಾವ್ ಅಶೋಕ ಚೌವ್ಹಾಣ್, ಪ್ರವೀಣ್ ಕಲ್ಲಪ್ಪ ಧರ್ಮಟ್ಟಿ ಗಾಯಗೊಂಡವರು. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಗುರು ಪುಂಡಲಿಕ (35) ಎಂಬವರು ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮರದ ಕೆಳಗೆ ನಿಂತಾಗ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ಗುರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಇಬ್ಬರಿಗೆ ಸಂಕೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸಿಡಿಲು ಬಡಿದು 12 ಕುರಿಗಳು ಸಾವಿಗೀಡಾಗಿವೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

ಮಧ್ಯಪ್ರದೇಶ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಒಂದೆಡೆ ಒಲಿತನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಹಿಂದೆ ಸಿನಿಮಾಗಳನ್ನು ಮನೋರಂಜನೆಗಾಗಿ, ಸಾಮಾಜಿಕ ಮೌಲ್ಯಗಳ ಅರಿವಿಗಾಗಿ ನೋಡುತ್ತಿದ್ದ ಕಾಲಘಟ್ಟವೊಂದಿತ್ತು. ಆದರೆ ಈಗ ಅದೇ ಸಿನಿಮಾದಿಂದ ಪ್ರೇರಿತರಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಘಟನೆಗಳು ಆಗಾಗ ಕಣ್ಣೆದುರು ಬರುತ್ತಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು ಕೊಲೆಗೈದು(Physical Abuse & Murder) ಬಳಿಕ ದೃಶ್ಯಂ(Drishyam) ಸಿನಿಮಾ ಶೈಲಿನಲ್ಲಿ ಪೊಲೀಸರಿಂದ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ.

ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ದೃಶ್ಯಂ ಶೈಲಿಯಲ್ಲಿ ಎಸ್ಕೇಪ್‌ ಆಗಲು ಪ್ಲ್ಯಾನ್‌

ಬಾಲಕಿಯನ್ನು ಕೊಲೆ ಮಾಡಿದ ಬಳಿಕ ಗೌರವ್‌ ಬಾಲಿವುಡ್‌ ಖ್ಯಾತ ಸಿನಿಮಾ ದೃಶ್ಯಂ ಶೈಲಿಯಲ್ಲೇ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಕೃತ್ಯ ಎಸಗಿದ ನಂತರ ಆತ ನೇರವಾಗಿ ಜಿಮ್‌ಗೆ ಹೋಗಿದ್ದಾನೆ. ಅಲ್ಲಿಂದ ನೇರವಾಗಿ ಒಂದು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದಾನೆ. ಅಲ್ಲಿ ಸುಮಾರು ಹೊತ್ತು ಕಳೆದಿದ್ದಾನೆ. ಹೀಗೆ ಘಟನೆ ವೇಳೆ ತಾನು ಆ ಸ್ಥಳದಲ್ಲೇ ಇರಲಿಲ್ಲ ಎಂಬುದನ್ನು ಪೊಲೀಸರಿಗೆ ನಂಬಿಸುವ ಪ್ರಯತ್ನ ಮಾಡಿದ್ದ. ಮಗುವಿನ ಮೃತ ಸಿಗುತ್ತಿದ್ದಂತೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು ಎಂಬುದು ಸ್ಪಷ್ಟವಾಗಿತ್ತು. ಅನುಮಾನದ ಮೇರೆ ಯುವಕನನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಅದ್ಯ ಗೌರವ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕಾಯಿದೆಯಲ್ಲಿ ಕೇಸ್‌ ದಾಖಲಿಸಲಾಗಿದೆ.

ಮಹಾರಾಷ್ಟ್ರದಲ್ಲೂ ಎರಡು ದಿನಗಳ ಹಿಂದೆ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿದ್ದು, 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Rain News : ಭಾನುವಾರ ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಬೆಂಗಳೂರು: ಭಾನುವಾರ ರಾಯಚೂರು ನಗರದಾದ್ಯಂತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ (Rain News) ವಾತಾವರಣ ಕೂಲ್‌ (Karnataka weather Forecast) ಆಗಿತ್ತು. ದಿಢೀರ್‌ ಮಳೆಯಿಂದಾಗಿ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಕೊಂಚ ನಿರಾಸೆಯಾಗಿತ್ತು. ಕೆಲವಡೆ ಮಳೆಯಿಂದ ವಾಹನ ಸವಾರರು ಪರದಾಡಿದರು.

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಗೋಕರ್ಣದಲ್ಲಿ 2, ಶಿರಾಲಿ ಹಾಗೂ ಮಂಗಳೂರು ವಿಮಾನ ನಿಲ್ದಾಣದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ಮುಂದಿನ 24 ಗಂಟೆ ಮಳೆ ಸಾಧ್ಯತೆ

ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Rain news : ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆಗಿದೆ. ಆದರೆ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಜೂನ್‌ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ

karnataka weather Forecast Dam Level

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ವೀಕೆಂಡ್‌ಗೆ ಬ್ರೇಕ್‌ ಕೊಟ್ಟ ವರುಣ! ಈ 3 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

Rain News : ವಾರಾಂತ್ಯದಲ್ಲಿ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಕೊಂಚ ತಗ್ಗಿದ್ದರೆ, ಕರಾವಳಿ-ಮಲೆನಾಡು, ಉತ್ತರ ಒಳನಾಡಿನಲ್ಲಿ ಮಳೆಯು (Karnataka Weather Forecast) ಜೋರಾಗಿ ಇರಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ (Karnataka Weather Forecast) ಸಾಮಾನ್ಯವಾಗಿದೆ. ವಾರಾಂತ್ಯದಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿ ಬೀಸಲಿದೆ. ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರಲ್ಲಿ ಮೋಡ ಕವಿ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಸೂರ್ಯ ತನ್ನ ದರ್ಶನ ಕೊಡಲಿದ್ದಾನೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 40-50 ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Bus Accident : ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Karnataka Weather forecast : ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ಇನ್ನೊಂದು ವಾರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಕಾರವಾರ: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಶುಕ್ರವಾರ ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ ಮುಂದುವರಿದಿದೆ. ಕರಾವಳಿ ತಾಲೂಕುಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಭಾರೀ ಗಾಳಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಒಂದು ತಾಸಿಗೂ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವೆಡೆ ಮರಗಳು ನೆಲಕ್ಕುರುಳಿತ್ತು.

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಭಾರಿ ಮಳೆಗೆ ಕೆರೆಯಂತಾದ ಕಾಲಕಾಲೇಶ್ವರ ಗ್ರಾಮ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಸುತ್ತಮುತ್ತ ಭಾರಿ‌ ಮಳೆಯಾಗುತ್ತಿದ್ದು, ಕಾಲಕಾಲೇಶ್ವರ ಗ್ರಾಮದ ರಸ್ತೆಗಳು ಕೆರೆಯಂತಾಗಿದೆ. ರಸ್ತೆ ತುಂಬ ನೀರು ನಿಂತು ಜನರು ಓಡಾಡಲು ಪರದಾಡುವಂತಾಗಿತ್ತು. ಇತ್ತ ಕಾಲಕಾಲೇಶ್ವರ ಗುಡ್ಡದಲ್ಲಿ ಕಿರು ಜಲಪಾತ ಸೃಷ್ಟಿಯಾಗಿದ್ದು, ಜನರು ವೀಕ್ಷಣೆಗಾಗಿ ಬರುತ್ತಿದ್ದ ದೃಶ್ಯ ಕಂಡು ಬಂತು.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಕಲಬುರಗಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಲಬುರಗಿಯ ಶಹಾಬಾದ್, ಆಳಂದ, ಚಿಂಚೊಳ್ಳಿ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಚಿತ್ತಾಪೂರ ತಾಲೂಕಿನ ತರ್ಕಸ್ ಪೇಟೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ, ಶೇಖರಿಸಿಟ್ಟಿದ್ದ ದವಸ ಧಾನ್ಯಗಳು ನೀರುಪಾಲಾಗಿದ್ದವು. ಜತೆಗೆ ಚಂದಾಪುರ ಪಟೇಲ್ ಕಾಲೋನಿಯಲ್ಲಿ ಇಪ್ಪತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ‌ ಕಾರಣ‌ ಮಳೆ‌ ನೀರು ಮನೆಗೆ ನುಗ್ಗಿತ್ತು. ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕಿದರು.

ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಮರ ಬಿದ್ದ ಪರಿಣಾಮ ಕಿ.ಮೀ ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಅಡ್ಡಲಾಗಿ ಬಿದ್ದ ಮರದ ಕೆಳಗಡೆಯಿಂದ ಸವಾರರು ರಸ್ತೆ ದಾಟುತ್ತಿದ್ದರು. ಮರ ಬಿದ್ದು ಗಂಟೆಗಟ್ಟಲೆ ಸಮಯ ಕಳೆದರೂ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರಿಂದಲೇ ಮರ ತೆರವುಗೊಳಿಸಲಾಯಿತು.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 15ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿವೇಗವು ಒಂದು ಎರಡು ಕಡೆಗಳಲ್ಲಿ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30-21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Cholera outbreak
ಕರ್ನಾಟಕ2 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ2 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ2 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ3 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ3 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ3 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ4 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ4 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ4 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ4 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ4 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ11 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌