ಮಗು ಸತ್ತಿದೆ ಎಂದು ಸುಳ್ಳು ಹೇಳಿ ಮಾರಾಟ; ಕಟುಕರ ತಾಣವಾದ ಕೊಪ್ಪಳ ಜಿಲ್ಲಾಸ್ಪತ್ರೆ! - Vistara News

ಕರ್ನಾಟಕ

ಮಗು ಸತ್ತಿದೆ ಎಂದು ಸುಳ್ಳು ಹೇಳಿ ಮಾರಾಟ; ಕಟುಕರ ತಾಣವಾದ ಕೊಪ್ಪಳ ಜಿಲ್ಲಾಸ್ಪತ್ರೆ!

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಹುಟ್ಟಿದ ಮಗು ಸತ್ತಿದೆ ಎಂದು ಪೋಷಕರಿಗೆ ಸುಳ್ಳು ಹೇಳಿದ ನರ್ಸ್‌ಗಳು, ಆ ಮಗುವನ್ನು ಮಾರಾಟ ಮಾಡಿದ ಪ್ರಕರಣ ಸುದ್ದಿಯಾಗಿದೆ. ಇದರ ಕುರಿತು ತನಿಖೆಗೆ ಆದೇಶಿಸಲಾಗಿದೆ.

VISTARANEWS.COM


on

Koppal District Hospital
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಗ್ರಾಮೀಣ ಭಾಗದ ಜನರು, ಬಡವರಿಗೆ ಅನುಕೂಲವಾಗಲಿ ಎಂದು ಜಿಲ್ಲಾಸ್ಪತ್ರೆಗಳನ್ನು ನಿರ್ಮಿಸಲಾಗಿರುತ್ತದೆ. ಸಣ್ಣ-ಪುಟ್ಟ ಕಾಯಿಲೆಗಳಿಂದ ಹಿಡಿದು, ಗಂಭೀರ ಕಾಯಿಲೆ, ಹೆರಿಗೆ ಸೇರಿ ಹಲವು ಕಾರಣಗಳಿಗಾಗಿ ಬಡವರು ಜಿಲ್ಲಾಸ್ಪತ್ರೆಗಳನ್ನೇ (District Hospitals) ನೆಚ್ಚಿಕೊಂಡಿರುತ್ತಾರೆ. ಆದರೆ, ಬಡವರು, ಗ್ರಾಮೀಣ ಭಾಗದ ಜನರಿಗೆ ನೆರವಾಗಬೇಕಿದ್ದ ಕೊಪ್ಪಳ ಜಿಲ್ಲಾಸ್ಪತ್ರೆಯು (Koppal District Hospital) ಕಂಟಕವಾಗಿ ಪರಿಣಮಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯ ಬಳಿಕ ಮಗು ಸತ್ತಿದೆ ಎಂದು ಪೋಷಕರಿಗೆ ಸುಳ್ಳು ಹೇಳಿ, ಮಗುವಿನ ಮಾರಾಟ ಮಾಡುವ ಹೀನ ಕೃತ್ಯ ಬಯಲಾಗಿದೆ.

ಹೆರಿಗೆಗೆಂದು ಬರುವವರಿಗೆ ಹೆರಿಗೆ ಮಾಡಿಸುವ ನರ್ಸ್‌ಗಳು, ಬಳಿಕ ತಾಯಿಗೆ ನಿಮ್ಮ ಮಗು ತೀರಿಕೊಂಡಿದೆ ಎಂದು ಸುಳ್ಳು ಹೇಳಿ, ಆ ಮಗುವನ್ನು ಮಾರಾಟ ಮಾಡಿದ ಪ್ರಕರಣವೀಗ ಭಾರಿ ಸುದ್ದಿಯಾಗಿದೆ. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಇಂತಹ ಅಮಾನವೀಯ ಪ್ರಕರಣ ನಡೆದಿರುವ ಕುರಿತು ದೂರು ದಾಖಲಾದ ಹಿನ್ನೆಲೆಯಲ್ಲಿ ಕೊಪ್ಪಳ ವೈದ್ಯಕೀಯ ಬೋಧಕ ಆಸ್ಪತ್ರೆಯ ನಿರ್ದೇಶಕರು ತನಿಖೆಗೆ ಆದೇಶಿಸಿದ್ದಾರೆ. ತನಿಖೆಗಾಗಿ ವಿಶೇಷ ಸಮಿತಿಯೊಂದನ್ನೂ ರಚಿಸಿದ್ದಾರೆ.

ಕಳೆದ ವರ್ಷ ದಾಖಲಾಗಿದ್ದ ದೂರು.

ಏನಿದು ಪ್ರಕರಣ?

ಆರು ವರ್ಷಗಳ ಹಿಂದೆ ಮಹಿಳೆಯೊಬ್ಬರು ಜಿಲ್ಲಾಸ್ಪತ್ರೆಗೆ ಹೆರಿಗೆಗಾಗಿ ಬಂದಿದ್ದರು. ಆದರೆ, ನರ್ಸ್‌ ತೈರುನ್ನೀಸಾ ಸೈಯದ್‌ ಹಾಗೂ ಜಾವೀದ್‌ ಎಂಬುವರು ಹೆರಿಗೆ ಬಳಿಕ ಮಹಿಳೆಗೆ ನಿಮ್ಮ ಮಗು ತೀರಿಕೊಂಡಿದೆ ಎಂಬುದಾಗಿ ಸುಳ್ಳು ಹೇಳಿದ್ದಾರೆ. ಇದಾದ ಬಳಿಕ ಮಗುವನ್ನು ಐಸಿಯುನಲ್ಲಿರಿಸಿ, ಮಗುವನ್ನು ಮಾರಾಟ ಮಾಡಿದ್ದಾರೆ. ಮಗು ತೀರಿಕೊಂಡಿದೆ ಎಂಬುದಾಗಿ ನಕಲಿ ದಾಖಲೆಗಳನ್ನೂ ಇವರು ಸೃಷ್ಟಿಸಿದ್ದಾರೆ ಎಂದು ಕಳೆದ ವರ್ಷ ದೂರು ದಾಖಲಾಗಿತ್ತು. ಹಾಗಾಗಿ, ಆಸ್ಪತ್ರೆ ನಿರ್ದೇಶಕರು ತನಿಖೆಗೆ ಸಮಿತಿ ರಚಿಸಿದ್ದಾರೆ.

ಪ್ರಕರಣದ ಕುರಿತು ತನಿಖೆಗೆ ಆದೇಶ.

ಇದನ್ನೂ ಓದಿ: Child trade : IVFಗೆ ಗಾರ್ಮೆಂಟ್ಸ್‌ ಯುವತಿಯರ ಅಂಡಾಣು!; ಮಕ್ಕಳ ಮಾರಾಟ ಗ್ಯಾಂಗ್‌ ಕರಾಮತ್ತು

ರಾಜ್ಯ ಮಕ್ಕಳ ರಕ್ಷಣಾ ಘಟಕದಿಂದ ತನಿಖೆಗೆ ಆದೇಶಿಸಲಾಗಿದೆ. ಸೂಚನೆ ಮೇರೆಗೆ ಆಸ್ಪತ್ರೆ ನಿರ್ದೇಶಕರು ತನಿಖೆಗೆ ಆದೇಶಿಸಿದ್ದಾರೆ. ಹೆರಿಗೆಗೆ ಬಂದ ತಾಯಂದಿರ ಮನಸ್ಥಿತಿ ನೋಡಿಕೊಂಡು, ಅವರ ವಿದ್ಯಾಭ್ಯಾಸ, ಹಿನ್ನೆಲೆಯನ್ನು ತಿಳಿದುಕೊಂಡು, ಹೆರಿಗೆ ಬಳಿಕ ಅವರಿಗೆ ಮಗು ತೀರಿಕೊಂಡಿದೆ ಎಂಬುದಾಗಿ ಸುಳ್ಳು ಹೇಳುವುದು ಇವರ ಕುತಂತ್ರವಾಗಿದೆ ಎಂಬುದಾಗಿ ಕಳೆದ ವರ್ಷ ಪೋಷಕರಿಂದ ದೂರು ದಾಖಲಾಗಿತ್ತು. ಈಗ ತೈರುನ್ನೀಸಾ ಸೈಯದ್‌ ಹಾಗೂ ಜಾವಿದ್‌ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ. ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Prajwal Revanna Case What is diplomatic passport
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (Diplomatic Passport) ಅನ್ನು ರದ್ದು ಮಾಡಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಪಾಸ್‌ಪೋರ್ಟ್‌ ರದ್ದು ಮಾಡದೇ ಇದ್ದರೆ ಪ್ರಜ್ವಲ್‌ ಬಂಧನ ಅಸಾಧ್ಯವಾಗಿದ್ದು, ಅವರು ದೇಶದಿಂದ ದೇಶಕ್ಕೆ ಆರಾಮವಾಗಿ ಸಂಚಾರ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನ‌ು ಸಂಕಷ್ಟಕ್ಕೆ ದೂಡಲು ಸಿದ್ದರಾಮಯ್ಯ ಪ್ಲ್ಯಾನ್‌ ಮಾಡಿದ್ದು, ಚೆಂಡನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ಹಾಕಿದ್ದಾರೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದಾದರೆ ಕೂಡಲೇ ಬಂಧನ!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅಂತಾರಾಷ್ಟ್ರೀಯ ಕಾನೂನಿನ ಮಾನ್ಯತೆ ಇರುತ್ತದೆ. ಇದನ್ನು ಹೊಂದಿರುವವರು ಗಣ್ಯ ವ್ಯಕ್ತಿಗಳಾಗಿರುತ್ತಾರೆ. ಹೀಗಾಗಿ ಅವರು ಯಾವ ದೇಶದಲ್ಲಿದ್ದರೂ ಆತಿಥೇಯ ರಾಷ್ಟ್ರಗಳಲ್ಲಿ ಬಂಧನ ಮಾಡುವುದು, ವಶಕ್ಕೆ ತೆಗೆದುಕೊಳ್ಳುವಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಅಂತಹ ವ್ಯಕ್ತಿಯ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ, ಕ್ರಮಕ್ಕೆ ಆ ರಾಷ್ಟ್ರಗಳಿಗೆ ಮನವಿ ಮಾಡಿದಲ್ಲಿ ಬಂಧನ ಸಾಧ್ಯವಿದೆ. ಹೀಗಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಪ್ರಜ್ವಲ್‌ ಭವಿಷ್ಯ ನಿಂತಿದೆ.

Continue Reading

ಬೆಂಗಳೂರು

Blackmail Case: ಸಹಪಾಠಿಯಿಂದ 35 ಲಕ್ಷ ರೂ. ಚಿನ್ನಾಭರಣ ದೋಚಿದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರ ಬಂಧನ

Blackmail Case: ಬೆಂಗಳೂರಿನಲ್ಲಿ ಸಹಪಾಠಿಗೆ ಬ್ಲ್ಯಾಕ್ ಮೇಲ್ ಮಾಡಿ 35 ಲಕ್ಷ ರೂ.ಮೌಲ್ಯದ ಚಿನ್ನಾಭರಣ ದೋಚಿದ ಆರೋಪದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Blackmail Case
Koo

ಬೆಂಗಳೂರು: ಸಹಪಾಠಿಗೆ ಬ್ಲ್ಯಾಕ್ ಮೇಲ್ (Blackmail Case) ಮಾಡಿ 35 ಲಕ್ಷ ರೂ.ಮೌಲ್ಯದ 700 ಗ್ರಾಂ ಚಿನ್ನಾಭರಣ ದೋಚಿದ ಆರೋಪದಲ್ಲಿ ನಗರದ ಖಾಸಗಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸಿಬಿಎಸ್ ವೃತ್ತದ ನಿವಾಸಿ ಎಸ್.ಸುನಿಲ್ (30), ಆರ್.ಆರ್.ನಗರದ ವೇಮನ್ ಎನ್, ಕೆಂಗೇರಿ ಸ್ಯಾಟಲೈಟ್ ಟೌನ್ನ ಆರ್.ವಿವೇಕ್ (19) ಬಂಧಿತ ಆರೋಪಿಗಳು. ಇವರು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಾಲಾಪರಾಧಿಗಳ ಆರೈಕೆಯಲ್ಲಿ ಇರಿಸಲಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸಿವಿಲ್ ಗುತ್ತಿಗೆದಾರ ಮತ್ತು ಪಶ್ಚಿಮ ಬೆಂಗಳೂರಿನ ನಿವಾಸಿಯೊಬ್ಬರ ಮಗನನ್ನು ಆರು ತಿಂಗಳಿನಿಂದ ಸುಲಿಗೆ ಮಾಡುತ್ತಿದ್ದರು. ಬಂಧಿತರಿಂದ 400 ಗ್ರಾಂ ಚಿನ್ನಾಭರಣ ಹಾಗೂ 23 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಇನ್ನು ವಜ್ರದ ಹಾರವನ್ನು ವಶಪಡಿಸಿಕೊಳ್ಳಲಾಗಿಲ್ಲ ಎಂದು ಆರ್.ಆರ್.ನಗರ ಪೊಲೀಸರು ತಿಳಿಸಿದ್ದಾರೆ.

ಬಾಲಕನ ತಂದೆ 2 ವಾರಗಳ ಹಿಂದೆ ನೀಡಿದ ದೂರಿನಲ್ಲಿ, ತನ್ನ ಮಗ ಆನ್‌ಲೈನ್‌ ಗೇಮ್‌ಗಳಿಗೆ ವ್ಯಸನಿಯಾಗಿದ್ದಾನೆ. ಅದರ ಲಾಭವನ್ನು ಹುಡುಗನ ಸಹಪಾಠಿಗಳು ಪಡೆದುಕೊಂಡು, ಅವನನ್ನು ಬ್ಲ್ಯಾಕ್‌ ಮೇಲ್ ಮಾಡಿ, ಆನ್‌ಲೈನ್‌ ಗೇಮ್‌ ಬಗ್ಗೆ ಕುಟುಂಬಕ್ಕೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಮಗ ಹೆದರಿ, ಚಿನ್ನದ ಆಭರಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಸಹಪಾಟಿಗಳಿಗೆ ಹಸ್ತಾಂತರಿಸಿದ್ದಾನೆ.

ಇದನ್ನೂ ಓದಿ | Assault Case: ಶವದ ಮುಂದೆ ಎರಡು ಗುಂಪುಗಳ ಹೊಡಿಬಡಿ; 12 ಮಂದಿ ಅರೆಸ್ಟ್‌

ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಎರಡನೇ ಮಗಳು ಮತ್ತು ಆಕೆಯ ಪತಿಗೆ ಸೇರಿದ ವಸ್ತುಗಳು ಕಾಣೆಯಾದಾಗ ಕಳ್ಳತನ ಬೆಳಕಿಗೆ ಬಂದಿದ್ದರಿಂದ, ಬಾಲಕನ ತಂದೆ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಪೊಲೀಸರು ಬಂಧಿಸಿದ್ದಾರೆ.

ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌; ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

Ambedkar Statue in kalaburagi news

ಕಲಬುರಗಿ: ಕಳೆದ ಜನವರಿಯಲ್ಲಿ ಕಲಬುರಗಿ ನಗರದ (Kalaburagi News) ಕೊಟನೂರ (ಡಿ) ಬಡಾವಣೆಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಪ್ರತಿಮೆಗೆ (Ambedkar statue) ಅಪಮಾನ ಮಾಡಲಾಗಿತ್ತು. ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಸಂಗಮೇಶ್‌ ಎಂಬಾತನಿಗೆ ನಿನ್ನೆ ಮಂಗಳವಾರ ಕೋರ್ಟ್‌ನಿಂದ ಜಾಮೀನು ಮಂಜೂರು ಆಗಿತ್ತು. ಜಾಮೀನಿನ‌ ಮೇಲೆ ಹೊರ ಬಂದಿದ್ದ ಸಂಗಮೇಶ್‌ ಮನೆ ಮೇಲೆ ಮಂಗಳವಾರ ರಾತ್ರಿ 12 ಗಂಟೆಗೆ ಸುಮಾರು 50 ರಿಂದ 60 ಜನರ ತಂಡವೊಂದು ದಿಢೀರ್‌ ದಾಳಿ ಮಾಡಿದೆ.

ಆರೋಪಿ ಕುಟುಂಬಸ್ಥರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಬೈಕ್ ಜಖಂಗೊಳಿಸಿದ್ದಾರೆ. ಆರೋಪಿ ಸಂಗಮೇಶ್‌ ಮನೆಯಲ್ಲದೇ ಬಡಾವಣೆಯಲ್ಲಿರುವ ಇತರೆ ಮನೆಗಳ ಮೇಲೂ ದಾಳಿ ಮಾಡಿದ್ದಾರೆ. ಹಲವು ಬೈಕ್‌ಗಳ ಜಖಂಗೊಳಿಸಿ, ಕಾರುಗಳ ಗಾಜು ಪುಡಿ ಪುಡಿ ಮಾಡಿದ್ದಾರೆ.

ಇನ್ನೂ ಕಿಡಿಗೇಡಿಗಳ ದಾಳಿಗೆ ವೀರಶೈವ-ಲಿಂಗಾಯತ ಜನರು ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಕಲಬುರಗಿ ಬಂದ್‌ಗೆ ಕರೆ ಕೊಡಲಾಗುವುದು ಎಂದು ಎಚ್ಚರಿಸಿದ್ದಾರೆ. ಸದ್ಯ ಕಲಬುರಗಿ ವಿವಿ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ

ಕಿಡಿಗೇಡಿಗಳು ಮನೆ ಮೇಲೆ ‌ದಾಳಿ ಮಾಡಿದ್ದನ್ನು ಖಂಡಿಸಿ ವೀರಶೈವ ಲಿಂಗಾಯ ಸಮುದಾಯದಿಂದ ಕಲಬುರಗಿ ಬೆಂಗಳೂರು ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ‌ಹಚ್ಚಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದರು. ಇನ್ನೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮನವಿ ಮಾಡಿದರು.

ದಾಳಿ ಖಂಡಿಸಿ ಸಂಸದ ಡಾ.ಉಮೇಶ್ ಜಾಧವ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಜಿಲ್ಲಾಧಿಕಾರಿ ‌ಫೌಜಿಯಾ ತರನ್ನುಮ್ ಆಗಮಿಸುವಂತೆ ಪಟ್ಟು ಹಿಡಿದರು. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಆರ್. ಚೇತನ್ ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಶಾಸಕ ಅಲ್ಲಮಪ್ರಭು ಪಾಟೀಲ್ ಭೇಟಿ ನೀಡಿದ್ದು ಪ್ರತಿಭಟನಕಾರರ ಮನವೊಲಿಕೆ ಮಾಡಲು ಮುಂದಾದರು. ಆರೋಪಿ ಸಂಗಮೇಶ್ ಮನೆಗೆ ನುಗ್ಗಿ ದಾಂಧಲೆ‌ ಹಾಗೂ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಕಾನೂನು ಪ್ರಕಾರ ಆರೋಪಿಗೆ ಶಿಕ್ಷೆಯಾಗಿದೆ. ಮೂರು ತಿಂಗಳು ಸಜೆಯಾಗಿತ್ತು, ಜಾಮೀನು ಪಡೆದು ಹೊರ ಬಂದಿದ್ದಾನೆ. ಶಿಕ್ಷೆ ಅನುಭವಿಸಿ ಬಂದ ಮೇಲೆ ಹಲ್ಲೆ ಮಾಡಿದ್ದು ತಪ್ಪು, ಯಾರೆ ಆಗಿರಲಿ ಅವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕೆಲವರು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಇದನ್ನೂ ಓದಿ: Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

ಏನಿದು ಪ್ರಕರಣ

ಕಳೆದ ಜನವರಿ 22ರ ರಾತ್ರಿ ಕಲಬುರಗಿಯ ಕೋಟನೂರ ಬಡಾವಣೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ (Ambedkar Statue) ಯಾರೋ ದುಷ್ಕರ್ಮಿಗಳು ಅಪಮಾನ (Desecration of Ambedkar statue) ಮಾಡಿದ್ದರಿಂದ ಈ ಭಾಗದಲ್ಲಿ ಆಕ್ರೋಶ ಭುಗಿಲೆದಿತ್ತು. ಅಂಬೇಡ್ಕರ್‌ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದರಿಂದ ಆಕ್ರೋಶಗೊಂಡಿದ್ದ ದಲಿತ ಸಮುದಾಯದವರು ರಸ್ತೆ ತಡೆ (Road block in kalaburagi) ನಡೆಸಿ ಪ್ರತಿಭಟನೆ ನಡೆಸಿದ್ದರು. ಕಲಬುರಗಿಯ ಒಂದು ಪೆಟ್ರೋಲ್‌ ಪಂಪ್‌ಗೆ ಹಾನಿ ಮಾಡಲಾಗಿತ್ತು.

Ambedkar Statue
ಘಟನೆಯಿಂದ ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದ ದಲಿತ ಸಮುದಾಯ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕೋಟನೂರ ಬಡಾವಣೆಯಲ್ಲಿರುವ ಪ್ರತಿಮೆಗೆ ಚಪ್ಪಲಿ ಹಾರ ಹಾಕಿರುವುದು ಮರುದಿನ ಬೆಳಗ್ಗೆ ಗಮನಕ್ಕೆ ಬಂದಿತ್ತು. ಇದನ್ನು ನೋಡಿ ಆಕ್ರೋಶಿತರಾದ ಜನರು ಪ್ರತಿಭಟನೆಗೆ ಇಳಿದರು. ರಸ್ತೆ ತಡೆಯ ವಿಷಯ ತಿಳಿಯುತ್ತಲೇ ಪೊಲೀಸರು ಆಗಮಿಸಿದರು. ಸ್ಥಳಕ್ಕೆ ಆಗಮಿಸಿದ ಡಿಸಿಪಿ ಕನ್ನಿಕಾ ಸಿಕ್ರಿವಾಲ್‌ ಅವರು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಒಂದು ಹಂತಕ್ಕೆ ಸಫಲರಾದರೂ ಅದು ಬೇರೆ ಬೇರೆ ಭಾಗಗಳಿಗೆ ಹರಡಿತು.

Ambedkar statue in kalaburagi
ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ದಲಿತ ಸಮುದಾಯ
Continue Reading

ಬೆಂಗಳೂರು

Assault Case: ಶವದ ಮುಂದೆ ಎರಡು ಗುಂಪುಗಳ ಹೊಡಿಬಡಿ; 12 ಮಂದಿ ಅರೆಸ್ಟ್‌

Assault Case: ಸಣ್ಣ ವಿಷಯಕ್ಕೆ ಶುರುವಾದ ಗಲಾಟೆಗೆ ಎರಡು ಗುಂಪುಗಳು ನಡುರಸ್ತೆಯಲ್ಲಿ ಕಿತ್ತಾಡಿಕೊಂಡು, ಇದೀಗ ಠಾಣೆಗೆ ಅಲೆಯುವಂತಾಗಿದೆ. ಪ್ರಕರಣ ಸಂಬಂಧ ಎರಡು ಗುಂಪಿನ ತಲಾ ಆರು ಮಂದಿಯನ್ನು ಪೊಲೀಸರು ಬಂಧಿಸಿ, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Assault case In Bengaluru
Koo

ಬೆಂಗಳೂರು: ಒಂದು ಸಣ್ಣ ವಿಚಾರ ಹೇಗೆಲ್ಲ ಗಲಭೆಗಳಿಗೆ (Assault Case) ಸಾಕ್ಷಿ ಆಗುತ್ತೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಕಳೆದ ಏ. 28ರ ರಾತ್ರಿ ಎರಡು ಗುಂಪುಗಳ ನಡುವೆ ಹೊತ್ತಿಕೊಂಡ ಜಗಳ, ಪರಸ್ಪರ ಹಲ್ಲೆಯು ಠಾಣೆ ಮೆಟ್ಟಿಲೇರಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದ್ದು, ಎರಡು ಗುಂಪಿನ ತಲಾ ಆರರಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಸಿದ್ದಾಪುರ ಬಳಿ ಇರುವ ಗುಂಟೆಪಾಳ್ಯದಲ್ಲಿ ಎರಡು ಗುಂಪುಗಳು ನಡುರಸ್ತೆಯಲ್ಲೇ ಮಚ್ಚು, ದೊಣ್ಣೆಗಳನ್ನು ಹಿಡಿದು ಬಡಿದಾಡಿಕೊಂಡಿದ್ದರು. ಏಪ್ರಿಲ್‌ 28ರಂದು ಗುಂಟೆಪಾಳ್ಯದಲ್ಲಿ ವ್ಯಕ್ತಿಯೊಬ್ಬರು ಮರಣ ಹೊಂದಿದ್ದರು. ಈ ಕಾರಣದಿಂದ ಮೃತ ಕುಟುಂಬಸ್ಥರು ರಸ್ತೆಗೆ ಶಾಮೀಯಾನ ಹಾಕಿದ್ದರು. ಮನೆಯವರು ದುಖಃದಲ್ಲಿದ್ದರೆ ಅಲ್ಲಿಗೆ ಬಂದ ಮತ್ತೊಂದು ಕೋಮಿನ ಇಬ್ಬರು ಯುವಕರು, ಶವ ಇಟ್ಟಿರುವ ಜಾಗದ ಪಕ್ಕದಲ್ಲಿಯೆ ಸೈಲೆನ್ಸರ್ ಅಳವಡಿಸಿದ್ದ ಬೈಕ್‌ ಅನ್ನು ಅತಿ ವೇಗವಾಗಿ ಓಡಿಸುತ್ತಲೇ ಇದ್ದರು. ಇದೇ ರೀತಿ ಹಲವು ಬಾರಿ ಮಾಡಿದಾಗ ಮೊದಲೇ ದುಖಃದಲ್ಲಿದ್ದವರು ಇದನ್ನು ಪ್ರಶ್ನೆ ಮಾಡಿದ್ದಾರೆ.

ಅಷ್ಟೆ ಅಲ್ಲದೆ ಮೃತನ ಕುಟುಂಬಸ್ಥರು ಯುವಕನ ತಂದೆಗೆ ಈ ರೀತಿ ಮಾಡುತ್ತಿದ್ದಾರೆ ಎಂದು ದೂರಿದ್ದರು. ಈ ಹಿನ್ನೆಲೆಯಲ್ಲಿ ಆ ಯುವಕನ ತಂದೆ ಮಗನಿಗೆ ಬೈಕ್ ಕೊಟ್ಟಿರಲಿಲ್ಲ. ಹೀಗಾಗಿ ಇದರಿಂದ ಸಿಟ್ಟಾದ ಯುವಕ ತನ್ನ ಕೋಮಿನ ಇತರರಿಗೆ ಅದೇನು ಹೇಳಿ ಕರೆತಂದಿದ್ದ ತಿಳಿದಿಲ್ಲ. ಸುಮಾರು 70-80ಕ್ಕೂ ಹೆಚ್ಚು ಮಂದಿ ಆಗಮಿಸಿ ಕಿರಿಕ್ ಮಾಡಲು ಶುರು ಮಾಡಿದ್ದರು.

ಈ ವೇಳೆ ಎರಡೂ ಗುಂಪುಗಳು ಕ್ರಿಕೆಟ್ ಬ್ಯಾಟ್, ದೊಣ್ಣೆಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬೈಕ್ ವಿಚಾರಕ್ಕೆ ನಡೆದ ಕಿರಿಕ್‌ನಲ್ಲಿ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಣ ಸಣ್ಣದಾದರೂ ಅದು ಹೇಗೆಲ್ಲ ತಿರುವು ಪಡೆದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ ಎಂಬುದಕ್ಕೆ ಇದೆ ಸಾಕ್ಷಿಯಾಗಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

ನವದೆಹಲಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌(Salman Khan) ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿ(Police custody)ಯಲ್ಲೇ ಆತ್ಮಹತ್ಯೆ(Suicide)ಗೆ ಶರಣಾಗಿದ್ದಾನೆ. ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿರುವ ಅನೂಜ್‌ ತಾಪನ್‌ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ.

ಘಟನೆ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರನ್ನು ಸಿಐಡಿ ತನಿಖೆಗೆ ಹಾಜರು ಪಡಿಸಲಾಗಿದೆ. ಸಾಮಾನ್ಯವಾಗಿ ಲಾಕ್‌ ಅಪ್‌ನಲ್ಲಿ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ತೀವ್ರ ನಿಗಾವಹಿಸುತ್ತಾರೆ. ಹಾಗಿದ್ದರೂ ಕೆಲವು ಆರೋಪಿಗಳು ತಾವು ಧರಿಸಿರುವ ಪೈಜಾಮಾದಿಂದ ಗಂಟು ಹಾಕಿ ಅದರ ಸಹಾಯದಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳು ಈ ದಾಳಿ ನಡೆಸಿದ್ದರು. ಇವರನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಲಾಗಿದ್ದು,. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಪೊಲೀಸರು ಘೋಷಿಸಿದ್ದರು.

ಇದನ್ನೂ ಓದಿ:Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆ ಎಂದು ಹೇಳಿದ್ದ.

ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ ಎಂದು ಹೇಳಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Saree Fashion
ಫ್ಯಾಷನ್2 mins ago

Saree Fashion: ಸೀರೆಯ ಹೊಸ ಟ್ರೆಂಡ್‌ ಬಗ್ಗೆ ರ‍್ಯಾಪರ್‌ ಇಶಾನಿಯ ವ್ಯಾಖ್ಯಾನ ಇದು!

karnataka weather Forecast
ಮಳೆ10 mins ago

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Lottery
ವೈರಲ್ ನ್ಯೂಸ್10 mins ago

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Prajwal Revanna Case What is diplomatic passport
ಹಾಸನ25 mins ago

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Money Guide
ಮನಿ-ಗೈಡ್35 mins ago

Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

T20 World Cup 2024
ಕ್ರೀಡೆ45 mins ago

T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

Blackmail Case
ಬೆಂಗಳೂರು46 mins ago

Blackmail Case: ಸಹಪಾಠಿಯಿಂದ 35 ಲಕ್ಷ ರೂ. ಚಿನ್ನಾಭರಣ ದೋಚಿದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರ ಬಂಧನ

Wedding Eye Makeup Tips
ಫ್ಯಾಷನ್1 hour ago

Wedding Eye Makeup Tips: ಮದುವೆಯಲ್ಲಿ ಮದುಮಗಳ ಐ ಮೇಕಪ್‌ಗೆ 5 ಸಿಂಪಲ್‌ ಸೂತ್ರ

Assault case In Bengaluru
ಬೆಂಗಳೂರು1 hour ago

Assault Case: ಶವದ ಮುಂದೆ ಎರಡು ಗುಂಪುಗಳ ಹೊಡಿಬಡಿ; 12 ಮಂದಿ ಅರೆಸ್ಟ್‌

Hassan Pen Drive Case Prajwal seeks 7 days time to appear for questioning
ಕ್ರೈಂ1 hour ago

Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌