Site icon Vistara News

ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಅನುಮಾನಾಸ್ಪದ ಸಾವು

ಕಟ್ಟೆ ಭೋಜಣ್ಣ ಸೂಸೈಡ್

ಕುಂದಾಪುರ : ಹಿರಿಯ ಉದ್ಯಮಿ, ಪ್ರಸಿದ್ಧ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ (80) ಬುಧವಾರ ಬೆಳಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್‌ನಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಹೆಚ್ಚಿನ ತನಿಖೆ ಕೈಗೊಳ್ಳುತ್ತಿದ್ದಾರೆ.

ಇದನ್ನೂ ಓದಿ | ಬಿಜೆಪಿ ಮುಖಂಡ ಅನಂತರಾಜು ಸೂಸೈಡ್ ಕೇಸ್ ಗೆ ಮೇಜರ್ ಟ್ವಿಸ್ಟ್!

ಕುಂದಾಪುರದ ಚಿನ್ಮಯಿ ಆಸ್ಪತ್ರೆಯಲ್ಲದೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಇವರು ಭೂಮಿ ಹಾಗೂ ಹಣಕಾಸಿನ ವ್ಯವಹಾರದ ವ್ಯತ್ಯಾಸಗಳಿಂದಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಕಟ್ಟೆ ಭೋಜಣ್ಣ ಅವರು ಬೆಂಗಳೂರಿನಲ್ಲಿ ಹಲವಾರು ಹೊಟೇಲ್‌, ಬಟ್ಟೆ ಅಂಗಡಿಗಳನ್ನು ನಡೆಸುತ್ತಿದ್ದರು. ಇವರು ಪತ್ನಿ ಭಾಗೀರಥಿ, ಸುದಿ, ಗುಂಡ ಎನ್ನುವ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ  ನೀಡಿ ಮಹಜರು ನಡೆಸಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ | ಜಾರ್ಜ್‌ ಆಪ್ತ, ಕುಂದಾಪುರದ ಅನಿಲ್‌ ಹೆಗ್ಡೆಗೆ ರಾಜ್ಯಸಭೆ ಟಿಕೆಟ್‌ ನೀಡಿದ ಜೆಡಿಯು

Exit mobile version