Site icon Vistara News

Chitradurga News : ಅಜ್ಜ ಮೊಬೈಲ್‌ ಕೊಡಿಸದಿದ್ದಕ್ಕೆ ವಿಷ ಸೇವಿಸಿ ಪ್ರಾಣ ಬಿಟ್ಟ ಮೊಮ್ಮಗ!

Occasional Picture

ಚಿತ್ರದುರ್ಗ: ಮೊಬೈಲ್‌ ಗೀಳು ಯುವಕನ ಪ್ರಾಣವನ್ನೇ ಕಸಿದುಕೊಂಡಿದೆ. ಅಜ್ಜ ಮೊಬೈಲ್ ಕೊಡಿಸದ ಕಾರಣಕ್ಕೆ ಮೊಮ್ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ರದುರ್ಗ ಜಿಲ್ಲೆ (Chitradurga News) ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದ ನಿವಾಸಿ ಯಶವಂತ್ (20) ಮೃತನು.

ಯಶವಂತ್‌ ಅಕ್ಟೋಬರ್ 8ರಂದು ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ತನ್ನ ಬಳಿಯಿದ್ದ ಮೊಬೈಲ್‌ ಅನ್ನು ಕಳೆದುಕೊಂಡಿದ್ದ. ಹೀಗಾಗಿ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಅಜ್ಜ,, ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ: Viral News: ಗೇಟ್‌ಗೆ ತೂಗು ಹಾಕಿ ನಾಯಿಯನ್ನು ಕೊಂದ ಕಟುಕರು; ಸಿಸಿ ಟಿವಿ ಕ್ಯಾಮೆರಾದಲ್ಲಿ ನೀಚ ಕೃತ್ಯ ಸೆರೆ

ಆದರೆ ಮೊಬೈಲ್‌ ಗೀಳು ಹೆಚ್ಚಾಗಿದ್ದರಿಂದ ತಾಳ್ಮೆ ಕಳೆದುಕೊಂಡ ಯಶವಂತ್‌ ಮನನೊಂದು ಅಕ್ಟೋಬರ್ 18ರಂದು ಮನೆಯಲ್ಲಿದ್ದ ರಾಸಾಯನಿಕವನ್ನು ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ. ರಾಸಾಯನಿಕ ಕುಡಿದು ಅಸ್ವಸ್ಥಗೊಂಡಿದ್ದ ಯಶವಂತ್‌ನನ್ನು ಕೂಡಲೇ ಕುಟುಂಬಸ್ಥರು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದ್ದರು.

ಗುರುವಾರ ತಡರಾತ್ರಿ ಚಿಕಿತ್ಸೆಗೆಂದು ದಾವಣಗೆರೆಗೆ ಸಾಗಿಸುವ ಮಾರ್ಗ ಮಧ್ಯೆ ಯಶವಂತ್‌ ಮೃತಪಟ್ಟಿದ್ದಾನೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version