Site icon Vistara News

Accident News: ಕಾರು ಡಿಕ್ಕಿ, ಬೈಕ್ ಸವಾರ ಸಾವು

accident

ಚಿತ್ರದುರ್ಗ: ಕಾರು ಹಾಗೂ ಬೈಕ್ ನಡುವೆ ಭಾರಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ದುರ್ಘಟನೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗೇಟ್ ಸಮೀಪ ನಡೆದಿದೆ.

ಶಿವಗಂಗಾ ಗ್ರಾಮದ 23 ವರ್ಷದ ಆಕಾಶ್ ಮೃತ ದುರ್ದೈವಿ. ಹೊಳಲ್ಕೆರೆ ಧರ್ಮಸ್ಥಳ ಸಂಘದಲ್ಲಿ ಕೆಲಸ ಮಾಡುತ್ತಿದ್ದ ಆಕಾಶ್ ತಡರಾತ್ರಿ 12 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಟಿ.ನುಲೇನೂರು ಗೇಟ್ ಸಮೀಪ ಇರುವ ಢಾಬಾಗೆ ಊಟಕ್ಕೆ ತೆರಳಿದ್ದ ಆಕಾಶ್ ಚಿತ್ರಹಳ್ಳಿ ಗೇಟ್ ದಾಟುವ ವೇಳೆ ಚಿತ್ರದುರ್ಗದ ಕಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಹಾಗೂ ಬೈಕ್ ಸಂಪೂರ್ಣ ಜಖಂ ಆಗಿವೆ. ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: Road accident : ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Exit mobile version