Chitraduraga News : ಜೋಳದ ಹೊಲದಲ್ಲಿ ಮಹಿಳೆ ಶವ ಪತ್ತೆ! - Vistara News

ಕ್ರೈಂ

Chitraduraga News : ಜೋಳದ ಹೊಲದಲ್ಲಿ ಮಹಿಳೆ ಶವ ಪತ್ತೆ!

Chitraduraga News : ಜೋಳದ ಹೊಲದಲ್ಲಿ ಮಹಿಳೆಯೊಬ್ಬರ ಮೃತದೇಹವು ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಯೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

Bhagya women Dead
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಇಲ್ಲಿನ ಮಹಾದೇವನಕಟ್ಟೆ ಗ್ರಾಮದ (Chitraduraga News) ಹೊರವಲಯದಲ್ಲಿ ಹೊಲದಲ್ಲಿ ಮಹಿಳೆಯ ಶವ ಪತ್ತೆ (Dead body Found) ಆಗಿದೆ. ಮೃತಳನ್ನು ಭಾಗ್ಯಮ್ಮ (52) ಎಂದು ಗುರುತಿಸಲಾಗಿದೆ.

ಮಹಾದೇವನಕಟ್ಟೆ ಗ್ರಾಮದ ವೀರಭದ್ರಪ್ಪ ಎಂಬುವವರ ಹೊಲದಲ್ಲಿ ಭಾಗ್ಯಮ್ಮರ ಶವ ಪತ್ತೆ ಆಗಿದೆ. ಎರಡು ದಿನದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದೆ. ಹೊಲದಲ್ಲಿ ದುರ್ವಾಸನೆ ಬರುವುದನ್ನು ಗಮನಿಸಿ ಪರಿಶೀಲಿಸಿದಾಗ ಮೃತದೇಹ ಕಂಡಿದೆ.

ಕೂಡಲೇ ಈ ವಿಷಯವನ್ನು ಪೊಲೀಸರ ಗಮನಕ್ಕೆ ತರಲಾಗಿದೆ. ಘಟನಾ ಸ್ಥಳಕ್ಕೆ ಡಾಗ್ ಸ್ಕ್ವಾಡ್‌ ಬಂದಿದ್ದು, ಚಿತ್ರದುರ್ಗ ಎಸ್‌ಪಿ ಕುಮಾರಸ್ವಾಮಿ, ಡಿವೈಎಸ್‌ಪಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಯಾರಾದರೂ ಹತ್ಯೆ ಮಾಡಿ ಇಲ್ಲಿಗೆ ತಂದು ಬಿಸಾಡಿದ್ದ ಅಥವಾ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಾಬಹುದಾ? ಎಂಬ ಆಯಾಮದಲ್ಲಿ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಡಿಜೆ ಸೌಂಡ್‌ಗೆ ಇನ್ನೊಂದು ಬಲಿ! ಗಂಗಾವತಿ ಗಣೇಶ ವಿಸರ್ಜನೆ ವೇಳೆ ಯುವಕ ಸಾವು

ಕೊಪ್ಪಳ: ಡಿಜೆ ಸದ್ದಿನಿಂದಾಗಿ ಹಠಾತ್‌ ಸಾವು ಕಾಣುತ್ತಿರುವ ಪ್ರಕರಣಗಳು (killer DJ sound) ಹೆಚ್ಚುತ್ತಿವೆ. ಕೊಪ್ಪಳ ಜಿಲ್ಲೆಯ (koppal news) ಗಂಗಾವತಿ ನಗರದಲ್ಲಿ ಯುವಕನೊಬ್ಬ ಮೆರವಣಿಗೆ ವೇಳೆ ಹಠಾತ್‌ ಕುಸಿದುಬಿದ್ದು (heart failure) ಸಾವನ್ನಪ್ಪಿದ್ದಾನೆ.

ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಸುದೀಪ್ ಸಜ್ಜನ್ (23) ಮೃತ ಯುವಕ. ಗಂಗಾವತಿಯ ಪ್ರಶಾಂತ ನಗರದ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ನಿನ್ನೆ ಇದ್ದ ಹಿನ್ನೆಲೆಯಲ್ಲಿ ಮೆರವಣಿಗೆಗೆ ಮಹಾರಾಷ್ಟ್ರದಿಂದ ಡಿಜೆ ತರಿಸಲಾಗಿತ್ತು. ಡಿಜೆ ಸಂಗೀತಕ್ಕೆ ಯುವಸಮೂಹ ಡ್ಯಾನ್ಸ್ ಮಾಡುತ್ತಿತ್ತು. ಈ ಸಂದರ್ಭದಲ್ಲಿ ಡ್ಯಾನ್ಸ್ ಮಾಡುತ್ತಲೇ ಯುವಕ ಸುದೀಪ್ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಘಟನೆ ಹಿನ್ನಲೆಯಲ್ಲಿ ಮೆರವಣಿಗೆ ಮೊಟಕು ಮಾಡಲಾಯಿತು. ಡಿಜೆ ಸದ್ದನಿಂದಾಗಿ ಹೃದಯಾಘಾತ ಆಗಿರಬಹುದು ಎಂದು ಶಂಕಿಸಲಾಗಿದೆ. ಇತ್ತೀಚೆಗೆ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲೂ ಡಿಜೆ ಸದ್ದಿನಿಂದಾಗಿ ಜಮೀರ್ ಪಿಂಜಾರ (22) ಎಂಬ ಯುವಕ ಮೃತಪಟ್ಟಿದ್ದ. ತುಮಕೂರಿನಲ್ಲಿ ಒಂದು ಘಟನೆ ಹೀಗೇ ನಡೆದಿದ್ದು, ಇದಕ್ಕೂ ಕಾರಣ ಡಿಜೆ ಸೌಂಡ್‌ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: Bidar News : ನೀರಿನ ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಲಕರಿಬ್ಬರು ದುರ್ಮರಣ!

ಭದ್ರಾವತಿಯಲ್ಲಿ ಹಿಂದೂ ಯುವಕನಿಗೆ ಪುಂಡರಿಂದ ಇರಿತ

ಶಿವಮೊಗ್ಗ: ರಾಗಿಗುಡ್ಡದ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಉಂಟಾದ ಗಲಭೆಯ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ಶಿವಮೊಗ್ಗದ ಸಮೀಪ ಭದ್ರಾವತಿಯಲ್ಲಿ ಇನ್ನೊಂದು ಹಲ್ಲೆ ಪ್ರಕರಣ ನಡೆದಿದ್ದು, ಕೋಮು ಉದ್ವಿಗ್ನತೆಗೆ ಕಾರಣವಾಗುವ ಸೂಚನೆಗಳು ಕಾಣಿಸಿವೆ. ಹಿಂದೂ ಯುವಕನೊಬ್ಬನಿಗೆ ಅನ್ಯ ಕೋಮಿನ ಪುಂಡರು ಇರಿದಿದ್ದಾರೆ.

ಸ್ಥಳೀಯರಾದ ನಂದಕುಮಾರ (32) ಎಂಬ ಯುವಕನಿಗೆ ಪುಂಡರು ಚೂರಿಯಿಂದ ಇರಿದಿದ್ದಾರೆ. ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದೆ. ಚೂರಿಯಿಂದ ಬೆನ್ನಿನ ಮೇಲೆ ಯುವಕರ ಗುಂಪು ಇರಿದಿದ್ದು, ಗಾಯಗೊಂಡ ಯುವಕ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕರೆ ಮಾಡಲು ನಿನ್ನ ಮೊಬೈಲ್ ಕೊಡು ಎಂದು ಯುವಕರ ಗುಂಪು ಕೇಳಿತ್ತು. ನಂದಕುಮಾರ ಮೊಬೈಲ್‌ ಕೊಡಲು ನಿರಾಕರಿಸಿದಾಗ ಆತನ ಮೇಲೆ ಪುಂಡರು ಹಲ್ಲೆ ನಡೆಸಿದ್ದರು. ಇದರ ಬಗ್ಗೆ ದೂರು ನೀಡಲು ನಂದಕುಮಾರ ಪೊಲೀಸ್‌ ಠಾಣೆಗೆ ತೆರಳಿದ್ದು, ಠಾಣೆಯಿಂದ ವಾಪಸ್ ಬರುತ್ತಿದ್ದಾಗ ಚೂರಿಯಿಂದ ಹಲ್ಲೆ ನಡೆಸಿದ್ದಾರೆ.

ಅನ್ಯಕೋಮಿನ ಯುವಕರಿಂದ ಹಲ್ಲೆ ನಡೆದಿರುವ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ರಾತ್ರೋರಾತ್ರಿ ಆಸ್ಪತ್ರೆ ಮುಂದೆ ಜಮಾಯಿಸಿದರು. ಪುಂಡರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಸನ್ನಿವೇಶದ ಪರಿಣಾಮವಾಗಿ ಶೀಘ್ರವೇ ಎಚ್ಚೆತ್ತುಕೊಂಡಿರುವ ಪೊಲೀಸರು, ತಕ್ಷಣ ಕ್ರಮಕ್ಕೆ ಮುಂದಾಗಿದ್ದಾರೆ. ಎಎಸ್ಪಿ ಅನಿಲಕುಮಾರ ಭೂಮರಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಯುವಕನಿಂದ ಮಾಹಿತಿ ಪಡೆದಿದ್ದಾರೆ. ಸ್ಥಳದ ಸಿಸಿಟಿವಿ ಫೂಟೇಜ್‌ಗಳನ್ನು ಪರಿಶೀಲಿಸಲಾಗುತ್ತಿದ್ದು, ಪುಂಡರ ತಲಾಶೆಗೆ ಬಲೆ ಬೀಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಉತ್ತರ ಪ್ರದೇಶದ ಮಹಿಳೆ ಮೇಲೆ ಕರ್ನಾಟಕದ ವ್ಯಕ್ತಿ ಅತ್ಯಾಚಾರ; ಆಕೆಯ ಮತಾಂತರಕ್ಕೂ ಯತ್ನ!

ಬಹ್ರೇನ್‌ನಲ್ಲಿ ಸೈಫುದ್ದೀನ್‌ ಎಂಬಾತ ನನ್ನ ಮೇಲೆ ಅತ್ಯಾಚಾರ ಎಸಗಿದ. ಅತ್ಯಾಚಾರದ ಬಳಿಕ ನಾನು ಗರ್ಭಿಣಿಯಾದೆ. ಗರ್ಭಪಾತ ಮಾಡಿಸಿಕೊ ಎಂದು ಪೀಡಿಸುವ ಜತೆಗೆ ಇಸ್ಲಾಂಗೆ ಮತಾಂತರವಾಗು ಎಂಬುದಾಗಿಯೂ ಒತ್ತಾಯ ಮಾಡಿದ. ಕೊನೆಗೆ ಆತನ ಕಿರುಕುಳ ತಾಳದೆ ಉತ್ತರ ಪ್ರದೇಶಕ್ಕೆ ಆಗಮಿಸಿದೆ ಎಂದು ಉತ್ತರ ಪ್ರದೇಶದ ಮಹಿಳೆ ದೂರಿದ್ದಾರೆ.

VISTARANEWS.COM


on

Woman
Koo

ಲಖನೌ: ಕರ್ನಾಟಕದ (Karnataka) ವ್ಯಕ್ತಿಯೊಬ್ಬ ಉತ್ತರ ಪ್ರದೇಶದ (Uttar Pradesh) ಮಹಿಳೆ ಮೇಲೆ ಬಹ್ರೇನ್‌ನಲ್ಲಿ ಅತ್ಯಾಚಾರ ಎಸಗಿ, ಆಕೆಯನ್ನು ಇಸ್ಲಾಂಗೆ ಮತಾಂತರಗೊಳಿಸಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಬಹ್ರೇನ್‌ನಿಂದ (Bahrain) ಉತ್ತರ ಪ್ರದೇಶದ ಲಖನೌಗೆ ಆಗಮಿಸಿದ ಮಹಿಳೆಯು ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

“ಬಹ್ರೇನ್‌ನಲ್ಲಿ ಸೈಫುದ್ದೀನ್‌ ಎಂಬಾತ ನನ್ನ ಮೇಲೆ ಅತ್ಯಾಚಾರ ಎಸಗಿದ. ಅತ್ಯಾಚಾರದ ಬಳಿಕ ನಾನು ಗರ್ಭಿಣಿಯಾದೆ. ಗರ್ಭಪಾತ ಮಾಡಿಸಿಕೊ ಎಂದು ಪೀಡಿಸುವ ಜತೆಗೆ ಇಸ್ಲಾಂಗೆ ಮತಾಂತರವಾಗು ಎಂಬುದಾಗಿಯೂ ಒತ್ತಾಯ ಮಾಡಿದ. ಕೊನೆಗೆ ಆತನ ಕಿರುಕುಳ ತಾಳದೆ ಉತ್ತರ ಪ್ರದೇಶಕ್ಕೆ ಆಗಮಿಸಿದೆ” ಎಂಬುದಾಗಿ ಮಹಿಳೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸೈಫುದ್ದೀನ್‌, ಕರ್ನಾಟಕದ ಬೀದರ್‌ ಜಿಲ್ಲೆಯವನಾಗಿದ್ದು, ಬಹ್ರೇನ್‌ನಲ್ಲಿ ವಾಸಿಸುತ್ತಿದ್ದಾನೆ. ಈತನಿಗೆ ಈಗಾಗಲೇ ಹುಡುಗಿ ನಿಶ್ಚಯವಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

Uttar Pradesh Police

ಬಹ್ರೇನ್‌ನಲ್ಲಿ ಮಹಿಳೆಯು ಕಳೆದ 7 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಬಹ್ರೇನ್‌ನಲ್ಲಿದ್ದಾಗ ಕರ್ನಾಟಕ ಮೂಲದ ಸೈಫುದ್ದೀನ್‌ನನ್ನು ಮಹಿಳೆ ಪರಿಚಯ ಮಾಡಿಕೊಂಡಿದ್ದಾರೆ. ಪರಿಚಯದ ಸಲುಗೆಯನ್ನು ದುರುಪಯೋಗಪಡಿಸಿಕೊಂಡ ವ್ಯಕ್ತಿಯು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಮಹಿಳೆಯು ಐದು ತಿಂಗಳ ಗರ್ಭಿಣಿ ಎಂಬುದನ್ನು ತಿಳಿದು, ಗರ್ಭಪಾತ ಮಾಡಿಸಿಕೊ ಎಂಬುದಾಗಿ ಕಿರುಕುಳ ನೀಡಿದ್ದಾನೆ. ಇಸ್ಲಾಂ ಧರ್ಮಕ್ಕೂ ಮತಾಂತರವಾಗು ಎಂದು ಪೀಡಿಸಿದ್ದಾನೆ ಎಂಬುದಾಗಿ ಮಹಿಳೆ ಆರೋಪಿಸಿದ್ದಾರೆ.

“ನನ್ನ ಮೇಲೆ ಅತ್ಯಾಚಾರ ಎಸಗಿದ ಸೈಫುದ್ದೀನ್‌ ವಿರುದ್ಧ ಬಹ್ರೇನ್‌ನಲ್ಲಿಯೇ ಕೇಸ್‌ ದಾಖಲಿಸಿದ್ದೇನೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಾನು ನೀಡಿದ ದೂರು ಹಿಂಪಡೆಯುವಂತೆ ಸೈಫುದ್ದೀನ್‌ ಕುಟುಂಬಸ್ಥರು ಕಿರುಕುಳ ನೀಡಿದರು. ನಾನು ಐದು ತಿಂಗಳ ಗರ್ಭಿಣಿಯಾಗಿದ್ದಾಗ ಮೋಸ ಮಾಡಿದರು. ನಾನು 2024ರ ಫೆಬ್ರವರಿ 13ರಂದು ಮದುವೆಯಾದ. ಇಸ್ಲಾಂ ಕಾನೂನಿನಂತೆ ಮದುವೆ ಮಾಡಲಾಯಿತು. ಇದಾದ ಬಳಿಕ ನನ್ನನ್ನು ಮತಾಂತರ ಮಾಡಲು ಯತ್ನಿಸಿದರು. ಅಲ್ಲದೆ, ವೈದ್ಯರ ಬಳಿ ತಪಾಸಣೆ ಮಾಡಿಸಿಕೊ ಎಂಬುದಾಗಿ ಮುಂಬೈಗೆ ಕಳುಹಿಸಿದರು. ಆದರೆ, ವೈದ್ಯರು ನನಗೆ ಗೊತ್ತಿಲ್ಲದೆ ಗರ್ಭಪಾತ ಮಾಡಿದರು” ಎಂಬುದಾಗಿ ಮಹಿಳೆ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

Continue Reading

ಬೆಂಗಳೂರು

DK Shivakumar: ದೇವರಾಜೇಗೌಡ ಮೆಂಟಲ್‌ ಕೇಸ್‌; 100 ಕೋಟಿ ರೂ. ಆಫರ್‌ ಮಾಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಡಿಕೆಶಿ

DK Shivakumar: ತಮಗೆ 100 ಕೋಟಿ ರೂಪಾಯಿ ಆಫರ್‌ ನೀಡಿದ್ದಾರೆ ಎಂಬ ವಕೀಲ ದೇವರಾಜೇಗೌಡ ಆರೋಪಕ್ಕೆ ಡಿಕೆಶಿ ಗರಂ ಆಗಿದ್ದಾರೆ. ಮೆಂಟಲ್ ಕೇಸ್ ಅವನು. ಆತ ಏನು ಮಾತನಾಡುತ್ತಾನೋ, ಮಾತನಾಡಲಿ. ಏನು ಮಾಡುತ್ತಾನೋ ಮಾಡಲಿ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ನಾನು ಆಫರ್ ಮಾಡಿದರೆ ದೇವರಾಜೇಗೌಡ ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ ಎಂದು ಸವಾಲು ಹಾಕಿದ್ದಾರೆ.

VISTARANEWS.COM


on

DevarajeGowda mental case Rs 100 crore If offered he should file a complaint with Lokayukta says DK Shivakumar
Koo

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಪರವಾಗಿರಲು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ತಮಗೆ 100 ಕೋಟಿ ರೂಪಾಯಿ ಆಫರ್‌ ನೀಡಿದ್ದಾರೆ ಎಂಬ ವಕೀಲ ದೇವರಾಜೇಗೌಡ (Devarajegowda) ಆರೋಪಕ್ಕೆ ಗರಂ ಆಗಿದ್ದಾರೆ. ಮೆಂಟಲ್ ಕೇಸ್ ಅವನು. ಆತ ಏನು ಮಾತನಾಡುತ್ತಾನೋ, ಮಾತನಾಡಲಿ. ಏನು ಮಾಡುತ್ತಾನೋ ಮಾಡಲಿ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ನಾನು ಆಫರ್ ಮಾಡಿದರೆ ದೇವರಾಜೇಗೌಡ ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನೀವು ಬುದ್ಧಿವಂತರು, ಜಾಣರಿದ್ದೀರಿ. ಆ ದೇವರಾಜೇಗೌಡನಂಥವರು ಯಾರೋ ಏನೋ ಹೇಳುತ್ತಾರೆಂದರೆ ಅದನ್ನು ಹಾಕಿಬಿಡುವುದಾ? ನಮಗೆ ರೆಪ್ಯುಟೇಷನ್ ಇದೆ. ಏನಾದರೂ ಆಧಾರ ಇದ್ದರೆ ಹಾಕಬೇಕು. ತಲೆ ಕೆಟ್ಟ, ಆಸ್ಪತ್ರೆಗೆ ಸೇರಬೇಕಾದವರ ಬಗ್ಗೆ ಮಾತನಾಡುತ್ತೀರಾ ಎಂದು ಮಾಧ್ಯಮದವರನ್ನು ಪ್ರಶ್ನೆ ಮಾಡಿದರು.

ನಾನು ಆಫರ್ ಮಾಡಿದರೆ ದೇವರಾಜೇಗೌಡ ಅವರು ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ. ಎಲ್ಲ ಪೆನ್ ಡ್ರೈವ್ ಬಗ್ಗೆ ಮಾತನಾಡಿದ್ದಾರೆ. ಸಂತ್ರಸ್ತೆಯರ ಬಗ್ಗೆ ಯಾರೂ ಏನೂ ಮಾತನಾಡುತ್ತಿಲ್ಲ ಏಕೆ? ಈ ವಿಚಾರದಲ್ಲಿ ನಾನು ಹೆಚ್ಚು ಏನೂ ಮಾತನಾಡಲ್ಲ ಎಂದು ಡಿ.ಕೆ. ಶಿವಕುಮಾರ್‌ ಗರಂ ಆಗಿಯೇ ಹೇಳಿದರು.

ನನ್ನ ಹೆಸರನ್ನು ಕೆಲವರು ಉಪಯೋಗಿಸಿಕೊಳ್ಳುತ್ತಾರೆ‌. ನೀವು ನನ್ನ ಹೆಸರು ಬಳಸಿಕೊಳ್ಳುತ್ತೀರಾ? ನನ್ನ ಹೆಸರು ಬಳಸಿಕೊಂಡರೆ ನಾನು ಯಾಕೆ ತಲೆ ಕೆಡಿಸಿಕೊಳ್ಳಬೇಕು? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತಮ್ಮ 93ನೇ ಹುಟ್ಟುಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಹೋಗಿದ್ದಾರೆ, ಇದು ಬಹಳ ಒಳ್ಳೆಯದು. ಅವರ ಹುಟ್ಟುಹಬ್ಬ, ಸಂತೋಷ ಕೊಡಲಿ, ದುಃಖವನ್ನು ದೂರ ಮಾಡಲಿ. ಆರೋಗ್ಯ ಆಯಸ್ಸನ್ನು ದೇವರು‌ ಕರುಣಿಸಲಿ ಎಂದು ನಮ್ಮ ಸರ್ಕಾರದ ಪರವಾಗಿ ಹಾರೈಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಅಲ್ಲೋಲ ಕಲ್ಲೋಲ ಸೃಷ್ಟಿಸಿದ ದೇವರಾಜೇಗೌಡ ಬಾಂಬ್‌

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಮಾತನಾಡಿದ್ದಲ್ಲ ಎಂದು ಹೇಳಿದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದರು.

ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ನನ್ನ ಮೇಲೆ ಸುಳ್ಳು ಕೇಸ್‌

ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ ಎಂದು ದೇವರಾಜೇಗೌಡ ಆರೋಪ ಮಾಡಿದ್ದರು.

Continue Reading

ದೇಶ

Police Station: ಪೊಲೀಸ್‌ ಸ್ಟೇಷನ್‌ನಲ್ಲೇ ಪತಿ-ಪತ್ನಿ ಸಾವು; ಠಾಣೆಯನ್ನೇ ಸುಟ್ಟರು ಜನ

Police Station: ವ್ಯಕ್ತಿಯೊಬ್ಬರು ತಮ್ಮ ಹೆಂಡತಿ ತೀರಿಕೊಂಡ ಬಳಿಕ 14 ವರ್ಷದ ನಾದಿನಿಯನ್ನು ಮದುವೆಯಾಗಿದ್ದರು. ಹೆಂಡತಿ ತೀರಿಕೊಂಡ ಬಳಿಕ ನಾದಿನಿಯನ್ನು ವ್ಯಕ್ತಿಯು ಮನೆಗೇ ಕರೆದುಕೊಂಡು ಬಂದಿದ್ದ. ಈ ವಿಷಯ ತಿಳಿದ ಪೊಲೀಸರು ಮೇ 16ರಂದು ವ್ಯಕ್ತಿ ಹಾಗೂ 14 ವರ್ಷದ ಬಾಲಕಿಯನ್ನು ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿದ್ದರು. ಠಾಣೆಯಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಇದಾದ ಬಳಿಕ ಗ್ರಾಮಸ್ಥರು ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ್ದಾರೆ.

VISTARANEWS.COM


on

Police Station
Koo

ಪಟನಾ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ (Araria District) ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸ್‌ ಠಾಣೆಗೇ (Police Station) ಬೆಂಕಿ ಹಚ್ಚಿದ್ದಾರೆ. ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿ, ಕಲ್ಲುತೂರಾಟ (Stone Pelting) ನಡೆಸಿದ ಕಾರಣ ಪೊಲೀಸರು ಸ್ವಯಂ ರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಪೊಲೀಸರನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ವ್ಯಕ್ತಿಯೊಬ್ಬರು ತಮ್ಮ ಹೆಂಡತಿ ತೀರಿಕೊಂಡ ಬಳಿಕ 14 ವರ್ಷದ ನಾದಿನಿಯನ್ನು ಮದುವೆಯಾಗಿದ್ದರು. ಹೆಂಡತಿ ತೀರಿಕೊಂಡ ಬಳಿಕ ನಾದಿನಿಯನ್ನು ವ್ಯಕ್ತಿಯು ಮನೆಗೇ ಕರೆದುಕೊಂಡು ಬಂದಿದ್ದ. ಈ ವಿಷಯ ತಿಳಿದ ಪೊಲೀಸರು ಮೇ 16ರಂದು ವ್ಯಕ್ತಿ ಹಾಗೂ 14 ವರ್ಷದ ಬಾಲಕಿಯನ್ನು ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿದ್ದರು. ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ಕೂಡ ದಾಖಲಿಸಿದ್ದರು. ವಿಚಾರಣೆಗಾಗಿ ಪೊಲೀಸರು ಇಬ್ಬರನ್ನೂ ಕರೆದೊಯ್ದಿದ್ದರು. ಆದರೆ, ಪೊಲೀಸ್‌ ಠಾಣೆಯಲ್ಲಿಯೇ ವ್ಯಕ್ತಿ ಹಾಗೂ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮಸ್ಥರ ಆರೋಪವೇನು?

ವ್ಯಕ್ತಿ ಹಾಗೂ ಬಾಲಕಿಯನ್ನು ಪೊಲೀಸರೇ ಕೊಂದಿದ್ದಾರೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಇಬ್ಬರನ್ನೂ ಪೊಲೀಸ್‌ ಠಾಣೆಗೆ ಕರೆದೊಯ್ದ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ಆಕ್ರೋಶದಲ್ಲಿ ಅವರು ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಮಾಡಿದ್ದಾರೆ. ಉದ್ರಿಕ್ತ ಗ್ರಾಮಸ್ಥರ ದಾಳಿಯಲ್ಲಿ ಐದಾರು ಪೊಲೀಸರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಪೊಲೀಸ್‌ ಠಾಣೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ವ್ಯಕ್ತಿಯು ಲಾಕಪ್‌ ಬಾಗಿಲು ಹತ್ತಿ, ಬಟ್ಟೆಯಿಂದ ನೇಣು ಬಿಗಿದುಕೊಂಡಿದ್ದಾನೆ. ಪೊಲೀಸರು ಸ್ವಯಂ ರಕ್ಷಣೆಗಾಗಿ ಗುಂಡು ಹಾರಿಸಿದ ಕಾರಣ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ, ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಆದರೆ, ಹಿರಿಯ ಪೊಲೀಸ್‌ ಅಧಿಕಾರಿಗಳು ಘಟನೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

Continue Reading

ಶಿವಮೊಗ್ಗ

Road Accident : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

Road Accident : ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬಸ್‌ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
Koo

ಶಿವಮೊಗ್ಗ: ಬಸ್ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಮಹಿಳೆ (37) ಎನ್ನಲಾಗಿದೆ.

ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬರುವಾಗ ಆತುರದಲ್ಲಿ ಕೆಎಸ್ಆರ್‌ಟಿಸಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ ಮುಂದೆ ಚಲಿಸಿದ್ದು, ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

ವಿಜಯನಗರದಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಎಗರಿ ಬಿದ್ದ ಬಾಲಕ ಸಾವು

ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಹಿಂದೆ ಕುಳಿತಿದ್ದ ಬಾಲಕ ಎಗರಿ ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ವಿಜಯನಗರದ ಹರಪನಹಳ್ಳಿ – ಕೂಡ್ಲಿಗಿ ರಸ್ತೆಯ ಹರಾಳು ಕ್ರಾಸ್ ಬಳಿ ಘಟನೆ ನಡೆದಿದೆ. ಕೂಡ್ಲಿಗಿ ತಾಲೂಕಿನ ನಿವಾಸಿ ಮಹಮದ್ (13) ಮೃತ ದುರ್ದೈವಿ.

ಮಹಮದ್‌ ತಂದೆ ಅಸ್ಲಾಂ ಭಾಷಾ ಅವರು ಕೆಎಸ್‌ಆರ್‌ಸಿಟಿ ಬಸ್‌ ಓವರ್ ಟೆಕ್ ಮಾಡಲು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ರೇವಣಸಿದ್ದಪ್ಪ ಎಂಬುವವರ ಬೈಕ್‌ಗೆ ಗುದ್ದಿದ್ದಾರೆ. ಪರಿಣಾಮ ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತಿದ್ದ ಮಹಮದ್‌ ಹಾರಿ ಬಿದ್ದು ಮೃತಪಟ್ಟಿದ್ದಾನೆ. ಅಸ್ಲಾಂ ಭಾಷಾ, ಮತ್ತೊಬ್ಬ ಪುತ್ರ ಮಹಮದ್ ಫರಾನ್ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಮಹಮದ್‌ ತಾಯಿ ಬಸ್ ಚಾಲಕನನ್ನು ದೂರಿದ್ದಾರೆ. ಬಸ್ ಸ್ಪೀಡ್ ಆಗಿ ಬಂದಾಗ ಬೈಕ್ ಬ್ಯಾಲೆನ್ಸ್ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಬಸ್‌ ಮಗನಿಗೂ ಡಿಕ್ಕಿ ಹೊಡೆದಿದೆ. ನನ್ನ ಮಗನ ಸಾವಿಗೆ ಬಸ್ ಚಾಲಕ ಶಿವಕುಮಾರ್ ಕೂಡಾ ಕಾರಣ ಎಂದು ದೂರು ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pavitra Jayaram Relationship With Chandu Shilpa Prema statement
ಕಿರುತೆರೆ3 mins ago

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Money Guide
ಮನಿ-ಗೈಡ್5 mins ago

Money Guide: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

T20 World Cup 2024
ಕ್ರೀಡೆ9 mins ago

T20 World Cup 2024: ಮೇ 25ಕ್ಕೆ ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್​

Mallikarjun Kharge
Lok Sabha Election 202410 mins ago

Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Woman
ದೇಶ14 mins ago

ಉತ್ತರ ಪ್ರದೇಶದ ಮಹಿಳೆ ಮೇಲೆ ಕರ್ನಾಟಕದ ವ್ಯಕ್ತಿ ಅತ್ಯಾಚಾರ; ಆಕೆಯ ಮತಾಂತರಕ್ಕೂ ಯತ್ನ!

DevarajeGowda mental case Rs 100 crore If offered he should file a complaint with Lokayukta says DK Shivakumar
ಬೆಂಗಳೂರು22 mins ago

DK Shivakumar: ದೇವರಾಜೇಗೌಡ ಮೆಂಟಲ್‌ ಕೇಸ್‌; 100 ಕೋಟಿ ರೂ. ಆಫರ್‌ ಮಾಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಡಿಕೆಶಿ

Aishwarya Rai stopping blue gown at Cannes 2024
ಬಾಲಿವುಡ್42 mins ago

Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

Maruti Swift
ಪ್ರಮುಖ ಸುದ್ದಿ44 mins ago

Maruti Swift : ಹೊಸ ಮಾರುತಿ ಸ್ವಿಫ್ಟ್​ ಕಾರಿನಲ್ಲಿದೆ 50ಕ್ಕೂ ಹೆಚ್ಚು ಫೀಚರ್​ಗಳು

RCB vs CSK
ಕ್ರೀಡೆ45 mins ago

RCB vs CSK: 11 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದರೆ ಆರ್​ಸಿಬಿಗೆ ಇಂದು ಗೆಲುವು ಖಚಿತ

Nuclear test at Pokhran
ವಿಜ್ಞಾನ47 mins ago

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ20 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌