Site icon Vistara News

Chitradurga News: ಹೊಳಲ್ಕೆರೆಯಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

68th Karnataka Rajyotsava celebration at Holalkere

ಹೊಳಲ್ಕೆರೆ: ಪಟ್ಟಣದ ಪತ್ರಕರ್ತರ ಭವನದಲ್ಲಿ ಬುಧವಾರ 68ನೇ ಕರ್ನಾಟಕ ರಾಜ್ಯೋತ್ಸವವನ್ನು (Karnataka Rajyotsava) ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಈ ವೇಳೆ ಹಿರಿಯ ಪತ್ರಕರ್ತ ಎಸ್. ವೇದಮೂರ್ತಿ ಮಾತನಾಡಿ, ಕನ್ನಡ ನಾಡು, ನುಡಿ, ಜಲಕ್ಕೋಸ್ಕರ ಅನೇಕ ಹೋರಾಟಗಳು ನಡೆದಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸುವ ಕಾರ್ಯ ಆಗಬೇಕಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Operation Leopard : ಆಪರೇಷನ್‌ ಸಕ್ಸಸ್‌; 3 ದಿನದಿಂದ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎ.ಚಿತ್ತಪ್ಪ, ಪತ್ರಕರ್ತರಾದ ನಿಶಾ, ಸುರೇಶ್, ಮಧುಸೂಧನ್, ರವಿ ಮಲ್ಲಾಡಿಹಳ್ಳಿ, ಬಿ.ಜಿ.ಹಳ್ಳಿ ವೆಂಕಟೇಶ್, ನಾಗರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

Exit mobile version