Chitradurga News: ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹ Vistara News

ಚಿತ್ರದುರ್ಗ

Chitradurga News: ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹ

Chitradurga News: ರಾಜ್ಯದಲ್ಲಿರುವ ಕಾಡುಗೊಲ್ಲ ಸಮುದಾಯವನ್ನು ಎಸ್.ಟಿ ಪಟ್ಟಿಗೆ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಹೊಳಲ್ಕೆರೆ ತಾಲೂಕು ಕಾಡುಗೊಲ್ಲರ ಸಂಘದ ವತಿಯಿಂದ ಹೊಳಲ್ಕೆರೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

Protest demanding inclusion of Kadugollaru in ST list
ಕಾಡುಗೊಲ್ಲರನ್ನು ಎಸ್.ಟಿ ಪಟ್ಟಿಗೆ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಹೊಳಲ್ಕೆರೆ ತಾಲೂಕು ಕಾಡುಗೊಲ್ಲರ ಸಂಘದ ವತಿಯಿಂದ ಹೊಳಲ್ಕೆರೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಳಲ್ಕೆರೆ: ರಾಜ್ಯದಲ್ಲಿರುವ ಕಾಡುಗೊಲ್ಲ ಸಮುದಾಯವನ್ನು ಎಸ್.ಟಿ. ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ, ಹೊಳಲ್ಕೆರೆ ತಾಲೂಕು ಕಾಡುಗೊಲ್ಲರ ಸಂಘದ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಎದುರು ಸೋಮವಾರ ಪ್ರತಿಭಟನೆ (Protest) ನಡೆಸಲಾಯಿತು.

ರಾಜ್ಯದಲ್ಲಿರುವ ಕಾಡುಗೊಲ್ಲ ಸಮುದಾಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸುತ್ತಾ ಪ್ರತಿಭಟನೆ ನಡೆಸುತ್ತಾ ಬಂದಿದೆ. ಬಹಳ ಪ್ರಮುಖವಾಗಿ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಬೇಕು. ಕಾಡುಗೊಲ್ಲ ಎಂಬ ಜಾತಿ ಪ್ರಮಾಣ ಪತ್ರವನ್ನು ಮತ್ತು ಸಿಂಧುತ್ವ ಪ್ರಮಾಣ ಪತ್ರವನ್ನು ರಾಜ್ಯದ ಎಲ್ಲಾ ತಾಲೂಕು ಕಚೇರಿಗಳಲ್ಲಿ ವಿತರಣೆ ಮಾಡಬೇಕು.

ಶಾಲಾ ದಾಖಲಾತಿಯಲ್ಲಿ ಕಾಡುಗೊಲ್ಲರು ಎಂದು ಸೇರ್ಪಡೆ ಮಾಡಬೇಕು. ಕಾಡುಗೊಲ್ಲರಿಗೆ ಪ್ರತ್ಯೇಕವಾದ ಅಭಿವೃದ್ಧಿ ನಿಗಮವನ್ನು ಸರ್ಕಾರ ತೆರೆಯಬೇಕು. ಕಾಡುಗೊಲ್ಲರಿಗೆ ಪ್ರತ್ಯೇಕ ಜಾತಿಯ ಸ್ಥಾನಮಾನ ನೀಡುವುದರ ಜತೆಗೆ ಸರ್ಕಾರದ ಹೆಚ್ಚಿನ ಸೌಲಭ್ಯವನ್ನು ಕಲ್ಪಿಸಿ ಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸರ್ಕಾರದ ವರದಿಯಂತೆ ಜಿಲ್ಲೆಯ ಗೊಲ್ಲರಹಟ್ಟಿಗಳನ್ನು ಕಾಡುಗೊಲ್ಲ, ಅಲೆಮಾರಿ, ಅರೆ ಅಲೆಮಾರಿ ಪಟ್ಟಿಗೆ ಸೇರ್ಪಡೆಗೊಳಿಸಲು ಶಿಫಾರಸ್ಸು ಮಾಡಬೇಕು. ಕಾಡುಗೊಲ್ಲ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಕಾಡುಗೊಲ್ಲ ಸಮುದಾಯ ಎಂದು ಸೇರ್ಪಡೆ ಮಾಡಬೇಕು.

ಇದನ್ನೂ ಓದಿ: Job Alert: ಬರೋಬ್ಬರಿ 75,768 ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ನ.24ರಿಂದ ಅರ್ಜಿ ಸಲ್ಲಿಸಿ!

ಬುಡಕಟ್ಟು ಸಂಸ್ಕೃತಿಯ ಕಾಡುಗೊಲ್ಲ ಜನಾಂಗಕ್ಕೆ ಎಸ್‌ಟಿ ಮೀಸಲಾತಿಗೆ ಒಳಪಡಿಸಲು ಕೈಗೊಂಡ ಕುಲ ಶಾಸ್ತ್ರೀಯ ಅಧ್ಯಯನವನ್ನು ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಕೇಂದ್ರ ಸರ್ಕಾರ ಕೂಡಲೇ ವರದಿಯನ್ನು ಸ್ವೀಕರಿಸಿ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಬೇಕು. ಕಾಡುಗೊಲ್ಲರ ಹಟ್ಟಿಗಳಿಗೆ ನಾಗರಿಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರ ವಿಶೇಷ ಅನುದಾನವನ್ನು ಬಿಡುಗಡೆ ಮಾಡಬೇಕು ಸೇರಿದಂತೆ ತಮ್ಮ ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡಲ್ಲಿ ಸಾಧಾರಣ ಮಳೆ; ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎ.ವಿ. ಉಮಾಪತಿ, ತಾಲೂಕು ಕಾಡುಗೊಲ್ಲ ಸಂಘದ ಅಧ್ಯಕ್ಷ ಎ. ಚಿತ್ತಪ್ಪ, ಮುಖಂಡರಾದ ಡಿ.ಕೆ. ಶಿವಮೂರ್ತಿ, ಇಂದಿರಾ ಕಿರಣ್, ಕೆ.ಎಂ.ಹಾಲಸ್ವಾಮಿ, ಕಿರಣ್ ಯಾದವ್ ಮತ್ತು ವೈಶಾಖ್ ಯಾದವ್, ಅಮೃತಪುರ ಎನ್. ತಿಪ್ಪೇಸ್ವಾಮಿ, ಪಿ. ರಂಗಸ್ವಾಮಿ, ಬಸವರಾಜು ಯಾದವ್, ನಾಗರಾಜು ಯಾದವ್, ಸಿ. ಬಸವರಾಜ್, ಕೋಳಾಳ್ ದಾಸಪ್ಪ, ಕಂದವಾಡಿ ವೀರಣ್ಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉಡುಪಿ

Karnataka Weather : ಮತ್ತೆ ಬದಲಾಯ್ತು ವಾತಾವರಣ; ಮಳೆ ಹೋಯ್ತು, ಬಿಸಿಲು ಬಂತು!

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಪ್ರಭಾವದಿಂದಾಗಿ ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇತ್ತು. ಇದೀಗ ಪ್ರಭಾವ ಕಡಿಮೆ ಆಗಿದ್ದು, ರಾಜ್ಯಾದ್ಯಂತ ಇನ್ನೆರಡು ದಿನಗಳು ಶುಷ್ಕ ವಾತಾವರಣ (Dry weather) ಇರಲಿದ್ದು, ಮಳೆಗೆ (Rain News) ಬ್ರೇಕ್‌ ಬಿದ್ದಿದೆ.

VISTARANEWS.COM


on

By

dry weather karnataka weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ವಾತಾವರಣ ಬದಲಾಗಿದೆ. ಮಳೆಗೆ ಹೋಗಿ ಮತ್ತೆ ಬಿಸಿಲು ಆವರಿಸುತ್ತಿದೆ. ಇನ್ನೆರಡು ದಿನಗಳು ರಾಜ್ಯದಲ್ಲಿ ಒಣಹವೆ (Dry weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಡಿ.7-8ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಬದಲಿಗೆ ಒಣಹವೆಯೇ ಮೇಲುಗೈ ಸಾಧಿಸಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Winter Cardigan Fashion: ಚಳಿಗಾಲದಲ್ಲಿ ಸ್ಟೈಲಿಶ್‌ ಆಗಿ ಕಾಣಿಸುವ ಕಾರ್ಡಿಗಾನ್‌ ಫ್ಯಾಷನ್‌

ಹಗುರ ಮಳೆಯಷ್ಟೇ!

ಇನ್ನೂ ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲಿ ಮಾತ್ರ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿ ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಒಣಹವೆ ಇರಲಿದೆ.

ಇತ್ತ ಮಲೆನಾಡಿನ ಹಾಸನ, ಕೊಡಗು, ಶಿವಮೊಗ್ಗ,ಚಿಕ್ಕಮಗಳೂರಲ್ಲೂ ಮಳೆ ಮುನ್ಸೂಚನೆ ಇಲ್ಲ. ಬಿಸಿಲಿನಿಂದ ಕೂಡಿರಲಿದೆ. ಇನ್ನು ಬೆಂಗಳೂರಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Gulihatty Shekhar: ಜಾತಿ ಕಾರಣಕ್ಕೆ ಕಚೇರಿ ಪ್ರವೇಶ ಸಿಗಲಿಲ್ಲ ಎಂಬ ಗೂಳಿಹಟ್ಟಿ ಆರೋಪ ತಳ್ಳಿಹಾಕಿದ ಆರ್‌ಎಸ್‌ಎಸ್‌

Gulihatty D Shekhar: ಆರೆಸ್ಸೆಸ್‌ನ ಯಾವುದೇ ಕಚೇರಿಯಲ್ಲಾಗಲಿ ಅಥವಾ ಸ್ಮಾರಕ ಕಟ್ಟಡಗಳಲ್ಲಾಗಲಿ, ಎಲ್ಲರಿಗೂ ಮುಕ್ತ ಪ್ರವೇಶವಿದೆ. ಈ ಕುರಿತ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರ ಆರೋಪ ನಿರಾಧಾರ ಎಂದು ಆರ್‌ಎಸ್‌ಎಸ್‌ ಸ್ಪಷ್ಟನೆ ನೀಡಿದೆ.

VISTARANEWS.COM


on

Goolihatti shekhar
Koo

ಬೆಂಗಳೂರು: ಜಾತಿ ಕಾರಣಕ್ಕೆ ನಾಗಪುರದ ಆರ್‌ಎಸ್‌ಎಸ್‌ ಕಚೇರಿಯೊಳಗೆ ತಮಗೆ ಪ್ರವೇಶ ನಿರಾಕರಿಸಲಾಯಿತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್‌ (Gulihatty D Shekhar) ಆರೋಪವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಸ್ಪಷ್ಟವಾಗಿ ತಳ್ಳಿಹಾಕಿದೆ. ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲದ ಆರೋಪ ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಆರ್‌ಎಸ್‌ಎಸ್‌ ದಕ್ಷಿಣ-ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಅವರು, ಹೊಸದುರ್ಗದ ಮಾಜಿ ಶಾಸಕರಾದ ಗೂಳಿಹಟ್ಟಿ ಶೇಖರ್ ಅವರ ಆಡಿಯೊ ಹೇಳಿಕೆಯಲ್ಲಿ ‘ತಮಗೆ ಜಾತಿ ಕಾರಣಕ್ಕೆ ನಾಗಪುರದ ಡಾ. ಹೆಡಗೇವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು’ ಎಂದು ಆರೋಪಿಸಿದ್ದಾರೆ. ಆದರೆ, ನಾಗಪುರದಲ್ಲಿ ಸಂಘ ಕಾರ್ಯಾಲಯ ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲದ ಆರೋಪ ಎಂದು ಹೇಳಿದ್ದಾರೆ.

ಆರೆಸ್ಸೆಸ್‌ನ ಯಾವುದೇ ಕಚೇರಿಯಲ್ಲಾಗಲಿ ಅಥವಾ ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಾಗಲಿ, ಎಲ್ಲರಿಗೂ ಮುಕ್ತ ಪ್ರವೇಶವಿದೆ. ಎಲ್ಲಾ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Pralhad Joshi: ರಾಜಸ್ಥಾನದಲ್ಲಿ ಬಿಜೆಪಿ ಗೆಲುವು; ಪ್ರಲ್ಹಾದ್‌ ಜೋಶಿ ಉಸ್ತುವಾರಿಯಲ್ಲಿ ಮತ್ತೊಂದು ಯಶಸ್ಸು

ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಮೊದಲು ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು, ಆನಂತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾದರೂ ಎಲ್ಲಿಯೂ ತಮಗೆ ಹೀಗಾಗಿತ್ತು ಎಂಬ ಬಗ್ಗೆ ಹೇಳಿರಲಿಲ್ಲ. ಈಗ 10 ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯಕರವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ತಿಪ್ಪೇಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪವೇನು?

ನಾಗಪುರದ ಆರ್‌ಎಸ್‌ಎಸ್‌ ಕಚೇರಿ ಭೇಟಿಯ ಸಂದರ್ಭದಲ್ಲಿ ಉಂಟಾದ ಕಹಿ ಅನುಭವದ ಬಗ್ಗೆ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಪರಿಶಿಷ್ಟ ಜಾತಿ ವ್ಯಕ್ತಿ ಎಂದು ಸ್ಪಷ್ಟವಾಗಿದ್ದರಿಂದ ನನಗೆ ನಾಗಪುರದ ಆರ್‌ಎಸ್‌ಎಸ್‌ನ ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶ ನಿರಾಕರಿಸಲಾಗಿತ್ತು. ಇದಕ್ಕೆ ಕಾರಣವೇನು ಎಂಬುವುದು ಸ್ಪಷ್ಟಪಡಿಸಬಲ್ಲಿರಾ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಗೂಳಿಹಟ್ಟಿ ಶೇಖರ್‌ ಪ್ರಶ್ನಿಸಿದ್ದರು.

ಚುನಾವಣೆ ಘೋಷಣೆಯಾಗುವುದಕ್ಕೂ ಮೂರು ತಿಂಗಳ ಹಿಂದೆ ಮಹಾರಾಷ್ಟ್ರದ ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿಗೆ ಭೇಟಿ ನೀಡಿದ್ದೆ. ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ನಾನು ಖುಷಿಯಿಂದ ಅಲ್ಲಿಗೆ ತೆರಳಿದ್ದೆ. ಆದರೆ, ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶದ ಸಂದರ್ಭದಲ್ಲಿ ಕಹಿ ಅನುಭವ ಉಂಟಾಯಿತು ಎಂದು ಬೇಸರ ಹೊರಹಾಕಿದ್ದರು.

‘ಮ್ಯೂಸಿಯಂ ವೀಕ್ಷಣೆಗೆ ಬರುವವರ ಮಾಹಿತಿಯನ್ನು ಪ್ರವೇಶದ್ವಾರದಲ್ಲಿ ಸಂಗ್ರಹಿಸಲಾಗುತ್ತಿತ್ತು. ಪುಸ್ತಕದಲ್ಲಿ ಹೆಸರು ನೋಂದಾಯಿಸಿ ಒಳಗೆ ಹೆಜ್ಜೆ ಇಡುತ್ತಿದ್ದಾಗ ವ್ಯಕ್ತಿಯೊಬ್ಬರು ತಡೆದರು. ಪರಿಶಿಷ್ಟ ಜಾತಿಗೆ ಸೇರಿದವರಿಗೆ ಪ್ರವೇಶವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ನನ್ನೊಂದಿಗೆ ಇದ್ದ ಮೋಹನ್ ವೈದ್ಯ ಹಾಗೂ ಮಂಜು ಎಂಬುವರು ಮಾತ್ರ ಒಳಗೆ ಹೋದರು. ನಾನು ಹೊರಗೆ ಕಾಯುತ್ತ ಕುಳಿತುಕೊಳ್ಳಬೇಕಾಯಿತು ಎಂದು ಹೇಳಿದ್ದರು.

ಇದನ್ನೂ ಓದಿ | CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

‘ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಪರಿಶಿಷ್ಟ ಜಾತಿಗೆ ಸೇರಿದ ಎ.ನಾರಾಯಣಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ನಾರಾಯಣಸ್ವಾಮಿ ಹಾಗೂ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಇಲ್ಲಿಗೆ ಪ್ರವೇಶ ಪಡೆದಿದ್ದಾರೆ ಎಂಬ ಅನುಮಾನ ಇದೆ. ನನ್ನನ್ನು ಒಳಗೆ ಬಿಡದಿರುವ ಬಗ್ಗೆ ಬಿ.ಎಲ್.ಸಂತೋಷ್ ಅವರು ಸ್ಪಷ್ಟನೆ ನೀಡಬಲ್ಲಿರಾ ಎಂದು ಗೂಳಿಹಟ್ಟಿ ಪ್ರಶ್ನಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿತ್ರದುರ್ಗ

Chitradurga News: ಗುಂಡೇರಿ ಗ್ರಾಮದಲ್ಲಿ ಅಷ್ಟಲಕ್ಷ್ಮಿ ಪೂಜೆ

Chitradurga News: ಹೊಳಲ್ಕೆರೆ ತಾಲೂಕಿನ ಗುಂಡೇರಿ ಗ್ರಾಮದ ಈಶ್ವರ ಕಲ್ಯಾಣ ಮಂಟಪ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಅಷ್ಟಲಕ್ಷ್ಮಿ ಪೂಜಾ ಕಾರ್ಯಕ್ರಮ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ ಜರುಗಿತು.

VISTARANEWS.COM


on

Ashta Lakshmi Puja programme inauguration at Gunderi village
ಹೊಳಲ್ಕೆರೆ ತಾಲೂಕಿನ ಗುಂಡೇರಿ ಗ್ರಾಮದ ಈಶ್ವರ ಕಲ್ಯಾಣ ಮಂಟಪ ಸಭಾಭವನದಲ್ಲಿ ಅಷ್ಟ ಲಕ್ಷ್ಮೀ ಪೂಜಾ ಕಾರ್ಯಕ್ರಮ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭಕ್ಕೆ ಚಾಲನೆ ನೀಡಲಾಯಿತು.
Koo

ಹೊಳಲ್ಕೆರೆ: ಭಾರತದ ಭವ್ಯ ಪರಂಪರೆಯಲ್ಲಿ ಧರ್ಮಕ್ಕೆ ಮತ್ತು ಸಂಸ್ಕೃತಿ ಸಂಸ್ಕಾರಗಳಿಗೆ ಉನ್ನತ ಸ್ಥಾನಮಾನ ನೀಡಲಾಗಿದೆ. ನಾವು ಅದನ್ನು ಮುಂದಿನ ಪೀಳಿಗೆಗೆ ಕಲಿಸಿಕೊಡುವ ಜವಾಬ್ದಾರಿ (Responsibility) ನಮ್ಮದಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿತ್ರದುರ್ಗ ಜಿಲ್ಲೆಯ ನಿರ್ದೇಶಕ ದಿನೇಶ್ ಪೂಜಾರಿ ತಿಳಿಸಿದರು.

ತಾಲೂಕಿನ ಗುಂಡೇರಿ ಗ್ರಾಮದ ಈಶ್ವರ ಕಲ್ಯಾಣ ಮಂಟಪ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಈಚೆಗೆ ಅಷ್ಟಲಕ್ಷ್ಮೀ ಪೂಜಾ ಕಾರ್ಯಕ್ರಮ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಂಡಿದೆ ಎಂದರೆ ಅದಕ್ಕೆ ಪಾಲುದಾರ ಕುಟುಂಬವೇ ಕಾರಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ಗಿರೀಶ್ ನಾಡಿಗ್ ಮಾತನಾಡಿದರು.

ಇದೇ ವೇಳೆ ನೂತನ ಪದಾಧಿಕಾರಿಗಳಿಗೆ ದಾಖಲಾತಿ ಹಸ್ತಾಂತರ ಮಾಡಲಾಯಿತು.

ಇದನ್ನೂ ಓದಿ: karnataka Weather :‌ ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಗೌರಮ್ಮ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಗಂಗೂ ಬಾಯಿ, ಮೇಲ್ವಿಚಾರಕ ಉಮಾಪತಿ, ಸೇವಾ ಪ್ರತಿನಿಧಿಗಳು, ಗ್ರಾಮದ ಮುಖಂಡರು, ಸ್ವಸಹಾಯ ಸಂಘದ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಉಡುಪಿ

Karnataka Weather : ನಾಳೆ ಭಾರಿ ಮಳೆ ಎಚ್ಚರಿಕೆ; ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌!

Karnataka Weather Forecast : ತಿಂಗಳಾಂತ್ಯದವರೆಗೆ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather forecast Heavy rain alert
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮೈಸೂರು ಮತ್ತು ತುಮಕೂರಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ: Viral News: ಪತ್ನಿಯ ಬರ್ತ್‌ಡೇ, ಪತಿಗೆ ಡೆತ್‌ಡೇ: ದುಬೈಗೆ ಕರೆದೊಯ್ಯದ್ದಕ್ಕೆ ಮೂಗಿಗೆ ಗುದ್ದಿ ಗಂಡನ ಪ್ರಾಣ ತೆಗೆದ ಹೆಂಡತಿ

ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ಸೂರ್ಯ

ನ.29ರಂದು ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಡಿಮೆ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Vistara News impact, Governmet to scrap 7 d rule of SCSP and TSP act
ಕರ್ನಾಟಕ5 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್5 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Supreme Court will deliver judgment on Dece 11 about J and K Special Status scrap
ಕೋರ್ಟ್6 hours ago

ಆರ್ಟಿಕಲ್ 370 ರದ್ದು ಸಿಂಧುವೇ?; ಡಿ.11ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು

Pro Kabaddi
ಕ್ರೀಡೆ6 hours ago

Pro Kabaddi: ಗುಜರಾತ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಪಾಟ್ನಾ

Is 500 note with star symbol is fake, What Fact Check says?
Fact Check7 hours ago

Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

kavya maran
ಐಪಿಎಲ್ 20237 hours ago

ಸ್ಟಾರ್​​ ಆಟಗಾರನ ಖರೀದಿಗೆ ಸ್ಕೆಚ್​ ಹಾಕಿದ ಸಖತ್ ಕ್ಯೂಟ್ ಓನರ್ ಕಾವ್ಯ ಮಾರನ್

Inauguration of Hulleshwar Jnana vikas Center at Yakshi Village
ಶಿವಮೊಗ್ಗ7 hours ago

Shivamogga News: ಯಕ್ಷಿ ಗ್ರಾಮದಲ್ಲಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

14 Medium and Large Irrigation Projects Completed in Kalyana Karnataka says Minister Ramalinga reddy
ಕರ್ನಾಟಕ7 hours ago

ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಮಧ್ಯಮ, ಬೃಹತ್ ನೀರಾವರಿ ಯೋಜನೆಗಳು ಪೂರ್ಣ: ರಾಮಲಿಂಗಾರೆಡ್ಡಿ

More than a hundred people from Kiravatti have joined the Congress party
ಉತ್ತರ ಕನ್ನಡ7 hours ago

Uttara Kannada News: ಕಿರವತ್ತಿ ಭಾಗದ 100ಕ್ಕೂ ಹೆಚ್ಚು ಜನ ಕಾಂಗ್ರೆಸ್‌ಗೆ ಸೇರ್ಪಡೆ

Vistara Top 10 News 7-12
ಕರ್ನಾಟಕ8 hours ago

VISTARA TOP 10 NEWS : ಮೌಲ್ವಿ ಐಸಿಸ್‌ ಸಂಪರ್ಕ ನಿಜವೇ? ಹಳೆಪಿಂಚಣಿ ಮರುಜಾರಿ ಖಚಿತವೇ? ಇತರ ಪ್ರಮುಖ ಸುದ್ದಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ10 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ11 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ16 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ24 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ2 days ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌