Best of Chitradurga : ಚಿತ್ರದುರ್ಗದ ಪ್ರವಾಸವೆಂದರೆ ಈ ಎಲ್ಲ ಸ್ಥಳಗಳನ್ನು ನೋಡಲೇಬೇಕು - Vistara News

ಚಿತ್ರದುರ್ಗ

Best of Chitradurga : ಚಿತ್ರದುರ್ಗದ ಪ್ರವಾಸವೆಂದರೆ ಈ ಎಲ್ಲ ಸ್ಥಳಗಳನ್ನು ನೋಡಲೇಬೇಕು

ಚಿತ್ರದುರ್ಗ ( Best of Chitradurga) ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದೆ. ಇಲ್ಲಿಗೆ ಪ್ರವಾಸ ನೀಡುವವರ ನೋಡಲೇಬೇಕಾದ ಕೆಲವು ಸ್ಥಳಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

chitradurga tourist places
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ ಕೋಟೆಯ ನಾಡು. ವೇದಾವತಿ ನದಿ ಕಣಿವೆಯಲ್ಲಿರುವ ಈ ಜಿಲ್ಲೆಯ ಐತಿಹಾಸಿಕ ಮಹತ್ವವನ್ನೂ ಹೊಂದಿರುವ ಜಿಲ್ಲೆ. ಈ ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ತಾಣಗಳಿದ್ದು(Best of Chitradurga), ಅವು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತವೆ. ಒಂದು ವೇಳೆ ನೀವು ಕೂಡ ಚಿತ್ರದುರ್ಗದ ಪ್ರವಾಸಕ್ಕೆ ಹೋಗಬೇಕೆನ್ನುವ ಯೋಚನೆಯಲ್ಲಿದ್ದರೆ, ನಿಮಗೆಂದೇ ಅಲ್ಲಿನ ಸ್ಥಳಗಳ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.

ಚಿತ್ರದುರ್ಗದ ಪ್ರವಾಸಿ ಸ್ಥಳಗಳು:

ನಾಯಕನಹಟ್ಟಿ ದೇವಸ್ಥಾನ

Nayakanahatti Thipperudra Swamy temple


ಚಿತ್ರದುರ್ಗದ ಸೌಂದರ್ಯವನ್ನು ಸವಿಯಲು ನಾಯಕನಹಟ್ಟಿ ದೇವಸ್ಥಾನ ಒಂದು ಸೂಕ್ತ ಸ್ಥಳ ಎನ್ನಬಹುದು. ಇಲ್ಲಿ ಪ್ರಸಿದ್ಧ ಋಷಿ ತಿಪ್ಪೇರುದ್ರಸ್ವಾಮಿಯನ್ನು ಪೂಜಿಸಲಾಗುತ್ತದೆ. ಈ ದೇವಾಲಯವು ಚಿತ್ರದುರ್ಗ ನಗರದಿಂದ ಸುಮಾರು 35ಕಿ.ಮೀ. ದೂರದಲ್ಲಿದೆ. ಇದೇ ಸ್ಥಳದಲ್ಲಿ ತಿಪ್ಪೇರುದ್ರಸ್ವಾಮಿ ಅವರ ಸಮಾಧಿಯೂ ಇದೆ ಎಂದು ಹೇಳಲಾಗುತ್ತದೆ.

ದಶರಥ ರಾಮೇಶ್ವರ ದೇವಸ್ಥಾನ

Sri Dasharatha Rameshwara Vajra temple


ದಶರಥ ರಾಮೇಶ್ವರ ದೇವಸ್ಥಾನವನ್ನು ಸ್ಥಳೀಯವಾಗಿ ವರ್ಜ್ರ ದೇವಾಲಯ ಎನ್ನುವ ಹೆಸರಿನಿಂದಲೂ ಕರೆಯಲಾಗುತ್ತದೆ. ದಶರಥ ರಾಜನು ತನ್ನ ಮಗ ಸಂತ ಶ್ರವಣನ ಹತ್ಯೆಗೆ ಪ್ರಾಯಶ್ಚಿತ್ತವಾಗಿ ಈ ದೇವಾಲಯವನ್ನು ನಿರ್ಮಿಸಿದನೆಂದು ಹೇಳಲಾಗುತ್ತದೆ. ದಶರಥ ರಾಜ ಮತ್ತು ಅವನ ಮಗ ರಾಮ ಇಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದರು ಎಂದು ಪುರಾಣ ಹೇಳುತ್ತದೆ.

ಇದನ್ನೂ ಓದಿ: ಹಿಮಾಚಲ ಪ್ರವಾಹದ ಮಧ್ಯೆಯೇ ಆನ್​​ಲೈನ್​ ಮದುವೆ; ವಿಡಿಯೊ ಕಾನ್ಫರೆನ್ಸ್​​ನಲ್ಲೇ ಮುಗಿದ ಶಾಸ್ತ್ರಗಳು

ಹೊಳಲ್ಕೆರೆ

holalkere jade ganapathi temple


ಹೊಳಲ್ಕೆರೆಯು ಚಿತ್ರದುರ್ಗದ ತಾಲೂಕಾಗಿದೆ. ಇಲ್ಲಿನ ನಗರದ ಬಳಿಯೇ 9 ಅಡಿ ಎತ್ತರದ ಬಾಲ ಗಣಪತಿಯ ದೇಗುಲವಿದೆ. ಇದಕ್ಕೆ ಜಡೆ ಗಣಪತಿ ಎನ್ನುವ ಹೆಸರೂ ಇದೆ. ಚಿತ್ರದುರ್ಗ ಪಟ್ಟಣದಿಂದ ಈ ದೇಗುಲವು 35 ಕಿ.ಮೀ.ಗಳಷ್ಟು ದೂರದಲ್ಲಿದೆ. ಅದಷ್ಟೇ ಅಲ್ಲದೆ ಇದೇ ನಗರದಲ್ಲಿ 13 ಅಡಿ ಎತ್ತರದ ಶಿವನ ಪ್ರತಿಮೆಯನ್ನೂ ನೀವು ಕಾಣಬಹುದು. ಇಲ್ಲಿ ಆಣೆಕಟ್ಟೂ ಇದ್ದು, ಪ್ರವಾಸಿಗರನ್ನು ಆಕರ್ಷಿಸುವ ನಗರ ಇದಾಗಿದೆ.

ಜೋಗಿಮಟ್ಟಿ

Jogimatti Forest Area


ಚಿತ್ರದುರ್ಗದ ಸಮೀಪದಲ್ಲಿಯೇ ನೀವು ಜೋಗಿಮಟ್ಟಿ ಅರಣ್ಯ ಪ್ರದೇಶವನ್ನು ಕಾಣಬಹುದು. ಇಲ್ಲಿ ಅನೇಕ ರೀತಿಯ ಜೀವವೈವಿಧ್ಯಗಳಿವೆ. ಇಲ್ಲಿನ ಹಿಮವತ್ಕೇದ್ರಾ ಜಲಪಾತ ನಿಮ್ಮ ಕಣ್ಣುಗಳನ್ನು ಇನ್ನಷ್ಟು ತಂಪಾಗಿಸುತ್ತದೆ. ಜಲಪಾತದ ಸಮೀಪವಿರುವ ಗುಹೆಯಲ್ಲಿ ಶಿವಲಿಂಗ ಮತ್ತು ಬಸವಣ್ಣ ಮತ್ತು ವೀರಭದ್ರನ ಮೂರ್ತಿಗದ್ದು, ಇದು ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಈ ಅರಣ್ಯ ಪ್ರದೇಶದಲ್ಲಿ ನೀವು ವಿವಿಧ ಜಾರಿಯ ವನ್ಯಜೀವಿಗಳನ್ನೂ ನೋಡಬಹುದಾಗಿದೆ.

ಇದನ್ನೂ ಓದಿ: Sakleshpur Places To Visit : ಸ್ವರ್ಗದಂತಹ ಸಕಲೇಶಪುರದಲ್ಲಿ ಈ ಸ್ಥಳಗಳನ್ನು ಮಿಸ್‌ ಮಾಡಲೇಬಾರದು

ಹಾಲು ರಾಮೇಶ್ವರ ದೇವಸ್ಥಾನ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ಹಾಲು ರಾಮೇಶ್ವರನ ದೇವಾಲಯವಿದೆ. ಈ ದೇವಾಲಯದಲ್ಲಿ ಶ್ರೀ ರಾಮನ ಶಿವನನ್ನು ಪೂಜಿಸುತ್ತಿದ್ದ ಎಂದು ಹೇಳಲಾಗುತ್ತದೆ. ಹಾಗಾಗಿ ಇದು ರಾಮನ ಭಕ್ತರ ಜತೆ ಶಿವನ ಭಕ್ತರನ್ನೂ ಸೆಳೆಯುವ ಸ್ಥಳವಾಗಿದೆ. ದೇವಾಲಯದ ಸುತ್ತಲಿನ ಪ್ರದೇಶ ಪ್ರಶಾಂತವಾಗಿದ್ದು, ನೀವಿಲ್ಲಿ ಶಾಂತಿಯುತವಾದ ಸಮಯವನ್ನು ಕಳೆಯಬಹುದು.

ಜಾಮಿಯಾ ಮಸೀದಿ

Jamia Masjid chitradurga


ಹಿಂದೂ ದೇಗುಲಗಳಂತೆ ಇಲ್ಲಿ ಮುಸ್ಲಿಮರಿಗೆ ಸಂಬಂಧಪಟ್ಟ ಅನೇಕ ಮಸೀದಿಗಳೂ ಇವೆ. ಅದರಲ್ಲಿ ಅತ್ಯಂತ ಪ್ರಮುಖವಾಗಿರುವುದು ಜಾಮಿಯಾ ಮಸೀದಿ. ಇದನ್ನು ಜಾಮಾ ಮಸೀದಿ, ಸುಲ್ತಾನ್‌-ಎ-ಜಾಮಾ ಮಸೀದಿ ಎಂದೂ ಕರೆಯಲಾಗುತ್ತದೆ. ಈ ಮಸೀದಿಯನ್ನು ಇಂಡೋ-ಸರಸೆನ್‌ ವಿನ್ಯಾಸದಲ್ಲಿ ನಿರ್ಮಾಣ ಮಾಡಲಾಗಿದೆ. ಮಸೀದಿಯ ಒಳಗೆ 13 ಸಾಲುಗಳಿದ್ದು, ಪ್ರತಿ ಸಾಲಿನಲ್ಲಿ 50 ಮಂದಿ ಕೂರುವುದಕ್ಕೆ ಸ್ಥಳಾವಕಾಶವಿದೆ.

ಮೊಳಕಾಲ್ಮೂರು

molakalmuru railway station


ಕರ್ನಾಟಕದಲ್ಲಿ ಹಲವಾರು ವಿಧದ ಬಟ್ಟೆ ತಯಾರಿಸಲಾಗುತ್ತದೆ. ಅದರಲ್ಲಿ ಮೊಳಕಾಲ್ಮೂರಿನ ಸೀರೆಯೂ ಒಂದು. ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆಯ ಪಂಚಾಯತ್‌ ಪಟ್ಟಣವಾಗಿದೆ. ಇಲ್ಲಿ ಸಾಂಪ್ರಾದಾಯಿಕವಾಗಿ ರೇಷ್ಮೆ ಸೀರೆಗಳನ್ನು ತಯಾರಿಸಲಾಗುತ್ತದೆ. ನೀವು ಈ ಗ್ರಾಮಕ್ಕೆ ಭೇಟಿ ನೀಡಿದರೆ, ಸೀರೆ ನೇಯ್ಗೆ ಮಾಡುವುದನ್ನು ನೋಡುವುದರ ಜತೆ ಅದನ್ನು ಕೊಂಡುಕೊಳ್ಳಬಹುದು ಕೂಡ. ಇಲ್ಲಿ ನುಂಕೆಮಲೆ ಸಿದ್ದೇಶ್ವರ ದೇವಸ್ಥಾನವಿದ್ದು, ಅದು ಕೂಡ ಜನಪ್ರಿಯವಾಗಿದೆ.

ಇದನ್ನೂ ಓದಿ: Top 8 Richest States: ದೇಶದ ಟಾಪ್ 8 ಶ್ರೀಮಂತ ರಾಜ್ಯಗಳು! ಕರ್ನಾಟಕಕ್ಕೆ ಯಾವ ಸ್ಥಾನ?

ಹಿರಿಯೂರು

Vani Vilasa Sagara, popularly known as Mari Kanive is a dam in Hiriyur


ಹಿರಿಯೂರು ತಾಲೂಕಾಗಿದ್ದು, ಇಲ್ಲಿ NH4 ಹಾದು ಹೋಗುತ್ತದೆ. ಈ ನಗರದಲ್ಲಿ ಕರ್ನಾಟಕದ ಅತ್ಯಂತ ಹಳೆಯ ಅಣೆಕಟ್ಟಿದೆ. ವೇದಾವತಿ ನದಿಯ ಮೇಲೆ ಮಾರಿ ಕಣಿವೆ(ವಾಣಿ ವಿಲಾಸ ಸಾಗರ ಎಂದೂ ಕರೆಯಲಾಗುತ್ತದೆ) ಹೆಸರಿನ ಅಣೆಕಟ್ಟನ್ನು ನಿರ್ಮಿಸಲಾಗಿದೆ. ಇಲ್ಲಿಗೆ ಬಂದರು ನೀವು ಅಣೆಕಟ್ಟಿನ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದು.

ಚಂದ್ರವಳ್ಳಿ

Chandravalli Caves Chitradurga


ಚಿತ್ರದುರ್ಗದ ಬೆಟ್ಟ, ಚೋಳಗುಡ್ಡ ಮತ್ತು ಕಿರಬನಕಲ್ಲು ಬೆಟ್ಟಗಳು ಸೇರಿಕೊಂಡು ಚಂದ್ರವಳ್ಳಿ ಕಣಿವೆಯನ್ನು ರೂಪಿಸುತ್ತದೆ. ಇಲ್ಲಿ ಪುರಾತತ್ತ್ವ ಶಾಸ್ತ್ರದ ಉತ್ಖನನ ಕ್ರಿಯೆ ನಡೆಸಲಾಗಿದೆ. ಈ ಸ್ಥಳದಲ್ಲಿ ಹೊಯ್ಸಳ, ಶಾತವಾಹನ ಮತ್ತು ವಿಜಯನಗರ ಸಾಮ್ರಾಜ್ಯಗಳ ಮಣ್ಣಿನ ಪಾತ್ರೆಗಳು, ನಾಣ್ಯಗಳು ಮತ್ತು ಬಣ್ಣದ ಬಟ್ಟಲುಗಳು ಸಿಕ್ಕಿರುವ ದಾಖಲೆಗಳಿವೆ. ಈ ಸ್ಥಳವನ್ನು ನೀವು ಕಣ್ತುಂಬಿಸಿಕೊಳ್ಳಬಹುದು.

ಚಿತ್ರದುರ್ಗ ಕೋಟೆ

Chitradurga Fort or Chitaldoorg


ಚಿತ್ರದುರ್ಗದ ಕೋಟೆಯು ಸುಂದರ ಇತಿಹಾಸವನ್ನು ಹೊಂದಿರುವ ಕೋಟೆಯಾಗಿದೆ. ಚಾಲುಕ್ಯರು, ಹೊಯ್ಸಳರು, ನಾಯಕರು ಮತ್ತು ರಾಷ್ಟ್ರಕೂಟರು, ಆ ಸಮಯದಲ್ಲಿ ಆಳ್ವಿಕೆ ನಡೆಸುತ್ತಿದ್ದ ನಾಲ್ಕು ರಾಜವಂಶಗಳು 17 ಮತ್ತು 18 ನೇ ಶತಮಾನಗಳಲ್ಲಿ ಈ ಕಲ್ಲಿನ ಕೋಟೆಯನ್ನು ನಿರ್ಮಿಸಿದರು. ಇದು ಚಿತ್ರದುರ್ಗದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಚಿತ್ರದುರ್ಗ ಬಂದವರು ಈ ಕಲ್ಲಿನ ಕೋಟೆಗೆ ಭೇಟಿ ನೀಡಿಯೇ ನೀಡುತ್ತಾರೆ.

ಇದನ್ನೂ ಓದಿ: Best places to visit in Mandya : ಮಂಡ್ಯದ ಸುತ್ತಮುತ್ತ ನೋಡಲೇಬೇಕಾದ ಸ್ಥಳಗಳಿವು

ಆಡುಮಲ್ಲೇಶ್ವರ ದೇವಸ್ಥಾನ

Adumalleshwara Temple and zoo


ಚಿತ್ರದುರ್ಗದ ಇನ್ನೊಂದು ಪ್ರಸಿದ್ಧ ದೇವಸ್ಥಾನವೆಂದರೆ ಅದು ಆಡುಮಲ್ಲೇಶ್ವರ ಸ್ವಾಮಿ ದೇವಸ್ಥಾನ. ಈ ದೇವಸ್ಥಾನವು ಚಿತ್ರದುರ್ಗದ ಕೋಟೆಯಿಂದ ಸುಮಾರು ಐದು ಕಿಲೋಮೀಟರ್‌ ದೂರದಲ್ಲಿದೆ. ಇಲ್ಲಿ ಶಿವ ದೇವರನ್ನು ಆಡುಮಲ್ಲೇಶ್ವರನ ರೂಪದಲ್ಲಿ ಪೂಜಿಸಲಾಗುತ್ತದೆ. ಈ ದೇವಸ್ಥಾನಕ್ಕೆ ರಸ್ತೆ ಮೂಲಕವಾದರೂ ಹೋಗಬಹುದು ಅಥವಾ ಕಾಲುದಾರಿಯಲ್ಲಿ ನಡೆದುಕೊಂಡೂ ಹೋಗಬಹುದಾಗಿದೆ. ದೇವಸ್ಥಾನಕ್ಕೆ ತೆರಳುವ ದಾರಿ ಸುಂದರವಾಗಿದ್ದು, ಸುತ್ತಲಿನ ಬೆಟ್ಟಗಳ ಸೌಂದರ್ಯವನ್ನು ಸವಿಯುತ್ತಾ ಸಾಗಬಹುದಾಗಿದೆ. ಇದಲ್ಲದೆ ಹಲವು ದೇವಾಲಯಗಳು ಜಿಲ್ಲೆಯಲ್ಲಿವೆ.

FAQ

ಚಿತ್ರದುರ್ಗ ಏಕೆ ಪ್ರಸಿದ್ಧವಾಗಿದೆ?

ಚಿತ್ರದುರ್ಗ ಕರ್ನಾಟಕದ ಪ್ರಮುಖ ಪ್ರವಾಸಿ ಕೇಂದ್ರವಾಗಿದೆ. ಕಲ್ಲಿನ ಕೋಟೆಗೆ ಖ್ಯಾತಿ ಗಳಿಸಿದೆ.

ಚಿತ್ರದುರ್ಗದ ಪ್ರಸಿದ್ಧ ಹೆಸರೇನು?

ಚಿತ್ರದುರ್ಗದ ಪ್ರಸಿದ್ಧ ನಗರವು ಕಲ್ಲಿನ ಕೋಟೆ ಎಂದೂ ಹೆಸರುವಾಸಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Rain Effect : ರಾಜ್ಯಾದ್ಯಂತ ಮುಂಗಾರು ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ನಾಳೆ ಮಂಗಳವಾರವೂ (Heavy rain) ಭಾರಿ ಮಳೆಯಾಗಲಿದ್ದು, ಉಡುಪಿಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Karnataka Weather Forecast) ಮಾಡಲಾಗಿದೆ.

VISTARANEWS.COM


on

By

Rain Effect
Koo

ಮಹಾರಾಷ್ಟ್ರ/ಬೆಳಗಾವಿ: ಮಹಾರಾಷ್ಟ್ರದ‌ ಬುಲಡಾನ್ ಪ್ರದೇಶದಲ್ಲಿ ನಿರಂತರ ಮಳೆಯಿಂದ (Karnataka Rain) ಪ್ರವಾಸವೇ ಸೃಷ್ಟಿಯಾಗಿದೆ. ಉಕ್ಕಿ ಹರಿಯುವ ನೀರಲ್ಲಿ ಪಾನ್‌ ಶಾಪ್‌ ಹಾಗೂ ಕಾರು ಎರಡು ಕೊಚ್ಚಿ (Rain Effect) ಹೋಗಿವೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ಬೆಳಗಾವಿಯ ಗಡಿಯಲ್ಲಿ ಮಳೆಯಿಂದಾಗಿ ಪ್ರವಾಸಿಗರು ಪರದಾಟ ಅನುಭವಿಸಿದರು. ಚಂದಗಡ್ ತಾಲೂಕಿನ ತಿಲಾರಿ ಮತ್ತು ಪಾಟ್ನೆಪಾಟಾದಲ್ಲಿ ಹಿರಣ್ಯಕೇಶಿ ನದಿ ನೀರು ಏಕಾಏಕಿ ರಸ್ತೆಗೆ ಹರಿದು ಬಂದಿತ್ತು. ಪರಿಣಾಮ ಸೇತುವೆ ಮೇಲೆ ಮೂರು ಅಡಿಯಷ್ಟು ನೀರು ಹರಿದು ತಿಲಾರಿ ಬೆಳಗಾವಿ ಸಂಪರ್ಕಿಸುವ ರಸ್ತೆಯು ಹೊಳೆಯಂತಾಗಿ ಮಾರ್ಪಟ್ಟಿತ್ತು. ಕೆಲ ಪ್ರವಾಸಿಗರು ಎರಡ್ಮೂರು ಅಡಿ ನಿಂತ ನೀರಲ್ಲೇ ಕಾರು ಚಲಾಯಿಸಿಕೊಂಡು ಹೊರ ಬಂದರು. ನೀರಲ್ಲಿ ಬೈಕ್‌ ಚಲಾಯಿಸಲು ಆಗದೆ ಬೈಕ್‌ಗಳನ್ನು ತಳ್ಳಿಕೊಂಡು ಬಂದರು.

ಬೆಂಗಳೂರಿನಲ್ಲೂ ಅಬ್ಬರಿಸಿದ ಮಳೆ

ಜು.8ರ ಸಂಜೆ ರಾಜ್ಯದ ವಿವಿಧೆಡೆ ಮಳೆಯು ಆರ್ಭಟಿಸಿದೆ. ಬೆಂಗಳೂರಿನ ಮಲ್ಲೇಶ್ವರಂ, ಶಿವಾನಂದ, ಮೆಜೆಸ್ಟಿಕ್ ಹಾಗೂ ವಿಧಾನಸೌಧ, ಶಿವಾಜಿನಗರ ಸೇರಿದಂತೆ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ಇತ್ತ ವಿಜಯನಗರ ಜಿಲ್ಲೆಯಲ್ಲಿ ದಿಢೀರ್ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿತ್ತು. ವಿಜಯನಗರದ ಹೊಸಪೇಟೆಯಲ್ಲಿ ಬಿರುಗಾಳಿ ಸಹಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿತ್ತು. ದಿಢೀರ್ ಸುರಿದ ಭಾರೀ ಮಳೆಗೆ ರಸ್ತೆ ಇಕ್ಕೆಲಗಳಲ್ಲೆಲ್ಲ ನೀರು ತುಂಬಿ ಹರಿದಿತ್ತು. ಏಕಾಏಕಿ ಸುರಿದ ಮಳೆಗೆ ರಸ್ತೆ, ಚರಂಡಿಗಳು ತುಂಬಿ ಹರಿದಿತ್ತು.

ನಿರಂತರ ಮಳೆಗೆ ಉರುಳಿ ಬಿದ್ದ ಮರ; ಕಾರು ಜಖಂ

ನಿರಂತರ ಮಳೆಯಿಂದ ಬೃಹತ್‌ ಮರವೊಂದು ಬುಡಸಮೇತ ಉರುಳಿ ಕಾರಿನ ಮೇಲೆ ಬಿದ್ದಿದೆ. ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ಮುಂಭಾಗದಲ್ಲಿ ಘಟನೆ ನಡೆದಿದೆ. ದಿಲೀಪ ಪವಾರ್ ಎಂಬುವವರಿಗೆ ಸೇರಿದ ಕಾರು ಸಂಪೂರ್ಣ ಜಖಂಗೊಂಡಿದೆ. ಆಸ್ಪತ್ರೆಯಲ್ಲಿದ್ದ ರೋಗಿಯ ಭೇಟಿಗೆ ಬಂದಿದ್ದ ದಿಲೀಪ್ ಪವಾರ್, ಆಸ್ಪತ್ರೆಯ ಮುಂದೆ‌ ಕಾರು ಪಾರ್ಕ್ ಮಾಡಿದ್ದರು. ಈ ವೇಳೆ ಮರ ಬಿದ್ದಿದೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ದಾವಣಗೆರೆಯಲ್ಲಿ ಕೆಸರು ಗದ್ದೆಯಾದ ಶಾಲಾ ಆವರಣ

ಸತತ ಮಳೆಯಿಂದ ಶಾಲಾ ಆವರಣವು ಕೆಸರು ಗದ್ದೆಯಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ನೀಲಕಂಠ ನಗರದಲ್ಲಿ ಘಟನೆ ನಡೆದಿದೆ. ಒಂದನೇ ತರಗತಿ ರಿಂದ ಏಳನೇ ತರಗತಿ ವರೆಗೆ ಶಾಲೆಗೆ ಹೋಗುವ ಮಕ್ಕಳು ಪರದಾಟ ಅನುಭವಿಸುತ್ತಿದ್ದಾರೆ.

ಶಾಲಾ ಆವರಣದಲ್ಲಿ ಮಳೆ ನೀರು ಹೊರ ಹೋಗದೆ ನಿಂತಲ್ಲೇ ನಿಲ್ಲುವಂತಾಗಿದೆ. ಇದರಿಂದಾಗಿ ಮಕ್ಕಳು ಶಾಲೆ ಒಳಗೆ ಹೋಗಲು ಪರದಾಟ ಅನುಭವಿಸುವಂತಾಗಿದೆ. ಮಳೆ ಬಂದರೆ ಸಾಕು ಮಕ್ಕಳು ಶಾಲೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಆವರಣವೆಲ್ಲವೂ ಕೆಸರು ಗದ್ದೆಯಾಗಿದೆ.

ಕೊಡಗಿನ ನದಿ ತಟ್ಟದ ನಿವಾಸಿಗಳಿಗೆ ಎಚ್ಚರಿಕೆ

ಹಾರಂಗಿ ಜಲಾನಯ ಪ್ರದೇಶದಲ್ಲಿ ಮಳೆ ಮುಂದುವರಿದ್ದು, ಒಳಹರಿವು ಪ್ರಮಾಣ ಹೆಚ್ಚಳಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಹರಿಸಲು ಸಿದ್ಧತೆ ನಡೆದಿದ್ದು, ನದಿ ತಟ್ಟದ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚನೆ‌ ನೀಡಲಾಗಿದೆ. 1000 ಕ್ಯೂಸೆಕ್ಸ್ ನೀರು ನದಿಗೆ ಹರಿಸಲು ಚಿಂತನೆ ನಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಾವೇರಿ ನೀರಾವರಿ ನಿಗಮ ಆದೇಶ ಹೊರಡಿಸಿದೆ.

ಜು.9ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಎಲ್ಲಾ ತಾಲೂಕಿನ ಶಾಲಾ-ಕಾಲೇಜಿಗೆ ಜು.9 ರಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ, ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದ್ದು, ಹಾಸನದಲ್ಲಿ ಕಾರೊಂದರ ಮೇಲೆ ಬೃಹತ್‌ ಗಾತ್ರ ಮರ ಬಿದ್ದು ಜಖಂಗೊಂಡರೆ, ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ. ಚಿಕ್ಕೋಡಿಯಲ್ಲಿ ಬಾಬಾ ದರ್ಗಾ ಜಲಾವೃತಗೊಂಡಿದೆ.

VISTARANEWS.COM


on

By

Karnataka Rain Effect
Koo

ಹಾಸನ: ಭಾರಿ ಮಳೆ-ಗಾಳಿಗೆ (Karnataka Rain Effect) ಬೃಹತ್ ಗಾತ್ರದ ಮರವೊಂದು (Tree fall) ಧರೆಗುರುಳಿದೆ. ಬಿದ್ದ ರಭಸಕ್ಕೆ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಹಾಸನದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ರಾಕೇಶ್ ಎಂಬುವವರು ತಮ್ಮ ಕಾರನ್ನು ಮರದ ಕೆಳಗೆ ನಿಲ್ಲಿಸಿದ್ದರು.

karnataka rain effect

ನೋಡನೋಡುತ್ತಿದ್ದಂತೆ ಮರವು ಕಾರಿನ ಮೇಲೆ ಬಿದ್ದು ಪೂರ್ತಿ ಜಖಂಗೊಂಡಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇಲ್ಲದೆ ಇರುವುದರಿಂದ ಅನಾಹುತವೊಂದು ತಪ್ಪಿದೆ. ಸ್ಥಳಕ್ಕೆ ನಗರಸಭೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆಗೆ ಅಡ್ಡಲಾಗಿ, ಕಾರಿನ ಮೇಲೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಇತ್ತ ಕೊಪ್ಪಳದಲ್ಲಿ ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ, ಸೋಮವಾರ ಮಧ್ಯಾಹ್ನದ ಸುಮಾರು ಅರ್ಧಗಂಟೆಗೂ ಹೆಚ್ಚು ಸಮಯ ಅಬ್ಬರಿಸಿದ್ದ.

ದೇವಸ್ಥಾನ ತಡೆಗೋಡೆ ಕುಸಿತ

ಮಂಗಳೂರಿನಲ್ಲಿ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ನಿರಂತರ ಮಳೆಗೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ತಡೆಗೋಡೆ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಬಿದ್ದಿದೆ.

ಭಾರೀ ಗಾಳಿ ಮತ್ತು ಮಳೆಗೆ ತೆಂಗಿನ ಗಿಡದ ಬುಡದ ಮಣ್ಣು ಸಡಿಲಗೊಂಡಿದೆ. ಪರಿಣಾಮ ಕೆಂಪು ಕಲ್ಲಿನ ಐದಾರು ಅಡಿ ಎತ್ತರದ ತಡೆಗೋಡೆ ಕುಸಿದಿದೆ. ಪರಿಣಾಮ ವಿದ್ಯುತ್ ಕಂಬ, ಬಾವಿ ಹಾಗೂ ದೇವಸ್ಥಾನದ ಪಾರ್ಕಿಂಗ್ ಜಾಗಕ್ಕೆ ಹಾನಿಯಾಗಿದೆ. ಯಾವುದೇ ವಾಹನ ಪಾರ್ಕ್ ಮಾಡದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ. ಸದ್ಯ ಮಣ್ಣು ತೆಗೆದು ಪ್ಲಾಸ್ಟಿಕ್ ಟರ್ಪಾಲ್ ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಚಿಕ್ಕೋಡಿಯಲ್ಲಿ ಬಾಬಾ ದರ್ಗಾಕ್ಕೆ ನುಗ್ಗಿದ ನೀರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಶುರುವಾಗಿದೆ. ದೂದಗಂಗಾ ನದಿಯು ಉಕ್ಕಿ ಹರಿದಿದ್ದು, ಯಕ್ಸಂಬಾ ಬಳಿಯ ಮುಲ್ಕಾನಿ ಬಾಬಾ ದರ್ಗಾಕ್ಕೆ ನೀರು ನುಗ್ಗಿ ಜಲಾವೃತಗೊಂಡಿದೆ. ನದಿಯಲ್ಲಿ ಇನ್ನೂ ಆರು ಅಡಿ ನೀರು ಬಂದರೆ ಹಲವು ಗ್ರಾಮಕ್ಕೆ ನೀರು ನುಗ್ಗುವ ಭೀತಿ ಇದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಹಾಸನದಲ್ಲೂ ಅಬ್ಬರಿಸುತ್ತಿರುವ ಮಳೆ

ಹಾಸನ ಜಿಲ್ಲೆಯ ವಿವಿಧೆಡೆ ಸೋಮವಾರ ಭಾರಿ ಮಳೆಯಾಗಿದೆ. ಮಲೆನಾಡು ಭಾಗವಾದ ಸಕಲೇಶಪುರ, ಆಲೂರು, ಬೇಲೂರಿನಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ವಾಹನ ಸವಾರರು, ವಿದ್ಯಾರ್ಥಿಗಳು ಪರದಾಡಿದರು. ಇನ್ನೂ ಚಿಕ್ಕಮಗಳೂರು ಭಾಗದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನದ ಗೊರೂರಿನಲ್ಲಿರುವ ಜೀವನದಿ ಹೇಮಾವತಿ ನದಿಗೆ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಉತ್ತರ ಕನ್ನಡದ ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ವಿದ್ಯುತ್ ಉತ್ಪಾದನೆ ಹಾಗೂ ಕ್ರಸ್ಟ್ ಗೇಟ್ ಸೇರಿ 31,000 ಕ್ಯೂಸೆಕ್ಸ್‌ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. 34.50 ಮೀ ಗರಿಷ್ಠ ಸಾಮರ್ಥ್ಯದ ಕದ್ರಾ ಜಲಾಶಯದಿಂದ 4 ಗೇಟ್‌ಗಳಿಂದ 10,600 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

karnataka rain Kadhra dam

ಸದ್ಯ ಜಲಾಶಯದಲ್ಲಿ 31 ಮೀ ನೀರಿನ ಸಂಗ್ರಹ ತಲುಪಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಜಲಾಶಯದಲ್ಲಿ 30 ಮೀ ನೀರು ಸಂಗ್ರಹಕ್ಕೆ ನಿಗಧಿಪಡಿಸಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದ ಜಲಾಶಯದ ಒಳಹರಿವು ಹೆಚ್ಚಿದ್ದು,22,000 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ. ಜಲಾಶಯದಿಂದ ವಿದ್ಯುತ್ ಉತ್ಪಾದಿಸಿ 21,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka Rain : ಸತತ ಮಳೆಯಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಕಂಗಲಾಗಿದ್ದಾರೆ. ಉಡುಪಿಯಲ್ಲಿ ನೆರೆಹಾವಳಿಯಿಂದ ಮಕ್ಕಳು ಶಾಲೆಗೆ ಹೋಗಲು ಆಗದೆ ಪರದಾಡುತ್ತಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ಹಿರೇಕೊಳಲೆ ಕೆರೆ ಭರ್ತಿಯಾಗಿದ್ದು, ಗಾಳಿಗೆ ವಿದ್ಯುತ್‌ ತಂತಿ ಮೇಲೆ ಮರ ಬಾಗಿ ಸಮಸ್ಯೆ (Rain Effect) ಸೃಷ್ಟಿಯಾಗಿದೆ.

VISTARANEWS.COM


on

By

Karnataka Rain
Koo

ಉಡುಪಿ: ಉಡುಪಿಯ ಬೈಂದೂರಿನಲ್ಲಿ ಮಳೆಗಾಲದ (Karnataka Rain) ಗೋಳು ಮುಗಿಯುವುದಿಲ್ಲ. ಮಳೆ (Rain News) ಬಂದರೆ ಶಾಲೆಗೆ ರಜೆ ಯಾಕೆ ಎನ್ನುವವರು ಈ ಸುದ್ದಿಯನ್ನು ಓದಲೇಬೇಕು. ಇಲ್ಲಿ ಜೋರಾಗಿ ಮಳೆ ಬಂದರೆ ಮಕ್ಕಳು ಶಾಲೆಗೆ ಗೈರು ಹಾಜರಾತಿಯೇ ಗತಿ. ಯಾಕಂದರೆ ಮಳೆ ಬಂದು ಹೋದ ಮೇಲೆ ನೆರೆಯಿಂದಾಗಿ ಹಳ್ಳ ದಾಟಿಕೊಂಡು ಶಾಲೆಗಳಿಗೆ ಹೋಗಲು ಮಕ್ಕಳು ಪರದಾಡಬೇಕಾಗುತ್ತದೆ.

ಉಡುಪಿಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಬ್ಬಾರ್ ತಡಿಯಲ್ಲಿ 25 ಮನೆಗಳಿದ್ದು, ಮಳೆ ಬಂದರೆ ಮನೆಯಲ್ಲೇ ಲಾಕ್‌ ಆಗಬೇಕಾಗುತ್ತದೆ. ಮುಖ್ಯಪೇಟೆ ಸಿದ್ದಾಪುರಕ್ಕೆ ತೆರಳಬೇಕಾದರೂ ಸಂಕಷ್ಟ ಎದುರಾಗುತ್ತದೆ. ನೀರಿನ ಪ್ರಮಾಣ ಇಳಿಕೆ ಅದರಷ್ಟೇ ಹಳ್ಳ ದಾಟಿ ಶಾಲೆಗೆ ಹೋಗಬೇಕಾಗುತ್ತದೆ.

ಇತ್ತ ಬೆಳಗ್ಗೆ ನೀರು ಇಳಿಕೆ ಆದರೆ ಸಂಜೆಗೆ ಏರಿಕೆ ಆಗುವ ಆತಂಕ ಇದೆ. ಹೀಗಾಗಿ ಶಾಲೆಗೆ ಕಳುಹಿಸಲು ಪೋಷಕರು ಮೀನಾಮೇಷ ಎಣಿಸುತ್ತಾರೆ. ಮಳೆ ಬಂದರೆ ರಜೆ ನೀಡಿ ಎನ್ನುತ್ತಿದ್ದಾರೆ. ನೌಕರಿಗೆ ತೆರಳುವವರಿಗೂ ಈ ಹಳ್ಳದ್ದೇ ಸಮಸ್ಯೆ ಇದೆ. ಇದುವರೆಗೂ ಕಿರು ಸೇತುವೆ ನಿರ್ಮಿಸಲು ಸಾಧ್ಯವಾಗಿಲ್ಲ.

ಮಳೆಗೆ ಸೇತುವೆ ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ದೂದಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಮೊದಲೇ ನಾಲ್ಕು ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿದೆ.

ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಇರುವ ಕೆಳ ಹಂತದ ಸೇತುವೆ, ದೂದಗಂಗಾ ನದಿಯ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಸೇರಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಮಾಂಜರಿ – ಭಾವನ ಸೌಂದತ್ತಿ ಸೇತುವೆಯೂ ಮುಳುಗಡೆಯಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳ ಮೂಲಕ ಜನರು ಸಂಚಾರಿಸುವಂತಾಗಿದೆ. ಕೃಷ್ಣಾ ನದಿಗೆ ಸುಮಾರು 63 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರಿನ ಒಳಹರಿವು ಬೀಡಲಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಮನವಿ ಮಾಡಿದೆ.

ಹಿರೇಕೊಳಲೆ ಕೆರೆ ಭರ್ತಿ! ವಿದ್ಯುತ್‌ ತಂತಿ ಮೇಲೆ ಬಾಗಿದ ಮರ

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆಯಿಂದಾಗಿ ಹಿರೇ ಕೊಳಲೆ ಕೆರೆ ತುಂಬುವ ಹಂತಕ್ಕೆ ತಲುಪಿದೆ. ಚಿಕ್ಕಮಗಳೂರು ನಗರಕ್ಕೆ ನೀರು ಪೂರೈಸುವ ಬೃಹತ್ ಕೆರೆ ಇದಾಗಿದ್ದು, ಕೆರೆಗೆ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇತ್ತ ವೀಕ್ಷಣಾ ಗೋಪುರ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವೀಕ್ಷಣ ಗೋಪುರದ ಬಳಿ ಪ್ರವಾಸಗರಿಗೆ ನಿಷೇಧ ಹೇರಲಾಗಿದೆ. ಪೊಲೀಸರು ಗೋಪುರದ ಹಾದಿಗೆ ಅಡ್ಡಲಾಗಿ ಬೇಲಿ ಹಾಕಿದ್ದಾರೆ. ಕೆರೆ ಕೋಡಿ ಬೀಳಲು ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ಅಡಿಕೆ ಮರಗಳು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ತಂತಿಯ ಮೇಲೆ ಬಾಗಿವೆ. ಪರಿಣಾಮ ವಿದ್ಯುತ್ ತಂತಿಗೆ ಹಾನಿಯಾಗಿವೆ. ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದ ಬಳಿ ಘಟನೆ ನಡೆದಿದೆ. ಮತ್ತಷ್ಟು ಅಡಿಕೆ ಮರಗಳು ವಿದ್ಯುತ್ ತಂತಿಯ ಮೇಲೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Self Harming: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿಯ ನವೋದಯ ಶಾಲೆಯಲ್ಲಿ 8 ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
Koo

ಚಿತ್ರದುರ್ಗ: ನವೋದಯ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ.

ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ನಿವಾಸಿಯಾದ ಪ್ರೇಮ ಸಾಗರ್‌ 8ನೇ ತರಗತಿ ಓದುತ್ತಿದ್ದ. ಆದರೆ, ಕೊಠಡಿಯಲ್ಲಿ ಸೋಮವಾರ ನೇಣಿಗೆ ಶರಣಾಗಿದ್ದಾನೆ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೇಮ ಸಾಗರ್ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆ

ದಾವಣಗೆರೆ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಗ್ರಾಮದಲ್ಲಿ ನಡೆದಿದೆ. ಬೆಳಗುತ್ತಿ ಗ್ರಾಮದ ಸೋಮಸುಂದರ ರಾಜ್ ಅರಸ್ (60) ಮೃತ ರೈತ.

ಸತತ ಮಳೆ ಕೊರತೆ ಹಾಗೂ ಕೃಷಿಗೆ ಮಾಡಿದ ಸಾಲದಿಂದ ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗುತ್ತಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2 ಲಕ್ಷ, ಎಲ್‌ಎನ್‌ಟಿ ಫೈನಾನ್ಸ್‌ನಲ್ಲಿ 1 ಲಕ್ಷ, ಗ್ರಾಮೀಣ ಕೂಟ ಫೈನಾನ್ಸ್‌ನಲ್ಲಿ 1 ಲಕ್ಷ, ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ಸೇರಿದಂತೆ ಕೈ ಗಡ ಸೇರಿ 10 ಲಕ್ಷ ರೂ. ಸಾಲ ಮಾಡಿದ್ದರು. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಿಪ್ಪರ್ ಹರಿದು ಬೈಕ್ ಸವಾರ ಸಾವು

ಕೊಪ್ಪಳ: ಟಿಪ್ಪರ್ ಹರಿದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಕಾಸನಕಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿಯಾಗಿದೆ. ಈ ವೇಳೆ ಟಿಪ್ಪರ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ.

ಇದನ್ನೂ ಓದಿ | Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Student death Nursing college student commits suicide in Bengaluru

ಬೆಂಗಳೂರು: ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ (Student Death) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಪಶ್ಚಿಮ ಬಂಗಾಳ‌ ಮೂಲದ ದಿಯಾ ಮಂಡೋಲ್‌ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Continue Reading
Advertisement
PM Modi Russia Visit
ವಿದೇಶ4 hours ago

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

LKG UKG
ಪ್ರಮುಖ ಸುದ್ದಿ5 hours ago

LKG, UKG: ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

IND vs SL
ಕ್ರೀಡೆ5 hours ago

IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ರೋಹಿತ್​-ಕೊಹ್ಲಿಗೆ ವಿಶ್ರಾಂತಿ

Ramniwas Rawat
ದೇಶ6 hours ago

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Paris Olympics 2024
ಕ್ರೀಡೆ6 hours ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ6 hours ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ7 hours ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ7 hours ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ7 hours ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ7 hours ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ11 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ13 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ15 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು17 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌