Pavagada News : ಸೋತಿರುವ ಆಂಜನೇಯರನ್ನು ಎಂಎಲ್‌ಸಿ ಮಾಡಿ ಸಚಿವರನ್ನಾಗಿಸಲು ಒತ್ತಾಯ - Vistara News

ಚಿತ್ರದುರ್ಗ

Pavagada News : ಸೋತಿರುವ ಆಂಜನೇಯರನ್ನು ಎಂಎಲ್‌ಸಿ ಮಾಡಿ ಸಚಿವರನ್ನಾಗಿಸಲು ಒತ್ತಾಯ

ಹೊಳಲ್ಕೆರೆ ಕ್ಷೇತ್ರದಿಂದ ಸೋತಿರುವ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಆಂಜನೇಯ ಅವರನ್ನು ಎಂಎಲ್‌ಸಿ ಮಾಡಿ ಸಚಿವರನ್ನಾಗಿಸಬೇಕು (New Government) ಎಂದು ದಲಿತ ಸಂಘಟನೆಗಳು ಒತ್ತಾಯಿಸಿವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾವಗಡ: ಚಿತ್ರದುರ್ಗದ ಹೊಳಲ್ಕೆರೆ ಕ್ಷೇತ್ರದಲ್ಲಿ ಸೋಲು ಕಂಡಿರುವ ಕಾಂಗ್ರೆಸ್‌ ಅಭ್ಯರ್ಥಿ ಎಚ್‌. ಆಂಜನೇಯ ಅವರನ್ನು ಎಂಎಲ್‌ಸಿಯಾಗಿ ಮಾಡಿ ಸಚಿವ ಸ್ಥಾನ (New Government) ಕೊಡಬೇಕು ಎಂದು ದಲಿತ ಸಂಘಟನೆಗಳು ಒತ್ತಾಯಿಸಿವೆ.

ಈ ಕುರಿತಾಗಿ ಪಾವಗಡ ಪಟ್ಟಣದ ಎಸ್.ಎಸ್.ಕೆ.ಭವನದಲ್ಲಿ ದಲಿತ ಮುಖಂಡ ಹಾಗೂ ವಕೀಲರ ಸಂಘದ ಅಧ್ಯಕ್ಷ ಎಚ್.ಶೇಷ ನಂದನ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಈ ಹಿಂದೆ 2013-14ರ ಚುನಾವಣೆಯಲ್ಲಿ ಡಾ. ಪರಮೇಶ್ವರ್‌ಗೆ ನೀಡಿದಂತಹ ರೀತಿಯಲ್ಲಿ ಈ ಬಾರಿ ಹೊಳಲ್ಕೆರೆ ಕ್ಷೇತ್ರದಲ್ಲಿ ಸೋತಿರುವ ಎಚ್. ಆಂಜನೇಯ ಅವರಿಗೂ ಸಹ ಎಂಎಲ್ಸಿ ಮಾಡಿ ಸಚಿವ ಸ್ಥಾನ ನೀಡಬೇಕು ಎಂದು ಅವರು ಕೇಳಿಕೊಂಡಿದ್ದಾರೆ. ಈ ಬಗ್ಗೆ ಗಮನ ಹರಿಸಬೇಕು ಎಂದು ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Karnataka Election : ನಾನಾಗಿ ಕಣಕ್ಕಿಳಿದಿಲ್ಲ, ಚಂದ್ರಪ್ಪರನ್ನು ಸೋಲಿಸಲು ಜನರೇ ನನ್ನನ್ನು ನಿಲ್ಲಿಸಿದರು ಎಂದ ಕೈ ಅಭ್ಯರ್ಥಿ ಎಚ್‌.ಆಂಜನೇಯ
ಡಿ.ಎಸ್.ಎಸ್‌ ಮುಖಂಡ ನಾರಾಯಣಪ್ಪ ಮಾತನಾಡಿ, “ಈ ಹಿಂದೆ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಆಂಜನೇಯ ಅವರು ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ಉತ್ತಮ ಕಾರ್ಯ ಮಾಡಿದ್ದರು. ಹಾಗೆಯೇ ವಸತಿ ಶಾಲೆಗಳನ್ನು ನಿರ್ಮಾಣ ಮಾಡಿದಂತಹ ಕೀರ್ತಿ ಆಂಜನೇಯ ಅವರಿಗೆ ಸೇರುತ್ತದೆ. ಅವರ ಅವಧಿಯಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ಸಹ ಆಗಿವೆ. ಎಚ್. ಆಂಜನೇಯವರು ಹಿರಿಯ ಮುತ್ಸದ್ದಿ. ಪ್ರಾಮಾಣಿಕವಾಗಿ ಪಕ್ಷಕ್ಕೆ ದುಡಿದಿದ್ದಾರೆ. ಹಾಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು” ಎಂದು ಕೇಳಿಕೊಂಡಿದ್ದಾರೆ.

ಎ. ಎಸ್. ಯೋಗಶ್ ಮಾತನಾಡಿ, “ಈ ಹಿಂದೆ ಎಚ್. ಆಂಜನೇಯ ಅವರು ಅಧಿಕಾರದಲ್ಲಿ ಇದ್ದಾಗ ಸಾವಿರಾರು ಕೋಟಿ ಅನುದಾನ ನೀಡಿ ಅಲ್ಪಸಂಖ್ಯಾತರ ಹಾಗೂ ದಲಿತರ ಕಾಲೋನಿಗಳಲ್ಲಿ ಉತ್ತಮ ರಸ್ತೆಗಳು, ಚರಂಡಿಗಳನ್ನು ನಿರ್ಮಾಣ ಮಾಡಿದ್ದರು” ಎಂದು ಹೇಳಿದರು.

ಇದನ್ನೂ ಓದಿ: Karnataka Election 2023: ಸಿಎಂ ಬಳಿಕ ಸಂಪುಟ ಪ್ಲ್ಯಾನ್‌; ಸಚಿವರ ಆಯ್ಕೆಗೆ ಹೈಕಮಾಂಡ್‌ 10 ಅಂಶ ಸೂತ್ರ
ಈ ವೇಳೆ ನಲಿಗಾನಹಳ್ಳಿ ದುಗ್ಗಪ್ಪ, ವೈ.ಎನ್.ಹೊಸಕೋಟೆ ಅಂಜಿಬಾಬು, ಕಾಂಗ್ರೆಸ್ ಪರಿಶಿಷ್ಟ ಪಂಗಡದ ನಗರ ಅಧ್ಯಕ್ಷ ಶ್ರೀನಿವಾಸ್ ಪ್ರಸಾದ್, ಗಂಗಧರ್, ಮಾರಪ್ಪ, ವಿಜಯ್ ಕುಮಾರ್, ತಿಮ್ಮಾರಾಜು, ನಂದೀಶ್, ಮೋಹನ್ ಕುಮಾರ್, ಹನಮಂತರಾಯಪ್ಪ, ಅಳಪ್ಪ, ಅಂಜನ್, ಮದ್ದೇಟಪ್ಪ ‌ಇತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಚಿತ್ರದುರ್ಗ

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

Theft Case : ಚಿತ್ರದುರ್ಗದಲ್ಲಿ ಅನುಮಾನಸ್ಪಾದವಾಗಿ ಓಡಾಡುತ್ತಿದ್ದ ಬೊಲೆರೋ ವಾಹನವನ್ನು ಅಡ್ಡಗಟ್ಟಲು ಮುಂದಾದ ಪೊಲೀಸ್‌ ಜೀಪ್‌ ಮೇಲೆ ಕಳ್ಳರು ಕಲ್ಲು ತೂರಿ ಎಸ್ಕೇಪ್‌ ಆಗಿದ್ದರು. ಇದೀಗ ಪರಾರಿ ಆಗಿದ್ದ ಆಂಧ್ರ ಗ್ಯಾಂಗ್‌ನ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

theft case
Koo

ಚಿತ್ರದುರ್ಗ : ಪೊಲೀಸರ ಮೇಲೆ (Theft Case) ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ವೊಂದು ಎಸ್ಕೇಪ್‌ ಆಗಿತ್ತು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಘಟನೆ ನಡೆದಿತ್ತು. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದರು. ಇದೀಗ ಒಂದೇ ವಾರದಲ್ಲಿ ಪ್ರಕರಣ ಭೇದಿಸಿದ ನಾಯಕನಹಟ್ಟಿ ಪೊಲೀಸರು, ಆಂಧ್ರ ಗ್ಯಾಂಗ್‌ನ ಓರ್ವನನ್ನು ಸೆರೆಹಿಡಿದಿದ್ದಾರೆ. ‌

ಆಂಧ್ರ ಗ್ಯಾಂಗ್‌ವೊಂದು ಕಳೆದ ಶನಿವಾರ ರಾತ್ರಿ ನಾಯಕನಹಟ್ಟಿಯಲ್ಲಿ ಹಂದಿ ಕಳ್ಳತನಕ್ಕೆ ಬಂದಿತ್ತು. ಹಂದಿ ಕಳ್ಳತನಕ್ಕೆ ಬಂದಿದ್ದ ಒರ್ವ ಶಂಕಿತ ಆರೋಪಿ ಅರೆಸ್ಟ್ ಆಗಿದ್ದ. ಆಂಧ್ರ ಮೂಲದ ಆನಂತಪುರ ನಗರದ ರಮಣ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುದಾಪುರ ಗ್ರಾಮದಲ್ಲಿ ಸ್ಥಳ ಮಹಜರ್ ನಡೆಸಿದ್ದಾರೆ.

ಬೊಲೆರೋ ವಾಹನದಲ್ಲಿ ಹಂದಿ ಕಳ್ಳತನಕ್ಕೆ ಬಂದಿದ್ದ 7 ಮಂದಿ ಕಳ್ಳರು ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ ಎಸ್ಕೇಪ್‌ ಆಗಿದ್ದರು. ಮಾತ್ರವಲ್ಲ ಹಿಡಿಯಲು ಬಂದ ಪೊಲೀಸರಿಗೆ ಕಲ್ಲು ತೂರಿದ್ದರು. ಈ ವೇಳೆ ಪಿಎಸ್‌ಐ ಶಿವಕುಮಾರ್ 4 ಸುತ್ತು ಏರ್ ಫೈರ್ ಮಾಡಿ, 25 ಕಿ.ಮೀ ದೂರ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದರು. ಕೊನೆಗೂ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜತೆಗೆ ಕಳ್ಳತನಕ್ಕೆ ಬಳಸಿದ್ದ ಬೊಲೆರೋ ಪಿಕಪ್ ವಾಹನ ಸೀಸ್ ಮಾಡಿದ್ದಾರೆ. ಉಳಿದ 7 ಮಂದಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಂದಿ ಕಳ್ಳರು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಪೊಲೀಸ್‌ ಜೀಪ್ ಮೇಲೆ ಕಲ್ಲು ತೂರಿ ಕಳ್ಳರು ಕಾಲ್ಕಿತ್ತಿದ್ದರು. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದರು. ಚಳ್ಳಕೆರೆ ತಾಲ್ಲೂಕಿನ ಕುದಾಪುರ ಬಳಿ ಕಳ್ಳರನ್ನು ಹಿಡಿಯಲು ಪೊಲೀಸರು ಬೊಲೆರೋ ವಾಹನವನ್ನು ಅಡ್ಡ ಹಾಕಿದ್ದರು. ಈ ವೇಳೆ ಕಳ್ಳರು ಪೊಲೀಸರ ಮೇಲೆ ಕಲ್ಲು ತೂರಿದ್ದರು. ಏಕಾಏಕಿ ಕಳ್ಳರು ದಾಳಿ ಮಾಡಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಏರ್ ಫೈರಿಂಗ್ ಮಾಡಿದ್ದರು.

ಇನ್ನೂ ಕಳ್ಳರು ಕಲ್ಲು ತೂರಿದ್ದರಿಂದ ಪೊಲೀಸರ ಜೀಪಿನ ಗ್ಲಾಸ್ ಡ್ಯಾಮೇಜ್ ಆಗಿತ್ತು. ಸುಮಾರು 7 ಮಂದಿ ಗ್ಯಾಂಗ್‌ ಆಂಧ್ರಪ್ರದೇಶದ ರಿಜಿಸ್ಟ್ರೇಷನ್‌ ಹೊಂದಿದ್ದ ಬೊಲೆರೋ ವಾಹನದಲ್ಲಿ ಬಂದಿದ್ದರು. ಇದನ್ನೂ ಗಮನಿಸಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು, ತಡೆದು ಪರಿಶೀಲನೆಗೆ ಮುಂದಾಗಿದ್ದರು. ಈ ವೇಳೆ ಗಾಡಿ ನಿಲ್ಲಿಸದೇ ಖತರ್ನಾಕ್‌ ಕಳ್ಳರು, ಪೊಲೀಸರಿಗೆ ಕಲ್ಲು ತೂರಿದ್ದರು.

ದರೋಡೆಕೋರರು ಎಂಬ ಅನುಮಾನದಿಂದ ಪೊಲೀಸರು ಅಲರ್ಟ್ ಆಗಿದ್ದರು. ಬೊಸೇ ದೇವರಹಟ್ಟಿ, ಕೋಟೆ ನಗರ ಒಳ ಮಾರ್ಗದಲ್ಲಿ ಕುದಾಪುರ ಕಡೆ ಬರುತ್ತಿದ್ದ ಕಳ್ಳರಿಗೆ, ಪೊಲೀಸರು ಮನಮಯ್ಯನಹಟ್ಟಿ ಕುದಾಪುರ ಒಳ ಮಾರ್ಗದಲ್ಲಿ ಎದುರಾಗಿದ್ದರು. ನಾಯಕನಹಟ್ಟಿ ಠಾಣೆ ಪಿಎಸ್‌ಐ ಶಿವಕುಮಾರ್ ತಂಡ ಬೊಲೆರೋ ವಾಹನದಲ್ಲಿ ಬಂದಿದ್ದ ಕಳ್ಳರನ್ನು ಹಿಡಿಯಲು ಯತ್ನಿಸಿದ್ದರು. ಆದರೆ ಹಿರೇಹಳ್ಳಿ, ಬೇಡರೆಡ್ಡಿಹಳ್ಳಿ, ಬುಕ್ಕಂಬೂದಿ ಮಾರ್ಗದಲ್ಲಿ ಕಳ್ಳರು ಎಸ್ಕೇಪ್ ಆಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

Elephant attack : ಭಾರಿ ಮಳೆಗೆ (Karnataka Rain) ಜನರು ತತ್ತರಿಸಿ ಹೋಗಿದ್ದಾರೆ. ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ ಶುರುವಾಗಿದೆ. ಇತ್ತ ನದಿಗಳು ಉಕ್ಕಿ ಹರಿಯುತ್ತಿದ್ದು 150 ಮನೆಗಳು ಜಲಾವೃತಗೊಂಡಿದೆ.

VISTARANEWS.COM


on

By

Elephant attack
Koo

ಚಿಕ್ಕಮಗಳೂರು: ಮಳೆ (Karnataka Rain) ಮಧ್ಯೆ ಮಲೆನಾಡಲ್ಲಿ ಕಾಡಾನೆಗಳ ಕಾಟ (Elephant attack) ಶುರುವಾಗಿದೆ. 18 ಕಾಡಾನೆಗಳ ಹಿಂಡಿನಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಪುರ, ಗಬ್ಬಳ್ಳಿ, ಕಾರ್ಬೈಲು ಗ್ರಾಮ ಸುತ್ತಮುತ್ತ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗುತ್ತಿದೆ.

ದಿನಕ್ಕೊಂದು ಹಳ್ಳಿಯಲ್ಲಿ ಕಾಡಾನೆಗಳು ಕಾಣಿಸುಕೊಳ್ಳುತ್ತಿದ್ದು, ಕಾಫಿ ತೋಟಗಳನ್ನು ನಾಶ ಮಾಡುತ್ತಿವೆ. ಮಳೆಯಿಂದ ನಾನಾ ಅವಾಂತರವೇ ಸೃಷ್ಟಿಯಾಗಿದೆ. ಇದೀಗ ಮತ್ತೆ ಕಾಡಾನೆಗಳ ದಾಳಿಯಿಂದ ಜನರು ಕಂಗಾಲಾಗಿದದಾರೆ. ಆನೆಗಳನ್ನ ಓಡಿಸುವಂತೆ ಮೂಡಿಗೆರೆಯ ಗ್ರಾಮೀಣ ಭಾಗದ ಜನರು ಆಗ್ರಹಿಸಿದ್ದಾರೆ.

ಮಳೆಗೆ ಮನೆಗಳಿಗೆ ನುಗ್ಗುತ್ತಿರುವ ಹಾವುಗಳು

ಕೊಪ್ಪಳದಲ್ಲಿ ವ್ಯಾಪಕ ಮಳೆಗೆ ಆಶ್ರಯ ಪಡೆಯಲು ಮನೆಗಳಿಗೆ, ಗುಡಿಸಲಿಗೆ ಹಾವುಗಳು ನುಗ್ಗುತ್ತಿವೆ. ಹಾವುಗಳ ರಕ್ಷಣೆ ಮಾಡಿ ಉರಗ ಪ್ರೇಮಿ ಅನಿಲ್ ಕಾಡಿಗೆ ಬಿಡುತ್ತಿದ್ದಾರೆ. 1,500ಕ್ಕೂ ಹೆಚ್ಚು ಹಾವುಗಳ ರಕ್ಷಣೆ ಮಾಡಲಾಗಿದೆ. ಕೊಪ್ಪಳ ತಾಲೂಕಿ ಹಿಟ್ನಾಳ ಗ್ರಾಮದ ಸ್ನೇಕ್ ಅನಿಲ್ ಅವರು, ಮಳೆಗಾಲದಲ್ಲಿ ಹೆಚ್ಚು ಹಾವುಗಳ ರಕ್ಷಣೆ ಮಾಡಿ ಕಾಡಿಗೆ ಬಿಡುತ್ತಾರೆ. ನಾಗರಹಾವು, ರಸೆಲ್ ವೈಪರ್, ಕಾಮನ್ ಕ್ರೇಟ್, ಕೇರೆ ಹಾವು, ತೋಳದ ಹಾವು, ನೀರು ಹಾವು, ಚೆಕ್ ಕೀಲ್ ಬ್ಯಾಕ್ಸ್ ಹಾವುಗಳ ರಕ್ಷಣೆ ಮಾಡಲಾಗಿದೆ.

ಭಾರಿ ಮಳೆಗೆ 150 ಮನೆಗಳು ಜಲಾವೃತ

ಘಟಪ್ರಭಾ ನದಿ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮ ಪತರಗುಟ್ಟಿದೆ. ಇದೊಂದೇ ಗ್ರಾಮದಲ್ಲಿ ಬೆಳಗಾಗುವಷ್ಟರಲ್ಲಿ 150 ಮನೆಗಳು ಜಲಾವೃತಗೊಂಡಿದೆ. ಗ್ರಾಮದಲ್ಲಿರುವ ಚರ್ಚ್‌ವರೆಗೂ ನೀರು ನುಗ್ಗಿದೆ. ಮನೆಗೆ ನೀರು ಬರುತ್ತಿದ್ದಂತೆ ಸಾಮಾಗ್ರಿಗಳನ್ನು ಬಿಟ್ಟು ಜನರು ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರಕ್ಕೆ ನೆರೆ ಸಂತ್ರಸ್ತರ ಒತ್ತಾಯಿಸಿದ್ದಾರೆ. ನಮಗೆ ಪರಿಹಾರ ಬೇಡ ಮನೆಗಳನ್ನು ಕಟ್ಟಿಸಿಕೊಡಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

ಹರಿಯುವ ನೀರಿನಲ್ಲಿ ಪಂಪ್‌ಸೆಟ್‌ ತಂದ ರೈತರು

ನದಿ ತೀರದಲ್ಲಿ ಇಟ್ಟಿದ್ದ ಮೋಟಾರ್ ಪಂಪ್‌ಸೆಟ್‌ಗಳನ್ನು ಹೊರ ತೆಗೆಯಲು ರೈತರು ಹರಸಾಹಸ ಪಡುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಚನ್ನೂರು ಗ್ರಾಮದ ರೈತರು ಕಳೆದ ಎರಡು ತಿಂಗಳ ಹಿಂದೆ ನೀರು ಇಲ್ಲದೇ ಇದ್ದಾಗ, ನದಿ ಸಮೀಪ ಪಂಪ್ ಸೆಟ್ ಬಿಟ್ಟಿದ್ದರು. ಈಗ ನದಿಗೆ ನೀರು ಹರಿದು ಬರುತ್ತಿದ್ದು, ಪಂಪ್ ಸೆಟ್‌ಗಳು ಕೊಚ್ಚಿ ಹೋಗುವ ಆತಂಕವಿದೆ. ಈ ಕಾರಣಕ್ಕೆ ತೆಪ್ಪದ ಮೂಲಕ ತೆರಳಿ ಪಂಪ್ ಸೆಟ್ ತಂದಿದ್ದಾರೆ. ಹರಿಯುವ ನದಿ ನೀರಲ್ಲೇ ಜೀವದ ಹಂಗು ತೊರೆದು ಪಂಪ್ ಸೆಟ್ ಗಳನ್ನು ತಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

Theft case : ರಾತ್ರೋರಾತ್ರಿ ಪೊಲೀಸ್‌ವೊಬ್ಬರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕದ್ದಿದ್ದಾರೆ. ಕಳ್ಳರು ಇರುವಾಗಲೇ ಮನೆ ಮಾಲೀಕರು ಬಂದಾಗ ಚಾಕು ಚೂರಿ ತೋರಿಸಿ ಕಾಲ್ಕಿತ್ತಿದ್ದಾರೆ.

VISTARANEWS.COM


on

By

theft case
Koo

ಮೈಸೂರು: ತಡರಾತ್ರಿ ಮನೆ ಬೀಗ ಮುರಿದ ಕಳ್ಳರು (theft Case) ತಮ್ಮ ಕೈ ಚಳಕ ತೋರಿಸಿದ್ದಾರೆ. ಮೈಸೂರಿನ ಜೆ.ಪಿ ನಗರದ ಎರಡನೇ ಹಂತದಲ್ಲಿ ಘಟನೆ ನಡೆದಿದೆ. ಪೊಲೀಸರ ಮನೆಗೆ ನುಗ್ಗಿದ ಕಳ್ಳರು ಸಿನಿಮೀಯ ರೀತಿಯಲ್ಲಿ ಕದಿಯಲು ಮುಂದಾಗಿದ್ದರು. ಆದರೆ ಅವರ ಟೈಂ ಕೈಕೊಟ್ಟಿತ್ತು ಕಳ್ಳರು ಮನೆಯಲ್ಲಿರುವಾಗಲೇ ಮಾಲೀಕರು ಮನೆಗೆ ವಾಪಸ್‌ ಆಗಿದ್ದರು.

ಮನೆ ಮಾಲೀಕರನ್ನು ಕಂಡು ಗಾಬರಿಗೊಂಡ ಕಳ್ಳರು ಮಾರಾಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಂದಿಗೆಲ್ಲ ಚಾಕು ತೋರಿಸಿ ಎಸ್ಕೇಪ್ ಆಗಿದ್ದಾರೆ. ಎಸ್ಕೇಪ್ ಆಗುವ ವೇಳೆ ಕಳ್ಳತನಕ್ಕೆ ಬಳಸಿದ್ದ ಕಬ್ಬಿಣದ ರಾಡ್, ಸಲಾಕೆ ,ಎಲೆಕ್ಟ್ರಿಕ್ ಸಾಮಾನು, ಎರಡು ಬ್ಯಾಗ್ ಸೇರಿದಂತೆ ತಮ್ಮ ಲಗೇಜ್‌ಗಳನ್ನು ಬಿಟ್ಟು ಓಡಿಹೋಗಿದ್ದಾರೆ.

ಕಳ್ಳರು ಓಡಿ ಹೋದ ಬಳಿಕ ಮನೆಯೊಳಗೆ ತೆರಳಿ ನೋಡಿದಾಗ 135 ಗ್ರಾಂಗೂ ಅಧಿಕ ಚಿನ್ನಾಭರಣ ದೋಚಿರುವುದು ಖಚಿತವಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡಸಿದ್ದಾರೆ. ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ: Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

ಚಳ್ಳಕೆರೆ ಪೊಲೀಸರ ವಿರುದ್ಧವೇ ದೂರು ಕೊಟ್ಟ ಯುವಕ

ಯುವಕನೊಬ್ಬ ಚಳ್ಳಕೆರೆ ಪೊಲೀಸರ ವಿರುದ್ಧ ದೂರು ಕೊಟ್ಟಿದ್ದಾನೆ. ಚಿತ್ರದುರ್ಗದ ಚಳ್ಳಕೆರೆ ಡಿವೈಎಸ್‌ಪಿ ರಾಜಣ್ಣ ಅವರಿಗೆ ಪೃಥ್ವಿ ಎಂಬಾತ ದೂರು ನೀಡಿದ್ದಾನೆ. ದೂರಿನ ಪ್ರಕಾರ ಪೃಥ್ವಿ ಪ್ರವಾಸಕೆಂದು ಹೋದಾಗ ಆತನ ಫೋನ್‌ ಸ್ವಿಚ್ಡ್‌ ಆಫ್‌ ಆಗಿತ್ತು. ಇದರಿಂದ ಗಾಬರಿಗೊಂಡ ಪೃಥ್ವಿ ತಾಯಿಈ ಸಂಬಂಧ ದೂರು ನೀಡಲು ಹೋದಾಗ ಚಳ್ಳೇಕರೆ ಪೊಲೀಸರು ದೂರು ಸ್ವೀಕರಿಸದೇ ನಿಂದಿಸಿ ಕಳಿಸಿದ್ದಾರೆ.

ಇತ್ತ ಪೃಥ್ವಿ ಪ್ರವಾಸದಿಂದ ವಾಪಸ್‌ ಬಂದಾಗ ಠಾಣೆಯಲ್ಲಿ ನಡೆದದ್ದನ್ನು ಹೇಳಿದ್ದಾರೆ. ಹೀಗಾಗಿ ಪೃಥ್ವಿ ತನ್ನ ತಾಯಿ ಜತೆಗೆ ವಾಪಸ್‌ ಚಳ್ಳಕೆರೆ ಠಾಣೆಗೆ ತೆರಳಿ, ದೂರು ಸ್ವೀಕರಿಸದ ಸಂಬಂಧ ಪ್ರಶ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಪೊಲೀಸರು ಪೃಥ್ವಿ ಮೇಲೆ ಹಲ್ಲೆ ನಡೆಸಿದ್ದಲ್ಲದೇ ತಾಯಿ ಮುಂದೆಯೇ ಅವಾಚ್ಯವಾಗಿ ನಿಂದಿಸಿದ್ದಾರೆ. ಪೊಲೀಸರ ನಡೆಯನ್ನು ರೆಕಾರ್ಡ್‌ ಮಾಡಿಕೊಂಡಿದ್ದಕ್ಕೆ ಮೊಬೈಲ್ ಕಸಿದು, ವಿಡಿಯೋ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಹಲ್ಲೆ ಮಾಡಿದ್ದಲ್ಲದೇ ಮೊಬೈಲ್‌ ಕಸಿದು ಸಾಕ್ಷ್ಯವನ್ನು ನಾಶ ಮಾಡಿದವರ‌ ಮೇಲೆ‌ ಕ್ರಮ ಕೈಗೊಳ್ಳಿ ಎಂದು ಡಿವೈಎಸ್‌ಪಿ ಪೃಥ್ವಿ ದೂರು ನೀಡಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

Karnataka Rain : ಕೊಡಗಿನ ಮಾದಪುರ ಟೌನ್‌ ಸಮೀಪ ಗುಡ್ಡ ಕುಸಿದು, ಭೂಮಿ ಬಿರುಕು ಬಿಟ್ಟಿದೆ. ಚಿಕ್ಕಮಗಳೂರಿನಲ್ಲಿ ಮಳೆಯ ನಡುವೆ ಆತಂಕದ ಹುಟ್ಟಿಸಿದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಗಿದೆ. ವಿಜಯನಗರದಲ್ಲಿ ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆಯಾದರೆ, ಗೋಕಾಕ ನಗರ ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ.

VISTARANEWS.COM


on

By

karnataka Rain
Koo

ಕೊಡಗು: ಕೊಡಗು ಜಿಲ್ಲೆಯಾದ್ಯಂತ ವರುಣನ (Karnataka Rain) ಆರ್ಭಟ ಕೊಂಚ ತಗ್ಗಿದೆ. ಮಳೆ ಕಡಿಮೆಯಾದರೂ ಮಳೆಯ ಅನಾಹುತ ನಿಂತಿಲ್ಲ. ಮಾದಪುರ ಟೌನ್ ಸಮೀಪ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಜಾಗದಲ್ಲೆ ಭೂಮಿ ಬಿರುಕು ಬಿಟ್ಟಿದೆ. ಮಳೆ ಹೆಚ್ಚಾದಲ್ಲಿ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಮಡಿಕೇರಿ ಮಾದಪುರ ಸೋಮವಾರಪೇಟೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದೆ. ಗುಡ್ಡ ಕುಸಿದರೆ ಮಡಿಕೇರಿ – ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗುವ ಸಾಧ್ಯತೆ ಇದೆ. ಸದ್ಯ ಆತಂಕದಲ್ಲೇ ವಾಹನ ಸವಾರರು ಓಡಾಡುತ್ತಿದ್ದಾರೆ.

ಉಕ್ಕಿ ಹರಿಯುವ ನೀರಿಗೆ ಜಿಗಿದು ಯುವಕರ ಈಜಾಟ

ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ನದಿ ಸೇರಿದಂತೆ ಕಾಲುವೆಗಳಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇತ್ತ ಬಾಲಕರು ಜೀವದ ಹಂಗು ತೊರೆದು, ಕಾಲುವೆಗಳಿಗೆ ಜಿಗಿಯುತ್ತಿದ್ದಾರೆ. ರಕ್ಷಣಾ ಕವಚಗಳು ಇಲ್ಲದೆ ಕಾಲುವೆಗಳಿಗೆ ಮೇಲಿಂದ ಜಿಗಿದು ಆಟವಾಡುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಜಲಾಶಯದ ಬಳಿ ಇರುವ ಕಾಲುವೆಗಳಲ್ಲಿ ಜಿಗಿದು ಈಜಾಡುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆಯ ನಡುವೆ ಆತಂಕದ ಹುಟ್ಟಿಸಿದ ಕಾಳಿಂಗ

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರ ನಡುವೆ ಕಾಳಿಂಗ ಸರ್ಪವೊಂದು ಪ್ರತ್ಯಕ್ಷಗೊಂಡು ಆತಂಕದ ಹುಟ್ಟಿಸಿತ್ತು. 13 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಗಿದೆ. ಕಳಸದ ಸಂಸೆ ಗ್ರಾ.ಪಂ ವ್ಯಾಪ್ತಿಯ ಪಾತಿಗುಡ್ಡದಲ್ಲಿ‌ ಘಟನೆ ನಡೆದಿದೆ. ಕಾಳಿಂಗ ಸರ್ಪ ಓಡಾಟದಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿತ್ತು. ಉರಗತಜ್ಞ ರಿಜ್ವಾನ್ ಹಾಗೂ ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಕಾಳಿಂಗ ಸರ್ಪ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ವಿಜಯನಗರದಲ್ಲಿ ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆ

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆಯಾಗಿದೆ. ವಿಜಯನಗರದ ಕೋದಂಡರಾಮ ದೇಗುಲದ ಅರ್ಧಕ್ಕೆ ನೀರು ಹರಿದು ಬಂದಿದೆ. ಸೀತೆ ಸೆರಗು, ಸುಗ್ರೀವ ಗುಹೆಯ ಬಳಿಯೂ ಜಲಾವೃತಗೊಂಡಿದೆ. ನದಿ ಪಾತ್ರಕ್ಕೆ ತೆರಳದಂತೆ ಸ್ಥಳೀಯ ಆಡಳಿತ ಎಚ್ಚರಿಕೆ ನೀಡಿದೆ. ಕಳೆದ ಎರಡು ದಿನಗಳ ಹಿಂದೆಯೇ ಸ್ನಾನಘಟ್ಟಗಳು, ಪುರಂದರ ದಾಸರ ಮಂಟಪಗಳು ಮುಳುಗಿದೆ.

ಇತ್ತ ತುಂಗಭದ್ರಾ ನದಿಯ ನೀರು ತುಂಬಿ ಐತಿಹಾಸಿಕ ಮದಲಘಟ್ಟ ಆಂಜನೇಯ ದೇಗುಲದ ಬಳಿ ಹರಿದಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮದಲಘಟ್ಟ ಆಂಜನೇಯ ಸ್ವಾಮಿ ದೇಗುಲದಲ್ಲಿ ಇನ್ನೂ ಸ್ವಲ್ಪ ನೀರು ಹೆಚ್ಚಾದರೆ ಜಲಾವೃತ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: Assault Case : ಠಾಣೆಗೆ ಬಂದ ಮಹಿಳೆಗೆ ಜಾಡಿಸಿ ಒದ್ದ ಖಡಕಲಾಟ ಪಿಎಸ್‌ಐ!

ಪ್ರವಾಹಕ್ಕೆ ಸಿಲುಕಿ ನಲುಗಿ ಹೋದ ಗೋಕಾಕ ನಗರ

ಪ್ರವಾಹಕ್ಕೆ ಸಿಲುಕಿ ಗೋಕಾಕ ನಗರ ನಲುಗಿ ಹೋಗಿದೆ. ಹೀಗಾಗಿ ಶಾಸಕ‌ ರಮೇಶ ಜಾರಕಿಹೊಳಿಯವರಿಂದ ಪರಿಸ್ಥಿತಿ ಅವಲೋಕನ ಮಾಡಿದರು. ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ವಿವಿಧ ಸ್ಥಳಗಳಿಗೆ ರಮೇಶ ಭೇಟಿ ನೀಡಿದರು. ಬೆಳಗಾವಿ, ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮುಂದುವರೆದ ಮಳೆ ಅಬ್ಬರಕ್ಕೆ ಚಿಕ್ಕೋಡಿ ಉಪವಿಭಾಗದ ಜನಜೀವನ ಅಸ್ತವ್ಯಸ್ತವಾಗಿದೆ. ಸರಿಯಾಗಿ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸದ ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ರೈತನ ಆಕ್ರೋಶ ಹೊರಹಾಕಿದ್ದಾರೆ. ಸ್ಥಳೀಯ ಆಡಳಿತದವರು ನದಿಪಾತ್ರದಿಂದ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸುತ್ತಿದ್ದಾರೆ. ಆದರೆ ನಾವು ಹೋಗುವುದಾದರೂ ಎಲ್ಲಿಗೆ ? ರಾಜ್ಯದ ಜನತೆಗೆ ಬೆಳೆದ ಬೆಳೆಗಳನ್ನು ಪೂರೈಸಿ ಪ್ರತಿಯೊಬ್ಬರಿಗೂ ಆಸರೆಯಾಗುತ್ತೇವೆ.

ಆದರೆ ಪ್ರವಾಹದ ಪರಿಸ್ಥಿತಿ ಸಂದರ್ಭದಲ್ಲಿ ನಮ್ಮ ಬಗ್ಗೆ ಕಾಳಜಿ ವಹಿಸಲು ಸರ್ಕಾರದಿಂದ ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ನಾವು ಎಲ್ಲಿಯಾದರೂ ಗುಡಿ-ಗುಂಡಾತರಗಳಲ್ಲಿ ತಂಗಿ ಜೀವನ ನಡೆಸುತ್ತೇವೆ. ಆದರೆ ನಮ್ಮ ಬಳಿ ಲಕ್ಷಾಂತರ ರೂಪಾಯಿ ಮೌಲ್ಯದ ಜಾನುವಾರುಗಳಿವೆ. ಜಾನುವಾರುಗಳು ಬೆಚ್ಚಗೆ ವಾತಾವರಣ ಬೇಕಾಗುತ್ತದೆ. ಸರ್ಕಾರಿ ಜಾಗಗಳಲ್ಲಿ ಜಾನುವಾರುಗಳಲ್ಲಿ ಶೆಡ್ ನಿರ್ಮಿಸಿ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಇತ್ತ ಘಟಪ್ರಭಾ ನದಿ ತೀರದಲ್ಲಿ ಪ್ರವಾಹದ ಆತಂಕ ಹೆಚ್ಚುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ. ಢವಳೇಶ್ವರ ಗ್ರಾಮದ ಸುಪ್ರಸಿದ್ಧ ಲಕ್ಷ್ಮೀ ದೇವಿ ದೇವಸ್ಥಾನ ಜಲಾವೃತಗೊಂಡಿದೆ. ಜತೆಗೆ ಡವಳೇಶ್ವರ ಮಹಾಲಿಂಗಪುರ ಸಂಪರ್ಕ ಕಲ್ಪಿಸುವ ನಂದಗಾಂವ ಸೇತುವೆ ಮುಳುಗಡೆಯಾಗಿದೆ. ನದಿ ಪಾತ್ರದ ಜನರನ್ನು ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಕ್ಕೆ ಜಿಲ್ಲಾ ಆಡಳಿತ ಆದೇಶಿಸಿದೆ. ಈಗಾಗಲೇ ಢವಳೇಶ್ವರ ಗ್ರಾಮದಲ್ಲಿ ಗಂಜಿ ಕೇಂದ್ರ ಸ್ಥಾಪನೆ ಮಾಡಲಾಗಿದೆ.

ಮಳೆ ನಿಂತರೂ ನಿಲ್ಲದ ಅನಾಹುತ

ಹಾವೇರಿಯಲ್ಲಿ ಮಳೆಯ ಅಬ್ಬರ ಕಡಿಮೆ ಆಗಿದೆ. ಮಳೆ ನಿಂತರೂ ಅದರಿಂದ ಆಗುತ್ತಿರುವ ಅನಾಹುತಕ್ಕೆ ರೈತರು ಕಂಗಾಲಾಗಿದ್ದಾರೆ. ಹಾನಗಲ್ ತಾಲೂಕಿನ ವರ್ದಿ ಗ್ರಾಮದಲ್ಲಿ ವರದಾ ನದಿಯ ನೀರು ಹರಿದು ರೈತರು ಬೆಳೆ ಕಳೆದುಕೊಂಡಿದ್ದಾರೆ. ರೈತರ ಹೊಲಗಳಿಗೆ ನೀರು ನುಗ್ಗಿ ಶೇಂಗಾ, ಕಬ್ಬು ಬೆಳೆ ಹಾನಿಯಾಗಿದೆ.

ಮುಳುಗಡೆ ಹಂತ ತಲುಪಿದ ವೆಲ್ಲೆಸ್ಲಿ ಸೇತುವೆ

ಮಂಡ್ಯದ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತ ತಲುಪಿದೆ. ಕೆಆರ್‌ಎಸ್ ಡ್ಯಾಂನಿಂದ 1.30,867 ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಶ್ರೀರಂಗಪಟ್ಟಣದ ಐತಿಹಾಸಿಕ ಸೇತುವೆಯನ್ನು 1804 ರಲ್ಲಿ ಸಂಪೂರ್ಣ ಕಲ್ಲುಗಳಿಂದಲೇ ನಿರ್ಮಿಸಲಾಗಿದೆ. ಆಗಿನ ದಿನಗಳಲ್ಲಿ ಬೆಂಗಳೂರು- ಮೈಸೂರು ನಡುವೆ ಸಂಚರಿಸಲು ಇದ್ದ ಏಕೈಕ ಸೇತುವೆ ಇದಾಗಿದೆ. ಡ್ಯಾಂ ನಿರ್ಮಾಣವಾದಗಿನಿಂದ ಈ ವರೆಗೆ ಮೂರು ಬಾರಿ ಸೇತುವೆ ಮುಳುಗಡೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
KRS Dam
ಕರ್ನಾಟಕ29 seconds ago

KRS Dam: ಕೆಆರ್‌ಎಸ್, ಕಬಿನಿ ಜಲಾಶಯ ಭರ್ತಿ ಹಿನ್ನೆಲೆ ನಾಳೆ ಸಿಎಂ ಬಾಗಿನ ಅರ್ಪಣೆ

Sugar Vs Jaggery In Tea
ಆರೋಗ್ಯ21 mins ago

Sugar Vs Jaggery In Tea: ಸಕ್ಕರೆ ಬದಲು ಬೆಲ್ಲ ಹಾಕಿ ಚಹಾ ಕುಡಿದರೆ ಆರೋಗ್ಯಕ್ಕೆ ನಿಜಕ್ಕೂ ಲಾಭ ಇದೆಯೆ?

Manu Bhaker
ಪ್ರಮುಖ ಸುದ್ದಿ31 mins ago

Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

theft case
ಚಿತ್ರದುರ್ಗ38 mins ago

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

Paris Olympics boxing
ಕ್ರೀಡೆ49 mins ago

Paris Olympics Boxing: 16ರ ಸುತ್ತಿಗೇರಿದ​ ಬಾಕ್ಸರ್​​ ನಿಖತ್ ಜರೀನ್; ಮುಂದಿನ ಪಂದ್ಯದಲ್ಲಿ ಕಠಿಣ ಸವಾಲು

Unveiling of IPT 12 Cricket Trophy, Jersey by N1 Cricket Academy
ಕ್ರಿಕೆಟ್60 mins ago

IPT 12: ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ʻIPT 12ʼ ಕ್ರಿಕೆಟ್ ಟ್ರೋಫಿ, ಜೆರ್ಸಿ ಅನಾವರಣ

Bengaluru South District
ಕರ್ನಾಟಕ1 hour ago

Bengaluru South District: ರಾಮನಗರ ಮರು ನಾಮಕರಣಕ್ಕೆ ಹಿಂದು ಜನಜಾಗೃತಿ ಸಮಿತಿ ತೀವ್ರ ವಿರೋಧ; ಉಗ್ರ ಪ್ರತಿಭಟನೆ ಎಚ್ಚರಿಕೆ

ಪ್ರಮುಖ ಸುದ್ದಿ1 hour ago

UPSC Coaching : ನೈತಿಕತೆಯ ಪಾಲನೆ ವಿಚಾರದಲ್ಲಿ ಶ್ರೀರಾಮನಿಗಿಂತ ಅಕ್ಬರನೇ ಶ್ರೇಷ್ಠ ಎಂದ ಯುಪಿಎಸ್​ಸಿ ಬೋಧಕಿ ಶುಭ್ರಾ ರಂಜನ್; ಕೇಸ್​ ದಾಖಲಾದ ಬಳಿಕ ಕ್ಷಮೆ ಕೋರಿಕೆ

Murder case
ಕಲಬುರಗಿ1 hour ago

Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

Dengue In Pregnancy
ಆರೋಗ್ಯ2 hours ago

Dengue In Pregnancy: ಗರ್ಭಿಣಿಯರಿಗೆ ಡೆಂಗ್ಯೂ ಜ್ವರ ಬಂದರೆ ಡೇಂಜರ್! ಈ ಸಂಗತಿ ತಿಳಿದಿರಲಿ…

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack
ಮಳೆ2 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ5 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ23 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

ಟ್ರೆಂಡಿಂಗ್‌