Site icon Vistara News

Food Poisoning: ಮದುವೆ ಮನೆ ಊಟ ತಿಂದವರಿಗೆ ವಾಂತಿ, ಭೇದಿ; ನೂರಾರು ಮಂದಿ ಅಸ್ವಸ್ಥ

Food Poisoning

ಚಿತ್ರದುರ್ಗ: ಮದುವೆ ಮನೆಯಲ್ಲಿ ಸಿದ್ಧಪಡಿಸಲಾಗಿದ್ದ ಊಟ ಮಾಡಿದ (Food Poisoning) ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

ನಿನ್ನೆ ಶುಕ್ರವಾರ (ಮೇ 10) ಹೆಬ್ಬಾಳ ಗ್ರಾಮದಲ್ಲಿ ಕಾಲ್ಗೆರೆ ಗ್ರಾಮದ ಸಣ್ಣರುದ್ರಪ್ಪ ಎಂಬುವರ ಮಗಳ ಮದುವೆ ಸಮಾರಂಭ ನಡೆದಿತ್ತು. ಹೆಬ್ಬಾಳು ಮಠದಲ್ಲಿ ಆಯೋಜಿಸಿದ್ದ ಮದುವೆಗೆ ಬಂದಿದ್ದ ಸಂಬಂಧಿಕರು, ನೆಂಟರು, ಸ್ನೇಹಿತರು ಭರ್ಜರಿ ಮದುವೆ ಊಟವನ್ನು ಸವಿದಿದ್ದರು. ಮದುವೆ ಊಟ ಮಾಡಿದವರಲ್ಲಿ ಸಂಜೆ ವೇಳೆ ಎಲ್ಲರೂ ವಾಂತಿ, ಭೇದಿ ಜತೆಗೆ ಸುಸ್ತು ಕಾಣಿಸಿಕೊಂಡಿದೆ.

ಅನಾರೋಗ್ಯ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಏಕಾಏಕಿ ನೂರು ಮಂದಿ ಆಸ್ಪತ್ರೆಗೆ ಸೇರಿದ ಕಾರಣಕ್ಕೆ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಮದುವೆ ಊಟದಲ್ಲಿ ಫುಡ್ ಪಾಯಿಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಅಸ್ವಸ್ಥರಿಗೆ ಭರಮಸಾಗರ, ದಾವಣಗೆರೆ ಸರಕಾರಿ ಆಸ್ಪತ್ರೆ ಸೇರಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಾಶತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Murder case : ತಡರಾತ್ರಿ ಹರಿದ ನೆತ್ತರು; ಕತ್ತು ಸೀಳಿ ಯುವಕನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾತ್ರಿ ಬಿಡಿ ಹಗಲಿನಲ್ಲೇ ಮಹಿಳೆಯರು, ಯುವತಿಯರು, ಮಕ್ಕಳು ಓಡಾಡಲು ಭಯಪಡುವಂತಾಗಿದೆ. ಇದಕ್ಕೆ ಲೇಟೆಸ್ಟ್‌ ಉದದಾಹರಣೆ ಈ ಘಟನೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ರಸ್ತೆ ಬದಿಯಲ್ಲಿ ಸ್ಕೂಟಿ‌ ನಿಲ್ಲಿಸಿಕೊಂಡು ನಿಂತಿದ್ದ ಯುವತಿ ಬಳಿಗೆ ಬಂದ ಸ್ಕೂಟರ್‌ನಲ್ಲಿದ್ದ ಇಬ್ಬರು ಯುವಕರು ಹಿಂದಿಯಲ್ಲಿ ನಿಂದಿಸಿದ್ದಾರೆ. ಇದು ಬಿ.ಟಿ.ಎಂ‌. ಲೇ ಔಟ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ರಸ್ತೆಯ ಪಕ್ಕ ಸ್ಕೂಟಿ ನಿಲ್ಲಿಸಿ ಯುವತಿ ತಮ್ಮ ಪಾಡಿಗೆ ತಾವು ನಿಂತಿದ್ದರು. ಅಲ್ಲಿಗೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು, ʼʼಕುಡಿದ ನಶೆಯಲ್ಲಿ ರೋಡ್ ಶೋ ಮಾಡುತ್ತೀಯಾ?ʼʼ ಎಂದು ಬೈದಿದ್ದಾರೆ. ಯುವಕರ ಅವಾಚ್ಯ ನಿಂದನೆಯಿಂದ ಒಂದು ಕ್ಷಣ ಗಾಬರಿಗೊಳಗಾದ ಯುವತಿ ಬಳಿಕ ಅವರನ್ನು ದಿಟ್ಟವಾಗಿ ಎದುರಿಸಿದ್ದಾರೆ. ಅವರನ್ನೇ ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಪುಂಡರು ಅಶ್ಲೀಲ ಪದಗಳಿಂದ ಯುವತಿಯನ್ನು ಹಿಂದಿಯಲ್ಲಿ ನಿಂದಿಸಿದ್ದಾರೆ. ಹೀಗೆ ಯುವಕರು ಕೆಲಕಾಲ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಸದ್ಯ ಈ ವಿಡಿಯೊ ವೈರಲ್ ಆಗಿದ್ದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಆದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಹೀಗೆ ಅನುಚಿತವಾಗಿ ವರ್ತಿಸುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ನಡುಬೀದಿಯಲ್ಲಿ ಲೈಂಗಿಕ ಕಿರುಕುಳ

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲೇ ಬಿಹಾರ ಮೂಲದ ದಂಪತಿಗೆ ಲೈಂಗಿಕ ಕಿರುಕುಳದ ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ. ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ಒಂದು ವಾರದ ಹಿಂದೆ 10:30ರ ಸುಮಾರಿಗೆ ನಡೆದ ಘಟನೆ ಇದು.

ಜತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ. ಹೀಗಾಗಿ ಸದ್ಯ ಬೆಂಗಳೂರಿಗರು ಒಬ್ಬರೇ ಓಡಾಡಲು ಭಯಪಡುವಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version