Site icon Vistara News

Goolihatti Shekhar | ಕಳಪೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ ಪ್ರಕರಣ, ಬಿಜೆಪಿ ನಾಯಕರ ವಾಕ್ಸಮರ

goolihatti ಶೇಖರ್‌ ವಾಯ್ಸ್‌ ರೆಕಾರ್ಡ್‌ ಹಾದರಗಿತ್ತಿ ಮಗ

ಚಿತ್ರದುರ್ಗ: ಹೊಸದುರ್ಗದಲ್ಲಿ‌ ಕಳಪೆ ರಸ್ತೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ ಪ್ರಕರಣಕ್ಕೆ (Goolihatti Shekhar ) ಸಂಬಂಧಿಸಿದಂತೆ ಬಿಜೆಪಿ ಮುಖಂಡರ ನಡುವೆ ವಾಕ್ಸಮರ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದಲ್ಲಿ ಪ್ರಕರಣ ನಡೆದಿತ್ತು. ಇದು ಬಿಜೆಪಿ ಮುಖಂಡರ ಮಧ್ಯೆ ಭಿನ್ನಮತ ಸ್ಪೋಟಕ್ಕೆ ಕಾರಣವಾಗಿತ್ತು. ಖನಿಜ ನಿಗಮದ ಮಾಜಿ‌ ಅದ್ಯಕ್ಷ, ಬಿಜೆಪಿ ಮುಖಂಡ ಎಸ್.ಲಿಂಗಮೂರ್ತಿ ಅವರು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳಪೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಬಿಜೆಪಿಯ ಸ್ಥಳೀಯ ಮುಖಂಡರಾದ ರಂಗೇಶ, ವೃಷಬೇಂದ್ರ, ಕಾಶೀನಾಥ್ ಮತ್ತಿತರರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಗೂಂಡಾವರ್ತನೆಯನ್ನು ಖಂಡಿಸುತ್ತೇನೆ. ಈ ಪ್ರಕರಣಕ್ಕೆ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಹೊಣೆಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

‌ಕಳೆದ ವಾರದಲ್ಲಿ ಪಟ್ಟಣದಲ್ಲಿ ದಂಪತಿಯ ಜೋಡಿ ಕೊಲೆ ನಡೆದಿದೆ. ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಶಾಸಕ ಗೂಳಿಹಟ್ಟಿ ಶೇಖರ್ ಸ್ಥಳಕ್ಕೆ ಭೇಟಿ ನೀಡಿಲ್ಲ. ಹೊಸದುರ್ಗ ಕ್ಷೇತ್ರದಲ್ಲಿ ಅರಾಜಕತೆ ಸೃಷ್ಠಿಯಾಗಿದೆ ಎಂದು ಸ್ವಪಕ್ಷದ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ಎಸ್.ಲಿಂಗಮೂರ್ತಿ ಆರೋಪಿಸಿದ್ದಾರೆ.

Exit mobile version