Site icon Vistara News

Medical Negligence : ಗ್ಯಾಸ್ಟ್ರಿಕ್‌ ಎಂದು ಆಸ್ಪತ್ರೆಗೆ ಹೋದ ಯುವಕ ಮನೆಗೆ ಹೆಣವಾಗಿ ವಾಪಸ್‌

Medical Negligence in Chitradurga

ಚಿತ್ರದುರ್ಗ: ಗ್ಯಾಸ್ಟ್ರಿಕ್‌ (Gastric) ಎಂದು ಆಸ್ಪತ್ರೆಗೆ ಹೋದ ಯುವಕನೊಬ್ಬ ವೈದ್ಯರ ನಿರ್ಲಕ್ಷ್ಯಕ್ಕೆ (Medical Negligence) ಸ್ಮಶಾನದ ಪಾಲಾಗಿದ್ದಾನೆ. ಚಿತ್ರದುರ್ಗದ ಗೋಪಾಲಪುರದ ನಿವಾಸಿ ನಯಾಜ್ (18) ಮೃತ ದುರ್ದೈವಿ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಘಟನೆ ನಡೆದಿದೆ.

ಗ್ಯಾಸ್ಟ್ರಿಕ್‌ನಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದ ನಯಾಜ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. ಇತ್ತ ವೈದ್ಯರ ನಿರ್ಲಕ್ಷ್ಯದಿಂದಲೇ ಯುವಕ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮನೆ ಮಗನ ಸಾವಿನಿಂದ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಮುಂಭಾಗ ನಯಾಜ್ ಕುಟುಂಬಸ್ಥರ ದೌಡಾಯಿಸಿ, ವೈದ್ಯಾಧಿಕಾರಿಗಳು ಸರಿಯಾದ ಚಿಕಿತ್ಸೆ ಕೊಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ನಿನ್ನೆ ಶುಕ್ರವಾರ ನಯಾಜ್‌ನನ್ನು ಆಸ್ಪತ್ರೆಗೆ ದಾಖಲು ಮಾಡಿದಾಗ ಯಾವೊಬ್ಬ ವೈದ್ಯಾಧಿಕಾರಿಗಳೂ ಬಂದಿಲ್ಲ. ಹೀಗಾಗಿ ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿಲ್ಲಾಸ್ಪತ್ರೆ ವ್ಯವಸ್ಥೆ ಬದಲಾಗಬೇಕು. ನನ್ನ ಮಗ ಸತ್ತು ಹೋದ, ನಾನೇನು ಮಾಡಲಿ ಎಂದು ನಯಾಜ್‌ ತಂದೆಯ ಅಸಹಾಯಕದ ಮಾತುಗಳನ್ನಾಡಿದರು. ಮಗನ ಸಾವಿಗೆ ನ್ಯಾಯಕ್ಕಾಗಿ ಕೊಡಿಸಿ ಎಂದು ಹಂಗಲಾಚಿದರು.

ಇದನ್ನೂ ಓದಿ: Rain News: ವಿಜಯಪುರದಲ್ಲಿ ಸಿಡಿಲಿಗೆ ಮತ್ತೊಂದು ಬಲಿ; ಬೀದರ್‌ನಲ್ಲಿ ಮಳೆಗೆ ಧರೆಗುರುಳಿದ ಬೃಹತ್‌ ಮರ

ಸ್ವಿಮ್ಮಿಂಗ್ ಪೂಲ್‌ಗೆ ಇಳಿದ ಬಾಲಕ ನೀರಲ್ಲಿ ಮುಳುಗಿ ಸಾವು; ಸಿಸಿಟಿವಿಯಲ್ಲಿ ಸೆರೆಯಾದ ಕೊನೆ ಕ್ಷಣ

ಉಡುಪಿ‌: ಎನ್ವೆಂಚರ್ಸ್ ರೆಸಾರ್ಟ್‌ನ ಸ್ವಿಮ್ಮಿಂಗ್ (Ventures Resort) ಪೂಲ್‌ನಲ್ಲಿ (Swimming pool) ಬಾಲಕನೊರ್ವ ಮುಳುಗಿ ಮೃತಪಟ್ಟಿದ್ದಾರೆ. ಉಡುಪಿಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್‌ನಲ್ಲಿ (Drowned in water) ಘಟನೆ ನಡೆದಿದೆ. ಹೊಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ದುರ್ದೈವಿ.

ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ. ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣಕ್ಕೆ ಮುಹಮ್ಮದ್ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ.

ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ನೀರಿಗೆ ಇಳಿದ ಮುಹಮ್ಮದ್‌ ಹೊರಬರಲು ಆಗದೆ ತೀವ್ರ ಅಸ್ವಸ್ಥಗೊಂಡಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ಮುಹಮ್ಮದ್‌ನನ್ನು ಕೂಡಲೇ ಮೇಲೆತ್ತಿ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮುಹಮ್ಮದ್‌ ಕೊನೆಯುಸಿರೆಳೆದಿದ್ದಾನೆ. ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್ ವಿರುದ್ಧ ಪೋಷಕರು ದೂರು ದಾಖಲಿಸಿದ್ದಾರೆ.

ಮುಹಮ್ಮದ್‌ ಪೂಲ್‌ ಬಳಿ ಬಂದವನೇ ಆಳ ತಿಳಿಯದೆ ನೀರಿಗೆ ಇಳಿದಿದ್ದ. ಈ ವೇಳೆ ಮೇಲೆ ಬರಲು ಪ್ರಯತ್ನಿಸಿದ್ದಾನೆ. ಸುಮಾರು ಎರಡು ನಿಮಿಷಗಳ ಜೀವನ್ಮರಣ ಹೋರಾಡಿದ್ದಾನೆ. ಆದರೆ ವಿಧಿಯಾಟ ಅಂದರೆ ಸುತ್ತಮುತ್ತ ಮೂವತ್ತು ಹೆಚ್ಚು ಜನರು ಇದ್ದರೂ ಯಾರು ಇದನ್ನೂ ಗಮನಿಸಿಲ್ಲ. ಮುಹಮ್ಮದ್‌ನ ಕೊನೆ ಕ್ಷಣದ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version