Site icon Vistara News

Murder Case : ಕ್ಷುಲ್ಲಕ ಕಾರಣಕ್ಕೆ ಶುರುವಾದ ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯ

Murder Case

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ‌ ತಂದೆ-ಮಗನ ನಡುವೆ ಜಗಳವಾಗಿದ್ದು, ತಂದೆ ಮೇಲೆ ಹಲ್ಲೆ ಮಾಡಿ ಕೆಳಗೆ ಬೀಳಿಸಿ ಮಗನೇ ಕೊಲೆ (Murder Case) ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುಂದಲಗುರ ಗ್ರಾಮದಲ್ಲಿ ಘಟನೆ ನಡೆದಿದೆ. ರಂಗಸ್ವಾಮಿ (50) ಮಗನಿಂದಲೇ ಹತ್ಯೆಯಾದವರು. ದೇವರಾಜ್ ಆರೋಪಿ ಆಗಿದ್ದಾನೆ.

ಮನೆಯಲ್ಲಿ ಊಟದ ವಿಚಾರಕ್ಕೆ ತಂದೆ ಜತೆ ದೇವರಾಜ್‌ ಜಗಳ ಆರಂಭಿಸಿದ್ದ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ರಂಗಸ್ವಾಮಿಯನ್ನು ಕೆಳಗೆ ಬೀಳಿಸಿದ್ದಾನೆ. ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ‌ ಸಿಪಿಐ (CPI)ಗುಡ್ಡಪ್ಪ, ಹಾಗೂ ಅಬ್ಬಿನಹೊಳೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ ಆರು ಮಂದಿ ದಾರುಣ ಸಾವು

ಅನಂತಪುರ ಜಿಲ್ಲೆಯ ಶಿಂಗನಮಲ ಮಂಡಲದ ನಾಯನಪಲ್ಲಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನ ಟಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಅನಂತಪುರ ಇಸ್ಕಾನ್‌ಗೆ ಸೇರಿದವರು ಎಂದು ವರದಿಯಾಗಿದೆ. ತಾಡಿಪತ್ರಿ ನಗರದಲ್ಲಿ ಇಸ್ಕಾನ್ ನಗರ ಸಂಕೀರ್ತನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ತಾಡಿಪತ್ರಿಯಿಂದ ಅನಂತಪುರಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಂತೋಷ್, ಷಣ್ಮುಕ್, ವೆಂಕಣ್ಣ, ಶ್ರೀಧರ್ ಹಾಗೂ ಪ್ರಸನ್ನ, ವೆಂಕಿ ಮೃತ ದುರ್ದೈವಿಗಳು

Exit mobile version