Site icon Vistara News

ಮುರುಘಾಮಠ ಕಳವು ಪ್ರಕರಣ, ಬಸವರಾಜನ್‌ ಪೊಲೀಸ್‌ ವಶಕ್ಕೆ

basavarajan

ಚಿತ್ರದುರ್ಗ: ಇಲ್ಲಿನ ಮುರುಘಾಮಠದಲ್ಲಿ ನಡೆದ ಫೋಟೋಗಳ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್ .ಕೆ.ಬಸವರಾಜನ್‌ರನ್ನು ಪೊಲೀಸರ ವಶಕ್ಕೆ ಪಡೆಯಲಾಗಿದೆ.

ಅ.6ರಂದು ಮುರುಘಾಮಠದ ರಾಜಾಂಗಣದ ಗೋಡೆ ಮೇಲಿದ್ದ 47 ಫೋಟೋಗಳು ಕಳವಾಗಿದ್ದವು. ನ.7ರಂದು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಹೊಸಹಳ್ಳಿ ಗ್ರಾ.ಪಂ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, ಎಸ್‌ಜೆಎಮ್ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದರು.

ಆರೋಪಿಗಳ ವಿಚಾರಣೆ ವೇಳೆ ಬಸವರಾಜನ್ ಪ್ರಚೋದನೆ ನೀಡಿರುವುದು ಬಯಲಾದ ಹಿನ್ನೆಲೆಯಲ್ಲಿ, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಸವರಾಜನ್ ಪತ್ನಿ ಸೌಭಾಗ್ಯ ಅವರನ್ನೂ ವಶಕ್ಕೆ ಪಡೆಯಲು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮತ್ತೋರ್ವ ಆರೋಪಿ ಶ್ರೀನಿವಾಸ್‌ನನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ | Murugha Sree case | ಬಸವಪ್ರಭು ಶ್ರೀಗಳಿಗೆ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ

Exit mobile version