Site icon Vistara News

Road Accident: ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಬೈಕ್- ಕಾರು ಡಿಕ್ಕಿಯಾಗಿ ಇಬ್ಬರ ಸಾವು

Road Accident

Road Accident

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ (Road Accident). ಬೈಕ್- ಕಾರು ನಡುವೆ ಡಿಕ್ಕಿಯಾಗಿ ಈ ಅವಘಡ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಪ್ರವೀಣ್ (29) ಮತ್ತು ಯೋಗೀಶ್ (27) ಎಂದು ಗುರುತಿಸಲಾಗಿದೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದವರು. ಬೈಕ್‌ ಸವಾರರು ಹೊಸದುರ್ಗ ಕಡೆಯಿಂದ ಕಡೂರು ಕಡೆ ಬರುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಕಾರು ಕುಂದಾಪುರ ಮೂಲದ ಚಿತ್ರೇಶ್ ಕುಮಾರ್ ಶೆಟ್ಟಿ ಎನ್ನುವವರಿಗೆ ಸೇರಿದ್ದು ಎನ್ನಲಾಗಿದೆ. ಘಟನೆಯಲ್ಲಿ ಅಜ್ಜಯ್ಯ ಎಂಬ ಬೈಕ್ ಸವಾರನಿಗೆ ಗಾಯಗಳಾಗಿದ್ದು, ಹೊಸದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹೊಸದುರ್ಗ ಸಿಪಿಐ ತಿಮ್ಮಣ್ಣ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರೊಂದು ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Road Accident) ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯನ್ನು ಅಸುನೀಗಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಬಳಿ ಅಪಘಾತ ನಡೆದಿದೆ. ನೀಲಪ್ಪ ಮೂಲಿಮನಿ( 23), ಸುದೀಪ್ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20) ಮತ್ತು ಕಲ್ಮೇಶ ಮಾನೋಜಿ (26) ಮೃತ ದುರ್ದೈವಿಗಳು.

7 ಯುವಕರ ತಂಡವು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡಕ್ಕೆ ಹೊರಟಿದ್ದರು. ಈ ವೇಳೆ ಎದುರಿಗಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಮುಂದೆ ಕುಳಿತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶಿವನಗೌಡ ಯಲ್ಲನಗೌಡ್ರ, ಕಲ್ಮೇಶ ಮಾನೋಜಿ ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ. ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident: ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಸ್ಪಾಟ್‌ ಡೆತ್‌; ಕಿತ್ತು ಬಂತು ಸವಾರನ ಕಣ್ಣು ಗುಡ್ಡೆ

ಚಿಕ್ಕಮಗಳೂರು: ಮುಂದುವರಿದ ಪ್ರವಾಸಿಗರ ರಂಪಾಟ

ಚಿಕ್ಕಮಗಳೂರು: ಜಿಲ್ಲೆಯಯಲ್ಲಿ ಪ್ರವಾಸಿಗರ ರಂಪಾಟ ಮುಂದುವರಿದಿದೆ. ಕುಡಿದ ಅಮಲಿನಲ್ಲಿ ಯುವಕರ ತಂಡವೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಮೊರಾರ್ಜಿ ದೇಸಾಯಿ ಶಾಲೆ ಬಳಿ ರಾದ್ಧಾಂತ ಮಾಡಿದೆ. ಚಾರ್ಮಾಡಿ ಘಾಟಿಯ ಎಂಟ್ರಿಯಲ್ಲಿ ಮಂಗಳೂರು ಮೂಲದ ಯುವಕರು ಕಿರಿಕ್ ಮಾಡಿದ್ದಾರೆ.

ಮಂಗಳೂರಿನಿಂದ ಮೂಡಿಗೆರೆಗೆ ಪ್ರವಾಸ ಕೈಗೊಂಡಿದ್ದ ಯುವಕರು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಕಿರಿಕ್‌ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದ್ದ ಸ್ಥಳೀಯರ ಮೇಲೆಯೇ ಐವರು ಯುವಕರ ಗುಂಪು ಹಲ್ಲೆ ನಡೆಸಿದೆ. ಪೊಲೀಸರ ಸಮ್ಮುಖದಲ್ಲಿ ಈ ಹೊಡೆದಾಟ ನಡೆದಿದೆ.

Exit mobile version