Site icon Vistara News

Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

road Accident

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಹಿಂಬದಿಯಿಂದ ಬಂದ ಲಾರಿಯೊಂದು ಕಾರಿಗೆ (Road Accident) ಗುದ್ದಿದೆ. ಗುದ್ದಿದ ರಭಸಕ್ಕೆ ಓರ್ವ ವಿಧ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗೇಟ್ ಬಳಿ ಅಪಘಾತ‌ ನಡೆದಿದೆ.

ತೋರಣಗಲ್ಲು ಮೂಲದ ಪಲ್ಲವಿ (18) ಮೃತ ದುರ್ದೈವಿ. ಚಾಲಕ ಸುರೇಶ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಕಾರೊಂದು ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆ ತೆರಳುತ್ತಿತ್ತು. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ರಾಂಪೂರ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಂಪೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಾಖಲು ಮಾಡಲಾಗಿದೆ.

ರಸ್ತೆ ದಾಟುತ್ತಿದ್ದ ವಿಕಲಚೇತನನ ಪ್ರಾಣ ಕಸಿದ ಲಾರಿ

ಚಿತ್ರದುರ್ಗದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ರಸ್ತೆ ದಾಟುವ ವ್ಯಕ್ತಿ ಮೇಲೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದವನ ಮೇಲೆ ಹರಿದಿದ್ದು, ಕ್ಷಣಾರ್ಧದಲ್ಲಿ ವ್ಯಕ್ತಿಯ ಪ್ರಾಣಪಕ್ಷಿ ಹಾರಿಹೋಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗೇಟ್ ಬಳಿ ಘಟನೆ ನಡೆದಿದೆ.

Road Accident

ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಲ್ಲಿಕಾರ್ಜುನ್ (52) ಮೃತ ದುರ್ದೈವಿ. ತಿರುಮಲಾಪುರ ಗ್ರಾಮದ ನಿವಾಸಿಯಾದ ಮಲ್ಲಿಕಾರ್ಜುನ ವಿಕಲಚೇತನರಾಗಿದ್ದರು. ರಸ್ತೆ ದಾಟುವ ವೇಳೆ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಲಾರಿ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ಬಳಿಕ ನಾಪತ್ತೆಯಾಗಿದ್ದ ಲಾರಿ ಚಾಲನನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸ್ಥಳಕ್ಕೆ ಚಿತ್ರಹಳ್ಳಿ ಪಿಎಸ್‌ಐ ಕಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

ಒಂದು ಗಂಟೆ ಅಂತರದಲ್ಲಿ ಒಂದೇ ಕಡೆ ಎರಡು ಅಪಘಾತ!

ಒಂದೇ ಸ್ಥಳದಲ್ಲಿ ಒಂದೆರಡು ಗಂಟೆ ಅಂತರದಲ್ಲಿ ಎರಡು ಅಪಘಾತಗಳು ಸಂಭವಿಸಿದೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ವಿಂಡ್ಸರ್ ಮ್ಯಾನರ್ ಬ್ರಿಡ್ಜ್‌ ಎಡ್ಜ್‌ಗೆ ಒಂದೇ ಜಾಗದಲ್ಲಿ ಪ್ರತ್ಯೇಕವಾಗಿ ಎರಡು ಆಟೋಗಳು ಡಿಕ್ಕಿ ಹೊಡೆದಿವೆ.

ಶನಿವಾರ ಬೆಳಗ್ಗೆ 4 ಗಂಟೆಗೆ ಹಾಗೂ 6 ಗಂಟೆಯ ಸಂದರ್ಭದಲ್ಲಿ ಅಪಘಾತ ನಡೆದಿದೆ. ಒಂದೇ ಜಾಗದಲ್ಲಿ ಪ್ರತ್ಯೇಕ ಆಟೋಗಳ ಅಪಘಾತದಿಂದಾಗಿ ನಝೀರ್ ಎಂಬಾತನ ತಲೆಗೆ ಗಂಭೀರ ಗಾಯವಾಗಿದೆ. ಪ್ಯಾಸೆಂಜರ್ ಕರೆದೊಯ್ಯುವ ವೇಳೆ ಅಪಘಾತ ನಡೆದಿದೆ. ಪ್ಯಾಸೆಂಜರ್‌ಗೆ ತರಚಿದ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version