Heart Attack: ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ 7ನೇ ತರಗತಿ ವಿದ್ಯಾರ್ಥಿನಿ ಬಲಿ - Vistara News

ಆರೋಗ್ಯ

Heart Attack: ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ 7ನೇ ತರಗತಿ ವಿದ್ಯಾರ್ಥಿನಿ ಬಲಿ

Heart Attack: ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿ ಶಾಲೆಗೆ ತೆರಳುತ್ತಿದ್ದಾಗ ಹಠಾತ್‌ ಆಗಿ ಕುಸಿದು ಬಿದ್ದಿದ್ದಾಳೆ. ಹೀಗಾಗಿ ಸೃಷ್ಟಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಆಕೆ ಮೃತಪಟ್ಟಿದ್ದಾಳೆ. ಬಳಿಕ ಪರೀಕ್ಷೆ ನಡೆಸಿದ ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತವಾಗಿದೆ ಎಂದು ಘೋಷಿಸಿದ್ದಾರೆ.

VISTARANEWS.COM


on

Stdent Heart attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾಳೆ. ಬೆಳಗ್ಗೆ ಶಾಲೆಗೆ ತೆರಳುತ್ತಿದ್ದಾಗ ಕುಸಿದು ಬಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

13 ವರ್ಷದ ಬಾಲಕಿ ಸೃಷ್ಟಿ ಮೃತಪಟ್ಟ ಬಾಲಕಿಯಾಗಿದ್ದಾಳೆ. ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿ ಶಾಲೆಗೆ ತೆರಳುತ್ತಿದ್ದಾಗ ಹಠಾತ್‌ ಆಗಿ ಕುಸಿದು ಬಿದ್ದಿದ್ದಾಳೆ. ಹೀಗಾಗಿ ಸೃಷ್ಟಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಆಕೆ ಮೃತಪಟ್ಟಿದ್ದಾಳೆ. ಬಳಿಕ ಪರೀಕ್ಷೆ ನಡೆಸಿದ ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತವಾಗಿದೆ ಎಂದು ಘೋಷಿಸಿದ್ದಾರೆ.

ಪ್ರಾಥಮಿಕ ಆಸ್ಪತ್ರೆಯಲ್ಲಿ ಇಲ್ಲ ಮೂಲ ಸೌಕರ್ಯ

ದಾರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇರಲಿಲ್ಲ. ಅಲ್ಲದೆ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಸಹ ಇಲ್ಲ. ಈ ಕಾರಣದಿಂದ ಬಾಲಕಿಯೊಬ್ಬಳು ಮೃತಪಟ್ಟಂತೆ ಆಗಿದೆ ಎಂದು ಗ್ರಾಮಸ್ಥರು ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.

ಗ್ರಾಮದಲ್ಲೇ ಆಸ್ಪತ್ರೆಯಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಮೂಡಿಗೆರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸೃಷ್ಟಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಗೋಳಿಡುತ್ತಿದ್ದಾರೆ.

ಇದನ್ನೂ ಓದಿ: COVID Subvariant JN1: ಆರೋಗ್ಯ ಕಾರ್ಯಕರ್ತರಿಗೆ ಮಾಸ್ಕ್‌ ಕಡ್ಡಾಯ; ಮತ್ತೇನಿದೆ ಕೊರೊನಾ ನಿರ್ಬಂಧ?

ಸೃಷ್ಟಿಗೆ ಆಗಾಗ ಇತ್ತು ತಲೆ ಸುತ್ತುವ ಸಮಸ್ಯೆ

ಸೃಷ್ಟಿಗೆ ಆಗಾಗ ತಲೆ ಸುತ್ತುವ ಸಮಸ್ಯೆ ಇತ್ತು ಎನ್ನಲಾಗಿದೆ. ಆದರೆ, ಈ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಬಗ್ಗೆ ವೈದ್ಯರು ಸಲಹೆ ನೀಡುವುದೇನೆಂದರೆ, ಚಿಕ್ಕ ಮಕ್ಕಳಿಗೆ ತಲೆ ಸುತ್ತುವ ಸಂದರ್ಭ ಇದ್ದರೆ ಅವರನ್ನು ಕೂಡಲೇ ತಜ್ಞ ವೈದ್ಯರಿಗೆ ತೋರಿಸಬೇಕು. ಇದರಿಂದ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಹೇಳಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪುಟ್ಟ ಮಗುವನ್ನೇ ನದಿಗೆ ಎಸೆದ ಪಾಪಿ ತಾಯಿ

ಬೆಂಗಳೂರು: ಕೆಲವರು ಒಂದು ಮಗು ಬೇಕು ಎಂದು ಅದೆಷ್ಟೊಂದು ಹಪಹಪಿಸುತ್ತಾರೆ. ಆದರೆ, ಕೆಲವರು ತಮ್ಮ ಎಳೆ ಕಂದಮ್ಮಗಳನ್ನೇ ಸಾಯಿಸಲು ಹಿಂದೆ ಮುಂದೆ ನೋಡದಷ್ಟು ಕ್ರೂರಿಗಳಾಗುತ್ತಾರೆ. ‌ ಇಲ್ಲೊಬ್ಬ ಪಾಪಿ ತಾಯಿ ತನ್ನ ಅಕ್ರಮ ಸಂಬಂಧಕ್ಕೆ (Illicit relatonship) ಅಡ್ಡಿಯಾಗುತ್ತದೆ ಎಂಬ ಕಾರಣಕ್ಕಾಗಿ ಒಂದು ವರ್ಷ ಮೂರು ತಿಂಗಳ ಮಗುವನ್ನೇ ನದಿಗೆ ಎಸೆದು ಕೊಲೆ (Murder Case) ಮಾಡಿದ್ದಾಳೆ. ಈ ಘಟನೆ ನಡೆದಿರುವುದು ರಾಮನಗರ ಜಿಲ್ಲೆ (Ramanagara News) ಚನ್ನಪಟ್ಟಣ ತಾಲೂಕಿನ ಬಾಣಗಳ್ಳಿ ಗ್ರಾಮದ ಬಳಿ. ಭಾಗ್ಯಮ್ಮ (21) ಎಂಬಾಕೆ ಚನ್ನಪಟ್ಟಣ ಹಾದು ಹೋಗುವ ಕಣ್ವ ನದಿಗೆ ತನ್ನ ಮಗುವನ್ನು ಎಸೆದಿದ್ದಾಳೆ.

ಏನಿದು ಅಕ್ರಮ ಸಂಬಂಧದ ಕಥೆ?

ಭಾಗ್ಯಮ್ಮ ಎಂಬಾಕೆ ಎರಡು ಮೂರು ವರ್ಷದ ಹಿಂದೆ ಮದುವೆಯಾಗಿತ್ತು. ಆದರೆ, ಸಂಸಾರ ನೆಟ್ಟಗೆ ಮಾಡದ ಆಕೆ ಗಂಡನನ್ನು ಬಿಟ್ಟು ತವರು ಮನೆ ಸೇರಿಕೊಂಡಿದ್ದಳು. ಆದರೆ, ಅಷ್ಟು ಹೊತ್ತಿಗೆ ಒಂದು ಮಗು ಹುಟ್ಟಿತ್ತು. ದೇವರಾಜ್‌ ಈಗ ಒಂದು ವರ್ಷ ಮೂರು ತಿಂಗಳ ಮಗು.

ಇತ್ತ ತವರಿಗೆ ಬಂದ ಭಾಗ್ಯಮ್ಮನಿಗೆ ಅಲ್ಲೇ ಒಂದು ಅಕ್ರಮ ಸಂಬಂಧ ಕುದುರುತ್ತದೆ. ಆಕೆ ಸುಖದಲ್ಲಿ ತೇಲಾಡುತ್ತಾ ಇರುತ್ತಾಳೆ. ಈ ನಡುವೆ ಭಾಗ್ಯಮ್ಮನ ತಾಯಿ ಆಕೆಯ ಈ ನಡತೆಯನ್ನು ಆಕ್ಷೇಪಿಸುತ್ತಾಳೆ. ಮನೆಯಲ್ಲಿ ದಿನವೂ ಜಗಳ ನಡೆಯುತ್ತಿರುತ್ತದೆ. ನೀನು ಮಗುವನ್ನು ಬಿಟ್ಟು ಸುತ್ತಾಡಲು ಹೋಗುತ್ತೀಯಾ, ನಾನು ಅದನ್ನು ಸಾಕಬೇಕು ಎಂದು ತಾಯಿ ಬೈದಿರುತ್ತಾಳೆ.

ಇತ್ತ ಹೊಸದಾಗಿ ಪರಿಚಯವಾಗಿ ಅಕ್ರಮ ಸಂಬಂಧ ಹುಟ್ಟಿಸಿಕೊಂಡವನಿಗೂ ಈ ಮಗು ವಿಚಾರದಲ್ಲೇ ತಕರಾರು. ಆತನೂ ನನಗೆ ನೀನು ಬೇಕು, ಆದರೆ ಮಗು ಬೇಡ ಎಂದು ವರಾತ ತೆಗೆದಿರುತ್ತಾನೆ. ಇಷ್ಟು ಹೊತ್ತಿಗೆ ತನ್ನ ಅಕ್ರಮ ಸಂಬಂಧವನ್ನು ಹೇಗಾದರೂ ಉಳಿಸಿಕೊಳ್ಳಲೇಬೇಕು ಎಂದು ನಿರ್ಧರಿಸುವ ಭಾಗ್ಯಮ್ಮ ಕೇವಲ ಒಂದು ವರ್ಷದ ಮೂರು ತಿಂಗಳ ಹಸುಗೂಸಿನ ಪ್ರಾಣವನ್ನೇ ತೆಗೆಯಲು ಮುಂದಾಗುತ್ತಾಳೆ.

ಮಂಗಳವಾರ ರಾತ್ರಿ 7.30ರ ಹೊತ್ತಿಗೆ ಭಾಗ್ಯಮ್ಮ ಬಟ್ಟೆ ತೊಳೆಯುವ ನೆಪದಲ್ಲಿ ಕಾಲಿಕೆರೆಯ ಕಣ್ವ ನದಿ ತೀರಕ್ಕೆ ಬಂದಿದ್ದಳು. ಅಲ್ಲಿ ಮಗುವನ್ನು ನದಿಗೆ ಎಸೆದು ಅಲ್ಲಿಂದ ಕಾಲಿಕೆರೆ ದೇವಸ್ಥಾನದ ಬಳಿಗೆ ಓಡಿ ಬಂದು ಗೋಳಾಡಲು ಶುರು ಮಾಡುತ್ತಾಳೆ. ಮಗು ನೀರಿಗೆ ಬಿತ್ತು ಎಂದೆಲ್ಲ ಹೇಳುತ್ತಾಳೆ. ಅಲ್ಲಿನ ಜನರು ಕೂಡಲೇ ಓಡಿ ಹೋಗಿ ಮಗುವನ್ನು ಹುಡುಕುತ್ತಾರೆ. ಆದರೆ, ಮುಳುಗಿದ ಮಗು ಸಿಕ್ಕಿರಲಿಲ್ಲ. ಬುಧವಾರ ಮುಂಜಾನೆಯಷ್ಟೇ ಅದು ಸಿಕ್ಕಿದೆ.

ಈ ನಡುವೆ, ಆಕೆಯ ಅಕ್ರಮ ಸಂಬಂಧ, ಮನೆಯಲ್ಲಿ ನಿತ್ಯ ನಡೆಯುತ್ತಿರುವ ಜಗಳದ ವಿಚಾರವನ್ನು ಪೊಲೀಸರಿಗೆ ತಿಳಿಸಿದಾಗ ಪೊಲೀಸರು ಆಕೆಯನ್ನು ವಿಚಾರಣೆಗೆ ಒಳಪಡಿಸುತ್ತಾರೆ. ಆಗ ಇದೊಂದು ಅಕಸ್ಮಿಕ ಸಾವಲ್ಲ, ಕೊಲೆ ಎಂದು ತಿಳಿದುಬರುತ್ತದೆ.

ಇದನ್ನೂ ಓದಿ : Physical Abuse : ಅಪ್ರಾಪ್ತ ಬಾಲಕರಿಂದ 10ರ ಬಾಲಕಿ ಮೇಲೆ ಚಾಕು ತೋರಿಸಿ ಅತ್ಯಾಚಾರ, ಮೊಬೈಲ್‌ನಲ್ಲಿ ರೆಕಾರ್ಡ್!

ಡಿವೈಎಸ್‌ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಭಾಗ್ಯಳನ್ನು ವಿಚಾರಣೆಗೆ ಒಳಪಡಿಸಿದರು. ಅಕ್ಕೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯನ್ನು ಬಂಧಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

Vitamin D:ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

VISTARANEWS.COM


on

Foods rich in vitamin D
Koo

ನವದೆಹಲಿ:ವಿಟಮಿನ್‌ ಡಿ(Vitamin D) ಕೊರತೆ ಎಂಬುದು ಪ್ರಪಂಚಾದ್ಯಂತ ಹೆಚ್ಚಿನ ಜನರಲ್ಲಿ ಅತ್ಯಂತ ಸಾಮಾನ್ಯವಾಗಿ ಕಂಡು ಬರುವ ಪೌಷ್ಟಿಕಾಂಶ ಕೊರತೆ(Nutrient shortages)ಯಾಗಿದೆ. ಇದು ಸಾಮಾನ್ಯವಾಗಿ 65 ವರ್ಷ ಮೇಲ್ಪಟ್ಟ ಜನರಲ್ಲಿ ಕಂಡು ಬರುವ ಪೌಷ್ಠಿಕಾಂಶ ಕೊರತೆ. ಪ್ರಪಂಚದ ಶೇ.13ರಷ್ಟು ಜನರಲ್ಲಿ ವಿಟಮಿನ್‌ ಡಿ ಕೊರತೆ ಕಂಡು ಬರುತ್ತದೆ. ವಿಟಮಿನ್‌ ಡಿ ಕೊರತೆಯಿಂದ ಎಲುಬು, ಗಂಟು ನೋವು, ಸಂಧು ನೋವು, ಮೂಡ್‌ ಚೇಂಜ್‌ ಹೀಗೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಆದರೆ ಇದೀಗ ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌(Cancer)ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

ವಿಟಮಿನ್‌ ಡಿ ಕೊರತೆ ಹೇಗೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ?

ವಿಟಮಿನ್‌ ಡಿ 3 ಮತ್ತು ಕ್ಯಾಲ್ಸಿಯಂ ಮಾತ್ರೆ ಸೇವನೆಯಿಂದ ಕ್ಯಾನ್ಸರ್‌ ತಡೆಯಲು ಸಾಧ್ಯವಿಲ್ಲ ಎಂದು ಅಧ್ಯಯನ ವರದಿ ಹೇಳಿದೆ. ವಿಟಮಿನ್‌ ಡಿ ಕ್ಯಾನ್ಸರ್‌ ಸೆಲ್‌ಗಳ ವಿಡಿಜನ್‌ ಮತ್ತು ಅವುಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೇ . ಅದರ ಕೊರತೆ ಆದಲ್ಲಿ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರ್‌ಗೆ ತುತ್ತಾಗು ಸಾಧ್ಯತೆ ಹೆಚ್ಚಿರುತ್ತದೆ. ವೈದ್ಯರ ಹೇಳುವ ಪ್ರಕಾರ ವಿಟಮಿನ್‌ ಡಿ ಮನುಷ್ಯನ ಎಲುಬುಗಳ ಆರೋಗ್ಯ ಕಾಪಾಡುವುದು ಮಾತ್ರವಲ್ಲದೇ ದೇಹದಲ್ಲಿರುವ ದೋಷಯುಕ್ತ ಜೀನ್‌ಗಳನ್ನು ಸರಿಪಡಿಸುವ ಪ್ರಕ್ರಿಯೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ಈ ಪ್ರಕ್ರಿಯೆಗೆ MMR ಎಂದು ಕರೆಯಲಾಗಿದ್ದು, ಇದಕ್ಕೆ ವಿಟಮಿನ್‌ ಡಿ ಅಗತ್ಯ ಹೆಚ್ಚಾಗಿದೆ. ಇನ್ನು ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ ಗೆ ಕಾರಣವಾಗುತ್ತದೇಯೇ ಎಂಬ ವಿಷಯದ ಬಗ್ಗೆ ಮತ್ತಷ್ಟು ಅಧ್ಯಯನ ಮುಂದುವರೆದಿದೆ.

ವಿಟಮಿನ್ ಡಿ ಕೊರತೆ ಉಂಟಾಗದಿರಲು ಏನು ಮಾಡಬೇಕು?

1. ವಿಟಮಿನ್ ಡಿ ಕೊರತೆಗೆ ಪ್ರಮುಖ ಮದ್ದು ಎಂದರೆ ಬೆಳಗ್ಗೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲುವುದು. ತ್ವಚೆಯ ಮೇಲೆ ಯುವಿ-ಬಿ ಕಿರಣಗಳು ಬಿದ್ದಾಗ ಕೊಲೆಸ್ಟ್ರಾಲ್ ವಿಟಮಿನ್ ಡಿ ಆಗಿ ಪರಿವರ್ತನೆ ಆಗುವುದು. ನಿಮ್ಮ ತ್ವಚೆಯ ಬಣ್ಣದ ಮೇಲೆ ನೀವು ಬಿಸಿಲಿನಲ್ಲಿ ನಿಲ್ಲುವ ಸಮಯಲ್ಲಿ ವ್ಯತ್ಯಾಸವಿರುತ್ತದೆ. ಕಪ್ಪು ಬಣ್ಣದ ತ್ವಚೆಯವರು ಬಿಳಿ ಬಣ್ಣದ ತ್ವಚೆಯವರಿಗಿಂತ ಹೆಚ್ಚು ಹೊತ್ತು ಬಿಸಿಲಿನಲ್ಲಿ ನಿಲ್ಲಬೇಕು. ಇನ್ನು ವಯಸ್ಸು ಹೆಚ್ಚಾದಂತೆ ಬಿಸಿಲಿನಲ್ಲಿ ಹೆಚ್ಚು ಹೊತ್ತು ನಿಂತರೆ ಒಳ್ಳೆಯದು.

ಇದನ್ನೂ ಓದಿ:IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

2. ಮೀನು ಹಾಗೂ ಸಮುದ್ರ ಆಹಾರಗಳಲ್ಲಿ ವಿಟಮಿನ್ ಡಿ ಇರುತ್ತದೆ. ಬೂತಾಯಿ, ಮೃದ್ವಂಗಿಗಳು, ಸಿಗಡಿ, ಬಂಗುಡೆ ಈ ಮೀನುಗಳಲ್ಲಿ ವಿಟಮಿನ್ ಡಿ ಅಂಶವಿರುತ್ತದೆ.

3. ಬೆಳಸುವ ಅಣಬೆಗಳಿಗಿಂತ ನೈಸರ್ಗಿಕವಾಗಿ ಸಿಗುವ ಅಣಬೆಗಳಲ್ಲಿ ವಿಟಮಿನ್ ಡಿ ಅಧಿಕವಿರುತ್ತದೆ.

4. ಮೀನು ತಿನ್ನದವರು ಮೊಟ್ಟೆಯನ್ನು ತಿಂದರೆ ಅದರಲ್ಲಿ ಸ್ವಲ್ಪ ಪ್ರಮಾಣದ ವಿಟಮಿನ್ ಡಿ ದೊರೆಯುವುದು. ಮೊಟ್ಟೆಯ ಬಿಳಿ ಜತೆಗೆ ಅರಿಶಿಣ ಕೂಡ ತಿನ್ನಿ.

5. ಇನ್ನು ದನದ ಹಾಲು ಕುಡಿಯುವುದು, ಸೋಯಾ ಹಾಲು, ಕಿತ್ತಳೆ ಜ್ಯೂಸ್‌ ಇವುಗಳನ್ನು ಕೂಡ ಡಯಟ್‌ನಲ್ಲಿ ಸೇರಿಸಿ.
ಓಟ್‌ಮೀಲ್ ಹಾಗೂ ಧಾನ್ಯಗಳಲ್ಲಿ ಕೂಡ ಸ್ವಲ್ಪ ಪ್ರಮಾಣದಲ್ಲಿ ವಿಟಮಿನ್ ಡಿ ಇರುತ್ತದೆ.

Continue Reading

ಆರೋಗ್ಯ

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Outdoor Exercise: ಆರೋಗ್ಯವಾಗಿರಲು ವ್ಯಾಯಾಮ ಬಹು ಮುಖ್ಯ. ವ್ಯಾಯಾಮ ಮಾಡುವ ಪ್ರತಿಯೊಂದು ವಿಧಾನಗಳು ಮಾನಸಿಕ ಆರೋಗ್ಯ ಕಾಪಾಡಲು ನಮಗೆ ಸಹಕಾರಿಯಾಗುತ್ತದೆ. ಆದರಲ್ಲೂ ಹೊರಗಣ ವ್ಯಾಯಾಮ ಮಾಡುವುದರಿಂದ ಮಾನಸಿಕ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಅದು ಹೇಗೆ ಗೊತ್ತೇ? ಈ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Outdoor Exercise
Koo

ಆರೋಗ್ಯವಾಗಿರಲು (healthy) ವ್ಯಾಯಾಮ (exercise) ಬಹುಮುಖ್ಯ. ಪ್ರತಿಯೊಂದು ರೀತಿಯ ವ್ಯಾಯಾಮವೂ ದೇಹ, ಮನಸ್ಸಿನ ಆರೋಗ್ಯಕ್ಕೆ ತನ್ನದೇ ಆದ ರೀತಿಯಲ್ಲಿ ಪರಿಣಾಮ ಬೀರುತ್ತದೆ. ಅದರಲ್ಲೂ ಹೊರಾಂಗಣ ವ್ಯಾಯಾಮ ದೇಹಕ್ಕೆ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೆ (mental health) ಬಹು ಪ್ರಯೋಜನಕಾರಿಯಾಗಿದೆ.

ಹೊರಾಂಗಣದಲ್ಲಿ ವ್ಯಾಯಾಮ (Outdoor Exercise) ಖಿನ್ನತೆಯ (depression) ಅಪಾಯವನ್ನು ಕಡಿಮೆ ಮಾಡುವುದು ಮಾತ್ರವಲ್ಲ ವಿವಿಧ ಮಾನಸಿಕ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ ತಜ್ಞರು. ಹೊರಾಂಗಣದಲ್ಲಿ ವ್ಯಾಯಾಮ ಮಾಡುವುದರಿಂದ ಭಾವನಾತ್ಮಕ, ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಹೊರಾಂಗಣ ವ್ಯಾಯಾಮ ಮಾಡುವುದರಿಂದ ಖಿನ್ನತೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ ಕೆಲವು ಅಂಶಗಳು.

ಇದನ್ನೂ ಓದಿ: Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!


ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದು

ಸೂರ್ಯನ ಬೆಳಕು ನಮ್ಮ ದೇಹದ ಸಿರೊಟೋನಿನ್ ಉತ್ಪಾದನೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ನರಗಳ ಯೋಗಕ್ಷೇಮ ಮತ್ತು ಸಂತೋಷದ ಭಾವನೆಗಳಿಗೆ ಸೂರ್ಯನ ಬೆಳಕು ಸಾಕಷ್ಟು ಕೊಡುಗೆ ನೀಡುತ್ತದೆ. ನೈಸರ್ಗಿಕ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಸೀಸನಲ್ ಎಫೆಕ್ಟಿವ್ ಡಿಸಾರ್ಡರ್ (ಎಸ್‌ಎಡಿ) ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಮತ್ತು ಸಾಮಾನ್ಯವಾಗಿ ಮನಸ್ಥಿತಿಯನ್ನು ಸುಧಾರಿಸುತ್ತದೆ.

ವಿಟಮಿನ್ ಡಿ ಉತ್ಪಾದನೆ

ಸೂರ್ಯನ ಬೆಳಕಿಗೆ ನಮ್ಮನ್ನು ನಾವು ಒಡ್ಡಿಕೊಳ್ಳುವುದರಿಂದ ವಿಟಮಿನ್ ಡಿ ಅನ್ನು ಉತ್ಪಾದಿಸಲು ಚರ್ಮಕ್ಕೆ ಉತ್ತೇಜಿನ ಸಿಕ್ಕಂತಾಗುತ್ತದೆ. ಮೆದುಳಿನ ಕಾರ್ಯವನ್ನು ಒಳಗೊಂಡಂತೆ ಒಟ್ಟಾರೆ ಆರೋಗ್ಯಕ್ಕೆ ನಿರ್ಣಾಯಕವಾಗಿದೆ. ಕಡಿಮೆ ಮಟ್ಟದ ವಿಟಮಿನ್ ಡಿ ಖಿನ್ನತೆ ಮತ್ತು ಇತರ ಮಾನಸಿಕ ಅಸ್ವಸ್ಥತೆಗಳನ್ನು ದೂರ ಮಾಡುತ್ತದೆ.

ದೈಹಿಕ ಚಟುವಟಿಕೆ

ವ್ಯಾಯಾಮ ಎಂಡಾರ್ಫಿನ್ ಗಳನ್ನು ಬಿಡುಗಡೆ ಮಾಡುತ್ತದೆ. ಮೆದುಳಿನಲ್ಲಿ ನೈಸರ್ಗಿಕ ನೋವು ನಿವಾರಕಗಳು ಮತ್ತು ಮೂಡ್ ಎಲಿವೇಟರ್ ಗಳಾಗಿ ಇದು ಕಾರ್ಯನಿರ್ವಹಿಸುವ ರಾಸಾಯನಿಕಗಳು. ಹೊರಾಂಗಣ ವ್ಯಾಯಾಮವು ಚಲನೆ ಮತ್ತು ದೈಹಿಕ ಪರಿಶ್ರಮವನ್ನು ಉತ್ತೇಜಿಸುತ್ತದೆ, ಇದು ಮನಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

ಸಾಮಾಜಿಕ ಸಂವಹನ

ಹೊರಾಂಗಣದಲ್ಲಿ ವ್ಯಾಯಾಮ ಮಾಡುವುದು ಸಾಮಾನ್ಯವಾಗಿ ನಡಿಗೆ, ಜಾಗಿಂಗ್ ಅಥವಾ ತಂಡದ ಕ್ರೀಡೆಗಳಂತಹ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ. ಇದನ್ನು ಇತರರೊಂದಿಗೆ ಮಾಡಬಹುದಾಗಿದೆ. ಮಾನಸಿಕ ಆರೋಗ್ಯಕ್ಕೆ ಸಾಮಾಜಿಕ ಸಂವಹನವು ಅತ್ಯಗತ್ಯ. ಏಕೆಂದರೆ ಇದು ಒಂಟಿತನದ ಭಾವನೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತದೆ.


ಪ್ರಕೃತಿಯೊಂದಿಗೆ ಸಂಪರ್ಕ

ಪರಿಸರದ ಮಧ್ಯೆ ಇರುವುದು ಮನಸ್ಸನ್ನು ಶಾಂತಗೊಳಿಸುತ್ತದೆ. ಹೊರಾಂಗಣ ವ್ಯಾಯಾಮವನ್ನು ಉದ್ಯಾನವನ, ಅರಣ್ಯ ಅಥವಾ ಕಡಲತೀರದಲ್ಲಿ ಅಥವಾ ಮನೆಯ ಬಾಲ್ಕನಿಯಲ್ಲಿ ಮಾಡುವುದರಿಂದ ಪ್ರಕೃತಿಯ ದೃಶ್ಯಗಳು, ಶಬ್ದಗಳು ಮತ್ತು ವಾಸನೆಗಳು ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.

ಒತ್ತಡ ಕಡಿಮೆ ಮಾಡುವುದು

ಹೊರಾಂಗಣ ವ್ಯಾಯಾಮವು ಮನಸ್ಸಿಗೆ ಸಾವಧಾನತೆಯನ್ನು ಒದಗಿಸುತ್ತದೆ. ಯಾಕೆಂದರೆ ಇದು ನಮ್ಮ ಸುತ್ತಮುತ್ತಲಿನ ಮತ್ತು ದೈಹಿಕ ಸಂವೇದನೆಗಳ ಮೇಲೆ ಕೇಂದ್ರೀಕರಿಸಲು ಸಹಾಯ ಮಾಡುತ್ತದೆ. ಸಾವಧಾನತೆಯು ಒತ್ತಡ ಮಟ್ಟವನ್ನು ಕಡಿಮೆ ಮಾಡಲು ಮತ್ತು ಮನಸ್ಸಿನ ಶಾಂತಿ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ಇದು ಸಹಾಯ ಮಾಡುತ್ತದೆ.

ಹೊಸ ಅನುಭವ

ಹೊರಾಂಗಣದಲ್ಲಿ ವ್ಯಾಯಾಮವು ದೃಶ್ಯಾವಳಿಗಳ ಬದಲಾವಣೆ ಹೊಸ ಅನುಭವಗಳನ್ನು ನೀಡುತ್ತದೆ. ಇದು ಒಳಾಂಗಣ ಜೀವನಕ್ರಮಗಳ ಏಕತಾನತೆಯನ್ನು ಹೋಗಲಾಡಿಸುತ್ತದೆ. ವ್ಯಾಯಾಮದ ದಿನಚರಿಗಳಲ್ಲಿನ ವೈವಿಧ್ಯತೆಯು ಬೇಸರವನ್ನು ದೂರ ಮಾಡುತ್ತದೆ ಮತ್ತು ಹೆಚ್ಚಿನ ಪ್ರೇರಣೆಯನ್ನು ನೀಡುತ್ತದೆ.


ಉತ್ತಮ ನಿದ್ರೆ

ನಿಯಮಿತ ವ್ಯಾಯಾಮವನ್ನು ವಿಶೇಷವಾಗಿ ಹೊರಾಂಗಣದಲ್ಲಿ ಮಾಡಿದಾಗ ಉತ್ತಮ ನಿದ್ರೆ ಆವರಿಸುವುದು. ಇದು ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು. ಮಾನಸಿಕ ಆರೋಗ್ಯಕ್ಕೆ ಸಾಕಷ್ಟು ನಿದ್ರೆ ಅತ್ಯಗತ್ಯ, ಮತ್ತು ಸಾಕಷ್ಟು ವಿಶ್ರಾಂತಿ ಪಡೆಯುವುದು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸ್ವಾಭಿಮಾನವನ್ನು ಹೆಚ್ಚಿಸುತ್ತದೆ

ಹೊರಾಂಗಣ ವ್ಯಾಯಾಮದಲ್ಲಿ ಸಾಕಷ್ಟು ಸವಾಲುಗಳು ಎದುರಾಗುತ್ತದೆ. ಇದರಿಂದ ಸ್ವಾಭಿಮಾನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಬಹುದು. ಸಾಧನೆ ಮತ್ತು ಸಮರ್ಥ ಭಾವನೆಯು ಖಿನ್ನತೆಗೆ ಸಂಬಂಧಿಸಿದ ನಿಷ್ಪ್ರಯೋಜಕತೆ ಅಥವಾ ಅಸಮರ್ಪಕತೆಯ ಭಾವನೆಗಳನ್ನು ಹೋಗಲಾಡಿಸುತ್ತದೆ.

ನಕಾರಾತ್ಮಕ ಆಲೋಚನೆಗಳಿಂದ ಮುಕ್ತಿ

ಹೊರಾಂಗಣ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವುದರಿಂದ ಖಿನ್ನತೆಗೆ ಕಾರಣವಾಗುವ ಒತ್ತಡಗಳು ಮತ್ತು ನಕಾರಾತ್ಮಕ ಆಲೋಚನೆಗಳಿಂದ ದೂರವಾಗಬಹುದು. ದೈಹಿಕ ಚಟುವಟಿಕೆಯ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸುವುದರಿಂದ ಮನಸ್ಸು ನಕಾರಾತ್ಮಕ ಯೋಚನೆಗಳನ್ನು ಮಾಡುವುದನ್ನು ಬಿಡುತ್ತದೆ.

Continue Reading

ಆರೋಗ್ಯ

Drinks for Summer: ಬೇಸಿಗೆಯಲ್ಲಿ ತಂಪಾಗಿರಬೇಕೆ? ಈ ಪೇಯಗಳನ್ನು ತಪ್ಪದೇ ಕುಡಿಯಿರಿ

ಸುಡು ಬೇಸಿಗೆ ಸಹಿಸಲಸಾಧ್ಯ ಎಂಬಂತಾಗಿದೆ. ಏನೂ ತಿನ್ನುವುದೇ ಬೇಡ, ತಂಪಾಗಿ ಕುಡಿಯುವುದಕ್ಕೆ ಇದ್ದರೆ ಸಾಕು ಎನ್ನುವ ಈ ದಿನಗಳಲ್ಲಿ ದೇಹ ಬಳಲದಂತೆ ಕಾಪಾಡುವುದು ಹೇಗೆ? ಇಲ್ಲಿವೆ ಹಲವು ರೀತಿಯ ಆರೋಗ್ಯಕರ ಪೇಯಗಳು. ಇವು ಬೇಸಿಗೆಯ (Drinks for Summer) ದಾಹ ನೀಗಿಸುತ್ತವೆ. ಮಾತ್ರವಲ್ಲ, ಆರೋಗ್ಯಕ್ಕೂ ಹಿತಕರ.

VISTARANEWS.COM


on

Drinks for Summer
Koo

ʻಅಯ್ಯೋ, ಊಟವೂ ಬೇಡ, ತಿಂಡಿಯೂ ಬೇಡʼ ಎಂದು ಈ ದಿನಗಳಲ್ಲಿ ಯಾರಾದರೂ ಹೇಳಿದರೆ, ಅವರು ಉಪವಾಸದಲ್ಲಿದ್ದಾರೆ ಎಂದು ಭಾವಿಸುವ ಅಗತ್ಯವಿಲ್ಲ. ಈ ಉರಿ ಸೆಕೆಯಲ್ಲಿ ತಿನ್ನುವುದಕ್ಕೇನೂ ಬೇಡ, ತಂಪಾಗಿಡುವಂಥ ಪೇಯಗಳು ಮಾತ್ರವೇ ಸಾಕು ಎಂಬುದು ಅವರ ಭಾವವಾಗಿರುತ್ತದೆ. ಸುಳ್ಳೇನಲ್ಲ, ಈ ಸುಡುವ ಬಿಸಿಲಿನಲ್ಲಿ ದೇಹವನ್ನು ತಂಪಾಗಿಡುವಂಥ ಪೇಯಗಳು ಇದ್ದಷ್ಟಕ್ಕೂ ಬೇಕೆನಿಸುತ್ತದೆ. ಹಾಗೆಂದು ಸದಾ ಕಾಲ ನೀರು ಕುಡಿಯಲೂ ಸಾಧ್ಯವಿಲ್ಲ. ದೇಹಕ್ಕೆ ಪೋಷಣೆಯನ್ನೂ ನೀಡಿ, ನೀರಡಿಕೆಯನ್ನೂ ಹೋಗಲಾಡಿಸುವಂಥ ಒಂದಿಷ್ಟು ಪೇಯಗಳು (Drinks for Summer) ಇಲ್ಲಿವೆ. ನಿಮಗೆ ಯಾವುದಿಷ್ಟ?

Drinking warm water with a little lemon juice on an empty stomach in the morning is beneficial for health Benefits Of Lemon Water

ನಿಂಬೆ ಪಾನಕ

ವಿಟಮಿನ್‌ ಸಿ ಹೇರಳವಾಗಿರುವ ಈ ಪಾನಕಕ್ಕೆ ಸಿಹಿಯನ್ನು ಬೆರೆಸದೆಯೇ ಸೇವಿಸಲೂಬಹುದು. ಬೆಲ್ಲ, ಏಲಕ್ಕಿಯಂಥವನ್ನು ಸ್ವಲ್ಪ ಸೇರಿಸಿಕೊಂಡರೆ, ಈ ಚೇತೋಹಾರಿಯಾದ ಪಾನಕ ದೇಹವನ್ನು ತಂಪಾಗಿಸುತ್ತದೆ. ಇದರಿಂದ ಜೀರ್ಣಕ್ರಿಯೆಗೆ, ರೋಗನಿರೋಧಕ ಶಕ್ತಿಗೆ ಇಂಬು ದೊರೆಯುತ್ತದೆ.

ಇನ್ಫ್ಯೂಸ್ಡ್‌ ವಾಟರ್

ಹೆಸರು ನೋಡಿ ಏನೋ ಎಂದುಕೊಳ್ಳಬೇಕಿಲ್ಲ. ಅನಾನಸ್‌, ಸೌತೇಕಾಯಿ, ಪುದೀನಾ, ನಿಂಬೆಹುಲ್ಲು, ದ್ರಾಕ್ಷಿ ಮುಂತಾದ ನಿಮ್ಮಿಷ್ಟದ ಯಾವುದನ್ನಾದರೂ ಒಂದು ದೊಡ್ಡ ಕಪ್‌ನಷ್ಟು ತೆಗೆದುಕೊಂಡು ಮೂರು ಲೀಟರ್‌ ನೀರಿನ ಪಾತ್ರೆಗೆ ಬೆರೆಸಿ, ಕೆಲಕಾಲ ಇಡಿ. ವಿಭಿನ್ನ ರುಚಿ ಮತ್ತು ಘಮ ಹೊಂದಿರುವ ಈ ನೀರನ್ನು ದಿನವಿಡೀ ಕುಡಿಯಿರಿ. ಯಾವುದನ್ನೆಲ್ಲ ನೀರಿಗೆ ಬೆರೆಸುತ್ತೀರಿ ಎಂಬುದರ ಮೇಲೆ ಆ ನೀರಿನ ಸತ್ವವೇನು ಎಂಬುದು ನಿರ್ಧಾರವಾಗುತ್ತದೆ.

Coconut water Foods For Fight Against Dengue Fever

ಎಳನೀರು

ಇದಂತೂ ಬೇಸಿಗೆಯಲ್ಲಿ ಅಮೃತ ಸಮಾನ. ದೇಹಕ್ಕೆ ಬೇಕಾದ ಎಲೆಕ್ಟ್ರೊಲೈಟ್‌ಗಳನ್ನೆಲ್ಲ ನೈಸರ್ಗಿಕವಾಗಿ ಒದಗಿಸುವ ಅದ್ಭುತ ಪೇಯವಿದು. ಅದರಲ್ಲೂ ವ್ಯಾಯಾಮ ಮಾಡಿದ ನಂತರ, ಬಿಸಿಲಿನಲ್ಲಿ ತಿರುಗಾಡುವಾಗ, ಆಯಾಸವಾಗಿದ್ದಲ್ಲಿ ಒಂದು ಎಳನೀರು ಹೊಟ್ಟೆಗೆ ಬಿದ್ದರೂ, ದೇಹ ಚೇತರಿಸಿಕೊಳ್ಳುತ್ತದೆ. ಬೇಸಿಗೆ ತಣಿಯುವವರೆಗೂ ದಿನಕ್ಕೊಂದು ಎಳನೀರು ಖಂಡಿತ ಕುಡಿಯಬಹುದು.

ಎಳ್ಳಿನ ಪಾನಕ

ಒಂದು ದೊಡ್ಡ ಚಮಚ ಎಳ್ಳನ್ನು ಕೆಲಕಾಲ ನೆನೆಸಿ, ಏಲಕ್ಕಿಯೊಂದಿಗೆ ರುಬ್ಬಿಕೊಳ್ಳಿ. ಇದಕ್ಕೆ ರುಚಿಗೆ ತಕ್ಕಷ್ಟು ತಂಪಾದ ಹಾಲು, ಬೆಲ್ಲ ಬೆರೆಸಿ. ದೇಹ ತಣಿಯುವಷ್ಟು ಸೇವಿಸಿ. ಹೆಸರು ಕಾಳನ್ನೂ ಹೀಗೆಯೇ ನೆನೆಸಿ, ರುಬ್ಬಿ, ಪೇಯ ಮಾಡಿಕೊಂಡು ಸೇವಿಸಬಹುದು.

ragi drink

ರಾಗಿ ತಿಳಿ

ಯಾವುದೇ ಧಾನ್ಯಗಳ ತಿಳಿಗಳು ದೇಹಕ್ಕೆ ತಂಪೆರೆಯುತ್ತವೆ. ಕೇವಲ ರಾಗಿಯೆಂದಲ್ಲ, ಅಕ್ಕಿ, ಗೋದಿ ಮುಂತಾದ ನಿಮ್ಮಿಷ್ಟದ ಯಾವುದೇ ಧಾನ್ಯಗಳ ತಿಳಿಯನ್ನು ಈ ದಿನಗಳಲ್ಲಿ ಸೇವಿಸುವುದರಿಂದ ದಾಹವೂ ನೀಗುತ್ತದೆ, ದೇಹಕ್ಕೆ ಬೇಕಾದ ಪೋಷಣೆಯೂ ಲಭಿಸುತ್ತದೆ. ತಿನ್ನುವುದೇ ಬೇಡ ಎನ್ನುವ ಈ ದಿನಗಳಲ್ಲಿ ದೇಹ ಬಳಲದಂತೆ ಈ ಮೂಲಕ ಕಾಪಾಡಿಕೊಳ್ಳಬಹುದು.

ಬೂದುಗುಂಬಳದ ರಸ

ನೈಸರ್ಗಿಕವಾಗಿಯೇ ರಸಭರಿತವಾದಂಥ ತರಕಾರಿಯಿದು. ಇದನ್ನು ಕತ್ತರಿಸಿ ರುಬ್ಬಿ ರಸ ತೆಗೆದುಕೊಳ್ಳಿ. ಬೆಳಗಿನ ಖಾಲಿ ಹೊಟ್ಟೆಯಲ್ಲಿ ಮಾತ್ರವೇ ಅಲ್ಲ, ದಿನದ ಯಾವುದೇ ಹೊತ್ತಿನಲ್ಲಿ ಬೂದುಗುಂಬಳದ ರಸ ಸೇವಿಸುವುದರಿಂದ ದೇಹವನ್ನು ತಂಪಾಗಿಸಿಕೊಳ್ಳಬಹುದು. ಹಲವು ರೀತಿಯ ಖನಿಜಗಳು ಮತ್ತು ವಿಟಮಿನ್‌ಗಳನ್ನು ಶರೀರಕ್ಕೆ ಒದಗಿಸಬಹುದು.

ಹಣ್ಣಿನ ರಸಗಳು

ಕಲ್ಲಂಗಡಿಯಿಂದ ಹಿಡಿದು, ಅನಾನಸ್‌, ಕಿತ್ತಳೆ, ದ್ರಾಕ್ಷಿ ಮುಂತಾದ ಯಾವುದೇ ರಸಭರಿತ ಹಣ್ಣುಗಳನ್ನು ಜ್ಯೂಸರ್‌ಗೆ ಹಾಕಿದರೆ ಶುದ್ಧ ಹಣ್ಣಿನ ರಸ ಲಭ್ಯವಾಗುತ್ತದೆ. ಮಾರುಕಟ್ಟೆಯಲ್ಲಿ ದೊರೆಯುವ ಯಾವುದೇ ಕೃತಕ ಬಣ್ಣ, ಪರಿಮಳದ ಜ್ಯೂಸ್‌ ಖರೀದಿಸುವ ಬದಲು, ಇಂಥ ಶುದ್ಧ ಹಣ್ಣಿನ ರಸಗಳು ಆರೋಗ್ಯಕ್ಕೆ ಬೇಕಾದ ಆರೈಕೆಯನ್ನು ನೀಡುತ್ತವೆ.

buttermilk Drinks That Control Blood pressure

ಮಜ್ಜಿಗೆ

ತಂಪಾದ ಮಜ್ಜಿಗೆಯನ್ನಂತೂ ಹೇಗೆ ಬೇಕೆಂದರೆ ಹಾಗೆ ಒಗ್ಗಿಸಿಕೊಳ್ಳಬಹುದು. ಇಂಗು, ಜೀರಿಗೆ, ಉಪ್ಪು, ಕೊತ್ತಂಬರಿ ಸೊಪ್ಪು, ಹಸಿಶುಂಠಿ, ಹಸಿಮೆಣಸು… ಹೀಗೆ ತರಹೇವಾರಿ ಘಮಗಳೊಂದಿಗೆ ನೀರು-ಮಜ್ಜಿಗೆಯನ್ನು ಕುಡಿಯುವ ಕ್ರಮ ಹೆಚ್ಚಿನ ಕಡೆಗಳಲ್ಲಿ ರಾಮನವಮಿಗೆ ಮುನ್ನವೇ ಆರಂಭವಾಗಿರುತ್ತದೆ. ಹೊಟ್ಟೆಯ ಆರೋಗ್ಯವನ್ನೂ ಜೋಪಾನ ಮಾಡುವ ಮಜ್ಜಿಗೆ ದೇಹಕ್ಕೆ ಅಗತ್ಯ ಸತ್ವವನ್ನೂ ಒದಗಿಸುತ್ತದೆ.

ಬೀಜಗಳು

ಕಾಮಕಸ್ತೂರಿ, ಚಿಯಾ ಮುಂತಾದ ಸಣ್ಣ ಬೀಜಗಳನ್ನು ನೀರಲ್ಲಿ ನೆನೆಸಿ, ಒಂದೆರಡು ಗಂಟೆಗಳ ಕಾಲ ಬಿಡಿ. ಇದನ್ನು ಬೇಕಾದಷ್ಟು ಪ್ರಮಾಣದ ನೀರಿಗೆ ಹಾಗೆಯೇ ಬೆರೆಸಿ ಕುಡಿಯಬಹುದು ಅಥವಾ ಹಾಲಿನೊಂದಿಗೂ ಬೆರೆಸಿಕೊಳ್ಳಬಹುದು. ಇವು ದೇಹಕ್ಕೆ ಬೇಕಾದಂಥ ಮಹತ್ವದ ಸತ್ವಗಳನ್ನು ಒದಗಿಸಿ, ಸುಡು ಬೇಸಿಗೆಯಲ್ಲಿ ದೇಹ ತಂಪಾಗಿರುವಂತೆ ಮಾಡುತ್ತದೆ.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

Continue Reading

ಆರೋಗ್ಯ

Summer Food Tips: ಬೇಸಿಗೆಯಲ್ಲಿ ಈ 8 ಆಹಾರಗಳಿಂದ ದೂರ ಇರಿ!

ಕೆಲವು ಆಹಾರಗಳು ಹೆಚ್ಚಿನ ಉಷ್ಣತೆಯನ್ನು “(Summer Food Tips) ದೇಹದಲ್ಲಿ ಉತ್ಪತ್ತಿ ಮಾಡುತ್ತವೆ ಅಥವಾ ಜೀರ್ಣವಾಗಲು ದೀರ್ಘ ಕಾಲ ತೆಗೆದುಕೊಳ್ಳುತ್ತವೆ. ಇದರಿಂದ ದೇಹ ತಂಪಾಗಿಡುವುದು ಕಷ್ಟಸಾಧ್ಯ. ಯಾವ ಆಹಾರಗಳವು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Summer Food Tips
Koo

ಬೇಸಿಗೆಯ ತಾಪಮಾನ 40 ಡಿ.ಸೆ. ದಾಟುತ್ತಿದೆ ಬಹಳಷ್ಟು ಕಡೆಗಳಲ್ಲಿ. ಕಂಡು ಕೇಳರಿಯದ ಈ ಬೆಂಕಿಯಂಥ ಬೇಸಿಗೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಎಲ್ಲರೂ ಒದ್ದಾಡುತ್ತಿದ್ದಾರೆ. ದೇಹವನ್ನು ತಂಪು ಮಾಡುವ ಭರದಲ್ಲಿ ಕೆಲವೊಮ್ಮೆ ತದ್ವಿರುದ್ಧ ಕೆಲಸವನ್ನೇ ಮಾಡಿರುತ್ತೇವೆ. ಅದರಲ್ಲೂ ಕೆಲವು ಆಹಾರಗಳು ಹೆಚ್ಚಿನ ಉಷ್ಣತೆಯನ್ನು ದೇಹದಲ್ಲಿ ಉತ್ಪತ್ತಿ ಮಾಡುತ್ತವೆ ಅಥವಾ ಜೀರ್ಣವಾಗಲು ದೀರ್ಘ ಕಾಲ ತೆಗೆದುಕೊಳ್ಳುತ್ತವೆ. ಇದರಿಂದ ದೇಹ ತಂಪಾಗಿಡುವುದು ಕಷ್ಟಸಾಧ್ಯ. ಯಾವ (Summer Food Tips) ಆಹಾರಗಳವು?

Coffee and Caffeinated Beverages Healthy Foods That Are Harmful To Consume At Night

ಕಾಫಿ

ಹೀಗೆನ್ನುತ್ತಿದ್ದಂತೆ ಕಾಫಿ ಪ್ರಿಯರು ಸಿಟ್ಟಿಗೇಳಬಹುದು. ಆದರೆ ಕೇವಲ ಕಾಫಿ ಅಂತಲೇ ಅಲ್ಲ, ಕೆಫೇನ್‌ ಹೆಚ್ಚಿರುವ ಯಾವುದೇ ಪಾನೀಯಗಳು ಬೇಸಿಗೆಗೆ ಹೇಳಿಸಿದ್ದಲ್ಲ. ಚಹಾ ಸೇವನೆ ಹೆಚ್ಚಾದರೂ ಬೇಸಿಗೆಯಲ್ಲಿ ತೊಂದರೆಗೆ ಆಹ್ವಾನ ನೀಡಿದಂತೆ. ಹಾಗಾಗಿ ಈ ಬಿರು ಬೇಸಿಗೆಯಲ್ಲಿ ಬೇರೆ ಆರೋಗ್ಯಕರ ಪಾನೀಯಗಳ ಮೊರೆ ಹೋಗುವುದು ಸೂಕ್ತ.

Kerala Inji Curry Ginger Pickle Most Famous Indian Pickles And Their Origin Place

ಉಪ್ಪಿನಕಾಯಿ

ಕೆಲವರಿಗೆ ಊಟಕ್ಕೆ ಮುಂಚೆ ಇದೇ ಬೇಕಾಗುತ್ತದೆ; ಆದರೆ ಬೇಸಿಗೆಯಲ್ಲಿ ಸರಿಯಲ್ಲ. ಇವುಗಳಲ್ಲಿ ಉಪ್ಪಿನಂಶ ಹೆಚ್ಚಿರುವುದರಿಂದ, ದೇಹದಲ್ಲಿನ ನೀರಿನಂಶ ಕಡಿಮೆಯಾಗುವಂತೆ ಮಾಡುತ್ತವೆ. ಹಾಗಾಗಿ ಹೆಚ್ಚು ಉಪ್ಪಿರುವ ಯಾವುದೇ ಆಹಾರಗಳನ್ನೂ ಬಿರು ಬೇಸಿಗೆಯಲ್ಲಿ ಸೇವಿಸದೆ ಇರುವುದು ಜಾಣತನ.

Soda Effects Of Drinks

ಸೋಡಾ

ಇದರಲ್ಲಿ ಕೆಫೇನ್‌ ಮತ್ತು ಸಕ್ಕರೆ ಎರಡೂ ಸೇರಿದ್ದರಿಂದ, ಬೇಸಿಗೆಯ ದಾಹ ತಣಿಸಿಕೊಳ್ಳಲು ಹೇಳಿಸಿದ್ದಲ್ಲ ಈ ಪೇಯ. ಒಮ್ಮೆ ಕುಡಿದರೆ ಮತ್ತೆ ಕುಡಿಯಬೇಕೆನಿಸುವ ಸೋಡಾಗಳು, ದಾಹ ತಣಿಸುವುದಕ್ಕಿಂತ, ದೇಹವನ್ನು ನಿರ್ಜಲೀಕರಣದತ್ತ ದೂಡುತ್ತವೆ. ಅನಗತ್ಯ ಸಕ್ಕರೆಯಂಶವನ್ನು ದೇಹಕ್ಕೆ ತುರುಕಿ, ತೂಕವನ್ನೂ ಹೆಚ್ಚಿಸುತ್ತವೆ.

Image Of Dry Fruits For Hair Fall

ಒಣ ಹಣ್ಣುಗಳು

ಖರ್ಜೂರ, ಉತ್ತುತ್ತೆ, ಅಂಜೂರ ಮುಂತಾದ ಒಣ ಹಣ್ಣುಗಳು ಜೀರ್ಣವಾಗಲು ದೀರ್ಘ ಕಾಲ ತೆಗೆದುಕೊಳ್ಳುತ್ತವೆ. ಹಾಗಾಗಿ ಹೆಚ್ಚು ಶಾಖವನ್ನು ಉತ್ಪತ್ತಿ ಮಾಡುತ್ತವೆ. ಇವುಗಳ ಬದಲಿಗೆ ಬೇಸಿಗೆಯ ತಾಜಾ ರಸಭರಿತ ಹಣ್ಣುಗಳನ್ನು ಸೇವಿಸುವುದು ಸೂಕ್ತ. ಒಣದ್ರಾಕ್ಷಿಯ ಬದಲಿಗೆ ಹಸಿ ದ್ರಾಕ್ಷಿಯನ್ನು ಸೇವಿಸಬಾರದೇಕೆ?

Spicy foods Foods To Avoid Eating With Tea

ಖಾರದ ತಿನಿಸುಗಳು

ಬಾಯಿಗೆ ರುಚಿಕಟ್ಟೆನಿಸುವ ಖಾರದ ತಿನಿಸುಗಳು ಬೇಸಿಗೆಯಲ್ಲಿ ಸೂಕ್ತವಲ್ಲ. ಜೀರ್ಣಾಂಗಗಳ ಕಿರಿಕಿರಿ, ಅಜೀರ್ಣಕ್ಕೆ ಕಾರಣವಾಗಿ, ದೇಹದ ಉಷ್ಣತೆಯನ್ನು ಅಧಿಕ ಮಾಡುತ್ತವೆ. ಜೊತೆಗೆ ಎಷ್ಟು ನೀರು ಕುಡಿದರೂ ಮುಗಿಯದ ನೀರಡಿಕೆಯನ್ನು ತಂದಿಕ್ಕುತ್ತವೆ. ಹಾಗಾಗಿ ಖಾರ ಪ್ರಿಯರು ನೀವಾಗಿದ್ದರೆ, ಬೇಸಿಗೆಯಲ್ಲಿ ಸ್ವಲ್ಪ ಖಾರ ಕಡಿಮೆ ಮಾಡುವುದು ಒಳ್ಳೆಯದು.

Assorted fried snacks Inflammation

ಕರಿದ ತಿಂಡಿಗಳು

ಇದರಲ್ಲೂ ಸೋಡಿಯಂ ಅಂಶ ಹೆಚ್ಚಿರುವುದರಿಂದ, ಕುಡಿದಷ್ಟಕ್ಕೂ ದಾಹ ತೀರುವುದೇ ಇಲ್ಲ ಎನ್ನುವಂತಾಗುತ್ತದೆ. ಜೊತೆಗೆ ಹೆಚ್ಚು ಕೊಬ್ಬಿರುವ ಆಹಾರಗಳು ಜೀರ್ಣಾಂಗಗಳಿಗೆ ಸಿಕ್ಕಾಪಟ್ಟೆ ಕೆಲಸ ನೀಡುತ್ತವೆ. ಇದನ್ನು ಚೂರ್ಣಿಸುವಲ್ಲಿ ದೇಹದ ಶಾಖವೂ ಏರುತ್ತದೆ. ಹಾಗಾಗಿ ಕರಿದ ತಿಂಡಿಗಳು ಸಹ ಬೇಸಿಗೆಗೆ ಸೂಕ್ತವಾದದ್ದಲ್ಲ.

ಮೊಟ್ಟೆ, ಚಿಕನ್

ಕೊಬ್ಬು ಮತ್ತು ಪ್ರೊಟೀನ್‌ ಸಾಂದ್ರವಾದ ಆಹಾರವಿದು. ಜೊತೆಗೆ ಹಲವು ರೀತಿಯ ಖನಿಜಗಳೂ ದೇಹಕ್ಕೆ ದೊರೆಯುತ್ತವೆ. ಆದರೆ ಇದನ್ನು ಪಚನ ಮಾಡುವುದಕ್ಕೆ ದೇಹದಲ್ಲಿ ಬಹಳಷ್ಟು ಶಾಖ‌ ಉತ್ಪತ್ತಿಯಾಗುತ್ತದೆ. ಸದಾ ಕಾಲ ಸೆಕೆಯ ಅನುಭವ ಆಗಬಹುದು ಕೆಲವರಿಗೆ. ಹಾಗಾಗಿ ಬೇಸಿಗೆಯಲ್ಲಿ ಈ ಆಹಾರಗಳ ಸೇವನೆಯನ್ನು ಮಿತಗೊಳಿಸಿದರೆ ಒಳ್ಳೆಯದು.

Remember that alcohol also triggers diabetes Simple Steps to Preventing Diabetes

ಆಲ್ಕೊಹಾಲ್

ಯಾವುದೇ ರೀತಿಯ ಆಲ್ಕೋಹಾಲ್‌ ಸೇವನೆಯು ದೇಹವನ್ನು ನಿರ್ಜಲೀಕರಣದತ್ತ ದೂಡುತ್ತದೆ. ಇದರಿಂದ ಬಾಯಿ ಒಣಗುವುದು, ತಲೆನೋವು ಮುಂತಾದ ಲಕ್ಷಣಗಳು ಕಾಣಬಹುದು. ಜೊತೆಗೆ ಅತಿಯಾದ ಮೂತ್ರ ಮತ್ತು ಬೆವರು ಉತ್ಪತ್ತಿ ಮಾಡಿ, ದೇಹವನ್ನು ಸಂಕಷ್ಟಕ್ಕೆ ದೂಡುತ್ತದೆ. ಹಾಗಾಗಿ ಬೇಸಿಗೆಗೆ ಹೇಳಿಸಿದ್ದಲ್ಲ ಇದು.

Continue Reading
Advertisement
Mohan Bhagwat
ದೇಶ7 mins ago

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Congress instigates bombers We are crushing traitors through NIA PM Narendra Modi
Lok Sabha Election 202410 mins ago

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Election Commission
ದೇಶ11 mins ago

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

T20 World Cup 2024
ಕ್ರೀಡೆ14 mins ago

T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

Foods rich in vitamin D
ದೇಶ20 mins ago

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

TCS World 10K
ಕ್ರೀಡೆ27 mins ago

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

IPL 2024 Points Table
ಕ್ರೀಡೆ44 mins ago

IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

PM Narendra Modi proposing arecanut millets and fisheries
Lok Sabha Election 202453 mins ago

PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

PM Narendra Modi in Sirsi
Lok Sabha Election 20241 hour ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ವೈರಲ್ ನ್ಯೂಸ್2 hours ago

Viral Video: ಹೆಂಡತಿಯನ್ನ ಥಳಿಸಿ ಫ್ಲೈ ಓವರ್‌ನಿಂದ ತಳ್ಳೋಕೆ ಯತ್ನಿಸಿದ ಪಾಪಿ ಗಂಡ; ಆಮೇಲೆ ಆಗಿದ್ದೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 20241 hour ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ6 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202423 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌