Site icon Vistara News

Road Accident: ಎರಡು ಲಾರಿ ಡಿಕ್ಕಿಯಾಗಿ ಕ್ಲೀನರ್ ಸ್ಥಳದಲ್ಲೇ ಸಾವು

Cleaner dies on the spot in an accident between two lorries

#image_title

ತುಮಕೂರು: ಮಧುಗಿರಿ ತಾಲೂಕಿನ ಜಡೆಗೊಂಡನಹಳ್ಳಿಯಲ್ಲಿ ಎರಡು ಲಾರಿಗಳ‌ ನಡುವೆ ಅಪಘಾತ (Road Accident) ನಡೆದು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರ ಪ್ರದೇಶದ ಕಲ್ಯಾಣದುರ್ಗ ತಾಲೂಕಿನ ತಿಪ್ಪನಪಲ್ಲಿ ಗ್ರಾಮದ ಈರೇಶ್ (53) ಮೃತರು. ತುಮಕೂರು-ಪಾವಗಡ ರಾಜ್ಯ ಹೆದ್ದಾರಿಯಲ್ಲಿ ಸಂಜೆ ಅಪಘಾತ ನಡೆದಿದ್ದು, ಘಟನೆ ಬಳಿಕ ಎರಡು ಲಾರಿಗಳ ಚಾಲಕರು ನಾಪತ್ತೆಯಾಗಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder case : ಬೈಕ್‌ ಪಾರ್ಕಿಂಗ್‌ ವಿಚಾರದಲ್ಲಿ ಗುಂಪು ಘರ್ಷಣೆ; ಯುವಕನ ಬರ್ಬರ ಹತ್ಯೆ

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ

ಆನೇಕಲ್: ಜಿಗಣಿ ಬೆಸ್ಕಾಂ ಕಚೇರಿಯಲ್ಲಿ ಲಂಚ ಪಡೆಯುವಾಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಇಇ ಭರತ್ ಚೌಹಾಣ್ ಬಂಧಿತ ಅಧಿಕಾರಿ. ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು 28 ಸಾವಿರ ರೂ.ಗೆ ಬೇಡಿಕೆ ಇಟ್ಟಿರುವುದಾಗಿ ಶಶಿ ಶೇಖರ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಡಿವೈಎಸ್ಪಿ ಟಿ.ಸಿ.ವೆಂಕಟೇಶ್ ನೇತೃತ್ವದ ತಂಡ ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದೆ.

Exit mobile version