Site icon Vistara News

ಸಿಎಂ ಬಸವರಾಜ ಬೊಮ್ಮಾಯಿಗೆ ಶ್ರೀ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರದಾನ

ಬಸವರಾಜ ಬೊಮ್ಮಾಯಿ

ಧಾರವಾಡ: ನಗರದ ಮುರುಘಾಮಠದಲ್ಲಿ ಬುಧವಾರ ಆಯೋಜಿಸಿದ್ದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳ 93ನೇ ಜಾತ್ರಾ ಮಹೋತ್ಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ʼಶ್ರೀ ಮೃತ್ಯುಂಜಯ ಮಹಾಂತ ಪ್ರಶಸ್ತಿʼ ಯನ್ನು ಪ್ರದಾನ ಮಾಡಲಾಯಿತು. ಶ್ರೀ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.

ಸಮಾರಂಭದಲ್ಲಿ ಗದುಗಿನ ತೋಂಟದಾರ್ಯ ಸಿದ್ದರಾಮ‌ ಸ್ವಾಮೀಜಿ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಸೇರಿ ಹಲವರು ಭಾಗಿಯಾಗಿದ್ದರು.

Exit mobile version