Basavaraj Bommai | 10 ಸಾವಿರ ಯುವಜನರಿಗೆ ಉದ್ಯೋಗಪತ್ರ ವಿತರಣೆ; ಸಚಿವ ಅಶ್ವತ್ಥನಾರಾಯಣ್‌ಗೆ`ವೆಲ್‌ ಡನ್‌' ಎಂದ ಸಿಎಂ ಬೊಮ್ಮಾಯಿ - Vistara News

ಕರ್ನಾಟಕ

Basavaraj Bommai | 10 ಸಾವಿರ ಯುವಜನರಿಗೆ ಉದ್ಯೋಗಪತ್ರ ವಿತರಣೆ; ಸಚಿವ ಅಶ್ವತ್ಥನಾರಾಯಣ್‌ಗೆ`ವೆಲ್‌ ಡನ್‌’ ಎಂದ ಸಿಎಂ ಬೊಮ್ಮಾಯಿ

ಕರ್ನಾಟಕವನ್ನು ಬಿಟ್ಟರೆ ಬೇರ್‍ಯಾವ ರಾಜ್ಯದಲ್ಲೂ ಉದ್ಯೋಗ ನೀತಿ ಇಲ್ಲ. ಇದಕ್ಕೆ ಪೂರಕವಾಗಿ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನೂ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (Cm Basavaraj Bommai) ಹೇಳಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಸುಶಾಸನ ದಿನದ ಭಾಗವಾಗಿ ಒಟ್ಟು 10 ಸಾವಿರ ಯುವಜನರಿಗೆ ಭಾನುವಾರ ಇಲ್ಲಿ ಉದ್ಯೋಗಪತ್ರಗಳನ್ನು ವಿತರಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Cm Basavaraj Bommai) ಸಾಂಕೇತಿಕವಾಗಿ ಎಂಟು ಅಭ್ಯರ್ಥಿಗಳಿಗೆ ಉದ್ಯೋಗಾದೇಶಗಳನ್ನು ಹಸ್ತಾಂತರಿಸಿದರು.

ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆಯ ಈ ಉಪಕ್ರಮದಡಿ ಮಾಸಿಕ ಕನಿಷ್ಠ 18 ಸಾವಿರ ರೂ.ಗಳಿಂದ ಗರಿಷ್ಠ 45 ಸಾವಿರ ರೂ. ವೇತನದವರೆಗಿನ ಉದ್ಯೋಗಗಳು ಲಭ್ಯವಾಗುವಂತೆ ನೋಡಿಕೊಳ್ಳಲಾಗಿದೆ. ಉದ್ಯೋಗ ಪಡೆದುಕೊಂಡವರಲ್ಲಿ ಎಂಜಿನಿಯರಿಂಗ್, ಬಿ.ಎಸ್ಸಿ, ಬಿ.ಕಾಂ, ನರ್ಸಿಂಗ್‌, ಡಿಪ್ಲೊಮಾ, ಪಾಲಿಟೆಕ್ನಿಕ್‌ ಪದವೀಧರರಿದ್ದಾರೆ.

Cm Basavaraj Bommai

ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯೋಗ ಪಡೆದುಕೊಂಡ 3 ಸಾವಿರ ಅಭ್ಯರ್ಥಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕರ್ನಾಟಕವನ್ನು ಬಿಟ್ಟರೆ ಬೇರ್‍ಯಾವ ರಾಜ್ಯದಲ್ಲೂ ಉದ್ಯೋಗ ನೀತಿ ಇಲ್ಲ. ಇದಕ್ಕೆ ಪೂರಕವಾಗಿ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನೂ ತರಲಾಗಿದೆ. ಸ್ಥಳೀಯರಿಗೆ ಉದ್ಯೋಗ ಸಿಗಬೇಕೆನ್ನುವುದು ಸರಕಾರದ ಗುರಿಯಾಗಿದ್ದು, ನೇಮಕಾತಿಗೆ ತಕ್ಕ ಪ್ರೋತ್ಸಾಹ ಕೊಡಲಾಗುತ್ತಿದೆ. ಇದರಂತೆ ವಿದ್ಯುತ್‌ಚಾಲಿತ ವಾಹನಗಳ ಕ್ಷೇತ್ರದಲ್ಲಿ ಬೆಂಗಳೂರಿನಲ್ಲಿ ತಮ್ಮ ಆರ್‌ & ಡಿ ಕೇಂದ್ರಗಳನ್ನು ಹೊಂದಿರುವ ಕಂಪನಿಗಳು ನಮ್ಮ ರಾಜ್ಯದಲ್ಲೇ ಉತ್ಪಾದನಾ ಘಟಕಗಳನ್ನೂ ಕಡ್ಡಾಯವಾಗಿ ಸ್ಥಾಪಿಸುವಂತೆ ನೋಡಿಕೊಳ್ಳಬೇಕು ಎಂದರು.

ಇದಲ್ಲದೆ, ‘ಸ್ತ್ರೀ ಸಾಮರ್ಥ್ಯ’ ಯೋಜನೆಯಡಿ ಒಂದು ಲಕ್ಷ ರೂ. ಸಬ್ಸಿಡಿ ಸಹಿತ ತಲಾ 5 ಲಕ್ಷ ರೂ.ಗಳ ಸಾಲ ಸೌಲಭ್ಯ ಒದಗಿಸುವ ಮೂಲಕ 5 ಲಕ್ಷ ಮಹಿಳೆಯರ ಉದ್ಯಮಶೀಲತೆಗೆ ಪ್ರೋತ್ಸಾಹ ನೀಡಲಾಗುವುದು. ಹಾಗೆಯೇ, ಸ್ವಾಮಿ ವಿವೇಕಾನಂದ ಯೋಜನೆಯ ಮೂಲಕ ಗ್ರಾಮೀಣ ಭಾಗಗಳ 5 ಲಕ್ಷ ಯುವಜನರಿಗೆ ಉದ್ಯೋಗ ಕೊಡಲಾಗುವುದು. ಇದರಿಂದ ರಾಜ್ಯದ ಆರ್ಥಿಕ ಬೆಳವಣಿಗೆಗೆ ವೇಗ ಸಿಕ್ಕಿದಂತಾಗುತ್ತದೆ ಎಂದರು.

ರಾಜ್ಯಕ್ಕೆ ಇತ್ತೀಚೆಗೆ 8 ಲಕ್ಷ ಕೋಟಿ ರೂ. ಹೂಡಿಕೆ ಬರುವುದು ಖಾತ್ರಿಯಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಲು ಕೌಶಲ್ಯಾಭಿವೃದ್ಧಿ ನಿರ್ಣಾಯಕವಾಗಿದೆ. ಹೀಗಾಗಿ ಐಟಿಐ, ಜಿಟಿಟಿಸಿ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳೆಲ್ಲವನ್ನೂ ಕೌಶಲ್ಯದ ವ್ಯಾಪ್ತಿಗೆ ತರಲಾಗಿದೆ. ಇನ್ನೊಂದೆಡೆಯಲ್ಲಿ, ಪ್ರಧಾನಮಂತ್ರಿಗಳ ಸ್ಕಿಲ್‌ ಇಂಡಿಯಾ ಮತ್ತು ದೀನ್‌ ದಯಾಳ್‌ ಉಪಾಧ್ಯಾಯ ಕೌಶಲ್ಯ ಯೋಜನೆಗಳಡಿ ಯುವಜನರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮತ್ತು ಉದ್ಯೋಗದಾತರನ್ನಾಗಿ ಮಾಡಲಾಗುತ್ತಿದೆ. ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಮುದ್ರಾ’ದ ಅಡಿಯಲ್ಲಿ ರಾಜ್ಯದ 25 ಲಕ್ಷ ಜನರಿಗೆ ತಮ್ಮ ವಹಿವಾಟು/ಉದ್ಯಮಗಳನ್ನು ಆರಂಭಿಸಲು ಗರಿಷ್ಠ ತಲಾ 10 ಲಕ್ಷ ರೂ.ವರೆಗೆ ಸುಗಮವಾಗಿ ಸಾಲ ಕೊಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ವೃತ್ತಿ ತರಬೇತಿ ಪದವಿ ಆರಂಭ
ಈ ವರ್ಷದಿಂದ ಬೆಂಗಳೂರು ವಿವಿ ವ್ಯಾಪ್ತಿಯಲ್ಲಿ ವೃತ್ತಿ ತರಬೇತಿ ಪದವಿಯನ್ನು (ಬಿ.ವೋಕ್‌) ಪ್ರಾರಂಭಿಸಲಾಗುವುದೆಂದು ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದರು. ಇದಕ್ಕಾಗಿ ಜಿಟಿಟಿಸಿ ಮತ್ತು ವಿವಿ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರ ಮೂಲಕ ಸರ್ವರಿಗೂ ಉದ್ಯೋಗ ನೀತಿಯ ಸಾಕಾರ ಮಾಡಲಾಗುವುದು ಎಂದರು.

ಈಗಾಗಲೇ ರಾಜ್ಯದಲ್ಲಿ ಸರಕಾರಿ 150 ಐಟಿಐಗಳನ್ನು ಉನ್ನತೀಕರಿಸಲಾಗಿದೆ. ಈ ವರ್ಷ ಉಳಿದ 30 ಐಟಿಐಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಜಿಟಿಟಿಸಿಗಳಲ್ಲಿ ಈಗಾಗಲೇ ಅಲ್ಪಾವಧಿಯ 10 ಮತ್ತು ದೀರ್ಘಾವಧಿಯ 30 ಹೊಸ ಕೋರ್ಸುಗಳಿಗೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿರುವ ಉದ್ಯೋಗಾವಕಾಶಗಳು ಹೊರರಾಜ್ಯಗಳ ಪಾಲಾಗುವುದಕ್ಕಿಂತ ನಮ್ಮ ಯುವಜನರಿಗೇ ಸಿಗುವಂತೆ ಮಾಡುವುದು ನಮ್ಮ ಗುರಿ ಎಂದರು.

ಇದೇ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಬೋಧಕೇತರ ಸಿಬ್ಬಂದಿ ಕುಂದುಕೊರತೆ ನಿವಾರಣೆಗೆ ರೂಪಿಸಿರುವ ‘ಶಿಕ್ಷಣ ಸ್ಪಂದನ’ ಉಪಕ್ರಮ ಮತ್ತು ಜಿಟಿಟಿಸಿ ಪುನಾರಚನೆ ವರದಿಗಳನ್ನು ಬಿಡುಗಡೆ ಮಾಡಲಾಯಿತು.

ಸಚಿವರಿಗೆ ‘ವೆಲ್‌ ಡನ್‌!’ ಎಂದ ಸಿಎಂ
ಸಚಿವ ಸಿ ಎನ್ ಅಶ್ವತ್ಥನಾರಾಯಣ ಏಕಕಾಲದಲ್ಲಿ 10 ಸಾವಿರ ಜನರಿಗೆ ಉದ್ಯೋಗಪತ್ರ ವಿತರಿಸುವ ಮೂಲಕ ದೇಶಕ್ಕೇ ಮಾದರಿಯಾಗುವಂತಹ ಕೆಲಸ ಮಾಡಿದ್ದಾರೆ. ಅವರಿಗೆ ಇಷ್ಟೊಂದು ಖಾತೆಗಳನ್ನೇಕೆ ಕೊಡಲಾಗಿದೆ ಎನ್ನುವ ಪ್ರಶ್ನೆಗೆ ಇವತ್ತಿನ ಅವರ ಕೆಲಸವೇ ಉತ್ತರವಾಗಿದೆ. ಅವರ ನೇತೃತ್ವದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಬ್ಬಂದಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಇದು ವಾಜಪೇಯಿಯವರಿಗೆ ನಿಜವಾದ ಗೌರವ ಸಲ್ಲಿಸುವ ಕೆಲಸವಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಭಾಷಣದ ಆರಂಭದಲ್ಲೇ ಶ್ಲಾಘಿಸಿದರು.

ಇದನ್ನೂ ಓದಿ | Coronavirus | ಕೊರೊನಾ ಭೀತಿ, ಇದುವರೆಗೆ ಕೇಂದ್ರ ತೆಗೆದುಕೊಂಡ ಪ್ರಮುಖ ಕ್ರಮಗಳು ಯಾವವು? ತಯಾರಿ ಹೇಗಿದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Mysore lok sabha Constituency :ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

VISTARANEWS.COM


on

Mysore lok sabha constituency
Koo

ಬೆಂಗಳೂರು: ಕಾಂಗ್ರೆಸ್ ಪ್ರಾಬಲ್ಯದ ಮೈಸೂರು ಲೋಕ ಸಭಾ ಕ್ಷೇತ್ರವು (Mysore lok sabha Constituency) ಕಳೆದ ಎರಡು ಚುನಾವಣೆಗಳಲ್ಲಿ ಸಂಪೂರ್ಣ ಬದಲಾವಣೆಗೆ ಸಾಕ್ಷಿಯಾಗಿದೆ. ಪ್ರತಾಪ್ ಸಿಂಹ (Pratap Simha) ಸತತ ಎರಡು ಬಾರಿ ಗೆದ್ದಿರುವ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬಲವನ್ನು ಸಾಬೀತುಪಡಿಸಿದೆ. ಅದಕ್ಕಿಂತ ಹಿಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ ಹಿಂದಿನ ಮೈಸೂರು ರಾಜಮನೆತನದ ಸದಸ್ಯರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮೈಸೂರಿನ ಕೆಲವು ಪ್ರದೇಶಗಳಲ್ಲಿ ಹಿಡಿತ ಹೊಂದಿರುವ ಬಿಜೆಪಿಯ ಮೈತ್ರಿ ಪಾಲುದಾರ ಜೆಡಿಎಸ್ ಅವರ ಗೆಲುವಿನ ಅಭಿಯಾನದಲ್ಲಿ ಸಾಥ್ ನೀಡಿದೆ. ಹೀಗಾಗಿ ಈ ಬಾರಿಯ ಚುನಾವಣೆ ‘ಕಿಂಗ್ ವರ್ಸಸ್ ಆರ್ಡಿನರಿ ಸಿಟಿಜನ್’ ಎಂಬ ಟ್ಯಾಗ್ ಲೈನ್ ಹೊಂದಿದೆ. ಕಾಂಗ್ರೆಸ್​ನಿಂದ ಆ ಪಕ್ಷದ ರಾಜ್ಯ ವಕ್ತಾರ ಲಕ್ಷ್ಮಣ ಕಣದಲ್ಲಿದ್ದಾರೆ.

1977 ರಲ್ಲಿ ರಚನೆಯಾದ ಮೈಸೂರು ಲೋಕಸಭಾ ಕ್ಷೇತ್ರವು ಮುಖ್ಯವಾಗಿ ಕಾಂಗ್ರೆಸ್ ಪ್ರಭಾವ ಹೊಂದಿತ್ತು. ಎಚ್.ಡಿ.ತುಳಸೀದಾಸ್, ಎಂ. ರಾಜಶೇಖರಮೂರ್ತಿ ಮತ್ತು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಂತಹ ಗಮನಾರ್ಹ ನಾಯಕರು ಇಲ್ಲಿ ಗೆದ್ದಿದ್ದರು. ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

ಕ್ಷೇತ್ರದ ವ್ಯಾಪ್ತಿಯೇನು?

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ. ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 67,65% ರಷ್ಟಿದೆ. ಸುಮಾರು 977500 ನಗರ ಮತದಾರರು 51.6% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಸುಮಾರು 13.9% ರಷ್ಟಿದ್ದಾರೆ.

ಹಿಂದಿನ ಮೂರು ಚುನಾವಣಾ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ : Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

ಬೌಗೋಳಿಕ ಗಡಿಗಳು

ಮೈಸೂರು ಲೋಕಸಭೆ ಕ್ಷೇತ್ರ ಭಾರತದ ದಕ್ಷಿಣ ಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿದೆ. ಈ ಸ್ಥಾನವು ಕರ್ನಾಟಕದ ಕೊಡಗು, ಮೈಸೂರು ಜಿಲ್ಲೆಗಳನ್ನು ಒಳಗೊಂಡಿದೆ.

Continue Reading

ಹಾವೇರಿ

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Haveri Lok Sabha Constituency: ಕಾಂಗ್ರೆಸ್‌ ಮಾಜಿ ಶಾಸಕ ಜಿ.ಎಸ್‌.ಗಡ್ಡದೇವರಮಠ ಅವರ ಪುತ್ರ, ವೀರಶೈವ ಲಿಂಗಾಯತ ಸಮುದಾಯದ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡುವ ಮೂಲಕ ಈ ಬಾರಿ ಕಾಂಗ್ರೆಸ್‌ ಚಾಣಾಕ್ಷತನ ಮೆರೆದಿದೆ. ಆನಂದಸ್ವಾಮಿ ಗಡ್ಡದೇವರ ಮಠ ಅವರು ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

VISTARANEWS.COM


on

Haveri Lok Sabha Constituency
Koo

ಹಾವೇರಿ: ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಆಗಿರುವ, ಅರೆ ಮಲೆನಾಡು ಎಂದು ಕೂಡ ಖ್ಯಾತಿ ಗಳಿಸಿರುವ ಹಾವೇರಿಯಲ್ಲಿ (Haveri Lok Sabha Constituency) ರಾಜಕೀಯ ಸನ್ನಿವೇಶ ಬದಲಾಗಿದೆ. ಇದೇ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai) ಅವರು ಬಿಜೆಪಿಯಿಂದ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಇನ್ನು, ಇವರ ವಿರುದ್ಧ ಕಾಂಗ್ರೆಸ್‌ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡಿದ್ದು, ತೀವ್ರ ಜಿದ್ದಾಜಿದ್ದಿನ ಹೋರಾಟ ನಡೆದಿದೆ.

ಬಿಜೆಪಿಯ ಶಿವಕುಮಾರ್‌ ಉದಾಸಿ ಅವರು ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದು, ಈ ಬಾರಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. 2008ರಲ್ಲಿ ಹಾವೇರಿ ಲೋಕಸಭೆ ಕ್ಷೇತ್ರ ರಚನೆಯಾಗಿದ್ದು, ಇದುವರೆಗೆ ಬಿಜೆಪಿ ಭದ್ರಕೋಟೆಯೇ ಆಗಿದೆ. ಲಿಂಗಾಯತ ಸಮುದಾಯದವರೇ ನಿರ್ಣಾಯಕರಾಗಿರುವ, ಕುರುಬ ಸಮುದಾಯದ ಮತದಾರರೂ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಶಾಸಕ ಬಸವರಾಜ್‌ ಬೊಮ್ಮಾಯಿ ಅವರು ಸ್ಪರ್ಧಿಸಿದ್ದು, ಜಾತಿ ಬಲ, ಮೋದಿ ನಾಮಬಲದಿಂದ ಗೆಲುವಿನ ವಿಶ್ವಾಸದಲ್ಲಿದ್ದಾರೆ.

ಕಾಂಗ್ರೆಸ್‌ ಮಾಜಿ ಶಾಸಕ ಜಿ.ಎಸ್‌.ಗಡ್ಡದೇವರಮಠ ಅವರ ಪುತ್ರ, ವೀರಶೈವ ಲಿಂಗಾಯತ ಸಮುದಾಯದ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡುವ ಮೂಲಕ ಈ ಬಾರಿ ಕಾಂಗ್ರೆಸ್‌ ಚಾಣಾಕ್ಷತನ ಮೆರೆದಿದೆ. ಆನಂದಸ್ವಾಮಿ ಗಡ್ಡದೇವರ ಮಠ ಅವರು ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

ಮತದಾರರ ಸಂಖ್ಯೆ

ಪುರುಷರು9.02 ಲಕ್ಷ
ಮಹಿಳೆಯರು8.90 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು83
ಒಟ್ಟು17.92 ಲಕ್ಷ

ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಹಾವೇರಿಯ 5 ಹಾಗೂ ಗದಗದ 3 ವಿಧಾನಸಭೆ ಕ್ಷೇತ್ರಗಳು ಬರುತ್ತವೆ. ಶಿರಹಟ್ಟಿ, ಗದಗ, ರೋಣ, ಹಾನಗಲ್‌, ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹಿರೇಕೆರೂರು ವಿಧಾನಸಭೆ ಕ್ಷೇತ್ರಗಳು ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಒಳಪಟ್ಟಿವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಸಾಧಿಸಿದ್ದು, ಈ ಬಾರಿಯ ವಿಶ್ವಾಸ ಹೆಚ್ಚಾಗಲು ಕಾರಣ ಎಂದು ತಿಳಿದುಬಂದಿದೆ.

2019, 2014ರಲ್ಲಿ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ್‌ ಉದಾಸಿ ಅವರು 1.40 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ಡಿ.ಆರ್.ಪಾಟೀಲ್‌ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿಯೂ ಶಿವಕುಮಾರ್‌ ಉದಾಸಿ ಅವರು ಕಾಂಗ್ರೆಸ್‌ನ ಸಲೀಂ ಅಹ್ಮದ್‌ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Continue Reading

ಪ್ರಮುಖ ಸುದ್ದಿ

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Chikballapur lok sabha constituency : ಚಿಕ್ಕಬಳ್ಳಾಪುರ ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಯಲಹಂಕ, ಹೊಸಕೋಟೆ, ದೇವನಹಳ್ಳಿ (ಎಸ್ಸಿ), ದೊಡ್ಡಬಳ್ಳಾಪುರ ಮತ್ತು ನೆಲಮಂಗಲ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಇದು ದೇಶದ 35 ನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಿಲ್ಲೆ ಹಾಗೂ ಸರಾಸರಿ 71% ಸಾಕ್ಷರತಾ ಪ್ರಮಾಣ ಹೊಂದಿದೆ.

VISTARANEWS.COM


on

Chikballapur lok sabha constituency
Koo

ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ (Chikballapur lok sabha constituency) ಕರ್ನಾಟಕದ ಪ್ರಮುಖ ಕ್ಷೇತ್ರಗಳಲ್ಲಿ ಒಂದು. 1977 ರಲ್ಲಿ ಕ್ಷೇತ್ರ ಮರು ವಿಂಗಡಣೆ ನಂತರ ಈ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಇದು ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಯಲಹಂಕ, ಹೊಸಕೋಟೆ, ದೇವನಹಳ್ಳಿ (ಎಸ್ಸಿ), ದೊಡ್ಡಬಳ್ಳಾಪುರ ಮತ್ತು ನೆಲಮಂಗಲ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಇದು ದೇಶದ 35 ನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಿಲ್ಲೆ ಹಾಗೂ ಸರಾಸರಿ 71% ಸಾಕ್ಷರತಾ ಪ್ರಮಾಣ ಹೊಂದಿದೆ.

ಈ ಬಾರಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. 1977ರಿಂದೀಚೆಗೆ ಚಿಕ್ಕಬಳ್ಳಾಪುರದಲ್ಲಿ ಒಟ್ಟು 12 ಚುನಾವಣೆಗಳು ನಡೆದಿವೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 10 ಬಾರಿ, ಜನತಾದಳ ಮತ್ತು ಬಿಜೆಪಿ ತಲಾ ಒಂದು ಬಾರಿ ಗೆಲುವು ಸಾಧಿಸಿವೆ. 1996ರ ಲೋಕಸಭಾ ಚುನಾವಣೆಯಲ್ಲಿ ಆರ್.ಎಲ್.ಜಾಲಪ್ಪ ಗೆಲುವು ಸಾಧಿಸಿದ್ದರು. ದೇವೇಗೌಡ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ಜಾಲಪ್ಪ ಅವರು 1998ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2009 ಮತ್ತು 2014 ರಲ್ಲಿ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಈ ಸ್ಥಾನವನ್ನು ಸತತವಾಗಿ ಗೆದ್ದರು.

ಈ ಹಿಂದೆ ಗೆದ್ದವರು ಯಾರು?

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಕಾಂಗ್ರೆಸ್​ನ ಎಂ.ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.53.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಎಂ.ವೀರಪ್ಪ ಮೊಯ್ಲಿ ಅವರು ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರನ್ನು 9,520 ಮತಗಳ ಕೆಲವೇ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 33.63% ಮತಗಳನ್ನು ಗಳಿಸಿದೆ.

ಇದನ್ನೂ ಓದಿ: Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

2009ರ ಸಾರ್ವತ್ರಿಕ ಚುನಾವಣೆಯಲ್ಲಿ ವೀರಪ್ಪ ಮೊಯ್ಲಿ ಅವರು ಬಿಜೆಪಿಯ ಅಶ್ವತ್ಥನಾರಾಯಣ ಅವರನ್ನು 51,381 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 39.9% ಮತಗಳನ್ನು ಹೊಂದಿತ್ತು. 2014ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಈ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 2009ಕ್ಕೂ ಮೊದಲು ಕಾಂಗ್ರೆಸ್ ನ ಆರ್.ಎಲ್.ಜಾಲಪ್ಪ ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು.

ಕ್ಷೇತ್ರ ಹೇಗಿದೆ?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಎಂಟು ಲೋಕಸಭಾ ಕ್ಷೇತ್ರಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಚಿಕ್ಕಬಳ್ಳಾಪುರಕ್ಕೆ ಹೊಂದಿಕೊಂಡಿರುವ ಇತರ ಲೋಕಸಭಾ ಕ್ಷೇತ್ರಗಳು ಹೀಗಿವೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಆಂಧ್ರಪ್ರದೇಶ: ಹಿಂದೂಪುರ, ರಾಜಂಪೇಟೆ. ಈ ಕ್ಷೇತ್ರವು ಆಂಧ್ರಪ್ರದೇಶದೊಂದಿಗೆ ಅಂತರರಾಜ್ಯ ಗಡಿಯನ್ನು ಹಂಚಿಕೊಂಡಿದೆ

ಈ ಕ್ಷೇತ್ರದಲ್ಲಿ ಶೇ.70.1ರಷ್ಟು ಗ್ರಾಮೀಣ ಮತದಾರರಿದ್ದಾರೆ. ಸರಾಸರಿ ಸಾಕ್ಷರತಾ ಪ್ರಮಾಣವು 69.76% – ಮಹಿಳೆಯರಲ್ಲಿ 61.55% ಮತ್ತು ಪುರುಷರಲ್ಲಿ 77.75% ಆಗಿತ್ತು. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಚಿಕ್ಕಬಳ್ಳಾಪುರದ ಜನಸಂಖ್ಯೆ 1255104.

Continue Reading

ಕರ್ನಾಟಕ

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Bangalore Rain: ಬೆಂಗಳೂರಿನಲ್ಲಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ದುರಂತದ ಬಳಿಕ ಮತ್ತೊಂದು ದುರಂತ ತಪ್ಪಿದೆ. ಶೇಷಾದ್ರಿಪುರಂ ಅಂಡರ್ ಪಾಸ್‌ನ ನೀರಿನಲ್ಲಿ ಬಿಎಂಟಿಸಿ ಬಸ್ ಸಿಲುಕಿದ್ದು, 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಹಲವೆಡೆ ಭಾರಿ ಮಳೆಯಿಂದ ಹತ್ತಾರು ಮರಗಳು ಧರೆಗುರುಳಿದ್ದು, ಹಲವು ವಾಹನಗಳು ಜಖಂಗೊಂಡಿವೆ.

VISTARANEWS.COM


on

Bangalore Rain
Koo

ಬೆಂಗಳೂರು: ನಗರದಲ್ಲಿ ಭಾನುವಾರ ರಾತ್ರಿಯೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ಇನ್ನು ಕೆಲವು ಕಡೆ ಬೃಹತ್‌ ಮರಗಳು ನೆಲಕ್ಕುರುಳಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

ತಪ್ಪಿದ ಮತ್ತೊಂದು ದುರಂತ

ಕೆ.ಆರ್. ಸರ್ಕಲ್ ಅಂಡರ್ ಪಾಸ್ ದುರಂತದ ಬಳಿಕ ಮತ್ತೊಂದು ದುರಂತ ತಪ್ಪಿದೆ. ಶೇಷಾದ್ರಿಪುರಂ ಅಂಡರ್ ಪಾಸ್‌ನ ನೀರಿನಲ್ಲಿ ಬಿಎಂಟಿಸಿ ಬಸ್ ಸಿಲುಕಿದ್ದು, 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ ಮುಂದೆ ಮೂವ್ ಆಗ್ತಿದ್ದಂತೆ, ಅಪಾಯದ ಮುನ್ಸೂಚನೆ ಅರಿತು ಬಸ್ ಚಾಲಕ ಅಲ್ಲೇ ನಿಲ್ಲಿಸಿದ್ದಾರೆ. ನಂತರ ಬಸ್‌ನಲ್ಲಿದ್ದವರನ್ನು ಸ್ಥಳೀಯ ವ್ಯಕ್ತಿ ಮಣಿಕಂಠ ಹೊರ ಕರೆತಂದಿದ್ದಾರೆ. ಓರ್ವ ವೃದ್ಧೆ, ಇಬ್ಬರು ಮಹಿಳೆಯರು, ಮಗುವನ್ನು ಬಸ್‌ನಿಂದ ರಕ್ಷಣೆ ಮಾಡಲಾಗಿದೆ.

ಅಂಡರ್‌ಪಾಸ್‌ನಲ್ಲಿ ನೀರಿಗೆ ಬಿದ್ದ ಇಬ್ಬರು ಯುವಕರು

ಬಿರುಸಿನ ಮಳೆಯಿಂದ ಕೋರಮಂಗಲ, ಮಡಿವಾಳ, ವಿಲ್ಸನ್ ಗಾರ್ಡನ್, ಡೈರಿ ಸರ್ಕಲ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನು K.R. ಸರ್ಕಲ್ ಅಂಡರ್ ಪಾಸ್‌ನಲ್ಲಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ಬ್ಯಾರಿಕೇಡ್ ಹಾಕಿ ಮುಚ್ಚಲಾಗಿತ್ತು. ಹೆಚ್ಚು ನೀರು ಇರುವುದು ತಿಳಿಯದೇ ಬೈಕ್‌ನಲ್ಲಿ ವೇಗವಾಗಿ ಬಂದ ಇಬ್ಬರು ಯುವಕರು ನೀರಿಗೆ ಬಿದ್ದಿದ್ದು, ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ.‌

ಮೆಟ್ರೋ ವಯಡಕ್ಟ್ ಮೇಲೆ ಬಿದ್ದ ಮರ

ಸಂಜೆ ಭಾರಿ ಮಳೆಯಿಂದಾಗಿ ಎಂಜಿ ರಸ್ತೆ ಮತ್ತು ಟ್ರಿನಿಟಿ ರೋಡ್‌ ನಿಲ್ದಾಣದ ನಡುವಿನ ವಯಡಕ್ಟ್ ಟ್ರ್ಯಾಕ್‌ನಲ್ಲಿ ಮರ ಬಿದ್ದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಮತ್ತು ಇಂದಿರಾನಗರ ನಡುವೆ ರೈಲು ಸೇವೆ ಸ್ಥಗಿತಗೊಂಡಿದೆ. ಆದರೆ, ಇಂದಿರಾನಗರ ಮತ್ತು ವೈಟ್‌ಫೀಲ್ಡ್ ನಡುವೆ ಶಾರ್ಟ್ ಲೂಪ್‌ಗಳು ಚಾಲನೆಯಲ್ಲಿವೆ. ಚಲ್ಲಘಟ್ಟ ಮತ್ತು ಎಂಜಿ ರೋಡ್ ನಡುವೆ
ಉಂಟಾದ ಅನನುಕೂಲತೆ ಬಗ್ಗೆ ಬಿಎಂಆರ್‌ಸಿಎಲ್‌ ವಿಷಾದ ವ್ಯಕ್ತಪಡಿಸಿದೆ.

ನಗರದ ಬನಶಂಕರಿ, ಕುಮಾರಸ್ವಾಮಿ ಲೇಔಟ್, ಎಳಚೇನಹಳ್ಳಿ, ಉತ್ತರಹಳ್ಳಿ, ಪದ್ಮನಾಭ ನಗರ, ಜಯನಗರ, ಪೀಣ್ಯ, ಬನ್ನೇರುಘಟ್ಟ ರಸ್ತೆ, ಮಲ್ಲೇಶ್ವರ, ರೇಸ್ ಕೋರ್ಸ್, ವಿಜಯನಗರ, ಶಾಂತಿನಗರ, ಎಂಜಿ ರೋಡ್, ಕೆ.ಆರ್ ಸರ್ಕಲ್, ಚಾಲುಕ್ಯ ಸರ್ಕಲ್ ಸೇರಿದಂತೆ ಹಲವು ಕಡೆ ಬಿರುಸಿನ ಮಳೆಯಾಗಿದೆ.

ಮರಗಳು ಬಿದ್ದು ಹಲವು ವಾಹನ ಜಖಂ

ಭಾರಿ ಮಳೆಯಿಂದ ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ. ಜಯನಗರ-ಬನ್ನೇರುಘಟ್ಟ ರಸ್ತೆ, ಪೀಣ್ಯ ಬಳಿ ಮರಗಳು ನೆಲಕ್ಕುರುಳಿವೆ. ಪೀಣ್ಯದ ಅರವಿಂದ ಮೋಟಾರ್ಸ್ ಬಳಿ ಕಾರಿನ ಮೇಲೆ ಮರ ಬಿದ್ದಿದ್ದು, ಕಾರಿನಲ್ಲಿ ಸಿಲುಕಿರುವ ಚಾಲಕನನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನು ಬನ್ನೇರುಘಟ್ಟ ರಸ್ತೆ ವೆಗಾ ಸಿಟಿ ಮಾಲ್ ಬಳಿ ಮರ ಧರೆಗುರುಳಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅದೇ ರೀತಿ ಜಯನಗರದ 4ನೇ ಟಿ ಬ್ಲಾಕ್ ಬಳಿ ಮರ ಧರೆಗುರುಳಿದಿದೆ, ರಾಜಾಜಿನಗರದ ಮಂಜುನಾಥನಗರದಲ್ಲಿ ಮರ ಬಿದ್ದಿದೆ. ಬಸವನಗುಡಿ ರಾಮಕೃಷ್ಣ ಆಶ್ರಮ ಬಳಿ ಮತ್ತು ಕೆಜಿ ರಸ್ತೆ ಪೋತೀಸ್ ಮುಂಭಾಗ ಬೃಹತ್ ಮರ ಧರೆಗಿರುಳಿದೆ. ಹುಳಿಮಾವು ರಸ್ತೆಯಲ್ಲಿ ಮರ ಧರೆಗುರುಳಿದಿದ್ದು, ಪಾನಿಪುರಿ ಅಂಗಡಿ, ಸುಮಾರು 10 ಬೈಕ್‌ಗಳು ಜಖಂಗೊಂಡಿವೆ.

ಇದನ್ನೂ ಓದಿ | Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಇನ್ನು ಹಲವು ಕಡೆ ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗೋವಿಂದರಾಜ ನಗರದ ಪಟ್ಟೇಗಾರ ಪಾಳ್ಯದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಜೋರಾದ ಮಳೆ ಹಿನ್ನೆಲೆ ಪ್ರಮುಖ ರಸ್ತೆಗಳು ಹೊಳೆಯಂತೆ ಬದಲಾಗಿದ್ದರಿಂದ ಬೈಕ್ ಸವಾರರು ಪರದಾಡಿದರು. ಹಲವೆಡೆ ವಾಹನಗಳು ಕೆಟ್ಟುನಿಂತು ಸವಾರರು ತೊಂದರೆಪಟ್ಟರು.

Continue Reading
Advertisement
Odisha Assembly Election
ಅವಿಭಾಗೀಕೃತ29 mins ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ

Mysore lok sabha constituency
ಪ್ರಮುಖ ಸುದ್ದಿ1 hour ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ2 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ2 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20242 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Chikballapur lok sabha constituency
ಪ್ರಮುಖ ಸುದ್ದಿ2 hours ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ3 hours ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ3 hours ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ3 hours ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ3 hours ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌