Site icon Vistara News

Karnataka Election | ಅವಧಿ ಪೂರ್ವ ಚುನಾವಣೆ ಇಲ್ಲ, ಕೋವಿಡ್‌ ಬಗ್ಗೆ ಭಯ ಬೇಕಾಗಿಲ್ಲ ಎಂದ ಸಿಎಂ ಬೊಮ್ಮಾಯಿ

Bommai

ಹುಬ್ಬಳ್ಳಿ: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ (Karnataka Election) ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಹೊಂದಿಲ್ಲ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅದೇ ಹೊತ್ತಿಗೆ ಕೋವಿಡ್‌ ವಿಚಾರದಲ್ಲಿ ಜನರು ಹೆಚ್ಚು ಭಯಪಡಬೇಕಾಗಿಲ್ಲ ಎಂದು ಅವರು ಅಭಯ ನೀಡಿದ್ದಾರೆ.

ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ಬಹುಶಃ ಕಾಂಗ್ರೆಸ್‌ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗುತ್ತದೆ ಎಂದು ಅಭದ್ರತೆ ಕಾಡುತ್ತಿದೆ. ಚುನಾವಣೆ ಅವಧಿಗಿಂತ ಮೊದಲೇ ನಡೆಯುತ್ತದೆ, ಜಗಳವಾಡಬೇಡಿ ಎಂದು ಕಾಂಗ್ರೆಸ್‌ನ ಕಾರ್ಯಕರ್ತರಿಗೆ ಅವರು ಸಂದೇಶ ನೀಡುತ್ತಿರಬಹುದು. ಬಿಜೆಪಿ ಮಟ್ಟದಲ್ಲಿ ಆ ರೀತಿಯ ಯಾವ ಚರ್ಚೆಯೂ ಇಲ್ಲ ಎಂದರು.

ಎಚ್ಚರಿಕೆ ಅಗತ್ಯ ಎಂದ ಸಿಎಂ ಬೊಮ್ಮಾಯಿ
ಇನ್ನು ಕೋವಿಡ್ 19 ಸಾಂಕ್ರಾಮಿಕದ ಬಗ್ಗೆ ಗಾಬರಿಯಾಗಬೇಕಿಲ್ಲ. ಆದರೆ, ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ: ಸುಧಾಕರ್ ಅವರು ಸಭೆ ನಡೆಸಲಿದ್ದು, ಬೂಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಪ್ರತಿಯೊಂದು ಐಎಲ್ ಐ, ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ಕೈಗೊಳ್ಳುವುದು, ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಮುಂತಾದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆರೋಗ್ಯ ಮೂಲ ಸೌಕರ್ಯಗಳಾದ ಔಷಧ, ಲಸಿಕೆ ಇವೆಲ್ಲವನ್ನೂ ದಾಸ್ತಾನು ಮಾಡಿಕೊಳ್ಳಲು ಕ್ರಮ ವಹಿಸಬೇಕು, ಯಾವುದೇ ಸಂದರ್ಭದಲ್ಲಿ ಯಾವುದೇ ಕೊರತೆಯಾಗಬಾರದು, ಆಮ್ಲಜನಕ ಘಟಕಗಳನ್ನು ಡ್ರೈ ರನ್ ಮಾಡಿ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಯೂ ನಿರಂತರವಾಗಿ ನಿಗಾ ವಹಿಸಿ, ನಿರ್ಬಂಧಗಳನ್ನು ಹೇರಲಾಗಿದೆ. ವ್ಯಕ್ತಿ, ಸಂಘ, ಸರ್ಕಾರ, ಸಮಾಜ ಎಲ್ಲರೂ ಸೇರಿ ಇದನ್ನು ಎದುರಿಸಬೇಕಿದೆ ಎಂದು ತಿಳಿಸಿದ ಅವರು, ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದರು.

ಉತ್ತರ ಕರ್ನಾಟಕದ ವಿಷಯಗಳ ಬಗ್ಗೆ ಚರ್ಚೆ
ಸದನದಲ್ಲಿ ಎರಡು ಅಥವಾ ಮೂರು ದಿನ ಉತ್ತರ ಕರ್ನಾಟಕದ ವಿಷಯಗಳ ಬಗ್ಗೆ ಅವಕಾಶ ಮಾಡಿಕೊಡಲು ಸಭಾಧ್ಯಕ್ಷರಿಗೆ ಕೋರಲಾಗಿದೆ. ಸದನದಲ್ಲಿ ಎರಡೂ ಕಡೆ ಈ ವಿಷಯ ಕೈಗೊಳ್ಳಲು ಉತ್ಸುಕರಾಗಿದ್ದಾರೆ ಎಂದರು.

ಇದನ್ನೂ ಓದಿ | ರಾಜ ಮಾರ್ಗ ಅಂಕಣ | ಟೈಮ್ಸ್ ಕಿಡ್ ಆಫ್ ದಿ ಇಯರ್ ಗೀತಾಂಜಲಿ ರಾವ್: 17ನೇ ವಯಸ್ಸಿಗೆ ವಿಶ್ವ ವಿಖ್ಯಾತಿ!

Exit mobile version